Homeಅಂತರಾಷ್ಟ್ರೀಯನಿಮಿಷಾ ಪ್ರಿಯಾ ಮರಣದಂಡನೆ: ಗ್ರ್ಯಾಂಡ್ ಮುಫ್ತಿ ಎಪಿ ಉಸ್ತಾದ್ ಮಧ್ಯಪ್ರವೇಶದ ಬಳಿಕ ಯೆಮನ್‌ನಲ್ಲಿ ಮಹತ್ವದ ಸಭೆ;...

ನಿಮಿಷಾ ಪ್ರಿಯಾ ಮರಣದಂಡನೆ: ಗ್ರ್ಯಾಂಡ್ ಮುಫ್ತಿ ಎಪಿ ಉಸ್ತಾದ್ ಮಧ್ಯಪ್ರವೇಶದ ಬಳಿಕ ಯೆಮನ್‌ನಲ್ಲಿ ಮಹತ್ವದ ಸಭೆ; ವರದಿ

- Advertisement -
- Advertisement -

ಯೆಮನ್‌ನಲ್ಲಿ ಮರಣದಂಡನೆ ಘೋಷಣೆಯಾಗಿರುವ ಕೇರಳದ ನರ್ಸ್ ನಿಮಿಷಾ ಪ್ರಿಯಾ ಅವರ ರಕ್ಷಣೆಗೆ ಕೊನೆಯ ಪ್ರಯತ್ನ ನಡೆದಿದೆ.

ಭಾರತದ ಗ್ರ್ಯಾಂಡ್ ಮುಫ್ತಿ ಎಪಿ ಅಬೂಬಕ್ಕರ್ ಮುಸ್ಲಿಯಾರ್ ಅವರ ಮಧ್ಯಪ್ರವೇಶದ ಬಳಿಕ ಯೆಮನ್‌ನಲ್ಲಿ ಸೋಮವಾರ ಮಹತ್ವದ ಸಭೆ ನಡೆದಿದೆ ಎಂದು ವರದಿಯಾಗಿದೆ.

ಜುಲೈ 16ರಂದು, ಅಂದರೆ ನಾಳೆ ನಿಮಿಷಾ ಪ್ರಿಯಾ ಅವರನ್ನು ಗಲ್ಲಿಗೇರಿಸಲು ದಿನಾಂಕ ನಿಗದಿಯಾಗಿದೆ. ಸೋಮವಾರ ಸುಪ್ರೀಂ ಕೋರ್ಟ್‌ಗೆ ಅಫಿಡವಿಟ್ ಸಲ್ಲಿಸಿರುವ ಕೇಂದ್ರ ಸರ್ಕಾರ, “ನಮ್ಮಿಂದ ಹೆಚ್ಚಿನದ್ದೇನೂ ಮಾಡಲು ಸಾಧ್ಯವಿಲ್ಲ” ಎಂದು ಹೇಳುವ ಮೂಲಕ ಕೈಚೆಲ್ಲಿದೆ.

ಈ ನಡುವೆ ಅಖಿಲ ಭಾರತ ಸುನ್ನೀ ಉಲಮಾ ಒಕ್ಕೂಟದ (ಸುನ್ನೀ ಮುಸ್ಲಿಂ ವಿದ್ವಾಂಸರ ಸಂಘಟನೆ) ಪ್ರಧಾನ ಕಾರ್ಯದರ್ಶಿ ಹಾಗೂ ಭಾರತದ ಗ್ರ್ಯಾಂಡ್ ಮುಫ್ತಿ (ಭಾರತೀಯ ಸುನ್ನೀ ಮುಸ್ಲಿಮರ ಪರಮೋನ್ನತ ನಾಯಕ) ಆಗಿರುವ ಎಪಿ ಅಬೂಬಕ್ಕರ್ ಮುಸ್ಲಿಯಾರ್ ಅಥವಾ ಎಪಿ ಉಸ್ತಾದರ ಮಧ್ಯಪ್ರವೇಶ ಆಶಾ ಭಾವನೆ ಮೂಡಿಸಿದೆ.

