Homeಕರ್ನಾಟಕನೈಟ್-ವೀಕೆಂಡ್ ಕರ್ಫ್ಯೂ: ಲೈಟೆ ಇಲ್ಲದ ಕಂಬಗಳಾಗಿರುವ ಸರಕಾರದ ರೂಲ್ಸುಗಳು!

ನೈಟ್-ವೀಕೆಂಡ್ ಕರ್ಫ್ಯೂ: ಲೈಟೆ ಇಲ್ಲದ ಕಂಬಗಳಾಗಿರುವ ಸರಕಾರದ ರೂಲ್ಸುಗಳು!

- Advertisement -
- Advertisement -

ಮಾರಣಾಂತಿಕ ಕೊರೊನಾ ಕಳೆದ ಎರಡು ವರ್ಷಗಳಿಂದ ಇಡೀ ಮನುಕುಲವನ್ನು ಕಾಡುತ್ತಿದೆ ನಿಜ. ಆದರೆ, ಸಾಮಾನ್ಯ ಜನ ಮಾತ್ರ ಕೊರೊನಾ ಸೋಂಕಿಗೆ ಕಂಗೆಟ್ಟಿದ್ದಕ್ಕಿಂತ ಸರ್ಕಾರದ ಲಾಕ್ಡೌನ್ ಅಸ್ತ್ರಕ್ಕೆ ಬೆದರಿದ್ದೇ ಹೆಚ್ಚು. ಒಕ್ಕೂಟ ಸರ್ಕಾರದ ಲಾಕ್ಡೌನ್ ಅಕ್ಷರಶಃ ಬಡಜನ ವಲಸೆ ಕಾರ್ಮಿಕ ಮತ್ತು ದಿನಗೂಲಿ ನೌಕರರನ್ನು ಹಿಂಡಿಹಿಪ್ಪೆ ಮಾಡಿದ್ದು, ಜನ ತಮ್ಮ ಮನೆಗಾಗಿ ಸಾವಿರಾರು ಕಿಲೋ ಮೀಟರ್ ಕ್ರಮಿಸಿ ದಾರಿ ನಡುವೆ ಜೀವ ಬಿಟ್ಟಿದ್ದನ್ನು ಭಾಗಶಃ ದೇಶ ಇನ್ನೂ ಮರೆತಿಲ್ಲ.

ಇಷ್ಟಾಗಿಯೂ, ದೇಶದ ಒಳಿತಿಗಾಗಿ ಎಂಬ ಹಣೆಪಟ್ಟಿಯ ಅಡಿಯಲ್ಲಿ ಬಡಜನ ಲಾಕ್ಡೌನ್ ಅನ್ನು ಸಹಿಸಿಕೊಂಡಿದ್ದರು. ಹೀಗಿದ್ದೂ ಕೊರೊನಾ ಏನು ಕಡಿಮೆಯಾಗಿರಲಿಲ್ಲ. ಪರಿಣಾಮ ಜನ ಕೊರೊನಾ ಜೊತೆಗೆ ಬದುಕುವುದನ್ನು ಕಲಿಯಬೇಕು ಎಂಬ ಕಿವಿಮಾತು ಒಕ್ಕೂಟ ಸರ್ಕಾರದಿಂದಲೇ ಕೇಳಿ ಬಂದಿತ್ತು. ಜನರೂ ಅದಕ್ಕೆ ಒಗ್ಗಿಕೊಂಡಿದ್ದರು.

