Homeಚಳವಳಿ‘ನಿನ್ನ ದಾಖಲೆ ಯಾವಾಗ ನೀಡುತ್ತಿ?’ : ‘ಎನ್‌ಆರ್‌ಸಿ ವಿರುದ್ಧ ಕಲಾ ಪ್ರತಿರೋಧ’...

‘ನಿನ್ನ ದಾಖಲೆ ಯಾವಾಗ ನೀಡುತ್ತಿ?’ : ‘ಎನ್‌ಆರ್‌ಸಿ ವಿರುದ್ಧ ಕಲಾ ಪ್ರತಿರೋಧ’…

ಕವನ ಸಂಕಲನದ ಸಂಪಾದಕಿ ಯಮುನಾ ಗಾಂವ್ಕರ್ ಬರೆದು ಮುನ್ನುಡಿ...

- Advertisement -
- Advertisement -

ಸಾವಿರಾರು ನೂರಾರು ವರ್ಷಗಳಿಂದ ಬಾಳಿ ಬದುಕಿ ಬಹುತ್ವದ ಭಾರತ ಕಟ್ಟಿದವರಿಗೆ, ಇಲ್ಲಿನ ಮಣ್ಣಿನ ಕಣಕಣದಲ್ಲೂ ರಕ್ತವನ್ನೇ ಬೆವರಾಗಿಸಿದವರಿಗೆ, ಈ ನೆಲದೊಂದಿಗಿನ ಸಂಬಂಧದ ದಾಖಲೆ ಒದಗಿಸಿ ಎಂದು ಕೇಳುವುದೇ ಮೂರ್ಖತನ. ಇಂತಹ ಮೂರ್ಖತನದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಜಾತಿ, ಧರ್ಮ, ಭಾಷೆ, ಪ್ರದೇಶ, ಲಿಂಗ ಬೇಧಗಳನ್ನು ಮೀರಿ ದೇಶದಾದ್ಯಂತ ಪ್ರತಿಭಟನೆಯ ಕಿಚ್ಚು ಹಬ್ಬಿದೆ. ಸ್ವಾತಂತ್ರ್ಯ ಚಳುವಳಿಯನ್ನು ನೆನಪಿಸುವಂತೆ ಸಾಗರದ ಅಲೆಗಳಂತೆ ಜನ ಮುನ್ನುಗ್ಗುತ್ತಿದ್ದಾರೆ.

ಈ ಶತಮಾನದ ‘ಅವಮಾನಿತ ಕಾಲ’ ಎಂದೇ ವ್ಯಾಖ್ಯಾನಿಸಬಹುದಾದ ಈ  ಕಾಲದಲ್ಲಿ ಕಾವ್ಯ ಬೀದಿಗೆ ಬರದಿರಲು ಸಾಧ್ಯವೇ ಇಲ್ಲ. ಉಸಿರುಗಟ್ಟಿಸುವ ಪ್ರಭುತ್ವದ ಅರಮನೆ ಹಂಗಿನರಮನೆಯಾಗಿದೆ. ‘ನಾನು ನಿಮ್ಮಂತೆ, ನಿಮ್ಮವರಂತೆ, ನಿಮ್ಮ ಸಖನಂತೆ’ ಎಂದು ನಂಬಿಸಿ ಕೊರಳು ಕೊಯ್ಯವ ಕೆಲಸ ಸಾಗಿದೆ. ಕೊರಳು ಕೊಯ್ಯುವ ಕತ್ತಿ ಬಹಳ ಹರಿತವಾಗಿದೆ. ಇಂತಹ ಸನ್ನಿವೇಶದಲ್ಲಿ ಅಭಿವ್ಯಕ್ತಿ ಸ್ವಾತಂತ್ರ್ಯದ ಮೇಲೆ ತೀವ್ರವಾದ ಹಲ್ಲೆ ನಡೆಯುತ್ತಿರುವಾಗ ಕವಿಗಳು, ಕಲಾವಿದರು, ಚಿಂತಕರು ಮೌನಗರ್ಭದಿಂದ  ಹೊರಬರಬೇಕಾಗಿದೆ. ಬರುತ್ತಿದ್ದಾರೆ ಕೂಡಾ. ಪ್ರಭುತ್ವದ ಸರ್ವಾಧಿಕಾರದ ವಿರುದ್ಧ ಜನರ ಜೊತೆಗೆ ನಿಂತು ಅವರನ್ನು ಎಚ್ಚರಿಸುವುದರಲ್ಲಿ ತೊಡಗಿದ್ದಾರೆ. ಭವಿಷ್ಯದ ಕುರಿತು ಭರವಸೆ ಮೂಡಿಸುವ ಬೆಳವಣಿಗೆ ಇದು.

