Homeಕರ್ನಾಟಕನಿಮಾನ್ಸ್‌‌ ನೇಮಕಾತಿ ಪ್ರಕಟಣೆ: ಮೇಲ್ಜಾತಿಗೆ ಶೇ.64ರಷ್ಟು ಹುದ್ದೆ ಸಿಗುವಂತೆ ಹಂಚಿಕೆ- ಆರೋಪ

ನಿಮಾನ್ಸ್‌‌ ನೇಮಕಾತಿ ಪ್ರಕಟಣೆ: ಮೇಲ್ಜಾತಿಗೆ ಶೇ.64ರಷ್ಟು ಹುದ್ದೆ ಸಿಗುವಂತೆ ಹಂಚಿಕೆ- ಆರೋಪ

50% ಜನಸಂಖ್ಯೆಗೆ ಕೇವಲ 9 ಹುದ್ದೆಗಳನ್ನು ನೀಡಿ, ಬೆರಳೆಣಿಯಷ್ಟಿರುವ ಜಾತಿಗೆ 16 ಹುದ್ದೆಗಳನ್ನು ನೀಡಲಾಗುತ್ತಿದೆ ಎಂಬ ಆರೋಪ ಬಂದಿದೆ.

- Advertisement -
- Advertisement -

ಬೆಂಗಳೂರಿನಲ್ಲಿರುವ ಪ್ರತಿಷ್ಟಿತ ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರವಿಜ್ಞಾನ ಸಂಸ್ಥೆ (ನಿಮಾನ್ಸ್‌‌) ನೀಡಿರುವ ನೇಮಕಾತಿ ಪ್ರಕಟಣೆಯು ಅನ್ಯಾಯದಿಂದ ಕೂಡಿದೆ ಎಂಬ ಆಕ್ಷೇಪ ವ್ಯಕ್ತವಾಗಿದೆ.

ಎಸ್‌ಸಿ, ಎಸ್‌ಟಿ, ಒಬಿಸಿ ಸಮುದಾಯಗಳಿಗೆ ಅನ್ಯಾಯ ಎಸಗುವಂತೆ ಮೀಸಲಾತಿ ಹಂಚಿಕೆ ಮಾಡಲಾಗಿದ್ದು, ಸ್ಪಶ್ಯ ಮೇಲ್ಜಾತಿಗಳಿಗೆ ಮುಖ್ಯವಾಗಿ ಬ್ರಾಹ್ಮಣರಿಗೆ ಹೆಚ್ಚಿನ ಸ್ಥಾನಗಳು ಲಭಿಸಲಿವೆ. ಇದು ಸಂಘಪರಿವಾರದ ಸಾಮಾಜಿಕ ನ್ಯಾಯ ಎಂದು ಚಿಂತಕರು ಆರೋಪಿಸಿದ್ದಾರೆ.

ರಾಜ್ಯ ಹಿಂದುಳಿದ ವರ್ಗಗಳ ಆಯೋಗ ಮಾಜಿ ಅಧ್ಯಕ್ಷರಾದ ಸಿ.ಎಸ್.ದ್ವಾರಕಾನಾಥ್ ಅವರು ಈ ಕುರಿತು ಫೇಸ್‌ಬುಕ್‌ನಲ್ಲಿ ಅಭಿಪ್ರಾಯ ಹಂಚಿಕೊಂಡಿದ್ದು, “ಬೆಂಗಳೂರಿನಲ್ಲಿರುವ ಪ್ರತಿಷ್ಟಿತ ನಿಮಾನ್ಸ್‌ನಲ್ಲಿ ವಿವಿಧ ವಿಭಾಗಗಳಲ್ಲಿ ಕೆಲಸಮಾಡಲು, ಪ್ರೊಫೆಸರ್ ಮತ್ತು ಅಸಿಸ್ಟೆಂಟ್ ಪ್ರೊಫೆಸರ್ ಹುದ್ದೆಗಳ ನೇಮಕಾತಿಗೆ ಇಂದು ನೋಟಿಫಿಕೇಶನ್ ಪ್ರಕಟವಾಗಿದೆ. ಇಲ್ಲಿ ಒಟ್ಟಾರೆ 25 ಹುದ್ದೆಗಳಿವೆ. ಇದರಲ್ಲಿ 11 ಹುದ್ದೆಗಳನ್ನು ಯುಆರ್‌‌ (unreserved) ಅಡಿ ನೀಡಲಾಗಿದೆ. ಅಂದರೆ ಜನರಲ್ ಕ್ಯಾಟಗರಿಯವರು ತೆಗೆದುಕೊಳ್ಳುತ್ತಾರೆ. ಈ ‘ಜನರಲ್’ನಲ್ಲಿ ಈ ಹುದ್ದೆಗಳನ್ನು ಯಾರು ಪಡೆಯುತ್ತಾರೆಂದು ವಿವರಿಸಬೇಕಿಲ್ಲ” ಎಂದು ತಿಳಿಸಿದ್ದಾರೆ.

