Homeಕರ್ನಾಟಕನೈಟ್-ವೀಕೆಂಡ್ ಕರ್ಫ್ಯೂ: ಲೈಟೆ ಇಲ್ಲದ ಕಂಬಗಳಾಗಿರುವ ಸರಕಾರದ ರೂಲ್ಸುಗಳು!

ನೈಟ್-ವೀಕೆಂಡ್ ಕರ್ಫ್ಯೂ: ಲೈಟೆ ಇಲ್ಲದ ಕಂಬಗಳಾಗಿರುವ ಸರಕಾರದ ರೂಲ್ಸುಗಳು!

- Advertisement -
- Advertisement -

ಮಾರಣಾಂತಿಕ ಕೊರೊನಾ ಕಳೆದ ಎರಡು ವರ್ಷಗಳಿಂದ ಇಡೀ ಮನುಕುಲವನ್ನು ಕಾಡುತ್ತಿದೆ ನಿಜ. ಆದರೆ, ಸಾಮಾನ್ಯ ಜನ ಮಾತ್ರ ಕೊರೊನಾ ಸೋಂಕಿಗೆ ಕಂಗೆಟ್ಟಿದ್ದಕ್ಕಿಂತ ಸರ್ಕಾರದ ಲಾಕ್ಡೌನ್ ಅಸ್ತ್ರಕ್ಕೆ ಬೆದರಿದ್ದೇ ಹೆಚ್ಚು. ಒಕ್ಕೂಟ ಸರ್ಕಾರದ ಲಾಕ್ಡೌನ್ ಅಕ್ಷರಶಃ ಬಡಜನ ವಲಸೆ ಕಾರ್ಮಿಕ ಮತ್ತು ದಿನಗೂಲಿ ನೌಕರರನ್ನು ಹಿಂಡಿಹಿಪ್ಪೆ ಮಾಡಿದ್ದು, ಜನ ತಮ್ಮ ಮನೆಗಾಗಿ ಸಾವಿರಾರು ಕಿಲೋ ಮೀಟರ್ ಕ್ರಮಿಸಿ ದಾರಿ ನಡುವೆ ಜೀವ ಬಿಟ್ಟಿದ್ದನ್ನು ಭಾಗಶಃ ದೇಶ ಇನ್ನೂ ಮರೆತಿಲ್ಲ.

ಇಷ್ಟಾಗಿಯೂ, ದೇಶದ ಒಳಿತಿಗಾಗಿ ಎಂಬ ಹಣೆಪಟ್ಟಿಯ ಅಡಿಯಲ್ಲಿ ಬಡಜನ ಲಾಕ್ಡೌನ್ ಅನ್ನು ಸಹಿಸಿಕೊಂಡಿದ್ದರು. ಹೀಗಿದ್ದೂ ಕೊರೊನಾ ಏನು ಕಡಿಮೆಯಾಗಿರಲಿಲ್ಲ. ಪರಿಣಾಮ ಜನ ಕೊರೊನಾ ಜೊತೆಗೆ ಬದುಕುವುದನ್ನು ಕಲಿಯಬೇಕು ಎಂಬ ಕಿವಿಮಾತು ಒಕ್ಕೂಟ ಸರ್ಕಾರದಿಂದಲೇ ಕೇಳಿ ಬಂದಿತ್ತು. ಜನರೂ ಅದಕ್ಕೆ ಒಗ್ಗಿಕೊಂಡಿದ್ದರು.

