Homeಎಕಾನಮಿಸರಿಯಾಗಿ ಕೆಲಸ ಮಾಡುವುದನ್ನು ಬಿಟ್ಟು ವಿಪಕ್ಷಗಳನ್ನು ಟೀಕಿಸುತ್ತಾ ಕೂತರೆ ಸಮಸ್ಯೆಗಳು ಬರೆಹರಿಯುವುದಿಲ್ಲ; ಮನಮೋಹನ್‌ ಸಿಂಗ್‌

ಸರಿಯಾಗಿ ಕೆಲಸ ಮಾಡುವುದನ್ನು ಬಿಟ್ಟು ವಿಪಕ್ಷಗಳನ್ನು ಟೀಕಿಸುತ್ತಾ ಕೂತರೆ ಸಮಸ್ಯೆಗಳು ಬರೆಹರಿಯುವುದಿಲ್ಲ; ಮನಮೋಹನ್‌ ಸಿಂಗ್‌

- Advertisement -
- Advertisement -

ದೇಶದ ಆರ್ಥಿಕ ಪರಿಸ್ಥಿತಿ ಹದಗೆಟ್ಟಿದ್ದು ಇದಕ್ಕೆ ಪರಿಹಾರ ಕಂಡುಕೊಳ್ಳಬೇಕಾದ ಕೇಂದ್ರ ಸರ್ಕಾರ ಸುಖಾಸುಮ್ಮನೆ ವಿರೋಧ ಪಕ್ಷದ ಮೇಲೆ ಆರೋಪ ಮಾಡುತ್ತಿರುವುದು ಸರಿಯಲ್ಲ ಎಂದು ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ತಿರುಗೇಟು ನೀಡಿದ್ದಾರೆ.

ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯ ಹಿನ್ನೆಲೆಯಲ್ಲಿ ವಾಂಕೇಡೆ ಕ್ರೀಡಾಂಗಣಲ್ಲಿ  ಉದ್ಯಮಿಗಳು, ವೃತ್ತಿಪರರು ಮತ್ತು ಪತ್ರಕರ್ತರೊಂದಿಗೆ ಹಮ್ಮಿಕೊಂಡಿದ್ದ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದರು. ಪುಣೆಯಲ್ಲಿ ಆಟೋ ಮೊಬೈಲ್ ಕೇಂದ್ರದಲ್ಲಿ ಕತ್ತಲು ಆವರಿಸಿಕೊಂಡಿದೆ. ಉತ್ಪಾದನೆ ಕುಸಿತವಾಗಿದೆ. ಕೆಲಸ ಇಲ್ಲವಾಗಿದೆ ಎಂದು ಹೇಳಿದ್ದಾರೆ.

ಮಹಾರಾಷ್ಟ್ರದಲ್ಲಿ ನಿಧಾನಗತಿಯಲ್ಲಿ ದೊಡ್ಡ ಸಂಖ್ಯೆಯಲ್ಲಿ ಕಾರ್ಖಾನೆಗಳು ಬಾಗಿಲು ಮುಚ್ಚುತ್ತಿವೆ. ಆರ್ಧಿಕ ಪರಿಸ್ಥಿತಿ ಕೆಟ್ಟುಹೋಗಿದೆ. ಆದರೂ ಭಾರತ ಸರ್ಕಾರ ವಿರೋಧ ಪಕ್ಷಗಳನ್ನು ದೂರುತ್ತಿದೆ. ಆರ್ಥಿಕ ಸ್ಥಿತಿ ಪುನಶ್ಚೇನಕ್ಕೆ ಕ್ರಮ ಕೈಗೊಳ್ಳಬೇಕಾಗಿತ್ತು. ಆದರೆ ಅದು ಆಗುತ್ತಿಲ್ಲ ಎಂದು ತಿಳಿಸಿದರು.

