Homeಕರ್ನಾಟಕನಿಮಾನ್ಸ್‌‌ ನೇಮಕಾತಿ ಪ್ರಕಟಣೆ: ಮೇಲ್ಜಾತಿಗೆ ಶೇ.64ರಷ್ಟು ಹುದ್ದೆ ಸಿಗುವಂತೆ ಹಂಚಿಕೆ- ಆರೋಪ

ನಿಮಾನ್ಸ್‌‌ ನೇಮಕಾತಿ ಪ್ರಕಟಣೆ: ಮೇಲ್ಜಾತಿಗೆ ಶೇ.64ರಷ್ಟು ಹುದ್ದೆ ಸಿಗುವಂತೆ ಹಂಚಿಕೆ- ಆರೋಪ

50% ಜನಸಂಖ್ಯೆಗೆ ಕೇವಲ 9 ಹುದ್ದೆಗಳನ್ನು ನೀಡಿ, ಬೆರಳೆಣಿಯಷ್ಟಿರುವ ಜಾತಿಗೆ 16 ಹುದ್ದೆಗಳನ್ನು ನೀಡಲಾಗುತ್ತಿದೆ ಎಂಬ ಆರೋಪ ಬಂದಿದೆ.

- Advertisement -
- Advertisement -

ಬೆಂಗಳೂರಿನಲ್ಲಿರುವ ಪ್ರತಿಷ್ಟಿತ ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರವಿಜ್ಞಾನ ಸಂಸ್ಥೆ (ನಿಮಾನ್ಸ್‌‌) ನೀಡಿರುವ ನೇಮಕಾತಿ ಪ್ರಕಟಣೆಯು ಅನ್ಯಾಯದಿಂದ ಕೂಡಿದೆ ಎಂಬ ಆಕ್ಷೇಪ ವ್ಯಕ್ತವಾಗಿದೆ.

ಎಸ್‌ಸಿ, ಎಸ್‌ಟಿ, ಒಬಿಸಿ ಸಮುದಾಯಗಳಿಗೆ ಅನ್ಯಾಯ ಎಸಗುವಂತೆ ಮೀಸಲಾತಿ ಹಂಚಿಕೆ ಮಾಡಲಾಗಿದ್ದು, ಸ್ಪಶ್ಯ ಮೇಲ್ಜಾತಿಗಳಿಗೆ ಮುಖ್ಯವಾಗಿ ಬ್ರಾಹ್ಮಣರಿಗೆ ಹೆಚ್ಚಿನ ಸ್ಥಾನಗಳು ಲಭಿಸಲಿವೆ. ಇದು ಸಂಘಪರಿವಾರದ ಸಾಮಾಜಿಕ ನ್ಯಾಯ ಎಂದು ಚಿಂತಕರು ಆರೋಪಿಸಿದ್ದಾರೆ.

ರಾಜ್ಯ ಹಿಂದುಳಿದ ವರ್ಗಗಳ ಆಯೋಗ ಮಾಜಿ ಅಧ್ಯಕ್ಷರಾದ ಸಿ.ಎಸ್.ದ್ವಾರಕಾನಾಥ್ ಅವರು ಈ ಕುರಿತು ಫೇಸ್‌ಬುಕ್‌ನಲ್ಲಿ ಅಭಿಪ್ರಾಯ ಹಂಚಿಕೊಂಡಿದ್ದು, “ಬೆಂಗಳೂರಿನಲ್ಲಿರುವ ಪ್ರತಿಷ್ಟಿತ ನಿಮಾನ್ಸ್‌ನಲ್ಲಿ ವಿವಿಧ ವಿಭಾಗಗಳಲ್ಲಿ ಕೆಲಸಮಾಡಲು, ಪ್ರೊಫೆಸರ್ ಮತ್ತು ಅಸಿಸ್ಟೆಂಟ್ ಪ್ರೊಫೆಸರ್ ಹುದ್ದೆಗಳ ನೇಮಕಾತಿಗೆ ಇಂದು ನೋಟಿಫಿಕೇಶನ್ ಪ್ರಕಟವಾಗಿದೆ. ಇಲ್ಲಿ ಒಟ್ಟಾರೆ 25 ಹುದ್ದೆಗಳಿವೆ. ಇದರಲ್ಲಿ 11 ಹುದ್ದೆಗಳನ್ನು ಯುಆರ್‌‌ (unreserved) ಅಡಿ ನೀಡಲಾಗಿದೆ. ಅಂದರೆ ಜನರಲ್ ಕ್ಯಾಟಗರಿಯವರು ತೆಗೆದುಕೊಳ್ಳುತ್ತಾರೆ. ಈ ‘ಜನರಲ್’ನಲ್ಲಿ ಈ ಹುದ್ದೆಗಳನ್ನು ಯಾರು ಪಡೆಯುತ್ತಾರೆಂದು ವಿವರಿಸಬೇಕಿಲ್ಲ” ಎಂದು ತಿಳಿಸಿದ್ದಾರೆ.

