Homeಕರ್ನಾಟಕಅಂಬೇಡ್ಕರ್‌ರವರ ಹೋರಾಟದ ರಥವನ್ನು ಮುಂದಕ್ಕೊಯ್ಯೋಣ: ನಿಜಗುಣಾನಂದ ಸ್ವಾಮಿಗಳು

ಅಂಬೇಡ್ಕರ್‌ರವರ ಹೋರಾಟದ ರಥವನ್ನು ಮುಂದಕ್ಕೊಯ್ಯೋಣ: ನಿಜಗುಣಾನಂದ ಸ್ವಾಮಿಗಳು

ಕನ್ನಡನೆಟ್‌.ಕಾಂಗೆ ದಶಮಾನ ಸಂಭ್ರಮ - ಬಹುತ್ವ ಭಾರತ ಪತ್ರಿಕೆ ಬಿಡುಗಡೆ ಸಮಾರಂಭದಲ್ಲಿ ನಿಜಗುಣಾನಂದ ಸ್ವಾಮಿಯವರ ಅಭಿಪ್ರಾಯ..

- Advertisement -
- Advertisement -

ಭಾರತವೆಂಬ ಹಡಗಿಗೆ ನಾವಿಕರು ರಾಜಕಾರಣಿಗಳಾಗಬಾರದು. ಬದಲಿಗೆ ಬುದ್ದ, ಬಸವ, ಅಂಬೇಡ್ಕರ್‌ರವರ ಚಿಂತನೆಗಳು ನಾವಿಕರಾಗಬೇಕು. ಬುದ್ದನ ತನು, ಬಸವಣ್ಣನ ಮನಸ್ಸು ಮತ್ತು ಅಂಬೇಡ್ಕರ್‌ರವರ ಆತ್ಮ ಭಾರತ ದೇಶವನ್ನು ಮುನ್ನಡೆಸಬೇಕೆಂದು ತೋಂಟದಾರ್ಯ ಶಾಖಾ ಮಠ, ಮುಂಡರಗಿಯ ನಿಜಗುಣಾನಂದ ಸ್ವಾಮಿಯವರು ಹೇಳಿದರು.

ಕೊಪ್ಪಳದಲ್ಲಿ ಕನ್ನಡನೆಟ್‌.ಕಾಂಗೆ ದಶಮಾನ ಸಂಭ್ರಮದ ಪ್ರಯುಕ್ತ ’ಬಹುತ್ವ ಭಾರತ’ ಮಾಸಪತ್ರಿಕೆ ಬಿಡುಗಡೆ ಮಾತನಾಡಿದ ಅವರು ಸಂಬಂಧಗಳ ಬೆಸುಗೆ ಮಾಡುವುದೇ ಮಾಧ್ಯಮ. ಅದಕ್ಕೆ ತನ್ನದೇಯಾದ ಪರಂಪರೆ ಮತ್ತು ಇತಿಹಾಸವಿದೆ. ಪ್ರಜಾಪ್ರಭುತ್ವದ ನಿಸರ್ಗದಲ್ಲಿ ಒಬ್ಬ ಮನುಷ್ಯನಾಗಿ ಬದುಕುತ್ತಿದ್ದು, ಎಲ್ಲರೂ ಮನುಷ್ಯನಾಗಿ ಬದುಕಬೇಕೆಂದು ಬಯಸಲು ಮಾಧ್ಯಮಗಳು ಪ್ರಯತ್ನಿಸಬೇಕು ಎಂದರು.

ಇಂದಿನ ಪ್ರಜಾಪ್ರಭುತ್ವ ಕುಸಿಯಲಿಕ್ಕೆ ಪ್ರಜೆಗಳೇ ಕಾರಣರಾಗಿರುವುದು ದುರಂತ. ಪ್ರಜೆಗಳು ಗಟ್ಟಿಯಿದ್ದರೆ, ಜಾಗೃತರಿದ್ದರೆ ಸ್ವಾಮಿಜಿಗಳು ಗಟ್ಟಿಯಾಗಿರುತ್ತಾರೆ, ರಾಜಕಾರಣಿಗಳು ಸಹ ಗಟ್ಟಿಯಾಗಿರುತ್ತಾರೆ. ಇದನ್ನು ಎಲ್ಲಿವರೆಗೂ ಪ್ರಜೆಗಳು ಅಂತರಂಗದೊಳಗೆ ಅರ್ಥಮಾಡಿಕೊಳ್ಳುವುದಿಲ್ಲವೋ ಆಗ ಪ್ರಜಾಪ್ರಭುತ್ವದ ವ್ಯವಸ್ಥೆ ಕಳೆದುಕೊಳ್ಳುತ್ತದೆ ಎಂದರು.

