Homeಕರ್ನಾಟಕಅಂಬೇಡ್ಕರ್‌ರವರ ಹೋರಾಟದ ರಥವನ್ನು ಮುಂದಕ್ಕೊಯ್ಯೋಣ: ನಿಜಗುಣಾನಂದ ಸ್ವಾಮಿಗಳು

ಅಂಬೇಡ್ಕರ್‌ರವರ ಹೋರಾಟದ ರಥವನ್ನು ಮುಂದಕ್ಕೊಯ್ಯೋಣ: ನಿಜಗುಣಾನಂದ ಸ್ವಾಮಿಗಳು

ಕನ್ನಡನೆಟ್‌.ಕಾಂಗೆ ದಶಮಾನ ಸಂಭ್ರಮ - ಬಹುತ್ವ ಭಾರತ ಪತ್ರಿಕೆ ಬಿಡುಗಡೆ ಸಮಾರಂಭದಲ್ಲಿ ನಿಜಗುಣಾನಂದ ಸ್ವಾಮಿಯವರ ಅಭಿಪ್ರಾಯ..

- Advertisement -
- Advertisement -

ಭಾರತವೆಂಬ ಹಡಗಿಗೆ ನಾವಿಕರು ರಾಜಕಾರಣಿಗಳಾಗಬಾರದು. ಬದಲಿಗೆ ಬುದ್ದ, ಬಸವ, ಅಂಬೇಡ್ಕರ್‌ರವರ ಚಿಂತನೆಗಳು ನಾವಿಕರಾಗಬೇಕು. ಬುದ್ದನ ತನು, ಬಸವಣ್ಣನ ಮನಸ್ಸು ಮತ್ತು ಅಂಬೇಡ್ಕರ್‌ರವರ ಆತ್ಮ ಭಾರತ ದೇಶವನ್ನು ಮುನ್ನಡೆಸಬೇಕೆಂದು ತೋಂಟದಾರ್ಯ ಶಾಖಾ ಮಠ, ಮುಂಡರಗಿಯ ನಿಜಗುಣಾನಂದ ಸ್ವಾಮಿಯವರು ಹೇಳಿದರು.

ಕೊಪ್ಪಳದಲ್ಲಿ ಕನ್ನಡನೆಟ್‌.ಕಾಂಗೆ ದಶಮಾನ ಸಂಭ್ರಮದ ಪ್ರಯುಕ್ತ ’ಬಹುತ್ವ ಭಾರತ’ ಮಾಸಪತ್ರಿಕೆ ಬಿಡುಗಡೆ ಮಾತನಾಡಿದ ಅವರು ಸಂಬಂಧಗಳ ಬೆಸುಗೆ ಮಾಡುವುದೇ ಮಾಧ್ಯಮ. ಅದಕ್ಕೆ ತನ್ನದೇಯಾದ ಪರಂಪರೆ ಮತ್ತು ಇತಿಹಾಸವಿದೆ. ಪ್ರಜಾಪ್ರಭುತ್ವದ ನಿಸರ್ಗದಲ್ಲಿ ಒಬ್ಬ ಮನುಷ್ಯನಾಗಿ ಬದುಕುತ್ತಿದ್ದು, ಎಲ್ಲರೂ ಮನುಷ್ಯನಾಗಿ ಬದುಕಬೇಕೆಂದು ಬಯಸಲು ಮಾಧ್ಯಮಗಳು ಪ್ರಯತ್ನಿಸಬೇಕು ಎಂದರು.

