Homeಮುಖಪುಟಸರಿಯಾದ ಸಮಯಕ್ಕೆ ಬಂಧಿಸದ ಕಾರಣ ನೀರವ್ ಮೋದಿ, ಮಲ್ಯ, ಮೆಹುಲ್ ಚೋಕ್ಸಿ ಭಾರತದಿಂದ ಪಲಾಯನ...

ಸರಿಯಾದ ಸಮಯಕ್ಕೆ ಬಂಧಿಸದ ಕಾರಣ ನೀರವ್ ಮೋದಿ, ಮಲ್ಯ, ಮೆಹುಲ್ ಚೋಕ್ಸಿ ಭಾರತದಿಂದ ಪಲಾಯನ ಮಾಡಿದ್ರು: ಮುಂಬೈ ಕೋರ್ಟ್

- Advertisement -
- Advertisement -

ಉದ್ಯಮಿಗಳಾದ ನೀರವ್ ಮೋದಿ, ವಿಜಯ್ ಮಲ್ಯ ಮತ್ತು ಮೆಹುಲ್ ಚೋಕ್ಸಿ ಅವರನ್ನು ಸಮಯಕ್ಕೆ ಸರಿಯಾಗಿ ಬಂಧಿಸುವಲ್ಲಿ ತನಿಖಾ ಸಂಸ್ಥೆಗಳು ವಿಫಲವಾದ ಕಾರಣ ದೇಶದಿಂದ ತಪ್ಪಿಸಿಕೊಳ್ಳಲು ಸಾಧ್ಯವಾಯಿತು ಎಂದು ಮುಂಬೈ ನ್ಯಾಯಾಲಯವು  ಹೇಳಿದೆ.

ಮನಿ ಲಾಂಡರಿಂಗ್ ತಡೆ ಕಾಯ್ದೆ (ಪಿಎಂಎಲ್‌ಎ) ಯಡಿಯಲ್ಲಿ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಎಂ.ಜಿ.ದೇಶಪಾಂಡೆ, ವೃತ್ತಿಪರ ಉದ್ದೇಶಗಳಿಗಾಗಿ ವಿದೇಶಕ್ಕೆ ಪ್ರಯಾಣಿಸಲು ಜಾಮೀನು ಷರತ್ತುಗಳನ್ನು ಸಡಿಲಿಸುವಂತೆ ಕೋರಿ ಮನಿ ಲಾಂಡರಿಂಗ್ ಪ್ರಕರಣದ ಆರೋಪಿ ವ್ಯೋಮೇಶ್ ಶಾ ಸಲ್ಲಿಸಿದ ಅರ್ಜಿಯ ವಿಚಾರಣೆಯ ಸಂದರ್ಭದಲ್ಲಿ ಈ ಅವಲೋಕನಗಳನ್ನು ಮಾಡಿದ್ದಾರೆ.

ಜಾರಿ ನಿರ್ದೇಶನಾಲಯದ(ಇಡಿ) ವಿಶೇಷ ಪ್ರಾಸಿಕ್ಯೂಟರ್, ವಕೀಲ ಸುನಿಲ್ ಗೊನ್ಸಾಲ್ವಿಸ್ ಅವರು ಅರ್ಜಿಯನ್ನು ವಿರೋಧಿಸಿ, ಅಂತಹ ಮನವಿಗೆ ಸಮ್ಮತಿಸುವುದು ‘ನೀರವ್ ಮೋದಿ, ವಿಜಯ್ ಮಲ್ಯ ಮತ್ತು ಮೆಹುಲ್ ಚೋಕ್ಸಿ’ಯವರು ದೇಶ ಬಿಟ್ಟು ಪಲಾಯನ ಮಾಡಿದ ಪರಿಸ್ಥಿತಿಯನ್ನು ಉಂಟುಮಾಡುತ್ತದೆ ಎಂದು ವಾದಿಸಿದ್ದಾರೆ.