ಯೆಮನ್‌ನ ಪ್ರಸಿದ್ದ ಸೂಫಿ ಪಂಡಿತ ಹಬೀಬ್ ಉಮರ್ ಇಬ್ನ್ ಹಾಫಿಝ್ ಅವರ ಮೂಲಕ ಎಪಿ ಉಸ್ತಾದ್ ನಿಮಿಷಾ ಅವರನ್ನು ಮರಣದಂಡನೆಯಿಂದ ಪಾರು ಮಾಡಲು ಪ್ರಯತ್ನ ಮಾಡಿದ್ದಾರೆ ಎಂದು ಅವರ ಕಚೇರಿ ಹೇಳಿದೆ.

ಎಪಿ ಉಸ್ತಾದ್ ಅವರ ಮಧ್ಯಪ್ರವೇಶದ ಬಳಿಕ ಸೋಮವಾರ ಸಂಜೆ ಮೃತ ತಲಾಲ್ ಅಬ್ದೋ ಮಹ್ದಿ ಅವರ ಕುಟುಂಬದ ಜೊತೆ ಉತ್ತರ ಯೆಮೆನ್‌ನಲ್ಲಿ ಮಹತ್ವದ ಮಾತುಕತೆ ನಡೆದಿದೆ. ಈ ಮಾತುಕತೆಯಲ್ಲಿ ಹಬೀಬ್ ಉಮರ್ ಅವರ ಪ್ರತಿನಿಧಿ ಅಬ್ದುರಹ್ಮಾನ್ ಅಲೀ ಮಶ್ಹೂರ್, ಜಿನಾಯತ್ ನ್ಯಾಯಾಲಯದ ನ್ಯಾಯಾಧೀಶರು, ಬುಡಕಟ್ಟು ಮುಖಂಡರು ಮತ್ತು ಮೃತ ತಲಾಲ್ ಅವರ ಸಹೋದರ ಭಾಗವಹಿಸಿದ್ದಾರೆ ಎಂದು ವರದಿಗಳು ಹೇಳಿವೆ.

ನಿಮಿಷಾ ಅವರ ಮರಣದಂಡನೆಯನ್ನು ಯೆಮನ್‌ನ ಎಲ್ಲಾ ಹಂತದ ನ್ಯಾಯಾಲಯಗಳು ಎತ್ತಿ ಹಿಡಿದಿವೆ. ಈಗ ಉಳಿದಿರುವ ಆಯ್ಕೆ ಮೃತ ತಲಾಲ್ ಅವರ ಕುಟುಂಬ ರಕ್ತಧನ ಅಥವಾ ಬ್ಲಡ್ ಮನಿ ಪಡೆದು ಕ್ಷಮಾಧಾನ ನೀಡುವುದು ಮಾತ್ರವಾಗಿದೆ. ಯೆಮನ್‌ನ ಷರಿಯಾ ಕಾನೂನಿನ ಪ್ರಕಾರ, ಮೃತನ ಕುಟುಂಬ ಕ್ಷಮೆ ನೀಡಿದರೆ ಮಾತ್ರ ನಿಮಿಷಾ ಸಾವಿನ ದವಡೆಯಿಂದ ಪಾರಾಗಲಿದ್ದಾರೆ. ಆ ಪ್ರಯತ್ನವನ್ನು ಹಬೀಬ್ ಉಮರ್ ಅವರ ಮೂಲಕ ಎಪಿ ಉಸ್ತಾದ್ ಮಾಡುತ್ತಿದ್ದಾರೆ ಎನ್ನಲಾಗಿದೆ.

ಇಂದು (ಮಂಗಳವಾರ) ಮೃತನ ಕುಟುಂಬದ ಜೊತೆ ಮತ್ತೊಂದು ಸುತ್ತಿನ ಮಾತುಕತೆ ನಿಗದಿಯಾಗಿದೆ ಎಂದು ವರದಿಗಳು ಹೇಳಿವೆ. ಈ ಮಾತುಕತೆ ಬಳಿಕ ಸ್ಪಷ್ಟ ನಿರ್ಧಾರ ಹೊರ ಬೀಳುವ ಸಾಧ್ಯತೆ ಇದೆ. ಎಪಿ ಉಸ್ತಾದರ ಮಧ್ಯಸ್ಥಿಕೆ ಫಲ ಕಾಣಲಿ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಜನರು ಹಾರೈಸಿದ್ದಾರೆ.

