Homeಕರ್ನಾಟಕನಿಮಾನ್ಸ್‌‌ ನೇಮಕಾತಿ ಪ್ರಕಟಣೆ: ಮೇಲ್ಜಾತಿಗೆ ಶೇ.64ರಷ್ಟು ಹುದ್ದೆ ಸಿಗುವಂತೆ ಹಂಚಿಕೆ- ಆರೋಪ

ನಿಮಾನ್ಸ್‌‌ ನೇಮಕಾತಿ ಪ್ರಕಟಣೆ: ಮೇಲ್ಜಾತಿಗೆ ಶೇ.64ರಷ್ಟು ಹುದ್ದೆ ಸಿಗುವಂತೆ ಹಂಚಿಕೆ- ಆರೋಪ

50% ಜನಸಂಖ್ಯೆಗೆ ಕೇವಲ 9 ಹುದ್ದೆಗಳನ್ನು ನೀಡಿ, ಬೆರಳೆಣಿಯಷ್ಟಿರುವ ಜಾತಿಗೆ 16 ಹುದ್ದೆಗಳನ್ನು ನೀಡಲಾಗುತ್ತಿದೆ ಎಂಬ ಆರೋಪ ಬಂದಿದೆ.

- Advertisement -
- Advertisement -

ಬೆಂಗಳೂರಿನಲ್ಲಿರುವ ಪ್ರತಿಷ್ಟಿತ ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರವಿಜ್ಞಾನ ಸಂಸ್ಥೆ (ನಿಮಾನ್ಸ್‌‌) ನೀಡಿರುವ ನೇಮಕಾತಿ ಪ್ರಕಟಣೆಯು ಅನ್ಯಾಯದಿಂದ ಕೂಡಿದೆ ಎಂಬ ಆಕ್ಷೇಪ ವ್ಯಕ್ತವಾಗಿದೆ.

ಎಸ್‌ಸಿ, ಎಸ್‌ಟಿ, ಒಬಿಸಿ ಸಮುದಾಯಗಳಿಗೆ ಅನ್ಯಾಯ ಎಸಗುವಂತೆ ಮೀಸಲಾತಿ ಹಂಚಿಕೆ ಮಾಡಲಾಗಿದ್ದು, ಸ್ಪಶ್ಯ ಮೇಲ್ಜಾತಿಗಳಿಗೆ ಮುಖ್ಯವಾಗಿ ಬ್ರಾಹ್ಮಣರಿಗೆ ಹೆಚ್ಚಿನ ಸ್ಥಾನಗಳು ಲಭಿಸಲಿವೆ. ಇದು ಸಂಘಪರಿವಾರದ ಸಾಮಾಜಿಕ ನ್ಯಾಯ ಎಂದು ಚಿಂತಕರು ಆರೋಪಿಸಿದ್ದಾರೆ.

ರಾಜ್ಯ ಹಿಂದುಳಿದ ವರ್ಗಗಳ ಆಯೋಗ ಮಾಜಿ ಅಧ್ಯಕ್ಷರಾದ ಸಿ.ಎಸ್.ದ್ವಾರಕಾನಾಥ್ ಅವರು ಈ ಕುರಿತು ಫೇಸ್‌ಬುಕ್‌ನಲ್ಲಿ ಅಭಿಪ್ರಾಯ ಹಂಚಿಕೊಂಡಿದ್ದು, “ಬೆಂಗಳೂರಿನಲ್ಲಿರುವ ಪ್ರತಿಷ್ಟಿತ ನಿಮಾನ್ಸ್‌ನಲ್ಲಿ ವಿವಿಧ ವಿಭಾಗಗಳಲ್ಲಿ ಕೆಲಸಮಾಡಲು, ಪ್ರೊಫೆಸರ್ ಮತ್ತು ಅಸಿಸ್ಟೆಂಟ್ ಪ್ರೊಫೆಸರ್ ಹುದ್ದೆಗಳ ನೇಮಕಾತಿಗೆ ಇಂದು ನೋಟಿಫಿಕೇಶನ್ ಪ್ರಕಟವಾಗಿದೆ. ಇಲ್ಲಿ ಒಟ್ಟಾರೆ 25 ಹುದ್ದೆಗಳಿವೆ. ಇದರಲ್ಲಿ 11 ಹುದ್ದೆಗಳನ್ನು ಯುಆರ್‌‌ (unreserved) ಅಡಿ ನೀಡಲಾಗಿದೆ. ಅಂದರೆ ಜನರಲ್ ಕ್ಯಾಟಗರಿಯವರು ತೆಗೆದುಕೊಳ್ಳುತ್ತಾರೆ. ಈ ‘ಜನರಲ್’ನಲ್ಲಿ ಈ ಹುದ್ದೆಗಳನ್ನು ಯಾರು ಪಡೆಯುತ್ತಾರೆಂದು ವಿವರಿಸಬೇಕಿಲ್ಲ” ಎಂದು ತಿಳಿಸಿದ್ದಾರೆ.

