Homeಚಳವಳಿದಲಿತ ವರನ ಕುದುರೆ ಸವಾರಿಗೆ ಅಡ್ಡಿಪಡಿಸಿದ್ದ 9 ಜನರಿಗೆ 5 ವರ್ಷ ಜೈಲು

ದಲಿತ ವರನ ಕುದುರೆ ಸವಾರಿಗೆ ಅಡ್ಡಿಪಡಿಸಿದ್ದ 9 ಜನರಿಗೆ 5 ವರ್ಷ ಜೈಲು

- Advertisement -
- Advertisement -

ದಲಿತ ಯುವಕನೊಬ್ಬ ತನ್ನ ಮದುವೆ ಮೆರವಣಿಗೆಯಲ್ಲಿ ಕುದುರೆ ಸವಾರ ಮಾಡುವುದಕ್ಕೆ ಅಡ್ಡಿಪಡಿಸಿದ್ದ 9 ಜನರಿಗೆ ಐದು ವರ್ಷಗಳ ಜೈಲು ಶಿಕ್ಷೆ ನೀಡಿರುವ ಘಟನೆ ಗುಜರಾತ್‌ನಲ್ಲಿ ನಡೆದಿದೆ. 2018 ರ ಜೂನ್‌ನಲ್ಲಿ ಪಾರ್ಸಾ ಗ್ರಾಮದಲ್ಲಿ ನಡೆದಿದ್ದ ಈ ಘಟನೆಗೆ ಸಂಬಂಧಿಸಿ ಗಾಂಧಿನಗರದ ಸೆಷನ್ಸ್ ನ್ಯಾಯಾಲಯವು  ತೀರ್ಪು ನೀಡಿದೆ.

ನ್ಯಾಯಾಲಯವು ನಟ್ವರ್‌ಸಿನ್ಹಾ ಪರ್ಮಾರ್, ಕುಲ್‌ದೀಪ್‌ದಸಿಂಗ್ ಚೌಹಾಣ್, ಅನಿರುದ್ಧ್‌ಸಿನ್ಹಾ ರಾಥೋಡ್, ದೇವೇಂದ್ರಸಿನ್ಹಾ ಚಾವ್ಡಾ, ವಿಜಯಸಿನ್ಹಾ ಚೌಹಾಣ್, ವಿಪುಲ್ ಚೌಹಾಣ್, ಜಿಗರ್ಸಿಂಗ್ ಚೌಹಾಣ್, ನರೇಶ್ ಚೌಹಾಣ್ ಮತ್ತು ವೀರೇಂದ್ರಸಿನ್ಹಾ ಚೌಹಾಣ್ ಅವರಿಗೆ ಐದು ವರ್ಷಗಳ ಶಿಕ್ಷೆ ವಿಧಿಸಿದೆ.

ಘಟನೆ ಏನು…?

ಜೂನ್ 17, 2018 ರಂದು, ಪಾರ್ಸಾ ಗ್ರಾಮದ ಕ್ಷತ್ರಿಯ ಸಮುದಾಯದ ಯುವಕ ಗುಂಪೊಂದು, ದಲಿತ ಸಮುದಾಯದ ಪ್ರಶಾಂತ್ ಸೋಲಂಕಿ ಅವರು ತಮ್ಮ ಮದುವೆ ಮೆರವಣಿಗೆಯಲ್ಲಿ ಕುದುರೆ ಸವಾರಿ ಮಾಡುವುದಕ್ಕೆ ಅಡ್ಡಿ ಪಡಿಸಿತ್ತು. ದಲಿತ ವರ ಸೋಲಂಕಿ ಕುದುರೆ ಸವಾರಿ ಮಾಡುವಂತಿಲ್ಲ. ಏಕೆಂದರೆ, ಕುದುರೆ ಸವಾರಿಯನ್ನು ಕೇವಲ ನಮ್ಮಂತಹ “ಧೈರ್ಯಶಾಲಿ ಜಾತಿಯವರು” ಮಾತ್ರ ಮಾಡಬೇಕು ಎಂದು ಯುವಕರು ಆಕ್ಷೇಪಿಸಿದ್ದರು.

