Homeಕರ್ನಾಟಕಅಂಬೇಡ್ಕರ್‌ರವರ ಹೋರಾಟದ ರಥವನ್ನು ಮುಂದಕ್ಕೊಯ್ಯೋಣ: ನಿಜಗುಣಾನಂದ ಸ್ವಾಮಿಗಳು

ಅಂಬೇಡ್ಕರ್‌ರವರ ಹೋರಾಟದ ರಥವನ್ನು ಮುಂದಕ್ಕೊಯ್ಯೋಣ: ನಿಜಗುಣಾನಂದ ಸ್ವಾಮಿಗಳು

ಕನ್ನಡನೆಟ್‌.ಕಾಂಗೆ ದಶಮಾನ ಸಂಭ್ರಮ - ಬಹುತ್ವ ಭಾರತ ಪತ್ರಿಕೆ ಬಿಡುಗಡೆ ಸಮಾರಂಭದಲ್ಲಿ ನಿಜಗುಣಾನಂದ ಸ್ವಾಮಿಯವರ ಅಭಿಪ್ರಾಯ..

- Advertisement -
- Advertisement -

ಭಾರತವೆಂಬ ಹಡಗಿಗೆ ನಾವಿಕರು ರಾಜಕಾರಣಿಗಳಾಗಬಾರದು. ಬದಲಿಗೆ ಬುದ್ದ, ಬಸವ, ಅಂಬೇಡ್ಕರ್‌ರವರ ಚಿಂತನೆಗಳು ನಾವಿಕರಾಗಬೇಕು. ಬುದ್ದನ ತನು, ಬಸವಣ್ಣನ ಮನಸ್ಸು ಮತ್ತು ಅಂಬೇಡ್ಕರ್‌ರವರ ಆತ್ಮ ಭಾರತ ದೇಶವನ್ನು ಮುನ್ನಡೆಸಬೇಕೆಂದು ತೋಂಟದಾರ್ಯ ಶಾಖಾ ಮಠ, ಮುಂಡರಗಿಯ ನಿಜಗುಣಾನಂದ ಸ್ವಾಮಿಯವರು ಹೇಳಿದರು.

ಕೊಪ್ಪಳದಲ್ಲಿ ಕನ್ನಡನೆಟ್‌.ಕಾಂಗೆ ದಶಮಾನ ಸಂಭ್ರಮದ ಪ್ರಯುಕ್ತ ’ಬಹುತ್ವ ಭಾರತ’ ಮಾಸಪತ್ರಿಕೆ ಬಿಡುಗಡೆ ಮಾತನಾಡಿದ ಅವರು ಸಂಬಂಧಗಳ ಬೆಸುಗೆ ಮಾಡುವುದೇ ಮಾಧ್ಯಮ. ಅದಕ್ಕೆ ತನ್ನದೇಯಾದ ಪರಂಪರೆ ಮತ್ತು ಇತಿಹಾಸವಿದೆ. ಪ್ರಜಾಪ್ರಭುತ್ವದ ನಿಸರ್ಗದಲ್ಲಿ ಒಬ್ಬ ಮನುಷ್ಯನಾಗಿ ಬದುಕುತ್ತಿದ್ದು, ಎಲ್ಲರೂ ಮನುಷ್ಯನಾಗಿ ಬದುಕಬೇಕೆಂದು ಬಯಸಲು ಮಾಧ್ಯಮಗಳು ಪ್ರಯತ್ನಿಸಬೇಕು ಎಂದರು.