“ಮಿಕ್ಕಂತೆ 5 ಪೋಸ್ಟ್‌ಗಳನ್ನು ಇಡಬ್ಲ್ಯೂಎಸ್‌ (ಆರ್ಥಿಕವಾಗಿ ಹಿಂದುಳಿದ ವರ್ಗ) ಮೀಸಲು ಮಾಡಲಾಗಿದೆ. ಅಂದರೆ ಮೇಲ್ಜಾತಿ ಮತ್ತು ಮೇಲ್ಜಾತಿ ‘ಬಡವರಿಗೆ’ ಒಟ್ಟು 16 ಹುದ್ದೆಗಳು, ಮಿಕ್ಕಂತೆ ಒಬಿಸಿಗೆಗಳಿಗೆ 5, ಎಸ್‌ಸಿಗೆ 3, ಮತ್ತು ಎಸ್‌ಟಿಗೆ 1 ಪೋಸ್ಟ್ ಅನ್ನು ನೀಡಲಾಗಿದೆ. ಅಂದರೆ ಒಟ್ಟು ಎಸ್‌ಸಿ, ಎಸ್‌ಟಿ ಮತ್ತು ಒಬಿಸಿಗಳಿಗೆ ಸೇರಿ 50% ಜನಸಂಖ್ಯೆಗೆ ಕೇವಲ 9 ಹುದ್ದೆಗಳು. ಹೇಗಿದೆ ಸಂಘಪರಿವಾರ ಸರ್ಕಾರದ ‘ಸಾಮಾಜಿಕ ನ್ಯಾಯ!?’ ಅಲ್ಲಿ ಜೀತ ಮಾಡುತ್ತಿರುವ, ಚೆಡ್ಡಿ ಹೊರುತ್ತಿರುವ ನಮ್ಮ ಎಸ್‌ಸಿ, ಎಸ್‌ಟಿ, ಒಬಿಸಿ ಗೇಟ್ ಕೀಪರ್‌ಗಳಿಗೆ ಈ ಸೂಕ್ಷ್ಮ ಅರ್ಥವಾದಂತಿಲ್ಲ. ಅಕಸ್ಮಾತ್ ಅರ್ಥವಾದರೂ ಬಾಯಿಗೆ ಲಕ್ವ ಬಡಿದವರಂತಿದ್ದಾರೆ” ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ಚಿಂತಕರಾದ ಶ್ರೀಪಾದ್ ಭಟ್ ಅವರು ನಿಮಾನ್ಸ್‌‌ ನೇಮಕಾತಿಗೆ ಸಂಬಂಧಿಸಿದಂತೆ ಎದ್ದಿರುವ ಆಕ್ಷೇಪಗಳಿಗೆ ಸಂಬಂಧಿಸಿದಂತೆ ‘ನಾನುಗೌರಿ.ಕಾಂ’ಗೆ ಪ್ರತಿಕ್ರಿಯೆ ನೀಡಿದರು. “ಇಡಬ್ಲ್ಯೂಎಸ್‌ ಅಡಿ ಬರುವ ಜಾತಿಗಳ ಅಧಿಕೃತ ಪಟ್ಟಿಯನ್ನೇ ಕರ್ನಾಟಕ ಸರ್ಕಾರ ಈವರೆಗೆ ಬಿಡುಗಡೆ ಮಾಡಿಲ್ಲ. ಹೀಗಿರುವಾಗ ಇಡಬ್ಲ್ಯೂಎಸ್‌‌ ಹೇಗೆ ಕೊಡುತ್ತಾರೆ?” ಎಂದು ಪ್ರಶ್ನಿಸಿದರು.