ಇದನ್ನೂ ಓದಿ:ಯುಪಿ ಚುನಾವಣೆ: ಹೋರಾಟಗಾರರು, ಸಂತ್ರಸ್ತರು ಸೇರಿ 40% ಮಹಿಳೆಯರಿಗೆ ಕಾಂಗ್ರೆಸ್ ಟಿಕೆಟ್

ಇದಾಗಿಯೂ, ಈಗ ಇದೇನಿದು ಮತ್ತೆ ತಲೆಬುಡವಿಲ್ಲದ ವೀಕೆಂಡ್ ಕರ್ಫ್ಯೂ? ಇದರಿಂದ ನಿಜಕ್ಕೂ ಕೊರೊನಾವನ್ನು ಓಡಿಸೋಕೆ ಸಾಧ್ಯಾವೇ? ಅಥವಾ ಇದು ಕೇವಲ ಸರ್ಕಾರದ ಬೂಟಾಟಿಕೆಯಾ? ಇವರ ಬೂಟಾಟಿಕೆಗಾಗಿ ದಿನಗೂಲಿ ಮತ್ತು ಬಡಜನರ ಹೊಟ್ಟೆ ಮೇಲೆ ಏಕೆ ಎಂಬ ಪ್ರಶ್ನೆ ಇದೀಗ ಜನಮಾನಸದಲ್ಲಿ ಮೂಡಿದೆ.

ತಲೆಬುಡವಿಲ್ಲದ ರೂಲ್ಸುಗಳು:

ಭಾರತದಲ್ಲಿ ಕೊರೊನಾ ವಿಪರೀತ ಹಂತಕ್ಕೆ ತಲುಪಿದ್ದ ಸಂದರ್ಭದಲ್ಲಿ ಲಕ್ಷಾಂತರ ಜನ ಈ ಸೋಂಕಿಗೆ ಒಳಗಾಗಿ ಸಾಕಷ್ಟು ನೋವುಗಳನ್ನು ಅನುಭವಿಸಿದ್ದರೆ, ಅಸಂಖ್ಯಾತ ಜನ ಮೃತಪಟ್ಟಿದ್ದಾರೆ. ಕೊರೊನಾ ಸೋಂಕಿನಿಂದ ಮೃತಪಟ್ಟವರಿಗೆ ಕನಿಷ್ಟ ಒಂದು ಗೌರವಾನ್ವಿತ ಅಂತ್ಯ ಸಂಸ್ಕಾರವೂ ಸಿಗದೆ ಹೋದದ್ದನ್ನು ಸ್ಮಶಾನಗಳ ಎದುರು ಶವಗಳು ಸಾಲುಗಟ್ಟಿನಿಂತ, ಗಂಗೆಯಲ್ಲಿ ಹೆಣಗಳನ್ನು ಬಿಸಾಡಿ ಹೋದ ಹತ್ತಾರು ಅಮಾನವೀಯ ಘಟನೆಗಳಿಗೆ ಭಾರತ ಸಾಕ್ಷಿಯಾಗಿತ್ತು.

ಪರಿಣಾಮ 2021 ರಲ್ಲಿ ದೇಶದಾದ್ಯಂತ ಸಾಲು ಸಾಲು ಲಾಕ್ಡೌನ್ ಹೇರಲಾಗಿತ್ತು. ಹತ್ತಾರು ಕಷ್ಟದ ನಿಯಮಗಳನ್ನು ರೂಪಿಸಲಾಗಿತ್ತು. ಆದರೂ, ಸಹ ಯಾವ ಪ್ರಯತ್ನವೂ ಫಲ ನೀಡಿರಲಿಲ್ಲ. ಕನಿಷ್ಟ 4.85 ಲಕ್ಷ ಜನ ಈ ಸೋಂಕಿಗೆ ಬಲಿಯಾಗಿದ್ದರು. ಸಾವುಗಳು ಹೆಚ್ಚುತ್ತಿದ್ದ ಅದೇ ಸಂದರ್ಭದಲ್ಲೇ ಮತ್ತೊಂದೆಡೆ ಜನರಲ್ಲಿ ಸಾಮೂಹಿಕ ರೋಗ ನಿರೋಧಕ ಶಕ್ತಿಯೂ ವೃದ್ಧಿಸಿತ್ತು ಎನ್ನುತ್ತಿವೆ ಹಲವು ಅಧ್ಯಯನಗಳು.

