Homeಕರ್ನಾಟಕಅಂಬೇಡ್ಕರ್‌ರವರ ಹೋರಾಟದ ರಥವನ್ನು ಮುಂದಕ್ಕೊಯ್ಯೋಣ: ನಿಜಗುಣಾನಂದ ಸ್ವಾಮಿಗಳು

ಅಂಬೇಡ್ಕರ್‌ರವರ ಹೋರಾಟದ ರಥವನ್ನು ಮುಂದಕ್ಕೊಯ್ಯೋಣ: ನಿಜಗುಣಾನಂದ ಸ್ವಾಮಿಗಳು

ಕನ್ನಡನೆಟ್‌.ಕಾಂಗೆ ದಶಮಾನ ಸಂಭ್ರಮ - ಬಹುತ್ವ ಭಾರತ ಪತ್ರಿಕೆ ಬಿಡುಗಡೆ ಸಮಾರಂಭದಲ್ಲಿ ನಿಜಗುಣಾನಂದ ಸ್ವಾಮಿಯವರ ಅಭಿಪ್ರಾಯ..

- Advertisement -
- Advertisement -

ಭಾರತವೆಂಬ ಹಡಗಿಗೆ ನಾವಿಕರು ರಾಜಕಾರಣಿಗಳಾಗಬಾರದು. ಬದಲಿಗೆ ಬುದ್ದ, ಬಸವ, ಅಂಬೇಡ್ಕರ್‌ರವರ ಚಿಂತನೆಗಳು ನಾವಿಕರಾಗಬೇಕು. ಬುದ್ದನ ತನು, ಬಸವಣ್ಣನ ಮನಸ್ಸು ಮತ್ತು ಅಂಬೇಡ್ಕರ್‌ರವರ ಆತ್ಮ ಭಾರತ ದೇಶವನ್ನು ಮುನ್ನಡೆಸಬೇಕೆಂದು ತೋಂಟದಾರ್ಯ ಶಾಖಾ ಮಠ, ಮುಂಡರಗಿಯ ನಿಜಗುಣಾನಂದ ಸ್ವಾಮಿಯವರು ಹೇಳಿದರು.

ಕೊಪ್ಪಳದಲ್ಲಿ ಕನ್ನಡನೆಟ್‌.ಕಾಂಗೆ ದಶಮಾನ ಸಂಭ್ರಮದ ಪ್ರಯುಕ್ತ ’ಬಹುತ್ವ ಭಾರತ’ ಮಾಸಪತ್ರಿಕೆ ಬಿಡುಗಡೆ ಮಾತನಾಡಿದ ಅವರು ಸಂಬಂಧಗಳ ಬೆಸುಗೆ ಮಾಡುವುದೇ ಮಾಧ್ಯಮ. ಅದಕ್ಕೆ ತನ್ನದೇಯಾದ ಪರಂಪರೆ ಮತ್ತು ಇತಿಹಾಸವಿದೆ. ಪ್ರಜಾಪ್ರಭುತ್ವದ ನಿಸರ್ಗದಲ್ಲಿ ಒಬ್ಬ ಮನುಷ್ಯನಾಗಿ ಬದುಕುತ್ತಿದ್ದು, ಎಲ್ಲರೂ ಮನುಷ್ಯನಾಗಿ ಬದುಕಬೇಕೆಂದು ಬಯಸಲು ಮಾಧ್ಯಮಗಳು ಪ್ರಯತ್ನಿಸಬೇಕು ಎಂದರು.

ಇಂದಿನ ಪ್ರಜಾಪ್ರಭುತ್ವ ಕುಸಿಯಲಿಕ್ಕೆ ಪ್ರಜೆಗಳೇ ಕಾರಣರಾಗಿರುವುದು ದುರಂತ. ಪ್ರಜೆಗಳು ಗಟ್ಟಿಯಿದ್ದರೆ, ಜಾಗೃತರಿದ್ದರೆ ಸ್ವಾಮಿಜಿಗಳು ಗಟ್ಟಿಯಾಗಿರುತ್ತಾರೆ, ರಾಜಕಾರಣಿಗಳು ಸಹ ಗಟ್ಟಿಯಾಗಿರುತ್ತಾರೆ. ಇದನ್ನು ಎಲ್ಲಿವರೆಗೂ ಪ್ರಜೆಗಳು ಅಂತರಂಗದೊಳಗೆ ಅರ್ಥಮಾಡಿಕೊಳ್ಳುವುದಿಲ್ಲವೋ ಆಗ ಪ್ರಜಾಪ್ರಭುತ್ವದ ವ್ಯವಸ್ಥೆ ಕಳೆದುಕೊಳ್ಳುತ್ತದೆ ಎಂದರು.