ಸೋಷಿಯಲ್‌ ಮೀಡಿಯಾ ಬಂದಮೇಲೆ ನಮ್ಮಂತವರ ಮಾತಿಗೆ ಒಂದಷ್ಟು ಬೆಲೆ ಬಂದಿದೆ. ಕರ್ನಾಟಕದಲ್ಲಿ ಮೊಟ್ಟ ಮೊದಲಿಗೆ ಪತ್ರಿಕೆ ತಂದವರು ಸನಾತನಾವಾದಿಗಳು, ಸಂಪ್ರದಾಯವಾದಿಗಳಲ್ಲ, ವಿದ್ಯಾವಂತರೂ ಸಹ ಅಲ್ಲ. ಬದಲಿಗೆ ಕ್ರೈಸ್ತಮಿಷನರಿಗಳು ಮಂಗಳೂರು ಸಮಾಚಾರ ತಂದರು. ಮಂಗಳೂರು ಸಮಾಚಾರ ಬಳ್ಳಾರಿಯಲ್ಲಿ ಪ್ರಿಂಟ್‌ ಆಗುತ್ತಿತ್ತು, ಆಗ ಕ್ರೈಸ್ತರು ಪತ್ರಿಕೆಯೆಂದರೇ ಏನು ಎಂದು ಅರ್ಥಮಾಡಿಸಿದರು ಎಂದು ತಿಳಿಸಿದರು.

ಮಾಧ್ಯಮ ಎನ್ನುವುದು ಹೊಟ್ಟೆಪಾಡಿನ ಕೆಲಸವಲ್ಲ. ಕಾರ್ಯಾಂಗ, ಶಾಸಕಾಂಗ, ನ್ಯಾಯಾಂಗದಿಂದ ನ್ಯಾಯಸಿಗದಿದ್ದಾಗ, ದಾರಿತಪ್ಪಿದಾಗ ಕೆಲಸ ಮಾಡಬೇಕದ ಅಂತರಂಗದ ತರಂಗ ಶಕ್ತಿಯೇ ಮಾಧ್ಯಮ. ಸತ್ಯ ಯಾವುದು? ಸುಳ್ಳು ಯಾವುದು? ಎಂದು ತಿಳಿಸುವುದು ಮಾಧ್ಯಮದ ಕೆಲಸ ಎಂದರು.

ಆದರಿಂದು ಹಲವು ಮಾಧ್ಯಮಗಳು ಕೆಲವೇ ಜಾತಿಧರ್ಮದ, ರಾಜಕೀಯ ಪಕ್ಷಗಳ ಪರವಾಗಿ ಕೆಲಸ ಮಾಡುತ್ತಿವೆ. ಎಂ.ಎಂ ಕಲಬುರ್ಗಿಯವರು ಯು.ಆರ್‌ ಅನಂತಮೂರ್ತಿಯವರ ಪ್ರಸಂಗವನ್ನು ಉಲ್ಲೇಖ ಮಾಡಿ ಮಾತನಾಡಿದನ್ನು ಹಿಂದೂ ಧರ್ಮದ ಕವಲೊಡೆದ ಎಂದೆಲ್ಲಾ ಸುಳ್ಳು ಸುದ್ದಿಪ್ರಕಟಿಸಿದರು. ಹಿಂದೂ ಧರ್ಮದ, ದೇವಸ್ಥಾನದ ವಿರೋಧ ಎಂದೆಲ್ಲಾ ಬರೆದು ಕಚೋಧ್ಯ, ಮತೀಯವಾದಿಗಳ, ಮತಾಂಧರ, ಪಟ್ಟಭದ್ರ ಹಿತಾಸಕ್ತಿಯ ಮಾಧ್ಯಮಗಳು ಕಲಬುರ್ಗಿಯವರ ಸಾವಿಗೆ ಕಾರಣವಾದುದು ದುರಂತ ಎಂದರು.

