Homeಮುಖಪುಟದೆಹಲಿ ನಿರ್ಭಯ ಅಪರಾಧಿಗಳಿಗೆ ಮರಣ ದಂಡನೆ : ಗಣ್ಯರ ಪ್ರತಿಕ್ರಿಯೆ

ದೆಹಲಿ ನಿರ್ಭಯ ಅಪರಾಧಿಗಳಿಗೆ ಮರಣ ದಂಡನೆ : ಗಣ್ಯರ ಪ್ರತಿಕ್ರಿಯೆ

- Advertisement -
- Advertisement -

ದೆಹಲಿಯ ಚಲಿಸುತ್ತಿದ್ದ ಬಸ್‌ನಲ್ಲಿ ವಿದ್ಯಾರ್ಥಿನಿಯು ಸಾಮೂಹಿಕ ಅತ್ಯಾಚಾರ ಮತ್ತು ಚಿತ್ರಹಿಂಸೆಗೊಳಗಾದ ಏಳು ವರ್ಷಗಳ ನಂತರ, ಆಕೆಯ ನಾಲ್ಕು ಕೊಲೆಗಾರರನ್ನು ಇಂದು ಬೆಳಿಗ್ಗೆ 5.30 ಕ್ಕೆ ಗಲ್ಲಿಗೇರಿಸಲಾಯಿತು. ಅಪರಾಧಿಗಳ ಅಂತಿಮ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದ ಒಂದು ದಿನದ ನಂತರ ಮುಂಜಾನೆ ಮರಣದಂಡನೆ ನಡೆಯಿತು.

ಅಕ್ಷಯ್ ಠಾಕೂರ್ (31), ಪವನ್ ಗುಪ್ತಾ (25), ವಿನಯ್ ಶರ್ಮಾ (26) ಮತ್ತು ಮುಖೇಶ್ ಸಿಂಗ್ (32) ಅವರನ್ನು ದೆಹಲಿಯ ತಿಹಾರ್ ಜೈಲಿನಲ್ಲಿ ಗಲ್ಲಿಗೇರಿಸಲಾಯಿತು.

ಅಪರಾಧಿಗಳು ಮರಣ ದಂಡನೆಯಿಂದ ವಿನಾಯಿತಿಗಾಗಿ ಕಳೆದ ಕೆಲವು ತಿಂಗಳುಗಳಲ್ಲಿ ಅನೇಕ ಅರ್ಜಿಗಳನ್ನು ಸಲ್ಲಿಸಿದ್ದರು. “ಅವರನ್ನು ಭಾರತ-ಪಾಕಿಸ್ತಾನ ಗಡಿಗೆ ಅಥವಾ ಡೋಕ್ಲಾಮ್‌ಗೆ ಕಳುಹಿಸಿ (ಚೀನಾದ ಗಡಿಯಲ್ಲಿ), ಆದರೆ ಗಲ್ಲಿಗೇರಿಸಬೇಡಿ” ಎಂದು ಅಕ್ಷಯ್ ಠಾಕೂರ್ ಅವರ ವಕೀಲರು ಮನವಿ ಮಾಡಿದ್ದರು.

“ನಾವೆಲ್ಲರೂ ಈ ದಿನಕ್ಕಾಗಿ ಇಷ್ಟು ದಿನ ಕಾಯುತ್ತಿದ್ದೆವು. ಇಂದು ಭಾರತದ ಹೆಣ್ಣುಮಕ್ಕಳಿಗೆ ಹೊಸ ಉದಯವಾಗಿದೆ. ಮೃಗಗಳನ್ನು ಗಲ್ಲಿಗೇರಿಸಲಾಗಿದೆ” ಎಂದು ನಿರ್ಭಯ ತಾಯಿ ಆಶಾ ದೇವಿ ಹೇಳಿದರು. ಸುಪ್ರೀಂ ಕೋರ್ಟ್ ತೀರ್ಪಿನ ನಂತರ, ಅವರು ಮನೆಗೆ ಹೋಗಿ ಮಗಳ ಫೋಟೋವನ್ನು ತಬ್ಬಿಕೊಂಡೆ ಎಂದರು.