“ಮಿಕ್ಕಂತೆ 5 ಪೋಸ್ಟ್‌ಗಳನ್ನು ಇಡಬ್ಲ್ಯೂಎಸ್‌ (ಆರ್ಥಿಕವಾಗಿ ಹಿಂದುಳಿದ ವರ್ಗ) ಮೀಸಲು ಮಾಡಲಾಗಿದೆ. ಅಂದರೆ ಮೇಲ್ಜಾತಿ ಮತ್ತು ಮೇಲ್ಜಾತಿ ‘ಬಡವರಿಗೆ’ ಒಟ್ಟು 16 ಹುದ್ದೆಗಳು, ಮಿಕ್ಕಂತೆ ಒಬಿಸಿಗೆಗಳಿಗೆ 5, ಎಸ್‌ಸಿಗೆ 3, ಮತ್ತು ಎಸ್‌ಟಿಗೆ 1 ಪೋಸ್ಟ್ ಅನ್ನು ನೀಡಲಾಗಿದೆ. ಅಂದರೆ ಒಟ್ಟು ಎಸ್‌ಸಿ, ಎಸ್‌ಟಿ ಮತ್ತು ಒಬಿಸಿಗಳಿಗೆ ಸೇರಿ 50% ಜನಸಂಖ್ಯೆಗೆ ಕೇವಲ 9 ಹುದ್ದೆಗಳು. ಹೇಗಿದೆ ಸಂಘಪರಿವಾರ ಸರ್ಕಾರದ ‘ಸಾಮಾಜಿಕ ನ್ಯಾಯ!?’ ಅಲ್ಲಿ ಜೀತ ಮಾಡುತ್ತಿರುವ, ಚೆಡ್ಡಿ ಹೊರುತ್ತಿರುವ ನಮ್ಮ ಎಸ್‌ಸಿ, ಎಸ್‌ಟಿ, ಒಬಿಸಿ ಗೇಟ್ ಕೀಪರ್‌ಗಳಿಗೆ ಈ ಸೂಕ್ಷ್ಮ ಅರ್ಥವಾದಂತಿಲ್ಲ. ಅಕಸ್ಮಾತ್ ಅರ್ಥವಾದರೂ ಬಾಯಿಗೆ ಲಕ್ವ ಬಡಿದವರಂತಿದ್ದಾರೆ” ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ಚಿಂತಕರಾದ ಶ್ರೀಪಾದ್ ಭಟ್ ಅವರು ನಿಮಾನ್ಸ್‌‌ ನೇಮಕಾತಿಗೆ ಸಂಬಂಧಿಸಿದಂತೆ ಎದ್ದಿರುವ ಆಕ್ಷೇಪಗಳಿಗೆ ಸಂಬಂಧಿಸಿದಂತೆ ‘ನಾನುಗೌರಿ.ಕಾಂ’ಗೆ ಪ್ರತಿಕ್ರಿಯೆ ನೀಡಿದರು. “ಇಡಬ್ಲ್ಯೂಎಸ್‌ ಅಡಿ ಬರುವ ಜಾತಿಗಳ ಅಧಿಕೃತ ಪಟ್ಟಿಯನ್ನೇ ಕರ್ನಾಟಕ ಸರ್ಕಾರ ಈವರೆಗೆ ಬಿಡುಗಡೆ ಮಾಡಿಲ್ಲ. ಹೀಗಿರುವಾಗ ಇಡಬ್ಲ್ಯೂಎಸ್‌‌ ಹೇಗೆ ಕೊಡುತ್ತಾರೆ?” ಎಂದು ಪ್ರಶ್ನಿಸಿದರು.