ಇದನ್ನೂ ಓದಿ:‘ಅಳಿಯ ಅಲ್ಲ, ಮಗಳ ಗಂಡ’: ಸರ್ಕಾರದ ಹೊಸ ಆದೇಶದ ಬಗ್ಗೆ ಅತಿಥಿ ಉಪನ್ಯಾಸಕರ ಆಕ್ರೋಶ

ಇದಕ್ಕೆ ಪೂರಕವಾಗಿ ಕೊರೊನಾ ಬೆನ್ನಿಗೆ ದಾಳಿಯಿಟ್ಟ ಡೆಲ್ಟಾ ಪ್ಲಸ್, ಬ್ಯ್ಲಾಕ್ ಫಂಗಸ್ ಸಹ ಅಷ್ಟೇನೂ ದೊಡ್ಡ ಅಪಾಯವನ್ನು ತಂದಿಟ್ಟಿರಲಿಲ್ಲ. ಪರಿಣಾಮ ಜನ ಸಾಮಾನ್ಯವಾಗಿಯೇ ಈ ವೈರಸ್‌ಗೆ ಹೆದರುವುದನ್ನು ಬಿಟ್ಟಿದ್ದರು. ಸರ್ಕಾರವೂ ಸಹ ಲಾಕ್ಡೌನ್ ಅನ್ನು ಸಿಡಿಲಿಸಿ ನೈಟ್ ಕರ್ಫ್ಯೂ, ವೀಕೆಂಡ್ ಕರ್ಫ್ಯೂವನ್ನು ಹೇರಿತ್ತು. ಈ ನಿಯಮಗಳು ಅಷ್ಟೇನು ಪರಿಣಾಮಕಾರಿ ಅಲ್ಲ ಎಂಬ ವಿವಾದದಿಂದಾಗಿಯೇ ಕೊನೆಗೆ ಅದನ್ನೂ ಕೈಬಿಡಲಾಗಿತ್ತು. ಆದರೆ, ಸರ್ಕಾರ ಈಗ ಮತ್ತೆ ಅದೇ ವೀಕೆಂಡ್ ಕರ್ಫ್ಯೂವನ್ನು ಹೇರಿದೆ. ಈ ಮೂಲಕ ಕೊರೊನಾವನ್ನು ನಿಯಂತ್ರಿಸಬಹುದು ಎನ್ನುತ್ತಿದೆ. ಹಾಗಾದರೆ ನೈಟ್ ಕರ್ಫ್ಯೂ, ವೀಕೆಂಡ್ ಕರ್ಫ್ಯೂ ಮೂಲಕ ಕೊರೊನಾ ನಿಯಂತ್ರಣ ಸಾಧ್ಯವೇ? ಏನನ್ನುತ್ತಿವೆ ಅಂಕಿಅಂಶಗಳು.

ವೀಕೆಂಡ್ ಕರ್ಫ್ಯೂ ಪರಿಣಾಮಕಾರಿಯೇ?:

ಕರ್ನಾಟಕದಲ್ಲಿ ಈವರೆಗೆ ಒಟ್ಟು 16,46,193 ಕೊರೊನಾ ಕೇಸ್‌ಗಳು ದಾಖಲಾಗಿವೆ. ಈ ಪೈಕಿ ಸಕ್ರೀಯ ಪ್ರಕರಣಗಳು ಕೇವಲ 2334. 4,12,266 ಜನ ಸೋಂಕಿನಿಂದ ಚೇತರಿಸಿಕೊಳ್ಳುತ್ತಿದ್ದರೆ, ಮೃತಪಟ್ಟವರ ಸಂಖ್ಯೆ ಕೇವಲ 8 ಮಾತ್ರ. ಇನ್ನೂ ವೀಕೆಂಡ್ ಕರ್ಫ್ಯೂ ಹೆಸರಿನಲ್ಲಿ ಜನವರಿ 1 ಮತ್ತು 2 ರಂದು ಇಡೀ ಬೆಂಗಳೂರು ಮಹಾನಗರವನ್ನು ಬಂದ್ ಮಾಡಲಾಗಿತ್ತು. ಆದರೆ, ಈ ವೇಳೆ ಸೋಂಕು ಹರಡುವ ಪ್ರಮಾಣ ಇತರೆ ದಿನಕ್ಕಿಂತ ಶೇ. 5ರಿಂದ 6ರಷ್ಟು ಮಾತ್ರ ಕಡಿಮೆಯಾಗಿದೆಯೇ ಹೊರತು ಹೆಚ್ಚು ಲಾಭವೇನಿಲ್ಲ.