ಇದನ್ನೂ ಓದಿ:ಯುಪಿ ಚುನಾವಣೆ: ಹೋರಾಟಗಾರರು, ಸಂತ್ರಸ್ತರು ಸೇರಿ 40% ಮಹಿಳೆಯರಿಗೆ ಕಾಂಗ್ರೆಸ್ ಟಿಕೆಟ್

ಇದಾಗಿಯೂ, ಈಗ ಇದೇನಿದು ಮತ್ತೆ ತಲೆಬುಡವಿಲ್ಲದ ವೀಕೆಂಡ್ ಕರ್ಫ್ಯೂ? ಇದರಿಂದ ನಿಜಕ್ಕೂ ಕೊರೊನಾವನ್ನು ಓಡಿಸೋಕೆ ಸಾಧ್ಯಾವೇ? ಅಥವಾ ಇದು ಕೇವಲ ಸರ್ಕಾರದ ಬೂಟಾಟಿಕೆಯಾ? ಇವರ ಬೂಟಾಟಿಕೆಗಾಗಿ ದಿನಗೂಲಿ ಮತ್ತು ಬಡಜನರ ಹೊಟ್ಟೆ ಮೇಲೆ ಏಕೆ ಎಂಬ ಪ್ರಶ್ನೆ ಇದೀಗ ಜನಮಾನಸದಲ್ಲಿ ಮೂಡಿದೆ.

ತಲೆಬುಡವಿಲ್ಲದ ರೂಲ್ಸುಗಳು:

ಭಾರತದಲ್ಲಿ ಕೊರೊನಾ ವಿಪರೀತ ಹಂತಕ್ಕೆ ತಲುಪಿದ್ದ ಸಂದರ್ಭದಲ್ಲಿ ಲಕ್ಷಾಂತರ ಜನ ಈ ಸೋಂಕಿಗೆ ಒಳಗಾಗಿ ಸಾಕಷ್ಟು ನೋವುಗಳನ್ನು ಅನುಭವಿಸಿದ್ದರೆ, ಅಸಂಖ್ಯಾತ ಜನ ಮೃತಪಟ್ಟಿದ್ದಾರೆ. ಕೊರೊನಾ ಸೋಂಕಿನಿಂದ ಮೃತಪಟ್ಟವರಿಗೆ ಕನಿಷ್ಟ ಒಂದು ಗೌರವಾನ್ವಿತ ಅಂತ್ಯ ಸಂಸ್ಕಾರವೂ ಸಿಗದೆ ಹೋದದ್ದನ್ನು ಸ್ಮಶಾನಗಳ ಎದುರು ಶವಗಳು ಸಾಲುಗಟ್ಟಿನಿಂತ, ಗಂಗೆಯಲ್ಲಿ ಹೆಣಗಳನ್ನು ಬಿಸಾಡಿ ಹೋದ ಹತ್ತಾರು ಅಮಾನವೀಯ ಘಟನೆಗಳಿಗೆ ಭಾರತ ಸಾಕ್ಷಿಯಾಗಿತ್ತು.

ಪರಿಣಾಮ 2021 ರಲ್ಲಿ ದೇಶದಾದ್ಯಂತ ಸಾಲು ಸಾಲು ಲಾಕ್ಡೌನ್ ಹೇರಲಾಗಿತ್ತು. ಹತ್ತಾರು ಕಷ್ಟದ ನಿಯಮಗಳನ್ನು ರೂಪಿಸಲಾಗಿತ್ತು. ಆದರೂ, ಸಹ ಯಾವ ಪ್ರಯತ್ನವೂ ಫಲ ನೀಡಿರಲಿಲ್ಲ. ಕನಿಷ್ಟ 4.85 ಲಕ್ಷ ಜನ ಈ ಸೋಂಕಿಗೆ ಬಲಿಯಾಗಿದ್ದರು. ಸಾವುಗಳು ಹೆಚ್ಚುತ್ತಿದ್ದ ಅದೇ ಸಂದರ್ಭದಲ್ಲೇ ಮತ್ತೊಂದೆಡೆ ಜನರಲ್ಲಿ ಸಾಮೂಹಿಕ ರೋಗ ನಿರೋಧಕ ಶಕ್ತಿಯೂ ವೃದ್ಧಿಸಿತ್ತು ಎನ್ನುತ್ತಿವೆ ಹಲವು ಅಧ್ಯಯನಗಳು.