ಕೊಪ್ಪಳದ ಕವಿ ಹಾಗೂ ಪತ್ರಕರ್ತ ಸಿರಾಜ್ ಬಿಸರಳ್ಳಿಯವರು ಇತ್ತೀಚೆಗೆ ನಡೆದ ಆನೆಗೊಂದಿ ಉತ್ಸವದಲ್ಲಿ ಅವರು ರಚಿಸಿದ್ದ ‘ನಿನ್ನ ದಾಖಲೆ ಯಾವಾಗ ನೀಡುತ್ತಿ?’ ಎಂಬ ಕವಿತೆಯೊಂದನ್ನು ಓದಿದರು. ಪ್ರಭುತ್ವದ ಭಕ್ತರು ನೀಡಿದ ದೂರಿನ ಮೇರೆಗೆ ಪೊಲೀಸರು ಕವಿಯ ಮೇಲೆ FIR ಹಾಕಿದ್ದಾರೆ. ಕವಿಗಳನ್ನು ದೇಶದ್ರೋಹಿಗಳೆಂದು, ಕವಿತೆಗಳನ್ನು ದೇಶದ್ರೋಹದ, ಧರ್ಮದ್ರೋಹದ ಕೃತ್ಯಗಳು ಎಂದು ಪರಿಗಣಿಸುವ ಪರಿಪಾಠ ಇಂದು ನೆನ್ನೆಯದೇನೂ ಅಲ್ಲ. ಸ್ವಾತಂತ್ರ‍್ಯ ಹೋರಾಟದ ಸಂದರ್ಭದಲ್ಲಿ ‘ನರಬಲಿ’ ಎಂಬ ಕವಿತೆ ಬರೆದ ದ.ರಾ.ಬೇಂದ್ರೆಯವರನ್ನೂ ಜೈಲಿಗೆ ತಳ್ಳಿತ್ತು ಅಂದಿನ ಬ್ರಿಟಿಷ್ ಸರ್ಕಾರ. ಆ ಮೆಲೆಯೂ ಇಂತ ಪ್ರಕರಣಗಳು ಆಗಾಗ ನಡೆದದ್ದಿದೆ.  ಆದರೆ ಪ್ರತಿರೋಧದ ದನಿಗೆ ಮುಖಾಮುಖಿಯಾಗಲು ಬೆದರಿದ ಪ್ರಭುತ್ವ  ಇಂದು ಈ ದಾಳಿಯನ್ನು ತೀವ್ರಗೊಳಿಸಿದೆ.

