Homeಕರ್ನಾಟಕನೈಟ್-ವೀಕೆಂಡ್ ಕರ್ಫ್ಯೂ: ಲೈಟೆ ಇಲ್ಲದ ಕಂಬಗಳಾಗಿರುವ ಸರಕಾರದ ರೂಲ್ಸುಗಳು!

ನೈಟ್-ವೀಕೆಂಡ್ ಕರ್ಫ್ಯೂ: ಲೈಟೆ ಇಲ್ಲದ ಕಂಬಗಳಾಗಿರುವ ಸರಕಾರದ ರೂಲ್ಸುಗಳು!

- Advertisement -
- Advertisement -

ಮಾರಣಾಂತಿಕ ಕೊರೊನಾ ಕಳೆದ ಎರಡು ವರ್ಷಗಳಿಂದ ಇಡೀ ಮನುಕುಲವನ್ನು ಕಾಡುತ್ತಿದೆ ನಿಜ. ಆದರೆ, ಸಾಮಾನ್ಯ ಜನ ಮಾತ್ರ ಕೊರೊನಾ ಸೋಂಕಿಗೆ ಕಂಗೆಟ್ಟಿದ್ದಕ್ಕಿಂತ ಸರ್ಕಾರದ ಲಾಕ್ಡೌನ್ ಅಸ್ತ್ರಕ್ಕೆ ಬೆದರಿದ್ದೇ ಹೆಚ್ಚು. ಒಕ್ಕೂಟ ಸರ್ಕಾರದ ಲಾಕ್ಡೌನ್ ಅಕ್ಷರಶಃ ಬಡಜನ ವಲಸೆ ಕಾರ್ಮಿಕ ಮತ್ತು ದಿನಗೂಲಿ ನೌಕರರನ್ನು ಹಿಂಡಿಹಿಪ್ಪೆ ಮಾಡಿದ್ದು, ಜನ ತಮ್ಮ ಮನೆಗಾಗಿ ಸಾವಿರಾರು ಕಿಲೋ ಮೀಟರ್ ಕ್ರಮಿಸಿ ದಾರಿ ನಡುವೆ ಜೀವ ಬಿಟ್ಟಿದ್ದನ್ನು ಭಾಗಶಃ ದೇಶ ಇನ್ನೂ ಮರೆತಿಲ್ಲ.

ಇಷ್ಟಾಗಿಯೂ, ದೇಶದ ಒಳಿತಿಗಾಗಿ ಎಂಬ ಹಣೆಪಟ್ಟಿಯ ಅಡಿಯಲ್ಲಿ ಬಡಜನ ಲಾಕ್ಡೌನ್ ಅನ್ನು ಸಹಿಸಿಕೊಂಡಿದ್ದರು. ಹೀಗಿದ್ದೂ ಕೊರೊನಾ ಏನು ಕಡಿಮೆಯಾಗಿರಲಿಲ್ಲ. ಪರಿಣಾಮ ಜನ ಕೊರೊನಾ ಜೊತೆಗೆ ಬದುಕುವುದನ್ನು ಕಲಿಯಬೇಕು ಎಂಬ ಕಿವಿಮಾತು ಒಕ್ಕೂಟ ಸರ್ಕಾರದಿಂದಲೇ ಕೇಳಿ ಬಂದಿತ್ತು. ಜನರೂ ಅದಕ್ಕೆ ಒಗ್ಗಿಕೊಂಡಿದ್ದರು.

ಇದನ್ನೂ ಓದಿ:ಯುಪಿ ಚುನಾವಣೆ: ಹೋರಾಟಗಾರರು, ಸಂತ್ರಸ್ತರು ಸೇರಿ 40% ಮಹಿಳೆಯರಿಗೆ ಕಾಂಗ್ರೆಸ್ ಟಿಕೆಟ್

ಇದಾಗಿಯೂ, ಈಗ ಇದೇನಿದು ಮತ್ತೆ ತಲೆಬುಡವಿಲ್ಲದ ವೀಕೆಂಡ್ ಕರ್ಫ್ಯೂ? ಇದರಿಂದ ನಿಜಕ್ಕೂ ಕೊರೊನಾವನ್ನು ಓಡಿಸೋಕೆ ಸಾಧ್ಯಾವೇ? ಅಥವಾ ಇದು ಕೇವಲ ಸರ್ಕಾರದ ಬೂಟಾಟಿಕೆಯಾ? ಇವರ ಬೂಟಾಟಿಕೆಗಾಗಿ ದಿನಗೂಲಿ ಮತ್ತು ಬಡಜನರ ಹೊಟ್ಟೆ ಮೇಲೆ ಏಕೆ ಎಂಬ ಪ್ರಶ್ನೆ ಇದೀಗ ಜನಮಾನಸದಲ್ಲಿ ಮೂಡಿದೆ.