ಸೋಷಿಯಲ್‌ ಮೀಡಿಯಾ ಬಂದಮೇಲೆ ನಮ್ಮಂತವರ ಮಾತಿಗೆ ಒಂದಷ್ಟು ಬೆಲೆ ಬಂದಿದೆ. ಕರ್ನಾಟಕದಲ್ಲಿ ಮೊಟ್ಟ ಮೊದಲಿಗೆ ಪತ್ರಿಕೆ ತಂದವರು ಸನಾತನಾವಾದಿಗಳು, ಸಂಪ್ರದಾಯವಾದಿಗಳಲ್ಲ, ವಿದ್ಯಾವಂತರೂ ಸಹ ಅಲ್ಲ. ಬದಲಿಗೆ ಕ್ರೈಸ್ತಮಿಷನರಿಗಳು ಮಂಗಳೂರು ಸಮಾಚಾರ ತಂದರು. ಮಂಗಳೂರು ಸಮಾಚಾರ ಬಳ್ಳಾರಿಯಲ್ಲಿ ಪ್ರಿಂಟ್‌ ಆಗುತ್ತಿತ್ತು, ಆಗ ಕ್ರೈಸ್ತರು ಪತ್ರಿಕೆಯೆಂದರೇ ಏನು ಎಂದು ಅರ್ಥಮಾಡಿಸಿದರು ಎಂದು ತಿಳಿಸಿದರು.

ಮಾಧ್ಯಮ ಎನ್ನುವುದು ಹೊಟ್ಟೆಪಾಡಿನ ಕೆಲಸವಲ್ಲ. ಕಾರ್ಯಾಂಗ, ಶಾಸಕಾಂಗ, ನ್ಯಾಯಾಂಗದಿಂದ ನ್ಯಾಯಸಿಗದಿದ್ದಾಗ, ದಾರಿತಪ್ಪಿದಾಗ ಕೆಲಸ ಮಾಡಬೇಕದ ಅಂತರಂಗದ ತರಂಗ ಶಕ್ತಿಯೇ ಮಾಧ್ಯಮ. ಸತ್ಯ ಯಾವುದು? ಸುಳ್ಳು ಯಾವುದು? ಎಂದು ತಿಳಿಸುವುದು ಮಾಧ್ಯಮದ ಕೆಲಸ ಎಂದರು.

ಆದರಿಂದು ಹಲವು ಮಾಧ್ಯಮಗಳು ಕೆಲವೇ ಜಾತಿಧರ್ಮದ, ರಾಜಕೀಯ ಪಕ್ಷಗಳ ಪರವಾಗಿ ಕೆಲಸ ಮಾಡುತ್ತಿವೆ. ಎಂ.ಎಂ ಕಲಬುರ್ಗಿಯವರು ಯು.ಆರ್‌ ಅನಂತಮೂರ್ತಿಯವರ ಪ್ರಸಂಗವನ್ನು ಉಲ್ಲೇಖ ಮಾಡಿ ಮಾತನಾಡಿದನ್ನು ಹಿಂದೂ ಧರ್ಮದ ಕವಲೊಡೆದ ಎಂದೆಲ್ಲಾ ಸುಳ್ಳು ಸುದ್ದಿಪ್ರಕಟಿಸಿದರು. ಹಿಂದೂ ಧರ್ಮದ, ದೇವಸ್ಥಾನದ ವಿರೋಧ ಎಂದೆಲ್ಲಾ ಬರೆದು ಕಚೋಧ್ಯ, ಮತೀಯವಾದಿಗಳ, ಮತಾಂಧರ, ಪಟ್ಟಭದ್ರ ಹಿತಾಸಕ್ತಿಯ ಮಾಧ್ಯಮಗಳು ಕಲಬುರ್ಗಿಯವರ ಸಾವಿಗೆ ಕಾರಣವಾದುದು ದುರಂತ ಎಂದರು.