ಆದರೆ, ವಾರಾಂತ್ಯದ ಹೊರತಾಗಿ ಉಳಿದ ದಿನಗಳಲ್ಲಿ ಜನ ಸಾಮಾನ್ಯರ ಓಡಾಟಕ್ಕೆ ಎಂದಿನಂತೆ ಅವಕಾಶ ನೀಡಲಾಗಿದೆ. ಆದರೆ, ಈ ದಿನಗಳಲ್ಲಿ ಜನರಿಗೆ ಸೋಂಕು ಹರಡುವುದಿಲ್ಲವೇ? ಕೇವಲ ವಾರಾಂತ್ಯಗಳಲ್ಲಿ ಮಾತ್ರ ಸೋಂಕು ಹರಡುತ್ತದೆಯೇ? ಎಂದು ಜನ ಸಾಮಾನ್ಯರು ತಲೆಬುಡವಿಲ್ಲದ ಸರ್ಕಾರದ ಈ ನಿಯಮಗಳ ವಿರುದ್ಧ ಕೆಂಡಾಮಂಡಲರಾಗಿದ್ದಾರೆ. ಅದಕ್ಕೂ ಕಾರಣಗಳು ಇಲ್ಲದೆ ಏನಿಲ್ಲ.

ಇದನ್ನೂ ಓದಿ:ತಮಿಳುನಾಡಿನಲ್ಲಿ ಸಂಪೂರ್ಣ ಲಾಕ್‌ಡೌನ್ ಅಗತ್ಯವಿಲ್ಲ: ಆರೋಗ್ಯ ಸಚಿವ ಮಾ ಸುಬ್ರಮಣಿಯನ್

ಸರ್ಕಾರದ ವಿರುದ್ಧ ಜನಾಕ್ರೋಶ:

2021ರಲ್ಲಿ ದೇಶದ ಪ್ರಧಾನಿ ನರೇಂದ್ರ ಮೋದಿ ಲಾಕ್ಡೌನ್ ಘೋಷಿಸಿದ್ದಾಗ ಅತಿ ಹೆಚ್ಚು ಸಂಕಷ್ಟಕ್ಕೆ ಒಳಗಾದವರು ದಿನಗೂಲಿ ಮತ್ತು ವಲಸೆ ಕಾರ್ಮಿಕರು. ಈ ವೇಳೆ ಜನ ಕೆಲಸ ಇಲ್ಲದೆ, ಕೂಲಿಯೂ ಇಲ್ಲದೆ ಹಸಿವಿನಿಂದ ಸಾಯುವಂತಹ ಪರಿಸ್ಥಿತಿ ನಿರ್ಮಾಣವಾಗಿತ್ತು. ವಿರೋಧ ಪಕ್ಷಗಳ ಸತತ ವಾಗ್ದಾಳಿಯ ನಂತರ ಕೇಂದ್ರ ಸರ್ಕಾರ 20 ಲಕ್ಷ ರೂ. ಪ್ಯಾಕೇಜ್ ಘೋಷಣೆ ಮಾಡಿತ್ತಾದರೂ ಲಕ್ಷಾಂತರ ಫಲಾನುಭವಿಗಳಿಗೆ ಇನ್ನೂ ಆ ಹಣ ಸಿಕ್ಕೇ ಇಲ್ಲ. ಆಗ ಅನುಭವಿಸಿದ್ದ ಕಷ್ಟಗಳಿಂದಲೇ ಬಡ ಜನ ಇನ್ನೂ ಚೇತರಿಸಿಕೊಂಡಿಲ್ಲ. ಅಷ್ಟರಲ್ಲೇ ಮತ್ತೊಂದು ವೀಕೆಂಡ್ ಕರ್ಫ್ಯೂ ಜಾರಿಯಾಗಿದೆ.

