Homeಕರ್ನಾಟಕನಿಮಾನ್ಸ್‌‌ ನೇಮಕಾತಿ ಪ್ರಕಟಣೆ: ಮೇಲ್ಜಾತಿಗೆ ಶೇ.64ರಷ್ಟು ಹುದ್ದೆ ಸಿಗುವಂತೆ ಹಂಚಿಕೆ- ಆರೋಪ

ನಿಮಾನ್ಸ್‌‌ ನೇಮಕಾತಿ ಪ್ರಕಟಣೆ: ಮೇಲ್ಜಾತಿಗೆ ಶೇ.64ರಷ್ಟು ಹುದ್ದೆ ಸಿಗುವಂತೆ ಹಂಚಿಕೆ- ಆರೋಪ

50% ಜನಸಂಖ್ಯೆಗೆ ಕೇವಲ 9 ಹುದ್ದೆಗಳನ್ನು ನೀಡಿ, ಬೆರಳೆಣಿಯಷ್ಟಿರುವ ಜಾತಿಗೆ 16 ಹುದ್ದೆಗಳನ್ನು ನೀಡಲಾಗುತ್ತಿದೆ ಎಂಬ ಆರೋಪ ಬಂದಿದೆ.

- Advertisement -
- Advertisement -

ಬೆಂಗಳೂರಿನಲ್ಲಿರುವ ಪ್ರತಿಷ್ಟಿತ ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರವಿಜ್ಞಾನ ಸಂಸ್ಥೆ (ನಿಮಾನ್ಸ್‌‌) ನೀಡಿರುವ ನೇಮಕಾತಿ ಪ್ರಕಟಣೆಯು ಅನ್ಯಾಯದಿಂದ ಕೂಡಿದೆ ಎಂಬ ಆಕ್ಷೇಪ ವ್ಯಕ್ತವಾಗಿದೆ.

ಎಸ್‌ಸಿ, ಎಸ್‌ಟಿ, ಒಬಿಸಿ ಸಮುದಾಯಗಳಿಗೆ ಅನ್ಯಾಯ ಎಸಗುವಂತೆ ಮೀಸಲಾತಿ ಹಂಚಿಕೆ ಮಾಡಲಾಗಿದ್ದು, ಸ್ಪಶ್ಯ ಮೇಲ್ಜಾತಿಗಳಿಗೆ ಮುಖ್ಯವಾಗಿ ಬ್ರಾಹ್ಮಣರಿಗೆ ಹೆಚ್ಚಿನ ಸ್ಥಾನಗಳು ಲಭಿಸಲಿವೆ. ಇದು ಸಂಘಪರಿವಾರದ ಸಾಮಾಜಿಕ ನ್ಯಾಯ ಎಂದು ಚಿಂತಕರು ಆರೋಪಿಸಿದ್ದಾರೆ.

ರಾಜ್ಯ ಹಿಂದುಳಿದ ವರ್ಗಗಳ ಆಯೋಗ ಮಾಜಿ ಅಧ್ಯಕ್ಷರಾದ ಸಿ.ಎಸ್.ದ್ವಾರಕಾನಾಥ್ ಅವರು ಈ ಕುರಿತು ಫೇಸ್‌ಬುಕ್‌ನಲ್ಲಿ ಅಭಿಪ್ರಾಯ ಹಂಚಿಕೊಂಡಿದ್ದು, “ಬೆಂಗಳೂರಿನಲ್ಲಿರುವ ಪ್ರತಿಷ್ಟಿತ ನಿಮಾನ್ಸ್‌ನಲ್ಲಿ ವಿವಿಧ ವಿಭಾಗಗಳಲ್ಲಿ ಕೆಲಸಮಾಡಲು, ಪ್ರೊಫೆಸರ್ ಮತ್ತು ಅಸಿಸ್ಟೆಂಟ್ ಪ್ರೊಫೆಸರ್ ಹುದ್ದೆಗಳ ನೇಮಕಾತಿಗೆ ಇಂದು ನೋಟಿಫಿಕೇಶನ್ ಪ್ರಕಟವಾಗಿದೆ. ಇಲ್ಲಿ ಒಟ್ಟಾರೆ 25 ಹುದ್ದೆಗಳಿವೆ. ಇದರಲ್ಲಿ 11 ಹುದ್ದೆಗಳನ್ನು ಯುಆರ್‌‌ (unreserved) ಅಡಿ ನೀಡಲಾಗಿದೆ. ಅಂದರೆ ಜನರಲ್ ಕ್ಯಾಟಗರಿಯವರು ತೆಗೆದುಕೊಳ್ಳುತ್ತಾರೆ. ಈ ‘ಜನರಲ್’ನಲ್ಲಿ ಈ ಹುದ್ದೆಗಳನ್ನು ಯಾರು ಪಡೆಯುತ್ತಾರೆಂದು ವಿವರಿಸಬೇಕಿಲ್ಲ” ಎಂದು ತಿಳಿಸಿದ್ದಾರೆ.