ಇಂದು ಎಲ್ಲಿಯಾದರೂ ಮಾತನಾಡಿ ಹೋದ ನಂತರ ನಾವು ಮನೆಸೇರುತ್ತೇವೆ ಎಂಬುದಕ್ಕೆ ಗ್ಯಾರಂಟಿಯಿಲ್ಲ. ಪ್ರತಿದಿನ ಮಾತನಾಡುವಾಗ ಸಾವಿನ ಕದವನ್ನು ತಟ್ಟಿ ಮಾತನಾಡುತ್ತೇನೆ. ಕಾರಣ ಧಾರ್ಮಿಕ ಮುಖಂಡರು ಹೀಗೆ ಮಾತನಾಡಬಾರದು. ಅವರೇನಿದ್ದರೂ ಹಾವಿನ ಹೆಡೆಯಂತೆ ಆರ್ಶಿವಾದದ ಕೈಹಾಕಬೇಕು. ಸ್ವಾಮಿಗಳೇಕೆ ಹೀಗೆ ಮಾತನಾಡಬೇಕು ಎನ್ನುವ ರೀತಿ ಮಾಧ್ಯಮಗಳು ನಮ್ಮ ಬಗ್ಗೆ ವರದಿ ಮಾಡುತ್ತಿವೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಭಾರತ ದಿನೇ ದಿನೇ ಏಕಾಧಿಪತ್ಯ ಆಳ್ವಿಕೆಗೆ ಒಳಗಾಗುತ್ತಿದೆ. ಇದು ಸರಿಯಲ್ಲ. ನಮ್ಮದು ಬಹುತ್ವದ ದೇಶ. ಇದು ಬುದ್ದ, ಮಹಾವೀರ, ಲೋಕಾಯತ, ಚಾರ್ವಕ, ಕನಕಪುರಂದರ, ಬಸವಣ್ಣನವರ, ತಿರುವಳ್ಳುವರ್, ಸ್ವಾಮಿ ವಿವೇಕನಂದ, ಗಾಂಧಿ, ಅಂಬೇಡ್ಕರರ ಚಿಂತನೆಗಳ ದೇಶವಾಗಿದೆ ಎಂದರು.

ನಾನು ದೇಶವಿರೋಧಿ, ಧರ್ಮದ ವಿರೋಧಿಯಲ್ಲ. ನಾಸ್ತಿಕನೂ ಅಲ್ಲ. ನಾನು ಇಲ್ಲಿರುವ ಎಲ್ಲಾ ಜಾತಿ ಧರ್ಮದವರನ್ನು ಸಮಾನವಾಗಿ ಕಾಣಿ ಎಂದು ಹೇಳುತ್ತೇನೆ. ಏಕೆಂದರೆ ಎಲ್ಲರೂ ಸಮಾನವಾಗ ಬದುಕುಬೇಕೆಂಬ ಸತ್ಯದ ಆಶಯವಿರುವ ಬಾಬಾಸಾಹೇಬರ ಸಂವಿಧಾನಿವಿದೆ ಈ ದೇಶದಲ್ಲಿ ಎಂದರು.

ಕನ್ನಡನೆಟ್‌.ಕಾಂ ಒಂದು ಜೀವವನ್ನು ಉಳಿಸುವ ಕೆಲಸ ಮಾಡುತ್ತಿದೆ. ಅಂಬೇಡ್ಕರ್‌ರ ಪೆನ್ನು ಹೇಗೆ ದೇಶಕ್ಕೆ ದೊಡ್ಡ ಕೊಡುಗೆ ನೀಡಿತೋ ಹಾಗೆಯೇ ನೀವು ಮುಂದುವರೆಯಿರಿ ಎಂದು ಸಲಹೆ ನೀಡಿದರು.