ಒಂದು ಕವಿತೆಯ ಮೇಲೆ FIR ದಾಖಲಿಸಿದ್ದನ್ನು ಪ್ರತಿಭಟಿಸಿ, CAA-NRC-NPR ಗಳನ್ನು ಪ್ರಶ್ನಿಸುವ, ಪ್ರಭುತ್ವಕ್ಕೆ ಸೆಡ್ಡು ಹೊಡೆಯುವ ಸಾಲು ಸಾಲು ಕವಿತೆಗಳು ಬಂದಿವೆ. ಅಕ್ಷರ ಲೋಕದ ಈ ಸಾತ್ವಿಕ ಪ್ರತಿರೋಧ ಹೇಗಿದೆ ಎಂದರೆ ಸಿರಾಜ್ ಬಿಸರಳ್ಳಿಯವರ ಪದ್ಯ ಕೇವಲ ಎರಡು ದಿನಗಳಲ್ಲಿ 12 ಭಾಷೆಗಳಿಗೆ ಅನುವಾದವಾಗಿ ‘ವೈರಲ್’ ಆಗಿದೆ. ಈಗಾಗಲೇ ಎನ್‌ಆರ್‌ಸಿ-ಪ್ರತಿರೋಧದ ಸಭೆ, ರ‍್ಯಾಲಿ, ಮೆರವಣಿಗೆಗಳಲ್ಲಿ ಕವಿತೆ ವಾಚನ ಸಾಮಾನ್ಯವಾಗಿದೆ. ಅತ್ಯಂತ ಸೃಜನಶೀಲ ಪೋಸ್ಟರುಗಳು, ಬ್ಯಾನರುಗಳು, ಕಲಾಕೃತಿಗಳು ದೇಶದಾದ್ಯಂತ ಪ್ರತಿರೋಧದ ಭಾಗವಾಗಿ ಬಂದಿವೆ. ಒಟ್ಟಾರೆಯಾಗಿ ಇದನ್ನು ‘ಎನ್‌ಆರ್‌ಸಿ ವಿರುದ್ಧ ಕಲಾ ಪ್ರತಿರೋಧ’ ಎಂದು ಕರೆಯಬಹುದಾದಷ್ಟು ನಿಚ್ಚಳವಾದ ಟ್ರೆಂಡ್ ಆಗಿದೆ.

‘ನಿನ್ನ ದಾಖಲೆ ಯಾವಾಗ ನೀಡುತ್ತಿ?’ ಇಂತಹ ಕಲಾ ಪ್ರತಿರೋಧದ ಕವಿತೆಗಳ ಸಂಕಲನ. ಇಲ್ಲಿ ಕನ್ನಡದಲ್ಲಿ ಪ್ರಮುಖವಾಗಿ ಎನ್‌ಆರ್‌ಸಿ ಗೆ ಪ್ರತಿರೋಧದ ಹಿನ್ನೆಲೆಯಲ್ಲಿ ಬಂದ ಕವಿತೆಗಳಿವೆ. ಇವಲ್ಲದೆ ಚಳುವಳಿಯ ‘ಅಧಿಕೃತ ಗೀತೆ’ಯೇ ಆಗಿರುವ ವರುಣ್ ಗ್ರೋವರ್ ಅವರ ‘ಹಮ್ ಕಾಗಜ್ ನಹೀ ದಿಖಾಯೆಂಗೆ’ ಸೇರಿದಂತೆ ಹಿಂದಿ, ಇಂಗ್ಲೀಷ್ ಮತ್ತಿತರ ಭಾಷೆಗಳಲ್ಲಿ ಎನ್.ಆರ್.ಸಿ ಗೆ ಪ್ರತಿರೋಧ ಚಳುವಳಿಯ ಭಾಗವಾಗಿ ಬಂದ ಕೆಲವು ಪ್ರಮುಖ ಕವಿತೆಗಳ ಅನುವಾದಗಳೂ ಇವೆ. ಇಲ್ಲಿರುವ ಕವಿತೆಗಳಲ್ಲಿ ‘ನನ್ನ ದಾಖಲೆ ಕೇಳುವ ಮೊದಲು ನಿಮ್ಮ ದಾಖಲೆ ತೋರಿಸಿ’ ಎಂದು ಸವಾಲು ಹಾಕುವ ‘ಅವರ’ ಕೆಟ್ಟ ಭೀಕರ ದಾಖಲೆಗಳನ್ನು ಬಯಲಿಗೆಳೆಯುವ ಕವಿತೆಗಳು ಒಂದು ವಿಧ. ನಮ್ಮ ಗುರುತು ದಾಖಲೆಗಳಲ್ಲಿ ಅಲ್ಲ, ನೆಲದಲ್ಲಿ ಹಾಸುಹೊಕ್ಕಾಗಿರುವ ನಮ್ಮ ಬದುಕಿನ ವಿವಿಧ ಆಯಾಮಗಳಲ್ಲಿ ಇದೆ ಎಂದು ದೃಢವಾಗಿ ತಿಳಿಹೇಳುವ ಕವಿತೆಗಳು ಇನ್ನೊಂದು ವಿಧ. ಕವಿತೆಗೆ ಬೆದರಿ ಕೇಸು ಹಾಕುವುದನ್ನು ಮತ್ತಿತರ ದಮನ ಕ್ರಮಗಳನ್ನು ಎದುರಿಸುವ, ಲೇವಡಿ ಮಾಡುವ, ಜನರ ದನಿಯಾಗಬಲ್ಲ ಕಾವ್ಯದ ಶಕ್ತಿಯನ್ನು ಎತ್ತಿ ಹಿಡಿಯುವ ಕವಿತೆಗಳು ಮಗದೊಂದು ವಿಧ. ಇವಲ್ಲದೆ ಹಿಟ್ಟರನ ನಾಜಿವಾದ ಅವನೊಂದಿಗೆ ಸತ್ತಿಲ್ಲ ಎಂಬುದರ ಕುರಿತು ಬರೆದ ಆಡೆನ್ ಅವರ ಚಾರಿತ್ರಿಕ ಕವಿತೆಯ ಅನುವಾದವೂ ಇಲ್ಲಿದೆ. ಸರ್ವಾಧಿಕಾರಿ, ಅದರಲ್ಲೂ ಧರ್ಮದ ಹೆಸರಿನಲ್ಲಿ ಸಮರ್ಥಿಸಿಕೊಳ್ಳುವ, ಪ್ರಭುತ್ವಗಳ ದಮನದ ವಿರುದ್ಧ ಚಳುವಳಿಗಳ ಪ್ರತಿರೋಧದ ಗೀತೆಯಾಗಿದ್ದು, ಎನ್‌ಆರ್‌ಸಿ ವಿರುದ್ಧ ಚಳುವಳಿಯಲ್ಲೂ ವ್ಯಾಪಕವಾಗಿ ಕೇಳಿ ಬಂದಿರುವ ಫೈಜ್ ಅಹ್ಮದ್ ಫೈಜ್ ಅವರ ‘ಹಮ್ ದೇಖೇಂಗೆ’ಯ ಅನುವಾದವೂ ಇದೆ.