ನಿಮಿಷಾ ಪ್ರಿಯಾ ಆಕ್ಷನ್ ಕಮಿಟಿ

ನಿಮಿಷಾ ಪ್ರಿಯಾ ಅವರನ್ನು ಜೀವಂತವಾಗಿ ಯೆಮನ್‌ನಿಂದ ಕರೆ ತರಲು 2020ರಲ್ಲಿ ‘ನಿಮಿಷಾ ಪ್ರಿಯಾ ಆಕ್ಷನ್ ಕಮಿಟಿ’ ರಚಿಸಲಾಗಿದೆ. ವಕೀಲರು, ಮಾನವ ಹಕ್ಕುಗಳ ಕಾರ್ಯಕರ್ತರು, ರಾಜಕೀಯ, ಸಾಮಾಜಿಕ ಮುಖಂಡರು ಈ ಕಮಿಟಿಯಲ್ಲಿ ಇದ್ದಾರೆ.

ಕೇರಳ ವಿಧಾನಸಭೆಯ ಸದಸ್ಯ, ಪಾಲಕ್ಕಾಡ್ ಜಿಲ್ಲೆಯ ನೆನ್ಮರ ಕ್ಷೇತ್ರದ ಶಾಸಕ ಕೆ.ಬಾಬು ನೇತೃತ್ವದ ಈ ಸಮಿತಿ, ಭಾರತ ಮೂಲದ ಯೆಮನ್‌ನ ಸಾಮಾಜಿಕ ಕಾರ್ಯಕರ್ತ ಸ್ಯಾಮ್ಯುಯೆಲ್ ಜೆರೋಮ್ ಭಾಸ್ಕರನ್ ಅವರ ಮೂಲಕ ನಿಮಿಷಾ ಪ್ರಿಯಾ ಅವರ ರಕ್ಷಣೆಗೆ ಪ್ರಯತ್ನಿಸುತ್ತಿದೆ.

ವರದಿಗಳ ಪ್ರಕಾರ, ಕಮಿಟಿಯು ಸುಮಾರು 40 ಸಾವಿರ ಡಾಲರ್ ಹಣವನ್ನು ಕ್ರೌಡ್ ಫಂಡಿಂಗ್ ಮೂಲಕ ಈಗಾಗಲೇ ಸಂಗ್ರಹಿಸಿದ್ದು, ಅದನ್ನು ಜೆರೋಮ್ ಸೇರಿದಂತೆ ಯೆಮನ್‌ನಲ್ಲಿರುವ ಮಧ್ಯವರ್ತಿಗಳಿಗೆ ಮುಂಗಡವಾಗಿ ಎರಡು ಕಂತುಗಳಲ್ಲಿ ಪಾವತಿಸಿದೆ. ಸುಮಾರು 1 ಮಿಲಿಯನ್ ಡಾಲರ್‌ವರೆಗೆ ಬ್ಲಡ್ ಮನಿಯನ್ನು ನೀಡಲು ಸಿದ್ದ ಎಂದು ಮೃತ ತಲಾಲ್ ಅವರ ಕುಟುಂಬಕ್ಕೆ ತಿಳಿಸಿದೆ. ಆದರೆ, ತಲಾಲ್ ಕುಟುಂಬಸ್ಥರು ಇದುವರೆಗೆ ಹಣ ಸ್ವೀಕರಿಸಿಲ್ಲ ಎನ್ನಲಾಗಿದೆ.

ಮೋದಿಗೆ ಕೇರಳ ಸಿಎಂ ಪತ್ರ

ನಿಮಿಷಾ ಪ್ರಿಯಾ ಪ್ರಕರಣದಲ್ಲಿ ತುರ್ತಾಗಿ ಮಧ್ಯಪ್ರವೇಶಿಸುವಂತೆ ಕೇರಳ ಸಿಎಂ ಪಿಣರಾಯಿ ವಿಜಯನ್ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸೋಮವಾರ ಮತ್ತೊಮ್ಮೆ ಪತ್ರ ಬರೆದು ಮನವಿ ಮಾಡಿದ್ದಾರೆ. ಆದರೆ, ಕೇಂದ್ರ ಸರ್ಕಾರ ಈಗಾಗಲೇ ಸುಪ್ರೀಂ ಕೋರ್ಟ್‌ನಲ್ಲಿ ಕೈ ಚೆಲ್ಲಿರುವುದರಿಂದ ಈ ವಿಷಯದಲ್ಲಿ ಯಾವುದೇ ಪ್ರಯತ್ನ ಮಾಡುವ ಸಾಧ್ಯತೆ ಇಲ್ಲ ಎನ್ನಲಾಗಿದೆ. ಅಲ್ಲದೆ, ಮರಣದಂಡನೆ ಜಾರಿಯಾಗಲು ಇನ್ನೇನು ಕೆಲವೇ ಗಂಟೆಗಳು ಬಾಕಿಯಿದೆ.