“ರಾಜ್ಯದಲ್ಲಿ ಇಡಬ್ಲ್ಯೂಎಸ್‌ ಅಡಿ ಫಲಾನುಭವಿಗಳಾಗುವುದು ಬ್ರಾಹ್ಮಣರು ಮಾತ್ರ. ಉಳಿದಂತೆ ನಾಯರ್‌ಗಳು, ಮೊದಲಿಯಾರ್‌ಗಳು, ಕೋಮ್ಟ ಶೆಟ್ಟರು, ಮಾರ್ವಾಡಿಗಳು ಅರ್ಜಿ ಸಲ್ಲಿಸುವುದು ಅನುಮಾನ. ಹೀಗಾಗಿ ಇಡಬ್ಲ್ಯೂಎಸ್‌ನ ಐದು ಪೋಸ್ಟ್‌ಗಳನ್ನೂ ಬ್ರಾಹ್ಮಣರೇ ಪಡೆದುಕೊಳ್ಳುತ್ತಾರೆ” ಎಂದು ವಿವರಿಸಿದರು.

“ಇಡಬ್ಲ್ಯೂಎಸ್‌ಗೆ ನೀಡಿರುವ ಐದು ಪೋಸ್ಟ್‌ಗಳನ್ನು ಎಲ್ಲಿಂದ ಕಿತ್ತುಕೊಂಡಿದ್ದಾರೆ? ಹಿಂದೆ ಎಸ್‌ಸಿ, ಎಸ್‌ಟಿ, ಒಬಿಸಿ, ಜನರಲ್ ಕ್ಯಾಟಗರಿಗಳಿಗೆ ಎಷ್ಟು ಸ್ಥಾನಗಳು ಮೀಸಲಾಗಿದ್ದವು? ಇಡಬ್ಲ್ಯೂಎಸ್‌ಗಾಗಿ ಹೊಸ ಪೋಸ್ಟ್‌ಗಳನ್ನು ಸೃಷ್ಟಿ ಮಾಡಿದ್ದಾರಾ? ಅಥವಾ ಎಸ್‌ಸಿ, ಎಸ್‌ಟಿ, ಒಬಿಸಿಗಳ ಪ್ರಾತಿನಿಧ್ಯವನ್ನು ಕಡಿಮೆ ಮಾಡಿ ಇಡಬ್ಲ್ಯೂಎಸ್‌ ಕೋಟಾ ನೀಡಿದ್ದಾರಾ?- ಈ ಮಾಹಿತಿಗಳು ಸಾರ್ವಜನಿಕವಾಗಿ ಲಭ್ಯವಾಗಬೇಕು” ಎಂದು ಆಗ್ರಹಿಸಿದರು.

 ಇದನ್ನೂ ಓದಿರಿ: EWS: ದಲಿತ-ಶೂದ್ರರ ಮೀಸಲಾತಿಯ ಕ್ರಾಂತಿಗೆ ಬ್ರಾಹ್ಮಣ್ಯದ ಪ್ರತಿಕ್ರಾಂತಿ

“ಬ್ರಾಹ್ಮಣೇತರ ಜಾತಿಗಳ ಅಭ್ಯರ್ಥಿಗಳು ಕೂಡ ಜನರಲ್‌ ಕ್ಯಾಟಗರಿಯಲ್ಲಿ ಸ್ಪರ್ಧಿಸುತ್ತಾರೆ. ಆದರೆ ಸಂದರ್ಶನಗಳಲ್ಲಿ ಮೇಲ್ಜಾತಿ ವ್ಯಕ್ತಿಗಳೇ ಕೂತಿರುತ್ತಾರೆ. ಹೀಗಾಗಿ ಅನೇಕ ಸಂದರ್ಭದಲ್ಲಿ ಎಸ್‌ಸಿ, ಎಸ್‌ಟಿ, ಒಬಿಸಿ ಜಾತಿಗಳ ವ್ಯಕ್ತಿಗಳನ್ನು ವ್ಯವಸ್ಥಿತಿವಾಗಿ ಹೊರಗೆ ಹಾಕಲಾಗುತ್ತದೆ. ತಾಂತ್ರಿಕ ಕಾರಣವನ್ನೋ, ಮತ್ಯಾವುದೋ ತಕರಾರರನ್ನೋ ತೆಗೆದು ಈಗಿರುವ 11 ಸ್ಥಾನಗಳೂ ಬ್ರಾಹ್ಮಣರಿಗೆ ಸಿಗುವಂತೆ ನೋಡಿಕೊಳ್ಳುತ್ತಾರೆ. ಇಡಬ್ಲ್ಯೂಎಸ್‌ ಮತ್ತು ಜನರಲ್ ಕ್ಯಾಟಗರಿ ಸೇರಿ 16 ಪೋಸ್ಟ್‌ಗಳನ್ನು ಬ್ರಾಹ್ಮಣರೇ ಪಡೆದುಕೊಳ್ಳುತ್ತಾರೆ” ಎಂದು ವಿಷಾದಿಸಿದರು.

