Homeಮುಖಪುಟದೆಹಲಿ ನಿರ್ಭಯ ಅಪರಾಧಿಗಳಿಗೆ ಮರಣ ದಂಡನೆ : ಗಣ್ಯರ ಪ್ರತಿಕ್ರಿಯೆ

ದೆಹಲಿ ನಿರ್ಭಯ ಅಪರಾಧಿಗಳಿಗೆ ಮರಣ ದಂಡನೆ : ಗಣ್ಯರ ಪ್ರತಿಕ್ರಿಯೆ

- Advertisement -
- Advertisement -

ದೆಹಲಿಯ ಚಲಿಸುತ್ತಿದ್ದ ಬಸ್‌ನಲ್ಲಿ ವಿದ್ಯಾರ್ಥಿನಿಯು ಸಾಮೂಹಿಕ ಅತ್ಯಾಚಾರ ಮತ್ತು ಚಿತ್ರಹಿಂಸೆಗೊಳಗಾದ ಏಳು ವರ್ಷಗಳ ನಂತರ, ಆಕೆಯ ನಾಲ್ಕು ಕೊಲೆಗಾರರನ್ನು ಇಂದು ಬೆಳಿಗ್ಗೆ 5.30 ಕ್ಕೆ ಗಲ್ಲಿಗೇರಿಸಲಾಯಿತು. ಅಪರಾಧಿಗಳ ಅಂತಿಮ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದ ಒಂದು ದಿನದ ನಂತರ ಮುಂಜಾನೆ ಮರಣದಂಡನೆ ನಡೆಯಿತು.

ಅಕ್ಷಯ್ ಠಾಕೂರ್ (31), ಪವನ್ ಗುಪ್ತಾ (25), ವಿನಯ್ ಶರ್ಮಾ (26) ಮತ್ತು ಮುಖೇಶ್ ಸಿಂಗ್ (32) ಅವರನ್ನು ದೆಹಲಿಯ ತಿಹಾರ್ ಜೈಲಿನಲ್ಲಿ ಗಲ್ಲಿಗೇರಿಸಲಾಯಿತು.

ಅಪರಾಧಿಗಳು ಮರಣ ದಂಡನೆಯಿಂದ ವಿನಾಯಿತಿಗಾಗಿ ಕಳೆದ ಕೆಲವು ತಿಂಗಳುಗಳಲ್ಲಿ ಅನೇಕ ಅರ್ಜಿಗಳನ್ನು ಸಲ್ಲಿಸಿದ್ದರು. “ಅವರನ್ನು ಭಾರತ-ಪಾಕಿಸ್ತಾನ ಗಡಿಗೆ ಅಥವಾ ಡೋಕ್ಲಾಮ್‌ಗೆ ಕಳುಹಿಸಿ (ಚೀನಾದ ಗಡಿಯಲ್ಲಿ), ಆದರೆ ಗಲ್ಲಿಗೇರಿಸಬೇಡಿ” ಎಂದು ಅಕ್ಷಯ್ ಠಾಕೂರ್ ಅವರ ವಕೀಲರು ಮನವಿ ಮಾಡಿದ್ದರು.

“ನಾವೆಲ್ಲರೂ ಈ ದಿನಕ್ಕಾಗಿ ಇಷ್ಟು ದಿನ ಕಾಯುತ್ತಿದ್ದೆವು. ಇಂದು ಭಾರತದ ಹೆಣ್ಣುಮಕ್ಕಳಿಗೆ ಹೊಸ ಉದಯವಾಗಿದೆ. ಮೃಗಗಳನ್ನು ಗಲ್ಲಿಗೇರಿಸಲಾಗಿದೆ” ಎಂದು ನಿರ್ಭಯ ತಾಯಿ ಆಶಾ ದೇವಿ ಹೇಳಿದರು. ಸುಪ್ರೀಂ ಕೋರ್ಟ್ ತೀರ್ಪಿನ ನಂತರ, ಅವರು ಮನೆಗೆ ಹೋಗಿ ಮಗಳ ಫೋಟೋವನ್ನು ತಬ್ಬಿಕೊಂಡೆ ಎಂದರು.