2017ರ ಜುಲೈನಲ್ಲಿ ಯೆಮನ್‌ ಪ್ರಜೆ ತಲಾಲ್ ಅಬ್ದೋ ಮಹ್ದಿ ಎಂಬಾತನನ್ನು ಹತ್ಯೆಗೈದ ಪ್ರಕರಣದಲ್ಲಿ ನಿಮಿಷಾ ಪ್ರಿಯಾ ಮರಣದಂಡನೆಗೆ ಗುರಿಯಾಗಿದ್ದಾರೆ. ಮೃತ ಅಬ್ದೋ ಮಹ್ದಿ ನಿಮಿಷಾ ಅವರ ಪಾಸ್‌ಪೋರ್ಟ್ ತನ್ನ ಬಳಿ ಇಟ್ಟುಕೊಂಡು ಕಿರುಕುಳ ನೀಡುತ್ತಿದ್ದ. ಇದರಿಂದ ಬೇಸತ್ತ ನಿಮಿಷಾ ಅವರು, ಆತನಿಗೆ ನಿದ್ರೆ ಬರುವ ಚುಚ್ಚುಮದ್ದನ್ನು ಚುಚ್ಚಿ ಪಾಸ್‌ಪೋರ್ಟ್ ತೆಗೆದುಕೊಳ್ಳುವ ಪ್ಲಾನ್ ಮಾಡಿದ್ದರು. ಆದರೆ ಚುಚ್ಚುಮದ್ದು ಓವರ್ ಡೋಸ್ ಆಗಿ ಅಬ್ದೋ ಮೃತಪಟ್ಟಿದ್ದ. ಈ ಪ್ರಕರಣದಲ್ಲಿ ಬಂಧಿತಾಗಿದ್ದ ನಿಮಿಷಾ ಅವರಿಗೆ ಯೆಮನ್ ನ್ಯಾಯಾಲಯ ಮರಣದಂಡನೆ ವಿಧಿಸಿದೆ. ಶಿಕ್ಷೆ ಜಾರಿಗೆ ಜುಲೈ 16ರಂದು ಸಮಯ ನಿಗದಿಯಾಗಿದೆ.

“ಸರ್ಕಾರ ಹೆಚ್ಚಿನದನ್ನೇನೂ ಮಾಡಲು ಸಾಧ್ಯವಿಲ್ಲ”: ನಿಮಿಷಾ ಪ್ರಿಯಾ ಮರಣದಂಡನೆ ಕುರಿತು ಸುಪ್ರೀಂ ಕೋರ್ಟ್‌ಗೆ ತಿಳಿಸಿದ ಕೇಂದ್ರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸತೀಶ್‌ ಜಾರಕಿಹೊಳಿ ಮೇಲಿನ ಇಡಿ ದಾಳಿಯನ್ನು ‘ಚಾರಿತ್ರ್ಯ ಹರಣ’ ಎಂದ ವಿಜಯ್ ಮಲ್ಯ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯವು (ಇಡಿ) ನಡೆಸಿದ ದಾಳಿಯನ್ನು ಮಾಜಿ ಸಂಸದ ಮತ್ತು ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಸಾರ್ವಜನಿಕವಾಗಿ ಚಾರಿತ್ರ್ಯ...

ಒಗ್ಗಟ್ಟಿನ ಮಾತುಗಳಷ್ಟೇ ಸಾಲದು, ಕೃತಿಯಲ್ಲಿರಲಿ ದಿಟ್ಟತನ : ಬ್ರಿಕ್ಸ್ ವಿಚಾರದಲ್ಲಿ ಕೇಂದ್ರಕ್ಕೆ ಕಾಂಗ್ರೆಸ್ ಚಾಟಿ

ಜಾಗತಿಕ ಮಟ್ಟದಲ್ಲಿ ಬ್ರಿಕ್ಸ್ (BRICS) ಒಕ್ಕೂಟದ ಪ್ರಭಾವ ಹೆಚ್ಚುತ್ತಿರುವುದನ್ನು ಸ್ವಾಗತಿಸಿರುವ ಕಾಂಗ್ರೆಸ್, ಈ ಒಕ್ಕೂಟದ ಅಧ್ಯಕ್ಷತೆಯನ್ನು ವಹಿಸಿರುವ ಭಾರತವು ‘ಗ್ಲೋಬಲ್ ಸೌತ್’ (Global South) ರಾಷ್ಟ್ರಗಳ ನಡುವೆ ತನ್ನ ರಾಜತಾಂತ್ರಿಕ ಸ್ಥಾನಮಾನವನ್ನು ಮರುಸ್ಥಾಪಿಸಲು...