ಇಂದಿನ ಪ್ರಜಾಪ್ರಭುತ್ವ ಕುಸಿಯಲಿಕ್ಕೆ ಪ್ರಜೆಗಳೇ ಕಾರಣರಾಗಿರುವುದು ದುರಂತ. ಪ್ರಜೆಗಳು ಗಟ್ಟಿಯಿದ್ದರೆ, ಜಾಗೃತರಿದ್ದರೆ ಸ್ವಾಮಿಜಿಗಳು ಗಟ್ಟಿಯಾಗಿರುತ್ತಾರೆ, ರಾಜಕಾರಣಿಗಳು ಸಹ ಗಟ್ಟಿಯಾಗಿರುತ್ತಾರೆ. ಇದನ್ನು ಎಲ್ಲಿವರೆಗೂ ಪ್ರಜೆಗಳು ಅಂತರಂಗದೊಳಗೆ ಅರ್ಥಮಾಡಿಕೊಳ್ಳುವುದಿಲ್ಲವೋ ಆಗ ಪ್ರಜಾಪ್ರಭುತ್ವದ ವ್ಯವಸ್ಥೆ ಕಳೆದುಕೊಳ್ಳುತ್ತದೆ ಎಂದರು.

ಸೋಷಿಯಲ್‌ ಮೀಡಿಯಾ ಬಂದಮೇಲೆ ನಮ್ಮಂತವರ ಮಾತಿಗೆ ಒಂದಷ್ಟು ಬೆಲೆ ಬಂದಿದೆ. ಕರ್ನಾಟಕದಲ್ಲಿ ಮೊಟ್ಟ ಮೊದಲಿಗೆ ಪತ್ರಿಕೆ ತಂದವರು ಸನಾತನಾವಾದಿಗಳು, ಸಂಪ್ರದಾಯವಾದಿಗಳಲ್ಲ, ವಿದ್ಯಾವಂತರೂ ಸಹ ಅಲ್ಲ. ಬದಲಿಗೆ ಕ್ರೈಸ್ತಮಿಷನರಿಗಳು ಮಂಗಳೂರು ಸಮಾಚಾರ ತಂದರು. ಮಂಗಳೂರು ಸಮಾಚಾರ ಬಳ್ಳಾರಿಯಲ್ಲಿ ಪ್ರಿಂಟ್‌ ಆಗುತ್ತಿತ್ತು, ಆಗ ಕ್ರೈಸ್ತರು ಪತ್ರಿಕೆಯೆಂದರೇ ಏನು ಎಂದು ಅರ್ಥಮಾಡಿಸಿದರು ಎಂದು ತಿಳಿಸಿದರು.

ಮಾಧ್ಯಮ ಎನ್ನುವುದು ಹೊಟ್ಟೆಪಾಡಿನ ಕೆಲಸವಲ್ಲ. ಕಾರ್ಯಾಂಗ, ಶಾಸಕಾಂಗ, ನ್ಯಾಯಾಂಗದಿಂದ ನ್ಯಾಯಸಿಗದಿದ್ದಾಗ, ದಾರಿತಪ್ಪಿದಾಗ ಕೆಲಸ ಮಾಡಬೇಕದ ಅಂತರಂಗದ ತರಂಗ ಶಕ್ತಿಯೇ ಮಾಧ್ಯಮ. ಸತ್ಯ ಯಾವುದು? ಸುಳ್ಳು ಯಾವುದು? ಎಂದು ತಿಳಿಸುವುದು ಮಾಧ್ಯಮದ ಕೆಲಸ ಎಂದರು.

ಆದರಿಂದು ಹಲವು ಮಾಧ್ಯಮಗಳು ಕೆಲವೇ ಜಾತಿಧರ್ಮದ, ರಾಜಕೀಯ ಪಕ್ಷಗಳ ಪರವಾಗಿ ಕೆಲಸ ಮಾಡುತ್ತಿವೆ. ಎಂ.ಎಂ ಕಲಬುರ್ಗಿಯವರು ಯು.ಆರ್‌ ಅನಂತಮೂರ್ತಿಯವರ ಪ್ರಸಂಗವನ್ನು ಉಲ್ಲೇಖ ಮಾಡಿ ಮಾತನಾಡಿದನ್ನು ಹಿಂದೂ ಧರ್ಮದ ಕವಲೊಡೆದ ಎಂದೆಲ್ಲಾ ಸುಳ್ಳು ಸುದ್ದಿಪ್ರಕಟಿಸಿದರು. ಹಿಂದೂ ಧರ್ಮದ, ದೇವಸ್ಥಾನದ ವಿರೋಧ ಎಂದೆಲ್ಲಾ ಬರೆದು ಕಚೋಧ್ಯ, ಮತೀಯವಾದಿಗಳ, ಮತಾಂಧರ, ಪಟ್ಟಭದ್ರ ಹಿತಾಸಕ್ತಿಯ ಮಾಧ್ಯಮಗಳು ಕಲಬುರ್ಗಿಯವರ ಸಾವಿಗೆ ಕಾರಣವಾದುದು ದುರಂತ ಎಂದರು.

