Homeಕರ್ನಾಟಕನೈಟ್-ವೀಕೆಂಡ್ ಕರ್ಫ್ಯೂ: ಲೈಟೆ ಇಲ್ಲದ ಕಂಬಗಳಾಗಿರುವ ಸರಕಾರದ ರೂಲ್ಸುಗಳು!

ನೈಟ್-ವೀಕೆಂಡ್ ಕರ್ಫ್ಯೂ: ಲೈಟೆ ಇಲ್ಲದ ಕಂಬಗಳಾಗಿರುವ ಸರಕಾರದ ರೂಲ್ಸುಗಳು!

- Advertisement -
- Advertisement -

ಮಾರಣಾಂತಿಕ ಕೊರೊನಾ ಕಳೆದ ಎರಡು ವರ್ಷಗಳಿಂದ ಇಡೀ ಮನುಕುಲವನ್ನು ಕಾಡುತ್ತಿದೆ ನಿಜ. ಆದರೆ, ಸಾಮಾನ್ಯ ಜನ ಮಾತ್ರ ಕೊರೊನಾ ಸೋಂಕಿಗೆ ಕಂಗೆಟ್ಟಿದ್ದಕ್ಕಿಂತ ಸರ್ಕಾರದ ಲಾಕ್ಡೌನ್ ಅಸ್ತ್ರಕ್ಕೆ ಬೆದರಿದ್ದೇ ಹೆಚ್ಚು. ಒಕ್ಕೂಟ ಸರ್ಕಾರದ ಲಾಕ್ಡೌನ್ ಅಕ್ಷರಶಃ ಬಡಜನ ವಲಸೆ ಕಾರ್ಮಿಕ ಮತ್ತು ದಿನಗೂಲಿ ನೌಕರರನ್ನು ಹಿಂಡಿಹಿಪ್ಪೆ ಮಾಡಿದ್ದು, ಜನ ತಮ್ಮ ಮನೆಗಾಗಿ ಸಾವಿರಾರು ಕಿಲೋ ಮೀಟರ್ ಕ್ರಮಿಸಿ ದಾರಿ ನಡುವೆ ಜೀವ ಬಿಟ್ಟಿದ್ದನ್ನು ಭಾಗಶಃ ದೇಶ ಇನ್ನೂ ಮರೆತಿಲ್ಲ.

ಇಷ್ಟಾಗಿಯೂ, ದೇಶದ ಒಳಿತಿಗಾಗಿ ಎಂಬ ಹಣೆಪಟ್ಟಿಯ ಅಡಿಯಲ್ಲಿ ಬಡಜನ ಲಾಕ್ಡೌನ್ ಅನ್ನು ಸಹಿಸಿಕೊಂಡಿದ್ದರು. ಹೀಗಿದ್ದೂ ಕೊರೊನಾ ಏನು ಕಡಿಮೆಯಾಗಿರಲಿಲ್ಲ. ಪರಿಣಾಮ ಜನ ಕೊರೊನಾ ಜೊತೆಗೆ ಬದುಕುವುದನ್ನು ಕಲಿಯಬೇಕು ಎಂಬ ಕಿವಿಮಾತು ಒಕ್ಕೂಟ ಸರ್ಕಾರದಿಂದಲೇ ಕೇಳಿ ಬಂದಿತ್ತು. ಜನರೂ ಅದಕ್ಕೆ ಒಗ್ಗಿಕೊಂಡಿದ್ದರು.

ಇದನ್ನೂ ಓದಿ:ಯುಪಿ ಚುನಾವಣೆ: ಹೋರಾಟಗಾರರು, ಸಂತ್ರಸ್ತರು ಸೇರಿ 40% ಮಹಿಳೆಯರಿಗೆ ಕಾಂಗ್ರೆಸ್ ಟಿಕೆಟ್

ಇದಾಗಿಯೂ, ಈಗ ಇದೇನಿದು ಮತ್ತೆ ತಲೆಬುಡವಿಲ್ಲದ ವೀಕೆಂಡ್ ಕರ್ಫ್ಯೂ? ಇದರಿಂದ ನಿಜಕ್ಕೂ ಕೊರೊನಾವನ್ನು ಓಡಿಸೋಕೆ ಸಾಧ್ಯಾವೇ? ಅಥವಾ ಇದು ಕೇವಲ ಸರ್ಕಾರದ ಬೂಟಾಟಿಕೆಯಾ? ಇವರ ಬೂಟಾಟಿಕೆಗಾಗಿ ದಿನಗೂಲಿ ಮತ್ತು ಬಡಜನರ ಹೊಟ್ಟೆ ಮೇಲೆ ಏಕೆ ಎಂಬ ಪ್ರಶ್ನೆ ಇದೀಗ ಜನಮಾನಸದಲ್ಲಿ ಮೂಡಿದೆ.

