Homeಮುಖಪುಟದೆಹಲಿ ನಿರ್ಭಯ ಅಪರಾಧಿಗಳಿಗೆ ಮರಣ ದಂಡನೆ : ಗಣ್ಯರ ಪ್ರತಿಕ್ರಿಯೆ

ದೆಹಲಿ ನಿರ್ಭಯ ಅಪರಾಧಿಗಳಿಗೆ ಮರಣ ದಂಡನೆ : ಗಣ್ಯರ ಪ್ರತಿಕ್ರಿಯೆ

- Advertisement -
- Advertisement -

ದೆಹಲಿಯ ಚಲಿಸುತ್ತಿದ್ದ ಬಸ್‌ನಲ್ಲಿ ವಿದ್ಯಾರ್ಥಿನಿಯು ಸಾಮೂಹಿಕ ಅತ್ಯಾಚಾರ ಮತ್ತು ಚಿತ್ರಹಿಂಸೆಗೊಳಗಾದ ಏಳು ವರ್ಷಗಳ ನಂತರ, ಆಕೆಯ ನಾಲ್ಕು ಕೊಲೆಗಾರರನ್ನು ಇಂದು ಬೆಳಿಗ್ಗೆ 5.30 ಕ್ಕೆ ಗಲ್ಲಿಗೇರಿಸಲಾಯಿತು. ಅಪರಾಧಿಗಳ ಅಂತಿಮ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದ ಒಂದು ದಿನದ ನಂತರ ಮುಂಜಾನೆ ಮರಣದಂಡನೆ ನಡೆಯಿತು.

ಅಕ್ಷಯ್ ಠಾಕೂರ್ (31), ಪವನ್ ಗುಪ್ತಾ (25), ವಿನಯ್ ಶರ್ಮಾ (26) ಮತ್ತು ಮುಖೇಶ್ ಸಿಂಗ್ (32) ಅವರನ್ನು ದೆಹಲಿಯ ತಿಹಾರ್ ಜೈಲಿನಲ್ಲಿ ಗಲ್ಲಿಗೇರಿಸಲಾಯಿತು.

ಅಪರಾಧಿಗಳು ಮರಣ ದಂಡನೆಯಿಂದ ವಿನಾಯಿತಿಗಾಗಿ ಕಳೆದ ಕೆಲವು ತಿಂಗಳುಗಳಲ್ಲಿ ಅನೇಕ ಅರ್ಜಿಗಳನ್ನು ಸಲ್ಲಿಸಿದ್ದರು. “ಅವರನ್ನು ಭಾರತ-ಪಾಕಿಸ್ತಾನ ಗಡಿಗೆ ಅಥವಾ ಡೋಕ್ಲಾಮ್‌ಗೆ ಕಳುಹಿಸಿ (ಚೀನಾದ ಗಡಿಯಲ್ಲಿ), ಆದರೆ ಗಲ್ಲಿಗೇರಿಸಬೇಡಿ” ಎಂದು ಅಕ್ಷಯ್ ಠಾಕೂರ್ ಅವರ ವಕೀಲರು ಮನವಿ ಮಾಡಿದ್ದರು.

“ನಾವೆಲ್ಲರೂ ಈ ದಿನಕ್ಕಾಗಿ ಇಷ್ಟು ದಿನ ಕಾಯುತ್ತಿದ್ದೆವು. ಇಂದು ಭಾರತದ ಹೆಣ್ಣುಮಕ್ಕಳಿಗೆ ಹೊಸ ಉದಯವಾಗಿದೆ. ಮೃಗಗಳನ್ನು ಗಲ್ಲಿಗೇರಿಸಲಾಗಿದೆ” ಎಂದು ನಿರ್ಭಯ ತಾಯಿ ಆಶಾ ದೇವಿ ಹೇಳಿದರು. ಸುಪ್ರೀಂ ಕೋರ್ಟ್ ತೀರ್ಪಿನ ನಂತರ, ಅವರು ಮನೆಗೆ ಹೋಗಿ ಮಗಳ ಫೋಟೋವನ್ನು ತಬ್ಬಿಕೊಂಡೆ ಎಂದರು.

