Homeಕರ್ನಾಟಕಅಂಬೇಡ್ಕರ್‌ರವರ ಹೋರಾಟದ ರಥವನ್ನು ಮುಂದಕ್ಕೊಯ್ಯೋಣ: ನಿಜಗುಣಾನಂದ ಸ್ವಾಮಿಗಳು

ಅಂಬೇಡ್ಕರ್‌ರವರ ಹೋರಾಟದ ರಥವನ್ನು ಮುಂದಕ್ಕೊಯ್ಯೋಣ: ನಿಜಗುಣಾನಂದ ಸ್ವಾಮಿಗಳು

ಕನ್ನಡನೆಟ್‌.ಕಾಂಗೆ ದಶಮಾನ ಸಂಭ್ರಮ - ಬಹುತ್ವ ಭಾರತ ಪತ್ರಿಕೆ ಬಿಡುಗಡೆ ಸಮಾರಂಭದಲ್ಲಿ ನಿಜಗುಣಾನಂದ ಸ್ವಾಮಿಯವರ ಅಭಿಪ್ರಾಯ..

- Advertisement -
- Advertisement -

ಭಾರತವೆಂಬ ಹಡಗಿಗೆ ನಾವಿಕರು ರಾಜಕಾರಣಿಗಳಾಗಬಾರದು. ಬದಲಿಗೆ ಬುದ್ದ, ಬಸವ, ಅಂಬೇಡ್ಕರ್‌ರವರ ಚಿಂತನೆಗಳು ನಾವಿಕರಾಗಬೇಕು. ಬುದ್ದನ ತನು, ಬಸವಣ್ಣನ ಮನಸ್ಸು ಮತ್ತು ಅಂಬೇಡ್ಕರ್‌ರವರ ಆತ್ಮ ಭಾರತ ದೇಶವನ್ನು ಮುನ್ನಡೆಸಬೇಕೆಂದು ತೋಂಟದಾರ್ಯ ಶಾಖಾ ಮಠ, ಮುಂಡರಗಿಯ ನಿಜಗುಣಾನಂದ ಸ್ವಾಮಿಯವರು ಹೇಳಿದರು.

ಕೊಪ್ಪಳದಲ್ಲಿ ಕನ್ನಡನೆಟ್‌.ಕಾಂಗೆ ದಶಮಾನ ಸಂಭ್ರಮದ ಪ್ರಯುಕ್ತ ’ಬಹುತ್ವ ಭಾರತ’ ಮಾಸಪತ್ರಿಕೆ ಬಿಡುಗಡೆ ಮಾತನಾಡಿದ ಅವರು ಸಂಬಂಧಗಳ ಬೆಸುಗೆ ಮಾಡುವುದೇ ಮಾಧ್ಯಮ. ಅದಕ್ಕೆ ತನ್ನದೇಯಾದ ಪರಂಪರೆ ಮತ್ತು ಇತಿಹಾಸವಿದೆ. ಪ್ರಜಾಪ್ರಭುತ್ವದ ನಿಸರ್ಗದಲ್ಲಿ ಒಬ್ಬ ಮನುಷ್ಯನಾಗಿ ಬದುಕುತ್ತಿದ್ದು, ಎಲ್ಲರೂ ಮನುಷ್ಯನಾಗಿ ಬದುಕಬೇಕೆಂದು ಬಯಸಲು ಮಾಧ್ಯಮಗಳು ಪ್ರಯತ್ನಿಸಬೇಕು ಎಂದರು.

ಇಂದಿನ ಪ್ರಜಾಪ್ರಭುತ್ವ ಕುಸಿಯಲಿಕ್ಕೆ ಪ್ರಜೆಗಳೇ ಕಾರಣರಾಗಿರುವುದು ದುರಂತ. ಪ್ರಜೆಗಳು ಗಟ್ಟಿಯಿದ್ದರೆ, ಜಾಗೃತರಿದ್ದರೆ ಸ್ವಾಮಿಜಿಗಳು ಗಟ್ಟಿಯಾಗಿರುತ್ತಾರೆ, ರಾಜಕಾರಣಿಗಳು ಸಹ ಗಟ್ಟಿಯಾಗಿರುತ್ತಾರೆ. ಇದನ್ನು ಎಲ್ಲಿವರೆಗೂ ಪ್ರಜೆಗಳು ಅಂತರಂಗದೊಳಗೆ ಅರ್ಥಮಾಡಿಕೊಳ್ಳುವುದಿಲ್ಲವೋ ಆಗ ಪ್ರಜಾಪ್ರಭುತ್ವದ ವ್ಯವಸ್ಥೆ ಕಳೆದುಕೊಳ್ಳುತ್ತದೆ ಎಂದರು.