ಇವಲ್ಲದೆ ಪ್ರತಿರೋಧದ ಭಾಗವಾಗಿ ಬಂದ ಪೋಸ್ಟರುಗಳು, ಕಲಾಕೃತಿಗಳು ಇಲ್ಲಿವೆ. Fearless-“ಹಮ್ ಯಹೀಂ ಕೆ ಹೈಂ” (ನಿರ್ಭಯರು-ನಾವು ಇಲ್ಲಿಯವರೇ, ಮಹಿಳೆಯರು, ಮುಸ್ಲಿಮರು, ಹಿಂದುಗಳು, ಸಿಖ್ಖರು, ಆದಿವಾಸಿಗಳು, ದಲಿತರು ಇಲ್ಲಿಯವರೇ) ಈ ಚಳುವಳಿಯಲ್ಲಿ ಮೂಡಿಬಂದು ಎಲ್ಲರ ಗಮನ ಸೆಳೆದಿರುವ ಕಲಾಕೃತಿಯನ್ನು ಮುಖಪುಟದಲ್ಲಿ, ಮತ್ತು  ಶಾಹೀನ್ ಬಾಗ್ ಭೇಟಿಯಿಂದ ಸ್ಫೂರ್ತಿ ಪಡೆದು ರಚಿಸಿರುವ, ಅಲ್ಲಿ ಪ್ರದರ್ಶಿತಗೊಂಡು ಎಲ್ಲರನ್ನೂ ಸೆಳೆಯುತ್ತಿರುವ ಶಾಹೀನ್ ಬಾಗ್- ಹಮ್ ದೇಖೇಂಗೆ- ಲಾಜಿಮ್ ಹೈ ಹಮ್ ಭೀ ದೇಖೇಂಗೆ( ನಾವು ಕಾಣುವೆವು, ನಾವು ಕಂಡೇ ಕಾಣುವೆವು) ಎಂಬ ಕಲಾಕೃತಿಯನ್ನು ಹಿಂದಿನ ಪುಟದಲ್ಲಿ ಬಳಸಿಕೊಡಿದ್ದೇವೆ.

