Homeಮುಖಪುಟಸರಿಯಾದ ಸಮಯಕ್ಕೆ ಬಂಧಿಸದ ಕಾರಣ ನೀರವ್ ಮೋದಿ, ಮಲ್ಯ, ಮೆಹುಲ್ ಚೋಕ್ಸಿ ಭಾರತದಿಂದ ಪಲಾಯನ...

ಸರಿಯಾದ ಸಮಯಕ್ಕೆ ಬಂಧಿಸದ ಕಾರಣ ನೀರವ್ ಮೋದಿ, ಮಲ್ಯ, ಮೆಹುಲ್ ಚೋಕ್ಸಿ ಭಾರತದಿಂದ ಪಲಾಯನ ಮಾಡಿದ್ರು: ಮುಂಬೈ ಕೋರ್ಟ್

- Advertisement -
- Advertisement -

ಉದ್ಯಮಿಗಳಾದ ನೀರವ್ ಮೋದಿ, ವಿಜಯ್ ಮಲ್ಯ ಮತ್ತು ಮೆಹುಲ್ ಚೋಕ್ಸಿ ಅವರನ್ನು ಸಮಯಕ್ಕೆ ಸರಿಯಾಗಿ ಬಂಧಿಸುವಲ್ಲಿ ತನಿಖಾ ಸಂಸ್ಥೆಗಳು ವಿಫಲವಾದ ಕಾರಣ ದೇಶದಿಂದ ತಪ್ಪಿಸಿಕೊಳ್ಳಲು ಸಾಧ್ಯವಾಯಿತು ಎಂದು ಮುಂಬೈ ನ್ಯಾಯಾಲಯವು  ಹೇಳಿದೆ.

ಮನಿ ಲಾಂಡರಿಂಗ್ ತಡೆ ಕಾಯ್ದೆ (ಪಿಎಂಎಲ್‌ಎ) ಯಡಿಯಲ್ಲಿ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಎಂ.ಜಿ.ದೇಶಪಾಂಡೆ, ವೃತ್ತಿಪರ ಉದ್ದೇಶಗಳಿಗಾಗಿ ವಿದೇಶಕ್ಕೆ ಪ್ರಯಾಣಿಸಲು ಜಾಮೀನು ಷರತ್ತುಗಳನ್ನು ಸಡಿಲಿಸುವಂತೆ ಕೋರಿ ಮನಿ ಲಾಂಡರಿಂಗ್ ಪ್ರಕರಣದ ಆರೋಪಿ ವ್ಯೋಮೇಶ್ ಶಾ ಸಲ್ಲಿಸಿದ ಅರ್ಜಿಯ ವಿಚಾರಣೆಯ ಸಂದರ್ಭದಲ್ಲಿ ಈ ಅವಲೋಕನಗಳನ್ನು ಮಾಡಿದ್ದಾರೆ.

ಜಾರಿ ನಿರ್ದೇಶನಾಲಯದ(ಇಡಿ) ವಿಶೇಷ ಪ್ರಾಸಿಕ್ಯೂಟರ್, ವಕೀಲ ಸುನಿಲ್ ಗೊನ್ಸಾಲ್ವಿಸ್ ಅವರು ಅರ್ಜಿಯನ್ನು ವಿರೋಧಿಸಿ, ಅಂತಹ ಮನವಿಗೆ ಸಮ್ಮತಿಸುವುದು ‘ನೀರವ್ ಮೋದಿ, ವಿಜಯ್ ಮಲ್ಯ ಮತ್ತು ಮೆಹುಲ್ ಚೋಕ್ಸಿ’ಯವರು ದೇಶ ಬಿಟ್ಟು ಪಲಾಯನ ಮಾಡಿದ ಪರಿಸ್ಥಿತಿಯನ್ನು ಉಂಟುಮಾಡುತ್ತದೆ ಎಂದು ವಾದಿಸಿದ್ದಾರೆ.