ಇಂದಿನ ಪ್ರಜಾಪ್ರಭುತ್ವ ಕುಸಿಯಲಿಕ್ಕೆ ಪ್ರಜೆಗಳೇ ಕಾರಣರಾಗಿರುವುದು ದುರಂತ. ಪ್ರಜೆಗಳು ಗಟ್ಟಿಯಿದ್ದರೆ, ಜಾಗೃತರಿದ್ದರೆ ಸ್ವಾಮಿಜಿಗಳು ಗಟ್ಟಿಯಾಗಿರುತ್ತಾರೆ, ರಾಜಕಾರಣಿಗಳು ಸಹ ಗಟ್ಟಿಯಾಗಿರುತ್ತಾರೆ. ಇದನ್ನು ಎಲ್ಲಿವರೆಗೂ ಪ್ರಜೆಗಳು ಅಂತರಂಗದೊಳಗೆ ಅರ್ಥಮಾಡಿಕೊಳ್ಳುವುದಿಲ್ಲವೋ ಆಗ ಪ್ರಜಾಪ್ರಭುತ್ವದ ವ್ಯವಸ್ಥೆ ಕಳೆದುಕೊಳ್ಳುತ್ತದೆ ಎಂದರು.

ಸೋಷಿಯಲ್‌ ಮೀಡಿಯಾ ಬಂದಮೇಲೆ ನಮ್ಮಂತವರ ಮಾತಿಗೆ ಒಂದಷ್ಟು ಬೆಲೆ ಬಂದಿದೆ. ಕರ್ನಾಟಕದಲ್ಲಿ ಮೊಟ್ಟ ಮೊದಲಿಗೆ ಪತ್ರಿಕೆ ತಂದವರು ಸನಾತನಾವಾದಿಗಳು, ಸಂಪ್ರದಾಯವಾದಿಗಳಲ್ಲ, ವಿದ್ಯಾವಂತರೂ ಸಹ ಅಲ್ಲ. ಬದಲಿಗೆ ಕ್ರೈಸ್ತಮಿಷನರಿಗಳು ಮಂಗಳೂರು ಸಮಾಚಾರ ತಂದರು. ಮಂಗಳೂರು ಸಮಾಚಾರ ಬಳ್ಳಾರಿಯಲ್ಲಿ ಪ್ರಿಂಟ್‌ ಆಗುತ್ತಿತ್ತು, ಆಗ ಕ್ರೈಸ್ತರು ಪತ್ರಿಕೆಯೆಂದರೇ ಏನು ಎಂದು ಅರ್ಥಮಾಡಿಸಿದರು ಎಂದು ತಿಳಿಸಿದರು.

ಮಾಧ್ಯಮ ಎನ್ನುವುದು ಹೊಟ್ಟೆಪಾಡಿನ ಕೆಲಸವಲ್ಲ. ಕಾರ್ಯಾಂಗ, ಶಾಸಕಾಂಗ, ನ್ಯಾಯಾಂಗದಿಂದ ನ್ಯಾಯಸಿಗದಿದ್ದಾಗ, ದಾರಿತಪ್ಪಿದಾಗ ಕೆಲಸ ಮಾಡಬೇಕದ ಅಂತರಂಗದ ತರಂಗ ಶಕ್ತಿಯೇ ಮಾಧ್ಯಮ. ಸತ್ಯ ಯಾವುದು? ಸುಳ್ಳು ಯಾವುದು? ಎಂದು ತಿಳಿಸುವುದು ಮಾಧ್ಯಮದ ಕೆಲಸ ಎಂದರು.

ಆದರಿಂದು ಹಲವು ಮಾಧ್ಯಮಗಳು ಕೆಲವೇ ಜಾತಿಧರ್ಮದ, ರಾಜಕೀಯ ಪಕ್ಷಗಳ ಪರವಾಗಿ ಕೆಲಸ ಮಾಡುತ್ತಿವೆ. ಎಂ.ಎಂ ಕಲಬುರ್ಗಿಯವರು ಯು.ಆರ್‌ ಅನಂತಮೂರ್ತಿಯವರ ಪ್ರಸಂಗವನ್ನು ಉಲ್ಲೇಖ ಮಾಡಿ ಮಾತನಾಡಿದನ್ನು ಹಿಂದೂ ಧರ್ಮದ ಕವಲೊಡೆದ ಎಂದೆಲ್ಲಾ ಸುಳ್ಳು ಸುದ್ದಿಪ್ರಕಟಿಸಿದರು. ಹಿಂದೂ ಧರ್ಮದ, ದೇವಸ್ಥಾನದ ವಿರೋಧ ಎಂದೆಲ್ಲಾ ಬರೆದು ಕಚೋಧ್ಯ, ಮತೀಯವಾದಿಗಳ, ಮತಾಂಧರ, ಪಟ್ಟಭದ್ರ ಹಿತಾಸಕ್ತಿಯ ಮಾಧ್ಯಮಗಳು ಕಲಬುರ್ಗಿಯವರ ಸಾವಿಗೆ ಕಾರಣವಾದುದು ದುರಂತ ಎಂದರು.