ತಲೆಬುಡವಿಲ್ಲದ ರೂಲ್ಸುಗಳು:

ಭಾರತದಲ್ಲಿ ಕೊರೊನಾ ವಿಪರೀತ ಹಂತಕ್ಕೆ ತಲುಪಿದ್ದ ಸಂದರ್ಭದಲ್ಲಿ ಲಕ್ಷಾಂತರ ಜನ ಈ ಸೋಂಕಿಗೆ ಒಳಗಾಗಿ ಸಾಕಷ್ಟು ನೋವುಗಳನ್ನು ಅನುಭವಿಸಿದ್ದರೆ, ಅಸಂಖ್ಯಾತ ಜನ ಮೃತಪಟ್ಟಿದ್ದಾರೆ. ಕೊರೊನಾ ಸೋಂಕಿನಿಂದ ಮೃತಪಟ್ಟವರಿಗೆ ಕನಿಷ್ಟ ಒಂದು ಗೌರವಾನ್ವಿತ ಅಂತ್ಯ ಸಂಸ್ಕಾರವೂ ಸಿಗದೆ ಹೋದದ್ದನ್ನು ಸ್ಮಶಾನಗಳ ಎದುರು ಶವಗಳು ಸಾಲುಗಟ್ಟಿನಿಂತ, ಗಂಗೆಯಲ್ಲಿ ಹೆಣಗಳನ್ನು ಬಿಸಾಡಿ ಹೋದ ಹತ್ತಾರು ಅಮಾನವೀಯ ಘಟನೆಗಳಿಗೆ ಭಾರತ ಸಾಕ್ಷಿಯಾಗಿತ್ತು.

ಪರಿಣಾಮ 2021 ರಲ್ಲಿ ದೇಶದಾದ್ಯಂತ ಸಾಲು ಸಾಲು ಲಾಕ್ಡೌನ್ ಹೇರಲಾಗಿತ್ತು. ಹತ್ತಾರು ಕಷ್ಟದ ನಿಯಮಗಳನ್ನು ರೂಪಿಸಲಾಗಿತ್ತು. ಆದರೂ, ಸಹ ಯಾವ ಪ್ರಯತ್ನವೂ ಫಲ ನೀಡಿರಲಿಲ್ಲ. ಕನಿಷ್ಟ 4.85 ಲಕ್ಷ ಜನ ಈ ಸೋಂಕಿಗೆ ಬಲಿಯಾಗಿದ್ದರು. ಸಾವುಗಳು ಹೆಚ್ಚುತ್ತಿದ್ದ ಅದೇ ಸಂದರ್ಭದಲ್ಲೇ ಮತ್ತೊಂದೆಡೆ ಜನರಲ್ಲಿ ಸಾಮೂಹಿಕ ರೋಗ ನಿರೋಧಕ ಶಕ್ತಿಯೂ ವೃದ್ಧಿಸಿತ್ತು ಎನ್ನುತ್ತಿವೆ ಹಲವು ಅಧ್ಯಯನಗಳು.

