Homeಅಂತರಾಷ್ಟ್ರೀಯನಿಮಿಷಾ ಪ್ರಿಯಾ ಮರಣದಂಡನೆ: ಗ್ರ್ಯಾಂಡ್ ಮುಫ್ತಿ ಎಪಿ ಉಸ್ತಾದ್ ಮಧ್ಯಪ್ರವೇಶದ ಬಳಿಕ ಯೆಮನ್‌ನಲ್ಲಿ ಮಹತ್ವದ ಸಭೆ;...

ನಿಮಿಷಾ ಪ್ರಿಯಾ ಮರಣದಂಡನೆ: ಗ್ರ್ಯಾಂಡ್ ಮುಫ್ತಿ ಎಪಿ ಉಸ್ತಾದ್ ಮಧ್ಯಪ್ರವೇಶದ ಬಳಿಕ ಯೆಮನ್‌ನಲ್ಲಿ ಮಹತ್ವದ ಸಭೆ; ವರದಿ

- Advertisement -
- Advertisement -

ಯೆಮನ್‌ನಲ್ಲಿ ಮರಣದಂಡನೆ ಘೋಷಣೆಯಾಗಿರುವ ಕೇರಳದ ನರ್ಸ್ ನಿಮಿಷಾ ಪ್ರಿಯಾ ಅವರ ರಕ್ಷಣೆಗೆ ಕೊನೆಯ ಪ್ರಯತ್ನ ನಡೆದಿದೆ.

ಭಾರತದ ಗ್ರ್ಯಾಂಡ್ ಮುಫ್ತಿ ಎಪಿ ಅಬೂಬಕ್ಕರ್ ಮುಸ್ಲಿಯಾರ್ ಅವರ ಮಧ್ಯಪ್ರವೇಶದ ಬಳಿಕ ಯೆಮನ್‌ನಲ್ಲಿ ಸೋಮವಾರ ಮಹತ್ವದ ಸಭೆ ನಡೆದಿದೆ ಎಂದು ವರದಿಯಾಗಿದೆ.

ಜುಲೈ 16ರಂದು, ಅಂದರೆ ನಾಳೆ ನಿಮಿಷಾ ಪ್ರಿಯಾ ಅವರನ್ನು ಗಲ್ಲಿಗೇರಿಸಲು ದಿನಾಂಕ ನಿಗದಿಯಾಗಿದೆ. ಸೋಮವಾರ ಸುಪ್ರೀಂ ಕೋರ್ಟ್‌ಗೆ ಅಫಿಡವಿಟ್ ಸಲ್ಲಿಸಿರುವ ಕೇಂದ್ರ ಸರ್ಕಾರ, “ನಮ್ಮಿಂದ ಹೆಚ್ಚಿನದ್ದೇನೂ ಮಾಡಲು ಸಾಧ್ಯವಿಲ್ಲ” ಎಂದು ಹೇಳುವ ಮೂಲಕ ಕೈಚೆಲ್ಲಿದೆ.

ಈ ನಡುವೆ ಅಖಿಲ ಭಾರತ ಸುನ್ನೀ ಉಲಮಾ ಒಕ್ಕೂಟದ (ಸುನ್ನೀ ಮುಸ್ಲಿಂ ವಿದ್ವಾಂಸರ ಸಂಘಟನೆ) ಪ್ರಧಾನ ಕಾರ್ಯದರ್ಶಿ ಹಾಗೂ ಭಾರತದ ಗ್ರ್ಯಾಂಡ್ ಮುಫ್ತಿ (ಭಾರತೀಯ ಸುನ್ನೀ ಮುಸ್ಲಿಮರ ಪರಮೋನ್ನತ ನಾಯಕ) ಆಗಿರುವ ಎಪಿ ಅಬೂಬಕ್ಕರ್ ಮುಸ್ಲಿಯಾರ್ ಅಥವಾ ಎಪಿ ಉಸ್ತಾದರ ಮಧ್ಯಪ್ರವೇಶ ಆಶಾ ಭಾವನೆ ಮೂಡಿಸಿದೆ.

