Homeಅಂತರಾಷ್ಟ್ರೀಯನಿಮಿಷಾ ಪ್ರಿಯಾ ಮರಣದಂಡನೆ: ಗ್ರ್ಯಾಂಡ್ ಮುಫ್ತಿ ಎಪಿ ಉಸ್ತಾದ್ ಮಧ್ಯಪ್ರವೇಶದ ಬಳಿಕ ಯೆಮನ್‌ನಲ್ಲಿ ಮಹತ್ವದ ಸಭೆ;...

ನಿಮಿಷಾ ಪ್ರಿಯಾ ಮರಣದಂಡನೆ: ಗ್ರ್ಯಾಂಡ್ ಮುಫ್ತಿ ಎಪಿ ಉಸ್ತಾದ್ ಮಧ್ಯಪ್ರವೇಶದ ಬಳಿಕ ಯೆಮನ್‌ನಲ್ಲಿ ಮಹತ್ವದ ಸಭೆ; ವರದಿ

- Advertisement -
- Advertisement -

ಯೆಮನ್‌ನಲ್ಲಿ ಮರಣದಂಡನೆ ಘೋಷಣೆಯಾಗಿರುವ ಕೇರಳದ ನರ್ಸ್ ನಿಮಿಷಾ ಪ್ರಿಯಾ ಅವರ ರಕ್ಷಣೆಗೆ ಕೊನೆಯ ಪ್ರಯತ್ನ ನಡೆದಿದೆ.

ಭಾರತದ ಗ್ರ್ಯಾಂಡ್ ಮುಫ್ತಿ ಎಪಿ ಅಬೂಬಕ್ಕರ್ ಮುಸ್ಲಿಯಾರ್ ಅವರ ಮಧ್ಯಪ್ರವೇಶದ ಬಳಿಕ ಯೆಮನ್‌ನಲ್ಲಿ ಸೋಮವಾರ ಮಹತ್ವದ ಸಭೆ ನಡೆದಿದೆ ಎಂದು ವರದಿಯಾಗಿದೆ.

ಜುಲೈ 16ರಂದು, ಅಂದರೆ ನಾಳೆ ನಿಮಿಷಾ ಪ್ರಿಯಾ ಅವರನ್ನು ಗಲ್ಲಿಗೇರಿಸಲು ದಿನಾಂಕ ನಿಗದಿಯಾಗಿದೆ. ಸೋಮವಾರ ಸುಪ್ರೀಂ ಕೋರ್ಟ್‌ಗೆ ಅಫಿಡವಿಟ್ ಸಲ್ಲಿಸಿರುವ ಕೇಂದ್ರ ಸರ್ಕಾರ, “ನಮ್ಮಿಂದ ಹೆಚ್ಚಿನದ್ದೇನೂ ಮಾಡಲು ಸಾಧ್ಯವಿಲ್ಲ” ಎಂದು ಹೇಳುವ ಮೂಲಕ ಕೈಚೆಲ್ಲಿದೆ.

ಈ ನಡುವೆ ಅಖಿಲ ಭಾರತ ಸುನ್ನೀ ಉಲಮಾ ಒಕ್ಕೂಟದ (ಸುನ್ನೀ ಮುಸ್ಲಿಂ ವಿದ್ವಾಂಸರ ಸಂಘಟನೆ) ಪ್ರಧಾನ ಕಾರ್ಯದರ್ಶಿ ಹಾಗೂ ಭಾರತದ ಗ್ರ್ಯಾಂಡ್ ಮುಫ್ತಿ (ಭಾರತೀಯ ಸುನ್ನೀ ಮುಸ್ಲಿಮರ ಪರಮೋನ್ನತ ನಾಯಕ) ಆಗಿರುವ ಎಪಿ ಅಬೂಬಕ್ಕರ್ ಮುಸ್ಲಿಯಾರ್ ಅಥವಾ ಎಪಿ ಉಸ್ತಾದರ ಮಧ್ಯಪ್ರವೇಶ ಆಶಾ ಭಾವನೆ ಮೂಡಿಸಿದೆ.