ಮಾಧ್ಯಮಗಳು ಹಫ್ತಾ, ವಸೂಲಿ, ಮಟ್ಕಾ ದಂಧೆಯ ಬಗ್ಗೆ ಬರೆಯಿರಿ, ಹುಡುಕಿ ಹುಡುಕಿ ಬರೆಯಿರಿ ಬದಲಿಗೆ ಸುಳ್ಳು ಬರೆಯಬೇಡಿ, ಬ್ರೆಕಿಂಗ್‌ ನ್ಯೂಸ್‌ ಎಂಬ ಧಾವಂತಕ್ಕೆ ಬೀಳದೆ ಸತ್ಯ ಪರಿಶೀಲಿಸಿ ಪ್ರಕಟಿಸಿ ಎಂದರು. ನೆರೆ ಸಂತ್ರಸ್ತರು ತಲ್ಲಣಿಸುತ್ತಿದ್ದಾರೆ. ರೈತರು ಕಷ್ಟದಲ್ಲಿದ್ದಾರೆ. ಕಪ್ಪತಗುಡ್ಡ ತೊಂದರೆಯಲ್ಲಿದೆ. ಇವುಗಳ ಕುರಿತು ಹೆಚ್ಚು ಹೆಚ್ಚು ಬರೆದು ಆಳುವವರ ಕಣ್ತೆರೆಸಿ ಎಂದು ಮನವಿ ಮಾಡಿದರು.

ಮನುಷ್ಯನಿಗೆ ಮೂಲಭೂತವಾಗಿ ಅನ್ನ, ಅರಿವೆ, ಅರಿವು, ಆಶ್ರಯ, ಔಷಧ. ಆದರೆ ಎಲ್ಲಾ ಮನುಷ್ಯರಿಗೂ ಇದು ಸಿಗುತ್ತಿಲ್ಲ. ಅದಕ್ಕಾಗಿ ದೊಡ್ಡ ಹೋರಾಟ ನಡೆಯುತ್ತಿದೆ. ಈ ಹೋರಾಟದಲ್ಲಿ ಯಾವುದೇ ಕಾರಣಕ್ಕೂ ಹಿಂದಕ್ಕೆ ಸರಿಯಬೇಡಿ, ಅಂಬೇಡ್ಕರ್‌ರವರು ಹೇಳಿದಂತೆ ಥೇರನ್ನು ಮುಂದಕ್ಕೆ ಎಳೆದುಕೊಂಡಹೋಗೋಣ ಎಂದರು.

ಅಧ್ಯಕ್ಷತೆ ವಹಿಸಿ ಮಾತನಾಡಿದ ಹೈದರಾಬಾದ್‌ ಕರ್ನಾಟಕ ಹೋರಾಟಗಾರ ಡಾ.ರಜಾಕ್‌ ಉಸ್ತಾದ್‌ “ಟಿ.ವಿ ಮಾಧ್ಯಮದವರು ಓದುವುದಿಲ್ಲ, ಪತ್ರಿಕಾ ಮಾಧ್ಯಮದವರು ಸ್ಥಳಕ್ಕೆ ಹೋಗುವುದಿಲ್ಲ ಎಂಬತಾಗಿದೆ” ಎಂದು ಬೇಸರ ವ್ಯಕ್ತಪಡಿಸಿದರು. ಹಿಂದೆ ಜನ ಸುಳ್ಳು ಹೇಳುತ್ತಿದ್ದಾಗ ಪತ್ರಿಕೆಗಳು ಸತ್ಯ ಬರೆಯುತ್ತಿದ್ದವು. ಆದರಿಂದು ಪತ್ರಿಕೆಗಳು ಸುಳ್ಳು ಬರೆಯುತ್ತಿದ್ದು ಜನ ಸತ್ಯ ಹುಡುಕಿದ್ದಾರೆ ಎಂಬ ರವೀಶ್‌ ಕುಮಾರ್‌ರವರ ಮಾತನ್ನು ಉಲ್ಲೇಖಿಸಿ ಪ್ರಸ್ತುತ ಮಾಧ್ಯಮದ ಸ್ಥಿತಿಯನ್ನು ವಿವರಿಸಿದರು.