“ರಾಜ್ಯದಲ್ಲಿ ಇಡಬ್ಲ್ಯೂಎಸ್‌ ಅಡಿ ಫಲಾನುಭವಿಗಳಾಗುವುದು ಬ್ರಾಹ್ಮಣರು ಮಾತ್ರ. ಉಳಿದಂತೆ ನಾಯರ್‌ಗಳು, ಮೊದಲಿಯಾರ್‌ಗಳು, ಕೋಮ್ಟ ಶೆಟ್ಟರು, ಮಾರ್ವಾಡಿಗಳು ಅರ್ಜಿ ಸಲ್ಲಿಸುವುದು ಅನುಮಾನ. ಹೀಗಾಗಿ ಇಡಬ್ಲ್ಯೂಎಸ್‌ನ ಐದು ಪೋಸ್ಟ್‌ಗಳನ್ನೂ ಬ್ರಾಹ್ಮಣರೇ ಪಡೆದುಕೊಳ್ಳುತ್ತಾರೆ” ಎಂದು ವಿವರಿಸಿದರು.

“ಇಡಬ್ಲ್ಯೂಎಸ್‌ಗೆ ನೀಡಿರುವ ಐದು ಪೋಸ್ಟ್‌ಗಳನ್ನು ಎಲ್ಲಿಂದ ಕಿತ್ತುಕೊಂಡಿದ್ದಾರೆ? ಹಿಂದೆ ಎಸ್‌ಸಿ, ಎಸ್‌ಟಿ, ಒಬಿಸಿ, ಜನರಲ್ ಕ್ಯಾಟಗರಿಗಳಿಗೆ ಎಷ್ಟು ಸ್ಥಾನಗಳು ಮೀಸಲಾಗಿದ್ದವು? ಇಡಬ್ಲ್ಯೂಎಸ್‌ಗಾಗಿ ಹೊಸ ಪೋಸ್ಟ್‌ಗಳನ್ನು ಸೃಷ್ಟಿ ಮಾಡಿದ್ದಾರಾ? ಅಥವಾ ಎಸ್‌ಸಿ, ಎಸ್‌ಟಿ, ಒಬಿಸಿಗಳ ಪ್ರಾತಿನಿಧ್ಯವನ್ನು ಕಡಿಮೆ ಮಾಡಿ ಇಡಬ್ಲ್ಯೂಎಸ್‌ ಕೋಟಾ ನೀಡಿದ್ದಾರಾ?- ಈ ಮಾಹಿತಿಗಳು ಸಾರ್ವಜನಿಕವಾಗಿ ಲಭ್ಯವಾಗಬೇಕು” ಎಂದು ಆಗ್ರಹಿಸಿದರು.