ತಲೆಬುಡವಿಲ್ಲದ ರೂಲ್ಸುಗಳು:

ಭಾರತದಲ್ಲಿ ಕೊರೊನಾ ವಿಪರೀತ ಹಂತಕ್ಕೆ ತಲುಪಿದ್ದ ಸಂದರ್ಭದಲ್ಲಿ ಲಕ್ಷಾಂತರ ಜನ ಈ ಸೋಂಕಿಗೆ ಒಳಗಾಗಿ ಸಾಕಷ್ಟು ನೋವುಗಳನ್ನು ಅನುಭವಿಸಿದ್ದರೆ, ಅಸಂಖ್ಯಾತ ಜನ ಮೃತಪಟ್ಟಿದ್ದಾರೆ. ಕೊರೊನಾ ಸೋಂಕಿನಿಂದ ಮೃತಪಟ್ಟವರಿಗೆ ಕನಿಷ್ಟ ಒಂದು ಗೌರವಾನ್ವಿತ ಅಂತ್ಯ ಸಂಸ್ಕಾರವೂ ಸಿಗದೆ ಹೋದದ್ದನ್ನು ಸ್ಮಶಾನಗಳ ಎದುರು ಶವಗಳು ಸಾಲುಗಟ್ಟಿನಿಂತ, ಗಂಗೆಯಲ್ಲಿ ಹೆಣಗಳನ್ನು ಬಿಸಾಡಿ ಹೋದ ಹತ್ತಾರು ಅಮಾನವೀಯ ಘಟನೆಗಳಿಗೆ ಭಾರತ ಸಾಕ್ಷಿಯಾಗಿತ್ತು.

ಪರಿಣಾಮ 2021 ರಲ್ಲಿ ದೇಶದಾದ್ಯಂತ ಸಾಲು ಸಾಲು ಲಾಕ್ಡೌನ್ ಹೇರಲಾಗಿತ್ತು. ಹತ್ತಾರು ಕಷ್ಟದ ನಿಯಮಗಳನ್ನು ರೂಪಿಸಲಾಗಿತ್ತು. ಆದರೂ, ಸಹ ಯಾವ ಪ್ರಯತ್ನವೂ ಫಲ ನೀಡಿರಲಿಲ್ಲ. ಕನಿಷ್ಟ 4.85 ಲಕ್ಷ ಜನ ಈ ಸೋಂಕಿಗೆ ಬಲಿಯಾಗಿದ್ದರು. ಸಾವುಗಳು ಹೆಚ್ಚುತ್ತಿದ್ದ ಅದೇ ಸಂದರ್ಭದಲ್ಲೇ ಮತ್ತೊಂದೆಡೆ ಜನರಲ್ಲಿ ಸಾಮೂಹಿಕ ರೋಗ ನಿರೋಧಕ ಶಕ್ತಿಯೂ ವೃದ್ಧಿಸಿತ್ತು ಎನ್ನುತ್ತಿವೆ ಹಲವು ಅಧ್ಯಯನಗಳು.