ಈ ವೇಳೆ ಮಧ್ಯಪ್ರವೇಶಿಸಿದ ನ್ಯಾಯಮೂರ್ತಿಗಳು, ಮೂವರು ಉದ್ಯಮಿಗಳನ್ನು ಬಂಧಿಸುವಲ್ಲಿ ತನಿಖಾ ಏಜೆನ್ಸಿಗಳು ವಿಫಲವಾದ ಕಾರಣ ಅವರಿಗೆ ಭಾರತದಿಂದ ಪಲಾಯನ ಮಾಡಲು ಸಾಧ್ಯವಾಗಿದೆ ಎಂದು ಹೇಳಿದ್ದಾರೆ.

ನಾನು ಈ ವಾದವನ್ನು ಚಿಂತನಶೀಲವಾಗಿ ಪರಿಶೀಲಿಸಿದ್ದೇನೆ ಮತ್ತು ಸೂಕ್ತ ಸಮಯದಲ್ಲಿ ಅವರನ್ನು ಬಂಧಿಸುವಲ್ಲಿ ತನಿಖಾ ಸಂಸ್ಥೆಗಳು ವಿಫಲವಾಗಿರುವುದರಿಂದ ಇವರು ಪಲಾಯನ ಮಾಡಿದ್ದಾರೆ ಎಂಬುದನ್ನು ಗಮನಿಸುವುದು ಅಗತ್ಯವಾಗಿದೆ ಎಂದು ನ್ಯಾಯಾಧೀಶರು ಹೇಳಿದ್ದಾರೆ.

ಪ್ರಸ್ತುತ ಯುಕೆಯಲ್ಲಿ ನೆಲೆಸಿರುವ ನೀರವ್ ಮೋದಿ ಮತ್ತು ವಿಜಯ್ ಮಲ್ಯ ಅವರನ್ನು ಮುಂಬೈ ನ್ಯಾಯಾಲಯಗಳು ಬೃಹತ್ ಆರ್ಥಿಕ ಹಗರಣಗಳಲ್ಲಿ ಪರಾರಿಯಾದ ಆರ್ಥಿಕ ಅಪರಾಧಿಗಳು ಎಂದು ಘೋಷಿಸಿವೆ. ಮೆಹುಲ್ ಚೋಕ್ಸಿ ಪ್ರಸ್ತುತ ಡೊಮಿನಿಕಾದಲ್ಲಿದ್ದಾರೆ ಮತ್ತು ಅವರನ್ನು ಎಫ್‌ಇಒ ಎಂದು ಘೋಷಿಸಲು ಇಡಿ ಅರ್ಜಿ ಸಲ್ಲಿಸಿದೆ.

ವ್ಯೋಮೇಶ್ ಶಾ ವಿರುದ್ಧ ಇಡಿ ಚಾರ್ಜ್‌ಶೀಟ್‌ ಬಳಿಕ ನ್ಯಾಯಾಲಯವು ಶಾ ಅವರಿಗೆ ಸಮನ್ಸ್ ನೀಡಿತ್ತು. ಜೂನ್ 7, 2022ರಂದು ನ್ಯಾಯಾಲಯಕ್ಕೆ ಹಾಜರಾದ ನಂತರ ಶಾ ಅವರನ್ನು ಕೆಲವು ಷರತ್ತುಗಳಿಗೆ ಒಳಪಟ್ಟು ಜಾಮೀನಿನ ಮೇಲೆ ಬಿಡುಗಡೆ ಮಾಡಲಾಯಿತು. ಇದರಲ್ಲಿ ವೈಯಕ್ತಿಕ ಬಾಂಡ್‌ಗಳು ಮತ್ತು ಶ್ಯೂರಿಟಿಗಳನ್ನು ಒದಗಿಸುವುದು ಸಹ ಸೇರಿದೆ. ನ್ಯಾಯಾಲಯದ ಅನುಮತಿಯಿಲ್ಲದೆ ದೇಶ ಬಿಟ್ಟು ಹೋಗಬಾರದು ಎಂದು ಆತನಿಗೆ ವಿಧಿಸಿದ ಷರತ್ತಿನಲ್ಲಿ ಹೇಳಲಾಗಿತ್ತು. ಅದನ್ನು ಮಾರ್ಪಾಡು ಮಾಡುವಂತೆ ಷಾ ಪ್ರಸ್ತುತ ಮನವಿ ಸಲ್ಲಿಸಿದ್ದಾರೆ.

