Homeಕರ್ನಾಟಕಧರ್ಮಸ್ಥಳದ ನಿರ್ಭಯಾ ಪ್ರಕರಣ: ಧರ್ಮ ಸಂಸ್ಥಾನದ ಪಾರುಪತ್ಯಗಾರ ವೀರೇಂದ್ರ ಹೆಗ್ಗಡೆ ಹತಾಶರಾದರೆ?

ಧರ್ಮಸ್ಥಳದ ನಿರ್ಭಯಾ ಪ್ರಕರಣ: ಧರ್ಮ ಸಂಸ್ಥಾನದ ಪಾರುಪತ್ಯಗಾರ ವೀರೇಂದ್ರ ಹೆಗ್ಗಡೆ ಹತಾಶರಾದರೆ?

ಎಲ್ಲೆಲ್ಲೋ ಆಗುವ ಅನ್ಯಾಯ-ಅನಾಚಾರದ ಬಗ್ಗೆ ಸಹಾನುಭೂತಿಯ-ಮಾನವೀತೆಯ ವ್ಯಾಖ್ಯಾನ ಮಾಡುವ “ಖಾವಂದರು” ತಮ್ಮ ನರೆಮನೆಯಲ್ಲೇ ಆಗಿರುವ ದುರಂತದ ಬಗ್ಗೆ ಏಕೆ ದಿವ್ಯ ಮೌನದಲ್ಲಿದ್ದಾರೆ?

- Advertisement -
- Advertisement -

“ನಮ್ಮ ಅಭಿಮಾನಿಗಳು ಏನನ್ನು ಮಾಡಲಿಕ್ಕೂ ಸಿದ್ಧರಿದ್ಧಾರೆ…. ಆದರೆ ನಾವೇ ಬೇಡವೆಂದು ತಡೆದಿದ್ದೇವೆ….”- ಇದು ಧರ್ಮಸ್ಥಳ ದೇವಳದ “ಧರ್ಮ ದಂಡ”ಧಾರಿ- ಬಿಜೆಪಿ ರಾಜ್ಯಸಭಾ ಸಂಸದ ವೀರೇಂದ್ರ ಹೆಗ್ಗಡೆ, ಅಮಾಯಕ ಹುಡುಗಿ ಸೌಜನ್ಯ ಗೌಡ ಅತ್ಯಾಚಾರ-ಕಗ್ಗೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಡಿದ “ಪ್ರವಚನ”ದ ಒಂದು ಅಣಿಮುತ್ತು!

ಸತ್ಯ-ಧರ್ಮ-ನ್ಯಾಯದ ಧರ್ಮಸ್ಥಳ ಮಂಜುನಾಥ ದೇವರ ಅಪರಾವತಾರವೆಂದೇ ಅಪಾರ ಭಕ್ತಾದಿಗಳು ನಂಬಿರುವ “ಧರ್ಮಾಧಿಕಾರಿ” ವೀರೇಂದ್ರ ಹೆಗ್ಗಡೆ ಬಾಯಿಂದ ಕಳಪೆ ರಾಜಕೀಯ ಪುಢಾರಿ ಶೈಲಿಯಲ್ಲಿ ಮಾತುಗಳು ಹೊರಬರುತ್ತಿರುವುದು ಸಾಮಾಜಿಕ-ಧಾರ್ಮಿಕ-ರಾಜಕೀಯ ವಲಯದಲ್ಲಿ ಅನೇಕ ಅಚ್ಚರಿ-ಅನುಮಾನದ ಚರ್ಚೆಗಳನ್ನು ಹುಟ್ಟುಹಾಕಿಬಿಟ್ಟಿದೆ. ಬರ್ಬರ ಬಲಾತ್ಕಾರ ಮತ್ತು ಹತ್ಯೆಗೀಡಾಗಿದ್ದ ಅಮಾಯಕ ಹುಡುಗಿ ಸೌಜನ್ಯ ಗೌಡ ಪ್ರಕರಣದಲ್ಲಿ ಸಿಬಿಐ ಫಿಕ್ಸ್ ಮಾಡಿದ್ದ ಸಂತೋಷ್ ರಾವ್ ನಿರ್ದೋಷಿಯೆಂದು ತೀರ್ಪು ಬಂದ ಬಳಿಕ ಭುಗಿಲೆದ್ದಿರುವ ಮರುತನಿಖೆ ಒತ್ತಾಯದ ಆಕ್ರೋಶ, ಕೂಗು, ಪ್ರತಿಭಟನೆಗಳ ಹಿನ್ನಲೆಯಲ್ಲಿ ದೈವಾಂಶ ಸಂಭೂತ ಇಮೇಜಿನ ವೀರೇಂದ್ರ ಹಗ್ಗಡೆ ನಡೆ-ನುಡಿಗೆ ಮಹತ್ವ ಬಂದಿದೆ.