ಇಂದು ಎಲ್ಲಿಯಾದರೂ ಮಾತನಾಡಿ ಹೋದ ನಂತರ ನಾವು ಮನೆಸೇರುತ್ತೇವೆ ಎಂಬುದಕ್ಕೆ ಗ್ಯಾರಂಟಿಯಿಲ್ಲ. ಪ್ರತಿದಿನ ಮಾತನಾಡುವಾಗ ಸಾವಿನ ಕದವನ್ನು ತಟ್ಟಿ ಮಾತನಾಡುತ್ತೇನೆ. ಕಾರಣ ಧಾರ್ಮಿಕ ಮುಖಂಡರು ಹೀಗೆ ಮಾತನಾಡಬಾರದು. ಅವರೇನಿದ್ದರೂ ಹಾವಿನ ಹೆಡೆಯಂತೆ ಆರ್ಶಿವಾದದ ಕೈಹಾಕಬೇಕು. ಸ್ವಾಮಿಗಳೇಕೆ ಹೀಗೆ ಮಾತನಾಡಬೇಕು ಎನ್ನುವ ರೀತಿ ಮಾಧ್ಯಮಗಳು ನಮ್ಮ ಬಗ್ಗೆ ವರದಿ ಮಾಡುತ್ತಿವೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಭಾರತ ದಿನೇ ದಿನೇ ಏಕಾಧಿಪತ್ಯ ಆಳ್ವಿಕೆಗೆ ಒಳಗಾಗುತ್ತಿದೆ. ಇದು ಸರಿಯಲ್ಲ. ನಮ್ಮದು ಬಹುತ್ವದ ದೇಶ. ಇದು ಬುದ್ದ, ಮಹಾವೀರ, ಲೋಕಾಯತ, ಚಾರ್ವಕ, ಕನಕಪುರಂದರ, ಬಸವಣ್ಣನವರ, ತಿರುವಳ್ಳುವರ್, ಸ್ವಾಮಿ ವಿವೇಕನಂದ, ಗಾಂಧಿ, ಅಂಬೇಡ್ಕರರ ಚಿಂತನೆಗಳ ದೇಶವಾಗಿದೆ ಎಂದರು.

ನಾನು ದೇಶವಿರೋಧಿ, ಧರ್ಮದ ವಿರೋಧಿಯಲ್ಲ. ನಾಸ್ತಿಕನೂ ಅಲ್ಲ. ನಾನು ಇಲ್ಲಿರುವ ಎಲ್ಲಾ ಜಾತಿ ಧರ್ಮದವರನ್ನು ಸಮಾನವಾಗಿ ಕಾಣಿ ಎಂದು ಹೇಳುತ್ತೇನೆ. ಏಕೆಂದರೆ ಎಲ್ಲರೂ ಸಮಾನವಾಗ ಬದುಕುಬೇಕೆಂಬ ಸತ್ಯದ ಆಶಯವಿರುವ ಬಾಬಾಸಾಹೇಬರ ಸಂವಿಧಾನಿವಿದೆ ಈ ದೇಶದಲ್ಲಿ ಎಂದರು.

