Homeಮುಖಪುಟಶ್ರಮಿಕ್ ರೈಲುಗಳಲ್ಲಿ ಕಳೆದ 48 ಗಂಟೆಗಳಲ್ಲಿ 9 ವಲಸೆ ಕಾರ್ಮಿಕರು ಮೃತ : ಕೇಂದ್ರದ...

ಶ್ರಮಿಕ್ ರೈಲುಗಳಲ್ಲಿ ಕಳೆದ 48 ಗಂಟೆಗಳಲ್ಲಿ 9 ವಲಸೆ ಕಾರ್ಮಿಕರು ಮೃತ : ಕೇಂದ್ರದ ವಿರುದ್ಧ ಆಕ್ರೋಶ

- Advertisement -
- Advertisement -

ಕಳೆದ 48 ಗಂಟೆಗಳಲ್ಲಿ ಉತ್ತರ ಪ್ರದೇಶ ಮತ್ತು ಬಿಹಾರಕ್ಕೆ ಹೊರಟಿದ್ದ ಶ್ರಮಿಕ್ ವಿಶೇಷ ರೈಲುಗಳಲ್ಲಿ ಪ್ರಯಾಣಿಸುತ್ತಿದ್ದ ಕನಿಷ್ಠ ಒಂಬತ್ತು ವಲಸೆ ಕಾರ್ಮಿಕರು ಮೃತಪಟ್ಟಿದ್ದಾರೆ.

ಮೃತಪಟ್ಟವರಲ್ಲಿ ಐದು ಜನರು ಉತ್ತರ ಪ್ರದೇಶದವರಾಗಿದ್ದು, ನಾಲ್ವರು ಬಿಹಾರದವರಾಗಿದ್ದಾರೆ. ಇವರಲ್ಲಿ ಹಲವರು ರೋಗಿಗಳಾಗಿದ್ದು ಇತರ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆದು ಮರಳುತ್ತಿದ್ದರು ಎಂದು ರೈಲ್ವೆ ಅಧಿಕಾರಿಗಳು ತಿಳಿಸಿದ್ದಾರೆ.

ಸಾವುಗಳ ಬಗ್ಗೆ ರೈಲ್ವೆ ವಕ್ತಾರರು ಪ್ರತಿಕ್ರಿಯಿಸಿದ್ದು”ಶ್ರಮಿಕ್ ವಿಶೇಷ ರೈಲುಗಳಲ್ಲಿ ಕೆಲವು ಸಾವುಗಳು ವರದಿಯಾಗಿವೆ. ಈ ಹೆಚ್ಚಿನ ಸಂದರ್ಭಗಳಲ್ಲಿ, ಮರಣ ಹೊಂದಿದವರು ವೃದ್ಧರು, ಅನಾರೋಗ್ಯ ಪೀಡಿತರು ಮತ್ತು ದೀರ್ಘಕಾಲದ ಕಾಯಿಲೆ ಹೊಂದಿರುವವರು ವೈದ್ಯಕೀಯ ಚಿಕಿತ್ಸೆ ಪಡೆಯಲು ನಗರಗಳಿಗೆ ಹೋಗಿದ್ದರು ಎಂದು ತಿಳಿದುಬಂದಿದೆ… ” ಎಂದಿದ್ದಾರೆಂದು ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಬುಧವಾರ, ಬಿಹಾರದ ಮುಜಾಫರ್ಪುರ್ ನಿಲ್ದಾಣದ ಪ್ಲಾಟ್‌ಫಾರ್ಮ್‌ನಲ್ಲಿ ತನ್ನ ಮೃತಪಟ್ಟ ತಾಯಿಯನ್ನು ಎಚ್ಚರಗೊಳಿಸಲು ಪ್ರಯತ್ನಿಸುತ್ತಿರುವ ಪುಟ್ಟ ಕಂದನ ದೃಶ್ಯವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲಾಗಿದ್ದು, ಜನರು ಸರ್ಕಾರದ ವಿರುದ್ದ ಭಾರೀ ಆಕ್ರೋಶ ವ್ಯಕ್ತಪಡಿಸಿದ್ದರು.

