Homeಮುಖಪುಟಶ್ರಮಿಕ್ ರೈಲುಗಳಲ್ಲಿ ಕಳೆದ 48 ಗಂಟೆಗಳಲ್ಲಿ 9 ವಲಸೆ ಕಾರ್ಮಿಕರು ಮೃತ : ಕೇಂದ್ರದ...

ಶ್ರಮಿಕ್ ರೈಲುಗಳಲ್ಲಿ ಕಳೆದ 48 ಗಂಟೆಗಳಲ್ಲಿ 9 ವಲಸೆ ಕಾರ್ಮಿಕರು ಮೃತ : ಕೇಂದ್ರದ ವಿರುದ್ಧ ಆಕ್ರೋಶ

- Advertisement -
- Advertisement -

ಕಳೆದ 48 ಗಂಟೆಗಳಲ್ಲಿ ಉತ್ತರ ಪ್ರದೇಶ ಮತ್ತು ಬಿಹಾರಕ್ಕೆ ಹೊರಟಿದ್ದ ಶ್ರಮಿಕ್ ವಿಶೇಷ ರೈಲುಗಳಲ್ಲಿ ಪ್ರಯಾಣಿಸುತ್ತಿದ್ದ ಕನಿಷ್ಠ ಒಂಬತ್ತು ವಲಸೆ ಕಾರ್ಮಿಕರು ಮೃತಪಟ್ಟಿದ್ದಾರೆ.

ಮೃತಪಟ್ಟವರಲ್ಲಿ ಐದು ಜನರು ಉತ್ತರ ಪ್ರದೇಶದವರಾಗಿದ್ದು, ನಾಲ್ವರು ಬಿಹಾರದವರಾಗಿದ್ದಾರೆ. ಇವರಲ್ಲಿ ಹಲವರು ರೋಗಿಗಳಾಗಿದ್ದು ಇತರ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆದು ಮರಳುತ್ತಿದ್ದರು ಎಂದು ರೈಲ್ವೆ ಅಧಿಕಾರಿಗಳು ತಿಳಿಸಿದ್ದಾರೆ.

ಸಾವುಗಳ ಬಗ್ಗೆ ರೈಲ್ವೆ ವಕ್ತಾರರು ಪ್ರತಿಕ್ರಿಯಿಸಿದ್ದು”ಶ್ರಮಿಕ್ ವಿಶೇಷ ರೈಲುಗಳಲ್ಲಿ ಕೆಲವು ಸಾವುಗಳು ವರದಿಯಾಗಿವೆ. ಈ ಹೆಚ್ಚಿನ ಸಂದರ್ಭಗಳಲ್ಲಿ, ಮರಣ ಹೊಂದಿದವರು ವೃದ್ಧರು, ಅನಾರೋಗ್ಯ ಪೀಡಿತರು ಮತ್ತು ದೀರ್ಘಕಾಲದ ಕಾಯಿಲೆ ಹೊಂದಿರುವವರು ವೈದ್ಯಕೀಯ ಚಿಕಿತ್ಸೆ ಪಡೆಯಲು ನಗರಗಳಿಗೆ ಹೋಗಿದ್ದರು ಎಂದು ತಿಳಿದುಬಂದಿದೆ… ” ಎಂದಿದ್ದಾರೆಂದು ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಬುಧವಾರ, ಬಿಹಾರದ ಮುಜಾಫರ್ಪುರ್ ನಿಲ್ದಾಣದ ಪ್ಲಾಟ್‌ಫಾರ್ಮ್‌ನಲ್ಲಿ ತನ್ನ ಮೃತಪಟ್ಟ ತಾಯಿಯನ್ನು ಎಚ್ಚರಗೊಳಿಸಲು ಪ್ರಯತ್ನಿಸುತ್ತಿರುವ ಪುಟ್ಟ ಕಂದನ ದೃಶ್ಯವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲಾಗಿದ್ದು, ಜನರು ಸರ್ಕಾರದ ವಿರುದ್ದ ಭಾರೀ ಆಕ್ರೋಶ ವ್ಯಕ್ತಪಡಿಸಿದ್ದರು.