ಕನ್ನಡನೆಟ್‌.ಕಾಂ ಒಂದು ಜೀವವನ್ನು ಉಳಿಸುವ ಕೆಲಸ ಮಾಡುತ್ತಿದೆ. ಅಂಬೇಡ್ಕರ್‌ರ ಪೆನ್ನು ಹೇಗೆ ದೇಶಕ್ಕೆ ದೊಡ್ಡ ಕೊಡುಗೆ ನೀಡಿತೋ ಹಾಗೆಯೇ ನೀವು ಮುಂದುವರೆಯಿರಿ ಎಂದು ಸಲಹೆ ನೀಡಿದರು.

ಮಾಧ್ಯಮಗಳು ಹಫ್ತಾ, ವಸೂಲಿ, ಮಟ್ಕಾ ದಂಧೆಯ ಬಗ್ಗೆ ಬರೆಯಿರಿ, ಹುಡುಕಿ ಹುಡುಕಿ ಬರೆಯಿರಿ ಬದಲಿಗೆ ಸುಳ್ಳು ಬರೆಯಬೇಡಿ, ಬ್ರೆಕಿಂಗ್‌ ನ್ಯೂಸ್‌ ಎಂಬ ಧಾವಂತಕ್ಕೆ ಬೀಳದೆ ಸತ್ಯ ಪರಿಶೀಲಿಸಿ ಪ್ರಕಟಿಸಿ ಎಂದರು. ನೆರೆ ಸಂತ್ರಸ್ತರು ತಲ್ಲಣಿಸುತ್ತಿದ್ದಾರೆ. ರೈತರು ಕಷ್ಟದಲ್ಲಿದ್ದಾರೆ. ಕಪ್ಪತಗುಡ್ಡ ತೊಂದರೆಯಲ್ಲಿದೆ. ಇವುಗಳ ಕುರಿತು ಹೆಚ್ಚು ಹೆಚ್ಚು ಬರೆದು ಆಳುವವರ ಕಣ್ತೆರೆಸಿ ಎಂದು ಮನವಿ ಮಾಡಿದರು.

ಮನುಷ್ಯನಿಗೆ ಮೂಲಭೂತವಾಗಿ ಅನ್ನ, ಅರಿವೆ, ಅರಿವು, ಆಶ್ರಯ, ಔಷಧ. ಆದರೆ ಎಲ್ಲಾ ಮನುಷ್ಯರಿಗೂ ಇದು ಸಿಗುತ್ತಿಲ್ಲ. ಅದಕ್ಕಾಗಿ ದೊಡ್ಡ ಹೋರಾಟ ನಡೆಯುತ್ತಿದೆ. ಈ ಹೋರಾಟದಲ್ಲಿ ಯಾವುದೇ ಕಾರಣಕ್ಕೂ ಹಿಂದಕ್ಕೆ ಸರಿಯಬೇಡಿ, ಅಂಬೇಡ್ಕರ್‌ರವರು ಹೇಳಿದಂತೆ ಥೇರನ್ನು ಮುಂದಕ್ಕೆ ಎಳೆದುಕೊಂಡಹೋಗೋಣ ಎಂದರು.

ಅಧ್ಯಕ್ಷತೆ ವಹಿಸಿ ಮಾತನಾಡಿದ ಹೈದರಾಬಾದ್‌ ಕರ್ನಾಟಕ ಹೋರಾಟಗಾರ ಡಾ.ರಜಾಕ್‌ ಉಸ್ತಾದ್‌ “ಟಿ.ವಿ ಮಾಧ್ಯಮದವರು ಓದುವುದಿಲ್ಲ, ಪತ್ರಿಕಾ ಮಾಧ್ಯಮದವರು ಸ್ಥಳಕ್ಕೆ ಹೋಗುವುದಿಲ್ಲ ಎಂಬತಾಗಿದೆ” ಎಂದು ಬೇಸರ ವ್ಯಕ್ತಪಡಿಸಿದರು. ಹಿಂದೆ ಜನ ಸುಳ್ಳು ಹೇಳುತ್ತಿದ್ದಾಗ ಪತ್ರಿಕೆಗಳು ಸತ್ಯ ಬರೆಯುತ್ತಿದ್ದವು. ಆದರಿಂದು ಪತ್ರಿಕೆಗಳು ಸುಳ್ಳು ಬರೆಯುತ್ತಿದ್ದು ಜನ ಸತ್ಯ ಹುಡುಕಿದ್ದಾರೆ ಎಂಬ ರವೀಶ್‌ ಕುಮಾರ್‌ರವರ ಮಾತನ್ನು ಉಲ್ಲೇಖಿಸಿ ಪ್ರಸ್ತುತ ಮಾಧ್ಯಮದ ಸ್ಥಿತಿಯನ್ನು ವಿವರಿಸಿದರು.