ಸುಮಾರು 11 ವರ್ಷದ ಹಿಂದೆ ಧರ್ಮಸ್ಥಳದ ಬಳಿಯ ಪಾಂಗಾಳದ ಒಕ್ಕಲಿಗ ಸಮುದಾಯದ ಹದಿನೇಳು ವರ್ಷದ ಕಾಲೇಜು ವಿದ್ಯಾರ್ಥಿನಿ ಸೌಜನ್ಯ ಗೌಡ ಮೃತ ಶರೀರ ರೇಪ್-ಮರ್ಡರ್ ಆಗಿರುವ ಸ್ಥಿತಿಯಲ್ಲಿ ದೊರೆತಿತ್ತು. ಆರಂಭದಿಂದಲೂ ಈ ಅಮಾನುಷ ಪಾತಕದ ತನಿಖೆ ಅದ್ಯಾಕೋ ಪಾರದರ್ಶಕ-ಪ್ರಾಮಾಣಿಕವಾಗಿ ನಡೆಯುತ್ತಿಲ್ಲ; ತನಿಖಾಧಿಕಾರಿ ಪೊಲೀಸರ ಮತ್ತು ಮರಣೋತ್ತರ ಪರೀಕ್ಷೆ ನಡೆಸಿರುವ ವೈದ್ಯರ ವರ್ತನೆ “ಯಾರನ್ನೋ” ರಕ್ಷಿಸಲು ಹುನ್ನಾರದಲ್ಲಿ ತೊಡಗಿರುವಂತಿದೆ ಎಂಬ ಶಂಕೆ ಆರಂಭದಲ್ಲೇ ಸಾರ್ವಜನಿಕರಲ್ಲಿ ಹಟ್ಟುಹಾಕಿತ್ತು. ಧರ್ಮಸ್ಥಳದಲ್ಲಿ ಅಂಡಲೆಯುತ್ತಿದ್ದ ಮಾನಸಿಕ ಸಮಸ್ಯೆಯಿಂದ ಬಳಲುತ್ತಿದ್ದ ಸಂತೋಷ್ ರಾವ್ ಎಂಬ ಯಾತ್ರಿಕನನ್ನು ಅತ್ಯಾಚಾರಿಯೆಂದು ಕೇಸುಹಾಕಿ 11 ವರ್ಷ ಯಮಯಾತನೆಕೊಟ್ಟು ಕಾಡಲಾಗಿತ್ತು. ಸೌಜನ್ಯಳನ್ನು ಹೆತ್ತವರೇ ಈತ ಆರೋಪಿಯಾಗಲು ಸಾಧ್ಯವಿಲ್ಲ; ನಮಗೆ ಧರ್ಮಸ್ಥಳದ ದೇಗುಲದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಪರಿವಾರದ ಮೂರ್ನಾಲ್ಕು ತರುಣರ ಮೇಲೆ ಅನುಮಾವಿದೆ ಎಂದು ಹೇಳಿದರೂ ಪೊಲೀಸರು ಪ್ರಜ್ಞಾಪೂರ್ವಕವಾಗಿ ಕಡೆಗಣಿಸಿದ್ದರು. ಈಗ ಒಂದು ತಿಂಗಳ ಹಿಂದೆ ಸಿಬಿಐ ನ್ಯಾಯಾಲಯವೇ ಸಂತೋಷ್ ರಾವ್ ನಿರಪರಾಧಿ ಎಂದು ತೀರ್ಪು ಕೊಟ್ಟಿದೆ.