ಸೋಷಿಯಲ್‌ ಮೀಡಿಯಾ ಬಂದಮೇಲೆ ನಮ್ಮಂತವರ ಮಾತಿಗೆ ಒಂದಷ್ಟು ಬೆಲೆ ಬಂದಿದೆ. ಕರ್ನಾಟಕದಲ್ಲಿ ಮೊಟ್ಟ ಮೊದಲಿಗೆ ಪತ್ರಿಕೆ ತಂದವರು ಸನಾತನಾವಾದಿಗಳು, ಸಂಪ್ರದಾಯವಾದಿಗಳಲ್ಲ, ವಿದ್ಯಾವಂತರೂ ಸಹ ಅಲ್ಲ. ಬದಲಿಗೆ ಕ್ರೈಸ್ತಮಿಷನರಿಗಳು ಮಂಗಳೂರು ಸಮಾಚಾರ ತಂದರು. ಮಂಗಳೂರು ಸಮಾಚಾರ ಬಳ್ಳಾರಿಯಲ್ಲಿ ಪ್ರಿಂಟ್‌ ಆಗುತ್ತಿತ್ತು, ಆಗ ಕ್ರೈಸ್ತರು ಪತ್ರಿಕೆಯೆಂದರೇ ಏನು ಎಂದು ಅರ್ಥಮಾಡಿಸಿದರು ಎಂದು ತಿಳಿಸಿದರು.

ಮಾಧ್ಯಮ ಎನ್ನುವುದು ಹೊಟ್ಟೆಪಾಡಿನ ಕೆಲಸವಲ್ಲ. ಕಾರ್ಯಾಂಗ, ಶಾಸಕಾಂಗ, ನ್ಯಾಯಾಂಗದಿಂದ ನ್ಯಾಯಸಿಗದಿದ್ದಾಗ, ದಾರಿತಪ್ಪಿದಾಗ ಕೆಲಸ ಮಾಡಬೇಕದ ಅಂತರಂಗದ ತರಂಗ ಶಕ್ತಿಯೇ ಮಾಧ್ಯಮ. ಸತ್ಯ ಯಾವುದು? ಸುಳ್ಳು ಯಾವುದು? ಎಂದು ತಿಳಿಸುವುದು ಮಾಧ್ಯಮದ ಕೆಲಸ ಎಂದರು.

ಆದರಿಂದು ಹಲವು ಮಾಧ್ಯಮಗಳು ಕೆಲವೇ ಜಾತಿಧರ್ಮದ, ರಾಜಕೀಯ ಪಕ್ಷಗಳ ಪರವಾಗಿ ಕೆಲಸ ಮಾಡುತ್ತಿವೆ. ಎಂ.ಎಂ ಕಲಬುರ್ಗಿಯವರು ಯು.ಆರ್‌ ಅನಂತಮೂರ್ತಿಯವರ ಪ್ರಸಂಗವನ್ನು ಉಲ್ಲೇಖ ಮಾಡಿ ಮಾತನಾಡಿದನ್ನು ಹಿಂದೂ ಧರ್ಮದ ಕವಲೊಡೆದ ಎಂದೆಲ್ಲಾ ಸುಳ್ಳು ಸುದ್ದಿಪ್ರಕಟಿಸಿದರು. ಹಿಂದೂ ಧರ್ಮದ, ದೇವಸ್ಥಾನದ ವಿರೋಧ ಎಂದೆಲ್ಲಾ ಬರೆದು ಕಚೋಧ್ಯ, ಮತೀಯವಾದಿಗಳ, ಮತಾಂಧರ, ಪಟ್ಟಭದ್ರ ಹಿತಾಸಕ್ತಿಯ ಮಾಧ್ಯಮಗಳು ಕಲಬುರ್ಗಿಯವರ ಸಾವಿಗೆ ಕಾರಣವಾದುದು ದುರಂತ ಎಂದರು.