“ಮಿಕ್ಕಂತೆ 5 ಪೋಸ್ಟ್‌ಗಳನ್ನು ಇಡಬ್ಲ್ಯೂಎಸ್‌ (ಆರ್ಥಿಕವಾಗಿ ಹಿಂದುಳಿದ ವರ್ಗ) ಮೀಸಲು ಮಾಡಲಾಗಿದೆ. ಅಂದರೆ ಮೇಲ್ಜಾತಿ ಮತ್ತು ಮೇಲ್ಜಾತಿ ‘ಬಡವರಿಗೆ’ ಒಟ್ಟು 16 ಹುದ್ದೆಗಳು, ಮಿಕ್ಕಂತೆ ಒಬಿಸಿಗೆಗಳಿಗೆ 5, ಎಸ್‌ಸಿಗೆ 3, ಮತ್ತು ಎಸ್‌ಟಿಗೆ 1 ಪೋಸ್ಟ್ ಅನ್ನು ನೀಡಲಾಗಿದೆ. ಅಂದರೆ ಒಟ್ಟು ಎಸ್‌ಸಿ, ಎಸ್‌ಟಿ ಮತ್ತು ಒಬಿಸಿಗಳಿಗೆ ಸೇರಿ 50% ಜನಸಂಖ್ಯೆಗೆ ಕೇವಲ 9 ಹುದ್ದೆಗಳು. ಹೇಗಿದೆ ಸಂಘಪರಿವಾರ ಸರ್ಕಾರದ ‘ಸಾಮಾಜಿಕ ನ್ಯಾಯ!?’ ಅಲ್ಲಿ ಜೀತ ಮಾಡುತ್ತಿರುವ, ಚೆಡ್ಡಿ ಹೊರುತ್ತಿರುವ ನಮ್ಮ ಎಸ್‌ಸಿ, ಎಸ್‌ಟಿ, ಒಬಿಸಿ ಗೇಟ್ ಕೀಪರ್‌ಗಳಿಗೆ ಈ ಸೂಕ್ಷ್ಮ ಅರ್ಥವಾದಂತಿಲ್ಲ. ಅಕಸ್ಮಾತ್ ಅರ್ಥವಾದರೂ ಬಾಯಿಗೆ ಲಕ್ವ ಬಡಿದವರಂತಿದ್ದಾರೆ” ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ಚಿಂತಕರಾದ ಶ್ರೀಪಾದ್ ಭಟ್ ಅವರು ನಿಮಾನ್ಸ್‌‌ ನೇಮಕಾತಿಗೆ ಸಂಬಂಧಿಸಿದಂತೆ ಎದ್ದಿರುವ ಆಕ್ಷೇಪಗಳಿಗೆ ಸಂಬಂಧಿಸಿದಂತೆ ‘ನಾನುಗೌರಿ.ಕಾಂ’ಗೆ ಪ್ರತಿಕ್ರಿಯೆ ನೀಡಿದರು. “ಇಡಬ್ಲ್ಯೂಎಸ್‌ ಅಡಿ ಬರುವ ಜಾತಿಗಳ ಅಧಿಕೃತ ಪಟ್ಟಿಯನ್ನೇ ಕರ್ನಾಟಕ ಸರ್ಕಾರ ಈವರೆಗೆ ಬಿಡುಗಡೆ ಮಾಡಿಲ್ಲ. ಹೀಗಿರುವಾಗ ಇಡಬ್ಲ್ಯೂಎಸ್‌‌ ಹೇಗೆ ಕೊಡುತ್ತಾರೆ?” ಎಂದು ಪ್ರಶ್ನಿಸಿದರು.