ಸಂತೋಷ್ ರಾವ್ ನಿರ್ದೋಷಿಯಾದರೆ ಪಾತಕಿಗಳು ಯಾರು? ಲೋಕಲ್ ಪೊಲೀಸರ, ಸಿಓಡಿ-ಸಿಬಿಐನಂಥ ಉನ್ನತ ಪೊಲೀಸ್ ಏಜೆನ್ಸಿಗಳಿಂದಲೂ ಏಕೆ ಅಪರಾಧಿಗಳನ್ನು ಹಿಡಿಯಲು ಸಾಧ್ಯವಾಗಗಿಲ್ಲ? ಸಿಒಡಿ ಮತ್ತು ಸಿಬಿಐ ಪೊಲೀಸರ ಕೈ ಕಟ್ಟಿಹಾಕಿದವರು ಯಾರು? ಸೌಜನ್ಯಳ ತಂದೆ ಚಂದಪ್ಪ ಗೌಡರು, ‘ಸಿಬಿಐ ನ್ಯಾಯಾಲಯದಲ್ಲಿ ಮಲ್ಲಿಕ್ ಜೈನ್, ಧೀರಜ್ ಕೆಲ್ಲ ಮತ್ತು ಉದಯ್ ಜೈನ್‌ರನ್ನು ವಿಚಾರಣೆಗೆ ಒಳಪಡಿಸಬೇಕು; ನನಗಿವರ ಮೇಲೆ ಅನುಮಾನವಿದೆ’ ಎಂದು ಹೇಳಿದರೂ ಸಿಬಿಐ ಉದಾಸೀನ ಮಾಡಿತು ಏಕೆ? ಈ ಶಂಕಿತರೆಲ್ಲ ಸಾಮಾಜಿಕ-ರಾಜಕೀಯ ಮತ್ತು ಧಾರ್ಮಿಕ ವಲಯದಲ್ಲಿ ದೇವಮಾನವ ವರ್ಚಸ್ಸು ಹೊಂದಿರುವ ವೀರೇಂದ್ರ ಹೆಗ್ಗಡೆಗೆ ಒಂದಲ್ಲ ಒಂದು ರೀತಿಯಲ್ಲಿ ನಿಕಟವಾಗಿರುವ ಅವರ ಜೈನ ಪರಿವಾರದ ಕುಲಕಂಠೀರವರೆಂದೇ? ಎಂಬಿತ್ಯಾದಿ ಜಿಜ್ಞಾಸೆ ಸಿಬಿಐ ನ್ಯಾಯಾಲಯದ ತೀರ್ಪು ಬಂದ ಮರುಗಳಿಗೆಯಿಂದಲೆ ಸಹಜವಾಗಿಯೇ ಸಾರ್ವಜನಿಕರಲ್ಲಿ ಶುರುವಾಗಿದೆ. ಸಾಮಾಜಿಕ ಜಾಲತಾಣಗಳಲ್ಲಿ ಬಿಜೆಪಿ ಸಂಸದ ವೀರೇಂದ್ರ ಹೆಗ್ಗಡೆ ಹಸ್ತಕ್ಷೇಪವನ್ನು ಅರೋಪಿಸಿಯೂ ಚರ್ಚೆಗಳು ಭುಗಿಲೆದ್ದವು.