ಇಂದು ಎಲ್ಲಿಯಾದರೂ ಮಾತನಾಡಿ ಹೋದ ನಂತರ ನಾವು ಮನೆಸೇರುತ್ತೇವೆ ಎಂಬುದಕ್ಕೆ ಗ್ಯಾರಂಟಿಯಿಲ್ಲ. ಪ್ರತಿದಿನ ಮಾತನಾಡುವಾಗ ಸಾವಿನ ಕದವನ್ನು ತಟ್ಟಿ ಮಾತನಾಡುತ್ತೇನೆ. ಕಾರಣ ಧಾರ್ಮಿಕ ಮುಖಂಡರು ಹೀಗೆ ಮಾತನಾಡಬಾರದು. ಅವರೇನಿದ್ದರೂ ಹಾವಿನ ಹೆಡೆಯಂತೆ ಆರ್ಶಿವಾದದ ಕೈಹಾಕಬೇಕು. ಸ್ವಾಮಿಗಳೇಕೆ ಹೀಗೆ ಮಾತನಾಡಬೇಕು ಎನ್ನುವ ರೀತಿ ಮಾಧ್ಯಮಗಳು ನಮ್ಮ ಬಗ್ಗೆ ವರದಿ ಮಾಡುತ್ತಿವೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಭಾರತ ದಿನೇ ದಿನೇ ಏಕಾಧಿಪತ್ಯ ಆಳ್ವಿಕೆಗೆ ಒಳಗಾಗುತ್ತಿದೆ. ಇದು ಸರಿಯಲ್ಲ. ನಮ್ಮದು ಬಹುತ್ವದ ದೇಶ. ಇದು ಬುದ್ದ, ಮಹಾವೀರ, ಲೋಕಾಯತ, ಚಾರ್ವಕ, ಕನಕಪುರಂದರ, ಬಸವಣ್ಣನವರ, ತಿರುವಳ್ಳುವರ್, ಸ್ವಾಮಿ ವಿವೇಕನಂದ, ಗಾಂಧಿ, ಅಂಬೇಡ್ಕರರ ಚಿಂತನೆಗಳ ದೇಶವಾಗಿದೆ ಎಂದರು.

ನಾನು ದೇಶವಿರೋಧಿ, ಧರ್ಮದ ವಿರೋಧಿಯಲ್ಲ. ನಾಸ್ತಿಕನೂ ಅಲ್ಲ. ನಾನು ಇಲ್ಲಿರುವ ಎಲ್ಲಾ ಜಾತಿ ಧರ್ಮದವರನ್ನು ಸಮಾನವಾಗಿ ಕಾಣಿ ಎಂದು ಹೇಳುತ್ತೇನೆ. ಏಕೆಂದರೆ ಎಲ್ಲರೂ ಸಮಾನವಾಗ ಬದುಕುಬೇಕೆಂಬ ಸತ್ಯದ ಆಶಯವಿರುವ ಬಾಬಾಸಾಹೇಬರ ಸಂವಿಧಾನಿವಿದೆ ಈ ದೇಶದಲ್ಲಿ ಎಂದರು.

ಕನ್ನಡನೆಟ್‌.ಕಾಂ ಒಂದು ಜೀವವನ್ನು ಉಳಿಸುವ ಕೆಲಸ ಮಾಡುತ್ತಿದೆ. ಅಂಬೇಡ್ಕರ್‌ರ ಪೆನ್ನು ಹೇಗೆ ದೇಶಕ್ಕೆ ದೊಡ್ಡ ಕೊಡುಗೆ ನೀಡಿತೋ ಹಾಗೆಯೇ ನೀವು ಮುಂದುವರೆಯಿರಿ ಎಂದು ಸಲಹೆ ನೀಡಿದರು.