“ಮಿಕ್ಕಂತೆ 5 ಪೋಸ್ಟ್‌ಗಳನ್ನು ಇಡಬ್ಲ್ಯೂಎಸ್‌ (ಆರ್ಥಿಕವಾಗಿ ಹಿಂದುಳಿದ ವರ್ಗ) ಮೀಸಲು ಮಾಡಲಾಗಿದೆ. ಅಂದರೆ ಮೇಲ್ಜಾತಿ ಮತ್ತು ಮೇಲ್ಜಾತಿ ‘ಬಡವರಿಗೆ’ ಒಟ್ಟು 16 ಹುದ್ದೆಗಳು, ಮಿಕ್ಕಂತೆ ಒಬಿಸಿಗೆಗಳಿಗೆ 5, ಎಸ್‌ಸಿಗೆ 3, ಮತ್ತು ಎಸ್‌ಟಿಗೆ 1 ಪೋಸ್ಟ್ ಅನ್ನು ನೀಡಲಾಗಿದೆ. ಅಂದರೆ ಒಟ್ಟು ಎಸ್‌ಸಿ, ಎಸ್‌ಟಿ ಮತ್ತು ಒಬಿಸಿಗಳಿಗೆ ಸೇರಿ 50% ಜನಸಂಖ್ಯೆಗೆ ಕೇವಲ 9 ಹುದ್ದೆಗಳು. ಹೇಗಿದೆ ಸಂಘಪರಿವಾರ ಸರ್ಕಾರದ ‘ಸಾಮಾಜಿಕ ನ್ಯಾಯ!?’ ಅಲ್ಲಿ ಜೀತ ಮಾಡುತ್ತಿರುವ, ಚೆಡ್ಡಿ ಹೊರುತ್ತಿರುವ ನಮ್ಮ ಎಸ್‌ಸಿ, ಎಸ್‌ಟಿ, ಒಬಿಸಿ ಗೇಟ್ ಕೀಪರ್‌ಗಳಿಗೆ ಈ ಸೂಕ್ಷ್ಮ ಅರ್ಥವಾದಂತಿಲ್ಲ. ಅಕಸ್ಮಾತ್ ಅರ್ಥವಾದರೂ ಬಾಯಿಗೆ ಲಕ್ವ ಬಡಿದವರಂತಿದ್ದಾರೆ” ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ಚಿಂತಕರಾದ ಶ್ರೀಪಾದ್ ಭಟ್ ಅವರು ನಿಮಾನ್ಸ್‌‌ ನೇಮಕಾತಿಗೆ ಸಂಬಂಧಿಸಿದಂತೆ ಎದ್ದಿರುವ ಆಕ್ಷೇಪಗಳಿಗೆ ಸಂಬಂಧಿಸಿದಂತೆ ‘ನಾನುಗೌರಿ.ಕಾಂ’ಗೆ ಪ್ರತಿಕ್ರಿಯೆ ನೀಡಿದರು. “ಇಡಬ್ಲ್ಯೂಎಸ್‌ ಅಡಿ ಬರುವ ಜಾತಿಗಳ ಅಧಿಕೃತ ಪಟ್ಟಿಯನ್ನೇ ಕರ್ನಾಟಕ ಸರ್ಕಾರ ಈವರೆಗೆ ಬಿಡುಗಡೆ ಮಾಡಿಲ್ಲ. ಹೀಗಿರುವಾಗ ಇಡಬ್ಲ್ಯೂಎಸ್‌‌ ಹೇಗೆ ಕೊಡುತ್ತಾರೆ?” ಎಂದು ಪ್ರಶ್ನಿಸಿದರು.