ಈ ವೀಕೆಂಡ್ ಕರ್ಫ್ಯೂನಿಂದ ದಿನಗೂಲಿ ನೌಕರರು, ಕಾರ್ಮಿಕರು ಅದರಲ್ಲೂ ಮುಖ್ಯವಾಗಿ ಆಟೋ ಮತ್ತು ಕ್ಯಾಬ್ ಚಾಲಕರು ಸಾಕಷ್ಟು ತೊಂದರೆಗೆ ಈಡಾಗುತ್ತಾರೆ. ದಿನದ ದುಡಿಮೆ ಇಲ್ಲದೆ ಸಂಕಷ್ಟಕ್ಕೆ ಒಳಗಾಗುತ್ತಾರೆ. ಆದರೆ, ಇದ್ಯಾವುದರ ಬಗ್ಗೆಯೂ ಪರಿವೆಯೇ ಇಲ್ಲದ ಸರ್ಕಾರ ಬಡ ಜನರಿಗೆ ಕನಿಷ್ಟ ಪರಿಹಾರ ಅಥವಾ ಪಡಿತರವೂ ನೀಡದೆ ಕರ್ಫ್ಯೂ ಹೇರಿರುವುದು ನಿಜಕ್ಕೂ ಅಮಾನವೀಯತೆಯ ಪರಮಾವಧಿ. ಇಷ್ಟಕ್ಕೂ ಪಂಚ ರಾಜ್ಯಗಳ ಚುನಾವಣೆ ಎದುರಾಗಿದ್ದು ಬಿಜೆಪಿ ಎಲ್ಲೆಡೆ ಸಾಲು ಸಾಲು ಚುನಾವಣಾ ರ್ಯಾಲಿಗಳನ್ನು ಆಯೋಜಿಸಿದೆ. ಈ ರ್‍ಯಾಲಿಗಳಲ್ಲಿ ಆವರಿಸದ ಕೊರೊನಾ ಕರ್ನಾಟಕಕ್ಕೆ ಮಾತ್ರ ಕಂಟಕವಾಗಲಿದೆ ಎಂದು ಸರ್ಕಾರ ಅಂದಾಜಿಸಿರುವುದು ದುರದೃಷ್ಟಕರ.

ಇದನ್ನೂ ಓದಿ:ನಟಿಯ ಬಗ್ಗೆ ಅಸಂಬದ್ದ ಸುದ್ದಿ ಪ್ರಕಟಿಸಿ ‘ವಿಕೃತಿ’ ಮೆರೆದ ವಿಜಯವಾಣಿ.ನೆಟ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಪ್ರಧಾನಿ ಮೋದಿಯವರ ವಿದೇಶಾಂಗ ನೀತಿಯ ಸಾರ ಮತ್ತು ಶೈಲಿ ಎರಡಕ್ಕೂ ರಾಷ್ಟ್ರವು ಭಾರಿ ಬೆಲೆ ತೆರುತ್ತಿದೆ’: ಕಾಂಗ್ರೆಸ್