ಮಾಧ್ಯಮಗಳು ಹಫ್ತಾ, ವಸೂಲಿ, ಮಟ್ಕಾ ದಂಧೆಯ ಬಗ್ಗೆ ಬರೆಯಿರಿ, ಹುಡುಕಿ ಹುಡುಕಿ ಬರೆಯಿರಿ ಬದಲಿಗೆ ಸುಳ್ಳು ಬರೆಯಬೇಡಿ, ಬ್ರೆಕಿಂಗ್‌ ನ್ಯೂಸ್‌ ಎಂಬ ಧಾವಂತಕ್ಕೆ ಬೀಳದೆ ಸತ್ಯ ಪರಿಶೀಲಿಸಿ ಪ್ರಕಟಿಸಿ ಎಂದರು. ನೆರೆ ಸಂತ್ರಸ್ತರು ತಲ್ಲಣಿಸುತ್ತಿದ್ದಾರೆ. ರೈತರು ಕಷ್ಟದಲ್ಲಿದ್ದಾರೆ. ಕಪ್ಪತಗುಡ್ಡ ತೊಂದರೆಯಲ್ಲಿದೆ. ಇವುಗಳ ಕುರಿತು ಹೆಚ್ಚು ಹೆಚ್ಚು ಬರೆದು ಆಳುವವರ ಕಣ್ತೆರೆಸಿ ಎಂದು ಮನವಿ ಮಾಡಿದರು.

ಮನುಷ್ಯನಿಗೆ ಮೂಲಭೂತವಾಗಿ ಅನ್ನ, ಅರಿವೆ, ಅರಿವು, ಆಶ್ರಯ, ಔಷಧ. ಆದರೆ ಎಲ್ಲಾ ಮನುಷ್ಯರಿಗೂ ಇದು ಸಿಗುತ್ತಿಲ್ಲ. ಅದಕ್ಕಾಗಿ ದೊಡ್ಡ ಹೋರಾಟ ನಡೆಯುತ್ತಿದೆ. ಈ ಹೋರಾಟದಲ್ಲಿ ಯಾವುದೇ ಕಾರಣಕ್ಕೂ ಹಿಂದಕ್ಕೆ ಸರಿಯಬೇಡಿ, ಅಂಬೇಡ್ಕರ್‌ರವರು ಹೇಳಿದಂತೆ ಥೇರನ್ನು ಮುಂದಕ್ಕೆ ಎಳೆದುಕೊಂಡಹೋಗೋಣ ಎಂದರು.

ಅಧ್ಯಕ್ಷತೆ ವಹಿಸಿ ಮಾತನಾಡಿದ ಹೈದರಾಬಾದ್‌ ಕರ್ನಾಟಕ ಹೋರಾಟಗಾರ ಡಾ.ರಜಾಕ್‌ ಉಸ್ತಾದ್‌ “ಟಿ.ವಿ ಮಾಧ್ಯಮದವರು ಓದುವುದಿಲ್ಲ, ಪತ್ರಿಕಾ ಮಾಧ್ಯಮದವರು ಸ್ಥಳಕ್ಕೆ ಹೋಗುವುದಿಲ್ಲ ಎಂಬತಾಗಿದೆ” ಎಂದು ಬೇಸರ ವ್ಯಕ್ತಪಡಿಸಿದರು. ಹಿಂದೆ ಜನ ಸುಳ್ಳು ಹೇಳುತ್ತಿದ್ದಾಗ ಪತ್ರಿಕೆಗಳು ಸತ್ಯ ಬರೆಯುತ್ತಿದ್ದವು. ಆದರಿಂದು ಪತ್ರಿಕೆಗಳು ಸುಳ್ಳು ಬರೆಯುತ್ತಿದ್ದು ಜನ ಸತ್ಯ ಹುಡುಕಿದ್ದಾರೆ ಎಂಬ ರವೀಶ್‌ ಕುಮಾರ್‌ರವರ ಮಾತನ್ನು ಉಲ್ಲೇಖಿಸಿ ಪ್ರಸ್ತುತ ಮಾಧ್ಯಮದ ಸ್ಥಿತಿಯನ್ನು ವಿವರಿಸಿದರು.

