Homeಎಕಾನಮಿಸರಿಯಾಗಿ ಕೆಲಸ ಮಾಡುವುದನ್ನು ಬಿಟ್ಟು ವಿಪಕ್ಷಗಳನ್ನು ಟೀಕಿಸುತ್ತಾ ಕೂತರೆ ಸಮಸ್ಯೆಗಳು ಬರೆಹರಿಯುವುದಿಲ್ಲ; ಮನಮೋಹನ್‌ ಸಿಂಗ್‌

ಸರಿಯಾಗಿ ಕೆಲಸ ಮಾಡುವುದನ್ನು ಬಿಟ್ಟು ವಿಪಕ್ಷಗಳನ್ನು ಟೀಕಿಸುತ್ತಾ ಕೂತರೆ ಸಮಸ್ಯೆಗಳು ಬರೆಹರಿಯುವುದಿಲ್ಲ; ಮನಮೋಹನ್‌ ಸಿಂಗ್‌

- Advertisement -
- Advertisement -

ದೇಶದ ಆರ್ಥಿಕ ಪರಿಸ್ಥಿತಿ ಹದಗೆಟ್ಟಿದ್ದು ಇದಕ್ಕೆ ಪರಿಹಾರ ಕಂಡುಕೊಳ್ಳಬೇಕಾದ ಕೇಂದ್ರ ಸರ್ಕಾರ ಸುಖಾಸುಮ್ಮನೆ ವಿರೋಧ ಪಕ್ಷದ ಮೇಲೆ ಆರೋಪ ಮಾಡುತ್ತಿರುವುದು ಸರಿಯಲ್ಲ ಎಂದು ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ತಿರುಗೇಟು ನೀಡಿದ್ದಾರೆ.

ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯ ಹಿನ್ನೆಲೆಯಲ್ಲಿ ವಾಂಕೇಡೆ ಕ್ರೀಡಾಂಗಣಲ್ಲಿ  ಉದ್ಯಮಿಗಳು, ವೃತ್ತಿಪರರು ಮತ್ತು ಪತ್ರಕರ್ತರೊಂದಿಗೆ ಹಮ್ಮಿಕೊಂಡಿದ್ದ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದರು. ಪುಣೆಯಲ್ಲಿ ಆಟೋ ಮೊಬೈಲ್ ಕೇಂದ್ರದಲ್ಲಿ ಕತ್ತಲು ಆವರಿಸಿಕೊಂಡಿದೆ. ಉತ್ಪಾದನೆ ಕುಸಿತವಾಗಿದೆ. ಕೆಲಸ ಇಲ್ಲವಾಗಿದೆ ಎಂದು ಹೇಳಿದ್ದಾರೆ.

ಮಹಾರಾಷ್ಟ್ರದಲ್ಲಿ ನಿಧಾನಗತಿಯಲ್ಲಿ ದೊಡ್ಡ ಸಂಖ್ಯೆಯಲ್ಲಿ ಕಾರ್ಖಾನೆಗಳು ಬಾಗಿಲು ಮುಚ್ಚುತ್ತಿವೆ. ಆರ್ಧಿಕ ಪರಿಸ್ಥಿತಿ ಕೆಟ್ಟುಹೋಗಿದೆ. ಆದರೂ ಭಾರತ ಸರ್ಕಾರ ವಿರೋಧ ಪಕ್ಷಗಳನ್ನು ದೂರುತ್ತಿದೆ. ಆರ್ಥಿಕ ಸ್ಥಿತಿ ಪುನಶ್ಚೇನಕ್ಕೆ ಕ್ರಮ ಕೈಗೊಳ್ಳಬೇಕಾಗಿತ್ತು. ಆದರೆ ಅದು ಆಗುತ್ತಿಲ್ಲ ಎಂದು ತಿಳಿಸಿದರು.

ಈ ಹಿಂದೆ ಮಹಾರಾಷ್ಟ್ರ ಹೂಡಿಕೆಯಲ್ಲಿ ಮೊದಲ ಸ್ಥಾನದಲ್ಲಿತ್ತು. ಈಗ ಇದೇ ರಾಜ್ಯ ರೈತರು ಆತ್ಮಹತ್ಯೆ ಮಾಡಿಕೊಳ್ಳುವುದರಲ್ಲಿ ಮೊದಲ ಸ್ಥಾನದಲ್ಲಿದೆ ಎಂದು ಎಂದು ಸಿಂಗ್ ಟೀಕಿಸಿದ್ದಾರೆ.

ದೇಶದ ಪ್ರತಿ ಮೂವರು ಯುವಕರ ಪೈಕಿ ಒಬ್ಬರಿಗೆ ಉದ್ಯೋಗವಿಲ್ಲ. ನಿರುದ್ಯೋಗ ಸಮಸ್ಯೆಯಿಂದಾಗಿ ಹಳ್ಳಿಗಳ ಹೆಚ್ಚು ಜನರು ನಗರಗಳಿಗೆ ವಲಸೆ ಬರುತ್ತಿದ್ದಾರೆ. ಹಳ್ಳಿಗಳು ಸಂಕಷ್ಟ ಎದುರಿಸುತ್ತಿವೆ. ಎಂದರು.