ಇಂದು ಎಲ್ಲಿಯಾದರೂ ಮಾತನಾಡಿ ಹೋದ ನಂತರ ನಾವು ಮನೆಸೇರುತ್ತೇವೆ ಎಂಬುದಕ್ಕೆ ಗ್ಯಾರಂಟಿಯಿಲ್ಲ. ಪ್ರತಿದಿನ ಮಾತನಾಡುವಾಗ ಸಾವಿನ ಕದವನ್ನು ತಟ್ಟಿ ಮಾತನಾಡುತ್ತೇನೆ. ಕಾರಣ ಧಾರ್ಮಿಕ ಮುಖಂಡರು ಹೀಗೆ ಮಾತನಾಡಬಾರದು. ಅವರೇನಿದ್ದರೂ ಹಾವಿನ ಹೆಡೆಯಂತೆ ಆರ್ಶಿವಾದದ ಕೈಹಾಕಬೇಕು. ಸ್ವಾಮಿಗಳೇಕೆ ಹೀಗೆ ಮಾತನಾಡಬೇಕು ಎನ್ನುವ ರೀತಿ ಮಾಧ್ಯಮಗಳು ನಮ್ಮ ಬಗ್ಗೆ ವರದಿ ಮಾಡುತ್ತಿವೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಭಾರತ ದಿನೇ ದಿನೇ ಏಕಾಧಿಪತ್ಯ ಆಳ್ವಿಕೆಗೆ ಒಳಗಾಗುತ್ತಿದೆ. ಇದು ಸರಿಯಲ್ಲ. ನಮ್ಮದು ಬಹುತ್ವದ ದೇಶ. ಇದು ಬುದ್ದ, ಮಹಾವೀರ, ಲೋಕಾಯತ, ಚಾರ್ವಕ, ಕನಕಪುರಂದರ, ಬಸವಣ್ಣನವರ, ತಿರುವಳ್ಳುವರ್, ಸ್ವಾಮಿ ವಿವೇಕನಂದ, ಗಾಂಧಿ, ಅಂಬೇಡ್ಕರರ ಚಿಂತನೆಗಳ ದೇಶವಾಗಿದೆ ಎಂದರು.

ನಾನು ದೇಶವಿರೋಧಿ, ಧರ್ಮದ ವಿರೋಧಿಯಲ್ಲ. ನಾಸ್ತಿಕನೂ ಅಲ್ಲ. ನಾನು ಇಲ್ಲಿರುವ ಎಲ್ಲಾ ಜಾತಿ ಧರ್ಮದವರನ್ನು ಸಮಾನವಾಗಿ ಕಾಣಿ ಎಂದು ಹೇಳುತ್ತೇನೆ. ಏಕೆಂದರೆ ಎಲ್ಲರೂ ಸಮಾನವಾಗ ಬದುಕುಬೇಕೆಂಬ ಸತ್ಯದ ಆಶಯವಿರುವ ಬಾಬಾಸಾಹೇಬರ ಸಂವಿಧಾನಿವಿದೆ ಈ ದೇಶದಲ್ಲಿ ಎಂದರು.

ಕನ್ನಡನೆಟ್‌.ಕಾಂ ಒಂದು ಜೀವವನ್ನು ಉಳಿಸುವ ಕೆಲಸ ಮಾಡುತ್ತಿದೆ. ಅಂಬೇಡ್ಕರ್‌ರ ಪೆನ್ನು ಹೇಗೆ ದೇಶಕ್ಕೆ ದೊಡ್ಡ ಕೊಡುಗೆ ನೀಡಿತೋ ಹಾಗೆಯೇ ನೀವು ಮುಂದುವರೆಯಿರಿ ಎಂದು ಸಲಹೆ ನೀಡಿದರು.