ನವದೆಹಲಿ: ಇರಾನ್ ಮೇಲೆ ನಡೆದ ಯುದ್ಧಕ್ಕೆ ಸರ್ಕಾರದ ಪ್ರತಿಕ್ರಿಯೆಯು ಭಾರತದ ಮೌಲ್ಯಗಳು, ತತ್ವಗಳು ಮತ್ತು ಹಿತಾಸಕ್ತಿಗಳಿಗೆ ಮಾಡಿದ ದ್ರೋಹವಾಗಿದೆ ಎಂದು ಕಾಂಗ್ರೆಸ್ ಭಾನುವಾರ ಹೇಳಿದೆ, ಪ್ರಧಾನಿ ನರೇಂದ್ರ ಮೋದಿಯವರ ವಿದೇಶಾಂಗ ನೀತಿಯ ಸಾರ...

ಬಂಗಾಳ ಎಸ್‌ಐಆರ್| ಮುಸ್ಲಿಂ ಬಹುಸಂಖ್ಯಾತ ಮುರ್ಷಿದಾಬಾದ್-ಮಾಲ್ಡಾದಲ್ಲಿ ಅತ್ಯಧಿಕ ಮತದಾರರ ಪರಿಶೀಲನೆ ಬಾಕಿ

ರಾಜ್ಯದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯ ನಂತರ ಚುನಾವಣಾ ಆಯೋಗ ಪ್ರಕಟಿಸಿದ ಅಂತಿಮ ಮತದಾರರ ಪಟ್ಟಿಯ ಪ್ರಕಾರ, ಪಶ್ಚಿಮ ಬಂಗಾಳದ ಮುಸ್ಲಿಂ ಪ್ರಾಬಲ್ಯದ ಮುರ್ಷಿದಾಬಾದ್ ಮತ್ತು ಮಾಲ್ಡಾ ಜಿಲ್ಲೆಗಳಲ್ಲಿ ದಾಖಲೆಗಳ ಪರಿಶೀಲನೆಗೆ...

‘ಪ್ರಜಾಪ್ರಭುತ್ವ ಜಗತ್ತಿನ ನಾಯಕರು, ಸಾರ್ವಭೌಮ ರಾಷ್ಟ್ರದ ನಾಯಕನನ್ನು ಹತ್ಯೆ ಮಾಡಿದ್ದು ಹೇಯ ಕೃತ್ಯ’: ಖಮೇನಿ ಹತ್ಯೆಗೆ ಪ್ರಿಯಾಂಕ ಗಾಂಧಿ ಖಂಡನೆ

ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ಹತ್ಯೆಯನ್ನು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಭಾನುವಾರ ತೀವ್ರವಾಗಿ ಖಂಡಿಸಿದ್ದಾರೆ. "ಪ್ರಜಾಪ್ರಭುತ್ವ ಜಗತ್ತಿನ ನಾಯಕರು ಎಂದು ಕರೆಯಲ್ಪಡುವವರು" ಸಾರ್ವಭೌಮ ರಾಷ್ಟ್ರದ ನಾಯಕತ್ವವನ್ನು ಗುರಿಯಾಗಿಸಿಕೊಂಡು...

ದುಬೈ-ಅಬುಧಾಬಿ ಮೇಲೆ ದಾಳಿ; ಇರಾನ್‌ಗೆ ಯುಎಇ ಎಚ್ಚರಿಕೆ

ಇರಾನ್ ತನ್ನ ನೆರೆಹೊರೆಯವರನ್ನು ಗುರಿಯಾಗಿಸಿಕೊಳ್ಳಬಾರದು ಎಂದು ಯುಎಇ ಅಧ್ಯಕ್ಷರ ರಾಜತಾಂತ್ರಿಕ ಸಲಹೆಗಾರ ಅನ್ವರ್ ಗರ್ಗಶ್ ಎಚ್ಚರಿಕೆ ನೀಡಿದ್ದಾರೆ. "ಗಲ್ಫ್ ರಾಷ್ಟ್ರಗಳ ವಿರುದ್ಧ ಇರಾನ್ ಆಕ್ರಮಣವು ತಪ್ಪು ಲೆಕ್ಕಾಚಾರವಾಗಿದೆ. ಇದೇ ಬೆಳವಣಿಗೆ ನಿರ್ಣಾಯಕ ಹಂತದಲ್ಲಿ ಇರಾನ್...