ಇಂದು ಎಲ್ಲಿಯಾದರೂ ಮಾತನಾಡಿ ಹೋದ ನಂತರ ನಾವು ಮನೆಸೇರುತ್ತೇವೆ ಎಂಬುದಕ್ಕೆ ಗ್ಯಾರಂಟಿಯಿಲ್ಲ. ಪ್ರತಿದಿನ ಮಾತನಾಡುವಾಗ ಸಾವಿನ ಕದವನ್ನು ತಟ್ಟಿ ಮಾತನಾಡುತ್ತೇನೆ. ಕಾರಣ ಧಾರ್ಮಿಕ ಮುಖಂಡರು ಹೀಗೆ ಮಾತನಾಡಬಾರದು. ಅವರೇನಿದ್ದರೂ ಹಾವಿನ ಹೆಡೆಯಂತೆ ಆರ್ಶಿವಾದದ ಕೈಹಾಕಬೇಕು. ಸ್ವಾಮಿಗಳೇಕೆ ಹೀಗೆ ಮಾತನಾಡಬೇಕು ಎನ್ನುವ ರೀತಿ ಮಾಧ್ಯಮಗಳು ನಮ್ಮ ಬಗ್ಗೆ ವರದಿ ಮಾಡುತ್ತಿವೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಭಾರತ ದಿನೇ ದಿನೇ ಏಕಾಧಿಪತ್ಯ ಆಳ್ವಿಕೆಗೆ ಒಳಗಾಗುತ್ತಿದೆ. ಇದು ಸರಿಯಲ್ಲ. ನಮ್ಮದು ಬಹುತ್ವದ ದೇಶ. ಇದು ಬುದ್ದ, ಮಹಾವೀರ, ಲೋಕಾಯತ, ಚಾರ್ವಕ, ಕನಕಪುರಂದರ, ಬಸವಣ್ಣನವರ, ತಿರುವಳ್ಳುವರ್, ಸ್ವಾಮಿ ವಿವೇಕನಂದ, ಗಾಂಧಿ, ಅಂಬೇಡ್ಕರರ ಚಿಂತನೆಗಳ ದೇಶವಾಗಿದೆ ಎಂದರು.

ನಾನು ದೇಶವಿರೋಧಿ, ಧರ್ಮದ ವಿರೋಧಿಯಲ್ಲ. ನಾಸ್ತಿಕನೂ ಅಲ್ಲ. ನಾನು ಇಲ್ಲಿರುವ ಎಲ್ಲಾ ಜಾತಿ ಧರ್ಮದವರನ್ನು ಸಮಾನವಾಗಿ ಕಾಣಿ ಎಂದು ಹೇಳುತ್ತೇನೆ. ಏಕೆಂದರೆ ಎಲ್ಲರೂ ಸಮಾನವಾಗ ಬದುಕುಬೇಕೆಂಬ ಸತ್ಯದ ಆಶಯವಿರುವ ಬಾಬಾಸಾಹೇಬರ ಸಂವಿಧಾನಿವಿದೆ ಈ ದೇಶದಲ್ಲಿ ಎಂದರು.

ಕನ್ನಡನೆಟ್‌.ಕಾಂ ಒಂದು ಜೀವವನ್ನು ಉಳಿಸುವ ಕೆಲಸ ಮಾಡುತ್ತಿದೆ. ಅಂಬೇಡ್ಕರ್‌ರ ಪೆನ್ನು ಹೇಗೆ ದೇಶಕ್ಕೆ ದೊಡ್ಡ ಕೊಡುಗೆ ನೀಡಿತೋ ಹಾಗೆಯೇ ನೀವು ಮುಂದುವರೆಯಿರಿ ಎಂದು ಸಲಹೆ ನೀಡಿದರು.

