Homeಎಕಾನಮಿಸರಿಯಾಗಿ ಕೆಲಸ ಮಾಡುವುದನ್ನು ಬಿಟ್ಟು ವಿಪಕ್ಷಗಳನ್ನು ಟೀಕಿಸುತ್ತಾ ಕೂತರೆ ಸಮಸ್ಯೆಗಳು ಬರೆಹರಿಯುವುದಿಲ್ಲ; ಮನಮೋಹನ್‌ ಸಿಂಗ್‌

ಸರಿಯಾಗಿ ಕೆಲಸ ಮಾಡುವುದನ್ನು ಬಿಟ್ಟು ವಿಪಕ್ಷಗಳನ್ನು ಟೀಕಿಸುತ್ತಾ ಕೂತರೆ ಸಮಸ್ಯೆಗಳು ಬರೆಹರಿಯುವುದಿಲ್ಲ; ಮನಮೋಹನ್‌ ಸಿಂಗ್‌

- Advertisement -
- Advertisement -

ದೇಶದ ಆರ್ಥಿಕ ಪರಿಸ್ಥಿತಿ ಹದಗೆಟ್ಟಿದ್ದು ಇದಕ್ಕೆ ಪರಿಹಾರ ಕಂಡುಕೊಳ್ಳಬೇಕಾದ ಕೇಂದ್ರ ಸರ್ಕಾರ ಸುಖಾಸುಮ್ಮನೆ ವಿರೋಧ ಪಕ್ಷದ ಮೇಲೆ ಆರೋಪ ಮಾಡುತ್ತಿರುವುದು ಸರಿಯಲ್ಲ ಎಂದು ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ತಿರುಗೇಟು ನೀಡಿದ್ದಾರೆ.

ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯ ಹಿನ್ನೆಲೆಯಲ್ಲಿ ವಾಂಕೇಡೆ ಕ್ರೀಡಾಂಗಣಲ್ಲಿ  ಉದ್ಯಮಿಗಳು, ವೃತ್ತಿಪರರು ಮತ್ತು ಪತ್ರಕರ್ತರೊಂದಿಗೆ ಹಮ್ಮಿಕೊಂಡಿದ್ದ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದರು. ಪುಣೆಯಲ್ಲಿ ಆಟೋ ಮೊಬೈಲ್ ಕೇಂದ್ರದಲ್ಲಿ ಕತ್ತಲು ಆವರಿಸಿಕೊಂಡಿದೆ. ಉತ್ಪಾದನೆ ಕುಸಿತವಾಗಿದೆ. ಕೆಲಸ ಇಲ್ಲವಾಗಿದೆ ಎಂದು ಹೇಳಿದ್ದಾರೆ.

ಮಹಾರಾಷ್ಟ್ರದಲ್ಲಿ ನಿಧಾನಗತಿಯಲ್ಲಿ ದೊಡ್ಡ ಸಂಖ್ಯೆಯಲ್ಲಿ ಕಾರ್ಖಾನೆಗಳು ಬಾಗಿಲು ಮುಚ್ಚುತ್ತಿವೆ. ಆರ್ಧಿಕ ಪರಿಸ್ಥಿತಿ ಕೆಟ್ಟುಹೋಗಿದೆ. ಆದರೂ ಭಾರತ ಸರ್ಕಾರ ವಿರೋಧ ಪಕ್ಷಗಳನ್ನು ದೂರುತ್ತಿದೆ. ಆರ್ಥಿಕ ಸ್ಥಿತಿ ಪುನಶ್ಚೇನಕ್ಕೆ ಕ್ರಮ ಕೈಗೊಳ್ಳಬೇಕಾಗಿತ್ತು. ಆದರೆ ಅದು ಆಗುತ್ತಿಲ್ಲ ಎಂದು ತಿಳಿಸಿದರು.

ಈ ಹಿಂದೆ ಮಹಾರಾಷ್ಟ್ರ ಹೂಡಿಕೆಯಲ್ಲಿ ಮೊದಲ ಸ್ಥಾನದಲ್ಲಿತ್ತು. ಈಗ ಇದೇ ರಾಜ್ಯ ರೈತರು ಆತ್ಮಹತ್ಯೆ ಮಾಡಿಕೊಳ್ಳುವುದರಲ್ಲಿ ಮೊದಲ ಸ್ಥಾನದಲ್ಲಿದೆ ಎಂದು ಎಂದು ಸಿಂಗ್ ಟೀಕಿಸಿದ್ದಾರೆ.

ದೇಶದ ಪ್ರತಿ ಮೂವರು ಯುವಕರ ಪೈಕಿ ಒಬ್ಬರಿಗೆ ಉದ್ಯೋಗವಿಲ್ಲ. ನಿರುದ್ಯೋಗ ಸಮಸ್ಯೆಯಿಂದಾಗಿ ಹಳ್ಳಿಗಳ ಹೆಚ್ಚು ಜನರು ನಗರಗಳಿಗೆ ವಲಸೆ ಬರುತ್ತಿದ್ದಾರೆ. ಹಳ್ಳಿಗಳು ಸಂಕಷ್ಟ ಎದುರಿಸುತ್ತಿವೆ. ಎಂದರು.