ಕವನ ಸಂಕಲನದ ಸಂಪಾದಕಿ ಯಮುನಾ ಗಾಂವ್ಕರ್

ಹೋರಾಟದ ಅಗತ್ಯವಾಗಿ ಈ ಕವಿತೆ ಸಂಕಲನ ದಿಢೀರ್ ಆಗಿ ಬಂತು. ಇದಕ್ಕೆ ಕೈಜೋಡಿಸಿದ ತಮ್ಮ ಕವಿತೆಗಳನ್ನು ಕಳಿಸಿದ, ಹಾಕಿಕೊಳ್ಳಲು ಅನುಮತಿ ಕೊಟ್ಟ, ಕವಿತೆಗಳನ್ನು ಅನುವಾದಿಸಿದ ಎಲ್ಲ ಕವಿಗಳಿಗೆ ಶರಣು. ಎಲ್ಲ ಕವಿಗಳಿಗೆ ಈ ಸಂಕಲನದ ಬಗ್ಗೆ ಮಾಹಿತಿ ಕೊಡಲು ಸಾಧ್ಯವಾಗಿಲ್ಲ. ಅದಕ್ಕೆ ಕ್ಷಮೆ ಇರಲಿ. ಇದೇ ರೀತಿ ಇಲ್ಲಿ ಬಳಸಿಕೊಳ್ಳಲಾದ ಸಾಮಾಜಿಕ ಮಾಧ್ಯಮಗಳಲ್ಲಿ ಬಂದಿರುವ ಪೋಸ್ಟರುಗಳು, ಕಲಾಕೃತಿಗಳ ಮೂಲ ಕಲಾವಿದರಿಗೆ ನಮ್ಮ ಕೃತಜ್ಞತೆಗಳು. ಅವರೆಲ್ಲರನ್ನು ಸಂಪರ್ಕಿಸುವುದು ಸಾಧ್ಯವಾಗಿಲ್ಲ. ಈ ಸಂಕಲನವನ್ನು ಯೋಜಿಸಿ, ಸಂಪಾದಿಸುವ ಜವಾಬ್ದಾರಿಯನ್ನು ನನಗೆ ಒಪ್ಪಿಸಿ, ಪ್ರಕಟಿಸುತ್ತಿರುವ ಕ್ರಿಯಾ ಮಾಧ್ಯಮ ತಂಡಕ್ಕೂ, ಮುಖಪುಟ ವಿನ್ಯಾಸ ಮಾಡಿರುವ ರಾಮು ಅವರಿಗೂ, ದಿಢೀರ್ ಮುದ್ರಣ ಮಾಡಿಕೊಟ್ಟ ಚಂದ್ರು ಅವರ ತಂಡಕ್ಕೂ ಅನಂತ ಧನ್ಯವಾದಗಳು.

ಬಹು ಹಿಂದೆ ಓದಿದ ಕವಿತೆಯೇಕೋ ಮತ್ತೆ ಮತ್ತೆ  ನೆನಪಾಗುತ್ತಿದೆ.

“ನಿಮ್ಮ ಮಾತುಕತೆಗಳಲ್ಲಿ ಹುದುಗಿದ ಬೆಕ್ಕು / ಸಂಶಯದ ಪಂಜವೆತ್ತಿ

ನನ್ನ ನಂಬಿಕೆ ನೀಯತ್ತು ಹಕ್ಕು / ಕೊನೆಗೆ ಸಾಚಾತನವನ್ನು ಪರಚಿ, ಒತ್ತಿ

ನೋವಿಗೆ ಕಣ್ಣು ತುಂಬಿದ್ದರೂ / ಚೆಲ್ಲಿದ ರಕ್ತದಲ್ಲಿ ರಾಷ್ಟ್ರೀಯತೆಯ ಧಾತುಗಳ

ನನ್ನೆದುರಿನಲ್ಲೇ ತನಿಖೆ ಮಾಡುವುದನ್ನು /  ಹುಸಿನಗುತ್ತ ಎದುರಿಸುವುದಿದೆಯಲ್ಲ

ಅದು ಬಲು ಕಷ್ಟದ ಕೆಲಸ”