ಆರಂಭದಿಂದಲೂ ಸೌಜನ್ಯ ಸಾವಿಗೆ ನ್ಯಾಯ ಕೊಡಿಸುವ ಹೋರಾಟ ಕಟ್ಟಿದ್ದ ಮಹೇಶ್ ಶೆಟ್ಟಿ ತಿಮರೋಡಿ, ಸೌಜನ್ಯ ತಾಯ್ತಂದೆ, ಪ್ರಾಸಿಕ್ಯೂಶನ್ ವಿರುದ್ದ ವಾದಿಸಿದ್ದ ವಕೀಲರುಗಳು, ಪ್ರಕರಣದ ಲೋಪ-ದೋಷ, ಸಿಬಿಐ-ಸಿಓಡಿ ಮತ್ತು ಲೋಕಲ್ ಪೊಲೀಸರು-ಮರಣೋತ್ತರ ಪರೀಕ್ಷೆ ಮಾಡಿದ್ದ ವೈದ್ಯರು ಅಡಿಗಡಿಗೆ ಸಾಕ್ಷ್ಯ ನಾಶಮಾಡಿದ ಪರಿ, ತನ್ಮೂಲಕ ತನಿಖೆಯ ನಾಟಕವಾಡಿ ಅಸಲಿ ಪಾಪಿಗಳು ಪಾರಾಗಲು ಅವಕಾಶ ಕಲ್ಪಿಸಿದ್ದನ್ನು ಮಾಧ್ಯಮದ ಮೂಲಕ ಜನರ ಮುಂದಿಟ್ಟರು. ವಿವಿಧ ಸಂಘಟನೆಗಳು ಪ್ರಕರಣದ ಮರು ತನಿಖೆ ಆಗಬೇಕೇಂದು ಬೀದಿಗಿಳಿದವು. ಸೌಜನ್ಯ ತಾಯ್ತಂದೆಯಂತೂ, ‘ಈಗಾಗಿರುವುದು ಪಕ್ಕಾ ನಕಲಿ ತನಿಖೆ; ತಕ್ಷಣ ಪ್ರಾಮಾಣಿಕ-ನಿಷ್ಠುರ ಮರುತನಿಖೆ ಆಗಬೇಕು’ ಎಂಬ ಬೇಡಿಕೆ ಮುಂದಿಟ್ಟರು. ಮೈಸೂರಿನ ಒಡನಾಡಿ ಸಂಸ್ಥೆಯ ಸ್ಟ್ಯಾನ್ಲಿ ಮತ್ತು ಪರಶು ಬೆಳ್ತಂಗಡಿಯಲ್ಲಿ ಓಡಾಡಿ ಸೌಜನ್ಯಳಿ ಪ್ರಕರಣಕ್ಕೆ ನ್ಯಾಯ ಕೊಡಿಸುವ ಗಂಭೀರ ಪ್ರಯತ್ನಕ್ಕೆ ಶುರುವಿಟ್ಟುಕೊಂಡರು. ಮೈಸೂರಲ್ಲಿ ನಡೆದ ಪ್ರತಿಭಟನಾ ಮೆರವಣಿಗೆಯ ನಂತರ ಹೋರಾಟದ ಕಿಚ್ಚು ರಾಜ್ಯದಾದ್ಯಂತ ಹಬ್ಬುವ ಲಕ್ಷಣ ಕಾಣತೊಡಗಿದೆ.