ಈ ವೇಳೆ ಮಧ್ಯಪ್ರವೇಶಿಸಿದ ನ್ಯಾಯಮೂರ್ತಿಗಳು, ಮೂವರು ಉದ್ಯಮಿಗಳನ್ನು ಬಂಧಿಸುವಲ್ಲಿ ತನಿಖಾ ಏಜೆನ್ಸಿಗಳು ವಿಫಲವಾದ ಕಾರಣ ಅವರಿಗೆ ಭಾರತದಿಂದ ಪಲಾಯನ ಮಾಡಲು ಸಾಧ್ಯವಾಗಿದೆ ಎಂದು ಹೇಳಿದ್ದಾರೆ.

ನಾನು ಈ ವಾದವನ್ನು ಚಿಂತನಶೀಲವಾಗಿ ಪರಿಶೀಲಿಸಿದ್ದೇನೆ ಮತ್ತು ಸೂಕ್ತ ಸಮಯದಲ್ಲಿ ಅವರನ್ನು ಬಂಧಿಸುವಲ್ಲಿ ತನಿಖಾ ಸಂಸ್ಥೆಗಳು ವಿಫಲವಾಗಿರುವುದರಿಂದ ಇವರು ಪಲಾಯನ ಮಾಡಿದ್ದಾರೆ ಎಂಬುದನ್ನು ಗಮನಿಸುವುದು ಅಗತ್ಯವಾಗಿದೆ ಎಂದು ನ್ಯಾಯಾಧೀಶರು ಹೇಳಿದ್ದಾರೆ.

ಪ್ರಸ್ತುತ ಯುಕೆಯಲ್ಲಿ ನೆಲೆಸಿರುವ ನೀರವ್ ಮೋದಿ ಮತ್ತು ವಿಜಯ್ ಮಲ್ಯ ಅವರನ್ನು ಮುಂಬೈ ನ್ಯಾಯಾಲಯಗಳು ಬೃಹತ್ ಆರ್ಥಿಕ ಹಗರಣಗಳಲ್ಲಿ ಪರಾರಿಯಾದ ಆರ್ಥಿಕ ಅಪರಾಧಿಗಳು ಎಂದು ಘೋಷಿಸಿವೆ. ಮೆಹುಲ್ ಚೋಕ್ಸಿ ಪ್ರಸ್ತುತ ಡೊಮಿನಿಕಾದಲ್ಲಿದ್ದಾರೆ ಮತ್ತು ಅವರನ್ನು ಎಫ್‌ಇಒ ಎಂದು ಘೋಷಿಸಲು ಇಡಿ ಅರ್ಜಿ ಸಲ್ಲಿಸಿದೆ.

ವ್ಯೋಮೇಶ್ ಶಾ ವಿರುದ್ಧ ಇಡಿ ಚಾರ್ಜ್‌ಶೀಟ್‌ ಬಳಿಕ ನ್ಯಾಯಾಲಯವು ಶಾ ಅವರಿಗೆ ಸಮನ್ಸ್ ನೀಡಿತ್ತು. ಜೂನ್ 7, 2022ರಂದು ನ್ಯಾಯಾಲಯಕ್ಕೆ ಹಾಜರಾದ ನಂತರ ಶಾ ಅವರನ್ನು ಕೆಲವು ಷರತ್ತುಗಳಿಗೆ ಒಳಪಟ್ಟು ಜಾಮೀನಿನ ಮೇಲೆ ಬಿಡುಗಡೆ ಮಾಡಲಾಯಿತು. ಇದರಲ್ಲಿ ವೈಯಕ್ತಿಕ ಬಾಂಡ್‌ಗಳು ಮತ್ತು ಶ್ಯೂರಿಟಿಗಳನ್ನು ಒದಗಿಸುವುದು ಸಹ ಸೇರಿದೆ. ನ್ಯಾಯಾಲಯದ ಅನುಮತಿಯಿಲ್ಲದೆ ದೇಶ ಬಿಟ್ಟು ಹೋಗಬಾರದು ಎಂದು ಆತನಿಗೆ ವಿಧಿಸಿದ ಷರತ್ತಿನಲ್ಲಿ ಹೇಳಲಾಗಿತ್ತು. ಅದನ್ನು ಮಾರ್ಪಾಡು ಮಾಡುವಂತೆ ಷಾ ಪ್ರಸ್ತುತ ಮನವಿ ಸಲ್ಲಿಸಿದ್ದಾರೆ.