ಇದನ್ನೂ ಓದಿ:‘ಅಳಿಯ ಅಲ್ಲ, ಮಗಳ ಗಂಡ’: ಸರ್ಕಾರದ ಹೊಸ ಆದೇಶದ ಬಗ್ಗೆ ಅತಿಥಿ ಉಪನ್ಯಾಸಕರ ಆಕ್ರೋಶ

ಇದಕ್ಕೆ ಪೂರಕವಾಗಿ ಕೊರೊನಾ ಬೆನ್ನಿಗೆ ದಾಳಿಯಿಟ್ಟ ಡೆಲ್ಟಾ ಪ್ಲಸ್, ಬ್ಯ್ಲಾಕ್ ಫಂಗಸ್ ಸಹ ಅಷ್ಟೇನೂ ದೊಡ್ಡ ಅಪಾಯವನ್ನು ತಂದಿಟ್ಟಿರಲಿಲ್ಲ. ಪರಿಣಾಮ ಜನ ಸಾಮಾನ್ಯವಾಗಿಯೇ ಈ ವೈರಸ್‌ಗೆ ಹೆದರುವುದನ್ನು ಬಿಟ್ಟಿದ್ದರು. ಸರ್ಕಾರವೂ ಸಹ ಲಾಕ್ಡೌನ್ ಅನ್ನು ಸಿಡಿಲಿಸಿ ನೈಟ್ ಕರ್ಫ್ಯೂ, ವೀಕೆಂಡ್ ಕರ್ಫ್ಯೂವನ್ನು ಹೇರಿತ್ತು. ಈ ನಿಯಮಗಳು ಅಷ್ಟೇನು ಪರಿಣಾಮಕಾರಿ ಅಲ್ಲ ಎಂಬ ವಿವಾದದಿಂದಾಗಿಯೇ ಕೊನೆಗೆ ಅದನ್ನೂ ಕೈಬಿಡಲಾಗಿತ್ತು. ಆದರೆ, ಸರ್ಕಾರ ಈಗ ಮತ್ತೆ ಅದೇ ವೀಕೆಂಡ್ ಕರ್ಫ್ಯೂವನ್ನು ಹೇರಿದೆ. ಈ ಮೂಲಕ ಕೊರೊನಾವನ್ನು ನಿಯಂತ್ರಿಸಬಹುದು ಎನ್ನುತ್ತಿದೆ. ಹಾಗಾದರೆ ನೈಟ್ ಕರ್ಫ್ಯೂ, ವೀಕೆಂಡ್ ಕರ್ಫ್ಯೂ ಮೂಲಕ ಕೊರೊನಾ ನಿಯಂತ್ರಣ ಸಾಧ್ಯವೇ? ಏನನ್ನುತ್ತಿವೆ ಅಂಕಿಅಂಶಗಳು.

ವೀಕೆಂಡ್ ಕರ್ಫ್ಯೂ ಪರಿಣಾಮಕಾರಿಯೇ?:

ಕರ್ನಾಟಕದಲ್ಲಿ ಈವರೆಗೆ ಒಟ್ಟು 16,46,193 ಕೊರೊನಾ ಕೇಸ್‌ಗಳು ದಾಖಲಾಗಿವೆ. ಈ ಪೈಕಿ ಸಕ್ರೀಯ ಪ್ರಕರಣಗಳು ಕೇವಲ 2334. 4,12,266 ಜನ ಸೋಂಕಿನಿಂದ ಚೇತರಿಸಿಕೊಳ್ಳುತ್ತಿದ್ದರೆ, ಮೃತಪಟ್ಟವರ ಸಂಖ್ಯೆ ಕೇವಲ 8 ಮಾತ್ರ. ಇನ್ನೂ ವೀಕೆಂಡ್ ಕರ್ಫ್ಯೂ ಹೆಸರಿನಲ್ಲಿ ಜನವರಿ 1 ಮತ್ತು 2 ರಂದು ಇಡೀ ಬೆಂಗಳೂರು ಮಹಾನಗರವನ್ನು ಬಂದ್ ಮಾಡಲಾಗಿತ್ತು. ಆದರೆ, ಈ ವೇಳೆ ಸೋಂಕು ಹರಡುವ ಪ್ರಮಾಣ ಇತರೆ ದಿನಕ್ಕಿಂತ ಶೇ. 5ರಿಂದ 6ರಷ್ಟು ಮಾತ್ರ ಕಡಿಮೆಯಾಗಿದೆಯೇ ಹೊರತು ಹೆಚ್ಚು ಲಾಭವೇನಿಲ್ಲ.

ಆದರೆ, ವಾರಾಂತ್ಯದ ಹೊರತಾಗಿ ಉಳಿದ ದಿನಗಳಲ್ಲಿ ಜನ ಸಾಮಾನ್ಯರ ಓಡಾಟಕ್ಕೆ ಎಂದಿನಂತೆ ಅವಕಾಶ ನೀಡಲಾಗಿದೆ. ಆದರೆ, ಈ ದಿನಗಳಲ್ಲಿ ಜನರಿಗೆ ಸೋಂಕು ಹರಡುವುದಿಲ್ಲವೇ? ಕೇವಲ ವಾರಾಂತ್ಯಗಳಲ್ಲಿ ಮಾತ್ರ ಸೋಂಕು ಹರಡುತ್ತದೆಯೇ? ಎಂದು ಜನ ಸಾಮಾನ್ಯರು ತಲೆಬುಡವಿಲ್ಲದ ಸರ್ಕಾರದ ಈ ನಿಯಮಗಳ ವಿರುದ್ಧ ಕೆಂಡಾಮಂಡಲರಾಗಿದ್ದಾರೆ. ಅದಕ್ಕೂ ಕಾರಣಗಳು ಇಲ್ಲದೆ ಏನಿಲ್ಲ.