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಮಾನವೀಯತೆಯೇ ಏಕೈಕ ಧರ್ಮ..’; ಹಳ್ಳಿಯನ್ನು ಜಾತಿ ಮುಕ್ತ ಎಂದು ಘೋಷಿಸಿದ ಮಹಾರಾಷ್ಟ್ರದ ಸೌಂದಲ ಗ್ರಾಮ

ಮಹಾರಾಷ್ಟ್ರದ ಅಹಲ್ಯಾನಗರ ಜಿಲ್ಲೆಯ ಸೌಂದಲ ಗ್ರಾಮವು ತನ್ನನ್ನು ತಾನು 'ಜಾತಿ ಮುಕ್ತ' ಎಂದು ಘೋಷಿಸಿಕೊಂಡಿದ್ದು, ಸಂವಿಧಾನದ ಪೀಠಿಕೆ ಮೌಲ್ಯಗಳಾದ ಸ್ವಾತಂತ್ರ್ಯ, ಸಮಾನತೆ ಮತ್ತು ಭ್ರಾತೃತ್ವವನ್ನು ಮಾರ್ಗದರ್ಶಿ ತತ್ವವಾಗಿ ಅಳವಡಿಸಿಕೊಂಡಿದೆ. ಫೆಬ್ರವರಿ 5 ರಂದು ನಡೆದ...

ಸಿಎಂ ಸಿದ್ದರಾಮಯ್ಯ ಹೆಸರಿನಲ್ಲಿ ನಕಲಿ ವರ್ಗಾವಣೆ ಪತ್ರ ಹಂಚಿಕೆ: ದೂರು ದಾಖಲು

ಮಂಡ್ಯ ಜಿಲ್ಲಾ ಆರೋಗ್ಯಾಧಿಕಾರಿ ಡಾ.ಕೆ ಮೋಹನ್ ಅವರನ್ನು ಮೈಸೂರು ಗ್ರಾಮಾಂತರದ ಅಬಕಾರಿ ಉಪ ಆಯುಕ್ತರಾಗಿ ನಿಯೋಜಿಸುವ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹೆಸರಿನಲ್ಲಿ ಪತ್ರವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಇದು ನಕಲಿ...

ಎರಡು ವರ್ಷದಲ್ಲಿ 532 ನಕ್ಸಲರ ಹತ್ಯೆ; 2004 ಜನರ ಬಂಧನ: ಛತ್ತೀಸ್‌ಗಢ ಉಪ ಮುಖ್ಯಮಂತ್ರಿ

2024 ರ ಜನವರಿಯಿಂದ ರಾಜ್ಯದಲ್ಲಿ 532 ನಕ್ಸಲರು ಸಾವನ್ನಪ್ಪಿದ್ದಾರೆ, 2004 ಜನರನ್ನು ಬಂಧಿಸಲಾಗಿದ್ದು, 2,700 ಜನರು ಶರಣಾಗಿದ್ದಾರೆ ಎಂದು ಛತ್ತೀಸ್‌ಗಢ ಉಪಮುಖ್ಯಮಂತ್ರಿ ವಿಜಯ್ ಶರ್ಮಾ ಶುಕ್ರವಾರ ಹೇಳಿದ್ದಾರೆ. 2026ರ ಮಾರ್ಚ್ 31 ರೊಳಗೆ...

ಅತ್ಯಾಚಾರ ಸಂತ್ರಸ್ತೆಯನ್ನು ವಿವಾಹವಾಗುವುದಾಗಿ ಒಪ್ಪಿದ ಪೋಕ್ಸೋ ಪ್ರಕರಣದ ಆರೋಪಿಗೆ ಜಾಮೀನು

ಅಸ್ಸಾಂ (ಬೊಂಗಾನ್): ಎರಡು ವರ್ಷಗಳ ಹಿಂದೆ ಅಪ್ರಾಪ್ತ ವಯಸ್ಕಳೊಂದಿಗೆ ಸ್ನೇಹ ಬೆಳೆಸಿದ ನಂತರ ಅವಳೊಂದಿಗೆ ಸಹವಾಸ ಮಾಡಿದ ಆರೋಪದ ಮೇಲೆ ಬಂಧಿಸಲ್ಪಟ್ಟ 24 ವರ್ಷದ ಯುವಕನಿಗೆ ಇಲ್ಲಿನ ಬೊಂಗಾನ್ ಉಪ-ವಿಭಾಗೀಯ ನ್ಯಾಯಾಲಯವು ಜಾಮೀನು...