“ರಾಜ್ಯದಲ್ಲಿ ಇಡಬ್ಲ್ಯೂಎಸ್‌ ಅಡಿ ಫಲಾನುಭವಿಗಳಾಗುವುದು ಬ್ರಾಹ್ಮಣರು ಮಾತ್ರ. ಉಳಿದಂತೆ ನಾಯರ್‌ಗಳು, ಮೊದಲಿಯಾರ್‌ಗಳು, ಕೋಮ್ಟ ಶೆಟ್ಟರು, ಮಾರ್ವಾಡಿಗಳು ಅರ್ಜಿ ಸಲ್ಲಿಸುವುದು ಅನುಮಾನ. ಹೀಗಾಗಿ ಇಡಬ್ಲ್ಯೂಎಸ್‌ನ ಐದು ಪೋಸ್ಟ್‌ಗಳನ್ನೂ ಬ್ರಾಹ್ಮಣರೇ ಪಡೆದುಕೊಳ್ಳುತ್ತಾರೆ” ಎಂದು ವಿವರಿಸಿದರು.

“ಇಡಬ್ಲ್ಯೂಎಸ್‌ಗೆ ನೀಡಿರುವ ಐದು ಪೋಸ್ಟ್‌ಗಳನ್ನು ಎಲ್ಲಿಂದ ಕಿತ್ತುಕೊಂಡಿದ್ದಾರೆ? ಹಿಂದೆ ಎಸ್‌ಸಿ, ಎಸ್‌ಟಿ, ಒಬಿಸಿ, ಜನರಲ್ ಕ್ಯಾಟಗರಿಗಳಿಗೆ ಎಷ್ಟು ಸ್ಥಾನಗಳು ಮೀಸಲಾಗಿದ್ದವು? ಇಡಬ್ಲ್ಯೂಎಸ್‌ಗಾಗಿ ಹೊಸ ಪೋಸ್ಟ್‌ಗಳನ್ನು ಸೃಷ್ಟಿ ಮಾಡಿದ್ದಾರಾ? ಅಥವಾ ಎಸ್‌ಸಿ, ಎಸ್‌ಟಿ, ಒಬಿಸಿಗಳ ಪ್ರಾತಿನಿಧ್ಯವನ್ನು ಕಡಿಮೆ ಮಾಡಿ ಇಡಬ್ಲ್ಯೂಎಸ್‌ ಕೋಟಾ ನೀಡಿದ್ದಾರಾ?- ಈ ಮಾಹಿತಿಗಳು ಸಾರ್ವಜನಿಕವಾಗಿ ಲಭ್ಯವಾಗಬೇಕು” ಎಂದು ಆಗ್ರಹಿಸಿದರು.