ಇರಾನ್‌ ಹಂಗಾಮಿ ಸರ್ವೋಚ್ಚ ನಾಯಕರಾಗಿ ಅಯಾತೊಲ್ಲ ಅಲಿರೆಝಾ ಅರಾಫಿ ನೇಮಕ

ಅಮೆರಿಕ-ಇಸ್ರೇಲ್ ನಡೆಸಿದ ಜಂಟಿ ವೈಮಾನಿಕ ದಾಳಿಯಲ್ಲಿ ಅಯತೊಲ್ಲಾ ಅಲಿ ಖಮೇನಿ ಹತ್ಯೆಯಾದ ಹಿನ್ನೆಲೆ, ಹಿರಿಯ ಧರ್ಮಗುರು ಅಯತೊಲ್ಲಾ ಅಲಿರೆಝಾ ಅರಾಫಿ ಅವರು ಇರಾನ್‌ನ ಹಂಗಾಮಿ ಸರ್ವೋಚ್ಚ ನಾಯಕರಾಗಿ ಆಯ್ಕೆ ಮಾಡಲಾಗಿದೆ ಎಂದು ಸರ್ಕಾರಿ-ಸಂಯೋಜಿತ...

ಖಮೇನಿ ಹತ್ಯೆ ವಿರೋಧಿಸಿ ಬೃಹತ್ ಪ್ರತಿಭಟನೆ; ಶ್ರೀನಗರದಲ್ಲಿ ಇಂಟರ್‌ನೆಟ್ ಸ್ತಬ್ಧ

ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಹತ್ಯೆಯನ್ನು ವಿರೋಧಿಸಿ ಕಾಶ್ಮೀರದಾದ್ಯಂತ ಬೃಹತ್ ಪ್ರತಿಭಟನೆಗಳು ಭುಗಿಲೆದ್ದಿವೆ. ಶ್ರೀನಗರದಲ್ಲಿರುವ ವಿಶ್ವಸಂಸ್ಥೆಯ ಮಿಲಿಟರಿ ವೀಕ್ಷಕರ ಗುಂಪು (UNMOGIP) ಪ್ರಧಾನ ಕಚೇರಿಯ ಮುಂದೆ ದೊಡ್ಡ ಜನಸಮೂಹ ಜಮಾಯಿಸಿತ್ತು....

ಅಮೆರಿಕಾ-ಇಸ್ರೇಲ್ ‘ಪುಂಡ ರಾಷ್ಟ್ರಗಳು’; ಇರಾನ್ ಮೇಲಿನ ದಾಳಿ ಖಂಡಿಸಿದ ಕೇರಳ ಸಿಎಂ; ಅನಿವಾಸಿ ಭಾರತೀಯರ ಆತಂಕ ಪರಿಹರಿಸಲು ಕೇಂದ್ರಕ್ಕೆ ಮನವಿ

ತಿರುವನಂತಪುರಂ: ಇಸ್ರೇಲ್ ಮತ್ತು ಅಮೆರಿಕ ಇರಾನ್ ಮೇಲೆ ನಡೆಸುತ್ತಿರುವ ದಾಳಿಯನ್ನು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ತೀವ್ರವಾಗಿ ಖಂಡಿಸಿದ್ದಾರೆ ಮತ್ತು ಗಲ್ಫ್ ರಾಷ್ಟ್ರಗಳಲ್ಲಿರುವ ಹಲವಾರು ಅನಿವಾಸಿ ಭಾರತೀಯರ ಆತಂಕವನ್ನು ಪರಿಹರಿಸಲು ಕೇಂದ್ರವು ತಕ್ಷಣ...