ಡಿಸೆಂಬರ್ 16, 2012 ರಂದು, 23 ವರ್ಷದ ನಿರ್ಭಯಾರನ್ನು ಆರು ಮಂದಿ ಸುಮಾರು ಒಂದು ಘಂಟೆಯವರೆಗೆ ಘೋರ ಹಿಂಸೆ ಮಾಡಿ ಅತ್ಯಾಚಾರಕ್ಕೆ ಒಳಪಡಿಸಿದ್ದರು. ಇದಾದ ಕೆಲವು ದಿನಗಳ ನಂತರ ಸಿಂಗಾಪುರ ಆಸ್ಪತ್ರೆಯಲ್ಲಿ ಸಂತ್ರಸ್ತೆ ನಿರ್ಭಯ ನಿಧನರಾಗಿದ್ದರು. ಅವರ ಕೊಲೆಗಾರರು ದಕ್ಷಿಣ ದೆಹಲಿಯ ಕೊಳೆಗೇರಿಯ ನಿವಾಸಿಗಳಾಗಿದ್ದಾರೆ.

ಬಂಧಿಸಲ್ಪಟ್ಟ ಆರು ಜನರಲ್ಲಿ ರಾಮ್ ಸಿಂಗ್ ಜೈಲು ಕೋಣೆಯಲ್ಲಿ ಶವವಾಗಿ ಪತ್ತೆಯಾಗಿದ್ದರು. 18 ಕ್ಕಿಂತ ಕಡಿಮೆ ವಯಸ್ಸಿನ ಅಪ್ರಾಪ್ತ ಬಾಲಕನನ್ನು ಮೂರು ವರ್ಷಗಳ ನಂತರ ರಿಮಾಂಡ್ ಹೋಮಿಂದ ಬಿಡುಗಡೆ ಮಾಡಲಾಗಿತ್ತು.

ಭೀಕರ ಸಾಮೂಹಿಕ ಅತ್ಯಾಚಾರ ಮತ್ತು ಹತ್ಯೆಯ ನಂತರ ಮಹಿಳೆಯರ ಮೇಲಿನ ಅಪರಾಧಗಳ ಬಗ್ಗೆ ಭಾರತ ಸರಕಾರ ತನ್ನ ಕಾನೂನುಗಳನ್ನು ಬದಲಾಯಿಸಿತು.

ನ್ಯಾಯ ಸಿಗಲು 7 ವರ್ಷಗಳು ಬೇಕಾಯಿತು. ಇಂದು, ಇದೇ ರೀತಿಯ ಘಟನೆ ಮತ್ತೆ ಸಂಭವಿಸುವುದಿಲ್ಲ ಎಂಬ ಪ್ರತಿಜ್ಞೆಯನ್ನು ನಾವು ತೆಗೆದುಕೊಳ್ಳಬೇಕಾಗಿದೆ. ಇತ್ತೀಚಿನವರೆಗೂ ಅಪರಾಧಿಗಳು ಕಾನೂನನ್ನು ಹೇಗೆ ನಿರ್ವಹಿಸಿದ್ದಾರೆಂದು ನಾವು ನೋಡಿದ್ದೇವೆ. ನಮ್ಮ ವ್ಯವಸ್ಥೆಯಲ್ಲಿ ಸಾಕಷ್ಟು ಲೋಪದೋಷಗಳಿವೆ, ನಾವು ವ್ಯವಸ್ಥೆಯನ್ನು ಸುಧಾರಿಸಬೇಕಾಗಿದೆ ಎಂದು ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ.

ಅಪರಾಧಿಗಳನ್ನು ಗಲ್ಲಿಗೇರಿಸಿದ ನಂತರ ಪ್ರಧಾನಮಂತ್ರಿ ನರೇಂದ್ರ ಮೋದಿ “ನ್ಯಾಯ ಮೇಲುಗೈ ಸಾಧಿಸಿದೆ” ಎಂದು ಪ್ರತಿಕ್ರಿಸಿದ್ದಾರೆ. ಮಹಿಳೆಯರ ಘನತೆ ಮತ್ತು ಸುರಕ್ಷತೆಯನ್ನು ಖಚಿತಪಡಿಸುವುದು ಅತ್ಯಂತ ಮಹತ್ವದ್ದಾಗಿದೆ. ನಮ್ಮ ನಾರಿ ಶಕ್ತಿ ಪ್ರತಿಯೊಂದು ಕ್ಷೇತ್ರದಲ್ಲೂ ಉತ್ತಮ ಸಾಧನೆ ಮಾಡಿದೆ. ಒಟ್ಟಾಗಿ, ನಾವು ಮಹಿಳಾ ಸಬಲೀಕರಣದ ಮೇಲೆ ಕೇಂದ್ರೀಕರಿಸುವ ರಾಷ್ಟ್ರವನ್ನು ನಿರ್ಮಿಸಬೇಕು, ಅಲ್ಲಿ ಸಮಾನತೆ ಮತ್ತು ಅವಕಾಶಗಳಿಗೆ ಒತ್ತು ನೀಡಲಾಗುತ್ತದೆ ಎಂದು ಟ್ವೀಟ್‌ ಮಾಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...