 ಇದನ್ನೂ ಓದಿರಿ: EWS: ದಲಿತ-ಶೂದ್ರರ ಮೀಸಲಾತಿಯ ಕ್ರಾಂತಿಗೆ ಬ್ರಾಹ್ಮಣ್ಯದ ಪ್ರತಿಕ್ರಾಂತಿ

“ಬ್ರಾಹ್ಮಣೇತರ ಜಾತಿಗಳ ಅಭ್ಯರ್ಥಿಗಳು ಕೂಡ ಜನರಲ್‌ ಕ್ಯಾಟಗರಿಯಲ್ಲಿ ಸ್ಪರ್ಧಿಸುತ್ತಾರೆ. ಆದರೆ ಸಂದರ್ಶನಗಳಲ್ಲಿ ಮೇಲ್ಜಾತಿ ವ್ಯಕ್ತಿಗಳೇ ಕೂತಿರುತ್ತಾರೆ. ಹೀಗಾಗಿ ಅನೇಕ ಸಂದರ್ಭದಲ್ಲಿ ಎಸ್‌ಸಿ, ಎಸ್‌ಟಿ, ಒಬಿಸಿ ಜಾತಿಗಳ ವ್ಯಕ್ತಿಗಳನ್ನು ವ್ಯವಸ್ಥಿತಿವಾಗಿ ಹೊರಗೆ ಹಾಕಲಾಗುತ್ತದೆ. ತಾಂತ್ರಿಕ ಕಾರಣವನ್ನೋ, ಮತ್ಯಾವುದೋ ತಕರಾರರನ್ನೋ ತೆಗೆದು ಈಗಿರುವ 11 ಸ್ಥಾನಗಳೂ ಬ್ರಾಹ್ಮಣರಿಗೆ ಸಿಗುವಂತೆ ನೋಡಿಕೊಳ್ಳುತ್ತಾರೆ. ಇಡಬ್ಲ್ಯೂಎಸ್‌ ಮತ್ತು ಜನರಲ್ ಕ್ಯಾಟಗರಿ ಸೇರಿ 16 ಪೋಸ್ಟ್‌ಗಳನ್ನು ಬ್ರಾಹ್ಮಣರೇ ಪಡೆದುಕೊಳ್ಳುತ್ತಾರೆ” ಎಂದು ವಿಷಾದಿಸಿದರು.

ಚಿಂತಕರು ಆರೋಪಿಸುತ್ತಿರುವಂತೆ 25 ಪೋಸ್ಟ್‌ಗಳಲ್ಲಿ 16 ಹುದ್ದೆಗಳು ಬ್ರಾಹ್ಮಣರಿಗೆ ಹೋದರೆ ಶೇ. 64ರಷ್ಟು ಸ್ಥಾನಗಳು ಒಂದು ಜಾತಿಗೆ ಸಿಕ್ಕಂತಾಗುತ್ತದೆ. ಈಗ ಸಾರ್ವಜನಿಕವಾಗಿ ಚರ್ಚೆಯಲ್ಲಿರುವ ಅಂಕಿ-ಅಂಶದ ಪ್ರಕಾರ ಶೇ. 2ರಷ್ಟಿರುವ ಬ್ರಾಹ್ಮಣರಿಗೆ 64ರಷ್ಟು ಅವಕಾಶ ನೀಡಿದಂತಾಗುತ್ತದೆ. ಒಂದು ವೇಳೆ ಇಡಬ್ಲೂಎಸ್‌ ಅಡಿ ಬರುವ ಇತರ ಸಮುದಾಯದಲ್ಲಿ ಯಾರಾದರೂ ಅರ್ಜಿ ಹಾಕಿದರೂ ಶೇ. 90ರಷ್ಟು ಫಲಾನುಭವಿಗಳು ಬ್ರಾಹ್ಮಣರೇ ಆಗಿರುತ್ತಾರೆ ಎಂಬ ಅಭಿಪ್ರಾಯಗಳು ವ್ಯಕ್ತವಾಗುತ್ತಿವೆ. 50% ಜನಸಂಖ್ಯೆಗೆ ಕೇವಲ 9 ಹುದ್ದೆಗಳನ್ನು ನೀಡಿ, ಶೇ. 2ರಷ್ಟಿರುವ ಜಾತಿಗೆ 16 ಹುದ್ದೆಗಳನ್ನು ನೀಡಲಾಗುತ್ತಿದೆ ಎಂಬ ವಾದ ಮುನ್ನೆಲೆಗೆ ಬಂದಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

3 COMMENTS

  1. ಅಹಿಂದ ವರ್ಗದವರು ಒಗ್ಗಟ್ಟಿನಿಂದ ಇಂತಹ ಅನ್ಯಾಯಗಳನ್ನು ಪ್ರತಿಬಟಿಸಬೇಕು.