ಅಮೆರಿಕ-ಇಸ್ರೇಲಿ ಮಿಲಿಟರಿ ದಾಳಿಯಲ್ಲಿ ‘ಇರಾನ್‌ ಸಶಸ್ತ್ರ ಪಡೆಗಳ ಮುಖ್ಯಸ್ಥ ಅಬ್ದುಲ್ರಹೀಮ್ ಮೌಸಾವಿ ಹತ್ಯೆ; ಇರಾನ್ ಮಾಧ್ಯಮಗಳ ವರದಿ 

ಟೆಹ್ರಾನ್: ಇರಾನ್ ಮೇಲೆ ಅಮೆರಿಕ-ಇಸ್ರೇಲ್ ನಡೆಸಿದ ದಾಳಿಯಲ್ಲಿ ಇರಾನ್ ಸಶಸ್ತ್ರ ಪಡೆಗಳ ಮುಖ್ಯಸ್ಥ ಅಬ್ದುಲ್ರಹೀಮ್ ಮೌಸಾವಿ ಸಾವನ್ನಪ್ಪಿದ್ದಾರೆ ಎಂದು ದೇಶದ ಸರ್ಕಾರಿ ಸ್ವಾಮ್ಯದ ಐಆರ್‌ಐಬಿ ಟಿವಿ ಭಾನುವಾರ ವರದಿ ಮಾಡಿದೆ. ಟೆಹ್ರಾನ್ ಮೇಲಿನ ದಾಳಿಯಲ್ಲಿ...

ಕರಾಚಿ| ಖಮೇನಿ ಹತ್ಯೆ ಖಂಡಿಸಿ ಪ್ರತಿಭಟನೆ ವೇಳೆ ಘರ್ಷಣೆ : ಕನಿಷ್ಠ 9 ಸಾವು

ಪಾಕಿಸ್ತಾನದ ಕರಾಚಿಯಲ್ಲಿರುವ ಅಮೆರಿಕ ದೂತಾವಾಸದ ಬಳಿ ಭಾನುವಾರ (ಮಾ.1) ಇರಾನ್ ಪರ ಪ್ರತಿಭಟನಾಕಾರರು ಮತ್ತು ಭದ್ರತಾ ಸಿಬ್ಬಂದಿಯ ನಡುವೆ ಘರ್ಷಣೆ ಉಂಟಾಗಿ ಕನಿಷ್ಠ ಒಂಭತ್ತು ಜನರು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. "ನಾವು ಕನಿಷ್ಠ ಎಂಟು...

ಇರಾನ್-ಇಸ್ರೇಲ್ ಯುದ್ಧ: ಭಾರತ ತಕ್ಷಣದ ಆರ್ಥಿಕ ಸವಾಲುಗಳನ್ನು ಎದುರಿಸುವ ಸಾಧ್ಯತೆಯಿದೆ; ವರದಿ

ಫೆಬ್ರವರಿ 28, 2026 ರಂದು ಇರಾನ್ ಮೇಲೆ ಅಮೆರಿಕ-ಇಸ್ರೇಲ್ ಮುಷ್ಕರದ ನಂತರ ಇರಾನ್-ಇಸ್ರೇಲ್ ಸಂಘರ್ಷದಲ್ಲಿ ತೀವ್ರ ಏರಿಕೆಯು ಪಶ್ಚಿಮ ಏಷ್ಯಾದಲ್ಲಿ ಭೌಗೋಳಿಕ ರಾಜಕೀಯ ಅಪಾಯಗಳನ್ನು ತೀವ್ರಗೊಳಿಸಿದೆ ಮತ್ತು ಜಾಗತಿಕ ಇಂಧನ ಮಾರುಕಟ್ಟೆಗಳಿಗೆ ತಕ್ಷಣದ...