 ಇದನ್ನೂ ಓದಿರಿ: EWS: ದಲಿತ-ಶೂದ್ರರ ಮೀಸಲಾತಿಯ ಕ್ರಾಂತಿಗೆ ಬ್ರಾಹ್ಮಣ್ಯದ ಪ್ರತಿಕ್ರಾಂತಿ

“ಬ್ರಾಹ್ಮಣೇತರ ಜಾತಿಗಳ ಅಭ್ಯರ್ಥಿಗಳು ಕೂಡ ಜನರಲ್‌ ಕ್ಯಾಟಗರಿಯಲ್ಲಿ ಸ್ಪರ್ಧಿಸುತ್ತಾರೆ. ಆದರೆ ಸಂದರ್ಶನಗಳಲ್ಲಿ ಮೇಲ್ಜಾತಿ ವ್ಯಕ್ತಿಗಳೇ ಕೂತಿರುತ್ತಾರೆ. ಹೀಗಾಗಿ ಅನೇಕ ಸಂದರ್ಭದಲ್ಲಿ ಎಸ್‌ಸಿ, ಎಸ್‌ಟಿ, ಒಬಿಸಿ ಜಾತಿಗಳ ವ್ಯಕ್ತಿಗಳನ್ನು ವ್ಯವಸ್ಥಿತಿವಾಗಿ ಹೊರಗೆ ಹಾಕಲಾಗುತ್ತದೆ. ತಾಂತ್ರಿಕ ಕಾರಣವನ್ನೋ, ಮತ್ಯಾವುದೋ ತಕರಾರರನ್ನೋ ತೆಗೆದು ಈಗಿರುವ 11 ಸ್ಥಾನಗಳೂ ಬ್ರಾಹ್ಮಣರಿಗೆ ಸಿಗುವಂತೆ ನೋಡಿಕೊಳ್ಳುತ್ತಾರೆ. ಇಡಬ್ಲ್ಯೂಎಸ್‌ ಮತ್ತು ಜನರಲ್ ಕ್ಯಾಟಗರಿ ಸೇರಿ 16 ಪೋಸ್ಟ್‌ಗಳನ್ನು ಬ್ರಾಹ್ಮಣರೇ ಪಡೆದುಕೊಳ್ಳುತ್ತಾರೆ” ಎಂದು ವಿಷಾದಿಸಿದರು.

ಚಿಂತಕರು ಆರೋಪಿಸುತ್ತಿರುವಂತೆ 25 ಪೋಸ್ಟ್‌ಗಳಲ್ಲಿ 16 ಹುದ್ದೆಗಳು ಬ್ರಾಹ್ಮಣರಿಗೆ ಹೋದರೆ ಶೇ. 64ರಷ್ಟು ಸ್ಥಾನಗಳು ಒಂದು ಜಾತಿಗೆ ಸಿಕ್ಕಂತಾಗುತ್ತದೆ. ಈಗ ಸಾರ್ವಜನಿಕವಾಗಿ ಚರ್ಚೆಯಲ್ಲಿರುವ ಅಂಕಿ-ಅಂಶದ ಪ್ರಕಾರ ಶೇ. 2ರಷ್ಟಿರುವ ಬ್ರಾಹ್ಮಣರಿಗೆ 64ರಷ್ಟು ಅವಕಾಶ ನೀಡಿದಂತಾಗುತ್ತದೆ. ಒಂದು ವೇಳೆ ಇಡಬ್ಲೂಎಸ್‌ ಅಡಿ ಬರುವ ಇತರ ಸಮುದಾಯದಲ್ಲಿ ಯಾರಾದರೂ ಅರ್ಜಿ ಹಾಕಿದರೂ ಶೇ. 90ರಷ್ಟು ಫಲಾನುಭವಿಗಳು ಬ್ರಾಹ್ಮಣರೇ ಆಗಿರುತ್ತಾರೆ ಎಂಬ ಅಭಿಪ್ರಾಯಗಳು ವ್ಯಕ್ತವಾಗುತ್ತಿವೆ. 50% ಜನಸಂಖ್ಯೆಗೆ ಕೇವಲ 9 ಹುದ್ದೆಗಳನ್ನು ನೀಡಿ, ಶೇ. 2ರಷ್ಟಿರುವ ಜಾತಿಗೆ 16 ಹುದ್ದೆಗಳನ್ನು ನೀಡಲಾಗುತ್ತಿದೆ ಎಂಬ ವಾದ ಮುನ್ನೆಲೆಗೆ ಬಂದಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

3 COMMENTS

  1. ಅಹಿಂದ ವರ್ಗದವರು ಒಗ್ಗಟ್ಟಿನಿಂದ ಇಂತಹ ಅನ್ಯಾಯಗಳನ್ನು ಪ್ರತಿಬಟಿಸಬೇಕು.