ತನ್ನ ಕೆಲಸಕ್ಕಾಗಿ  ವಿವಿಧ ದೇಶಗಳಿಗೆ ತೆರಳಿ ಕೆಲಸ ಮಾಡಬೇಕಾಗಿರುವುದರಿಂದ ಪ್ರತಿ ಬಾರಿ ನ್ಯಾಯಾಲಯದ ಅನುಮತಿ ಪಡೆಯುವುದು ಕಷ್ಟಕರವಾಗಿದೆ ಎಂದು ಅವರು ಕೋರ್ಟ್‌ ಗಮನಕ್ಕೆ ತಂದಿದ್ದರು. ಶಾ ಪರ ಹಿರಿಯ ವಕೀಲರಾದ ಅಬದ್ ಪೊಂಡಾ, ಸಜಲ್ ಯಾದವ್ ಮತ್ತು ಆಯುಷಾ ಗೇರುಜಾ ವಾದ ಮಂಡಿಸಿದ್ದರು.

ಇದನ್ನು ಓದಿ: ಎಕ್ಸಿಟ್ ಪೋಲ್‌ಗಳನ್ನು ಎರಡು ತಿಂಗಳ ಹಿಂದೆ ಮನೆಯಲ್ಲೇ ಕುಳಿತು ತಯಾರಿಸಲಾಗಿದೆ: ಮಮತಾ ಬ್ಯಾನರ್ಜಿ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ಟೌನ್‌ಶಿಪ್ ಭೂಸ್ವಾಧೀನ ಪ್ರಕ್ರಿಯೆ ರದ್ದುಗೊಳಿಸಲು ಸಂಯುಕ್ತ ಹೋರಾಟ ಕರ್ನಾಟಕ ಆಗ್ರಹ

ಫಲವತ್ತಾದ ಕೃಷಿ ಭೂಮಿ ನಾಶ ಮಾಡಿ ನಿರ್ಮಿಸಲು ಉದ್ದೇಶಿಸಿರುವ ಬಿಡದಿ ಟೌನ್‌ಶಿಪ್ ಯೋಜನೆ ರೈತ ವಿರೋಧಿ ಹಾಗೂ ಜೀವ ಪರಿಸರ ವ್ಯವಸ್ಥೆಗೆ ವಿನಾಶಕಾರಿ. ಇಂತಹ ಪರಿಸರ ವಿನಾಶದ ಯೋಜನೆಗೆ ನೀಡಿರುವ ಸಂಪುಟ ಅನುಮೋದನೆಯನ್ನು...

‘ಮನೆ ಕೊಡಿ ಇಲ್ಲಾ ಜೈಲಿಗಾದರೂ ಬಿಡಿ’ : ಬೀದಿಗೆ ಬಿದ್ದ ಕೋಗಿಲು ನಿರಾಶ್ರಿತರ ಅಳಲು

"ನಮಗೊಂದು ಸೂರು ಕೊಟ್ಟರೆ ಅದಕ್ಕೆ ಕಾರಣರಾದ ಎಲ್ಲರನ್ನೂ ಹರಸಿ ನೆಮ್ಮದಿಯಾಗಿ ಬದುಕುತ್ತೇವೆ. ಇಲ್ಲವಾದರೆ ನಮ್ಮನ್ನು ಜೈಲಿಗಾದರೂ ಹಾಕಿಬಿಡಿ. ಒಂದು ನೆಲೆ ಮತ್ತು ಮೂರು ಹೊತ್ತಿನ ಊಟವಾದರೂ ಸಿಗುತ್ತದೆ". ಇದು ಸರ್ಕಾರ ಮನೆ ಧ್ವಂಸ...