ಯೆಮನ್‌ನ ಪ್ರಸಿದ್ದ ಸೂಫಿ ಪಂಡಿತ ಹಬೀಬ್ ಉಮರ್ ಇಬ್ನ್ ಹಾಫಿಝ್ ಅವರ ಮೂಲಕ ಎಪಿ ಉಸ್ತಾದ್ ನಿಮಿಷಾ ಅವರನ್ನು ಮರಣದಂಡನೆಯಿಂದ ಪಾರು ಮಾಡಲು ಪ್ರಯತ್ನ ಮಾಡಿದ್ದಾರೆ ಎಂದು ಅವರ ಕಚೇರಿ ಹೇಳಿದೆ.

ಎಪಿ ಉಸ್ತಾದ್ ಅವರ ಮಧ್ಯಪ್ರವೇಶದ ಬಳಿಕ ಸೋಮವಾರ ಸಂಜೆ ಮೃತ ತಲಾಲ್ ಅಬ್ದೋ ಮಹ್ದಿ ಅವರ ಕುಟುಂಬದ ಜೊತೆ ಉತ್ತರ ಯೆಮೆನ್‌ನಲ್ಲಿ ಮಹತ್ವದ ಮಾತುಕತೆ ನಡೆದಿದೆ. ಈ ಮಾತುಕತೆಯಲ್ಲಿ ಹಬೀಬ್ ಉಮರ್ ಅವರ ಪ್ರತಿನಿಧಿ ಅಬ್ದುರಹ್ಮಾನ್ ಅಲೀ ಮಶ್ಹೂರ್, ಜಿನಾಯತ್ ನ್ಯಾಯಾಲಯದ ನ್ಯಾಯಾಧೀಶರು, ಬುಡಕಟ್ಟು ಮುಖಂಡರು ಮತ್ತು ಮೃತ ತಲಾಲ್ ಅವರ ಸಹೋದರ ಭಾಗವಹಿಸಿದ್ದಾರೆ ಎಂದು ವರದಿಗಳು ಹೇಳಿವೆ.

ನಿಮಿಷಾ ಅವರ ಮರಣದಂಡನೆಯನ್ನು ಯೆಮನ್‌ನ ಎಲ್ಲಾ ಹಂತದ ನ್ಯಾಯಾಲಯಗಳು ಎತ್ತಿ ಹಿಡಿದಿವೆ. ಈಗ ಉಳಿದಿರುವ ಆಯ್ಕೆ ಮೃತ ತಲಾಲ್ ಅವರ ಕುಟುಂಬ ರಕ್ತಧನ ಅಥವಾ ಬ್ಲಡ್ ಮನಿ ಪಡೆದು ಕ್ಷಮಾಧಾನ ನೀಡುವುದು ಮಾತ್ರವಾಗಿದೆ. ಯೆಮನ್‌ನ ಷರಿಯಾ ಕಾನೂನಿನ ಪ್ರಕಾರ, ಮೃತನ ಕುಟುಂಬ ಕ್ಷಮೆ ನೀಡಿದರೆ ಮಾತ್ರ ನಿಮಿಷಾ ಸಾವಿನ ದವಡೆಯಿಂದ ಪಾರಾಗಲಿದ್ದಾರೆ. ಆ ಪ್ರಯತ್ನವನ್ನು ಹಬೀಬ್ ಉಮರ್ ಅವರ ಮೂಲಕ ಎಪಿ ಉಸ್ತಾದ್ ಮಾಡುತ್ತಿದ್ದಾರೆ ಎನ್ನಲಾಗಿದೆ.

