Homeಚಳವಳಿ‘ನಿನ್ನ ದಾಖಲೆ ಯಾವಾಗ ನೀಡುತ್ತಿ?’ : ‘ಎನ್‌ಆರ್‌ಸಿ ವಿರುದ್ಧ ಕಲಾ ಪ್ರತಿರೋಧ’...

‘ನಿನ್ನ ದಾಖಲೆ ಯಾವಾಗ ನೀಡುತ್ತಿ?’ : ‘ಎನ್‌ಆರ್‌ಸಿ ವಿರುದ್ಧ ಕಲಾ ಪ್ರತಿರೋಧ’…

ಕವನ ಸಂಕಲನದ ಸಂಪಾದಕಿ ಯಮುನಾ ಗಾಂವ್ಕರ್ ಬರೆದು ಮುನ್ನುಡಿ...

- Advertisement -
- Advertisement -

ಸಾವಿರಾರು ನೂರಾರು ವರ್ಷಗಳಿಂದ ಬಾಳಿ ಬದುಕಿ ಬಹುತ್ವದ ಭಾರತ ಕಟ್ಟಿದವರಿಗೆ, ಇಲ್ಲಿನ ಮಣ್ಣಿನ ಕಣಕಣದಲ್ಲೂ ರಕ್ತವನ್ನೇ ಬೆವರಾಗಿಸಿದವರಿಗೆ, ಈ ನೆಲದೊಂದಿಗಿನ ಸಂಬಂಧದ ದಾಖಲೆ ಒದಗಿಸಿ ಎಂದು ಕೇಳುವುದೇ ಮೂರ್ಖತನ. ಇಂತಹ ಮೂರ್ಖತನದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಜಾತಿ, ಧರ್ಮ, ಭಾಷೆ, ಪ್ರದೇಶ, ಲಿಂಗ ಬೇಧಗಳನ್ನು ಮೀರಿ ದೇಶದಾದ್ಯಂತ ಪ್ರತಿಭಟನೆಯ ಕಿಚ್ಚು ಹಬ್ಬಿದೆ. ಸ್ವಾತಂತ್ರ್ಯ ಚಳುವಳಿಯನ್ನು ನೆನಪಿಸುವಂತೆ ಸಾಗರದ ಅಲೆಗಳಂತೆ ಜನ ಮುನ್ನುಗ್ಗುತ್ತಿದ್ದಾರೆ.

ಈ ಶತಮಾನದ ‘ಅವಮಾನಿತ ಕಾಲ’ ಎಂದೇ ವ್ಯಾಖ್ಯಾನಿಸಬಹುದಾದ ಈ  ಕಾಲದಲ್ಲಿ ಕಾವ್ಯ ಬೀದಿಗೆ ಬರದಿರಲು ಸಾಧ್ಯವೇ ಇಲ್ಲ. ಉಸಿರುಗಟ್ಟಿಸುವ ಪ್ರಭುತ್ವದ ಅರಮನೆ ಹಂಗಿನರಮನೆಯಾಗಿದೆ. ‘ನಾನು ನಿಮ್ಮಂತೆ, ನಿಮ್ಮವರಂತೆ, ನಿಮ್ಮ ಸಖನಂತೆ’ ಎಂದು ನಂಬಿಸಿ ಕೊರಳು ಕೊಯ್ಯವ ಕೆಲಸ ಸಾಗಿದೆ. ಕೊರಳು ಕೊಯ್ಯುವ ಕತ್ತಿ ಬಹಳ ಹರಿತವಾಗಿದೆ. ಇಂತಹ ಸನ್ನಿವೇಶದಲ್ಲಿ ಅಭಿವ್ಯಕ್ತಿ ಸ್ವಾತಂತ್ರ್ಯದ ಮೇಲೆ ತೀವ್ರವಾದ ಹಲ್ಲೆ ನಡೆಯುತ್ತಿರುವಾಗ ಕವಿಗಳು, ಕಲಾವಿದರು, ಚಿಂತಕರು ಮೌನಗರ್ಭದಿಂದ  ಹೊರಬರಬೇಕಾಗಿದೆ. ಬರುತ್ತಿದ್ದಾರೆ ಕೂಡಾ. ಪ್ರಭುತ್ವದ ಸರ್ವಾಧಿಕಾರದ ವಿರುದ್ಧ ಜನರ ಜೊತೆಗೆ ನಿಂತು ಅವರನ್ನು ಎಚ್ಚರಿಸುವುದರಲ್ಲಿ ತೊಡಗಿದ್ದಾರೆ. ಭವಿಷ್ಯದ ಕುರಿತು ಭರವಸೆ ಮೂಡಿಸುವ ಬೆಳವಣಿಗೆ ಇದು.