ಇದನ್ನೂ ಓದಿ:‘ಅಳಿಯ ಅಲ್ಲ, ಮಗಳ ಗಂಡ’: ಸರ್ಕಾರದ ಹೊಸ ಆದೇಶದ ಬಗ್ಗೆ ಅತಿಥಿ ಉಪನ್ಯಾಸಕರ ಆಕ್ರೋಶ

ಇದಕ್ಕೆ ಪೂರಕವಾಗಿ ಕೊರೊನಾ ಬೆನ್ನಿಗೆ ದಾಳಿಯಿಟ್ಟ ಡೆಲ್ಟಾ ಪ್ಲಸ್, ಬ್ಯ್ಲಾಕ್ ಫಂಗಸ್ ಸಹ ಅಷ್ಟೇನೂ ದೊಡ್ಡ ಅಪಾಯವನ್ನು ತಂದಿಟ್ಟಿರಲಿಲ್ಲ. ಪರಿಣಾಮ ಜನ ಸಾಮಾನ್ಯವಾಗಿಯೇ ಈ ವೈರಸ್‌ಗೆ ಹೆದರುವುದನ್ನು ಬಿಟ್ಟಿದ್ದರು. ಸರ್ಕಾರವೂ ಸಹ ಲಾಕ್ಡೌನ್ ಅನ್ನು ಸಿಡಿಲಿಸಿ ನೈಟ್ ಕರ್ಫ್ಯೂ, ವೀಕೆಂಡ್ ಕರ್ಫ್ಯೂವನ್ನು ಹೇರಿತ್ತು. ಈ ನಿಯಮಗಳು ಅಷ್ಟೇನು ಪರಿಣಾಮಕಾರಿ ಅಲ್ಲ ಎಂಬ ವಿವಾದದಿಂದಾಗಿಯೇ ಕೊನೆಗೆ ಅದನ್ನೂ ಕೈಬಿಡಲಾಗಿತ್ತು. ಆದರೆ, ಸರ್ಕಾರ ಈಗ ಮತ್ತೆ ಅದೇ ವೀಕೆಂಡ್ ಕರ್ಫ್ಯೂವನ್ನು ಹೇರಿದೆ. ಈ ಮೂಲಕ ಕೊರೊನಾವನ್ನು ನಿಯಂತ್ರಿಸಬಹುದು ಎನ್ನುತ್ತಿದೆ. ಹಾಗಾದರೆ ನೈಟ್ ಕರ್ಫ್ಯೂ, ವೀಕೆಂಡ್ ಕರ್ಫ್ಯೂ ಮೂಲಕ ಕೊರೊನಾ ನಿಯಂತ್ರಣ ಸಾಧ್ಯವೇ? ಏನನ್ನುತ್ತಿವೆ ಅಂಕಿಅಂಶಗಳು.

ವೀಕೆಂಡ್ ಕರ್ಫ್ಯೂ ಪರಿಣಾಮಕಾರಿಯೇ?:

ಕರ್ನಾಟಕದಲ್ಲಿ ಈವರೆಗೆ ಒಟ್ಟು 16,46,193 ಕೊರೊನಾ ಕೇಸ್‌ಗಳು ದಾಖಲಾಗಿವೆ. ಈ ಪೈಕಿ ಸಕ್ರೀಯ ಪ್ರಕರಣಗಳು ಕೇವಲ 2334. 4,12,266 ಜನ ಸೋಂಕಿನಿಂದ ಚೇತರಿಸಿಕೊಳ್ಳುತ್ತಿದ್ದರೆ, ಮೃತಪಟ್ಟವರ ಸಂಖ್ಯೆ ಕೇವಲ 8 ಮಾತ್ರ. ಇನ್ನೂ ವೀಕೆಂಡ್ ಕರ್ಫ್ಯೂ ಹೆಸರಿನಲ್ಲಿ ಜನವರಿ 1 ಮತ್ತು 2 ರಂದು ಇಡೀ ಬೆಂಗಳೂರು ಮಹಾನಗರವನ್ನು ಬಂದ್ ಮಾಡಲಾಗಿತ್ತು. ಆದರೆ, ಈ ವೇಳೆ ಸೋಂಕು ಹರಡುವ ಪ್ರಮಾಣ ಇತರೆ ದಿನಕ್ಕಿಂತ ಶೇ. 5ರಿಂದ 6ರಷ್ಟು ಮಾತ್ರ ಕಡಿಮೆಯಾಗಿದೆಯೇ ಹೊರತು ಹೆಚ್ಚು ಲಾಭವೇನಿಲ್ಲ.

