Homeಮುಖಪುಟಶ್ರಮಿಕ್ ರೈಲುಗಳಲ್ಲಿ ಕಳೆದ 48 ಗಂಟೆಗಳಲ್ಲಿ 9 ವಲಸೆ ಕಾರ್ಮಿಕರು ಮೃತ : ಕೇಂದ್ರದ...

ಶ್ರಮಿಕ್ ರೈಲುಗಳಲ್ಲಿ ಕಳೆದ 48 ಗಂಟೆಗಳಲ್ಲಿ 9 ವಲಸೆ ಕಾರ್ಮಿಕರು ಮೃತ : ಕೇಂದ್ರದ ವಿರುದ್ಧ ಆಕ್ರೋಶ

- Advertisement -
- Advertisement -

ಕಳೆದ 48 ಗಂಟೆಗಳಲ್ಲಿ ಉತ್ತರ ಪ್ರದೇಶ ಮತ್ತು ಬಿಹಾರಕ್ಕೆ ಹೊರಟಿದ್ದ ಶ್ರಮಿಕ್ ವಿಶೇಷ ರೈಲುಗಳಲ್ಲಿ ಪ್ರಯಾಣಿಸುತ್ತಿದ್ದ ಕನಿಷ್ಠ ಒಂಬತ್ತು ವಲಸೆ ಕಾರ್ಮಿಕರು ಮೃತಪಟ್ಟಿದ್ದಾರೆ.

ಮೃತಪಟ್ಟವರಲ್ಲಿ ಐದು ಜನರು ಉತ್ತರ ಪ್ರದೇಶದವರಾಗಿದ್ದು, ನಾಲ್ವರು ಬಿಹಾರದವರಾಗಿದ್ದಾರೆ. ಇವರಲ್ಲಿ ಹಲವರು ರೋಗಿಗಳಾಗಿದ್ದು ಇತರ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆದು ಮರಳುತ್ತಿದ್ದರು ಎಂದು ರೈಲ್ವೆ ಅಧಿಕಾರಿಗಳು ತಿಳಿಸಿದ್ದಾರೆ.

ಸಾವುಗಳ ಬಗ್ಗೆ ರೈಲ್ವೆ ವಕ್ತಾರರು ಪ್ರತಿಕ್ರಿಯಿಸಿದ್ದು”ಶ್ರಮಿಕ್ ವಿಶೇಷ ರೈಲುಗಳಲ್ಲಿ ಕೆಲವು ಸಾವುಗಳು ವರದಿಯಾಗಿವೆ. ಈ ಹೆಚ್ಚಿನ ಸಂದರ್ಭಗಳಲ್ಲಿ, ಮರಣ ಹೊಂದಿದವರು ವೃದ್ಧರು, ಅನಾರೋಗ್ಯ ಪೀಡಿತರು ಮತ್ತು ದೀರ್ಘಕಾಲದ ಕಾಯಿಲೆ ಹೊಂದಿರುವವರು ವೈದ್ಯಕೀಯ ಚಿಕಿತ್ಸೆ ಪಡೆಯಲು ನಗರಗಳಿಗೆ ಹೋಗಿದ್ದರು ಎಂದು ತಿಳಿದುಬಂದಿದೆ… ” ಎಂದಿದ್ದಾರೆಂದು ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಬುಧವಾರ, ಬಿಹಾರದ ಮುಜಾಫರ್ಪುರ್ ನಿಲ್ದಾಣದ ಪ್ಲಾಟ್‌ಫಾರ್ಮ್‌ನಲ್ಲಿ ತನ್ನ ಮೃತಪಟ್ಟ ತಾಯಿಯನ್ನು ಎಚ್ಚರಗೊಳಿಸಲು ಪ್ರಯತ್ನಿಸುತ್ತಿರುವ ಪುಟ್ಟ ಕಂದನ ದೃಶ್ಯವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲಾಗಿದ್ದು, ಜನರು ಸರ್ಕಾರದ ವಿರುದ್ದ ಭಾರೀ ಆಕ್ರೋಶ ವ್ಯಕ್ತಪಡಿಸಿದ್ದರು.