ಪಂಜಾಬ್ ಮತ್ತು ಮಹಾರಾಷ್ಟ್ರ ಸಹಕಾರ ಬ್ಯಾಂಕ್ ನಲ್ಲಿ ಅವ್ಯವಹಾರ ನಡೆದು ಬಿಕ್ಕಟ್ಟು ಎದುರಿಸುತ್ತಿದೆ. ಕೂಡಲೇ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನಾವೀಸ್, ಪ್ರಧಾನಿ ನರೇಂದ್ರ ಮೋದಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಇತ್ತ ಗಮನಹರಿಸಬೇಕು ಎಂದು ಒತ್ತಾಯಿಸಿದರು.

ಪಿಎಂಸಿ ಬ್ಯಾಂಕ್ ಬಿಕ್ಕಟ್ಟಿನಿಂದ 16 ಲಕ್ಷ ಮಂದಿಗೆ ಸಂಕಷ್ಟ ಎದುರಿಸಬೇಕಾಗಿದೆ. ಅವರ ಕುಂದುಕೊರತೆ ಕೇಳಬೇಕಾದ ಸರ್ಕಾರಗಳು ಮೌನ ವಹಿಸಿದೆ. ಹೀಗಾಗಿ ತಕ್ಷಣವೇ ಪಿಎಂಸಿ ಬಿಕ್ಕಟ್ಟನ್ನು ನಿವಾರಿಸಲು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ನೀಡಿರುವ ಹೇಳಿಕೆಗಳನ್ನು ಗಮನಿಸಿದ್ದೇನೆ. ಅವರ ಹೇಳಿಕೆಗಳನ್ನು ಮತ್ತೆ ಹೇಳೋಕೆ ಇಷ್ಟಪಡುವುದಿಲ್ಲ. ಆರ್ಥಿಕತೆ ವಿಷಯದಲ್ಲಿ ವಿರೋಧ ಪಕ್ಷಗಳ ಮೇಲೆ ಆರೋಪ ಮಾಡುವುದನ್ನು ಬಿಟ್ಟು, ಅದನ್ನು ಸರಿಪಡಿಸುವ ಬಗ್ಗೆ ಚಿಂತನೆ ನಡೆಸಬೇಕು. ಆರ್ಥಿಕತೆ ಕುಸಿತಕ್ಕೆ ಕಾರಣಗಳು, ಆರ್ಥಿಕತೆ ಸುಧಾರಣೆಗೆ ಮಾರ್ಗೋಪಾಯಗಳನ್ನು ಹುಡುಕಿಕೊಳ್ಳುವ ಅಗತ್ಯವಿದೆ ಎಂದರು.

‘ಯುಪಿಎ ಆಡಳಿತವಿದ್ದಾಗಲೂ ಹಲವು ಸವಾಲುಗಳಿದ್ದವು. ಅವುಗಳಿಗೆ ನಾವು ಪರಿಹಾರ ಕಂಡುಕೊಂಡಿದ್ದೆವು. ಈಗ ಬಿಜೆಪಿ ಸರ್ಕಾರ ಆಡಳಿತದಲ್ಲಿದೆ. ಹಿಂದಿನ ಐದು ವರ್ಷ ಸಹ ನಿಮ್ಮದೇ ಆಡಳಿತವಿತ್ತು. ಹೀಗಿರುವಾಗ ಸರಿಯಾದ ಮಾರ್ಗಸೂಚಿ ಕಂಡುಕೊಳ್ಳುವುದನ್ನು ಬಿಟ್ಟು ಸುಮ್ಮನೇ ನಮ್ಮತ್ತ ಬೊಟ್ಟು ಮಾಡುವುದರಲ್ಲಿ ಕಾಲಹರಣ ಮಾಡುತ್ತಿದ್ದೀರಿ’. ‘ಆರ್ಥಿಕ ಅಭಿವೃದ್ಧಿ ವರ್ಷದಿಂದ ವರ್ಷಕ್ಕೆ ಕುಸಿಯುತ್ತ ಹೋದರೆ, ಭಾರತದ ಆರ್ಥಿಕತೆ 2024ರೊಳಗೆ 5 ಟ್ರಿಲಿಯನ್ ಡಾಲರ್ಸ್ ಗುರಿ ಮುಟ್ಟಲು ಸಾಧ್ಯವಿಲ್ಲ. ಆರ್ಥಿಕತೆಯ ಸುಧಾರಣೆಗೆ ಸೂಕ್ತ ತಂತ್ರಗಳನ್ನು ಹೆಣೆಯಬೇಕಿದೆ’ ಎಂದು ಕುಟುಕಿದರು.

ಇದಕ್ಕೂ ಮೊದಲು ಅಮೆರಿಕದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ನಿರ್ಮಲಾ ಸೀತಾರಾಮನ್, ಸಾರ್ವಜನಿಕ ವಲಯದ ಬ್ಯಾಂಕುಗಳ ಕೆಟ್ಟ ಸ್ಥಿತಿಗೆ ಮನಮೋಹನ್ ಸಿಂಗ್ ಮತ್ತು ಮಾಜಿ ಆರ್‌ಬಿಐ ಗರ್ವನರ್‌ ರಘುರಾಮ್ ರಾಜನ್ ಕಾರಣ ಎಂದು ಆಪಾದಿಸಿದ್ದರು. ಇದಕ್ಕೆ ಇಂದು ಮನಮೋಹನ್ ಸಿಂಗ್ ತಕ್ಕ ಉತ್ತರ ನೀಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...