ಆದರೆ, ವಾರಾಂತ್ಯದ ಹೊರತಾಗಿ ಉಳಿದ ದಿನಗಳಲ್ಲಿ ಜನ ಸಾಮಾನ್ಯರ ಓಡಾಟಕ್ಕೆ ಎಂದಿನಂತೆ ಅವಕಾಶ ನೀಡಲಾಗಿದೆ. ಆದರೆ, ಈ ದಿನಗಳಲ್ಲಿ ಜನರಿಗೆ ಸೋಂಕು ಹರಡುವುದಿಲ್ಲವೇ? ಕೇವಲ ವಾರಾಂತ್ಯಗಳಲ್ಲಿ ಮಾತ್ರ ಸೋಂಕು ಹರಡುತ್ತದೆಯೇ? ಎಂದು ಜನ ಸಾಮಾನ್ಯರು ತಲೆಬುಡವಿಲ್ಲದ ಸರ್ಕಾರದ ಈ ನಿಯಮಗಳ ವಿರುದ್ಧ ಕೆಂಡಾಮಂಡಲರಾಗಿದ್ದಾರೆ. ಅದಕ್ಕೂ ಕಾರಣಗಳು ಇಲ್ಲದೆ ಏನಿಲ್ಲ.

ಇದನ್ನೂ ಓದಿ:ತಮಿಳುನಾಡಿನಲ್ಲಿ ಸಂಪೂರ್ಣ ಲಾಕ್‌ಡೌನ್ ಅಗತ್ಯವಿಲ್ಲ: ಆರೋಗ್ಯ ಸಚಿವ ಮಾ ಸುಬ್ರಮಣಿಯನ್

ಸರ್ಕಾರದ ವಿರುದ್ಧ ಜನಾಕ್ರೋಶ:

2021ರಲ್ಲಿ ದೇಶದ ಪ್ರಧಾನಿ ನರೇಂದ್ರ ಮೋದಿ ಲಾಕ್ಡೌನ್ ಘೋಷಿಸಿದ್ದಾಗ ಅತಿ ಹೆಚ್ಚು ಸಂಕಷ್ಟಕ್ಕೆ ಒಳಗಾದವರು ದಿನಗೂಲಿ ಮತ್ತು ವಲಸೆ ಕಾರ್ಮಿಕರು. ಈ ವೇಳೆ ಜನ ಕೆಲಸ ಇಲ್ಲದೆ, ಕೂಲಿಯೂ ಇಲ್ಲದೆ ಹಸಿವಿನಿಂದ ಸಾಯುವಂತಹ ಪರಿಸ್ಥಿತಿ ನಿರ್ಮಾಣವಾಗಿತ್ತು. ವಿರೋಧ ಪಕ್ಷಗಳ ಸತತ ವಾಗ್ದಾಳಿಯ ನಂತರ ಕೇಂದ್ರ ಸರ್ಕಾರ 20 ಲಕ್ಷ ರೂ. ಪ್ಯಾಕೇಜ್ ಘೋಷಣೆ ಮಾಡಿತ್ತಾದರೂ ಲಕ್ಷಾಂತರ ಫಲಾನುಭವಿಗಳಿಗೆ ಇನ್ನೂ ಆ ಹಣ ಸಿಕ್ಕೇ ಇಲ್ಲ. ಆಗ ಅನುಭವಿಸಿದ್ದ ಕಷ್ಟಗಳಿಂದಲೇ ಬಡ ಜನ ಇನ್ನೂ ಚೇತರಿಸಿಕೊಂಡಿಲ್ಲ. ಅಷ್ಟರಲ್ಲೇ ಮತ್ತೊಂದು ವೀಕೆಂಡ್ ಕರ್ಫ್ಯೂ ಜಾರಿಯಾಗಿದೆ.