ಮಾಧ್ಯಮಗಳು ಹಫ್ತಾ, ವಸೂಲಿ, ಮಟ್ಕಾ ದಂಧೆಯ ಬಗ್ಗೆ ಬರೆಯಿರಿ, ಹುಡುಕಿ ಹುಡುಕಿ ಬರೆಯಿರಿ ಬದಲಿಗೆ ಸುಳ್ಳು ಬರೆಯಬೇಡಿ, ಬ್ರೆಕಿಂಗ್‌ ನ್ಯೂಸ್‌ ಎಂಬ ಧಾವಂತಕ್ಕೆ ಬೀಳದೆ ಸತ್ಯ ಪರಿಶೀಲಿಸಿ ಪ್ರಕಟಿಸಿ ಎಂದರು. ನೆರೆ ಸಂತ್ರಸ್ತರು ತಲ್ಲಣಿಸುತ್ತಿದ್ದಾರೆ. ರೈತರು ಕಷ್ಟದಲ್ಲಿದ್ದಾರೆ. ಕಪ್ಪತಗುಡ್ಡ ತೊಂದರೆಯಲ್ಲಿದೆ. ಇವುಗಳ ಕುರಿತು ಹೆಚ್ಚು ಹೆಚ್ಚು ಬರೆದು ಆಳುವವರ ಕಣ್ತೆರೆಸಿ ಎಂದು ಮನವಿ ಮಾಡಿದರು.

ಮನುಷ್ಯನಿಗೆ ಮೂಲಭೂತವಾಗಿ ಅನ್ನ, ಅರಿವೆ, ಅರಿವು, ಆಶ್ರಯ, ಔಷಧ. ಆದರೆ ಎಲ್ಲಾ ಮನುಷ್ಯರಿಗೂ ಇದು ಸಿಗುತ್ತಿಲ್ಲ. ಅದಕ್ಕಾಗಿ ದೊಡ್ಡ ಹೋರಾಟ ನಡೆಯುತ್ತಿದೆ. ಈ ಹೋರಾಟದಲ್ಲಿ ಯಾವುದೇ ಕಾರಣಕ್ಕೂ ಹಿಂದಕ್ಕೆ ಸರಿಯಬೇಡಿ, ಅಂಬೇಡ್ಕರ್‌ರವರು ಹೇಳಿದಂತೆ ಥೇರನ್ನು ಮುಂದಕ್ಕೆ ಎಳೆದುಕೊಂಡಹೋಗೋಣ ಎಂದರು.

ಅಧ್ಯಕ್ಷತೆ ವಹಿಸಿ ಮಾತನಾಡಿದ ಹೈದರಾಬಾದ್‌ ಕರ್ನಾಟಕ ಹೋರಾಟಗಾರ ಡಾ.ರಜಾಕ್‌ ಉಸ್ತಾದ್‌ “ಟಿ.ವಿ ಮಾಧ್ಯಮದವರು ಓದುವುದಿಲ್ಲ, ಪತ್ರಿಕಾ ಮಾಧ್ಯಮದವರು ಸ್ಥಳಕ್ಕೆ ಹೋಗುವುದಿಲ್ಲ ಎಂಬತಾಗಿದೆ” ಎಂದು ಬೇಸರ ವ್ಯಕ್ತಪಡಿಸಿದರು. ಹಿಂದೆ ಜನ ಸುಳ್ಳು ಹೇಳುತ್ತಿದ್ದಾಗ ಪತ್ರಿಕೆಗಳು ಸತ್ಯ ಬರೆಯುತ್ತಿದ್ದವು. ಆದರಿಂದು ಪತ್ರಿಕೆಗಳು ಸುಳ್ಳು ಬರೆಯುತ್ತಿದ್ದು ಜನ ಸತ್ಯ ಹುಡುಕಿದ್ದಾರೆ ಎಂಬ ರವೀಶ್‌ ಕುಮಾರ್‌ರವರ ಮಾತನ್ನು ಉಲ್ಲೇಖಿಸಿ ಪ್ರಸ್ತುತ ಮಾಧ್ಯಮದ ಸ್ಥಿತಿಯನ್ನು ವಿವರಿಸಿದರು.