ಈ ಹಿಂದೆ ಮಹಾರಾಷ್ಟ್ರ ಹೂಡಿಕೆಯಲ್ಲಿ ಮೊದಲ ಸ್ಥಾನದಲ್ಲಿತ್ತು. ಈಗ ಇದೇ ರಾಜ್ಯ ರೈತರು ಆತ್ಮಹತ್ಯೆ ಮಾಡಿಕೊಳ್ಳುವುದರಲ್ಲಿ ಮೊದಲ ಸ್ಥಾನದಲ್ಲಿದೆ ಎಂದು ಎಂದು ಸಿಂಗ್ ಟೀಕಿಸಿದ್ದಾರೆ.

ದೇಶದ ಪ್ರತಿ ಮೂವರು ಯುವಕರ ಪೈಕಿ ಒಬ್ಬರಿಗೆ ಉದ್ಯೋಗವಿಲ್ಲ. ನಿರುದ್ಯೋಗ ಸಮಸ್ಯೆಯಿಂದಾಗಿ ಹಳ್ಳಿಗಳ ಹೆಚ್ಚು ಜನರು ನಗರಗಳಿಗೆ ವಲಸೆ ಬರುತ್ತಿದ್ದಾರೆ. ಹಳ್ಳಿಗಳು ಸಂಕಷ್ಟ ಎದುರಿಸುತ್ತಿವೆ. ಎಂದರು.

ಪಂಜಾಬ್ ಮತ್ತು ಮಹಾರಾಷ್ಟ್ರ ಸಹಕಾರ ಬ್ಯಾಂಕ್ ನಲ್ಲಿ ಅವ್ಯವಹಾರ ನಡೆದು ಬಿಕ್ಕಟ್ಟು ಎದುರಿಸುತ್ತಿದೆ. ಕೂಡಲೇ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನಾವೀಸ್, ಪ್ರಧಾನಿ ನರೇಂದ್ರ ಮೋದಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಇತ್ತ ಗಮನಹರಿಸಬೇಕು ಎಂದು ಒತ್ತಾಯಿಸಿದರು.

ಪಿಎಂಸಿ ಬ್ಯಾಂಕ್ ಬಿಕ್ಕಟ್ಟಿನಿಂದ 16 ಲಕ್ಷ ಮಂದಿಗೆ ಸಂಕಷ್ಟ ಎದುರಿಸಬೇಕಾಗಿದೆ. ಅವರ ಕುಂದುಕೊರತೆ ಕೇಳಬೇಕಾದ ಸರ್ಕಾರಗಳು ಮೌನ ವಹಿಸಿದೆ. ಹೀಗಾಗಿ ತಕ್ಷಣವೇ ಪಿಎಂಸಿ ಬಿಕ್ಕಟ್ಟನ್ನು ನಿವಾರಿಸಲು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ನೀಡಿರುವ ಹೇಳಿಕೆಗಳನ್ನು ಗಮನಿಸಿದ್ದೇನೆ. ಅವರ ಹೇಳಿಕೆಗಳನ್ನು ಮತ್ತೆ ಹೇಳೋಕೆ ಇಷ್ಟಪಡುವುದಿಲ್ಲ. ಆರ್ಥಿಕತೆ ವಿಷಯದಲ್ಲಿ ವಿರೋಧ ಪಕ್ಷಗಳ ಮೇಲೆ ಆರೋಪ ಮಾಡುವುದನ್ನು ಬಿಟ್ಟು, ಅದನ್ನು ಸರಿಪಡಿಸುವ ಬಗ್ಗೆ ಚಿಂತನೆ ನಡೆಸಬೇಕು. ಆರ್ಥಿಕತೆ ಕುಸಿತಕ್ಕೆ ಕಾರಣಗಳು, ಆರ್ಥಿಕತೆ ಸುಧಾರಣೆಗೆ ಮಾರ್ಗೋಪಾಯಗಳನ್ನು ಹುಡುಕಿಕೊಳ್ಳುವ ಅಗತ್ಯವಿದೆ ಎಂದರು.