ಕೊಪ್ಪಳದ ಕವಿ ಹಾಗೂ ಪತ್ರಕರ್ತ ಸಿರಾಜ್ ಬಿಸರಳ್ಳಿಯವರು ಇತ್ತೀಚೆಗೆ ನಡೆದ ಆನೆಗೊಂದಿ ಉತ್ಸವದಲ್ಲಿ ಅವರು ರಚಿಸಿದ್ದ ‘ನಿನ್ನ ದಾಖಲೆ ಯಾವಾಗ ನೀಡುತ್ತಿ?’ ಎಂಬ ಕವಿತೆಯೊಂದನ್ನು ಓದಿದರು. ಪ್ರಭುತ್ವದ ಭಕ್ತರು ನೀಡಿದ ದೂರಿನ ಮೇರೆಗೆ ಪೊಲೀಸರು ಕವಿಯ ಮೇಲೆ FIR ಹಾಕಿದ್ದಾರೆ. ಕವಿಗಳನ್ನು ದೇಶದ್ರೋಹಿಗಳೆಂದು, ಕವಿತೆಗಳನ್ನು ದೇಶದ್ರೋಹದ, ಧರ್ಮದ್ರೋಹದ ಕೃತ್ಯಗಳು ಎಂದು ಪರಿಗಣಿಸುವ ಪರಿಪಾಠ ಇಂದು ನೆನ್ನೆಯದೇನೂ ಅಲ್ಲ. ಸ್ವಾತಂತ್ರ‍್ಯ ಹೋರಾಟದ ಸಂದರ್ಭದಲ್ಲಿ ‘ನರಬಲಿ’ ಎಂಬ ಕವಿತೆ ಬರೆದ ದ.ರಾ.ಬೇಂದ್ರೆಯವರನ್ನೂ ಜೈಲಿಗೆ ತಳ್ಳಿತ್ತು ಅಂದಿನ ಬ್ರಿಟಿಷ್ ಸರ್ಕಾರ. ಆ ಮೆಲೆಯೂ ಇಂತ ಪ್ರಕರಣಗಳು ಆಗಾಗ ನಡೆದದ್ದಿದೆ.  ಆದರೆ ಪ್ರತಿರೋಧದ ದನಿಗೆ ಮುಖಾಮುಖಿಯಾಗಲು ಬೆದರಿದ ಪ್ರಭುತ್ವ  ಇಂದು ಈ ದಾಳಿಯನ್ನು ತೀವ್ರಗೊಳಿಸಿದೆ.