ಇದನ್ನೂ ಓದಿ: ಕೊಪ್ಪಳ: ಅನ್ಯಜಾತಿಯ ಯುವತಿಯನ್ನು ಪ್ರೀತಿಸಿದ್ದಕ್ಕೆ ದಲಿತ ಯುವಕನ ಬರ್ಬರ ಕೊಲೆ

ಈ ಯುವಕರ ಗುಂಪಿನ ಬೆದರಿಕೆ ಬಳಿಕ ವರನ ಕುಟುಂಬವು ಪೊಲೀಸರಿಗೆ ಮಾಹಿತಿ ನೀಡಿತ್ತು. ಪೊಲೀಸರು ಗ್ರಾಮಕ್ಕೆ ಧಾವಿಸಿ ಪೊಲೀಸ್ ರಕ್ಷಣೆಯಲ್ಲಿ ಮೆರವಣಿಗೆ ನಡೆಸಲಾಗಿತ್ತು. ಒಂಬತ್ತು ಆರೋಪಿಗಳನ್ನು ವಿರುದ್ಧ ಎಫ್‌ಐಆರ್‌ ದಾಖಲಿಸಲಾಗಿತ್ತು.

ಆರೋಪ ಸಾಬೀತಾದ ಹಿನ್ನೆಲೆ ನ್ಯಾಯಾಲಯವು ಅವರನ್ನು ತಪ್ಪಿತಸ್ಥರೆಂದು ಪರಿಗಣಿಸಿ ಐದು ವರ್ಷಗಳ ಜೈಲು ಶಿಕ್ಷೆ ಮತ್ತು ಪ್ರತಿಯೊಬ್ಬರಿಗೂ 10,000 ರೂಪಾಯಿಗಳ ದಂಡ ವಿಧಿಸಿದೆ.

ಮೇ 2019 ರಲ್ಲಿಯೂ ಕೂಡ, ಅರಾವಳ್ಳಿ ಜಿಲ್ಲೆಯ ಖಂಭಿಸರ್ ಗ್ರಾಮದಲ್ಲಿ, ದಲಿತ ವರನ ಕುದುರೆ ಸವಾರಿಯ ಮೆರವಣಿಗೆಯಲ್ಲಿ ಕಲ್ಲು ತೂರಾಟ ನಡೆದಿತ್ತು. ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತರಲು ಪೊಲೀಸರು ಲಾಠಿಚಾರ್ಜ್ ನಡೆಸಿದ್ದರು.

ರಾಜ್ಯದಲ್ಲಿಯೂ ದಲಿತರ ಮೇಲೆ ನಡೆಯುತ್ತಿರುವ ದೌರ್ಜನ್ಯದ ವಿರುದ್ಧ, ಬರಗೂರ ದಾನಪ್ಪ ಮತ್ತು ಕಕ್ಕರಗೋಳ ರಾಘವೇಂದ್ರರ ಕೊಲೆ ಪ್ರಕರಣ ಸೇರಿ ಕನಕಗಿರಿ ವಿಧಾನಸಭಾ ವ್ಯಾಪ್ತಿಯಲ್ಲಿ ನಡೆದ ಎಲ್ಲಾ ಕೊಲೆ ಪ್ರಕರಣಗಳ ನ್ಯಾಯಾಂಗ ತನಿಖೆ ನಡೆಸಬೇಕು ಎಂದು ಆಗ್ರಹಿಸಿ  ಇಂದು (ಜುಲೈ 19) ದಲಿತ ದಮನಿತರ ಒಕ್ಕೂಟ ಮತ್ತು ಪ್ರಗತಿಪರ ಸಂಘಟನೆಗಳ ಒಕ್ಕೂಟದಿಂದ ಕೊಪ್ಪಳ ಚಲೋ ಬೃಹತ್ ಪ್ರತಿಭಟನೆ ನಡೆಯುತ್ತಿದೆ.


ಇದನ್ನೂ ಓದಿ: ಹರಿಯಾಣ: ದಲಿತ ಯುವತಿಯನ್ನು ಅಪಹರಿಸಿ ಸತತ 9 ದಿನ ಅತ್ಯಾಚಾರ ನಡೆಸಿದ ದುಷ್ಕರ್ಮಿಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...