Homeಮುಖಪುಟನೈನ್ ಹಿಲ್ಸ್ ಒನ್ ವ್ಯಾಲಿ: ಸ್ಪೂರ್ತಿಧಾಮದಲ್ಲಿ ಮಣಿಪುರದ ಕುರಿತು ಚಲನಚಿತ್ರ ಪ್ರದರ್ಶನ

ನೈನ್ ಹಿಲ್ಸ್ ಒನ್ ವ್ಯಾಲಿ: ಸ್ಪೂರ್ತಿಧಾಮದಲ್ಲಿ ಮಣಿಪುರದ ಕುರಿತು ಚಲನಚಿತ್ರ ಪ್ರದರ್ಶನ

- Advertisement -
- Advertisement -

ಮಣಿಪುರದಲ್ಲಿ ಜನಾಂಗೀಯ ಹಿಂಸಾಚಾರ ಭುಗಿಲೆದ್ದಿರುವ ಸಮಯದಲ್ಲಿ ಅಲ್ಲಿನ ಸ್ಥಳೀಯ ಅಸ್ಮಿತೆಗಳ ಕುರಿತು ಚಿತ್ರಸಲಾದ ‘ನೈನ್ ಹಿಲ್ಸ್ ಒನ್ ವ್ಯಾಲಿ’ ಚಲನಚಿತ್ರ ಪ್ರದರ್ಶನವನ್ನು ಸ್ಪೂರ್ತಿಧಾಮ ಟ್ರಸ್ಟ್ ಹಮ್ಮಿಕೊಂಡಿದೆ.

ಆಗಸ್ಟ್ 12ರ ಶನಿವಾರ ಮಧ್ಯಾಹ್ನ 2.30ಕ್ಕೆ ಸರಿಯಾಗಿ ಸ್ಪೂರ್ತಿಧಾಮದ ಸೆಮಿನಾರ್ ಹಾಲ್ ನಲ್ಲಿ ಚಿತ್ರ ಪ್ರದರ್ಶನ ನಡೆಯಲಿದೆ. ಚಿತ್ರ ಪ್ರದರ್ಶನದ ಬಳಿಕ ಚಿತ್ರದ ಕುರಿತು ನಿರ್ದೇಶಕರೊಂದಿಗೆ ಸಂವಾದ ಹಮ್ಮಿಕೊಳ್ಳಲಾಗಿದೆ.

ಮೈತೈ-ತಂಗ್‌ಖುಲ್ ದ್ವಿಭಾಷೆಯಲ್ಲಿರುವ 75 ನಿಮಿಷಗಳ ಈ ಸಿನಿಮಾವನ್ನು 2021 ರಲ್ಲಿ ಹಾಬಾಮ್ ಪಬನ್ ಕುಮಾರ್‌ರವರು ನಿರ್ದೇಶಿಸಿದ್ದಾರೆ.

ನೈನ್ ಹಿಲ್ಸ್ ಒನ್ ವ್ಯಾಲಿ ಎಂಬುವುದು ಮಣಿಪುರದಂತಹ ವೈವಿಧ್ಯತೆಯ ಸ್ಥಳದಲ್ಲಿ ಹುಟ್ಟಿದ ನನ್ನ ಆಂತರಿಕ ಸಂದಿಗ್ಧತೆಯ ಬಗೆಗಿನ  ವೈಯಕ್ತಿಕ ಪ್ರಯಾಣವಾಗಿದೆ ಎಂದು ನಿರ್ದೇಶಕರು ಹೇಳಿದ್ದಾರೆ. ಕೋವಿಡ್ ಸಾಂಕ್ರಾಮಿಕದ ಸಂಕಷ್ಟದ ಏಕಾಂತದ ಸಮಯದಲ್ಲಿ ಈ ಚಿತ್ರವನ್ನು ನಿರ್ಮಿಸಲಾಗಿದೆ.