ಅನಾಯಾಸವಾಗಿ ಕೋಟಿಕೋಟಿ ರೂ ಹರಿದು ಬರುವ ಧರ್ಮಸ್ಥಳ ದೇವಳದ ಉಸ್ತುವಾರಿ ಪರಿವಾರದ ಯಜಮಾನ ವೀರೇಂದ್ರ ಹೆಗ್ಗಡೆ ಸಹಜವಾಗಿಯೇ ಸಂಶಯದ ಕೇಂದ್ರಬಿಂದುವಾದರು. ಎಲ್ಲೆಲ್ಲೋ ಆಗುವ ಅನ್ಯಾಯ-ಅನಾಚಾರದ ಬಗ್ಗೆ ಸಹಾನುಭೂತಿಯ-ಮಾನವೀತೆಯ ವ್ಯಾಖ್ಯಾನ ಮಾಡುವ “ಖಾವಂದರು” ತಮ್ಮ ನರೆಮನೆಯಲ್ಲೇ ಆಗಿರುವ ದುರಂತದ ಬಗ್ಗೆ ಏಕೆ ದಿವ್ಯ ಮೌನದಲ್ಲಿದ್ದಾರೆ? ದೊಡ್ಡ ಜನಾಂದೋಲನವೇ ಸೌಜನ್ಯಳಿಗಾಗಿ ನಡೆಯುತ್ತಿದ್ದರೂ ಹೆಗ್ಗಡೆಯವರೇಕೆ ಭಾಗವಹಿಸುತ್ತಿಲ್ಲ? ಹೆಗ್ಗಡಯವರೇಕೆ ಇಂದಿಗೂ ಸೌಜನ್ಯಳ ಮನೆಗೆ ಹೋಗಿ ನಾಲ್ಕು ಸಾಂತ್ವನದ ಮಾತಾಡುವ ಮನಸ್ಸು ಮಾಡುತ್ತಿಲ್ಲ? ಸೌಜನ್ಯಳ ಹೆತ್ತವರ ಒಡಲ ಸಂಕಟವೇಕೆ ಹೆಗ್ಗಡೆಯವರಿಗೆ ಅರ್ಥವಾಗುತ್ತಿಲ್ಲ? ಎಂಬ ಮಾತುಗಳು ವ್ಯಾಪಕವಾಗಿ ಕೇಳಿಬರತೊಡಗಿತು.

ಈ ನಡುವೆ ಧರ್ಮಸ್ಥಳ ಸಂಸ್ಥಾನದಲ್ಲಿ ಭೂಮಿ, ಹೆಣ್ಣು, ಸಂಪತ್ತು ಮತ್ತು ಪಾಳೇಗಾರಿ ಪ್ರತಿಷ್ಠೆಗಾಗಿ ಅತ್ಯಾಚಾರ-ಅನಾಚಾರ-ದೌರ್ಜನ್ಯಗಳು ನಾಲ್ಕೈದು ದಶಕದಿಂದ ನಿರಂತರ-ನಿರಾತಂಕವಾಗಿ ನಡೆಯುತ್ತಿದೆ; ನೂರಾರು ಹೆಣ್ಣುಗಳ ಹೆಣ ನಿಶ್ಯಬ್ದವಾಗಿ ನೇತ್ರಾವತಿ ನದಿಯಲ್ಲಿ ತೇಲಿಹೋಗಿವೆ; ಸೌಜನ್ಯ ಸಾವಿನ ಪೂರ್ವದ 10 ವರ್ಷದಲ್ಲಿ ಧರ್ಮಸ್ಥಳದ ದೇವಸನ್ನಿಧಿಯಲ್ಲಿ 462 ಅಸಹಜ ಸಾವುಗಳಾಗಿವೆ ಎಂದು ಅಧಿಕೃತ ಪೊಲೀಸ್ ದಾಖಲೆಗಳೇ ಹೇಳುತ್ತವೆ. ಇದರಲ್ಲಿ 90ರಷ್ಟು ಹೆಣ್ಣುಮಕ್ಕಳಿದ್ದಾರೆ! ಇದರಲ್ಲಿ ಯಾತ್ರಿಕರು, ಸ್ಥಳೀಯರು ಸೇರಿದ್ದಾರೆ.