  2. ಅಂದರೆ ದ್ವಾರಕಾನಾಥ್ ಪ್ರಕಾರ ಬ್ರಾಹ್ಮಣರನ್ನು ಬಿಟ್ಟರೆ ಬೇರೆಯವರಲ್ಲಿ ಪ್ರತಿಭೆ ಇಲ್ಲ ಹಾಗಾಗಿ ಜೆನರಲ್ ಕೆಟೊಗರಿಯ ಎಲ್ಲಾ ಹುದ್ದೆಗಳೂ ಬ್ರಾಹ್ಮಣರ ಪಾಲಾಗುತ್ತವೆ ಎನ್ನುವ ವಾದ ಎಷ್ಟು ಸಾರಿ? ಇದು ಬ್ರಾಹ್ಮಣ ಏತರರಿಗೆ ಮಾಡುವ ಅವಮಾನ ಅಲ್ಲವೇ?

LEAVE A REPLY

Please enter your comment!
Please enter your name here

- Advertisment -

ಸ್ವಕ್ಷೇತ್ರ ತಿರುವನಂತಪುರದಲ್ಲಿ ಬಿಜೆಪಿ ಭರ್ಜರಿ ಗೆಲುವು : ‘ಪ್ರಜಾಪ್ರಭುತ್ವದ ಸೌಂದರ್ಯ’ ಎಂದ ಕಾಂಗ್ರೆಸ್ ಸಂಸದ ಶಶಿ ತರೂರ್

ಕೇರಳದ ಸ್ಥಳೀಯ ಸಂಸ್ಥೆ ಚುನಾವಣೆಯ ಫಲಿತಾಂಶ ಇಂದು (ಡಿ.13) ಪ್ರಕಟಗೊಂಡಿದ್ದು, ತಿರುವನಂತಪುರಂ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಭರ್ಜರಿ ಗೆಲುವು ದಾಖಲಿಸಿದೆ. ಈ ಮೂಲಕ 45 ವರ್ಷಗಳ ಸಿಪಿಐ(ಎಂ) ನೇತೃತ್ವದ ಎಲ್‌ಡಿಎಫ್‌...

ಕೇರಳ ಸ್ಥಳೀಯ ಸಂಸ್ಥೆ ಚುನಾವಣೆ : ಯುಡಿಎಫ್‌ ಸ್ಪಷ್ಟ ಮೇಲುಗೈ

ಇಂದು (2025 ಡಿಸೆಂಬರ್ 13, ಶನಿವಾರ) ಪ್ರಕಟಗೊಂಡ ಕೇರಳದ ಸ್ಥಳೀಯ ಸಂಸ್ಥೆಗಳ ಚುನಾವಣಾ ಫಲಿತಾಂಶದಲ್ಲಿ ವಿರೋಧ ಪಕ್ಷಗಳ ಒಕ್ಕೂಟವಾದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್) ಸ್ಪಷ್ಟ ಮೇಲುಗೈ ಸಾಧಿಸಿದೆ. ಈ ಮೂಲಕ ರಾಜ್ಯ...

ಕೋಲ್ಕತ್ತಾ ಮೆಸ್ಸಿ ಕಾರ್ಯಕ್ರಮದಲ್ಲಿ ಗಲಾಟೆ | ಕ್ಷಮೆ ಯಾಚಿಸಿದ ಸಿಎಂ ಮಮತಾ ಬ್ಯಾನರ್ಜಿ, ತನಿಖೆಗೆ ಸಮಿತಿ ರಚನೆ; ಆಯೋಜಕನ ಬಂಧನ

ಫುಟ್ಬಾಲ್ ತಾರೆ ಲಿಯೋನೆಲ್ ಮೆಸ್ಸಿ ಭೇಟಿಯ ವೇಳೆ ಶನಿವಾರ (ಡಿಸೆಂಬರ್ 13) ಕೋಲ್ಕತ್ತಾದ ಸಾಲ್ಟ್ ಲೇಕ್ ಕ್ರೀಡಾಂಗಣದಲ್ಲಿ ಉಂಟಾದ ಗಲಾಟೆಗೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕ್ಷಮೆಯಾಚಿಸಿದ್ದು, ನಿವೃತ್ತ ನ್ಯಾಯಮೂರ್ತಿ...