ಬಿಹಾರದ ಮುಜಾಫರ್ ಪುರದ ರೈಲ್ವೆ ನಿಲ್ದಾಣದಲ್ಲಿ ಈ ಮಗು ತನ್ನ ತಾಯಿಯೊಂದಿಗೆ ಆಟವಾಡುತ್ತಿದೆ. ಆದರೆ ತನ್ನ ತಾಯಿ ಸಾವನಪ್ಪಿದ್ದಾಳೆ ಎಂಬ ಅರಿವು ಅದಕ್ಕಿಲ್ಲ…ಆಕೆ ನಾಲ್ಕು ದಿನಗಳಿಂದ ಹಸಿವು, ಬಾಯಾರಿಕೆ ತಾಳಲಾರದೇ ಮೃತಪಟ್ಟಿದ್ದಾಳೆ. ಆ ಮಕ್ಕಳ ಮುಂದಿನ ಕಥೆಯೇನು?ಈ ಪರಿಸ್ಥಿತಿ ಯಾರಿಗೂ ಬರಬಾರದು..ವಿಡಿಯೋ: ಪತ್ರಕರ್ತ ಕವೀಶ್ ಟ್ವಿಟ್ಟರ್ ನಿಂದ…

Posted by Naanu Gauri on Wednesday, May 27, 2020

ಮೃತ ಮಹಿಳೆಯನ್ನು ಕತಿಹಾರ್ ನಿವಾಸಿ ಅರ್ವೀನಾ ಖಟೂನ್ (26) ಎಂದು ಗುರುತಿಸಲಾಗಿದ್ದು, ಮೇ 23 ರಂದು ಅಹ್ಮದಾಬಾದ್‌ನಿಂದ ತನ್ನ ಇಬ್ಬರು ಮಕ್ಕಳೊಂದಿಗೆ ರೈಲು ಹತ್ತಿದ್ದರು. ರೈಲಿನಲ್ಲಿ ಆಹಾರ ಹಾಗೂ ನೀರಿನ ಕೊರತೆ ಇತ್ತು ಎನ್ನಲಾಗಿದೆ.

ಸೂರತ್-ಪೂರ್ಣಿಯಾ ರೈಲಿನಲ್ಲಿ ಮಲಗಿದ್ದ ಬಿಹಾರದ ಕಟಿಹಾರ್ ಎಂಬಲ್ಲಿನ ಉರೇಶ್ ಖಟೂನ್ ಎಂಬ ಮಹಿಳೆ ನಿದ್ರೆಯಲ್ಲೇ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.

ಬಿಹಾರದ ದಾನಾಪುರ್ ಎಂಬಲ್ಲಿ  70 ವರ್ಷದ ಬಸಿಷ್ಠ್ ಮಹತೋ ಎಂಬವರ ಮೃತದೇಹ ಮುಂಬೈ-ದರ್ಭಾಂಗ ಶ್ರಮಿಕ್ ರೈಲಿನಲ್ಲಿ ಪತ್ತೆಯಾಗಿತ್ತು. ಅವರು ಹೃದ್ರೋಗಿ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮುಂಬೈನಿಂದ ಬಂದ ರೈಲಿನಲ್ಲಿ ಇಬ್ಬರು ಶವವಾಗಿ ಪತ್ತೆಯಾಗಿದ್ದು, ವಾರಣಾಸಿ ರೈಲ್ವೆ ಪೊಲೀಸ್ ಪ್ರಕಾರ, ಮೃತಪಟ್ಟವರನ್ನು ಜಾನ್‌ಪುರದ ದಸರತ್ ಪ್ರಜಾಪತಿ (30) ಮತ್ತು ಅಜಮ್‌ರ್‌ನ ರಾಮರತನ್ ರಘುನಾಥ್ (55) ಎಂದು ಗುರುತಿಸಲಾಗಿದೆ.

ಇವರಲ್ಲಿ ಪ್ರಜಾಪತಿ ಅಂಗವಿಕಲರಾಗಿದ್ದು ಮೂತ್ರಪಿಂಡದ ಕಾಯಿಲೆಯಿಂದ ಬಳಲುತ್ತಿದ್ದರು ಮತ್ತು ರಘುನಾಥ್ ಅನೇಕ ಕಾಯಿಲೆಗಳೊಂದಿಗೆ ಹೋರಾಡುತ್ತಿದ್ದಾರೆ ಎಂದು ರೈಲ್ವೇ ಪೊಲೀಸರು ಹೇಳಿದ್ದಾರೆ.