ಒಂದು ಕವಿತೆಯ ಮೇಲೆ FIR ದಾಖಲಿಸಿದ್ದನ್ನು ಪ್ರತಿಭಟಿಸಿ, CAA-NRC-NPR ಗಳನ್ನು ಪ್ರಶ್ನಿಸುವ, ಪ್ರಭುತ್ವಕ್ಕೆ ಸೆಡ್ಡು ಹೊಡೆಯುವ ಸಾಲು ಸಾಲು ಕವಿತೆಗಳು ಬಂದಿವೆ. ಅಕ್ಷರ ಲೋಕದ ಈ ಸಾತ್ವಿಕ ಪ್ರತಿರೋಧ ಹೇಗಿದೆ ಎಂದರೆ ಸಿರಾಜ್ ಬಿಸರಳ್ಳಿಯವರ ಪದ್ಯ ಕೇವಲ ಎರಡು ದಿನಗಳಲ್ಲಿ 12 ಭಾಷೆಗಳಿಗೆ ಅನುವಾದವಾಗಿ ‘ವೈರಲ್’ ಆಗಿದೆ. ಈಗಾಗಲೇ ಎನ್‌ಆರ್‌ಸಿ-ಪ್ರತಿರೋಧದ ಸಭೆ, ರ‍್ಯಾಲಿ, ಮೆರವಣಿಗೆಗಳಲ್ಲಿ ಕವಿತೆ ವಾಚನ ಸಾಮಾನ್ಯವಾಗಿದೆ. ಅತ್ಯಂತ ಸೃಜನಶೀಲ ಪೋಸ್ಟರುಗಳು, ಬ್ಯಾನರುಗಳು, ಕಲಾಕೃತಿಗಳು ದೇಶದಾದ್ಯಂತ ಪ್ರತಿರೋಧದ ಭಾಗವಾಗಿ ಬಂದಿವೆ. ಒಟ್ಟಾರೆಯಾಗಿ ಇದನ್ನು ‘ಎನ್‌ಆರ್‌ಸಿ ವಿರುದ್ಧ ಕಲಾ ಪ್ರತಿರೋಧ’ ಎಂದು ಕರೆಯಬಹುದಾದಷ್ಟು ನಿಚ್ಚಳವಾದ ಟ್ರೆಂಡ್ ಆಗಿದೆ.

‘ನಿನ್ನ ದಾಖಲೆ ಯಾವಾಗ ನೀಡುತ್ತಿ?’ ಇಂತಹ ಕಲಾ ಪ್ರತಿರೋಧದ ಕವಿತೆಗಳ ಸಂಕಲನ. ಇಲ್ಲಿ ಕನ್ನಡದಲ್ಲಿ ಪ್ರಮುಖವಾಗಿ ಎನ್‌ಆರ್‌ಸಿ ಗೆ ಪ್ರತಿರೋಧದ ಹಿನ್ನೆಲೆಯಲ್ಲಿ ಬಂದ ಕವಿತೆಗಳಿವೆ. ಇವಲ್ಲದೆ ಚಳುವಳಿಯ ‘ಅಧಿಕೃತ ಗೀತೆ’ಯೇ ಆಗಿರುವ ವರುಣ್ ಗ್ರೋವರ್ ಅವರ ‘ಹಮ್ ಕಾಗಜ್ ನಹೀ ದಿಖಾಯೆಂಗೆ’ ಸೇರಿದಂತೆ ಹಿಂದಿ, ಇಂಗ್ಲೀಷ್ ಮತ್ತಿತರ ಭಾಷೆಗಳಲ್ಲಿ ಎನ್.ಆರ್.ಸಿ ಗೆ ಪ್ರತಿರೋಧ ಚಳುವಳಿಯ ಭಾಗವಾಗಿ ಬಂದ ಕೆಲವು ಪ್ರಮುಖ ಕವಿತೆಗಳ ಅನುವಾದಗಳೂ ಇವೆ. ಇಲ್ಲಿರುವ ಕವಿತೆಗಳಲ್ಲಿ ‘ನನ್ನ ದಾಖಲೆ ಕೇಳುವ ಮೊದಲು ನಿಮ್ಮ ದಾಖಲೆ ತೋರಿಸಿ’ ಎಂದು ಸವಾಲು ಹಾಕುವ ‘ಅವರ’ ಕೆಟ್ಟ ಭೀಕರ ದಾಖಲೆಗಳನ್ನು ಬಯಲಿಗೆಳೆಯುವ ಕವಿತೆಗಳು ಒಂದು ವಿಧ. ನಮ್ಮ ಗುರುತು ದಾಖಲೆಗಳಲ್ಲಿ ಅಲ್ಲ, ನೆಲದಲ್ಲಿ ಹಾಸುಹೊಕ್ಕಾಗಿರುವ ನಮ್ಮ ಬದುಕಿನ ವಿವಿಧ ಆಯಾಮಗಳಲ್ಲಿ ಇದೆ ಎಂದು ದೃಢವಾಗಿ ತಿಳಿಹೇಳುವ ಕವಿತೆಗಳು ಇನ್ನೊಂದು ವಿಧ. ಕವಿತೆಗೆ ಬೆದರಿ ಕೇಸು ಹಾಕುವುದನ್ನು ಮತ್ತಿತರ ದಮನ ಕ್ರಮಗಳನ್ನು ಎದುರಿಸುವ, ಲೇವಡಿ ಮಾಡುವ, ಜನರ ದನಿಯಾಗಬಲ್ಲ ಕಾವ್ಯದ ಶಕ್ತಿಯನ್ನು ಎತ್ತಿ ಹಿಡಿಯುವ ಕವಿತೆಗಳು ಮಗದೊಂದು ವಿಧ. ಇವಲ್ಲದೆ ಹಿಟ್ಟರನ ನಾಜಿವಾದ ಅವನೊಂದಿಗೆ ಸತ್ತಿಲ್ಲ ಎಂಬುದರ ಕುರಿತು ಬರೆದ ಆಡೆನ್ ಅವರ ಚಾರಿತ್ರಿಕ ಕವಿತೆಯ ಅನುವಾದವೂ ಇಲ್ಲಿದೆ. ಸರ್ವಾಧಿಕಾರಿ, ಅದರಲ್ಲೂ ಧರ್ಮದ ಹೆಸರಿನಲ್ಲಿ ಸಮರ್ಥಿಸಿಕೊಳ್ಳುವ, ಪ್ರಭುತ್ವಗಳ ದಮನದ ವಿರುದ್ಧ ಚಳುವಳಿಗಳ ಪ್ರತಿರೋಧದ ಗೀತೆಯಾಗಿದ್ದು, ಎನ್‌ಆರ್‌ಸಿ ವಿರುದ್ಧ ಚಳುವಳಿಯಲ್ಲೂ ವ್ಯಾಪಕವಾಗಿ ಕೇಳಿ ಬಂದಿರುವ ಫೈಜ್ ಅಹ್ಮದ್ ಫೈಜ್ ಅವರ ‘ಹಮ್ ದೇಖೇಂಗೆ’ಯ ಅನುವಾದವೂ ಇದೆ.