ಇದೇ ಸಂದರ್ಭದಲ್ಲಿ ತನಿಖಾ ಪತ್ರಿಕೋದ್ಯಮದ ಮೂಲಕ ಬಹಳಷ್ಟು ಹಗರಣಗಳನ್ನು ಬಯಲಿಗೆ ತಂದ ಹಿರಿಯ ಪತ್ರಕರ್ತರು ಮತ್ತು ಪ್ರಗತಿಪರ ಚಳವಳಿಗಳ ಒಡನಾಡಿಯಾದ ಕೊಪ್ಪಳದ ವಿಠ್ಠಪ್ಪ ಗೋರಂಟ್ಲಿಯವರಿಗೆ, ಹೈದರಾಬಾದ್‌ ಕರ್ನಾಟಕದ ಸಮಸ್ಯೆಗಳನ್ನು ಮುನ್ನಲೆಗೆ ತರುತ್ತಿರುವ ಪತ್ರಕರ್ತರಾದ ರಾಯಚೂರಿನ ಸಿದ್ದು ಬಿರಾದರ್‌‌ರವರಿಗೆ ಮತ್ತು ದಿ ಹಿಂದು ಪತ್ರಿಕೆಯ ಮೂಲಕ ಜನಪರ ಪತ್ರಿಕೋದ್ಯಮದ ಭಾಗವಾದ ಬಳ್ಳಾರಿಯ ಅಹಿರಾಜ್‌ರವರಿಗೆ “ಬಹುತ್ವ ಭಾರತೀಯ” ಪ್ರಶಸ್ತಿ ಪ್ರಧಾನ ಮಾಡಲಾಯಿತು.

ಪತ್ರಕರ್ತರದ ಸಿದ್ದನಗೌಡ ಪಾಟೀಲ್, ಕಾರ್ಮಿಕ ಮುಖಂಡರಾದ ಆರ್‌ ಭಾರಧ್ವಜ್‌, ಕನ್ನಡ ನೆಟ್‌ ಸಂಪಾದಕರಾದ ರಾಜಭಕ್ಷಿ, ಬಹುತ್ವ ಭಾರತ ಮಾಸಪತ್ರಿಕೆಯ ಸಂಪಾದಕರಾದ ಸಿರಾಜ್‌ ಬಿಸ್ರಳ್ಳಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಜಾರಿ ಸರ್ಕಾರದ ಹೊಸ ಸೂತ್ರ

ಕರ್ನಾಟಕದಲ್ಲಿ ಒಳಮೀಸಲಾತಿಯ ’ಸದ್ದು-ಗುದ್ದು’ ಅವಿಭಜಿತ ಆಂಧ್ರಪ್ರದೇಶಕ್ಕಿಂತಲೂ ಹೆಚ್ಚಾಗಿದೆ. ಇದಕ್ಕೆ ಕಾರಣ ಪರಿಶಿಷ್ಟ ಜಾತಿಗಳೊಳಗಿನ ಮೇಲಾಟವೂ ಹೌದು, ಸರ್ಕಾರದ ಬೇಜವಾಬ್ದಾರಿ ನಡೆಗಳೂ ಹೌದು. ಆದರೆ ದಿನಾಂಕ: 24.04.2026ರಂದು ನಡೆದ ಸಚಿವ ಸಂಪುಟ ಸಭೆಯು ಒಳಮೀಸಲಾತಿ...

ಕೊರೋನಾ ಲಸಿಕೆ ಒಳಹೊರಗುಗಳ ಪರಾಮರ್ಶೆಯ ನೋಟ

ಮನುಷ್ಯನ ನೆನಪಿನ ಶಕ್ತಿ ಕಡಿಮೆ ಎಂದು ರಾಜಕಾರಣಿಗಳು, ಅಧಿಕಾರಿಗಳು ಸದಾ ಗುನುಗುತ್ತಿರುತ್ತಾರೆ. ಅದು ಜೀವ ಮತ್ತು ಜೀವನ ಕಳೆದುಕೊಂಡ ವಿಚಾರವನ್ನು ಕೂಡ ಬಹಳ ಬೇಗ ಮರೆವಿನ ತೊಟ್ಟಿಗೆ ತಳ್ಳಿ ಬಿಡುತ್ತದೆ.ಆದರೂ, ಮನುಷ್ಯ ಭೂಮಿಯ...

‘ಮಾವಿನ ಮರ’ ಕಂಡ ಕನಸು

ಪುಸ್ತಕ ಪರಿಚಯ ಸವಾಲಿನ ವಿಷಯ. ಅದರಲ್ಲೂ ಕವಿತೆಗಳ ಕುರಿತು ಮಾತನಾಡುವುದು ಇನ್ನೂ ಸವಾಲು. ಪ್ರತಿಯೊಂದು ಕವಿತೆಯೂ ತನ್ನ ಓದುಗರೊಂದಿಗೆ ಸಂವಾದಿಸುವ ಬಗೆ ವಿಭಿನ್ನವಾಗಿರುತ್ತದೆ. ಅದನ್ನು ಏಕರೂಪೀ ಪರಿಭಾಷೆಯಲ್ಲಿ ಮಂಡಿಸುವುದು ಸರಿಯಲ್ಲ. ’ಮಿಥಿಲೆಯ ಮಾವಿನ...