‘ಯುಪಿಎ ಆಡಳಿತವಿದ್ದಾಗಲೂ ಹಲವು ಸವಾಲುಗಳಿದ್ದವು. ಅವುಗಳಿಗೆ ನಾವು ಪರಿಹಾರ ಕಂಡುಕೊಂಡಿದ್ದೆವು. ಈಗ ಬಿಜೆಪಿ ಸರ್ಕಾರ ಆಡಳಿತದಲ್ಲಿದೆ. ಹಿಂದಿನ ಐದು ವರ್ಷ ಸಹ ನಿಮ್ಮದೇ ಆಡಳಿತವಿತ್ತು. ಹೀಗಿರುವಾಗ ಸರಿಯಾದ ಮಾರ್ಗಸೂಚಿ ಕಂಡುಕೊಳ್ಳುವುದನ್ನು ಬಿಟ್ಟು ಸುಮ್ಮನೇ ನಮ್ಮತ್ತ ಬೊಟ್ಟು ಮಾಡುವುದರಲ್ಲಿ ಕಾಲಹರಣ ಮಾಡುತ್ತಿದ್ದೀರಿ’. ‘ಆರ್ಥಿಕ ಅಭಿವೃದ್ಧಿ ವರ್ಷದಿಂದ ವರ್ಷಕ್ಕೆ ಕುಸಿಯುತ್ತ ಹೋದರೆ, ಭಾರತದ ಆರ್ಥಿಕತೆ 2024ರೊಳಗೆ 5 ಟ್ರಿಲಿಯನ್ ಡಾಲರ್ಸ್ ಗುರಿ ಮುಟ್ಟಲು ಸಾಧ್ಯವಿಲ್ಲ. ಆರ್ಥಿಕತೆಯ ಸುಧಾರಣೆಗೆ ಸೂಕ್ತ ತಂತ್ರಗಳನ್ನು ಹೆಣೆಯಬೇಕಿದೆ’ ಎಂದು ಕುಟುಕಿದರು.

ಇದಕ್ಕೂ ಮೊದಲು ಅಮೆರಿಕದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ನಿರ್ಮಲಾ ಸೀತಾರಾಮನ್, ಸಾರ್ವಜನಿಕ ವಲಯದ ಬ್ಯಾಂಕುಗಳ ಕೆಟ್ಟ ಸ್ಥಿತಿಗೆ ಮನಮೋಹನ್ ಸಿಂಗ್ ಮತ್ತು ಮಾಜಿ ಆರ್‌ಬಿಐ ಗರ್ವನರ್‌ ರಘುರಾಮ್ ರಾಜನ್ ಕಾರಣ ಎಂದು ಆಪಾದಿಸಿದ್ದರು. ಇದಕ್ಕೆ ಇಂದು ಮನಮೋಹನ್ ಸಿಂಗ್ ತಕ್ಕ ಉತ್ತರ ನೀಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮುಂಗಾರು ಮಳೆ ಕೊರತೆ: ಇಡೀ ದೇಶದಲ್ಲಿ ಆತಂಕದ ಕಾರ್ಮೋಡ

ಭಾರತದ ಆಕಾಶದಲ್ಲಿ ಸದ್ಯ ಮೂಡುತ್ತಿರುವ ಉಪಗ್ರಹ ಚಿತ್ರಗಳು ಮತ್ತು ಹವಾಮಾನ ಇಲಾಖೆಯ ದತ್ತಾಂಶಗಳು ದೇಶಕ್ಕೆ ದೊಡ್ಡ ಗಂಡಾಂತರದ ಮುನ್ಸೂಚನೆ ನೀಡುತ್ತಿವೆ. ಕೃಷಿ ಚಟುವಟಿಕೆಗಳ ಅತ್ಯಂತ ನಿರ್ಣಾಯಕ ಅವಧಿಯಾದ ಜೂನ್ ತಿಂಗಳಲ್ಲೇ ಮುಂಗಾರು ಮಳೆ...