ಇವಲ್ಲದೆ ಪ್ರತಿರೋಧದ ಭಾಗವಾಗಿ ಬಂದ ಪೋಸ್ಟರುಗಳು, ಕಲಾಕೃತಿಗಳು ಇಲ್ಲಿವೆ. Fearless-“ಹಮ್ ಯಹೀಂ ಕೆ ಹೈಂ” (ನಿರ್ಭಯರು-ನಾವು ಇಲ್ಲಿಯವರೇ, ಮಹಿಳೆಯರು, ಮುಸ್ಲಿಮರು, ಹಿಂದುಗಳು, ಸಿಖ್ಖರು, ಆದಿವಾಸಿಗಳು, ದಲಿತರು ಇಲ್ಲಿಯವರೇ) ಈ ಚಳುವಳಿಯಲ್ಲಿ ಮೂಡಿಬಂದು ಎಲ್ಲರ ಗಮನ ಸೆಳೆದಿರುವ ಕಲಾಕೃತಿಯನ್ನು ಮುಖಪುಟದಲ್ಲಿ, ಮತ್ತು  ಶಾಹೀನ್ ಬಾಗ್ ಭೇಟಿಯಿಂದ ಸ್ಫೂರ್ತಿ ಪಡೆದು ರಚಿಸಿರುವ, ಅಲ್ಲಿ ಪ್ರದರ್ಶಿತಗೊಂಡು ಎಲ್ಲರನ್ನೂ ಸೆಳೆಯುತ್ತಿರುವ ಶಾಹೀನ್ ಬಾಗ್- ಹಮ್ ದೇಖೇಂಗೆ- ಲಾಜಿಮ್ ಹೈ ಹಮ್ ಭೀ ದೇಖೇಂಗೆ( ನಾವು ಕಾಣುವೆವು, ನಾವು ಕಂಡೇ ಕಾಣುವೆವು) ಎಂಬ ಕಲಾಕೃತಿಯನ್ನು ಹಿಂದಿನ ಪುಟದಲ್ಲಿ ಬಳಸಿಕೊಡಿದ್ದೇವೆ.