ಇದೇ ಸಂದರ್ಭದಲ್ಲಿ ತನಿಖಾ ಪತ್ರಿಕೋದ್ಯಮದ ಮೂಲಕ ಬಹಳಷ್ಟು ಹಗರಣಗಳನ್ನು ಬಯಲಿಗೆ ತಂದ ಹಿರಿಯ ಪತ್ರಕರ್ತರು ಮತ್ತು ಪ್ರಗತಿಪರ ಚಳವಳಿಗಳ ಒಡನಾಡಿಯಾದ ಕೊಪ್ಪಳದ ವಿಠ್ಠಪ್ಪ ಗೋರಂಟ್ಲಿಯವರಿಗೆ, ಹೈದರಾಬಾದ್‌ ಕರ್ನಾಟಕದ ಸಮಸ್ಯೆಗಳನ್ನು ಮುನ್ನಲೆಗೆ ತರುತ್ತಿರುವ ಪತ್ರಕರ್ತರಾದ ರಾಯಚೂರಿನ ಸಿದ್ದು ಬಿರಾದರ್‌‌ರವರಿಗೆ ಮತ್ತು ದಿ ಹಿಂದು ಪತ್ರಿಕೆಯ ಮೂಲಕ ಜನಪರ ಪತ್ರಿಕೋದ್ಯಮದ ಭಾಗವಾದ ಬಳ್ಳಾರಿಯ ಅಹಿರಾಜ್‌ರವರಿಗೆ “ಬಹುತ್ವ ಭಾರತೀಯ” ಪ್ರಶಸ್ತಿ ಪ್ರಧಾನ ಮಾಡಲಾಯಿತು.

ಪತ್ರಕರ್ತರದ ಸಿದ್ದನಗೌಡ ಪಾಟೀಲ್, ಕಾರ್ಮಿಕ ಮುಖಂಡರಾದ ಆರ್‌ ಭಾರಧ್ವಜ್‌, ಕನ್ನಡ ನೆಟ್‌ ಸಂಪಾದಕರಾದ ರಾಜಭಕ್ಷಿ, ಬಹುತ್ವ ಭಾರತ ಮಾಸಪತ್ರಿಕೆಯ ಸಂಪಾದಕರಾದ ಸಿರಾಜ್‌ ಬಿಸ್ರಳ್ಳಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳದ ಆಹಾರ ಸಂಸ್ಕೃತಿಯನ್ನು ಗೌರವಿಸುತ್ತೇವೆ ಎಂಬ ಬಿಜೆಪಿಯ ಚುನಾವಣಾ ಭರವಸೆಗೆ ಈಗ ‘ಮೊಟ್ಟೆ’ ಮೊದಲ ಬಲಿ

ಚುನಾವಣಾ ಸಮಯದಲ್ಲಿ, ಬಿಜೆಪಿ ಪರಿಸ್ಥಿತಿಯನ್ನು ಮತ್ತು ಮೀನಿನ ಮಾರುಕಟ್ಟೆಯ ನಾಡಿಮಿಡಿತವನ್ನು ಸರಿಯಾಗಿಯೇ ಅರ್ಥಮಾಡಿಕೊಂಡಿತ್ತು. ಅವರ ನಾಯಕರು ಟಿವಿ ಕ್ಯಾಮೆರಾಗಳ ಮುಂದೆ ಮೀನುಗಳನ್ನು ಪ್ರದರ್ಶಿಸಿದರು ಮತ್ತು ಕುರಿ ಮಾಂಸದೂಟವನ್ನು ಸವಿದಿದ್ದರು. ಬಂಗಾಳಿಗಳ ತಟ್ಟೆಗೆ (ಆಹಾರಕ್ಕೆ)...

24 ಗಂಟೆಗೂ ಮೊದಲೇ ಮಹಾರಾಷ್ಟ್ರದಲ್ಲಿ TET ಪ್ರಶ್ನೆ ಪತ್ರಿಕೆ ಸೋರಿಕೆ: ರದ್ದಾದ ಪರೀಕ್ಷೆ

ಮಹಾರಾಷ್ಟ್ರದಲ್ಲಿ ಮತ್ತೊಂದು ಪರೀಕ್ಷಾ ಅಕ್ರಮದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಜೂನ್ 28ರ ಭಾನುವಾರ ನಡೆಯಬೇಕಿದ್ದ ‘ಶಿಕ್ಷಕರ ಅರ್ಹತಾ ಪರೀಕ್ಷೆ’ (TET) ಆರಂಭಕ್ಕೆ ಕೇವಲ 24 ಗಂಟೆಗಳ ಮುನ್ನವೇ ಪ್ರಶ್ನೆ ಪತ್ರಿಕೆ ಸೋರಿಕೆಯಾದ...