ವಿಚಾರವಾದಿ ನರೇಂದ್ರ ನಾಯಕ್ ಧರ್ಮಸ್ಥಳ ಸಂಸ್ಥಾನದ ದೌರ್ಜನ್ಯ-ಅನ್ಯಾಯದ ಬಗೆಗಿನ ಸಂವಾದದಲ್ಲಿ ಸುಮಾರು ಮೂರು ದಶಕದ ಹಿಂದೆ ನಡೆದ ಎರಡು ಮಹಿಳೆಯರ ಹತ್ಯೆ ಸಂಶಯದ ಕಥೆ-ವ್ಯಥೆ ಬಿಚ್ಚಿಟ್ಟಿದ್ದರು! ಧರ್ಮಸ್ಥಳ ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ಸ್ಫರ್ಧಿಸದಂತೆ ಕಮ್ಯುನಿಸ್ಟ್ ಮುಂದಾಳಾಗಿದ್ದ ದೇವಾನಂದ ಎನ್ನುವವರಿಗೆ ದೇವಧೂತ ಪರಿವಾರ ತಾಕೀತು ಮಾಡಿತ್ತು. ನಾಸ್ತಿಕನಾದ ಈತ ಪಂಚಾಯ್ತಿ ಮೆಂಬರ್ ಆದರೆ ತೊಂದರೆ ಆಗುತ್ತದೆಂಬ ದೂ(ದು)ರಾಲೋಚನೆ ದೇವಮಾನವ ಪರಿವಾರದಾಗಿತ್ತು ಎಂಬ ಆರೋಪವಿದೆ. ಆ ಮಾರ್ಕ್ಸ್ ವಾದಿ ದೇವದೂತರ ಮಾತಿಗೆ ಸೊಪ್ಪು ಹಾಕಲಿಲ್ಲ. ಮರು ದಿನವೇ ಉಜಿರೆಯ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನಲ್ಲಿ ಓದುತ್ತಿದ್ದ ಅವರ ಮಗಳು ಪದ್ಮಲತಾ ನಾಪತ್ತೆಯಾಗುತ್ತಾರೆ. ಸುಮಾರು ಒಂದು ತಿಂಗಳ ಬಳಿಕ ಕೈಗಳನ್ನು ಕಟ್ಟಿದ ಆಕೆಯ ಮೃತದೇಹ ನೇತ್ರಾವತಿ ನದಿಯಲ್ಲಿ ಕೊಳೆತ ಸ್ಥಿತಿಯಲ್ಲಿ ಸಿಗುತ್ತದೆ! ತಿಂಗಳಾನುಗಟ್ಟಲೆ ಅತ್ಯಾಚಾರ ನಡೆಸಿ ಕೊನೆಗೆ ಕೊಂದುಹಾಕಲಾಗಿದೆ ಎಂಬ ಮಾತು ಇವತ್ತಿಗೂ ಬೆಳ್ತಂಗಡಿ-ಉಜಿರೆ ಪರಿಸರದಲ್ಲಿ ಕೇಳಿಬರುತ್ತಿದೆ.