ಇದೇ ಸಂದರ್ಭದಲ್ಲಿ ತನಿಖಾ ಪತ್ರಿಕೋದ್ಯಮದ ಮೂಲಕ ಬಹಳಷ್ಟು ಹಗರಣಗಳನ್ನು ಬಯಲಿಗೆ ತಂದ ಹಿರಿಯ ಪತ್ರಕರ್ತರು ಮತ್ತು ಪ್ರಗತಿಪರ ಚಳವಳಿಗಳ ಒಡನಾಡಿಯಾದ ಕೊಪ್ಪಳದ ವಿಠ್ಠಪ್ಪ ಗೋರಂಟ್ಲಿಯವರಿಗೆ, ಹೈದರಾಬಾದ್‌ ಕರ್ನಾಟಕದ ಸಮಸ್ಯೆಗಳನ್ನು ಮುನ್ನಲೆಗೆ ತರುತ್ತಿರುವ ಪತ್ರಕರ್ತರಾದ ರಾಯಚೂರಿನ ಸಿದ್ದು ಬಿರಾದರ್‌‌ರವರಿಗೆ ಮತ್ತು ದಿ ಹಿಂದು ಪತ್ರಿಕೆಯ ಮೂಲಕ ಜನಪರ ಪತ್ರಿಕೋದ್ಯಮದ ಭಾಗವಾದ ಬಳ್ಳಾರಿಯ ಅಹಿರಾಜ್‌ರವರಿಗೆ “ಬಹುತ್ವ ಭಾರತೀಯ” ಪ್ರಶಸ್ತಿ ಪ್ರಧಾನ ಮಾಡಲಾಯಿತು.

ಪತ್ರಕರ್ತರದ ಸಿದ್ದನಗೌಡ ಪಾಟೀಲ್, ಕಾರ್ಮಿಕ ಮುಖಂಡರಾದ ಆರ್‌ ಭಾರಧ್ವಜ್‌, ಕನ್ನಡ ನೆಟ್‌ ಸಂಪಾದಕರಾದ ರಾಜಭಕ್ಷಿ, ಬಹುತ್ವ ಭಾರತ ಮಾಸಪತ್ರಿಕೆಯ ಸಂಪಾದಕರಾದ ಸಿರಾಜ್‌ ಬಿಸ್ರಳ್ಳಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

‘ರಾಜಭವನ’ಗಳನ್ನು ‘ಲೋಕಭವನ’ಗಳೆಂದು ಮರುನಾಮಕರಣ; ಇದು ಒಕ್ಕೂಟ ವ್ಯವಸ್ಥೆ ಮತ್ತು ಭಾಷಾ ಸಮಾನತೆಯ ಮೇಲಿನ ಆಕ್ರಮಣ: ಜಾಗೃತ ಕರ್ನಾಟಕ

ದೇಶಾದಾದ್ಯಂತ ಇರುವ ರಾಜಭವನಗಳ ಹೆಸರನ್ನು ಲೋಕಭವನ ಎಂದು ಮರುನಾಮಕರಣ ಮಾಡುವುದಾಗಿ ಕೇಂದ್ರ ಗೃಹಸಚಿವಾಲಯ ತೀರ್ಮಾನಿಸಿದೆ. ಕೇಂದ್ರದ  ಈ ನೀತಿಯನ್ನು ವಿರೋಧಿಸಿರುವ ಜಾಗೃತ ಕರ್ನಾಟಕ ದೇಶದ ಎಲ್ಲಾ ಹಿಂದಿಯೇತರ ರಾಜ್ಯಗಳ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದೆ....

ಯುಜಿಸಿ ಈಕ್ವಿಟಿ ನಿಯಮಗಳ ಮೇಲಿನ ಸುಪ್ರೀಂ ಕೋರ್ಟ್ ತಡೆಗೆ ವಿದ್ಯಾರ್ಥಿಗಳ ಪ್ರತಿಭಟನೆ, ರೋಹಿತ್ ಕಾಯ್ದೆಗೆ ಒತ್ತಾಯ

ಯುಜಿಸಿ ಇಕ್ವಿಟಿ ನಿಯಮಗಳಿಗೆ ಸುಪ್ರೀಂ ಕೋರ್ಟ್ ನೀಡಿದ ತಡೆಯಾಜ್ಞೆಯ ವಿರುದ್ಧ ಮತ್ತು ವಿಶ್ವವಿದ್ಯಾಲಯಗಳಲ್ಲಿ ಜಾತಿ ತಾರತಮ್ಯವನ್ನು ಎದುರಿಸಲು ಶಾಸನಬದ್ಧ ರೋಹಿತ್ ಕಾಯ್ದೆಯನ್ನು ಜಾರಿಗೆ ತರುವಂತೆ ಒತ್ತಾಯಿಸಿ ಅಖಿಲ ಭಾರತ ವಿದ್ಯಾರ್ಥಿ ಸಂಘ (ಎಐಎಸ್ಎ)...

