Homeಕರ್ನಾಟಕರಾಜ್ಯಕ್ಕಾಗಿರುವ ಅನ್ಯಾಯವನ್ನು ನಿರ್ಮಲಾ ಸೀತಾರಾಮನ್ ಒಪ್ಪಿಕೊಂಡಿದ್ದಾರೆ: ಡಿಸಿಎಂ ಡಿ.ಕೆ. ಶಿವಕುಮಾರ್

ರಾಜ್ಯಕ್ಕಾಗಿರುವ ಅನ್ಯಾಯವನ್ನು ನಿರ್ಮಲಾ ಸೀತಾರಾಮನ್ ಒಪ್ಪಿಕೊಂಡಿದ್ದಾರೆ: ಡಿಸಿಎಂ ಡಿ.ಕೆ. ಶಿವಕುಮಾರ್

- Advertisement -
- Advertisement -

ಬರ ಪರಿಹಾರ ವಿಚಾರದಲ್ಲಿ ಇಷ್ಟು ದಿನ ರಾಜ್ಯ ಸರ್ಕಾರದ ಮೇಲೆ ಆರೋಪ ಮಾಡುತ್ತಿದ್ದ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಈಗ ರಾಜ್ಯಕ್ಕೆ ಆಗಿರುವ ಅನ್ಯಾಯ ಒಪ್ಪಿಕೊಂಡಿದ್ದು, ಅವರಿಗೆ ಧನ್ಯವಾದಗಳು ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದರು.

ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರದ ಅಪಾರ್ಟ್ಮೆಂಟ್ ನಿವಾಸಿಗಳ ಭೇಟಿ ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಶಿವಕುಮಾರ್, ‘ಬರ ಪರಿಹಾರಕ್ಕೂ ಚುನಾವಣೆಗೂ ಏನು ಸಂಬಂಧ? ಈ ಹೇಳಿಕೆ ಮೂಲಕ ರಾಜ್ಯಕ್ಕೆ ಬರ ಪರಿಹಾರ ಬರುವುದು ವಿಳಂಬವಾಗಿದ್ದು, ರಾಜ್ಯಕ್ಕೆ ಅನ್ಯಾಯ ಆಗಿದೆ ಎಂದು ಒಪ್ಪಿಕೊಂಡಿದ್ದಾರೆ. ಇಷ್ಟು ದಿನಗಳ ಕಾಲ ರಾಜ್ಯ ಸರ್ಕಾರದ ಮೇಲೆ ಆರೋಪ ಮಾಡುತ್ತಿದ್ದರು’ ಎಂದರು.

‘ನಾವು ಬರ ಪರಿಹಾರ ನೀಡುವಂತೆ ಮನವಿ ನೀಡಿ ಎಷ್ಟು ತಿಂಗಳುಗಳಾಗಿವೆ? ನಾವು ಬರ ಪರಿಹಾರ ಮನವಿ ಕೊಟ್ಟ ಬಳಿಕ ನಾಲ್ಕು ತಿಂಗಳವರೆಗೂ ಯಾವುದೇ ಚುನಾವಣೆ ನೀತಿ ಸಂಹಿತೆ ಹಾಗೂ ಚುನಾವಣಾ ಆಯೋಗದ ನಿರ್ಬಂಧ ಇರಲಿಲ್ಲ. ಈಗ ಚುನಾವಣಾ ಆಯೋಗದ ನೆಪ ಹೇಳುತ್ತಿದ್ದಾರೆ. ಕೇಂದ್ರ ಸರ್ಕಾರದ ಅಕ್ಷಮ್ಯ ಅಪರಾಧದ ಬಗ್ಗೆ ಜನರಿಗೂ ಅರಿವಾಗಿದೆ. ಈ ಮೂಲಕ ಡಿ.ಕೆ. ಸುರೇಶ್ ಅವರ ನಮ್ಮ ತೆರಿಗೆ ನಮ್ಮ ಹಕ್ಕು, ನಮ್ಮ ಪಾಲಿನ ಹೋರಾಟ ಒಪ್ಪಿಕೊಂಡಿದ್ದಾರೆ; ಅವರಿಗೆ ಧನ್ಯವಾದಗಳು’ ಎಂದು ತಿರುಗೇಟು ಕೊಟ್ಟರು.