ಇಂದು (ಮಂಗಳವಾರ) ಮೃತನ ಕುಟುಂಬದ ಜೊತೆ ಮತ್ತೊಂದು ಸುತ್ತಿನ ಮಾತುಕತೆ ನಿಗದಿಯಾಗಿದೆ ಎಂದು ವರದಿಗಳು ಹೇಳಿವೆ. ಈ ಮಾತುಕತೆ ಬಳಿಕ ಸ್ಪಷ್ಟ ನಿರ್ಧಾರ ಹೊರ ಬೀಳುವ ಸಾಧ್ಯತೆ ಇದೆ. ಎಪಿ ಉಸ್ತಾದರ ಮಧ್ಯಸ್ಥಿಕೆ ಫಲ ಕಾಣಲಿ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಜನರು ಹಾರೈಸಿದ್ದಾರೆ.

ನಿಮಿಷಾ ಪ್ರಿಯಾ ಆಕ್ಷನ್ ಕಮಿಟಿ

ನಿಮಿಷಾ ಪ್ರಿಯಾ ಅವರನ್ನು ಜೀವಂತವಾಗಿ ಯೆಮನ್‌ನಿಂದ ಕರೆ ತರಲು 2020ರಲ್ಲಿ ‘ನಿಮಿಷಾ ಪ್ರಿಯಾ ಆಕ್ಷನ್ ಕಮಿಟಿ’ ರಚಿಸಲಾಗಿದೆ. ವಕೀಲರು, ಮಾನವ ಹಕ್ಕುಗಳ ಕಾರ್ಯಕರ್ತರು, ರಾಜಕೀಯ, ಸಾಮಾಜಿಕ ಮುಖಂಡರು ಈ ಕಮಿಟಿಯಲ್ಲಿ ಇದ್ದಾರೆ.

ಕೇರಳ ವಿಧಾನಸಭೆಯ ಸದಸ್ಯ, ಪಾಲಕ್ಕಾಡ್ ಜಿಲ್ಲೆಯ ನೆನ್ಮರ ಕ್ಷೇತ್ರದ ಶಾಸಕ ಕೆ.ಬಾಬು ನೇತೃತ್ವದ ಈ ಸಮಿತಿ, ಭಾರತ ಮೂಲದ ಯೆಮನ್‌ನ ಸಾಮಾಜಿಕ ಕಾರ್ಯಕರ್ತ ಸ್ಯಾಮ್ಯುಯೆಲ್ ಜೆರೋಮ್ ಭಾಸ್ಕರನ್ ಅವರ ಮೂಲಕ ನಿಮಿಷಾ ಪ್ರಿಯಾ ಅವರ ರಕ್ಷಣೆಗೆ ಪ್ರಯತ್ನಿಸುತ್ತಿದೆ.

ವರದಿಗಳ ಪ್ರಕಾರ, ಕಮಿಟಿಯು ಸುಮಾರು 40 ಸಾವಿರ ಡಾಲರ್ ಹಣವನ್ನು ಕ್ರೌಡ್ ಫಂಡಿಂಗ್ ಮೂಲಕ ಈಗಾಗಲೇ ಸಂಗ್ರಹಿಸಿದ್ದು, ಅದನ್ನು ಜೆರೋಮ್ ಸೇರಿದಂತೆ ಯೆಮನ್‌ನಲ್ಲಿರುವ ಮಧ್ಯವರ್ತಿಗಳಿಗೆ ಮುಂಗಡವಾಗಿ ಎರಡು ಕಂತುಗಳಲ್ಲಿ ಪಾವತಿಸಿದೆ. ಸುಮಾರು 1 ಮಿಲಿಯನ್ ಡಾಲರ್‌ವರೆಗೆ ಬ್ಲಡ್ ಮನಿಯನ್ನು ನೀಡಲು ಸಿದ್ದ ಎಂದು ಮೃತ ತಲಾಲ್ ಅವರ ಕುಟುಂಬಕ್ಕೆ ತಿಳಿಸಿದೆ. ಆದರೆ, ತಲಾಲ್ ಕುಟುಂಬಸ್ಥರು ಇದುವರೆಗೆ ಹಣ ಸ್ವೀಕರಿಸಿಲ್ಲ ಎನ್ನಲಾಗಿದೆ.