  2. ಅಂದರೆ ದ್ವಾರಕಾನಾಥ್ ಪ್ರಕಾರ ಬ್ರಾಹ್ಮಣರನ್ನು ಬಿಟ್ಟರೆ ಬೇರೆಯವರಲ್ಲಿ ಪ್ರತಿಭೆ ಇಲ್ಲ ಹಾಗಾಗಿ ಜೆನರಲ್ ಕೆಟೊಗರಿಯ ಎಲ್ಲಾ ಹುದ್ದೆಗಳೂ ಬ್ರಾಹ್ಮಣರ ಪಾಲಾಗುತ್ತವೆ ಎನ್ನುವ ವಾದ ಎಷ್ಟು ಸಾರಿ? ಇದು ಬ್ರಾಹ್ಮಣ ಏತರರಿಗೆ ಮಾಡುವ ಅವಮಾನ ಅಲ್ಲವೇ?

LEAVE A REPLY

Please enter your comment!
Please enter your name here

- Advertisment -

ಎನ್ಯೂಮರೇಷನ್ ಫಾರಂ ಭರ್ತಿ ಮಾಡುವ ಮೂಲಕ SIR ಗೆ ಚಾಲನೆ ನೀಡಿದ ಸಿಎಂ ಡಿ.ಕೆ ಶಿವಕುಮಾರ್

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಇಂದು (ಜೂನ್ 30) ಮಂಗಳವಾರ ತಮ್ಮ ಸದಾಶಿವನಗರ ನಿವಾಸದಲ್ಲಿ ದಾಖಲಾತಿ ನಮೂನೆಯನ್ನು ಭರ್ತಿ ಮಾಡಿ ಸಲ್ಲಿಸುವ ಮೂಲಕ ಮತದಾರರ ಪಟ್ಟಿಯ 'ವಿಶೇಷ ತೀವ್ರ ಪರಿಷ್ಕರಣೆ' (SIR) ಅಭಿಯಾನಕ್ಕೆ ಅಧಿಕೃತವಾಗಿ...

‘ಆಪರೇಷನ್ ಸಿಂಧೂರ್‌’ ಕುರಿತು ಸಂಸತ್ತಿಗೆ ಸುಳ್ಳು ಮಾಹಿತಿ: ರಾಜನಾಥ್ ಸಿಂಗ್ ವಿರುದ್ಧ ಕಾಂಗ್ರೆಸ್‌ನಿಂದ ಹಕ್ಕುಚ್ಯುತಿ ನೋಟಿಸ್

ಕೇಂದ್ರ ರಕ್ಷಣಾ ಸಚಿವ ರಾಜ್‌ನಾಥ್ ಸಿಂಗ್ ವಿರುದ್ಧ ಕಾಂಗ್ರೆಸ್ ಪಕ್ಷ ಲೋಕಸಭೆಯಲ್ಲಿ ಹಕ್ಕುಚ್ಯುತಿ ನೋಟಿಸ್ ನೀಡಿದೆ. ಕಾಂಗ್ರೆಸ್ ಸಂಸದ ಕೆ. ಸಿ. ವೇಣುಗೋಪಾಲ್ ಅವರು ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರಿಗೆ ಈ ಕುರಿತು ಪತ್ರ ಬರೆದಿದ್ದು,...

SIR | ಮತದಾರರ ಪಟ್ಟಿಯಲ್ಲಿ ಹೆಸರಿದ್ದರೆ ಮಾತ್ರ ಸರ್ಕಾರಿ ಸೌಲಭ್ಯ: ಸಿಎಂ

ರಾಜ್ಯ ಸರ್ಕಾರದ ಐದು ಪ್ರಮುಖ ಗ್ಯಾರಂಟಿ ಯೋಜನೆಗಳು ಹಾಗೂ ಇತರ ಸರ್ಕಾರಿ ಸವಲತ್ತುಗಳನ್ನು ಪಡೆಯುತ್ತಿರುವ ಫಲಾನುಭವಿಗಳಿಗೆ ಮುಖ್ಯಮಂತ್ರಿಗಳು ಗಂಭೀರ ಎಚ್ಚರಿಕೆಯೊಂದನ್ನು ನೀಡಿದ್ದಾರೆ. ಪ್ರತಿಯೊಬ್ಬ ಫಲಾನುಭವಿಯೂ ತಮ್ಮ ಹೆಸರು ಮತದಾರರ ಪಟ್ಟಿಯಲ್ಲಿ ಇರುವುದನ್ನು ಕಡ್ಡಾಯವಾಗಿ...