ಮೇಕೆದಾಟು ಯೋಜನೆ ವಿಚಾರವಾಗಿ ಕುಮಾರಸ್ವಾಮಿ ಹೇಳಿಕೆಗೆ ಪ್ರತಿಕ್ರಿಯಿಸಿ, ‘ಇಲ್ಲಿನ ಜನರ ಕಷ್ಟಕ್ಕೆ ಪರಿಹಾರ ನೀಡಿ ಧೈರ್ಯ ತುಂಬುವವರು ನಾವು. ಬೇರೆ ಅಭ್ಯರ್ಥಿಗಳು ನಮ್ಮಂತೆ ಜನರಿಗೆ ಅಭಯ ನೀಡುವುದಿಲ್ಲ. ಕುಮಾರಸ್ವಾಮಿ ಅವರು ಈಗ ಮೇಕೆದಾಟು, ಮಹದಾಯಿ ಯೋಜನೆ ಮಾಡುತ್ತೇವೆ ಎಂದು ಹೇಳುತ್ತಿದ್ದಾರೆ. ಅಧಿಕಾರ ಇದ್ದಾಗ ಈ ವಿಚಾರದಲ್ಲಿ ಏನೂ ಮಾಡದವರು ಈಗ ಏನು ಮಾಡುತ್ತಾರೆ. ನಾನು ಮೇಕೆದಾಟು ಪಾದಯಾತ್ರೆ ಮಾಡುವಾಗ ಅವರು ಕೊಟ್ಟಿರುವ ಹೇಳಿಕೆ ನೋಡಿ. ನಮ್ಮ ಪಾದಯಾತ್ರೆ ಸಂದರ್ಭದಲ್ಲಿ ಕಬಾಬ್ ತಿನ್ನೋಕೆ ಪಾದಯಾತ್ರೆ ಮಾಡುತ್ತಿದ್ದಾರೆ ಎಂದಿದ್ದ ಕುಮಾರಸ್ವಾಮಿ ಅವರು, ಈಗ ಪಾದಯಾತ್ರೆ ಬಗ್ಗೆ ಮಾತಾಡುತ್ತಿದ್ದಾರೆ. ಮಂಡ್ಯಕ್ಕೆ ಬಂದ ನಂತರ ಅವರಿಗೆ ಬಿಸಿ ತಟ್ಟಿರುವಂತೆ ಕಾಣುತ್ತಿದೆ’ ಎಂದರು.

‘ನಾವು ಹೋರಾಟ ಮಾಡಿದ್ದು ರಾಜ್ಯದ ಜನತೆಗಾಗಿ; ರಾಜಕಾರಣದಲ್ಲಿ ಅದು ನಮ್ಮ ಬದ್ಧತೆ. ಅದನ್ನು ಅವರಿಂದ ಸಹಿಸಲು ಆಗಲಿಲ್ಲ. ಅವರು ಏನಾದರೂ ಮಾಡಿಕೊಳ್ಳಲಿ. ಕಾವೇರಿ ಜಲಾನಯನ ಪ್ರದೇಶದ ಜನರಿಗೆ, ಬೆಂಗಳೂರು ಜನರಿಗೆ ಕುಡಿಯುವ ನೀರು ಪೂರೈಸಲು ನಾನು ನೀರಾವರಿ ಹಾಗೂ ಬೆಂಗಳೂರು ನಗರಾಭಿವೃದ್ಧಿ ಇಲಾಖೆ ಜವಾಬ್ದಾರಿ ತೆಗೆದುಕೊಂಡಿದ್ದೇನೆ’ ಎಂದು ಹೇಳಿದರು.

‘ನಾನು ಕೊಟ್ಟ ಮಾತಿನಂತೆ ನಡೆಯುತ್ತೇನೆ ಎಂದು ಜನರಿಗೆ ನಂಬಿಕೆ ಇದೆ. ಅವರ ನಂಬಿಕೆಗೆ ತಕ್ಕಂತೆ ನಡೆಯುತ್ತೇನೆ. ಇದು ಮತದಾರರಿಗೆ ಮನವರಿಕೆಯಾಗಿದೆ’ ಎಂದು ತಿಳಿಸಿದರು.

ಇದನ್ನೂ ಓದಿ; ಸ್ಫೋಟ ಪ್ರಕರಣದಲ್ಲಿ ಟಿಎಂಸಿ ಮುಖಂಡನ ಬಂಧನ; ‘ಬಿಜೆಪಿ-ಎನ್‌ಐಎ ಮೈತ್ರಿ’ ಎಂದ ಅಭಿಷೇಕ್ ಬ್ಯಾನರ್ಜಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...