Homeಕರೋನಾ ತಲ್ಲಣರಾತ್ರಿ ಕರ್ಫ್ಯೂ: ರಾಜ್ಯ ಸರ್ಕಾರದಿಂದ ಮಾರ್ಗಸೂಚಿ ಬಿಡುಗಡೆ

ರಾತ್ರಿ ಕರ್ಫ್ಯೂ: ರಾಜ್ಯ ಸರ್ಕಾರದಿಂದ ಮಾರ್ಗಸೂಚಿ ಬಿಡುಗಡೆ

ಬಿಬಿಎಂಪಿ ಕೂಡಾ ಕ್ರಿಸ್ಮಸ್‌ ಹಾಗೂ ಹೊಸ ವರ್ಷಾಚರಣೆಗೆ ಮಾರ್ಗಸೂಚಿ ಬಿಡುಗಡೆ ಮಾಡಿದೆ

- Advertisement -
- Advertisement -

ರೂಪಾಂತರಿ ಕೊರೊನಾ ವೈರಸ್‌ ಕಂಡು ಬಂದಿರುವ ಹಿನ್ನಲೆಯಲ್ಲಿ ಗುರುವಾರ ರಾತ್ರಿಯಿಂದ ಜನವರಿ 2 ರ ಮುಂಜಾನೆಯವರೆಗೆ ’ರಾತ್ರಿ ಕರ್ಫ್ಯೂ’ವನ್ನು ರಾಜ್ಯ ಸರ್ಕಾರ ಜಾರಿಗೊಳಿಸಿತ್ತು. ಇದೀಗ ಈ ರಾತ್ರಿ ಕರ್ಫ್ಯೂವಿನ ಮಾರ್ಗಸೂಚಿಯನ್ನು ಬಿಡುಗಡೆಗೊಳಿಸಿದೆ.

ರಾತ್ರಿ 11 ಗಂಟೆಯಿಂದ ಬೆಳಿಗ್ಗೆ 5 ಗಂಟೆಯವರೆಗೆ ಕಟ್ಟುನಿಟ್ಟಾಗಿ ಕರ್ಫ್ಯೂ ಜಾರಿಯಾಗಲಿದೆ. ದೀರ್ಘ ಪ್ರಯಾಣದ, ಬಸ್, ರೈಲು ಸಂಚಾರಕ್ಕೆ ಅವಕಾಶ ನೀಡಲಾಗಿದ್ದು, ಸರಕು ವಾಹನಗಳ ಸಂಚಾರಕ್ಕೆ ಕರ್ಫ್ಯೂನಿಂದ ವಿನಾಯಿತಿ ನೀಡಲಾಗಿದೆ. 50% ರಷ್ಟು ಮಾನವ ಶಕ್ತಿಯೊಂದಿಗೆ ಕರ್ತವ್ಯ ನಿರ್ವಹಿಸುತ್ತಿರುವ ಎಲ್ಲಾ ರೀತಿಯ ಕೈಗಾರಿಕಾ ಸಂಸ್ಥೆಗಳಿಗೂ ರಾಜ್ಯ ಸರ್ಕಾರ ಸಡಿಲಿಕೆ ನೀಡಿದೆ. ಆದರೆ ಇದಕ್ಕೆ ಆ ಸಂಸ್ಥೆಯ ಗುರುತಿನ ಚೀಯನ್ನು ಇಟ್ಟುಕೊಳ್ಳುವುದು ಅವಶ್ಯಕವಾಗಿದೆ.

ಇದನ್ನೂ ಓದಿ: ರೂಪಾಂತರಿ ಕೊರೊನಾ ವೈರಸ್ ಭೀತಿ: ರಾತ್ರಿ ಕರ್ಫ್ಯೂ ದಿನಾಂಕ ಬದಲಿಸಿದ ಮುಖ್ಯಮಂತ್ರಿ!

ರಾತ್ರಿ 11 ರಿಂದ ಬೆಳಗ್ಗೆ 5 ರವರೆಗೆ ಅಗತ್ಯ ಸೇವೆಗಳನ್ನು ಹೊರತುಪಡಿಸಿ ಜನರ ಪ್ರಯಾಣಕ್ಕೆ ನಿಷೇಧ ಹೇರಲಾಗಿದೆ. ದಿನದ 24 ಗಂಟೆ ಕರ್ತವ್ಯ ನಿರ್ವಹಿಸುತ್ತಿರುವ ಕೈಗಾರಿಕೆಗಳು, ಕಾರ್ಖಾನೆಗಳಿಗೆ ಯಾವುದೇ ರೀತಿಯ ನಿರ್ಬಂಧವಿಲ್ಲದೆ ನಿರಂತರ ಕಾರ್ಯಾಚರಣೆ ನಡೆಸಲು ಅನುಮತಿಯಿದೆ.

ಅಲ್ಲದೆ ಬಸ್ ನಿಲ್ದಾಣ, ರೈಲ್ವೆ ನಿಲ್ದಾಣ ಹಾಗೂ ವಿಮಾನ ನಿಲ್ದಾಣಗಳಿಂದ ಪ್ರಯಾಣಿಕರನ್ನು ಕರೆತರಲು ಹಾಗೂ ಕರೆದೊಯ್ಯುವ ಟ್ಯಾಕ್ಸಿ ಹಾಗೂ ಆಟೋಗಳಿಗೆ ಅನುಮತಿಯಿದೆ. ಆದರೆ ಈ ವೇಳೆ ಪ್ರಯಾಣದ ಟಿಕೆಟ್​​ಅನ್ನು ಪ್ರಯಾಣಿಕರು ಹೊಂದಿರುವುದು ಕಡ್ಡಾಯವಾಗಿರುತ್ತದೆ.