ಅನಮ್ ಅಹುಮ್ ಎಂಬಾತ ತನ್ನ ಮಗಳು ಉನ್ನತ ಅಧ್ಯಯನಕ್ಕಾಗಿ ನವದೆಹಲಿಗೆ ಹೊರಡುವ ಮೊದಲು ಆಕೆಯನ್ನು ಭೇಟಿಯಾಗಲು ಕಣಿವೆಯ ಇಂಫಾಲ್ ನಗರಕ್ಕೆ ಪ್ರಯಾಣಿಸುತ್ತಾನೆ. ಪ್ರಯಾಣದ ಸಮಯದಲ್ಲಿ ಅವರಿಗೆ ವಿಭಿನ್ನ ಜನರು ಮತ್ತು ಅವರ ಕಥೆಗಳು ಎದುರಾಗುತ್ತದೆ ಮತ್ತು ಜನಾಂಗೀಯ ಸಂಘರ್ಷಗಳ ಕ್ರೂರತೆಗೆ ಸಾಕ್ಷಿಯಾಗುತ್ತಾನೆ. ಆದರೂ ಆ ದುಃಖದ ನೆನಪುಗಳ ಜೊತೆ  ಭರವಸೆಯು ಆತನಲ್ಲಿ ಬೆಳೆಯುತ್ತದೆ. ಅದನ್ನು ನಿರ್ದೇಶಕರು ಸಿನಿಮಾವಾಗಿ ತೆರೆಗೆ ತಂದಿದ್ದಾರೆ.

ಹಾಬಾಮ್ ಪಬನ್ ಕುಮಾರ್ ಅವರು ಭಾರತದ ಈಶಾನ್ಯ ರಾಜ್ಯವಾದ ಮಣಿಪುರದ ಸಿನಿಮಾ ನಿರ್ದೇಶಕರಾಗಿದ್ದಾರೆ. ಎಸ್‌ಆರ್‌ಎಫ್‌ಟಿಐ ಕೋಲ್ಕತ್ತಾದಿಂದ ಪದವಿ ಪಡೆದ ತಕ್ಷಣ ಅವರು AFSPA 1958 ಎಂಬ ಸಾಕ್ಷ್ಯಚಿತ್ರವನ್ನು ನಿರ್ದೇಶಿಸಿದ್ದರು. ಈ ಸಾಕ್ಷಾಚಿತ್ರ MOMA ನ್ಯೂಯಾರ್ಕ್‌ನಲ್ಲಿ ಸ್ಕ್ರೀನಿಂಗ್ ಸೇರಿದಂತೆ ಅನೇಕ ಪ್ರಶಂಸೆ ಗಳಿಸಿದೆ. ಪಬನ್ ಕುಮಾರ್ ಅವರು 5 ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳನ್ನು ಪಡೆದುಕೊಂಡಿದ್ದಾರೆ.

ಇದನ್ನು ಓದಿ: ಸೌಜನ್ಯ ಸಾವಿಗೆ ನ್ಯಾಯ ಸಿಗುವವರೆಗೂ ಧರ್ಮಸ್ಥಳಕ್ಕೆ ಹೋಗುವುದಿಲ್ಲ: ನಟ ವಿನೋದ್​ ಟೈಗರ್​ ಪ್ರಭಾಕರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಜಾರಿ ಸರ್ಕಾರದ ಹೊಸ ಸೂತ್ರ

ಕರ್ನಾಟಕದಲ್ಲಿ ಒಳಮೀಸಲಾತಿಯ ’ಸದ್ದು-ಗುದ್ದು’ ಅವಿಭಜಿತ ಆಂಧ್ರಪ್ರದೇಶಕ್ಕಿಂತಲೂ ಹೆಚ್ಚಾಗಿದೆ. ಇದಕ್ಕೆ ಕಾರಣ ಪರಿಶಿಷ್ಟ ಜಾತಿಗಳೊಳಗಿನ ಮೇಲಾಟವೂ ಹೌದು, ಸರ್ಕಾರದ ಬೇಜವಾಬ್ದಾರಿ ನಡೆಗಳೂ ಹೌದು. ಆದರೆ ದಿನಾಂಕ: 24.04.2026ರಂದು ನಡೆದ ಸಚಿವ ಸಂಪುಟ ಸಭೆಯು ಒಳಮೀಸಲಾತಿ...

ಕೊರೋನಾ ಲಸಿಕೆ ಒಳಹೊರಗುಗಳ ಪರಾಮರ್ಶೆಯ ನೋಟ

ಮನುಷ್ಯನ ನೆನಪಿನ ಶಕ್ತಿ ಕಡಿಮೆ ಎಂದು ರಾಜಕಾರಣಿಗಳು, ಅಧಿಕಾರಿಗಳು ಸದಾ ಗುನುಗುತ್ತಿರುತ್ತಾರೆ. ಅದು ಜೀವ ಮತ್ತು ಜೀವನ ಕಳೆದುಕೊಂಡ ವಿಚಾರವನ್ನು ಕೂಡ ಬಹಳ ಬೇಗ ಮರೆವಿನ ತೊಟ್ಟಿಗೆ ತಳ್ಳಿ ಬಿಡುತ್ತದೆ.ಆದರೂ, ಮನುಷ್ಯ ಭೂಮಿಯ...