ಮೋದಿಗೆ ಕೇರಳ ಸಿಎಂ ಪತ್ರ

ನಿಮಿಷಾ ಪ್ರಿಯಾ ಪ್ರಕರಣದಲ್ಲಿ ತುರ್ತಾಗಿ ಮಧ್ಯಪ್ರವೇಶಿಸುವಂತೆ ಕೇರಳ ಸಿಎಂ ಪಿಣರಾಯಿ ವಿಜಯನ್ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸೋಮವಾರ ಮತ್ತೊಮ್ಮೆ ಪತ್ರ ಬರೆದು ಮನವಿ ಮಾಡಿದ್ದಾರೆ. ಆದರೆ, ಕೇಂದ್ರ ಸರ್ಕಾರ ಈಗಾಗಲೇ ಸುಪ್ರೀಂ ಕೋರ್ಟ್‌ನಲ್ಲಿ ಕೈ ಚೆಲ್ಲಿರುವುದರಿಂದ ಈ ವಿಷಯದಲ್ಲಿ ಯಾವುದೇ ಪ್ರಯತ್ನ ಮಾಡುವ ಸಾಧ್ಯತೆ ಇಲ್ಲ ಎನ್ನಲಾಗಿದೆ. ಅಲ್ಲದೆ, ಮರಣದಂಡನೆ ಜಾರಿಯಾಗಲು ಇನ್ನೇನು ಕೆಲವೇ ಗಂಟೆಗಳು ಬಾಕಿಯಿದೆ.

2017ರ ಜುಲೈನಲ್ಲಿ ಯೆಮನ್‌ ಪ್ರಜೆ ತಲಾಲ್ ಅಬ್ದೋ ಮಹ್ದಿ ಎಂಬಾತನನ್ನು ಹತ್ಯೆಗೈದ ಪ್ರಕರಣದಲ್ಲಿ ನಿಮಿಷಾ ಪ್ರಿಯಾ ಮರಣದಂಡನೆಗೆ ಗುರಿಯಾಗಿದ್ದಾರೆ. ಮೃತ ಅಬ್ದೋ ಮಹ್ದಿ ನಿಮಿಷಾ ಅವರ ಪಾಸ್‌ಪೋರ್ಟ್ ತನ್ನ ಬಳಿ ಇಟ್ಟುಕೊಂಡು ಕಿರುಕುಳ ನೀಡುತ್ತಿದ್ದ. ಇದರಿಂದ ಬೇಸತ್ತ ನಿಮಿಷಾ ಅವರು, ಆತನಿಗೆ ನಿದ್ರೆ ಬರುವ ಚುಚ್ಚುಮದ್ದನ್ನು ಚುಚ್ಚಿ ಪಾಸ್‌ಪೋರ್ಟ್ ತೆಗೆದುಕೊಳ್ಳುವ ಪ್ಲಾನ್ ಮಾಡಿದ್ದರು. ಆದರೆ ಚುಚ್ಚುಮದ್ದು ಓವರ್ ಡೋಸ್ ಆಗಿ ಅಬ್ದೋ ಮೃತಪಟ್ಟಿದ್ದ. ಈ ಪ್ರಕರಣದಲ್ಲಿ ಬಂಧಿತಾಗಿದ್ದ ನಿಮಿಷಾ ಅವರಿಗೆ ಯೆಮನ್ ನ್ಯಾಯಾಲಯ ಮರಣದಂಡನೆ ವಿಧಿಸಿದೆ. ಶಿಕ್ಷೆ ಜಾರಿಗೆ ಜುಲೈ 16ರಂದು ಸಮಯ ನಿಗದಿಯಾಗಿದೆ.

“ಸರ್ಕಾರ ಹೆಚ್ಚಿನದನ್ನೇನೂ ಮಾಡಲು ಸಾಧ್ಯವಿಲ್ಲ”: ನಿಮಿಷಾ ಪ್ರಿಯಾ ಮರಣದಂಡನೆ ಕುರಿತು ಸುಪ್ರೀಂ ಕೋರ್ಟ್‌ಗೆ ತಿಳಿಸಿದ ಕೇಂದ್ರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...