ತನ್ನ ಕೆಲಸಕ್ಕಾಗಿ  ವಿವಿಧ ದೇಶಗಳಿಗೆ ತೆರಳಿ ಕೆಲಸ ಮಾಡಬೇಕಾಗಿರುವುದರಿಂದ ಪ್ರತಿ ಬಾರಿ ನ್ಯಾಯಾಲಯದ ಅನುಮತಿ ಪಡೆಯುವುದು ಕಷ್ಟಕರವಾಗಿದೆ ಎಂದು ಅವರು ಕೋರ್ಟ್‌ ಗಮನಕ್ಕೆ ತಂದಿದ್ದರು. ಶಾ ಪರ ಹಿರಿಯ ವಕೀಲರಾದ ಅಬದ್ ಪೊಂಡಾ, ಸಜಲ್ ಯಾದವ್ ಮತ್ತು ಆಯುಷಾ ಗೇರುಜಾ ವಾದ ಮಂಡಿಸಿದ್ದರು.

ಇದನ್ನು ಓದಿ: ಎಕ್ಸಿಟ್ ಪೋಲ್‌ಗಳನ್ನು ಎರಡು ತಿಂಗಳ ಹಿಂದೆ ಮನೆಯಲ್ಲೇ ಕುಳಿತು ತಯಾರಿಸಲಾಗಿದೆ: ಮಮತಾ ಬ್ಯಾನರ್ಜಿ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐದು ರಾಜ್ಯಗಳ ವಿಧಾನಸಭೆ ಚುನಾವಣೆ ದಿನಾಂಕ ಪ್ರಕಟ; ಬಂಗಾಳದಲ್ಲಿ ಮಾತ್ರ ಎರಡು ಹಂತದ ಮತದಾನ

ಅಸ್ಸಾಂ, ಪಶ್ಚಿಮ ಬಂಗಾಳ, ತಮಿಳುನಾಡು, ಕೇರಳ ಮತ್ತು ಪುದುಚೇರಿ ವಿಧಾನಸಭಾ ಚುನಾವಣೆಗಳ ವೇಳಾಪಟ್ಟಿಯನ್ನು ಭಾರತೀಯ ಚುನಾವಣಾ ಆಯೋಗದ (ಇಸಿಐ) ಮುಖ್ಯಸ್ಥರಾದ ಜ್ಞಾನೇಶ್ ಕುಮಾರ್ ಪ್ರಕಟಿಸಿದರು. ದೆಹಲಿಯಲ್ಲಿ ಇಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮುಖ್ಯ...

ಫ್ಲಿಪ್‌ಕಾರ್ಟ್‌ನಿಂದ 1 ರೂ.ಗೆ ಹಾಲು ಮಾರಾಟ; ಪ್ರಧಾನಿ ಮೋದಿ ಮಧ್ಯಸ್ಥಿಕೆಗೆ ಬಮುಲ್‌ ಆಗ್ರಹ

ಫ್ಲಿಪ್‌ಕಾರ್ಟ್‌ ಸಂಸ್ಥೆಯು ಆನ್‌ಲೈನ್‌ ಮೂಲಕ 1 ರೂ.ಗೆ ಲೀಟರ್‌ ಹಾಲನ್ನು ಮಾರಾಟ ಮಾಡಿರುವುದು ಭಾರಿ ಜನಾಕ್ರೋಶಕ್ಕೆ ಕಾರಣವಾಗಿದೆ. ಈ ಬಗ್ಗೆ, ಬೆಂಗಳೂರು ನಗರ, ಗ್ರಾಮೀಣ ಮತ್ತು ರಾಮನಗರ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ...