ಮೆಸ್ಸಿ ನೋಡಲು 25 ಸಾವಿರ ರೂ. ಪಾವತಿಸಿದವರಿಗೆ ನಿರಾಶೆ; ಕೋಪಗೊಂಡ ಅಭಿಮಾನಿಗಳಿಂದ ಕ್ರೀಡಾಂಗಣದಲ್ಲಿ ದಾಂಧಲೆ

ಶನಿವಾರ ನಡೆದ ಲಿಯೋನೆಲ್ ಮೆಸ್ಸಿ ಅವರ ಬಹು ನಿರೀಕ್ಷಿತ "ಗೋಟ್ ಇಂಡಿಯಾ ಟೂರ್" ಕೋಲ್ಕತ್ತಾದಲ್ಲಿ ಅಸ್ತವ್ಯಸ್ತವಾಯಿತು. ಯುವ ಭಾರತಿ ಕ್ರಿರಂಗನ್‌ನಲ್ಲಿ ರೊಚ್ಚಿಗೆದ್ದ ಅಭಿಮಾನಿಗಳ ದಾಂಧಲೆಯಿಂದ ಕ್ರೀಡಾಂಗಣ ಅವ್ಯವಸ್ಥೆಗೆ ಒಳಗಾಯಿತು. ಸಾವಿರಾರು ಅಭಿಮಾನಿಗಳು ಅರ್ಜೆಂಟೀನಾದ...

ಡ್ರಗ್‌ ಪೆಡ್ಲರ್‌ಗಳ ಮನೆ ಒಡೆದು ಹಾಕುವ ಹೇಳಿಕೆ : ಪರಮೇಶ್ವರ್ ಮಾತಿಗೆ ಆತಂಕ ವ್ಯಕ್ತಪಡಿಸಿದ ಕಾಂಗ್ರೆಸ್ ಹಿರಿಯ ನಾಯಕ ಚಿದಂಬರಂ

"ಡ್ರಗ್‌ ಪೆಡ್ಲರ್‌ಗಳ ಬಾಡಿಗೆ ಮನೆಗಳನ್ನು ಒಡೆದು ಹಾಕುವ ಹಂತಕ್ಕೆ ಹೋಗಿದ್ದೇವೆ" ಎಂಬ ಗೃಹ ಸಚಿವ ಜಿ.ಪರಮೇಶ್ವರ್ ಹೇಳಿಕೆಗೆ ಕಾಂಗ್ರೆಸ್ ಹಿರಿಯ ನಾಯಕ, ಮಾಜಿ ಕೇಂದ್ರ ಸಚಿವ ಪಿ. ಚಿದಂಬರಂ ಆತಂಕ ವ್ಯಕ್ತಪಡಿಸಿದ್ದಾರೆ. ಸಾಮಾಜಿಕ...

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆ: ಶಶಿ ತರೂರ್ ಕ್ಷೇತ್ರ ತಿರುವನಂತಪುರಂನಲ್ಲಿ ಬಿಜೆಪಿ ಮುನ್ನಡೆ

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ, ವಿಶೇಷವಾಗಿ ತಿರುವನಂತಪುರಂನಲ್ಲಿ ಭಾರತೀಯ ಜನತಾ ಪಕ್ಷದ ಸಾಧನೆಯನ್ನು ಹಿರಿಯ ಕಾಂಗ್ರೆಸ್ ನಾಯಕ ಶಶಿ ತರೂರ್ ಶನಿವಾರ ಅಭಿನಂದಿಸಿದ್ದಾರೆ. ಜನರ ತೀರ್ಪನ್ನು ಗೌರವಿಸಬೇಕು ಎಂದು ಹೇಳಿದ್ದಾರೆ. ಎಕ್ಸ್‌ನಲ್ಲಿ ದೀರ್ಘ...