ಡಿಸೆಂಬರ್ 16, 2012 ರಂದು, 23 ವರ್ಷದ ನಿರ್ಭಯಾರನ್ನು ಆರು ಮಂದಿ ಸುಮಾರು ಒಂದು ಘಂಟೆಯವರೆಗೆ ಘೋರ ಹಿಂಸೆ ಮಾಡಿ ಅತ್ಯಾಚಾರಕ್ಕೆ ಒಳಪಡಿಸಿದ್ದರು. ಇದಾದ ಕೆಲವು ದಿನಗಳ ನಂತರ ಸಿಂಗಾಪುರ ಆಸ್ಪತ್ರೆಯಲ್ಲಿ ಸಂತ್ರಸ್ತೆ ನಿರ್ಭಯ ನಿಧನರಾಗಿದ್ದರು. ಅವರ ಕೊಲೆಗಾರರು ದಕ್ಷಿಣ ದೆಹಲಿಯ ಕೊಳೆಗೇರಿಯ ನಿವಾಸಿಗಳಾಗಿದ್ದಾರೆ.

ಬಂಧಿಸಲ್ಪಟ್ಟ ಆರು ಜನರಲ್ಲಿ ರಾಮ್ ಸಿಂಗ್ ಜೈಲು ಕೋಣೆಯಲ್ಲಿ ಶವವಾಗಿ ಪತ್ತೆಯಾಗಿದ್ದರು. 18 ಕ್ಕಿಂತ ಕಡಿಮೆ ವಯಸ್ಸಿನ ಅಪ್ರಾಪ್ತ ಬಾಲಕನನ್ನು ಮೂರು ವರ್ಷಗಳ ನಂತರ ರಿಮಾಂಡ್ ಹೋಮಿಂದ ಬಿಡುಗಡೆ ಮಾಡಲಾಗಿತ್ತು.

ಭೀಕರ ಸಾಮೂಹಿಕ ಅತ್ಯಾಚಾರ ಮತ್ತು ಹತ್ಯೆಯ ನಂತರ ಮಹಿಳೆಯರ ಮೇಲಿನ ಅಪರಾಧಗಳ ಬಗ್ಗೆ ಭಾರತ ಸರಕಾರ ತನ್ನ ಕಾನೂನುಗಳನ್ನು ಬದಲಾಯಿಸಿತು.

ನ್ಯಾಯ ಸಿಗಲು 7 ವರ್ಷಗಳು ಬೇಕಾಯಿತು. ಇಂದು, ಇದೇ ರೀತಿಯ ಘಟನೆ ಮತ್ತೆ ಸಂಭವಿಸುವುದಿಲ್ಲ ಎಂಬ ಪ್ರತಿಜ್ಞೆಯನ್ನು ನಾವು ತೆಗೆದುಕೊಳ್ಳಬೇಕಾಗಿದೆ. ಇತ್ತೀಚಿನವರೆಗೂ ಅಪರಾಧಿಗಳು ಕಾನೂನನ್ನು ಹೇಗೆ ನಿರ್ವಹಿಸಿದ್ದಾರೆಂದು ನಾವು ನೋಡಿದ್ದೇವೆ. ನಮ್ಮ ವ್ಯವಸ್ಥೆಯಲ್ಲಿ ಸಾಕಷ್ಟು ಲೋಪದೋಷಗಳಿವೆ, ನಾವು ವ್ಯವಸ್ಥೆಯನ್ನು ಸುಧಾರಿಸಬೇಕಾಗಿದೆ ಎಂದು ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ.

ಅಪರಾಧಿಗಳನ್ನು ಗಲ್ಲಿಗೇರಿಸಿದ ನಂತರ ಪ್ರಧಾನಮಂತ್ರಿ ನರೇಂದ್ರ ಮೋದಿ “ನ್ಯಾಯ ಮೇಲುಗೈ ಸಾಧಿಸಿದೆ” ಎಂದು ಪ್ರತಿಕ್ರಿಸಿದ್ದಾರೆ. ಮಹಿಳೆಯರ ಘನತೆ ಮತ್ತು ಸುರಕ್ಷತೆಯನ್ನು ಖಚಿತಪಡಿಸುವುದು ಅತ್ಯಂತ ಮಹತ್ವದ್ದಾಗಿದೆ. ನಮ್ಮ ನಾರಿ ಶಕ್ತಿ ಪ್ರತಿಯೊಂದು ಕ್ಷೇತ್ರದಲ್ಲೂ ಉತ್ತಮ ಸಾಧನೆ ಮಾಡಿದೆ. ಒಟ್ಟಾಗಿ, ನಾವು ಮಹಿಳಾ ಸಬಲೀಕರಣದ ಮೇಲೆ ಕೇಂದ್ರೀಕರಿಸುವ ರಾಷ್ಟ್ರವನ್ನು ನಿರ್ಮಿಸಬೇಕು, ಅಲ್ಲಿ ಸಮಾನತೆ ಮತ್ತು ಅವಕಾಶಗಳಿಗೆ ಒತ್ತು ನೀಡಲಾಗುತ್ತದೆ ಎಂದು ಟ್ವೀಟ್‌ ಮಾಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...