ಒಳಮೀಸಲಾತಿ ಜಾರಿ ಸರ್ಕಾರದ ಹೊಸ ಸೂತ್ರ

ಕರ್ನಾಟಕದಲ್ಲಿ ಒಳಮೀಸಲಾತಿಯ ’ಸದ್ದು-ಗುದ್ದು’ ಅವಿಭಜಿತ ಆಂಧ್ರಪ್ರದೇಶಕ್ಕಿಂತಲೂ ಹೆಚ್ಚಾಗಿದೆ. ಇದಕ್ಕೆ ಕಾರಣ ಪರಿಶಿಷ್ಟ ಜಾತಿಗಳೊಳಗಿನ ಮೇಲಾಟವೂ ಹೌದು, ಸರ್ಕಾರದ ಬೇಜವಾಬ್ದಾರಿ ನಡೆಗಳೂ ಹೌದು. ಆದರೆ ದಿನಾಂಕ: 24.04.2026ರಂದು ನಡೆದ ಸಚಿವ ಸಂಪುಟ ಸಭೆಯು ಒಳಮೀಸಲಾತಿ...

ಕೊರೋನಾ ಲಸಿಕೆ ಒಳಹೊರಗುಗಳ ಪರಾಮರ್ಶೆಯ ನೋಟ

ಮನುಷ್ಯನ ನೆನಪಿನ ಶಕ್ತಿ ಕಡಿಮೆ ಎಂದು ರಾಜಕಾರಣಿಗಳು, ಅಧಿಕಾರಿಗಳು ಸದಾ ಗುನುಗುತ್ತಿರುತ್ತಾರೆ. ಅದು ಜೀವ ಮತ್ತು ಜೀವನ ಕಳೆದುಕೊಂಡ ವಿಚಾರವನ್ನು ಕೂಡ ಬಹಳ ಬೇಗ ಮರೆವಿನ ತೊಟ್ಟಿಗೆ ತಳ್ಳಿ ಬಿಡುತ್ತದೆ.ಆದರೂ, ಮನುಷ್ಯ ಭೂಮಿಯ...

‘ಮಾವಿನ ಮರ’ ಕಂಡ ಕನಸು

ಪುಸ್ತಕ ಪರಿಚಯ ಸವಾಲಿನ ವಿಷಯ. ಅದರಲ್ಲೂ ಕವಿತೆಗಳ ಕುರಿತು ಮಾತನಾಡುವುದು ಇನ್ನೂ ಸವಾಲು. ಪ್ರತಿಯೊಂದು ಕವಿತೆಯೂ ತನ್ನ ಓದುಗರೊಂದಿಗೆ ಸಂವಾದಿಸುವ ಬಗೆ ವಿಭಿನ್ನವಾಗಿರುತ್ತದೆ. ಅದನ್ನು ಏಕರೂಪೀ ಪರಿಭಾಷೆಯಲ್ಲಿ ಮಂಡಿಸುವುದು ಸರಿಯಲ್ಲ. ’ಮಿಥಿಲೆಯ ಮಾವಿನ...

NEET ರದ್ದು : ಖಿನ್ನತೆ, ಆತಂಕಕ್ಕೆ ಒಳಗಾದ ವಿದ್ಯಾರ್ಥಿಗಳು; ನಾಲ್ಕು ದಿನದಲ್ಲಿ ನಾಲ್ವರು ಸಾವಿಗೆ ಶರಣು

ಈ ವರ್ಷದ (2026) ನೀಟ್-ಯುಜಿ (NEET-UG) ಪರೀಕ್ಷೆ ರದ್ದಾದ ಬಳಿಕ ದೇಶದಾದ್ಯಂತ ಕನಿಷ್ಠ ನಾಲ್ವರು ವಿದ್ಯಾರ್ಥಿಗಳು ತೀವ್ರ ಮಾನಸಿಕ ಒತ್ತಡ ಹಾಗೂ ಹತಾಶೆಯಿಂದ ಸಾವಿಗೆ ಶರಣಾಗಿದ್ದಾರೆ. ರಾಜಸ್ಥಾನದ ಝುಂಜುನು ಜಿಲ್ಲೆಯ 23 ವರ್ಷದ ಪ್ರದೀಪ್...