ಬಿಹಾರದ ಮುಜಾಫರ್ ಪುರದ ರೈಲ್ವೆ ನಿಲ್ದಾಣದಲ್ಲಿ ಈ ಮಗು ತನ್ನ ತಾಯಿಯೊಂದಿಗೆ ಆಟವಾಡುತ್ತಿದೆ. ಆದರೆ ತನ್ನ ತಾಯಿ ಸಾವನಪ್ಪಿದ್ದಾಳೆ ಎಂಬ ಅರಿವು ಅದಕ್ಕಿಲ್ಲ…ಆಕೆ ನಾಲ್ಕು ದಿನಗಳಿಂದ ಹಸಿವು, ಬಾಯಾರಿಕೆ ತಾಳಲಾರದೇ ಮೃತಪಟ್ಟಿದ್ದಾಳೆ. ಆ ಮಕ್ಕಳ ಮುಂದಿನ ಕಥೆಯೇನು?ಈ ಪರಿಸ್ಥಿತಿ ಯಾರಿಗೂ ಬರಬಾರದು..ವಿಡಿಯೋ: ಪತ್ರಕರ್ತ ಕವೀಶ್ ಟ್ವಿಟ್ಟರ್ ನಿಂದ…

Posted by Naanu Gauri on Wednesday, May 27, 2020

ಮೃತ ಮಹಿಳೆಯನ್ನು ಕತಿಹಾರ್ ನಿವಾಸಿ ಅರ್ವೀನಾ ಖಟೂನ್ (26) ಎಂದು ಗುರುತಿಸಲಾಗಿದ್ದು, ಮೇ 23 ರಂದು ಅಹ್ಮದಾಬಾದ್‌ನಿಂದ ತನ್ನ ಇಬ್ಬರು ಮಕ್ಕಳೊಂದಿಗೆ ರೈಲು ಹತ್ತಿದ್ದರು. ರೈಲಿನಲ್ಲಿ ಆಹಾರ ಹಾಗೂ ನೀರಿನ ಕೊರತೆ ಇತ್ತು ಎನ್ನಲಾಗಿದೆ.

ಸೂರತ್-ಪೂರ್ಣಿಯಾ ರೈಲಿನಲ್ಲಿ ಮಲಗಿದ್ದ ಬಿಹಾರದ ಕಟಿಹಾರ್ ಎಂಬಲ್ಲಿನ ಉರೇಶ್ ಖಟೂನ್ ಎಂಬ ಮಹಿಳೆ ನಿದ್ರೆಯಲ್ಲೇ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.

ಬಿಹಾರದ ದಾನಾಪುರ್ ಎಂಬಲ್ಲಿ  70 ವರ್ಷದ ಬಸಿಷ್ಠ್ ಮಹತೋ ಎಂಬವರ ಮೃತದೇಹ ಮುಂಬೈ-ದರ್ಭಾಂಗ ಶ್ರಮಿಕ್ ರೈಲಿನಲ್ಲಿ ಪತ್ತೆಯಾಗಿತ್ತು. ಅವರು ಹೃದ್ರೋಗಿ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮುಂಬೈನಿಂದ ಬಂದ ರೈಲಿನಲ್ಲಿ ಇಬ್ಬರು ಶವವಾಗಿ ಪತ್ತೆಯಾಗಿದ್ದು, ವಾರಣಾಸಿ ರೈಲ್ವೆ ಪೊಲೀಸ್ ಪ್ರಕಾರ, ಮೃತಪಟ್ಟವರನ್ನು ಜಾನ್‌ಪುರದ ದಸರತ್ ಪ್ರಜಾಪತಿ (30) ಮತ್ತು ಅಜಮ್‌ರ್‌ನ ರಾಮರತನ್ ರಘುನಾಥ್ (55) ಎಂದು ಗುರುತಿಸಲಾಗಿದೆ.

ಇವರಲ್ಲಿ ಪ್ರಜಾಪತಿ ಅಂಗವಿಕಲರಾಗಿದ್ದು ಮೂತ್ರಪಿಂಡದ ಕಾಯಿಲೆಯಿಂದ ಬಳಲುತ್ತಿದ್ದರು ಮತ್ತು ರಘುನಾಥ್ ಅನೇಕ ಕಾಯಿಲೆಗಳೊಂದಿಗೆ ಹೋರಾಡುತ್ತಿದ್ದಾರೆ ಎಂದು ರೈಲ್ವೇ ಪೊಲೀಸರು ಹೇಳಿದ್ದಾರೆ.