ನರವಾಣೆ ಅಪ್ರಕಟಿತ ಪುಸ್ತಕ ಗದ್ದಲ | ಸತ್ಯ ಹೊರಬಂದರೆ ಮೋದಿ, ರಾಜನಾಥ್ ಸಿಂಗ್ ಮುಖವಾಡ ಬಯಲಾಗಲಿದೆ : ರಾಹುಲ್ ಗಾಂಧಿ

ಮಾಜಿ ಸೇನಾ ಮುಖ್ಯಸ್ಥ ಜನರಲ್ ಮನೋಜ್ ಮುಕುಂದ್ ನರವಾಣೆ ಅವರ ಅಪ್ರಕಟಿತ ಆತ್ಮಚರಿತ್ರೆ ಕುರಿತು ರಾಹುಲ್ ಗಾಂಧಿ ಸೋಮವಾರ (ಫೆ.2) ಲೋಕಸಭೆಯಲ್ಲಿ ಉಲ್ಲೇಖಿಸಿದ್ದು, ಈ ವೇಳೆ ಆಡಳಿತ ಮತ್ತು ಪ್ರತಿಪಕ್ಷಗಳ ನಡುವೆ ತೀವ್ರ...

ದಲಿತ ಕುಟುಂಬದ ಮದುವೆ ಮೆರವಣಿಗೆ ವೇಳೆ ಘರ್ಷಣೆ : ಮೂವರ ಬಂಧನ

ಗುಜರಾತ್‌ನ ಪಠಾಣ್ ತಾಲೂಕಿನ ಚದ್ರುಮಣ ಗ್ರಾಮದಲ್ಲಿ ದಲಿತ ಕುಟುಂಬದ ಮದುವೆ ಮೆರವಣಿಗೆ ವೇಳೆ ನಡೆದ ಗಲಾಟೆಗೆ ಸಂಬಂಧಿಸಿದಂತೆ ಮೂವರನ್ನು ಪೊಲೀಸರು ಬಂಧಿಸಿದ್ದು, ಇನ್ನೂ ಐವರ ಬಂಧನಕ್ಕೆ ಬಲೆ ಬೀಸಿದ್ದಾರೆ. ಆರೋಪಿಗಳ ವಿರುದ್ದ ಎಸ್‌ಸಿ/ಎಸ್‌ಟಿ...

ಲೋಕಸಭೆಯಲ್ಲಿ ಲಡಾಖ್ ಬಿಕ್ಕಟ್ಟಿನ ಬಗ್ಗೆ ಮಾಜಿ ಸೇನಾ ಮುಖ್ಯಸ್ಥರ ಅಪ್ರಕಟಿತ ಆತ್ಮಚರಿತ್ರೆ ಉಲ್ಲೇಖಿಸಿದ ರಾಹುಲ್ ಗಾಂಧಿ: ಸಭೆಯಲ್ಲಿ ತೀವ್ರ ಗದ್ದಲ

ಸೋಮವಾರ ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಮಾಜಿ ಸೇನಾ ಮುಖ್ಯಸ್ಥ ಎಂಎಂ ನರವಾಣೆ ಅವರ ಆತ್ಮಚರಿತ್ರೆಯಿಂದ ಉಲ್ಲೇಖಿಸಲು ಪ್ರಯತ್ನಿಸಿದ ನಂತರ ಗದ್ದಲ ಭುಗಿಲೆದ್ದಿತು. ರಾಹುಲ್ ಮಾತನಾಡಲು ಪ್ರಾರಂಭಿಸುತ್ತಿದ್ದಂತೆ, ರಕ್ಷಣಾ ಸಚಿವ...

ಪಂಜಾಬ್ ನಿರೀಕ್ಷೆಗಳನ್ನು ಪೂರೈಸುವಲ್ಲಿ ಕೇಂದ್ರ ಬಜೆಟ್ ಮತ್ತೊಮ್ಮೆ ವಿಫಲವಾಗಿದೆ: ಸಿಎಂ ಭಗವಂತ್ ಮಾನ್

ಕೇಂದ್ರ ಬಜೆಟ್ ಮತ್ತೊಮ್ಮೆ ಪಂಜಾಬ್‌ನ ನಿರೀಕ್ಷೆಗಳನ್ನು ಪೂರೈಸುವಲ್ಲಿ ವಿಫಲವಾಗಿದೆ ಎಂದು ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಮತ್ತು ಆಡಳಿತಾರೂಢ ಆಮ್ ಆದ್ಮಿ ಪಕ್ಷದ (ಎಎಪಿ) ಸರ್ಕಾರದ ಸಚಿವರು ಭಾನುವಾರ ಅಭಿಪ್ರಾಯಪಟ್ಟಿದ್ದಾರೆ. ಬಜೆಟ್ ರೈತರಿಗೆ ಯಾವುದೇ...