ಬಿಹಾರದ ಮುಜಾಫರ್ ಪುರದ ರೈಲ್ವೆ ನಿಲ್ದಾಣದಲ್ಲಿ ಈ ಮಗು ತನ್ನ ತಾಯಿಯೊಂದಿಗೆ ಆಟವಾಡುತ್ತಿದೆ. ಆದರೆ ತನ್ನ ತಾಯಿ ಸಾವನಪ್ಪಿದ್ದಾಳೆ ಎಂಬ ಅರಿವು ಅದಕ್ಕಿಲ್ಲ…ಆಕೆ ನಾಲ್ಕು ದಿನಗಳಿಂದ ಹಸಿವು, ಬಾಯಾರಿಕೆ ತಾಳಲಾರದೇ ಮೃತಪಟ್ಟಿದ್ದಾಳೆ. ಆ ಮಕ್ಕಳ ಮುಂದಿನ ಕಥೆಯೇನು?ಈ ಪರಿಸ್ಥಿತಿ ಯಾರಿಗೂ ಬರಬಾರದು..ವಿಡಿಯೋ: ಪತ್ರಕರ್ತ ಕವೀಶ್ ಟ್ವಿಟ್ಟರ್ ನಿಂದ…

Posted by Naanu Gauri on Wednesday, May 27, 2020

ಮೃತ ಮಹಿಳೆಯನ್ನು ಕತಿಹಾರ್ ನಿವಾಸಿ ಅರ್ವೀನಾ ಖಟೂನ್ (26) ಎಂದು ಗುರುತಿಸಲಾಗಿದ್ದು, ಮೇ 23 ರಂದು ಅಹ್ಮದಾಬಾದ್‌ನಿಂದ ತನ್ನ ಇಬ್ಬರು ಮಕ್ಕಳೊಂದಿಗೆ ರೈಲು ಹತ್ತಿದ್ದರು. ರೈಲಿನಲ್ಲಿ ಆಹಾರ ಹಾಗೂ ನೀರಿನ ಕೊರತೆ ಇತ್ತು ಎನ್ನಲಾಗಿದೆ.

ಸೂರತ್-ಪೂರ್ಣಿಯಾ ರೈಲಿನಲ್ಲಿ ಮಲಗಿದ್ದ ಬಿಹಾರದ ಕಟಿಹಾರ್ ಎಂಬಲ್ಲಿನ ಉರೇಶ್ ಖಟೂನ್ ಎಂಬ ಮಹಿಳೆ ನಿದ್ರೆಯಲ್ಲೇ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.

ಬಿಹಾರದ ದಾನಾಪುರ್ ಎಂಬಲ್ಲಿ  70 ವರ್ಷದ ಬಸಿಷ್ಠ್ ಮಹತೋ ಎಂಬವರ ಮೃತದೇಹ ಮುಂಬೈ-ದರ್ಭಾಂಗ ಶ್ರಮಿಕ್ ರೈಲಿನಲ್ಲಿ ಪತ್ತೆಯಾಗಿತ್ತು. ಅವರು ಹೃದ್ರೋಗಿ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮುಂಬೈನಿಂದ ಬಂದ ರೈಲಿನಲ್ಲಿ ಇಬ್ಬರು ಶವವಾಗಿ ಪತ್ತೆಯಾಗಿದ್ದು, ವಾರಣಾಸಿ ರೈಲ್ವೆ ಪೊಲೀಸ್ ಪ್ರಕಾರ, ಮೃತಪಟ್ಟವರನ್ನು ಜಾನ್‌ಪುರದ ದಸರತ್ ಪ್ರಜಾಪತಿ (30) ಮತ್ತು ಅಜಮ್‌ರ್‌ನ ರಾಮರತನ್ ರಘುನಾಥ್ (55) ಎಂದು ಗುರುತಿಸಲಾಗಿದೆ.

ಇವರಲ್ಲಿ ಪ್ರಜಾಪತಿ ಅಂಗವಿಕಲರಾಗಿದ್ದು ಮೂತ್ರಪಿಂಡದ ಕಾಯಿಲೆಯಿಂದ ಬಳಲುತ್ತಿದ್ದರು ಮತ್ತು ರಘುನಾಥ್ ಅನೇಕ ಕಾಯಿಲೆಗಳೊಂದಿಗೆ ಹೋರಾಡುತ್ತಿದ್ದಾರೆ ಎಂದು ರೈಲ್ವೇ ಪೊಲೀಸರು ಹೇಳಿದ್ದಾರೆ.