ಮಾಧ್ಯಮಗಳು ಹಫ್ತಾ, ವಸೂಲಿ, ಮಟ್ಕಾ ದಂಧೆಯ ಬಗ್ಗೆ ಬರೆಯಿರಿ, ಹುಡುಕಿ ಹುಡುಕಿ ಬರೆಯಿರಿ ಬದಲಿಗೆ ಸುಳ್ಳು ಬರೆಯಬೇಡಿ, ಬ್ರೆಕಿಂಗ್‌ ನ್ಯೂಸ್‌ ಎಂಬ ಧಾವಂತಕ್ಕೆ ಬೀಳದೆ ಸತ್ಯ ಪರಿಶೀಲಿಸಿ ಪ್ರಕಟಿಸಿ ಎಂದರು. ನೆರೆ ಸಂತ್ರಸ್ತರು ತಲ್ಲಣಿಸುತ್ತಿದ್ದಾರೆ. ರೈತರು ಕಷ್ಟದಲ್ಲಿದ್ದಾರೆ. ಕಪ್ಪತಗುಡ್ಡ ತೊಂದರೆಯಲ್ಲಿದೆ. ಇವುಗಳ ಕುರಿತು ಹೆಚ್ಚು ಹೆಚ್ಚು ಬರೆದು ಆಳುವವರ ಕಣ್ತೆರೆಸಿ ಎಂದು ಮನವಿ ಮಾಡಿದರು.

ಮನುಷ್ಯನಿಗೆ ಮೂಲಭೂತವಾಗಿ ಅನ್ನ, ಅರಿವೆ, ಅರಿವು, ಆಶ್ರಯ, ಔಷಧ. ಆದರೆ ಎಲ್ಲಾ ಮನುಷ್ಯರಿಗೂ ಇದು ಸಿಗುತ್ತಿಲ್ಲ. ಅದಕ್ಕಾಗಿ ದೊಡ್ಡ ಹೋರಾಟ ನಡೆಯುತ್ತಿದೆ. ಈ ಹೋರಾಟದಲ್ಲಿ ಯಾವುದೇ ಕಾರಣಕ್ಕೂ ಹಿಂದಕ್ಕೆ ಸರಿಯಬೇಡಿ, ಅಂಬೇಡ್ಕರ್‌ರವರು ಹೇಳಿದಂತೆ ಥೇರನ್ನು ಮುಂದಕ್ಕೆ ಎಳೆದುಕೊಂಡಹೋಗೋಣ ಎಂದರು.

ಅಧ್ಯಕ್ಷತೆ ವಹಿಸಿ ಮಾತನಾಡಿದ ಹೈದರಾಬಾದ್‌ ಕರ್ನಾಟಕ ಹೋರಾಟಗಾರ ಡಾ.ರಜಾಕ್‌ ಉಸ್ತಾದ್‌ “ಟಿ.ವಿ ಮಾಧ್ಯಮದವರು ಓದುವುದಿಲ್ಲ, ಪತ್ರಿಕಾ ಮಾಧ್ಯಮದವರು ಸ್ಥಳಕ್ಕೆ ಹೋಗುವುದಿಲ್ಲ ಎಂಬತಾಗಿದೆ” ಎಂದು ಬೇಸರ ವ್ಯಕ್ತಪಡಿಸಿದರು. ಹಿಂದೆ ಜನ ಸುಳ್ಳು ಹೇಳುತ್ತಿದ್ದಾಗ ಪತ್ರಿಕೆಗಳು ಸತ್ಯ ಬರೆಯುತ್ತಿದ್ದವು. ಆದರಿಂದು ಪತ್ರಿಕೆಗಳು ಸುಳ್ಳು ಬರೆಯುತ್ತಿದ್ದು ಜನ ಸತ್ಯ ಹುಡುಕಿದ್ದಾರೆ ಎಂಬ ರವೀಶ್‌ ಕುಮಾರ್‌ರವರ ಮಾತನ್ನು ಉಲ್ಲೇಖಿಸಿ ಪ್ರಸ್ತುತ ಮಾಧ್ಯಮದ ಸ್ಥಿತಿಯನ್ನು ವಿವರಿಸಿದರು.