SIR, ಚುನಾವಣಾ ಆಯೋಗದ ಕಾರ್ಯನಿರ್ವಹಣೆ ಕುರಿತು 23 ವಿಪಕ್ಷಗಳಿಂದ ಸಿಜೆಐಗೆ ಜಂಟಿ ಪತ್ರ

ಭಾರತೀಯ ಚುನಾವಣಾ ಆಯೋಗವು (ಇಸಿಐ) ನಡೆಸುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಹಾಗೂ ಇತರ ಚುನಾವಣೆ ಸಂಬಂಧಿತ ವಿಷಯಗಳ ವಿರುದ್ಧ ಇಂಡಿಯಾ ಮೈತ್ರಿಕೂಟದ ಹೊರಗಿರುವ ದ್ರಾವಿಡ ಮುನ್ನೇತ್ರ ಕಳಗಂ...

SIR: ಮತದಾರರ ಅನುಕೂಲಕ್ಕಾಗಿ ಸಹಾಯ ಕೇಂದ್ರಗಳನ್ನು ಸ್ಥಾಪಿಸಲು ಸರ್ಕಾರದ ಆದೇಶ

ರಾಜ್ಯಾದ್ಯಂತ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ-2026 (SIR) ಕಾರ್ಯವು ಜೂನ್ 30ರಿಂದ (ಇಂದಿನಿಂದ) ಅಧಿಕೃತವಾಗಿ ಆರಂಭವಾಗಿದೆ. ಜುಲೈ 29ರವರೆಗೆ ಒಂದು ತಿಂಗಳ ಕಾಲ ಬೂತ್ ಮಟ್ಟದ ಅಧಿಕಾರಿಗಳು ಮನೆ ಮನೆಗೆ ಭೇಟಿ...

SIR: ಕೇಂದ್ರ ಸರ್ಕಾರದ SIRಗೆ ಕೌಂಟರ್‌, ಮಹತ್ವದ ಆದೇಶಗಳನ್ನು ಹೊರಡಿಸಿದ ಕರ್ನಾಟಕ ಸರ್ಕಾರ

ಕೇಂದ್ರ ಸರ್ಕಾರ ಚುನಾವಣಾ ಆಯೋಗದ ಮೂಲಕ ನಡೆಸುತ್ತಿರುವ ವಿಶೇಷ ಮತದಾರ ಪಟ್ಟಿ ಪರಿಷ್ಕರಣೆ ಕುರಿತಂತೆ ದೇಶದಾದ್ಯಂತ ಭಾರೀ ವಿರೋಧ ವ್ಯಕ್ತವಾಗಿದ್ದವು. ಸುಪ್ರೀಂ ಕೋರ್ಟ್‌ ಆ ಪ್ರಕ್ರಿಯೆಯನ್ನು ಮಾನ್ಯ ಮಾಡಿತ್ತು. ಕರ್ನಾಟಕದಲ್ಲಿ ನಾಳೆಯಿಂದ (ಜೂನ್.30)‌...

ರಾಮಮಂದಿರದ ದೇಣಿಗೆ ಕಳ್ಳತನ: ಆರೋಪಿಗಳ ಪರ ಯಾವುದೇ ವಕೀಲರು ವಾದಿಸುವಂತಿಲ್ಲ , ವಾದಿಸಿದರೆ ರೂ. 5ಲಕ್ಷ ದಂಡ

ರಾಮಮಂದಿರದ ದೇಣಿಗೆ ಕಳ್ಳತನ ಪ್ರಕರಣದಲ್ಲಿ ಬಂಧಿತರಾಗಿರುವ ಆರೋಪಿಗಳ ಪರವಾಗಿ ಯಾವುದೇ ವಕೀಲರು ನ್ಯಾಯಾಲಯದಲ್ಲಿ ವಕಾಲತ್ತು ವಹಿಸಬಾರದು ಎಂದು ಅಯೋಧ್ಯೆ ಬಾರ್ ಅಸೋಸಿಯೇಷನ್ ಮಹತ್ವದ ನಿರ್ಧಾರ ಕೈಗೊಂಡಿದೆ. ಒಂದು ವೇಳೆ ಸಂಘದ ಈ ತೀರ್ಮಾನವನ್ನು...