ಕೇರಳ: ಪಾದಚಾರಿ ಮಾರ್ಗದಲ್ಲಿ ಸ್ಕೂಟರ್ ಸವಾರನನ್ನು ತಡೆದ ವೃದ್ಧೆಗೆ ಸಾರಿಗೆ ಅಧಿಕಾರಿಗಳಿಂದ ಸನ್ಮಾನ

ಕಳೆದ ಶುಕ್ರವಾರ ಕೋಝಿಕ್ಕೋಡ್‌ನಲ್ಲಿ ಸ್ಕೂಟರ್ ಸವಾರನೊಬ್ಬ ಪಾದಚಾರಿ ಮಾರ್ಗದಲ್ಲಿ ಬೈಕ್ ಚಾಲನೆ ಮಾಡುವುದುನ್ನು ತಡೆದ ವೃದ್ಧ ಮಹಿಳೆಯನ್ನು ಕೇರಳದ ಮೋಟಾರು ವಾಹನ ಇಲಾಖೆ (ಎಂವಿಡಿ) ಅಧಿಕಾರಿಗಳು ಸನ್ಮಾನಿಸಿದರು. ಮುಖ್ಯ ರಸ್ತೆಯಲ್ಲಿನ ದಟ್ಟಣೆಯನ್ನು ತಪ್ಪಿಸಲು ಎರಂಜಿಪಾಲಂನ...

ಫೆಬ್ರವರಿ 14, ಪ್ರೇಮಿಗಳ ದಿನದಂದು ನಂದಿ ಬೆಟ್ಟಕ್ಕೆ ಪ್ರವೇಶ ನಿರ್ಬಂಧ: ಬೆಳಗ್ಗೆ 6 ರಿಂದ ಸಂಜೆ 6ರವರೆಗೆ ಪ್ರವೇಶ ನಿಷೇಧಿಸಿದ ಜಿಲ್ಲಾಡಳಿತ 

ಚಿಕ್ಕಬಳ್ಳಾಪುರ ಜಿಲ್ಲಾಡಳಿತ ಫೆಬ್ರವರಿ 14 ರಂದು ಬೆಳಿಗ್ಗೆ 6 ರಿಂದ ಸಂಜೆ 6 ರವರೆಗೆ ನಂದಿ ಬೆಟ್ಟಕ್ಕೆ ಪ್ರವಾಸಿಗರು ಪ್ರವೇಶಿಸುವುದನ್ನು ನಿಷೇಧಿಸಿ ಆದೇಶ ಹೊರಡಿಸಿದೆ. ಬೆಂಗಳೂರಿನಿಂದ ಸುಮಾರು 60 ಕಿ.ಮೀ ದೂರದಲ್ಲಿರುವ ಈ...

ಮೊಹಮ್ಮದ್ ದೀಪಕ್ ಜಿಮ್‌ನಲ್ಲಿ ಸದಸ್ಯತ್ವ ಪಡೆದ 15 ಜನ ಹಿರಿಯ ಸುಪ್ರೀಂ ಕೋರ್ಟ್ ವಕೀಲರು

ಉತ್ತರಾಖಂಡದ ಕೋಟ್ದ್ವಾರದ ದೀಪಕ್ ಅವರ ಜಿಮ್‌ ಈ ಹಿಂದೆ 150 ಕ್ಕೂ ಹೆಚ್ಚು ಸದಸ್ಯರನ್ನು ಹೊಂದಿತ್ತು, ಜನನಿಬಿಡ ಕೇಂದ್ರವಾಗಿದ್ದ ದೀಪಕ್ ಕುಮಾರ್ ಅವರ 'ಹಲ್ಕ್' ಜಿಮ್‌ಗೆ, ಮುಸ್ಲಿಂ ವ್ಯಾಪಾರಿ ಪರವಾಗಿ ನಿಂತ ಬಳಿಕ...