ಇದನ್ನೂ ಓದಿ:‘ಅಳಿಯ ಅಲ್ಲ, ಮಗಳ ಗಂಡ’: ಸರ್ಕಾರದ ಹೊಸ ಆದೇಶದ ಬಗ್ಗೆ ಅತಿಥಿ ಉಪನ್ಯಾಸಕರ ಆಕ್ರೋಶ

ಇದಕ್ಕೆ ಪೂರಕವಾಗಿ ಕೊರೊನಾ ಬೆನ್ನಿಗೆ ದಾಳಿಯಿಟ್ಟ ಡೆಲ್ಟಾ ಪ್ಲಸ್, ಬ್ಯ್ಲಾಕ್ ಫಂಗಸ್ ಸಹ ಅಷ್ಟೇನೂ ದೊಡ್ಡ ಅಪಾಯವನ್ನು ತಂದಿಟ್ಟಿರಲಿಲ್ಲ. ಪರಿಣಾಮ ಜನ ಸಾಮಾನ್ಯವಾಗಿಯೇ ಈ ವೈರಸ್‌ಗೆ ಹೆದರುವುದನ್ನು ಬಿಟ್ಟಿದ್ದರು. ಸರ್ಕಾರವೂ ಸಹ ಲಾಕ್ಡೌನ್ ಅನ್ನು ಸಿಡಿಲಿಸಿ ನೈಟ್ ಕರ್ಫ್ಯೂ, ವೀಕೆಂಡ್ ಕರ್ಫ್ಯೂವನ್ನು ಹೇರಿತ್ತು. ಈ ನಿಯಮಗಳು ಅಷ್ಟೇನು ಪರಿಣಾಮಕಾರಿ ಅಲ್ಲ ಎಂಬ ವಿವಾದದಿಂದಾಗಿಯೇ ಕೊನೆಗೆ ಅದನ್ನೂ ಕೈಬಿಡಲಾಗಿತ್ತು. ಆದರೆ, ಸರ್ಕಾರ ಈಗ ಮತ್ತೆ ಅದೇ ವೀಕೆಂಡ್ ಕರ್ಫ್ಯೂವನ್ನು ಹೇರಿದೆ. ಈ ಮೂಲಕ ಕೊರೊನಾವನ್ನು ನಿಯಂತ್ರಿಸಬಹುದು ಎನ್ನುತ್ತಿದೆ. ಹಾಗಾದರೆ ನೈಟ್ ಕರ್ಫ್ಯೂ, ವೀಕೆಂಡ್ ಕರ್ಫ್ಯೂ ಮೂಲಕ ಕೊರೊನಾ ನಿಯಂತ್ರಣ ಸಾಧ್ಯವೇ? ಏನನ್ನುತ್ತಿವೆ ಅಂಕಿಅಂಶಗಳು.

ವೀಕೆಂಡ್ ಕರ್ಫ್ಯೂ ಪರಿಣಾಮಕಾರಿಯೇ?:

ಕರ್ನಾಟಕದಲ್ಲಿ ಈವರೆಗೆ ಒಟ್ಟು 16,46,193 ಕೊರೊನಾ ಕೇಸ್‌ಗಳು ದಾಖಲಾಗಿವೆ. ಈ ಪೈಕಿ ಸಕ್ರೀಯ ಪ್ರಕರಣಗಳು ಕೇವಲ 2334. 4,12,266 ಜನ ಸೋಂಕಿನಿಂದ ಚೇತರಿಸಿಕೊಳ್ಳುತ್ತಿದ್ದರೆ, ಮೃತಪಟ್ಟವರ ಸಂಖ್ಯೆ ಕೇವಲ 8 ಮಾತ್ರ. ಇನ್ನೂ ವೀಕೆಂಡ್ ಕರ್ಫ್ಯೂ ಹೆಸರಿನಲ್ಲಿ ಜನವರಿ 1 ಮತ್ತು 2 ರಂದು ಇಡೀ ಬೆಂಗಳೂರು ಮಹಾನಗರವನ್ನು ಬಂದ್ ಮಾಡಲಾಗಿತ್ತು. ಆದರೆ, ಈ ವೇಳೆ ಸೋಂಕು ಹರಡುವ ಪ್ರಮಾಣ ಇತರೆ ದಿನಕ್ಕಿಂತ ಶೇ. 5ರಿಂದ 6ರಷ್ಟು ಮಾತ್ರ ಕಡಿಮೆಯಾಗಿದೆಯೇ ಹೊರತು ಹೆಚ್ಚು ಲಾಭವೇನಿಲ್ಲ.

ಆದರೆ, ವಾರಾಂತ್ಯದ ಹೊರತಾಗಿ ಉಳಿದ ದಿನಗಳಲ್ಲಿ ಜನ ಸಾಮಾನ್ಯರ ಓಡಾಟಕ್ಕೆ ಎಂದಿನಂತೆ ಅವಕಾಶ ನೀಡಲಾಗಿದೆ. ಆದರೆ, ಈ ದಿನಗಳಲ್ಲಿ ಜನರಿಗೆ ಸೋಂಕು ಹರಡುವುದಿಲ್ಲವೇ? ಕೇವಲ ವಾರಾಂತ್ಯಗಳಲ್ಲಿ ಮಾತ್ರ ಸೋಂಕು ಹರಡುತ್ತದೆಯೇ? ಎಂದು ಜನ ಸಾಮಾನ್ಯರು ತಲೆಬುಡವಿಲ್ಲದ ಸರ್ಕಾರದ ಈ ನಿಯಮಗಳ ವಿರುದ್ಧ ಕೆಂಡಾಮಂಡಲರಾಗಿದ್ದಾರೆ. ಅದಕ್ಕೂ ಕಾರಣಗಳು ಇಲ್ಲದೆ ಏನಿಲ್ಲ.