ಚಿಂತಕರು ಆರೋಪಿಸುತ್ತಿರುವಂತೆ 25 ಪೋಸ್ಟ್‌ಗಳಲ್ಲಿ 16 ಹುದ್ದೆಗಳು ಬ್ರಾಹ್ಮಣರಿಗೆ ಹೋದರೆ ಶೇ. 64ರಷ್ಟು ಸ್ಥಾನಗಳು ಒಂದು ಜಾತಿಗೆ ಸಿಕ್ಕಂತಾಗುತ್ತದೆ. ಈಗ ಸಾರ್ವಜನಿಕವಾಗಿ ಚರ್ಚೆಯಲ್ಲಿರುವ ಅಂಕಿ-ಅಂಶದ ಪ್ರಕಾರ ಶೇ. 2ರಷ್ಟಿರುವ ಬ್ರಾಹ್ಮಣರಿಗೆ 64ರಷ್ಟು ಅವಕಾಶ ನೀಡಿದಂತಾಗುತ್ತದೆ. ಒಂದು ವೇಳೆ ಇಡಬ್ಲೂಎಸ್‌ ಅಡಿ ಬರುವ ಇತರ ಸಮುದಾಯದಲ್ಲಿ ಯಾರಾದರೂ ಅರ್ಜಿ ಹಾಕಿದರೂ ಶೇ. 90ರಷ್ಟು ಫಲಾನುಭವಿಗಳು ಬ್ರಾಹ್ಮಣರೇ ಆಗಿರುತ್ತಾರೆ ಎಂಬ ಅಭಿಪ್ರಾಯಗಳು ವ್ಯಕ್ತವಾಗುತ್ತಿವೆ. 50% ಜನಸಂಖ್ಯೆಗೆ ಕೇವಲ 9 ಹುದ್ದೆಗಳನ್ನು ನೀಡಿ, ಶೇ. 2ರಷ್ಟಿರುವ ಜಾತಿಗೆ 16 ಹುದ್ದೆಗಳನ್ನು ನೀಡಲಾಗುತ್ತಿದೆ ಎಂಬ ವಾದ ಮುನ್ನೆಲೆಗೆ ಬಂದಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

3 COMMENTS

  1. ಅಹಿಂದ ವರ್ಗದವರು ಒಗ್ಗಟ್ಟಿನಿಂದ ಇಂತಹ ಅನ್ಯಾಯಗಳನ್ನು ಪ್ರತಿಬಟಿಸಬೇಕು.

  2. ಅಂದರೆ ದ್ವಾರಕಾನಾಥ್ ಪ್ರಕಾರ ಬ್ರಾಹ್ಮಣರನ್ನು ಬಿಟ್ಟರೆ ಬೇರೆಯವರಲ್ಲಿ ಪ್ರತಿಭೆ ಇಲ್ಲ ಹಾಗಾಗಿ ಜೆನರಲ್ ಕೆಟೊಗರಿಯ ಎಲ್ಲಾ ಹುದ್ದೆಗಳೂ ಬ್ರಾಹ್ಮಣರ ಪಾಲಾಗುತ್ತವೆ ಎನ್ನುವ ವಾದ ಎಷ್ಟು ಸಾರಿ? ಇದು ಬ್ರಾಹ್ಮಣ ಏತರರಿಗೆ ಮಾಡುವ ಅವಮಾನ ಅಲ್ಲವೇ?

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...