ಯೆಮನ್‌ನ ಪ್ರಸಿದ್ದ ಸೂಫಿ ಪಂಡಿತ ಹಬೀಬ್ ಉಮರ್ ಇಬ್ನ್ ಹಾಫಿಝ್ ಅವರ ಮೂಲಕ ಎಪಿ ಉಸ್ತಾದ್ ನಿಮಿಷಾ ಅವರನ್ನು ಮರಣದಂಡನೆಯಿಂದ ಪಾರು ಮಾಡಲು ಪ್ರಯತ್ನ ಮಾಡಿದ್ದಾರೆ ಎಂದು ಅವರ ಕಚೇರಿ ಹೇಳಿದೆ.

ಎಪಿ ಉಸ್ತಾದ್ ಅವರ ಮಧ್ಯಪ್ರವೇಶದ ಬಳಿಕ ಸೋಮವಾರ ಸಂಜೆ ಮೃತ ತಲಾಲ್ ಅಬ್ದೋ ಮಹ್ದಿ ಅವರ ಕುಟುಂಬದ ಜೊತೆ ಉತ್ತರ ಯೆಮೆನ್‌ನಲ್ಲಿ ಮಹತ್ವದ ಮಾತುಕತೆ ನಡೆದಿದೆ. ಈ ಮಾತುಕತೆಯಲ್ಲಿ ಹಬೀಬ್ ಉಮರ್ ಅವರ ಪ್ರತಿನಿಧಿ ಅಬ್ದುರಹ್ಮಾನ್ ಅಲೀ ಮಶ್ಹೂರ್, ಜಿನಾಯತ್ ನ್ಯಾಯಾಲಯದ ನ್ಯಾಯಾಧೀಶರು, ಬುಡಕಟ್ಟು ಮುಖಂಡರು ಮತ್ತು ಮೃತ ತಲಾಲ್ ಅವರ ಸಹೋದರ ಭಾಗವಹಿಸಿದ್ದಾರೆ ಎಂದು ವರದಿಗಳು ಹೇಳಿವೆ.

ನಿಮಿಷಾ ಅವರ ಮರಣದಂಡನೆಯನ್ನು ಯೆಮನ್‌ನ ಎಲ್ಲಾ ಹಂತದ ನ್ಯಾಯಾಲಯಗಳು ಎತ್ತಿ ಹಿಡಿದಿವೆ. ಈಗ ಉಳಿದಿರುವ ಆಯ್ಕೆ ಮೃತ ತಲಾಲ್ ಅವರ ಕುಟುಂಬ ರಕ್ತಧನ ಅಥವಾ ಬ್ಲಡ್ ಮನಿ ಪಡೆದು ಕ್ಷಮಾಧಾನ ನೀಡುವುದು ಮಾತ್ರವಾಗಿದೆ. ಯೆಮನ್‌ನ ಷರಿಯಾ ಕಾನೂನಿನ ಪ್ರಕಾರ, ಮೃತನ ಕುಟುಂಬ ಕ್ಷಮೆ ನೀಡಿದರೆ ಮಾತ್ರ ನಿಮಿಷಾ ಸಾವಿನ ದವಡೆಯಿಂದ ಪಾರಾಗಲಿದ್ದಾರೆ. ಆ ಪ್ರಯತ್ನವನ್ನು ಹಬೀಬ್ ಉಮರ್ ಅವರ ಮೂಲಕ ಎಪಿ ಉಸ್ತಾದ್ ಮಾಡುತ್ತಿದ್ದಾರೆ ಎನ್ನಲಾಗಿದೆ.

ಇಂದು (ಮಂಗಳವಾರ) ಮೃತನ ಕುಟುಂಬದ ಜೊತೆ ಮತ್ತೊಂದು ಸುತ್ತಿನ ಮಾತುಕತೆ ನಿಗದಿಯಾಗಿದೆ ಎಂದು ವರದಿಗಳು ಹೇಳಿವೆ. ಈ ಮಾತುಕತೆ ಬಳಿಕ ಸ್ಪಷ್ಟ ನಿರ್ಧಾರ ಹೊರ ಬೀಳುವ ಸಾಧ್ಯತೆ ಇದೆ. ಎಪಿ ಉಸ್ತಾದರ ಮಧ್ಯಸ್ಥಿಕೆ ಫಲ ಕಾಣಲಿ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಜನರು ಹಾರೈಸಿದ್ದಾರೆ.