ಆಳಂದ ಮತಗಳ್ಳತನ | ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್ ಸೇರಿ 7 ಮಂದಿ ವಿರುದ್ಧ ಎಸ್‌ಐಟಿ ಚಾರ್ಜ್‌ಶೀಟ್‌

ಕಲಬುರಗಿಯ ಆಳಂದ ವಿಧಾನಸಭಾ ಕ್ಷೇತ್ರದಲ್ಲಿ ನಡೆದ ಮತಗಳ್ಳತನ (ಚುನಾವಣಾ ಆಕ್ರಮ) ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಿದ್ದು, ಆಳಂದದ ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್...

ಉತ್ತರ ಪ್ರದೇಶ| ಗಸ್ತು ವಾಹನ ಹಳ್ಳಕ್ಕೆ ಉರುಳಿಸಿದ ಪಾನಮತ್ತ ಪೊಲೀಸರು; ಕ್ರೇನ್ ಚಾಲಕನ ಮೇಲೆ ಹಲ್ಲೆ

ಶುಕ್ರವಾರ (ಡಿಸೆಂಬರ್ 12) ರಾತ್ರಿ ಪೊಲೀಸರೊಬ್ಬರು ಕಾರಿನ ನಿಯಂತ್ರಣ ಕಳೆದುಕೊಂಡ ಬಳಿಕ '112' ಪೊಲೀಸ್ ಪ್ರತಿಕ್ರಿಯೆ ವಾಹನ (ಪಿಆರ್‌ವಿ) ಹಳ್ಳಕ್ಕೆ ಉರುಳಿದೆ. ವರದಿಗಳ ಪ್ರಕಾರ, ಘಟನೆಯ ಸಮಯದಲ್ಲಿ ಪೊಲೀಸರು ಪಾನಮತ್ತರಾಗಿದ್ದರು. ಕಾರ್ ಕಂದಕಕ್ಕೆ...

ಲಿಯೋನೆಲ್ ಮೆಸ್ಸಿ ಇಂಡಿಯಾ ಪ್ರವಾಸ; ಅಭೂತಪೂರ್ವ ಸ್ವಾಗತ ಕೋರಿದ ಕೋಲ್ಕತ್ತಾ ಅಭಿಮಾನಿಗಳು

ಇಂಡಿಯಾ ಪ್ರವಾಸ ಪ್ರಾರಂಭಿಸಿರುವ ಅರ್ಜೆಂಟೀನಾದ ಪುಟ್‌ಬಾಲ್‌ ತಾರೆ ಲಿಯೋನೆಲ್ ಮೆಸ್ಸಿ ಕೋಲ್ಕತ್ತಾಗೆ ಬಂದಿಳಿದಿದ್ದಾರೆ. ಶನಿವಾರ ಬೆಳಗಿನ ಜಾವ ವಿಮಾನ ನಿಲ್ದಾಣದಲ್ಲಿ ನೆರೆದಿದ್ದ ಸಾವಿರಾರು ಅಭಿಮಾನಿಗಳಿಂದ ಅವರಿಗೆ ಅಭೂತಪೂರ್ವ ಸ್ವಾಗತ ಕೋರಿದರು. ಅರ್ಜೆಂಟೀನಾದ ಸೂಪರ್‌ಸ್ಟಾರ್ ದುಬೈ...

ನಟಿಯ ಅಪಹರಣ, ಅತ್ಯಾಚಾರ ಪ್ರಕರಣ : ಆರು ಅಪರಾಧಿಗಳಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

ಮಲಯಾಳಂ ಮೂಲದ ಬಹುಭಾಷಾ ನಟಿಯ ಅಪಹರಣ ಮತ್ತು ಅತ್ಯಾಚಾರ ಪ್ರಕರಣದ (2017ರ ಪ್ರಕರಣ) ಆರು ಅಪರಾಧಿಗಳಿಗೆ ಇಪ್ಪತ್ತು ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿ ಶುಕ್ರವಾರ (ಡಿಸೆಂಬರ್ 12) ಕೇರಳ ನ್ಯಾಯಾಲಯ ಆದೇಶಿಸಿದೆ. ಡಿಸೆಂಬರ್...