NEET ರದ್ದು : ಖಿನ್ನತೆ, ಆತಂಕಕ್ಕೆ ಒಳಗಾದ ವಿದ್ಯಾರ್ಥಿಗಳು; ನಾಲ್ಕು ದಿನದಲ್ಲಿ ನಾಲ್ವರು ಸಾವಿಗೆ ಶರಣು

ಈ ವರ್ಷದ (2026) ನೀಟ್-ಯುಜಿ (NEET-UG) ಪರೀಕ್ಷೆ ರದ್ದಾದ ಬಳಿಕ ದೇಶದಾದ್ಯಂತ ಕನಿಷ್ಠ ನಾಲ್ವರು ವಿದ್ಯಾರ್ಥಿಗಳು ತೀವ್ರ ಮಾನಸಿಕ ಒತ್ತಡ ಹಾಗೂ ಹತಾಶೆಯಿಂದ ಸಾವಿಗೆ ಶರಣಾಗಿದ್ದಾರೆ. ರಾಜಸ್ಥಾನದ ಝುಂಜುನು ಜಿಲ್ಲೆಯ 23 ವರ್ಷದ ಪ್ರದೀಪ್...

ಪ್ಯಾಲೆಸ್ಟೀನಿಯನ್ ಕೈದಿಗಳ ಮೇಲೆ ಲೈಂಗಿಕ ದೌರ್ಜನ್ಯ ವರದಿ: ನ್ಯೂಯಾರ್ಕ್ ಟೈಮ್ ವಿರುದ್ಧ ಮೊಕದ್ದಮೆ ದಾಖಲಿಸಿದ ಇಸ್ರೇಲ್ ಕ್ರಮಕ್ಕೆ ಆರ್‌ಎಸ್‌ಎಫ್ ಖಂಡನೆ

ಪ್ಯಾಲೆಸ್ಟೀನಿಯನ್ ಕೈದಿಗಳನ್ನು ಗುರಿಯಾಗಿಸಿಕೊಂಡು ವ್ಯಾಪಕವಾದ ಲೈಂಗಿಕ ದೌರ್ಜನ್ಯವನ್ನು ಬಹಿರಂಗಪಡಿಸಿದ ನಿಕೋಲಸ್ ಕ್ರಿಸ್ಟೋಫ್ ಅವರ  ಅಭಿಪ್ರಾಯ ಅಂಕಣವನ್ನು ಪ್ರಕಟಿಸಿದ ನ್ಯೂಯಾರ್ಕ್ ಟೈಮ್ಸ್ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿರುವ ಇಸ್ರೇಲಿ ಸರ್ಕಾರದ ನಿರ್ಧಾರವನ್ನು ರಿಪೋರ್ಟರ್ಸ್ ವಿದೌಟ್...

“ಮುಸ್ಲಿಮರಿಗೆ ಯಾವುದೇ ಕೆಲಸ ಮಾಡಲ್ಲ” ಎಂದು ವಿವಾದಾತ್ಮಕ ಶಪಥ ಮಾಡಿದ ಪಶ್ಚಿಮ ಬಂಗಾಳದ ಬಿಜೆಪಿ ಶಾಸಕ ರಿತೇಶ್ ತಿವಾರಿ

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಬಿಜೆಪಿ ತನ್ನ ಮೊದಲ ಸರ್ಕಾರವನ್ನು ರಚಿಸಿದ ಕೆಲವೇ ದಿನಗಳಲ್ಲಿ, ಪಕ್ಷದ ಶಾಸಕ ರಿತೇಶ್ ತಿವಾರಿ ಅವರು ಮಾಡಿರುವ ಭಾಷಣವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. "ಪಶ್ಚಿಮ...