“ರಾಜ್ಯದಲ್ಲಿ ಇಡಬ್ಲ್ಯೂಎಸ್‌ ಅಡಿ ಫಲಾನುಭವಿಗಳಾಗುವುದು ಬ್ರಾಹ್ಮಣರು ಮಾತ್ರ. ಉಳಿದಂತೆ ನಾಯರ್‌ಗಳು, ಮೊದಲಿಯಾರ್‌ಗಳು, ಕೋಮ್ಟ ಶೆಟ್ಟರು, ಮಾರ್ವಾಡಿಗಳು ಅರ್ಜಿ ಸಲ್ಲಿಸುವುದು ಅನುಮಾನ. ಹೀಗಾಗಿ ಇಡಬ್ಲ್ಯೂಎಸ್‌ನ ಐದು ಪೋಸ್ಟ್‌ಗಳನ್ನೂ ಬ್ರಾಹ್ಮಣರೇ ಪಡೆದುಕೊಳ್ಳುತ್ತಾರೆ” ಎಂದು ವಿವರಿಸಿದರು.

“ಇಡಬ್ಲ್ಯೂಎಸ್‌ಗೆ ನೀಡಿರುವ ಐದು ಪೋಸ್ಟ್‌ಗಳನ್ನು ಎಲ್ಲಿಂದ ಕಿತ್ತುಕೊಂಡಿದ್ದಾರೆ? ಹಿಂದೆ ಎಸ್‌ಸಿ, ಎಸ್‌ಟಿ, ಒಬಿಸಿ, ಜನರಲ್ ಕ್ಯಾಟಗರಿಗಳಿಗೆ ಎಷ್ಟು ಸ್ಥಾನಗಳು ಮೀಸಲಾಗಿದ್ದವು? ಇಡಬ್ಲ್ಯೂಎಸ್‌ಗಾಗಿ ಹೊಸ ಪೋಸ್ಟ್‌ಗಳನ್ನು ಸೃಷ್ಟಿ ಮಾಡಿದ್ದಾರಾ? ಅಥವಾ ಎಸ್‌ಸಿ, ಎಸ್‌ಟಿ, ಒಬಿಸಿಗಳ ಪ್ರಾತಿನಿಧ್ಯವನ್ನು ಕಡಿಮೆ ಮಾಡಿ ಇಡಬ್ಲ್ಯೂಎಸ್‌ ಕೋಟಾ ನೀಡಿದ್ದಾರಾ?- ಈ ಮಾಹಿತಿಗಳು ಸಾರ್ವಜನಿಕವಾಗಿ ಲಭ್ಯವಾಗಬೇಕು” ಎಂದು ಆಗ್ರಹಿಸಿದರು.