ಇದನ್ನೂ ಓದಿ:ತಮಿಳುನಾಡಿನಲ್ಲಿ ಸಂಪೂರ್ಣ ಲಾಕ್‌ಡೌನ್ ಅಗತ್ಯವಿಲ್ಲ: ಆರೋಗ್ಯ ಸಚಿವ ಮಾ ಸುಬ್ರಮಣಿಯನ್

ಸರ್ಕಾರದ ವಿರುದ್ಧ ಜನಾಕ್ರೋಶ:

2021ರಲ್ಲಿ ದೇಶದ ಪ್ರಧಾನಿ ನರೇಂದ್ರ ಮೋದಿ ಲಾಕ್ಡೌನ್ ಘೋಷಿಸಿದ್ದಾಗ ಅತಿ ಹೆಚ್ಚು ಸಂಕಷ್ಟಕ್ಕೆ ಒಳಗಾದವರು ದಿನಗೂಲಿ ಮತ್ತು ವಲಸೆ ಕಾರ್ಮಿಕರು. ಈ ವೇಳೆ ಜನ ಕೆಲಸ ಇಲ್ಲದೆ, ಕೂಲಿಯೂ ಇಲ್ಲದೆ ಹಸಿವಿನಿಂದ ಸಾಯುವಂತಹ ಪರಿಸ್ಥಿತಿ ನಿರ್ಮಾಣವಾಗಿತ್ತು. ವಿರೋಧ ಪಕ್ಷಗಳ ಸತತ ವಾಗ್ದಾಳಿಯ ನಂತರ ಕೇಂದ್ರ ಸರ್ಕಾರ 20 ಲಕ್ಷ ರೂ. ಪ್ಯಾಕೇಜ್ ಘೋಷಣೆ ಮಾಡಿತ್ತಾದರೂ ಲಕ್ಷಾಂತರ ಫಲಾನುಭವಿಗಳಿಗೆ ಇನ್ನೂ ಆ ಹಣ ಸಿಕ್ಕೇ ಇಲ್ಲ. ಆಗ ಅನುಭವಿಸಿದ್ದ ಕಷ್ಟಗಳಿಂದಲೇ ಬಡ ಜನ ಇನ್ನೂ ಚೇತರಿಸಿಕೊಂಡಿಲ್ಲ. ಅಷ್ಟರಲ್ಲೇ ಮತ್ತೊಂದು ವೀಕೆಂಡ್ ಕರ್ಫ್ಯೂ ಜಾರಿಯಾಗಿದೆ.

ಈ ವೀಕೆಂಡ್ ಕರ್ಫ್ಯೂನಿಂದ ದಿನಗೂಲಿ ನೌಕರರು, ಕಾರ್ಮಿಕರು ಅದರಲ್ಲೂ ಮುಖ್ಯವಾಗಿ ಆಟೋ ಮತ್ತು ಕ್ಯಾಬ್ ಚಾಲಕರು ಸಾಕಷ್ಟು ತೊಂದರೆಗೆ ಈಡಾಗುತ್ತಾರೆ. ದಿನದ ದುಡಿಮೆ ಇಲ್ಲದೆ ಸಂಕಷ್ಟಕ್ಕೆ ಒಳಗಾಗುತ್ತಾರೆ. ಆದರೆ, ಇದ್ಯಾವುದರ ಬಗ್ಗೆಯೂ ಪರಿವೆಯೇ ಇಲ್ಲದ ಸರ್ಕಾರ ಬಡ ಜನರಿಗೆ ಕನಿಷ್ಟ ಪರಿಹಾರ ಅಥವಾ ಪಡಿತರವೂ ನೀಡದೆ ಕರ್ಫ್ಯೂ ಹೇರಿರುವುದು ನಿಜಕ್ಕೂ ಅಮಾನವೀಯತೆಯ ಪರಮಾವಧಿ. ಇಷ್ಟಕ್ಕೂ ಪಂಚ ರಾಜ್ಯಗಳ ಚುನಾವಣೆ ಎದುರಾಗಿದ್ದು ಬಿಜೆಪಿ ಎಲ್ಲೆಡೆ ಸಾಲು ಸಾಲು ಚುನಾವಣಾ ರ್ಯಾಲಿಗಳನ್ನು ಆಯೋಜಿಸಿದೆ. ಈ ರ್‍ಯಾಲಿಗಳಲ್ಲಿ ಆವರಿಸದ ಕೊರೊನಾ ಕರ್ನಾಟಕಕ್ಕೆ ಮಾತ್ರ ಕಂಟಕವಾಗಲಿದೆ ಎಂದು ಸರ್ಕಾರ ಅಂದಾಜಿಸಿರುವುದು ದುರದೃಷ್ಟಕರ.

ಇದನ್ನೂ ಓದಿ:ನಟಿಯ ಬಗ್ಗೆ ಅಸಂಬದ್ದ ಸುದ್ದಿ ಪ್ರಕಟಿಸಿ ‘ವಿಕೃತಿ’ ಮೆರೆದ ವಿಜಯವಾಣಿ.ನೆಟ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...