9/11 ರ ಹಿಂದಿನ ದಾಳಿಯನ್ನು ಇರಾನ್ ಜೊತೆಗಿನ ಇಂದಿನ ಯುದ್ಧಕ್ಕೆ ಜೋಡಿಸಿದ ಡೊನಾಲ್ಡ್‌ ಟ್ರಂಪ್

"ಸೆಪ್ಟೆಂಬರ್ 11, 2001 ರ ದಾಳಿಯನ್ನು ಯುನೈಟೆಡ್ ಸ್ಟೇಟ್ಸ್ ಎಂದಿಗೂ ಮರೆಯುವುದಿಲ್ಲ. 25 ವರ್ಷಗಳ ನಂತರವೂ ಇರಾನ್ ಮೇಲೆ ದಾಳಿ ಮಾಡುವ ಮೂಲಕ ದೇಶವು ಭಯೋತ್ಪಾದನೆ ವಿರುದ್ಧದ ಯುದ್ಧವನ್ನು ಮುಂದುವರೆಸಿದೆ" ಎಂದು ಅಧ್ಯಕ್ಷ...

SIR ನೋಟಿಸ್ ಮತ್ತು ವಿಚಾರಣೆಯಲ್ಲಿ ಅಕ್ರಮ : ಚು. ಆಯೋಗದ ವಿರುದ್ಧ ನಾಗರಿಕ ಸಂಘಟನೆಗಳಿಂದ 2ನೇ ಎಫ್‌ಐಆರ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ, ಆಗಸ್ಟ್ 24ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದ ಕರಡು ಮತದಾರರ ಪಟ್ಟಿಯನ್ನು ತಿರಸ್ಕರಿಸಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ...

‘ಕೊಂಕಣಿ – ಮಾಲ್ವಣಿ ಸಮುದಾಯಗಳು ಹಿಂದುತ್ವದ ಬೆಂಬಲಿಗರು..’; ಮಹಾರಾಷ್ಟ್ರ ಬಿಜೆಪಿ ನಾಯಕ ಅಮೀತ್ ಸತಮ್

ಮುಂಬೈನಲ್ಲಿ ವಾಸಿಸುತ್ತಿರುವ ಕೊಂಕಣಿ ಮತ್ತು ಮಾಲ್ವಣಿ ಸಮುದಾಯಗಳು ಸೇರಿದಂತೆ ಕೊಂಕಣ ಪ್ರದೇಶದ ಜನರು ಹಿಂದುತ್ವವನ್ನು ಬೆಂಬಲಿಸುತ್ತಾರೆ ಎಂದು ಬಿಜೆಪಿ ನಾಯಕ ಅಮೀತ್ ಸತಮ್ ಹೇಳಿದ್ದಾರೆ. ಮಹಾರಾಷ್ಟ್ರದ ಕೊಂಕಣ ಪ್ರದೇಶದ ಸಾವಂತವಾಡಿಗೆ ಗಣಪತಿ ಭಕ್ತರಿಗಾಗಿ ಛತ್ರಪತಿ...

SIR! ಸಾಮಾನ್ಯರಿಗೆ ಸಂಕಷ್ಟ; ಗಣ್ಯರಿಗೆ ಮನೆ ಬಾಗಿಲಲ್ಲೇ ಸೇವೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಕರ್ನಾಟಕದಲ್ಲಿ ಮುಂದುವರೆದಿರುವ ನಡುವೆಯೇ, ಅದರ ಜಾರಿಯಲ್ಲಿ ಸಾಮಾನ್ಯ ಮತದಾರರು ಮತ್ತು ಪ್ರಭಾವಿ ವ್ಯಕ್ತಿಗಳ ಅನುಭವದ ನಡುವಿನ ವ್ಯತ್ಯಾಸದ ಕುರಿತು ಪ್ರಶ್ನೆಗಳು ಎದ್ದಿವೆ. ಮತದಾರರ ಪಟ್ಟಿಯಲ್ಲಿನ...