ವೋಟರ್ ಲಿಸ್ಟ್‌ನಿಂದ ಹೆಸರು ಡಿಲೀಟ್: ದಿ ಟೆಲಿಗ್ರಾಫ್’ ಪತ್ರಿಕೆಯ ಮಾಜಿ ಸಂಪಾದಕ ರಾಜಗೋಪಾಲ್ ಪಾಸ್‌ಪೋರ್ಟ್ ನವೀಕರಣಕ್ಕೆ ಬ್ರೇಕ್! ಬಂಗಾಳ ಸಿಎಂ ಗೆ ಪತ್ರ ಬರೆದ ಕೇರಳ ಸಿಎಂ

ಹಿರಿಯ ಪತ್ರಕರ್ತ ಮತ್ತು ‘ದಿ ಟೆಲಿಗ್ರಾಫ್’ ಪತ್ರಿಕೆಯ ಮಾಜಿ ಸಂಪಾದಕ ರಾಜಗೋಪಾಲ್ ರಾಮದಾಸ್ ಅವರ ಪಾಸ್‌ಪೋರ್ಟ್ ನವೀಕರಣ ವಿವಾದವು ಸೋಮವಾರ ಮತ್ತಷ್ಟು ತೀವ್ರಗೊಂಡಿದೆ. ಈ ಸಮಸ್ಯೆಯನ್ನು ತಕ್ಷಣವೇ ಬಗೆಹರಿಸಲು ಮಧ್ಯಪ್ರವೇಶಿಸಬೇಕು ಎಂದು ಕೋರಿ...

ರಾಮ ಮಂದಿರ ದೇಣಿಗೆ ಹಗರಣ: ಅರ್ಜಿ ವಿಚಾರಣೆ ಕೆಲ ದಿನ ತಡವಾದರೆ ‘ಆಕಾಶವೇನೂ ಉರುಳಿ ಬೀಳುವುದಿಲ್ಲ’ ಎಂದ ಸುಪ್ರೀಂ ಕೋರ್ಟ್

ಅಯೋಧ್ಯೆಯ ರಾಮ ಮಂದಿರಕ್ಕೆ ಭಕ್ತರಿಂದ ಬಂದ ದೇಣಿಗೆ ಹಣ ದುರುಪಯೋಗ ಆಗಿರುವ ಕುರಿತು ಸಿಬಿಐ ನೇತೃತ್ವದ ಬಹು-ಸಂಸ್ಥೆಗಳ ಜಂಟಿ ತನಿಖೆಗೆ ಆದೇಶಿಸಬೇಕೆಂದು ಕೋರಿ ಸಲ್ಲಿಕೆಯಾಗಿದ್ದ ಅರ್ಜಿಗಳ ತುರ್ತು ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಸೋಮವಾರ...

ಕಾಕ್ರೋಚ್ ಪಾರ್ಟಿ ಧರಣಿ : ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಆರಂಭಿಸಿದ ಸೋನಮ್ ವಾಂಗ್‌ಚುಕ್

ನೀಟ್ ಸೇರಿದಂತೆ ವಿವಿಧ ಪರೀಕ್ಷೆಗಳ ಪ್ರಶ್ನೆ ಪತ್ರಿಕೆ ಸೋರಿಕೆ, ಹಲವು ಅಕ್ರಮ, ಶೈಕ್ಷಣಿಕ ಅವ್ಯವಸ್ಥೆಗಳ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿ ಕಾಕ್ರೋಚ್ ಜನತಾ...