ಸೂರತ್‌ನಿಂದ ಬಲ್ಲಿಯಾ ತಲುಪಿದ ರೈಲಿನಲ್ಲಿ ಬಿಹಾರದ ಸರನ್ ಮೂಲದ ಭೂಷಣ್ ಸಿಂಗ್ (58) ಶವವಾಗಿ ಪತ್ತೆಯಾಗಿದ್ದಾರೆ ಎಂದು ಪೊಲೀಸ್ ವರಿಷ್ಠಾಧಿಕಾರಿ ದೇವೇಂದ್ರ ನಾಥ್ ತಿಳಿಸಿದ್ದಾರೆ.

ಝಾನ್ಸಿ-ಗೋರಖ್‌ಪುರ ರೈಲಿನಲ್ಲಿ ಕಾನ್ಪುರಕ್ಕೆ ತಲುಪಿದಾಗ ಇಬ್ಬರು ಮೃತಪಟ್ಟಿದ್ದು, ಮೃತ ವ್ಯಕ್ತಿಯಲ್ಲಿ ಒಬ್ಬರನ್ನು ರಾಮ್ ಅವಧ್ ಚೌಹಾನ್ (45) ಎಂದು ಗುರುತಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ; ಎರಡನೇ ವ್ಯಕ್ತಿಯ ಗುರುತನ್ನು ಇನ್ನೂ ಪತೆಯಾಗಿಲ್ಲ ಎಂದು ಹೇಳಿದ್ದಾರೆ.

ಬಿಹಾರ ಮತ್ತು ಉತ್ತರ ಪ್ರದೇಶದ ಎರಡೂ ರೈಲುಗಳ ಮಾರ್ಗದಲ್ಲಿ ಊಟದ ಸೇವೆಯನ್ನು ಹೊಂದಿವೆ ಎಂದು ರೈಲ್ವೆ ಮೂಲಗಳು ತಿಳಿಸಿವೆ.

ಮತ್ತೊಂದು ಪ್ರಕರಣದಲ್ಲಿ, ದೆಹಲಿಯಿಂದ ಮುಜಾಫರ್ಪುರದ 39 ಗಂಟೆಗಳ ಪ್ರಯಾಣದಲ್ಲಿ ನಾಲ್ಕು ವರ್ಷದ ಬಾಲಕ ಮೊಹಮ್ಮದ್ ಇರ್ಷಾದ್ ಬಿಸಿಲು ಹಾಗೂ ಹಸಿವಿನಿಂದ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.

ಸರ್ಕಾರಗಳು ಇವರೆಲ್ಲಾ ಅನಾರೋಗ್ಯದಿಂದ ಮೃತಪಟ್ಟಿದ್ದಾರೆಂದು ಹೇಳಿ ಜಾರಿಕೊಂಡಿದೆ. ಆದರೆ ಈ ರೈಲುಗಳಲ್ಲಿ ಕನಿಷ್ಠ ಮೂಲಭೂತ ಸೌಲಭ್ಯಗಳಿರಲಿಲ್ಲ. ಹಸಿವು ಮತ್ತು ಬಾಯಾರಿಕೆಯಿಂದಲೇ ವಲಸೆ ಕಾರ್ಮಿಕರು ಮೃತಪಟ್ಟಿದ್ದಾರೆಂದು ಸಾರ್ವಜನಿಕರು ಸರ್ಕಾರದ ಮೇಲೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.


ಓದಿ:  60 ದಿನಗಳಿಂದ ರಸ್ತೆಯಲ್ಲಿದ್ದು ವಲಸೆ ಕಾರ್ಮಿಕರ ಮನಕಲಕುವ ಕತೆ ಹೇಳುತ್ತಿರುವ ದಿಟ್ಟ ಪತ್ರಕರ್ತೆ ‘ಬರ್ಖಾ ದತ್’


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...