ಡಿಸೆಂಬರ್ 16, 2012 ರಂದು, 23 ವರ್ಷದ ನಿರ್ಭಯಾರನ್ನು ಆರು ಮಂದಿ ಸುಮಾರು ಒಂದು ಘಂಟೆಯವರೆಗೆ ಘೋರ ಹಿಂಸೆ ಮಾಡಿ ಅತ್ಯಾಚಾರಕ್ಕೆ ಒಳಪಡಿಸಿದ್ದರು. ಇದಾದ ಕೆಲವು ದಿನಗಳ ನಂತರ ಸಿಂಗಾಪುರ ಆಸ್ಪತ್ರೆಯಲ್ಲಿ ಸಂತ್ರಸ್ತೆ ನಿರ್ಭಯ ನಿಧನರಾಗಿದ್ದರು. ಅವರ ಕೊಲೆಗಾರರು ದಕ್ಷಿಣ ದೆಹಲಿಯ ಕೊಳೆಗೇರಿಯ ನಿವಾಸಿಗಳಾಗಿದ್ದಾರೆ.

ಬಂಧಿಸಲ್ಪಟ್ಟ ಆರು ಜನರಲ್ಲಿ ರಾಮ್ ಸಿಂಗ್ ಜೈಲು ಕೋಣೆಯಲ್ಲಿ ಶವವಾಗಿ ಪತ್ತೆಯಾಗಿದ್ದರು. 18 ಕ್ಕಿಂತ ಕಡಿಮೆ ವಯಸ್ಸಿನ ಅಪ್ರಾಪ್ತ ಬಾಲಕನನ್ನು ಮೂರು ವರ್ಷಗಳ ನಂತರ ರಿಮಾಂಡ್ ಹೋಮಿಂದ ಬಿಡುಗಡೆ ಮಾಡಲಾಗಿತ್ತು.

ಭೀಕರ ಸಾಮೂಹಿಕ ಅತ್ಯಾಚಾರ ಮತ್ತು ಹತ್ಯೆಯ ನಂತರ ಮಹಿಳೆಯರ ಮೇಲಿನ ಅಪರಾಧಗಳ ಬಗ್ಗೆ ಭಾರತ ಸರಕಾರ ತನ್ನ ಕಾನೂನುಗಳನ್ನು ಬದಲಾಯಿಸಿತು.

ನ್ಯಾಯ ಸಿಗಲು 7 ವರ್ಷಗಳು ಬೇಕಾಯಿತು. ಇಂದು, ಇದೇ ರೀತಿಯ ಘಟನೆ ಮತ್ತೆ ಸಂಭವಿಸುವುದಿಲ್ಲ ಎಂಬ ಪ್ರತಿಜ್ಞೆಯನ್ನು ನಾವು ತೆಗೆದುಕೊಳ್ಳಬೇಕಾಗಿದೆ. ಇತ್ತೀಚಿನವರೆಗೂ ಅಪರಾಧಿಗಳು ಕಾನೂನನ್ನು ಹೇಗೆ ನಿರ್ವಹಿಸಿದ್ದಾರೆಂದು ನಾವು ನೋಡಿದ್ದೇವೆ. ನಮ್ಮ ವ್ಯವಸ್ಥೆಯಲ್ಲಿ ಸಾಕಷ್ಟು ಲೋಪದೋಷಗಳಿವೆ, ನಾವು ವ್ಯವಸ್ಥೆಯನ್ನು ಸುಧಾರಿಸಬೇಕಾಗಿದೆ ಎಂದು ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ.

ಅಪರಾಧಿಗಳನ್ನು ಗಲ್ಲಿಗೇರಿಸಿದ ನಂತರ ಪ್ರಧಾನಮಂತ್ರಿ ನರೇಂದ್ರ ಮೋದಿ “ನ್ಯಾಯ ಮೇಲುಗೈ ಸಾಧಿಸಿದೆ” ಎಂದು ಪ್ರತಿಕ್ರಿಸಿದ್ದಾರೆ. ಮಹಿಳೆಯರ ಘನತೆ ಮತ್ತು ಸುರಕ್ಷತೆಯನ್ನು ಖಚಿತಪಡಿಸುವುದು ಅತ್ಯಂತ ಮಹತ್ವದ್ದಾಗಿದೆ. ನಮ್ಮ ನಾರಿ ಶಕ್ತಿ ಪ್ರತಿಯೊಂದು ಕ್ಷೇತ್ರದಲ್ಲೂ ಉತ್ತಮ ಸಾಧನೆ ಮಾಡಿದೆ. ಒಟ್ಟಾಗಿ, ನಾವು ಮಹಿಳಾ ಸಬಲೀಕರಣದ ಮೇಲೆ ಕೇಂದ್ರೀಕರಿಸುವ ರಾಷ್ಟ್ರವನ್ನು ನಿರ್ಮಿಸಬೇಕು, ಅಲ್ಲಿ ಸಮಾನತೆ ಮತ್ತು ಅವಕಾಶಗಳಿಗೆ ಒತ್ತು ನೀಡಲಾಗುತ್ತದೆ ಎಂದು ಟ್ವೀಟ್‌ ಮಾಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...