ಕವನ ಸಂಕಲನದ ಸಂಪಾದಕಿ ಯಮುನಾ ಗಾಂವ್ಕರ್

ಹೋರಾಟದ ಅಗತ್ಯವಾಗಿ ಈ ಕವಿತೆ ಸಂಕಲನ ದಿಢೀರ್ ಆಗಿ ಬಂತು. ಇದಕ್ಕೆ ಕೈಜೋಡಿಸಿದ ತಮ್ಮ ಕವಿತೆಗಳನ್ನು ಕಳಿಸಿದ, ಹಾಕಿಕೊಳ್ಳಲು ಅನುಮತಿ ಕೊಟ್ಟ, ಕವಿತೆಗಳನ್ನು ಅನುವಾದಿಸಿದ ಎಲ್ಲ ಕವಿಗಳಿಗೆ ಶರಣು. ಎಲ್ಲ ಕವಿಗಳಿಗೆ ಈ ಸಂಕಲನದ ಬಗ್ಗೆ ಮಾಹಿತಿ ಕೊಡಲು ಸಾಧ್ಯವಾಗಿಲ್ಲ. ಅದಕ್ಕೆ ಕ್ಷಮೆ ಇರಲಿ. ಇದೇ ರೀತಿ ಇಲ್ಲಿ ಬಳಸಿಕೊಳ್ಳಲಾದ ಸಾಮಾಜಿಕ ಮಾಧ್ಯಮಗಳಲ್ಲಿ ಬಂದಿರುವ ಪೋಸ್ಟರುಗಳು, ಕಲಾಕೃತಿಗಳ ಮೂಲ ಕಲಾವಿದರಿಗೆ ನಮ್ಮ ಕೃತಜ್ಞತೆಗಳು. ಅವರೆಲ್ಲರನ್ನು ಸಂಪರ್ಕಿಸುವುದು ಸಾಧ್ಯವಾಗಿಲ್ಲ. ಈ ಸಂಕಲನವನ್ನು ಯೋಜಿಸಿ, ಸಂಪಾದಿಸುವ ಜವಾಬ್ದಾರಿಯನ್ನು ನನಗೆ ಒಪ್ಪಿಸಿ, ಪ್ರಕಟಿಸುತ್ತಿರುವ ಕ್ರಿಯಾ ಮಾಧ್ಯಮ ತಂಡಕ್ಕೂ, ಮುಖಪುಟ ವಿನ್ಯಾಸ ಮಾಡಿರುವ ರಾಮು ಅವರಿಗೂ, ದಿಢೀರ್ ಮುದ್ರಣ ಮಾಡಿಕೊಟ್ಟ ಚಂದ್ರು ಅವರ ತಂಡಕ್ಕೂ ಅನಂತ ಧನ್ಯವಾದಗಳು.

ಬಹು ಹಿಂದೆ ಓದಿದ ಕವಿತೆಯೇಕೋ ಮತ್ತೆ ಮತ್ತೆ  ನೆನಪಾಗುತ್ತಿದೆ.

“ನಿಮ್ಮ ಮಾತುಕತೆಗಳಲ್ಲಿ ಹುದುಗಿದ ಬೆಕ್ಕು / ಸಂಶಯದ ಪಂಜವೆತ್ತಿ

ನನ್ನ ನಂಬಿಕೆ ನೀಯತ್ತು ಹಕ್ಕು / ಕೊನೆಗೆ ಸಾಚಾತನವನ್ನು ಪರಚಿ, ಒತ್ತಿ

ನೋವಿಗೆ ಕಣ್ಣು ತುಂಬಿದ್ದರೂ / ಚೆಲ್ಲಿದ ರಕ್ತದಲ್ಲಿ ರಾಷ್ಟ್ರೀಯತೆಯ ಧಾತುಗಳ

ನನ್ನೆದುರಿನಲ್ಲೇ ತನಿಖೆ ಮಾಡುವುದನ್ನು /  ಹುಸಿನಗುತ್ತ ಎದುರಿಸುವುದಿದೆಯಲ್ಲ

ಅದು ಬಲು ಕಷ್ಟದ ಕೆಲಸ”

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...