ರಾಜ್ಯಪಾಲರು ಪೂರ್ಣ ಭಾಷಣ ಓದಿಲ್ಲ, ‘ಜೈ ಸಂವಿಧಾನ’ ಎನ್ನುವುದನ್ನು ಉಲ್ಲೇಖಿಸದೆ ಹೋದರು : ಸಿಎಂ ಸಿದ್ದರಾಮಯ್ಯ

ರಾಜ್ಯಪಾಲರು ಪೂರ್ತಿ ಭಾಷಣ ಓದದೆ ತರಾತುರಿಯಲ್ಲಿ ಹೋದರು. ಭಾಷಣದಲ್ಲಿದ್ದ "ಜೈ ಸಂವಿಧಾನ" ಎನ್ನುವುದನ್ನೂ ಉಲ್ಲೇಖಿಸದೆ ತೆರಳಿದರು. ರಾಷ್ಟ್ರಗೀತೆ ಮುಗಿಯುವವರೆಗೂ ಕಾಯದೆ ಹೋಗಿಬಿಟ್ಟರು. ಇದು ಸರಿಯಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಬಿಜೆಪಿ ಶಾಸಕ...

ಉತ್ತರಾಖಂಡ| ಹಿಂದುತ್ವ ಗುಂಪಿನ ಕಿರುಕುಳದಿಂದ ಮುಸ್ಲಿಂ ಅಂಗಡಿ ಮಾಲೀಕನನ್ನು ರಕ್ಷಿಸಿದ ದೀಪಕ್ ಕುಮಾರ್

ಸ್ಥಳೀಯ ಮುಸ್ಲಿಂ ಅಂಗಡಿ ಮಾಲೀಕನ ವಿರುದ್ಧ ಬಜರಂಗದಳ ಸದಸ್ಯರು ನೀಡುತ್ತಿದ್ದ ಕಿರುಕುಳವನ್ನು ಜಿಮ್ ಮಾಲೀಕ ದೀಪಕ್ ಕುಮಾರ್ ಸ್ಥಳದಲ್ಲೇ ಎದುರಿಸಿದ್ದಾರೆ. ಆಕ್ರೋಶಿತರಾದ ಹಿಂದುತ್ವ ಗುಂಪಿನ ಸದಸ್ಯರು ದೀಪಕ್ ವಿರುದ್ಧವೇ ಪ್ರತಿಭಟನೆ ನಡೆಸಿದ್ದು, ಹಲವಾರ...

ಎಸ್‌ಐಆರ್ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ನಡೆಸುವ ಭಾರತೀಯ ಚುನಾವಣಾ ಆಯೋಗದ (ಇಸಿಐ) ನಿರ್ಧಾರವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ...

ದಕ್ಷಿಣ ಪಿನಾಕಿನಿ ಜಲವಿವಾದ : ನ್ಯಾಯಮಂಡಳಿ ಸ್ಥಾಪಿಸಲು ಸುಪ್ರೀಂ ಕೋರ್ಟ್ ಆದೇಶ

ದಕ್ಷಿಣ ಪಿನಾಕಿನಿ (ಪೆನ್ನೈಯಾರ್) ನದಿ ನೀರಿನ ಹಂಚಿಕೆಗೆ ಸಂಬಂಧಿಸಿದಂತೆ ತಮಿಳುನಾಡು ಮತ್ತು ಕರ್ನಾಟಕ ರಾಜ್ಯಗಳ ನಡುವೆ ಬಾಕಿ ಇರುವ ವಿವಾದಗಳನ್ನು ಪರಿಹರಿಸಲು ನ್ಯಾಯಮಂಡಳಿ ಸ್ಥಾಪಿಸುವಂತೆ ಸುಪ್ರೀಂ ಕೋರ್ಟ್ ಸೋಮವಾರ (ಫೆ.2) ನಿರ್ದೇಶನ ನೀಡಿದೆ. ಕೇಂದ್ರ...