ಸೌತೆಕಾಯಿ ಕೃಷಿಗೆ ತನ್ನ ಸಚಿವಾಲಯದಿಂದಲೇ ₹99 ಲಕ್ಷ ಸಬ್ಸಿಡಿ ಪಡೆದ ಕೇಂದ್ರ BJP ಸಚಿವ ಭಾಗೀರಥ್ ಚೌಧರಿ

ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವ ಭಾಗೀರಥ್ ಚೌಧರಿ ಅವರು ತಮ್ಮದೇ ಸಚಿವಾಲಯದ ವ್ಯಾಪ್ತಿಗೆ ಒರುವ ಯೋಜನೆಯಡಿ, ವಾಣಿಜ್ಯ ಸೌತೆಕಾಯಿ ಕೃಷಿ ಯೋಜನೆಗಾಗಿ 99.03 ಲಕ್ಷ ರೂ. ಸಬ್ಸಿಡಿ (ಸಹಾಯಧನ) ಪಡೆದಿರುವುದು ತನಿಖಾ...

‘ಆರ್‌ಎಸ್‌ಎಸ್‌ ನೋಂದಣಿಯಾದರೆ ಒಳ್ಳೆಯದು’: ರಾಮಮಂದಿರ ಹಗರಣ ವಿಚಾರದಲ್ಲಿ ‘ಸತ್ಯ ಹೊರಬರಬೇಕು’: ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ

‘ರಾಷ್ಟ್ರೀಯ ಸ್ವಯಂಸೇವಕ ಸಂಘವನ್ನು (ಆರ್‌ಎಸ್‌ಎಸ್‌) ನೋಂದಣಿ ಮಾಡಿಸಿದರೆ ಯಾರಿಗೂ ಆರೋಪ ಮಾಡಲು ಅವಕಾಶ ಇರುವುದಿಲ್ಲ’ ಎಂದು ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಶುಕ್ರವಾರ ಹೇಳಿದ್ದಾರೆ. ಆರ್‌ಎಸ್‌ಎಸ್ ನೋಂದಣಿ ಕುರಿತು ಕರ್ನಾಟಕದ ಗೃಹ ಸಚಿವ...

ತುಮಕೂರಿನಲ್ಲಿ ಮಲಹೊರುವ ಪದ್ದತಿ ಜೀವಂತ; ದಲಿತ ಕಾರ್ಮಿಕರನ್ನು ಶೌಚಗುಂಡಿ ಸ್ವಚ್ಛತೆಗೆ ನಿಯೋಜಿಸಿದ ಕೆಇಬಿ ಇಂಜಿನಿಯರ್ಸ್ ಸಂಘ

ದಶಕಗಳ ಹಿಂದೆಯೇ ತಲೆ ಮೇಲೆ ಮಲಹೊರುವ ಅನಿಷ್ಠ ಪದ್ಧತಿಯನ್ನು ದೇಶದಲ್ಲಿ ನಿಷೇಧಿಸಲಾಗಿದೆ. ಕಾನೂನಿನ ಪ್ರಕಾರ ಈ ಅಮಾನವೀಯ ಪದ್ಧತಿ ನಿಷೇದಗೊಂಡಿದ್ದರು ರಾಜ್ಯದಲ್ಲಿ ಮಾತ್ರ ಇನ್ನೂ ಜೀವಂತವಾಗಿರುವುದು ತುಮಕೂರಿನಲ್ಲಿ ಮತ್ತೊಮ್ಮೆ ಬಹಿರಂಗವಾಗಿದೆ. ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್...

ವರ್ಷ ಪೂರೈಸಿದ ಎಸ್‌ಐಆರ್‌ ಪ್ರಕ್ರಿಯೆ; ಸುಮಾರು 6 ಕೋಟಿ ಹೆಸರುಗಳು ಡಿಲೀಟ್

ಸುಮಾರು ಆರು ಕೋಟಿ ಮತದಾರರನ್ನು ಅಳಿಸಲು ಕಾರಣವಾದ, ವಿರೋಧ ಪಕ್ಷಗಳು ಮತ್ತು ಚುನಾವಣಾ ಆಯೋಗದ ನಡುವೆ ಘರ್ಷಣೆಗೆ ಕಾರಣವಾದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು 19 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ...