ಪಂಜಾಬ್ ಮತ್ತು ಮಹಾರಾಷ್ಟ್ರ ಸಹಕಾರ ಬ್ಯಾಂಕ್ ನಲ್ಲಿ ಅವ್ಯವಹಾರ ನಡೆದು ಬಿಕ್ಕಟ್ಟು ಎದುರಿಸುತ್ತಿದೆ. ಕೂಡಲೇ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನಾವೀಸ್, ಪ್ರಧಾನಿ ನರೇಂದ್ರ ಮೋದಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಇತ್ತ ಗಮನಹರಿಸಬೇಕು ಎಂದು ಒತ್ತಾಯಿಸಿದರು.

ಪಿಎಂಸಿ ಬ್ಯಾಂಕ್ ಬಿಕ್ಕಟ್ಟಿನಿಂದ 16 ಲಕ್ಷ ಮಂದಿಗೆ ಸಂಕಷ್ಟ ಎದುರಿಸಬೇಕಾಗಿದೆ. ಅವರ ಕುಂದುಕೊರತೆ ಕೇಳಬೇಕಾದ ಸರ್ಕಾರಗಳು ಮೌನ ವಹಿಸಿದೆ. ಹೀಗಾಗಿ ತಕ್ಷಣವೇ ಪಿಎಂಸಿ ಬಿಕ್ಕಟ್ಟನ್ನು ನಿವಾರಿಸಲು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ನೀಡಿರುವ ಹೇಳಿಕೆಗಳನ್ನು ಗಮನಿಸಿದ್ದೇನೆ. ಅವರ ಹೇಳಿಕೆಗಳನ್ನು ಮತ್ತೆ ಹೇಳೋಕೆ ಇಷ್ಟಪಡುವುದಿಲ್ಲ. ಆರ್ಥಿಕತೆ ವಿಷಯದಲ್ಲಿ ವಿರೋಧ ಪಕ್ಷಗಳ ಮೇಲೆ ಆರೋಪ ಮಾಡುವುದನ್ನು ಬಿಟ್ಟು, ಅದನ್ನು ಸರಿಪಡಿಸುವ ಬಗ್ಗೆ ಚಿಂತನೆ ನಡೆಸಬೇಕು. ಆರ್ಥಿಕತೆ ಕುಸಿತಕ್ಕೆ ಕಾರಣಗಳು, ಆರ್ಥಿಕತೆ ಸುಧಾರಣೆಗೆ ಮಾರ್ಗೋಪಾಯಗಳನ್ನು ಹುಡುಕಿಕೊಳ್ಳುವ ಅಗತ್ಯವಿದೆ ಎಂದರು.

‘ಯುಪಿಎ ಆಡಳಿತವಿದ್ದಾಗಲೂ ಹಲವು ಸವಾಲುಗಳಿದ್ದವು. ಅವುಗಳಿಗೆ ನಾವು ಪರಿಹಾರ ಕಂಡುಕೊಂಡಿದ್ದೆವು. ಈಗ ಬಿಜೆಪಿ ಸರ್ಕಾರ ಆಡಳಿತದಲ್ಲಿದೆ. ಹಿಂದಿನ ಐದು ವರ್ಷ ಸಹ ನಿಮ್ಮದೇ ಆಡಳಿತವಿತ್ತು. ಹೀಗಿರುವಾಗ ಸರಿಯಾದ ಮಾರ್ಗಸೂಚಿ ಕಂಡುಕೊಳ್ಳುವುದನ್ನು ಬಿಟ್ಟು ಸುಮ್ಮನೇ ನಮ್ಮತ್ತ ಬೊಟ್ಟು ಮಾಡುವುದರಲ್ಲಿ ಕಾಲಹರಣ ಮಾಡುತ್ತಿದ್ದೀರಿ’. ‘ಆರ್ಥಿಕ ಅಭಿವೃದ್ಧಿ ವರ್ಷದಿಂದ ವರ್ಷಕ್ಕೆ ಕುಸಿಯುತ್ತ ಹೋದರೆ, ಭಾರತದ ಆರ್ಥಿಕತೆ 2024ರೊಳಗೆ 5 ಟ್ರಿಲಿಯನ್ ಡಾಲರ್ಸ್ ಗುರಿ ಮುಟ್ಟಲು ಸಾಧ್ಯವಿಲ್ಲ. ಆರ್ಥಿಕತೆಯ ಸುಧಾರಣೆಗೆ ಸೂಕ್ತ ತಂತ್ರಗಳನ್ನು ಹೆಣೆಯಬೇಕಿದೆ’ ಎಂದು ಕುಟುಕಿದರು.

ಇದಕ್ಕೂ ಮೊದಲು ಅಮೆರಿಕದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ನಿರ್ಮಲಾ ಸೀತಾರಾಮನ್, ಸಾರ್ವಜನಿಕ ವಲಯದ ಬ್ಯಾಂಕುಗಳ ಕೆಟ್ಟ ಸ್ಥಿತಿಗೆ ಮನಮೋಹನ್ ಸಿಂಗ್ ಮತ್ತು ಮಾಜಿ ಆರ್‌ಬಿಐ ಗರ್ವನರ್‌ ರಘುರಾಮ್ ರಾಜನ್ ಕಾರಣ ಎಂದು ಆಪಾದಿಸಿದ್ದರು. ಇದಕ್ಕೆ ಇಂದು ಮನಮೋಹನ್ ಸಿಂಗ್ ತಕ್ಕ ಉತ್ತರ ನೀಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...