ಇದೇ ಸಂದರ್ಭದಲ್ಲಿ ತನಿಖಾ ಪತ್ರಿಕೋದ್ಯಮದ ಮೂಲಕ ಬಹಳಷ್ಟು ಹಗರಣಗಳನ್ನು ಬಯಲಿಗೆ ತಂದ ಹಿರಿಯ ಪತ್ರಕರ್ತರು ಮತ್ತು ಪ್ರಗತಿಪರ ಚಳವಳಿಗಳ ಒಡನಾಡಿಯಾದ ಕೊಪ್ಪಳದ ವಿಠ್ಠಪ್ಪ ಗೋರಂಟ್ಲಿಯವರಿಗೆ, ಹೈದರಾಬಾದ್‌ ಕರ್ನಾಟಕದ ಸಮಸ್ಯೆಗಳನ್ನು ಮುನ್ನಲೆಗೆ ತರುತ್ತಿರುವ ಪತ್ರಕರ್ತರಾದ ರಾಯಚೂರಿನ ಸಿದ್ದು ಬಿರಾದರ್‌‌ರವರಿಗೆ ಮತ್ತು ದಿ ಹಿಂದು ಪತ್ರಿಕೆಯ ಮೂಲಕ ಜನಪರ ಪತ್ರಿಕೋದ್ಯಮದ ಭಾಗವಾದ ಬಳ್ಳಾರಿಯ ಅಹಿರಾಜ್‌ರವರಿಗೆ “ಬಹುತ್ವ ಭಾರತೀಯ” ಪ್ರಶಸ್ತಿ ಪ್ರಧಾನ ಮಾಡಲಾಯಿತು.

ಪತ್ರಕರ್ತರದ ಸಿದ್ದನಗೌಡ ಪಾಟೀಲ್, ಕಾರ್ಮಿಕ ಮುಖಂಡರಾದ ಆರ್‌ ಭಾರಧ್ವಜ್‌, ಕನ್ನಡ ನೆಟ್‌ ಸಂಪಾದಕರಾದ ರಾಜಭಕ್ಷಿ, ಬಹುತ್ವ ಭಾರತ ಮಾಸಪತ್ರಿಕೆಯ ಸಂಪಾದಕರಾದ ಸಿರಾಜ್‌ ಬಿಸ್ರಳ್ಳಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಅಸ್ಸಾಂನ ನಾಲ್ವರು ಮುಸ್ಲಿಂ ಮಹಿಳೆಯರ ಗಡೀಪಾರು ಪ್ರಕ್ರಿಯೆಗೆ ಸುಪ್ರೀಂ ತಡೆ: ಕೇಂದ್ರ, ರಾಜ್ಯ ಸರ್ಕಾರಗಳಿಗೆ ನೋಟಿಸ್‌

ಅಸ್ಸಾಂನಲ್ಲಿ 'ವಿದೇಶಿಯರು' ಎಂದು ಘೋಷಿತರಾಗಿ ಗಡೀಪಾರು ಭೀತಿ ಎದುರಿಸುತ್ತಿದ್ದ ನಾಲ್ವರು ಮುಸ್ಲಿಂ ಮಹಿಳೆಯರ ವಿಚಾರದಲ್ಲಿ ಭಾರತದ ಸುಪ್ರೀಂ ಕೋರ್ಟ್ ಮಹತ್ವದ ಮಧ್ಯಪ್ರವೇಶ ಮಾಡಿದೆ. ಈ ಮಹಿಳೆಯರನ್ನು ದೇಶದಿಂದ ಹೊರಹಾಕುವ (ಗಡೀಪಾರು ಮಾಡುವ) ಪ್ರಕ್ರಿಯೆಗೆ...