ಈ ವೀಕೆಂಡ್ ಕರ್ಫ್ಯೂನಿಂದ ದಿನಗೂಲಿ ನೌಕರರು, ಕಾರ್ಮಿಕರು ಅದರಲ್ಲೂ ಮುಖ್ಯವಾಗಿ ಆಟೋ ಮತ್ತು ಕ್ಯಾಬ್ ಚಾಲಕರು ಸಾಕಷ್ಟು ತೊಂದರೆಗೆ ಈಡಾಗುತ್ತಾರೆ. ದಿನದ ದುಡಿಮೆ ಇಲ್ಲದೆ ಸಂಕಷ್ಟಕ್ಕೆ ಒಳಗಾಗುತ್ತಾರೆ. ಆದರೆ, ಇದ್ಯಾವುದರ ಬಗ್ಗೆಯೂ ಪರಿವೆಯೇ ಇಲ್ಲದ ಸರ್ಕಾರ ಬಡ ಜನರಿಗೆ ಕನಿಷ್ಟ ಪರಿಹಾರ ಅಥವಾ ಪಡಿತರವೂ ನೀಡದೆ ಕರ್ಫ್ಯೂ ಹೇರಿರುವುದು ನಿಜಕ್ಕೂ ಅಮಾನವೀಯತೆಯ ಪರಮಾವಧಿ. ಇಷ್ಟಕ್ಕೂ ಪಂಚ ರಾಜ್ಯಗಳ ಚುನಾವಣೆ ಎದುರಾಗಿದ್ದು ಬಿಜೆಪಿ ಎಲ್ಲೆಡೆ ಸಾಲು ಸಾಲು ಚುನಾವಣಾ ರ್ಯಾಲಿಗಳನ್ನು ಆಯೋಜಿಸಿದೆ. ಈ ರ್‍ಯಾಲಿಗಳಲ್ಲಿ ಆವರಿಸದ ಕೊರೊನಾ ಕರ್ನಾಟಕಕ್ಕೆ ಮಾತ್ರ ಕಂಟಕವಾಗಲಿದೆ ಎಂದು ಸರ್ಕಾರ ಅಂದಾಜಿಸಿರುವುದು ದುರದೃಷ್ಟಕರ.

ಇದನ್ನೂ ಓದಿ:ನಟಿಯ ಬಗ್ಗೆ ಅಸಂಬದ್ದ ಸುದ್ದಿ ಪ್ರಕಟಿಸಿ ‘ವಿಕೃತಿ’ ಮೆರೆದ ವಿಜಯವಾಣಿ.ನೆಟ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...

ಮಹಿಳಾ ಮೀಸಲು ಮಸೂದೆ 2023ರಲ್ಲೇ ಗೆದ್ದಿದೆ, ಈಗ ಸೋತಿರುವುದು ಮೋದಿ ಸರ್ಕಾರ

ಮೋದಿ ಸರ್ಕಾರ ಮಂಡಿಸಿದ್ದ ಮಹಿಳಾ ಮೀಸಲಾತಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾಗಿದೆ ಎಂಬುವುದು ದೇಶದಲ್ಲಿ ಪ್ರಸ್ತುತ ದೊಡ್ಡ ಚರ್ಚೆಯ ವಿಷಯವಾಗಿದೆ. ಕಾಂಗ್ರೆಸ್‌ ನೇತೃತ್ವದಲ್ಲಿ ವಿಪಕ್ಷಗಳು ಮಸೂದೆಯನ್ನು ಸೋಲಿಸುವ ಮೂಲಕ ದೇಶದ ಮಹಿಳೆಯರ ಸಬಲೀಕರಣಕ್ಕೆ...