ರಾಮ ಮಂದಿರ ಹಗರಣ | ಶಿವಸೇನೆ ಕೊಟ್ಟ 1 ಕೋಟಿ ರೂ.ಗೆ ರಸೀದಿ ಸಿಕ್ಕಿಲ್ಲ : ಸಂಜಯ್ ರಾವತ್

ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರಕ್ಕೆ ನೀಡಿದ 1 ಕೋಟಿ ರೂಪಾಯಿ ದೇಣಿಗೆಗೆ ತಮ್ಮ ಪಕ್ಷ ಶಿವಸೇನೆ (ಯುಬಿಟಿ) ರಸೀದಿಯನ್ನು ಸ್ವೀಕರಿಸಿಲ್ಲ ಎಂದು ಸಂಜಯ್ ರಾವತ್ ಶುಕ್ರವಾರ (ಜೂ.26) ಹೇಳಿದ್ದಾರೆ. ರಾಮ ಮಂದಿರದ ದೇಣಿಗೆ...

ರಾಮ ಮಂದಿರ ಹಗರಣ: ಶ್ರೀರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಮತ್ತು ಟ್ರಸ್ಟಿ ಅನಿಲ್ ಮಿಶ್ರಾ ರಾಜೀನಾಮೆ

ಶ್ರೀ ರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್, ರಾಮ ಮಂದಿರ ದೇಣಿಗೆ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ನೈತಿಕ ಹೊಣೆ ಹೊತ್ತು, ಸದಸ್ಯ ಟ್ರಸ್ಟಿ ಅನಿಲ್ ಮಿಶ್ರಾ ಅವರೊಂದಿಗೆ ಶುಕ್ರವಾರ ರಾಜೀನಾಮೆ...

‘ಕೂಡಿ ಹಾಕಿ ಥಳಿಸುತ್ತಿದ್ದರು, ತಪ್ಪಿಸಿಕೊಳ್ಳದಂತೆ ನಾಯಿ ಬಿಟ್ಟಿದ್ದರು’: ಭೀಕರ ಶೋಷಣೆಯಿಂದ 12 ಜೀತ ಕಾರ್ಮಿಕರ ರಕ್ಷಣೆ

ಮೂರು ತಿಂಗಳ ಕಾಲ 68 ವರ್ಷದ ಮೆಹರ್ಬಾನ್ ಶಾ ಅನಿಶ್ಚಿತತೆಯಲ್ಲಿ ಜೀವನ ನಡೆಸುತ್ತಿದ್ದರು. ದುಡಿಯಲು ಹೋಗಿದ್ದ ಅವರ ಕಿರಿಯ ಮಗ ದಿಲ್ಶಾದ್ ಮೊಹಮ್ಮದ್ ಜೀವಂತವಾಗಿದ್ದಾನಾ?, ಇಲ್ಲಾ ಮರಣ ಹೊಂದಿದ್ದಾನಾ? ಎಂಬುವುದು ಅವರಿಗೆ ಗೊತ್ತಿರಲಿಲ್ಲ. 24...

ಅಯ್ಯೋಧ್ಯೆ ರಾಮ ಮಂದಿರ ಹಗರಣ: ಎಂಟು ಜನರ ವಿರುದ್ಧ ಎಫ್‌ಐಆರ್; ಪ್ರಭಾವಿ ವ್ಯಕ್ತಿಗಳನ್ನು ರಕ್ಷಿಸಲಾಗಿದೆ ಎಂದು ಪ್ರತಿಪಕ್ಷಗಳ ಆರೋಪ 

ಅಯೋಧ್ಯೆ: ವಿಶ್ವದಾದ್ಯಂತ ಕೋಟ್ಯಂತರ ಭಕ್ತರ ಆರಾಧ್ಯ ದೈವವಾಗಿರುವ ಅಯೋಧ್ಯೆಯ ಶ್ರೀ ರಾಮ ಮಂದಿರದಲ್ಲಿ ಭಕ್ತರು ಸಮರ್ಪಿಸಿದ ನಗದು, ಚಿನ್ನಾಭರಣ ಸೇರಿದಂತೆ ಇತರೆ ಬೆಲೆಬಾಳುವ ಕಾಣಿಕೆಗಳ ಕಳ್ಳತನ ಮತ್ತು ಹಣ ದುರುಪಯೋಗದ ಗಂಭೀರ ಹಗರಣವೊಂದು...