ನಿಮಿಷಾ ಪ್ರಿಯಾ ಆಕ್ಷನ್ ಕಮಿಟಿ

ನಿಮಿಷಾ ಪ್ರಿಯಾ ಅವರನ್ನು ಜೀವಂತವಾಗಿ ಯೆಮನ್‌ನಿಂದ ಕರೆ ತರಲು 2020ರಲ್ಲಿ ‘ನಿಮಿಷಾ ಪ್ರಿಯಾ ಆಕ್ಷನ್ ಕಮಿಟಿ’ ರಚಿಸಲಾಗಿದೆ. ವಕೀಲರು, ಮಾನವ ಹಕ್ಕುಗಳ ಕಾರ್ಯಕರ್ತರು, ರಾಜಕೀಯ, ಸಾಮಾಜಿಕ ಮುಖಂಡರು ಈ ಕಮಿಟಿಯಲ್ಲಿ ಇದ್ದಾರೆ.

ಕೇರಳ ವಿಧಾನಸಭೆಯ ಸದಸ್ಯ, ಪಾಲಕ್ಕಾಡ್ ಜಿಲ್ಲೆಯ ನೆನ್ಮರ ಕ್ಷೇತ್ರದ ಶಾಸಕ ಕೆ.ಬಾಬು ನೇತೃತ್ವದ ಈ ಸಮಿತಿ, ಭಾರತ ಮೂಲದ ಯೆಮನ್‌ನ ಸಾಮಾಜಿಕ ಕಾರ್ಯಕರ್ತ ಸ್ಯಾಮ್ಯುಯೆಲ್ ಜೆರೋಮ್ ಭಾಸ್ಕರನ್ ಅವರ ಮೂಲಕ ನಿಮಿಷಾ ಪ್ರಿಯಾ ಅವರ ರಕ್ಷಣೆಗೆ ಪ್ರಯತ್ನಿಸುತ್ತಿದೆ.

ವರದಿಗಳ ಪ್ರಕಾರ, ಕಮಿಟಿಯು ಸುಮಾರು 40 ಸಾವಿರ ಡಾಲರ್ ಹಣವನ್ನು ಕ್ರೌಡ್ ಫಂಡಿಂಗ್ ಮೂಲಕ ಈಗಾಗಲೇ ಸಂಗ್ರಹಿಸಿದ್ದು, ಅದನ್ನು ಜೆರೋಮ್ ಸೇರಿದಂತೆ ಯೆಮನ್‌ನಲ್ಲಿರುವ ಮಧ್ಯವರ್ತಿಗಳಿಗೆ ಮುಂಗಡವಾಗಿ ಎರಡು ಕಂತುಗಳಲ್ಲಿ ಪಾವತಿಸಿದೆ. ಸುಮಾರು 1 ಮಿಲಿಯನ್ ಡಾಲರ್‌ವರೆಗೆ ಬ್ಲಡ್ ಮನಿಯನ್ನು ನೀಡಲು ಸಿದ್ದ ಎಂದು ಮೃತ ತಲಾಲ್ ಅವರ ಕುಟುಂಬಕ್ಕೆ ತಿಳಿಸಿದೆ. ಆದರೆ, ತಲಾಲ್ ಕುಟುಂಬಸ್ಥರು ಇದುವರೆಗೆ ಹಣ ಸ್ವೀಕರಿಸಿಲ್ಲ ಎನ್ನಲಾಗಿದೆ.