 ಇದನ್ನೂ ಓದಿರಿ: EWS: ದಲಿತ-ಶೂದ್ರರ ಮೀಸಲಾತಿಯ ಕ್ರಾಂತಿಗೆ ಬ್ರಾಹ್ಮಣ್ಯದ ಪ್ರತಿಕ್ರಾಂತಿ

“ಬ್ರಾಹ್ಮಣೇತರ ಜಾತಿಗಳ ಅಭ್ಯರ್ಥಿಗಳು ಕೂಡ ಜನರಲ್‌ ಕ್ಯಾಟಗರಿಯಲ್ಲಿ ಸ್ಪರ್ಧಿಸುತ್ತಾರೆ. ಆದರೆ ಸಂದರ್ಶನಗಳಲ್ಲಿ ಮೇಲ್ಜಾತಿ ವ್ಯಕ್ತಿಗಳೇ ಕೂತಿರುತ್ತಾರೆ. ಹೀಗಾಗಿ ಅನೇಕ ಸಂದರ್ಭದಲ್ಲಿ ಎಸ್‌ಸಿ, ಎಸ್‌ಟಿ, ಒಬಿಸಿ ಜಾತಿಗಳ ವ್ಯಕ್ತಿಗಳನ್ನು ವ್ಯವಸ್ಥಿತಿವಾಗಿ ಹೊರಗೆ ಹಾಕಲಾಗುತ್ತದೆ. ತಾಂತ್ರಿಕ ಕಾರಣವನ್ನೋ, ಮತ್ಯಾವುದೋ ತಕರಾರರನ್ನೋ ತೆಗೆದು ಈಗಿರುವ 11 ಸ್ಥಾನಗಳೂ ಬ್ರಾಹ್ಮಣರಿಗೆ ಸಿಗುವಂತೆ ನೋಡಿಕೊಳ್ಳುತ್ತಾರೆ. ಇಡಬ್ಲ್ಯೂಎಸ್‌ ಮತ್ತು ಜನರಲ್ ಕ್ಯಾಟಗರಿ ಸೇರಿ 16 ಪೋಸ್ಟ್‌ಗಳನ್ನು ಬ್ರಾಹ್ಮಣರೇ ಪಡೆದುಕೊಳ್ಳುತ್ತಾರೆ” ಎಂದು ವಿಷಾದಿಸಿದರು.

ಚಿಂತಕರು ಆರೋಪಿಸುತ್ತಿರುವಂತೆ 25 ಪೋಸ್ಟ್‌ಗಳಲ್ಲಿ 16 ಹುದ್ದೆಗಳು ಬ್ರಾಹ್ಮಣರಿಗೆ ಹೋದರೆ ಶೇ. 64ರಷ್ಟು ಸ್ಥಾನಗಳು ಒಂದು ಜಾತಿಗೆ ಸಿಕ್ಕಂತಾಗುತ್ತದೆ. ಈಗ ಸಾರ್ವಜನಿಕವಾಗಿ ಚರ್ಚೆಯಲ್ಲಿರುವ ಅಂಕಿ-ಅಂಶದ ಪ್ರಕಾರ ಶೇ. 2ರಷ್ಟಿರುವ ಬ್ರಾಹ್ಮಣರಿಗೆ 64ರಷ್ಟು ಅವಕಾಶ ನೀಡಿದಂತಾಗುತ್ತದೆ. ಒಂದು ವೇಳೆ ಇಡಬ್ಲೂಎಸ್‌ ಅಡಿ ಬರುವ ಇತರ ಸಮುದಾಯದಲ್ಲಿ ಯಾರಾದರೂ ಅರ್ಜಿ ಹಾಕಿದರೂ ಶೇ. 90ರಷ್ಟು ಫಲಾನುಭವಿಗಳು ಬ್ರಾಹ್ಮಣರೇ ಆಗಿರುತ್ತಾರೆ ಎಂಬ ಅಭಿಪ್ರಾಯಗಳು ವ್ಯಕ್ತವಾಗುತ್ತಿವೆ. 50% ಜನಸಂಖ್ಯೆಗೆ ಕೇವಲ 9 ಹುದ್ದೆಗಳನ್ನು ನೀಡಿ, ಶೇ. 2ರಷ್ಟಿರುವ ಜಾತಿಗೆ 16 ಹುದ್ದೆಗಳನ್ನು ನೀಡಲಾಗುತ್ತಿದೆ ಎಂಬ ವಾದ ಮುನ್ನೆಲೆಗೆ ಬಂದಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

3 COMMENTS

  1. ಅಹಿಂದ ವರ್ಗದವರು ಒಗ್ಗಟ್ಟಿನಿಂದ ಇಂತಹ ಅನ್ಯಾಯಗಳನ್ನು ಪ್ರತಿಬಟಿಸಬೇಕು.