ಮೀರತ್‌ನಲ್ಲಿ ‘ಲವ್ ಜಿಹಾದ್’ ಕಾನೂನಿನಡಿಯಲ್ಲಿ ಮುಸ್ಲಿಂ ವ್ಯಕ್ತಿ ವಿರುದ್ಧ ಪ್ರಕರಣ ದಾಖಲು; ಹಿಂದುತ್ವದ ಹೇಳಿಕೆಗಳನ್ನು ತಿರಸ್ಕರಿಸಿದ ಬೌದ್ಧ ವಧು

ಉತ್ತರ ಪ್ರದೇಶದ ಮುಸ್ಲಿಂ ವ್ಯಕ್ತಿಯೊಬ್ಬನ ವಿರುದ್ಧ ವಧುವಿನ ಚಿಕ್ಕಪ್ಪ ಆತನ ನಿಶ್ಚಿತಾರ್ಥದ ದಿನ ಅಂತರಧರ್ಮೀಯ ವಿವಾಹಕ್ಕೆ ಆಕ್ಷೇಪ ವ್ಯಕ್ತಪಡಿಸಿ ಪೊಲೀಸ್ ದೂರು ದಾಖಲಿಸಿದ್ದು, ಶುಕ್ರವಾರ ನಡೆಯಬೇಕಿದ್ದ ವಿವಾಹದ ಸುತ್ತ ಉದ್ವಿಗ್ನತೆ ಹೆಚ್ಚಾಗಿದೆ. ಈ ಪ್ರಕರಣವು...

ತಮಿಳುನಾಡು: ವಿಧಾನಸಭಾ ಚುನಾವಣೆಗೂ ಮುನ್ನ 1.31 ಕೋಟಿ ಮಹಿಳೆಯರ ಖಾತೆಗೆ 5000ರೂ ಜಮಾ ಮಾಡಿದ ಸ್ಟಾಲಿನ್ ಸರ್ಕಾರ

ಚೆನ್ನೈ: ವಿಧಾನಸಭಾ ಚುನಾವಣೆಗೆ ಮುನ್ನ ಮಹತ್ವದ ಹೆಜ್ಜೆಯಾಗಿ, ತಮಿಳುನಾಡಿನ ಡಿಎಂಕೆ ಸರ್ಕಾರ ಶುಕ್ರವಾರ ಮಹಿಳೆಯರಿಗೆ ಮಾಸಿಕ ರೂ.1,000 ಸಹಾಯ ಯೋಜನೆಯ 1.31 ಕೋಟಿ ಫಲಾನುಭವಿಗಳ ಬ್ಯಾಂಕ್ ಖಾತೆಗಳಿಗೆ ರೂ.5,000 ಜಮಾ ಮಾಡಿದೆ. ಏಪ್ರಿಲ್-ಮೇ ವಿಧಾನಸಭಾ...

17 ವರ್ಷಗಳ ಗಡಿಪಾರಿನ ಬಳಿಕ ತಾರಿಕ್ ರೆಹಮಾನ್ ರಾಜಕೀಯ ಪುನರಾಗಮನ; ಬಾಂಗ್ಲಾದೇಶ ಚುನಾವಣೆಯಲ್ಲಿ ಬಿಎನ್‌ಪಿಗೆ ಬಹುಮತ

17 ವರ್ಷಗಳ ಗಡಿಪಾರಾದ ನಂತರ ತಾರಿಕ್ ರೆಹಮಾನ್ ರಾಜಕೀಯವಾಗಿ ಪುನರಾಗಮನ ಮಾಡಿದ್ದಾರೆ. 2026 ರ ಬಾಂಗ್ಲಾದೇಶ ಚುನಾವಣೆಯಲ್ಲಿ ಬಾಂಗ್ಲಾದೇಶ ರಾಷ್ಟ್ರೀಯತಾವಾದಿ ಪಕ್ಷವನ್ನು ಭರ್ಜರಿ ಗೆಲುವಿನತ್ತ ಕೊಂಡೊಯ್ದಿದ್ದಾರೆ. ಬಿಎನ್‌ಪಿ ಅಧ್ಯಕ್ಷರಾಗಿರುವ ತಾರಿಕ್ ಎರಡು ಕ್ಷೇತ್ರಗಳಿಂದ...