ಇದನ್ನೂ ಓದಿ:ತಮಿಳುನಾಡಿನಲ್ಲಿ ಸಂಪೂರ್ಣ ಲಾಕ್‌ಡೌನ್ ಅಗತ್ಯವಿಲ್ಲ: ಆರೋಗ್ಯ ಸಚಿವ ಮಾ ಸುಬ್ರಮಣಿಯನ್

ಸರ್ಕಾರದ ವಿರುದ್ಧ ಜನಾಕ್ರೋಶ:

2021ರಲ್ಲಿ ದೇಶದ ಪ್ರಧಾನಿ ನರೇಂದ್ರ ಮೋದಿ ಲಾಕ್ಡೌನ್ ಘೋಷಿಸಿದ್ದಾಗ ಅತಿ ಹೆಚ್ಚು ಸಂಕಷ್ಟಕ್ಕೆ ಒಳಗಾದವರು ದಿನಗೂಲಿ ಮತ್ತು ವಲಸೆ ಕಾರ್ಮಿಕರು. ಈ ವೇಳೆ ಜನ ಕೆಲಸ ಇಲ್ಲದೆ, ಕೂಲಿಯೂ ಇಲ್ಲದೆ ಹಸಿವಿನಿಂದ ಸಾಯುವಂತಹ ಪರಿಸ್ಥಿತಿ ನಿರ್ಮಾಣವಾಗಿತ್ತು. ವಿರೋಧ ಪಕ್ಷಗಳ ಸತತ ವಾಗ್ದಾಳಿಯ ನಂತರ ಕೇಂದ್ರ ಸರ್ಕಾರ 20 ಲಕ್ಷ ರೂ. ಪ್ಯಾಕೇಜ್ ಘೋಷಣೆ ಮಾಡಿತ್ತಾದರೂ ಲಕ್ಷಾಂತರ ಫಲಾನುಭವಿಗಳಿಗೆ ಇನ್ನೂ ಆ ಹಣ ಸಿಕ್ಕೇ ಇಲ್ಲ. ಆಗ ಅನುಭವಿಸಿದ್ದ ಕಷ್ಟಗಳಿಂದಲೇ ಬಡ ಜನ ಇನ್ನೂ ಚೇತರಿಸಿಕೊಂಡಿಲ್ಲ. ಅಷ್ಟರಲ್ಲೇ ಮತ್ತೊಂದು ವೀಕೆಂಡ್ ಕರ್ಫ್ಯೂ ಜಾರಿಯಾಗಿದೆ.

ಈ ವೀಕೆಂಡ್ ಕರ್ಫ್ಯೂನಿಂದ ದಿನಗೂಲಿ ನೌಕರರು, ಕಾರ್ಮಿಕರು ಅದರಲ್ಲೂ ಮುಖ್ಯವಾಗಿ ಆಟೋ ಮತ್ತು ಕ್ಯಾಬ್ ಚಾಲಕರು ಸಾಕಷ್ಟು ತೊಂದರೆಗೆ ಈಡಾಗುತ್ತಾರೆ. ದಿನದ ದುಡಿಮೆ ಇಲ್ಲದೆ ಸಂಕಷ್ಟಕ್ಕೆ ಒಳಗಾಗುತ್ತಾರೆ. ಆದರೆ, ಇದ್ಯಾವುದರ ಬಗ್ಗೆಯೂ ಪರಿವೆಯೇ ಇಲ್ಲದ ಸರ್ಕಾರ ಬಡ ಜನರಿಗೆ ಕನಿಷ್ಟ ಪರಿಹಾರ ಅಥವಾ ಪಡಿತರವೂ ನೀಡದೆ ಕರ್ಫ್ಯೂ ಹೇರಿರುವುದು ನಿಜಕ್ಕೂ ಅಮಾನವೀಯತೆಯ ಪರಮಾವಧಿ. ಇಷ್ಟಕ್ಕೂ ಪಂಚ ರಾಜ್ಯಗಳ ಚುನಾವಣೆ ಎದುರಾಗಿದ್ದು ಬಿಜೆಪಿ ಎಲ್ಲೆಡೆ ಸಾಲು ಸಾಲು ಚುನಾವಣಾ ರ್ಯಾಲಿಗಳನ್ನು ಆಯೋಜಿಸಿದೆ. ಈ ರ್‍ಯಾಲಿಗಳಲ್ಲಿ ಆವರಿಸದ ಕೊರೊನಾ ಕರ್ನಾಟಕಕ್ಕೆ ಮಾತ್ರ ಕಂಟಕವಾಗಲಿದೆ ಎಂದು ಸರ್ಕಾರ ಅಂದಾಜಿಸಿರುವುದು ದುರದೃಷ್ಟಕರ.

ಇದನ್ನೂ ಓದಿ:ನಟಿಯ ಬಗ್ಗೆ ಅಸಂಬದ್ದ ಸುದ್ದಿ ಪ್ರಕಟಿಸಿ ‘ವಿಕೃತಿ’ ಮೆರೆದ ವಿಜಯವಾಣಿ.ನೆಟ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...