ಇದೇ ಸಂದರ್ಭದಲ್ಲಿ ತನಿಖಾ ಪತ್ರಿಕೋದ್ಯಮದ ಮೂಲಕ ಬಹಳಷ್ಟು ಹಗರಣಗಳನ್ನು ಬಯಲಿಗೆ ತಂದ ಹಿರಿಯ ಪತ್ರಕರ್ತರು ಮತ್ತು ಪ್ರಗತಿಪರ ಚಳವಳಿಗಳ ಒಡನಾಡಿಯಾದ ಕೊಪ್ಪಳದ ವಿಠ್ಠಪ್ಪ ಗೋರಂಟ್ಲಿಯವರಿಗೆ, ಹೈದರಾಬಾದ್‌ ಕರ್ನಾಟಕದ ಸಮಸ್ಯೆಗಳನ್ನು ಮುನ್ನಲೆಗೆ ತರುತ್ತಿರುವ ಪತ್ರಕರ್ತರಾದ ರಾಯಚೂರಿನ ಸಿದ್ದು ಬಿರಾದರ್‌‌ರವರಿಗೆ ಮತ್ತು ದಿ ಹಿಂದು ಪತ್ರಿಕೆಯ ಮೂಲಕ ಜನಪರ ಪತ್ರಿಕೋದ್ಯಮದ ಭಾಗವಾದ ಬಳ್ಳಾರಿಯ ಅಹಿರಾಜ್‌ರವರಿಗೆ “ಬಹುತ್ವ ಭಾರತೀಯ” ಪ್ರಶಸ್ತಿ ಪ್ರಧಾನ ಮಾಡಲಾಯಿತು.

ಪತ್ರಕರ್ತರದ ಸಿದ್ದನಗೌಡ ಪಾಟೀಲ್, ಕಾರ್ಮಿಕ ಮುಖಂಡರಾದ ಆರ್‌ ಭಾರಧ್ವಜ್‌, ಕನ್ನಡ ನೆಟ್‌ ಸಂಪಾದಕರಾದ ರಾಜಭಕ್ಷಿ, ಬಹುತ್ವ ಭಾರತ ಮಾಸಪತ್ರಿಕೆಯ ಸಂಪಾದಕರಾದ ಸಿರಾಜ್‌ ಬಿಸ್ರಳ್ಳಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಮಧ್ಯಪ್ರದೇಶ| ದಲಿತ ದಂಪತಿಗೆ ಹನುಮಾನ್ ದೇಗುಲ ಪ್ರವೇಶ ನಿರಾಕರಣೆ; ಸಾಮಾಜಿಕ ಬಹಿಷ್ಕಾರ

ಮಧ್ಯಪ್ರದೇಶದ ಖಾರ್ಗೋನ್ ಜಿಲ್ಲೆಯ ಹನುಮಾನ್ ದೇವಸ್ಥಾನಕ್ಕೆ ನವವಿವಾಹಿತ ದಲಿತ ದಂಪತಿಗೆ ಪ್ರವೇಶ ನಿರಾಕರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಇದು ಗ್ರಾಮದಲ್ಲಿ ಉದ್ವಿಗ್ನತೆಯನ್ನು ಉಂಟುಮಾಡಿದೆ. ಈ ಘಟನೆಯು ಜಾತಿ ಆಧಾರಿತ ತಾರತಮ್ಯದ ಕುರಿತು ಕಳವಳ...

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...