“ಮಕ್ಕಳ ಹಂತಕನನ್ನು ಹುಡುಕಿ ಹತ್ಯೆ ಮಾಡುತ್ತೇವೆ” : ನೆತನ್ಯಾಹು ಸುರಕ್ಷಿತವಾಗಿದ್ದಾರೆ ಎಂಬ ಇಸ್ರೇಲ್ ಸ್ಪಷ್ಟನೆ ಬೆನ್ನಲ್ಲೆ ಐಆರ್‌ಜಿಸಿ ಹೇಳಿಕೆ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರನ್ನು ಹುಡುಕಿ ಹತ್ಯೆ ಮಾಡುತ್ತೇವೆ ಎಂದು ಇರಾನ್‌ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (ಐಆರ್‌ಜಿಸಿ) ಹೇಳಿರುವುದಾಗಿ ವರದಿಯಾಗಿದೆ. ನೆತನ್ಯಾಹು ಅವರ ಹತ್ಯೆಯ ವದಂತಿಗಳನ್ನು ಇಸ್ರೇಲ್ ನಿರಾಕರಿಸಿದ ಬೆನ್ನಲ್ಲೇ, ಐಆರ್‌ಜಿಸಿ ಈ...

ಮಹಾರಾಷ್ಟ್ರ| ಇಫ್ತಾರ್ ಕೂಟಕ್ಕೆ ಸೇರಿದ್ದ ಮುಸ್ಲಿಮರ ಮೇಲೆ ಹಿಂದುತ್ವವಾದಿ ಗುಂಪಿನಿಂದ ದಾಳಿ

ರಂಜಾನ್‌ ಮಾಸದ ಉಪವಾಸ ಮುರಿಯಲು ನೆರೆದಿದ್ದ ಜನರ ಮೇಲೆ ಅಪರಿಚಿತ ವ್ಯಕ್ತಿಗಳ ಗುಂಪೊಂದು ದಾಳಿ ನಡೆಸಿರುವ ಘಟನೆ ಮಹಾರಾಷ್ಟ್ರದ ಪುಣೆಯಲ್ಲಿ ನಡೆದಿದೆ. ಇಫ್ತಾರ್ ಕೂಟಕ್ಕೆ ಸಿದ್ಧತೆ ನಡೆಸುತ್ತಿದ್ದಾಗ, ಸುಮಾರು 100 ಕ್ಕೂ ಹೆಚ್ಚು...

ಆಸ್ಕರ್‌ ಅಂತಿಮ ಪಟ್ಟಿಗೆ ಆಯ್ಕೆಯಾದ ‘ದಿ ವಾಯ್ಸ್ ಆಫ್ ಹಿಂದ್ ರಜಬ್’

ಗಾಝಾದ ಆರು ವರ್ಷದ ಬಾಲಕಿ ಹಿಂದ್ ರಜಬ್‌ ಮತ್ತು ಆಕೆಯ ಸಂಬಂಧಿಕರನ್ನು ಇಸ್ರೇಲಿ ಸೈನಿಕರು ಭೀಕರವಾಗಿ ಹತ್ಯೆ ಮಾಡಿದ ಕಥೆಯನ್ನು ಹೇಳುವ 'ದಿ ವಾಯ್ಸ್ ಆಫ್ ಹಿಂದ್ ರಜಬ್' ಚಲನಚಿತ್ರವು 2026ರ ಆಸ್ಕರ್...

ಉತ್ತರ ಪ್ರದೇಶ| ದಲಿತ ಕುಟುಂಬದ ಮದುವೆ ಮನೆಯಲ್ಲಿ ಸವರ್ಣಿಯರಿಂದ ಹಲ್ಲೆ; ಬಂದೂಕಿನಿಂದ ಬೆದರಿಕೆ

ಮಾರ್ಚ್ 10 ರಂದು ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಟಿಕುನಿಯಾ ಪೊಲೀಸ್ ಠಾಣೆ ಪ್ರದೇಶದಲ್ಲಿ ಜಾತಿ ಆಧಾರಿತ ಹಿಂಸಾಚಾರದ ತೀವ್ರ ಆತಂಕಕಾರಿ ಘಟನೆ ಬೆಳಕಿಗೆ ಬಂದಿದೆ. 24 ಗಂಟೆಗಳ ಒಳಗೆ ಎಫ್‌ಐಆರ್...