ಸೂರತ್‌ನಿಂದ ಬಲ್ಲಿಯಾ ತಲುಪಿದ ರೈಲಿನಲ್ಲಿ ಬಿಹಾರದ ಸರನ್ ಮೂಲದ ಭೂಷಣ್ ಸಿಂಗ್ (58) ಶವವಾಗಿ ಪತ್ತೆಯಾಗಿದ್ದಾರೆ ಎಂದು ಪೊಲೀಸ್ ವರಿಷ್ಠಾಧಿಕಾರಿ ದೇವೇಂದ್ರ ನಾಥ್ ತಿಳಿಸಿದ್ದಾರೆ.

ಝಾನ್ಸಿ-ಗೋರಖ್‌ಪುರ ರೈಲಿನಲ್ಲಿ ಕಾನ್ಪುರಕ್ಕೆ ತಲುಪಿದಾಗ ಇಬ್ಬರು ಮೃತಪಟ್ಟಿದ್ದು, ಮೃತ ವ್ಯಕ್ತಿಯಲ್ಲಿ ಒಬ್ಬರನ್ನು ರಾಮ್ ಅವಧ್ ಚೌಹಾನ್ (45) ಎಂದು ಗುರುತಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ; ಎರಡನೇ ವ್ಯಕ್ತಿಯ ಗುರುತನ್ನು ಇನ್ನೂ ಪತೆಯಾಗಿಲ್ಲ ಎಂದು ಹೇಳಿದ್ದಾರೆ.

ಬಿಹಾರ ಮತ್ತು ಉತ್ತರ ಪ್ರದೇಶದ ಎರಡೂ ರೈಲುಗಳ ಮಾರ್ಗದಲ್ಲಿ ಊಟದ ಸೇವೆಯನ್ನು ಹೊಂದಿವೆ ಎಂದು ರೈಲ್ವೆ ಮೂಲಗಳು ತಿಳಿಸಿವೆ.

ಮತ್ತೊಂದು ಪ್ರಕರಣದಲ್ಲಿ, ದೆಹಲಿಯಿಂದ ಮುಜಾಫರ್ಪುರದ 39 ಗಂಟೆಗಳ ಪ್ರಯಾಣದಲ್ಲಿ ನಾಲ್ಕು ವರ್ಷದ ಬಾಲಕ ಮೊಹಮ್ಮದ್ ಇರ್ಷಾದ್ ಬಿಸಿಲು ಹಾಗೂ ಹಸಿವಿನಿಂದ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.

ಸರ್ಕಾರಗಳು ಇವರೆಲ್ಲಾ ಅನಾರೋಗ್ಯದಿಂದ ಮೃತಪಟ್ಟಿದ್ದಾರೆಂದು ಹೇಳಿ ಜಾರಿಕೊಂಡಿದೆ. ಆದರೆ ಈ ರೈಲುಗಳಲ್ಲಿ ಕನಿಷ್ಠ ಮೂಲಭೂತ ಸೌಲಭ್ಯಗಳಿರಲಿಲ್ಲ. ಹಸಿವು ಮತ್ತು ಬಾಯಾರಿಕೆಯಿಂದಲೇ ವಲಸೆ ಕಾರ್ಮಿಕರು ಮೃತಪಟ್ಟಿದ್ದಾರೆಂದು ಸಾರ್ವಜನಿಕರು ಸರ್ಕಾರದ ಮೇಲೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.


ಓದಿ:  60 ದಿನಗಳಿಂದ ರಸ್ತೆಯಲ್ಲಿದ್ದು ವಲಸೆ ಕಾರ್ಮಿಕರ ಮನಕಲಕುವ ಕತೆ ಹೇಳುತ್ತಿರುವ ದಿಟ್ಟ ಪತ್ರಕರ್ತೆ ‘ಬರ್ಖಾ ದತ್’


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...