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? : ಬಿ.ಕೆ ಹರಿಪ್ರಸಾದ್

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? ಬಿಜೆಪಿ ನಾಯಕರ ಆರೋಪಗಳನ್ನು ನೋಡಿದರೆ, ತಪ್ಪು ಮಾಡಿದವರೇ ಉಪದೇಶ ಮಾಡುವ ಸ್ಥಿತಿಗೆ ಬಂದಂತಿದೆ ಎಂದು ಕೆಪಿಸಿಸಿ ನೂತನ ಅಧ್ಯಕ್ಷ ಬಿ.ಕೆ ಹರಿಪ್ರಸಾದ್ ಹೇಳಿದರು....

ಎಸ್‌ಐಆರ್‌ನಲ್ಲಿ ಕೈಬಿಟ್ಟ ವ್ಯಕ್ತಿ ಕುರಿತು ಮಹತ್ವದ ಹೇಳಿಕೆ ನೀಡಿದ ಸುಪ್ರೀಂ ಕೋರ್ಟ್

ವಿಶೇಷ ತೀವ್ರ ಪರಿಷ್ಕರಣೆಯ (Special Intensive Revision) ಸಂದರ್ಭದಲ್ಲಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಟ್ಟಿರುವ ಅಥವಾ ಹೊರಗಿಟ್ಟಿರುವ ಬಂಗಾಳದ ಮುರ್ಷಿದಾಬಾದ್‌ನ 75 ವರ್ಷದ ವಕೀಲರೊಬ್ಬರು "ಪಶ್ಚಿಮ ಬಂಗಾಳದ ನಿಜವಾದ ಮತ್ತು ವಿಶ್ವಾಸಾರ್ಹ ನಾಗರಿಕ" ನಂತೆ...

ನೀಟ್ ಅಕ್ರಮ, ವ್ಯವಸ್ಥೆಯ ವೈಫಲ್ಯಕ್ಕೆ ಮತ್ತೊಂದು ಬಲಿ: ಮರು ಪರೀಕ್ಷೆ ಹಿಂದಿನ ದಿನವೇ ಆತ್ಮಹತ್ಯೆಗೆ ಶರಣಾದ ಪ್ರತಿಭಾವಂತ ವಿದ್ಯಾರ್ಥಿನಿ 

ಹೈದರಾಬಾದ್: ದೇಶದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶಾತಿಗಾಗಿ ನಡೆಯುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ (NEET) ಸುತ್ತ ಹಬ್ಬಿರುವ ಅಕ್ರಮಗಳ ಜಾಲ ಮತ್ತು ವ್ಯವಸ್ಥೆಯ ನಿರಂತರ ಗೊಂದಲಗಳು ಮತ್ತೊಂದು ಯುವ ಜೀವವನ್ನು ಬಲಿಪಡೆದಿವೆ.  ಜೂನ್...

ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿ ಮುಂದುವರೆದ ಸಿಜೆಪಿ ಪ್ರತಿಭಟನೆ; ಪ್ರಧಾನ್ ರಾಜೀನಾಮೆಗೆ ಪಟ್ಟು

ಪರೀಕ್ಷಾ ಅಕ್ರಮಗಳು ಮತ್ತು ಮೇ 3 ರ ನೀಟ್ ಪತ್ರಿಕೆ ಸೋರಿಕೆಯ ವಿರುದ್ಧ ತಮ್ಮ ಪ್ರತಿಭಟನೆಯನ್ನು ಮುಂದುವರಿಸಿರುವ ಜಿರಳೆ ಜನತಾ ಪಕ್ಷ (ಸಿಜೆಪಿ) ಸೋಮವಾರ ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿಯೇ ಕುಳಿತಿದ್ದಾರೆ. ಶನಿವಾರ...

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...