ದೆಹಲಿಗೆ ಬಂದಿಳಿದ ಕಾಕ್ರೋಚ್ ಪಾರ್ಟಿ ಸಂಸ್ಥಾಪಕ ಅಭಿಜೀತ್ ದೀಪ್ಕೆ : ಜಂತರ್‌ ಮಂತರ್‌ನಲ್ಲಿ ಪ್ರತಿಭಟಿಸಲು ಪೊಲೀಸರಿಂದ ಅನುಮತಿ

ಶನಿವಾರ (ಜೂ.6) ಬೆಳಿಗ್ಗೆ ದೆಹಲಿಗೆ ಆಗಮಿಸಿದ ಕಾಕ್ರೋಚ್ ಜನತಾ ಪಾರ್ಟಿಯ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ, ಪ್ರತಿಭಟನೆಗೆ ದೆಹಲಿ ಪೊಲೀಸರು ಅನುಮತಿ ನೀಡಿದ್ದಾರೆ ಎಂದು ತಿಳಿಸಿದ್ದು, ಯೋಜಿತ ಆಂದೋಲನಕ್ಕಾಗಿ ನೇರವಾಗಿ ಜಂತರ್ ಮಂತರ್‌ನಲ್ಲಿ...

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...

ಮಣಿಪುರ ಎಸ್‌ಐಆರ್ ವಿರೋಧಿಸಿದ ಕುಕಿ-ಝೋ ಗುಂಪುಗಳು

ಮಣಿಪುರ ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ವಿರುದ್ಧ ಪ್ರತಿಭಟನೆ ವ್ಯಕ್ತವಾಗಿದೆ. ಕುಕಿ-ಝೋ ಬುಡಕಟ್ಟು ಜನಾಂಗದ ಸಾಂಪ್ರದಾಯಿಕ ಗುಂಪಾದ ಕುಕಿ ಇನ್ಪಿ ಮಣಿಪುರ (ಕೆಐಎಂ) ಮತದಾರರ ಪಟ್ಟಿ...

ಹೇಗಿತ್ತು ‘ಕಾಕ್ರೋಚ್ ಜನತಾ ಪಕ್ಷ’ದ ಮೊದಲ ಸುದ್ದಿಗೋಷ್ಠಿ…? ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಕರೆ

ಜೂನ್ 6, 2026 ರಂದು ಜಂತರ್ ಮಂತರ್‌ನಲ್ಲಿ ನಡೆಯಲಿರುವ 'ಶಾಂತಿಯುತ ಪ್ರತಿಭಟನೆ'ಗೆ ಮುನ್ನ ಜಿರಳೆ ಜನತಾ ಪಕ್ಷ (ಸಿಜೆಪಿ) ತನ್ನ ಮೊದಲ ಪತ್ರಿಕಾಗೋಷ್ಠಿಯನ್ನು ನಡೆಸಿದೆ. ಬುಧವಾರ ಸಂಜೆ (ಜೂ.3) ಸಿಜೆಪಿಯ ಮೂವರು ವಕ್ತಾರರು...

‘ಇದು ಆತ್ಮಹತ್ಯೆಯಲ್ಲ, ಮೋದಿ ಸರ್ಕಾರದ ಭ್ರಷ್ಟ ವ್ಯವಸ್ಥೆ ಮಾಡಿದ ಕೊಲೆ’: ನೀಟ್ ಆಕಾಂಕ್ಷಿಯ ಸಾವಿಗೆ ರಾಹುಲ್ ಗಾಂಧಿ ಆಕ್ರೋಶ

ದೇಶದ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ‘ನೀಟ್-ಯುಜಿ’ (NEET-UG) ವಿವಾದ ಮತ್ತು ವಿದ್ಯಾರ್ಥಿಗಳ ಸಾವುಗಳು ಭಾರತದ ಒಟ್ಟಾರೆ ಶಿಕ್ಷಣ ವ್ಯವಸ್ಥೆಯ ದಯನೀಯ ಸ್ಥಿತಿಗೆ ಕನ್ನಡಿ ಹಿಡಿದಿವೆ. ಪರೀಕ್ಷಾ ಅಕ್ರಮಗಳು, ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು...

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...