ಪ್ಯಾಲೆಸ್ಟೀನಿಯನ್ ಕೈದಿಗಳ ಮೇಲೆ ಲೈಂಗಿಕ ದೌರ್ಜನ್ಯ ವರದಿ: ನ್ಯೂಯಾರ್ಕ್ ಟೈಮ್ ವಿರುದ್ಧ ಮೊಕದ್ದಮೆ ದಾಖಲಿಸಿದ ಇಸ್ರೇಲ್ ಕ್ರಮಕ್ಕೆ ಆರ್‌ಎಸ್‌ಎಫ್ ಖಂಡನೆ

ಪ್ಯಾಲೆಸ್ಟೀನಿಯನ್ ಕೈದಿಗಳನ್ನು ಗುರಿಯಾಗಿಸಿಕೊಂಡು ವ್ಯಾಪಕವಾದ ಲೈಂಗಿಕ ದೌರ್ಜನ್ಯವನ್ನು ಬಹಿರಂಗಪಡಿಸಿದ ನಿಕೋಲಸ್ ಕ್ರಿಸ್ಟೋಫ್ ಅವರ  ಅಭಿಪ್ರಾಯ ಅಂಕಣವನ್ನು ಪ್ರಕಟಿಸಿದ ನ್ಯೂಯಾರ್ಕ್ ಟೈಮ್ಸ್ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿರುವ ಇಸ್ರೇಲಿ ಸರ್ಕಾರದ ನಿರ್ಧಾರವನ್ನು ರಿಪೋರ್ಟರ್ಸ್ ವಿದೌಟ್...

“ಮುಸ್ಲಿಮರಿಗೆ ಯಾವುದೇ ಕೆಲಸ ಮಾಡಲ್ಲ” ಎಂದು ವಿವಾದಾತ್ಮಕ ಶಪಥ ಮಾಡಿದ ಪಶ್ಚಿಮ ಬಂಗಾಳದ ಬಿಜೆಪಿ ಶಾಸಕ ರಿತೇಶ್ ತಿವಾರಿ

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಬಿಜೆಪಿ ತನ್ನ ಮೊದಲ ಸರ್ಕಾರವನ್ನು ರಚಿಸಿದ ಕೆಲವೇ ದಿನಗಳಲ್ಲಿ, ಪಕ್ಷದ ಶಾಸಕ ರಿತೇಶ್ ತಿವಾರಿ ಅವರು ಮಾಡಿರುವ ಭಾಷಣವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. "ಪಶ್ಚಿಮ...

’ಎಸ್‌ಐಆರ್’ ವಿರುದ್ಧ ಜನಪರ ಸಂಘಟನೆಗಳಿಂದ ಜನಾಂದೋಲನ ಬಂಗಾಳದ ಜನರ ಜೊತೆಗೆ ನಿಂತ ಕರ್ನಾಟಕ

ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ (ಎಸ್‌ಐಆರ್) ಮೂಲಕ ವಿರೋಧ ಪಕ್ಷಗಳ ಮತದಾರರು ಮತ್ತು ಅಲ್ಪಸಂಖ್ಯಾತ ಸಮುದಾಯದ ಲಕ್ಷಾಂತರ ಮತದಾರರನ್ನು ಪಟ್ಟಿಯಿಂದ ಕೈಬಿಡುವ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಕುತಂತ್ರ ಈಗಾಗಲೇ ಬಿಹಾರದಲ್ಲಿ ಜಗಜ್ಜಾಹೀರಾಗಿದೆ....

ನಿರುದ್ಯೋಗಿ ಯುವಕರನ್ನು ಜಿರಳೆಗಳು ಎಂದ ಸಿಜೆಐ: ಇದೆಂತಾ ಮಾತು ನ್ಯಾಯಮೂರ್ತಿಗಳೇ!

‘ಕೆಲವು ನಿರುದ್ಯೋಗಿ ಯುವಕರು ಜಿರಳೆಗಳಂತೆ ಸಮಾಜವನ್ನು ಕಾಡುತ್ತಾರೆ. ಉದ್ಯೋಗ, ಸ್ಥಾನಮಾನ ಸಿಗದೆ ಇದ್ದಾಗ ಅವರು ಎಲ್ಲರ ಮೇಲೆ ದಾಳಿ ಆರಂಭಿಸುತ್ತಾರೆ’ ಇದು ಯಾವುದೋ ರಾಜಕೀಯ ರ‍್ಯಾಲಿಯ ಭಾಷಣವಲ್ಲ ಅಥವಾ ಟಿವಿ ಚಾನೆಲ್‌ಗಳ ಜಗಳವಲ್ಲ,...