ದಲಿತ ಬಾಲಕಿ ನಿಶು ಆಜಾದ್ ಕುಟುಂಬಕ್ಕೆ ನಿಲ್ಲದ ಕಿರುಕುಳ; ಅಸಭ್ಯ ಭಾಷೆ – ಬೆದರಿಕೆ ಸಂದೇಶ ರವಾನೆ

ಸಿಜೆಪಿ ಪ್ರತಿಭಟನೆಯಲ್ಲಿ ಗಮನ ಸೆಳೆದಿದ್ದ ಹದಿನಾಲ್ಕು ವರ್ಷ ವಯಸ್ಸಿನ ದಲಿತ ಸಮುದಾಯದ ಕಂಟೆಂಟ್ ಕ್ರಿಯೇಟರ್ ನಿಶು ಆಜಾದ್ ಮತ್ತು ಅವರ ಕುಟುಂಬಕ್ಕೆ ಮೊಬೈಲ್‌ ಫೋನ್‌ ಮೂಲಕ ನಿರಂತರ ಕಿರುಕುಳ ಸಂದೇಶ ಬರುತ್ತಿವೆ ಎಂದು...

ಉತ್ತರ ಪ್ರದೇಶ| 8ನೇ ತರಗತಿಯ ದಲಿತ ವಿದ್ಯಾರ್ಥಿಗೆ ಶಿಕ್ಷಕಿಯಿಂದ ಜಾತಿ ತಾರತಮ್ಯ

ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಸರ್ಕಾರಿ ಉನ್ನತ ಪ್ರಾಥಮಿಕ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಯೊಬ್ಬರು ಶಿಕ್ಷಕಿಯಿಂದ ಜಾತಿ ಆಧಾರಿತ ತಾರತಮ್ಯ ಎಸಗಲಾಗಿದೆ ಎಂದು ಆರೋಪಿಸಿದ್ದಾನೆ. ಕೃಷ್ಣ ಎಂದು ಗುರುತಿಸಲ್ಪಟ್ಟ ಈ ವಿದ್ಯಾರ್ಥಿ ಪರಿಶಿಷ್ಟ...

ಯೆಮನ್ | ಸಂಪೂರ್ಣ ರೆಡ್ ಸೀ ಕರಾವಳಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಹೌತಿ ಪಡೆ : ಮಂದೇಬ್ ಜಲಸಂಧಿ ಮೇಲೆಯೂ ಹಿಡಿತ ಸಾಧಿಸಿರುವುದಾಗಿ ವರದಿ

ಮಹತ್ವದ ಬೆಳವಣಿಗೆಯಲ್ಲಿ, ಹೌತಿ ಬಂಡುಕೋರರು ಯೆಮನ್‌ನ ಇಡೀ ಕೆಂಪು ಸಮುದ್ರದ (ರೆಡ್ ಸೀ) ಕರಾವಳಿಯನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಇರಾನ್ ಬೆಂಬಲಿತ ಹೌತಿ ಸಶಸ್ತ್ರ ಪಡೆಗಳು ಯೆಮನ್ ಸರ್ಕಾರದ ನಿಯಂತ್ರಣದಲ್ಲಿದ್ದ...

ಭಾರತದ ಚುನಾವಣಾ ಪ್ರಕ್ರಿಯೆಯು ಅತ್ಯಂತ ಪಾರದರ್ಶಕವಾಗಿದೆ: ಸಿಇಸಿ ಜ್ಞಾನೇಶ್ ಕುಮಾರ್

ಭಾರತದ ಚುನಾವಣಾ ಪ್ರಕ್ರಿಯೆಯು ವಿಶ್ವದಲ್ಲೇ ಅತ್ಯಂತ ಪಾರದರ್ಶಕವಾದದ್ದು ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ (ಸೆ.11) ಹೇಳಿದ್ದಾರೆ. ಗುಜರಾತ್ ವಿಶ್ವವಿದ್ಯಾಲಯದ ಅಟಲ್ ಕಲಾಂ ಸಭಾಂಗಣದಲ್ಲಿ ನಡೆದ 'ಮತಗಟ್ಟೆ ಮಟ್ಟದ ಅಧಿಕಾರಿಗಳೊಂದಿಗೆ...