ಸೂರತ್‌ನಿಂದ ಬಲ್ಲಿಯಾ ತಲುಪಿದ ರೈಲಿನಲ್ಲಿ ಬಿಹಾರದ ಸರನ್ ಮೂಲದ ಭೂಷಣ್ ಸಿಂಗ್ (58) ಶವವಾಗಿ ಪತ್ತೆಯಾಗಿದ್ದಾರೆ ಎಂದು ಪೊಲೀಸ್ ವರಿಷ್ಠಾಧಿಕಾರಿ ದೇವೇಂದ್ರ ನಾಥ್ ತಿಳಿಸಿದ್ದಾರೆ.

ಝಾನ್ಸಿ-ಗೋರಖ್‌ಪುರ ರೈಲಿನಲ್ಲಿ ಕಾನ್ಪುರಕ್ಕೆ ತಲುಪಿದಾಗ ಇಬ್ಬರು ಮೃತಪಟ್ಟಿದ್ದು, ಮೃತ ವ್ಯಕ್ತಿಯಲ್ಲಿ ಒಬ್ಬರನ್ನು ರಾಮ್ ಅವಧ್ ಚೌಹಾನ್ (45) ಎಂದು ಗುರುತಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ; ಎರಡನೇ ವ್ಯಕ್ತಿಯ ಗುರುತನ್ನು ಇನ್ನೂ ಪತೆಯಾಗಿಲ್ಲ ಎಂದು ಹೇಳಿದ್ದಾರೆ.

ಬಿಹಾರ ಮತ್ತು ಉತ್ತರ ಪ್ರದೇಶದ ಎರಡೂ ರೈಲುಗಳ ಮಾರ್ಗದಲ್ಲಿ ಊಟದ ಸೇವೆಯನ್ನು ಹೊಂದಿವೆ ಎಂದು ರೈಲ್ವೆ ಮೂಲಗಳು ತಿಳಿಸಿವೆ.

ಮತ್ತೊಂದು ಪ್ರಕರಣದಲ್ಲಿ, ದೆಹಲಿಯಿಂದ ಮುಜಾಫರ್ಪುರದ 39 ಗಂಟೆಗಳ ಪ್ರಯಾಣದಲ್ಲಿ ನಾಲ್ಕು ವರ್ಷದ ಬಾಲಕ ಮೊಹಮ್ಮದ್ ಇರ್ಷಾದ್ ಬಿಸಿಲು ಹಾಗೂ ಹಸಿವಿನಿಂದ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.

ಸರ್ಕಾರಗಳು ಇವರೆಲ್ಲಾ ಅನಾರೋಗ್ಯದಿಂದ ಮೃತಪಟ್ಟಿದ್ದಾರೆಂದು ಹೇಳಿ ಜಾರಿಕೊಂಡಿದೆ. ಆದರೆ ಈ ರೈಲುಗಳಲ್ಲಿ ಕನಿಷ್ಠ ಮೂಲಭೂತ ಸೌಲಭ್ಯಗಳಿರಲಿಲ್ಲ. ಹಸಿವು ಮತ್ತು ಬಾಯಾರಿಕೆಯಿಂದಲೇ ವಲಸೆ ಕಾರ್ಮಿಕರು ಮೃತಪಟ್ಟಿದ್ದಾರೆಂದು ಸಾರ್ವಜನಿಕರು ಸರ್ಕಾರದ ಮೇಲೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.


ಓದಿ:  60 ದಿನಗಳಿಂದ ರಸ್ತೆಯಲ್ಲಿದ್ದು ವಲಸೆ ಕಾರ್ಮಿಕರ ಮನಕಲಕುವ ಕತೆ ಹೇಳುತ್ತಿರುವ ದಿಟ್ಟ ಪತ್ರಕರ್ತೆ ‘ಬರ್ಖಾ ದತ್’


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...