ಉಜಿರೆಯಲ್ಲಿ ವೈದ್ಯರಾಗಿದ್ದ ಡಾ.ಹರಳೆ ಎಂಬವರ ಮಡದಿ ವೇದವಲ್ಲಿ ಧರ್ಮಸ್ಥಳ ಸಂಸ್ಥಾನದವರು ನಡೆಸುವ ಹೈಸ್ಕೂಲ್ ಒಂದರಲ್ಲಿ ಶಿಕ್ಷಕಿಯಾಗಿದ್ದರು. ಸೇವಾ ಜ್ಯೇಷ್ಠತೆಯಂತೆ ಅವರಿಗೆ ಮುಖ್ಯೋಪಾಧ್ಯಾಯಿನಿ ಹುದ್ದೆ ಸಿಗುವುದಿತ್ತು. ಅದನ್ನು ಬಿಟ್ಟುಕೊಡುವಂತೆ ಸಂಸ್ಥಾನದ ಮುಖ್ಯ ವ್ಯಕ್ತಿ ಒತ್ತಡ ಹಾಕುತ್ತಿದ್ದನಂತೆ; ತನಗೆ ಬೇಕಾದವರಿಗೆ ಆ ಹುದ್ದೆ ಕೊಡಿಸುವ ಹುನ್ನಾರ ಆತನದಾಗಿತ್ತು. ಆದರೆ ವೇದವಲ್ಲಿ ಅದಕ್ಕೊಪ್ಪಲಿಲ್ಲ. ವೇದವಲ್ಲಿಯನ್ನು ಅವರ ಮನೆಯಲ್ಲೇ ಪೆಟ್ರೋಲ್ ಸರಿದು ಸುಟ್ಟುಹಾಕಲಾಗಿತ್ತು. ಆ ಕೇಸ್ ಮಂಜುನಾಥ ಮತ್ತು ಅಣ್ಣಪ್ಪ ಅರಗಿಸಿಕೊಂಡರೆಂದು ಮಾನವತಾವಾದಿ ನರೇಂದ್ರ ನಾಯಕ್ ಹೇಳುತ್ತಾರೆ. ಈ ಮೂರ್ನಾಲ್ಕು ದಶಕದ ಹಿಂದಿನ ಕ್ರೌರ್ಯ ಕಥನಗಳು ಈಗ ಸೌಜನ್ಯ ಪ್ರಕರಣದೊಂದಿಗೆ ಥಳಕು ಹಾಕಿಕೊಂಡು ಚರ್ಚೆಗಳನ್ನು ಹುಟ್ಟುಹಾಕಿದೆ.

ಸೌಜನ್ಯ ಪ್ರಕರಣದ ನಿಷ್ಠುರ ತನಿಖೆಗಾಗಿ ರಾಜ್ಯದಾದ್ಯಂತ ಹೋರಾಟ ಭುಗಿಲೇಲುತ್ತಿರುವುದರಿಂದ ಸಂಸದ ವೀರೇಂದ್ರ ಹೆಗ್ಗಡೆ ಹತಾಶರಾಗಿದ್ದಾರೆಂದು ಹೋರಾಟಗಾರರು ಹೇಳುತ್ತಾರೆ. ಕೆಲವು ದಿನಗಳ ಹಿಂದೆ ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಹೊಗಳಿ ಪತ್ರ ಬರೆದಿರುವುದು ಈ ಹೆದರಿಕೆಯ ಭಾಗವಾಗಿಯೇ ನಡೆದಿರುವ ತಂತ್ರಗಾರಿಕೆಯೆಂದು ಹೋರಾಟಗಾರ ತಿಮರೋಡಿ ವ್ಯಾಖ್ಯಾನಿಸುತ್ತಾರೆ. ಒಟ್ಟಿನಲ್ಲಿ ಹೋರಾಟಗಾರರನ್ನು ಬೆದರಿಸುವ ಭಾಷೆ “ದೇವರ” ಬಾಯಿಂದ ಹೊರಬರುತ್ತಿರುವುದು ಸೌಜನ್ಯ ಕೇಸಿನ ಮರುತನಿಖೆಯ ಅನಿವಾರ್ಯತೆ ಹೆಚ್ಚಿಸಿಬಿಟ್ಟಿದೆ.

ಇದನ್ನೂ ಓದಿ: ವೀರೇಂದ್ರ ಹೆಗಡೆ ಬೆಂಬಲಿಗರಿಂದ ಸೌಜನ್ಯ ತಾಯಿ ಮೇಲೆ ಹಲ್ಲೆಗೆ ಯತ್ನ: ದೂರು ದಾಖಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. How many persons are convicted in such cases as a offenders in india..I think almost all cases are same..then why every one are focusing on this only.. what’s the agenda…

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...