  2. ಅಂದರೆ ದ್ವಾರಕಾನಾಥ್ ಪ್ರಕಾರ ಬ್ರಾಹ್ಮಣರನ್ನು ಬಿಟ್ಟರೆ ಬೇರೆಯವರಲ್ಲಿ ಪ್ರತಿಭೆ ಇಲ್ಲ ಹಾಗಾಗಿ ಜೆನರಲ್ ಕೆಟೊಗರಿಯ ಎಲ್ಲಾ ಹುದ್ದೆಗಳೂ ಬ್ರಾಹ್ಮಣರ ಪಾಲಾಗುತ್ತವೆ ಎನ್ನುವ ವಾದ ಎಷ್ಟು ಸಾರಿ? ಇದು ಬ್ರಾಹ್ಮಣ ಏತರರಿಗೆ ಮಾಡುವ ಅವಮಾನ ಅಲ್ಲವೇ?

LEAVE A REPLY

Please enter your comment!
Please enter your name here

- Advertisment -

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...

ಹತ್ಯಾಕಾಂಡಕ್ಕೆ ಸಮನಾದ NEET ಹಗರಣ ನಡೆಯಲು ಬಿಟ್ಟ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಡಲಿ

ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಲೀಕ್ ಆದ ನಂತರದ ಬೆಳವಣಿಗೆಗಳನ್ನು ಇಡೀ ದೇಶ ಗಮನಿಸುತ್ತಿದೆ. ಅದರಲ್ಲೂ ವಿಶೇಷವಾಗಿ ಜೂನ್ ಆರಂಭದಿಂದ ಇಲ್ಲಿಯವರೆಗೆ ದೇಶದ ವಿದ್ಯಾರ್ಥಿಗಳು ನಡೆಸುತ್ತಿರುವ ಆಂದೋಲನವನ್ನು ದೇಶದ ಜನತೆ ನೋಡುತ್ತಿದ್ದಾರೆ. ದೇಶದ...

ಸಿಜೆಪಿ ಮತ್ತು ಜೆನ್‌ ಜಿಫಿಕೇಶನ್: ಪ್ರಸ್ತುತ ಬೆಳವಣಿಗೆ, ಭವಿಷ್ಯದ ಸಾಧ್ಯತೆ

ಇತ್ತೀಚಿನ ಬೆಳವಣಿಗೆಗಳು ಕಳೆದ ಒಂದು ತಿಂಗಳಿಂದ ನಡೆಯುತ್ತಿರುವ ಸಿಜೆಪಿ (ಕಾಕ್ರೋಚ್‌ ಜನತಾ ಪಕ್ಷ) ಪ್ರತಿಭಟನೆ ಈಗ ತಾರ್ಕಿಕ ಹಂತಕ್ಕೆ ತಲಪುತ್ತಿದೆ. ಪ್ರಶ್ನೆಪತ್ರಿಕೆ ಸೋರಿಕೆಯ ಕಾರಣಕ್ಕೆ ನೀಟ್‌ನ (ರಾಷ್ಟ್ರೀಯ ಅರ್ಹತಾ ಹಾಗೂ ಪ್ರವೇಶ ಪರೀಕ್ಷೆ) ಮೊದಲ...

SIR ಕರ್ತವ್ಯದ ವೇಳೆ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್: ಚಿಕಿತ್ಸೆ ಫಲಿಸದೇ ಸಾವು

ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ಕೆಲಸದ ಹೆಸರಿನಲ್ಲಿ ಶಿಕ್ಷಕರ ಮೇಲೆ ಹೇರುತ್ತಿರುವ ಅತಿಯಾದ ಮಾನಸಿಕ ಹಾಗೂ ದೈಹಿಕ ಒತ್ತಡಕ್ಕೆ ಮತ್ತೊಬ್ಬ ಶಿಕ್ಷಕಿ ಬಲಿಯಾಗಿದ್ದಾರೆ. ಬೆಂಗಳೂರಿನ...

ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ, ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ: ಸಿ.ಟಿ ರವಿ ವಿವಾದಾತ್ಮಕ ಹೇಳಿಕೆ

ದೇಶಾದ್ಯಂತ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿ ಮತ್ತು ಯುವಜನ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಈ ನಡುವೆ ವಿದ್ಯಾರ್ಥಿಗಳ ಹೋರಾಟವನ್ನು ಕುಹಕವಾಡಿರುವ ವಿಧಾನ ಪರಿಷತ್ ಬಿಜೆಪಿ...