ಮೋದಿಗೆ ಕೇರಳ ಸಿಎಂ ಪತ್ರ

ನಿಮಿಷಾ ಪ್ರಿಯಾ ಪ್ರಕರಣದಲ್ಲಿ ತುರ್ತಾಗಿ ಮಧ್ಯಪ್ರವೇಶಿಸುವಂತೆ ಕೇರಳ ಸಿಎಂ ಪಿಣರಾಯಿ ವಿಜಯನ್ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸೋಮವಾರ ಮತ್ತೊಮ್ಮೆ ಪತ್ರ ಬರೆದು ಮನವಿ ಮಾಡಿದ್ದಾರೆ. ಆದರೆ, ಕೇಂದ್ರ ಸರ್ಕಾರ ಈಗಾಗಲೇ ಸುಪ್ರೀಂ ಕೋರ್ಟ್‌ನಲ್ಲಿ ಕೈ ಚೆಲ್ಲಿರುವುದರಿಂದ ಈ ವಿಷಯದಲ್ಲಿ ಯಾವುದೇ ಪ್ರಯತ್ನ ಮಾಡುವ ಸಾಧ್ಯತೆ ಇಲ್ಲ ಎನ್ನಲಾಗಿದೆ. ಅಲ್ಲದೆ, ಮರಣದಂಡನೆ ಜಾರಿಯಾಗಲು ಇನ್ನೇನು ಕೆಲವೇ ಗಂಟೆಗಳು ಬಾಕಿಯಿದೆ.

2017ರ ಜುಲೈನಲ್ಲಿ ಯೆಮನ್‌ ಪ್ರಜೆ ತಲಾಲ್ ಅಬ್ದೋ ಮಹ್ದಿ ಎಂಬಾತನನ್ನು ಹತ್ಯೆಗೈದ ಪ್ರಕರಣದಲ್ಲಿ ನಿಮಿಷಾ ಪ್ರಿಯಾ ಮರಣದಂಡನೆಗೆ ಗುರಿಯಾಗಿದ್ದಾರೆ. ಮೃತ ಅಬ್ದೋ ಮಹ್ದಿ ನಿಮಿಷಾ ಅವರ ಪಾಸ್‌ಪೋರ್ಟ್ ತನ್ನ ಬಳಿ ಇಟ್ಟುಕೊಂಡು ಕಿರುಕುಳ ನೀಡುತ್ತಿದ್ದ. ಇದರಿಂದ ಬೇಸತ್ತ ನಿಮಿಷಾ ಅವರು, ಆತನಿಗೆ ನಿದ್ರೆ ಬರುವ ಚುಚ್ಚುಮದ್ದನ್ನು ಚುಚ್ಚಿ ಪಾಸ್‌ಪೋರ್ಟ್ ತೆಗೆದುಕೊಳ್ಳುವ ಪ್ಲಾನ್ ಮಾಡಿದ್ದರು. ಆದರೆ ಚುಚ್ಚುಮದ್ದು ಓವರ್ ಡೋಸ್ ಆಗಿ ಅಬ್ದೋ ಮೃತಪಟ್ಟಿದ್ದ. ಈ ಪ್ರಕರಣದಲ್ಲಿ ಬಂಧಿತಾಗಿದ್ದ ನಿಮಿಷಾ ಅವರಿಗೆ ಯೆಮನ್ ನ್ಯಾಯಾಲಯ ಮರಣದಂಡನೆ ವಿಧಿಸಿದೆ. ಶಿಕ್ಷೆ ಜಾರಿಗೆ ಜುಲೈ 16ರಂದು ಸಮಯ ನಿಗದಿಯಾಗಿದೆ.

“ಸರ್ಕಾರ ಹೆಚ್ಚಿನದನ್ನೇನೂ ಮಾಡಲು ಸಾಧ್ಯವಿಲ್ಲ”: ನಿಮಿಷಾ ಪ್ರಿಯಾ ಮರಣದಂಡನೆ ಕುರಿತು ಸುಪ್ರೀಂ ಕೋರ್ಟ್‌ಗೆ ತಿಳಿಸಿದ ಕೇಂದ್ರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...

13 ವರ್ಷಗಳಿಂದ ಕೋಮಾದಲ್ಲಿರುವ ಯುವಕನ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ. ದೆಹಲಿ ಮೂಲದ ಹರೀಶ್...