’70 ಲಕ್ಷ ಬಂಗಾಳಿ ಮುಸ್ಲಿಮರನ್ನು ಹೊರದಬ್ಬಲು ಸಾಧ್ಯವಿಲ್ಲ..ಅವರೇ ದೇಶ ಬಿಡುವಂತಹ ಪರಿಸ್ಥಿತಿ ಸೃಷ್ಟಿಸುತ್ತೇವೆ’: ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ

ಸುಮಾರು 70 ಲಕ್ಷ 'ಬಂಗಾಳಿ ಮುಸ್ಲಿಮರ'ನ್ನು ಭಾರತದಿಂದ ಹೊರಹಾಕುವುದು 'ಮಾನವೀಯವಾಗಿ ಸಾಧ್ಯವಿಲ್ಲ'. ಹಾಗಾಗಿ, ಅವರಾಗಿಯೇ ದೇಶ ತೊರೆಯುವಂತಹ ಪರಿಸ್ಥಿತಿಯನ್ನು ನಾವು ಸೃಷ್ಟಿಸುತ್ತೇವೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಹೇಳಿದ್ದಾರೆ. ಈ...

ಮೋದಿಯವರ ವಿದೇಶಾಂಗ ನೀತಿ ಸಂಪೂರ್ಣವಾಗಿ ದಿಕ್ಕು ತಪ್ಪಿದೆ, ನಗೆಪಾಟಲಿಗೆ ಈಡಾಗಿದೆ, ಅನೈತಿಕತೆಯಿಂದ ಕೂಡಿದೆ. ಇದು ಜಗಜ್ಜಾಹೀರಾಗಿದೆ – ಶ್ರೀಪಾದ್‌ ಭಟ್

ತಮ್ಮ ಸ್ಥಳೀಯ ಮತಬ್ಯಾಂಕ್ ರಾಜಕಾರಣದ ಜೊತೆಗೆ ವಿದೇಶಿ ನೀತಿಯನ್ನು ತಳುಕು ಹಾಕುವುದು. ಉದಾಹರಣೆಗೆ ಅಮೆರಿಕ-ಇಸ್ರೇಲ್ ಜಂಟಿಯಾಗಿ ನಡೆಸುತ್ತಿರುವ ಇರಾನ್ ಮೇಲಿನ ಯುದ್ಧದ ಸಮಯದಲ್ಲಿ ಮೋದಿ ನೇತೃತ್ವದ ಸರ್ಕಾರವು ತಾನು ಇರಾನ್ ಪರ ನಿಲುವು ತಾಳಿದರೆ...

ದೆಹಲಿ ಪೊಲೀಸರಿಂದ 10 ಮಂದಿ ಹೋರಾಟಗಾರರ ಅಪಹರಣ ಆರೋಪ : ಹೈಕೋರ್ಟ್‌ಗೆ ಹೇಬಿಯಸ್ ಕಾರ್ಪಸ್ ಅರ್ಜಿ

ಸಿವಿಲ್ ಸೊಸೈಟಿಯ ಹತ್ತು ಮಂದಿ ಹೋರಾಟಗಾರರನ್ನು ದೆಹಲಿ ಪೊಲೀಸರು ಅಪಹರಿಸಿದ್ದಾರೆ ಅಥವಾ ಅಕ್ರಮವಾಗಿ ಬಂಧಿಸಿದ್ದಾರೆ ಎಂದು ಮಾನವ ಹಕ್ಕುಗಳ ಗುಂಪುಗಳು ಆರೋಪಿಸಿವೆ. ಹತ್ತು ಮಂದಿಯನ್ನು ದೆಹಲಿ ಪೊಲೀಸರು ಮತ್ತು ಇತರ ರಾಜ್ಯಗಳ ಏಜೆನ್ಸಿಗಳು ಅಪಹರಿಸಿವೆ...

ಗುಜರಾತ್‌: 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ: ವಿಧಾನಸಭೆಗೆ ಮಾಹಿತಿ ನೀಡಿದ ಸರ್ಕಾರ

ಗಾಂಧಿನಗರ: ರಾಜ್ಯದ 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ ಮತ್ತು ಪರಿಸ್ಥಿತಿಯನ್ನು ಸುಧಾರಿಸಲು ವಿವಿಧ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಗುಜರಾತ್ ಸರ್ಕಾರ ಶನಿವಾರ ವಿಧಾನಸಭೆಗೆ...