‘ಮಾವಿನ ಮರ’ ಕಂಡ ಕನಸು

ಪುಸ್ತಕ ಪರಿಚಯ ಸವಾಲಿನ ವಿಷಯ. ಅದರಲ್ಲೂ ಕವಿತೆಗಳ ಕುರಿತು ಮಾತನಾಡುವುದು ಇನ್ನೂ ಸವಾಲು. ಪ್ರತಿಯೊಂದು ಕವಿತೆಯೂ ತನ್ನ ಓದುಗರೊಂದಿಗೆ ಸಂವಾದಿಸುವ ಬಗೆ ವಿಭಿನ್ನವಾಗಿರುತ್ತದೆ. ಅದನ್ನು ಏಕರೂಪೀ ಪರಿಭಾಷೆಯಲ್ಲಿ ಮಂಡಿಸುವುದು ಸರಿಯಲ್ಲ. ’ಮಿಥಿಲೆಯ ಮಾವಿನ...

NEET ರದ್ದು : ಖಿನ್ನತೆ, ಆತಂಕಕ್ಕೆ ಒಳಗಾದ ವಿದ್ಯಾರ್ಥಿಗಳು; ನಾಲ್ಕು ದಿನದಲ್ಲಿ ನಾಲ್ವರು ಸಾವಿಗೆ ಶರಣು

ಈ ವರ್ಷದ (2026) ನೀಟ್-ಯುಜಿ (NEET-UG) ಪರೀಕ್ಷೆ ರದ್ದಾದ ಬಳಿಕ ದೇಶದಾದ್ಯಂತ ಕನಿಷ್ಠ ನಾಲ್ವರು ವಿದ್ಯಾರ್ಥಿಗಳು ತೀವ್ರ ಮಾನಸಿಕ ಒತ್ತಡ ಹಾಗೂ ಹತಾಶೆಯಿಂದ ಸಾವಿಗೆ ಶರಣಾಗಿದ್ದಾರೆ. ರಾಜಸ್ಥಾನದ ಝುಂಜುನು ಜಿಲ್ಲೆಯ 23 ವರ್ಷದ ಪ್ರದೀಪ್...

ಪ್ಯಾಲೆಸ್ಟೀನಿಯನ್ ಕೈದಿಗಳ ಮೇಲೆ ಲೈಂಗಿಕ ದೌರ್ಜನ್ಯ ವರದಿ: ನ್ಯೂಯಾರ್ಕ್ ಟೈಮ್ ವಿರುದ್ಧ ಮೊಕದ್ದಮೆ ದಾಖಲಿಸಿದ ಇಸ್ರೇಲ್ ಕ್ರಮಕ್ಕೆ ಆರ್‌ಎಸ್‌ಎಫ್ ಖಂಡನೆ

ಪ್ಯಾಲೆಸ್ಟೀನಿಯನ್ ಕೈದಿಗಳನ್ನು ಗುರಿಯಾಗಿಸಿಕೊಂಡು ವ್ಯಾಪಕವಾದ ಲೈಂಗಿಕ ದೌರ್ಜನ್ಯವನ್ನು ಬಹಿರಂಗಪಡಿಸಿದ ನಿಕೋಲಸ್ ಕ್ರಿಸ್ಟೋಫ್ ಅವರ  ಅಭಿಪ್ರಾಯ ಅಂಕಣವನ್ನು ಪ್ರಕಟಿಸಿದ ನ್ಯೂಯಾರ್ಕ್ ಟೈಮ್ಸ್ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿರುವ ಇಸ್ರೇಲಿ ಸರ್ಕಾರದ ನಿರ್ಧಾರವನ್ನು ರಿಪೋರ್ಟರ್ಸ್ ವಿದೌಟ್...

“ಮುಸ್ಲಿಮರಿಗೆ ಯಾವುದೇ ಕೆಲಸ ಮಾಡಲ್ಲ” ಎಂದು ವಿವಾದಾತ್ಮಕ ಶಪಥ ಮಾಡಿದ ಪಶ್ಚಿಮ ಬಂಗಾಳದ ಬಿಜೆಪಿ ಶಾಸಕ ರಿತೇಶ್ ತಿವಾರಿ

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಬಿಜೆಪಿ ತನ್ನ ಮೊದಲ ಸರ್ಕಾರವನ್ನು ರಚಿಸಿದ ಕೆಲವೇ ದಿನಗಳಲ್ಲಿ, ಪಕ್ಷದ ಶಾಸಕ ರಿತೇಶ್ ತಿವಾರಿ ಅವರು ಮಾಡಿರುವ ಭಾಷಣವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. "ಪಶ್ಚಿಮ...