’ಎಸ್‌ಐಆರ್’ ವಿರುದ್ಧ ಜನಪರ ಸಂಘಟನೆಗಳಿಂದ ಜನಾಂದೋಲನ ಬಂಗಾಳದ ಜನರ ಜೊತೆಗೆ ನಿಂತ ಕರ್ನಾಟಕ

ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ (ಎಸ್‌ಐಆರ್) ಮೂಲಕ ವಿರೋಧ ಪಕ್ಷಗಳ ಮತದಾರರು ಮತ್ತು ಅಲ್ಪಸಂಖ್ಯಾತ ಸಮುದಾಯದ ಲಕ್ಷಾಂತರ ಮತದಾರರನ್ನು ಪಟ್ಟಿಯಿಂದ ಕೈಬಿಡುವ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಕುತಂತ್ರ ಈಗಾಗಲೇ ಬಿಹಾರದಲ್ಲಿ ಜಗಜ್ಜಾಹೀರಾಗಿದೆ....

ನಿರುದ್ಯೋಗಿ ಯುವಕರನ್ನು ಜಿರಳೆಗಳು ಎಂದ ಸಿಜೆಐ: ಇದೆಂತಾ ಮಾತು ನ್ಯಾಯಮೂರ್ತಿಗಳೇ!

‘ಕೆಲವು ನಿರುದ್ಯೋಗಿ ಯುವಕರು ಜಿರಳೆಗಳಂತೆ ಸಮಾಜವನ್ನು ಕಾಡುತ್ತಾರೆ. ಉದ್ಯೋಗ, ಸ್ಥಾನಮಾನ ಸಿಗದೆ ಇದ್ದಾಗ ಅವರು ಎಲ್ಲರ ಮೇಲೆ ದಾಳಿ ಆರಂಭಿಸುತ್ತಾರೆ’ ಇದು ಯಾವುದೋ ರಾಜಕೀಯ ರ‍್ಯಾಲಿಯ ಭಾಷಣವಲ್ಲ ಅಥವಾ ಟಿವಿ ಚಾನೆಲ್‌ಗಳ ಜಗಳವಲ್ಲ,...

ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ..ಹಕ್ಕುಗಳನ್ನು ಕೇಳಬಾರದಾ?: ಕಾಂಗ್ರೆಸ್‌ಗೆ ಮುಸ್ಲಿಂ ಸಮಾವೇಶ ಪ್ರಶ್ನೆ

"ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ? ಯಾವ ಹಕ್ಕನ್ನೂ ಕೇಳಬಾರದು ಎಂದು ನೀವು (ಕಾಂಗ್ರೆಸ್‌ನವರು) ಬಯಸುತ್ತಿದ್ದೀರಾ?" ಎಂದು ಕರ್ನಾಟಕ ಮುಸ್ಲಿಂ ಸಮಾವೇಶ ಖಾರವಾಗಿ ಪ್ರಶ್ನಿಸಿತು. ಬೆಂಗಳೂರಿನ ಪುರಭವನದಲ್ಲಿ ಇಂದು (ಮೇ 16, ಶನಿವಾರ) ನಡೆದ...

“ಸನಾತನ ಬೇರುಗಳಲ್ಲಿರುವ ಅಸಮಾನತೆಗೆ ದ್ರಾವಿಡ ನೆಲದ ಪ್ರತಿರೋಧ”: ಉದಯನಿಧಿ ಹೇಳಿಕೆ ವಿವಾದವಾಗಿದ್ದೇಗೆ..?

ಸನಾತನ ಸಂಸ್ಥೆಗಳನ್ನು ಮತ್ತು ಸನಾತನ ಧರ್ಮವನ್ನು ನಿರ್ಮೂಲನೆ ಮಾಡುವ ಬಗ್ಗೆ ಉದಯನಿಧಿ ಸ್ಟಾಲಿನ್ ಅವರ ಹೇಳಿಕೆಗಳು ಸದ್ಯ ದೇಶಾದ್ಯಂತ ಸಂಚಲನ ಮೂಡಿಸಿವೆ.  ತಮಿಳುನಾಡು ವಿಧಾನಸಭೆಯಲ್ಲಿ ನೂತನ ಮುಖ್ಯಮಂತ್ರಿಯಾಗಿ ಸಿ. ಜೋಸೆಫ್ ವಿಜಯ್ ಅವರು ಅಧಿಕಾರ...