ಕ್ರಿಸ್ಮಸ್ ಆಚರಣೆಗೆ ಅವಕಾಶ ನೀಡಲಾಗಿದ್ದು, ಧಾರ್ಮಿಕ ಕಾರ್ಯಕ್ರಮಗಳನ್ನು ಮಾಡಬಹುದು ಎಂದು ಮುಖ್ಯಮಂತ್ರಿ ಸಂಜೆ ಟ್ವೀಟ್ ಮಾಡಿ ತಿಳಿಸಿದ್ದರು.

ಇದನ್ನೂ ಓದಿ: ಇಂದಿನಿಂದ ರಾಜ್ಯದಲ್ಲಿ ’ರಾತ್ರಿ ಕರ್ಫ್ಯೂ’ ಜಾರಿ: ಮುಖ್ಯಮಂತ್ರಿ ಯಡಿಯೂರಪ್ಪ

ಕ್ರಿಸ್ಮಸ್‌ ಹಾಗೂ ಹೊಸ ವರ್ಷಾಚರಣೆಗೆ ಬಿಬಿಎಂಪಿ ಮಾರ್ಗಸೂಚಿ

ಚರ್ಚ್‌, ದೇವಸ್ಥಾನ, ಮಸೀದಿ ಮತ್ತು ಇತರ ಧಾರ್ಮಿಕ ಸ್ಥಳಗಳಲ್ಲಿ ಹೆಚ್ಚು ಜನರು ಸೇರದಂತೆ ಸಾಮಾಜಿಕ ಅಂತರ ಕಾಪಾಡಿಕೊಂಡು, ಹಸ್ತಲಾಘವ ಮತ್ತು ಆಲಿಂಗನದಿಂದ ದೂರವಿರಬೇಕು ಎಂದು ಬಿಬಿಎಂಪಿ ತನ್ನ ಮಾರ್ಗಸೂಚಿಯಲ್ಲಿ ಹೇಳಿದೆ.

ಡಿಸೆಂಬರ್‌ 30 ರಿಂದ 2021ರ ಜನವರಿ 2 ರವರೆಗೆ ಕ್ಲಬ್‌, ಪಬ್, ರೆಸ್ಟೋರೆಂಟ್‌ ಮತ್ತು ಇತರ ಸಾರ್ವಜನಿಕ ಸ್ಥಳಗಳಲ್ಲಿ ಗುಂಪುಗೂಡುವಿಕೆ, ವಿಶೇಷ ಡಿಜೆ, ನೃತ್ಯ ಕಾರ್ಯಕ್ರಮಗಳನ್ನು, ವಿಶೇಷ ಪಾರ್ಟಿಗಳನ್ನು ನಿಷೇಧಿಸಲಾಗಿದೆ. ಆದರೆ, ಕ್ಲಬ್‌, ಪಬ್‌, ರೆಸ್ಟೋರೆಂಟ್‌ಗಳು ಎಂದಿನಂತೆ ತೆರೆದಿರಲಿದೆ ಎಂದು ಬಿಬಿಎಂಪಿ ಆದೇಶದಲ್ಲಿ ತಿಳಿಸಿದೆ.

ಈ ಸಮಯದಲ್ಲಿ 65 ವರ್ಷದ ಹಿರಿಯರು ಮತ್ತು 10 ವರ್ಷದೊಳಗಿನ ಮಕ್ಕಳು ಮನೆಯಲ್ಲಿಯೇ ಇರಬೇಕು ಎಂದು ಮಾರ್ಗಸೂಚಿಯಲ್ಲಿ ಹೇಳಿದ್ದು, ಹೋಟೆಲ್‌, ಮಾಲ್‌, ಪಬ್‌, ರೆಸ್ಟೋರೆಂಟ್‌ಗಳಲ್ಲಿ ಥರ್ಮಲ್‌ ಸ್ಕ್ರೀನಿಂಗ್‌ ಮತ್ತು ಸ್ಯಾನಿಟೈಸರ್‌ ಬಳಕೆ ಕಡ್ಡಾಯ ಎಂದು ಹೇಳಿದೆ. ಅಲ್ಲದೆ ಆನ್‌ಲೈನ್‌ ಅಥವಾ ಟೋಕನ್‌ ಪದ್ಧತಿಯಲ್ಲಿ ಸ್ಥಳ ಕಾಯ್ದಿರಿಸಲು ವ್ಯವಸ್ಥೆ ಕಲ್ಪಿಸಬೇಕು ಎಂದು ಸೂಚಿಸಲಾಗಿದೆ.

ಇದನ್ನೂ ಓದಿ: ಹೊಸ ಕೊರೊನಾ ಆತಂಕ: ಲಂಡನ್‌ನಿಂದ ಬಂದಿದ್ದ 6 ಮಂದಿಗೆ ಕೊರೊನಾ ಸೋಂಕು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...