’ಎಸ್‌ಐಆರ್’ ವಿರುದ್ಧ ಜನಪರ ಸಂಘಟನೆಗಳಿಂದ ಜನಾಂದೋಲನ ಬಂಗಾಳದ ಜನರ ಜೊತೆಗೆ ನಿಂತ ಕರ್ನಾಟಕ

ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ (ಎಸ್‌ಐಆರ್) ಮೂಲಕ ವಿರೋಧ ಪಕ್ಷಗಳ ಮತದಾರರು ಮತ್ತು ಅಲ್ಪಸಂಖ್ಯಾತ ಸಮುದಾಯದ ಲಕ್ಷಾಂತರ ಮತದಾರರನ್ನು ಪಟ್ಟಿಯಿಂದ ಕೈಬಿಡುವ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಕುತಂತ್ರ ಈಗಾಗಲೇ ಬಿಹಾರದಲ್ಲಿ ಜಗಜ್ಜಾಹೀರಾಗಿದೆ....

ನಿರುದ್ಯೋಗಿ ಯುವಕರನ್ನು ಜಿರಳೆಗಳು ಎಂದ ಸಿಜೆಐ: ಇದೆಂತಾ ಮಾತು ನ್ಯಾಯಮೂರ್ತಿಗಳೇ!

‘ಕೆಲವು ನಿರುದ್ಯೋಗಿ ಯುವಕರು ಜಿರಳೆಗಳಂತೆ ಸಮಾಜವನ್ನು ಕಾಡುತ್ತಾರೆ. ಉದ್ಯೋಗ, ಸ್ಥಾನಮಾನ ಸಿಗದೆ ಇದ್ದಾಗ ಅವರು ಎಲ್ಲರ ಮೇಲೆ ದಾಳಿ ಆರಂಭಿಸುತ್ತಾರೆ’ ಇದು ಯಾವುದೋ ರಾಜಕೀಯ ರ‍್ಯಾಲಿಯ ಭಾಷಣವಲ್ಲ ಅಥವಾ ಟಿವಿ ಚಾನೆಲ್‌ಗಳ ಜಗಳವಲ್ಲ,...

ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ..ಹಕ್ಕುಗಳನ್ನು ಕೇಳಬಾರದಾ?: ಕಾಂಗ್ರೆಸ್‌ಗೆ ಮುಸ್ಲಿಂ ಸಮಾವೇಶ ಪ್ರಶ್ನೆ

"ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ? ಯಾವ ಹಕ್ಕನ್ನೂ ಕೇಳಬಾರದು ಎಂದು ನೀವು (ಕಾಂಗ್ರೆಸ್‌ನವರು) ಬಯಸುತ್ತಿದ್ದೀರಾ?" ಎಂದು ಕರ್ನಾಟಕ ಮುಸ್ಲಿಂ ಸಮಾವೇಶ ಖಾರವಾಗಿ ಪ್ರಶ್ನಿಸಿತು. ಬೆಂಗಳೂರಿನ ಪುರಭವನದಲ್ಲಿ ಇಂದು (ಮೇ 16, ಶನಿವಾರ) ನಡೆದ...

“ಸನಾತನ ಬೇರುಗಳಲ್ಲಿರುವ ಅಸಮಾನತೆಗೆ ದ್ರಾವಿಡ ನೆಲದ ಪ್ರತಿರೋಧ”: ಉದಯನಿಧಿ ಹೇಳಿಕೆ ವಿವಾದವಾಗಿದ್ದೇಗೆ..?

ಸನಾತನ ಸಂಸ್ಥೆಗಳನ್ನು ಮತ್ತು ಸನಾತನ ಧರ್ಮವನ್ನು ನಿರ್ಮೂಲನೆ ಮಾಡುವ ಬಗ್ಗೆ ಉದಯನಿಧಿ ಸ್ಟಾಲಿನ್ ಅವರ ಹೇಳಿಕೆಗಳು ಸದ್ಯ ದೇಶಾದ್ಯಂತ ಸಂಚಲನ ಮೂಡಿಸಿವೆ.  ತಮಿಳುನಾಡು ವಿಧಾನಸಭೆಯಲ್ಲಿ ನೂತನ ಮುಖ್ಯಮಂತ್ರಿಯಾಗಿ ಸಿ. ಜೋಸೆಫ್ ವಿಜಯ್ ಅವರು ಅಧಿಕಾರ...