Homeಮುಖಪುಟಆರ್ಥಿಕತೆ ಮೇಲೆತ್ತಲು ಹರಸಾಹಸ: ಸರ್ಕಾರಿ ನೌಕರರಿಗೆ ಹಬ್ಬದ ಮುಂಗಡ ನೀಡಲು ಮುಂದಾದ ಕೇಂದ್ರ ಸರ್ಕಾರ

ಆರ್ಥಿಕತೆ ಮೇಲೆತ್ತಲು ಹರಸಾಹಸ: ಸರ್ಕಾರಿ ನೌಕರರಿಗೆ ಹಬ್ಬದ ಮುಂಗಡ ನೀಡಲು ಮುಂದಾದ ಕೇಂದ್ರ ಸರ್ಕಾರ

ಮೊದಲೇ ಲೋಡ್ ಮಾಡಲಾದ ರುಪೇ ಡೆಬಿಟ್ ಕಾರ್ಡ್ ಮೂಲಕ ಸರ್ಕಾರಿ ನೌಕರರಿಗೆ 10,000 ರೂ. ಗಳನ್ನು ಬಡ್ಡಿರಹಿತ ಮುಂಗಡವನ್ನು ನೀಡಲಾಗುವುದು. ಮಾರ್ಚ್ 31 ರವರೆಗೆ ಈ ಹಣವನ್ನು 10 ಕಂತುಗಳಲ್ಲಿ ವಸೂಲಿ ಮಾಡಲಾಗುವುದು.

- Advertisement -
- Advertisement -

ಕುಸಿದು ಬಿದ್ದಿರುವ ಆರ್ಥಿಕತೆಗೆ ಪುಷ್ಠಿ ನೀಡಲು, ವಹಿವಾಟು ಹೆಚ್ಚಿಸಲು ಸರ್ಕಾರಿ ಸಿಬ್ಬಂದಿಗಳಿಗೆ ರಜೆಯ ಪ್ರಯಾಣದ ರಿಯಾಯಿತಿ ವೋಚರ್‌ಗಳು ಮತ್ತು ಹಬ್ಬದ ಮುಂಗಡವನ್ನು ನೀಡುವ ಹೊಸ ಯೋಜನೆಗಳನ್ನು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಘೋಷಿಸಿದ್ದಾರೆ.

ಗ್ರಾಹಕರ ಬೇಡಿಕೆಯನ್ನು ಹೆಚ್ಚಿಸಲು ಈ ಯೋಜನೆಗಳನ್ನು ತಂದಿದ್ದು, ಮಾರ್ಚ್ 31, 2021 ರ ವೇಳೆಗೆ 36 ಸಾವಿರ ಕೋಟಿ ರೂಗಳ ಹೆಚ್ಚುವರಿ ಬೇಡಿಕೆಯನ್ನು ಹೆಚ್ಚಿಸುವ ಗುರಿಯನ್ನು ಕೇಂದ್ರ ಹೊಂದಿದೆ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ನೌಕರರು ಹಾಗೂ ಸಾರ್ವಜನಿಕ ವಲಯದ ಕಂಪೆನಿಗಳ ನೌಕರರು ಮಾರ್ಚ್ 31, 2021 ರವರೆಗೆ ತಮ್ಮ ಆಯ್ಕೆಯ ಹಬ್ಬಗಳಿಗೆ ಈ ಯೋಜನೆ ಹಣವನ್ನು ಬಳಸಬಹುದಾಗಿದೆ.

ಇದನ್ನೂ ಓದಿ: ನಾನು ವೆಜ್‌, ನನಗೇಕೆ ಈರುಳ್ಳಿ ಬೆಲೆ ಏರಿಕೆ ಗೊತ್ತಾಗಬೇಕು? ಸೀತಾರಾಮನ್‌ ನಂತರ ಮತ್ತೊಬ್ಬ ಸಚಿವನ ಉವಾಚ

“ಸರ್ಕಾರಿ ಮತ್ತು ಸಂಘಟಿತ ವಲಯದ ಉದ್ಯೋಗಿಗಳ ಉಳಿತಾಯ ಹೆಚ್ಚಾಗಿದೆ ಎಂಬ ಸೂಚನೆಗಳು ಇರುವುದರಿಂದ, ಅವರ ಬೇಡಿಕೆ ಹೆಚ್ಚಾಗಲು ಇಂತಹ ಜನರಿಗೆ ಉತ್ತೇಜನ ನೀಡುತ್ತಿದ್ದೇವೆ ಎಂದು ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.

ಸಾಂಕ್ರಾಮಿಕ ಸಮಯದಲ್ಲಿ ಪ್ರಯಾಣ ಕೈಗೊಳ್ಳುವುದು ಕಷ್ಟವಾದ್ದರಿಂದ, ಸರ್ಕಾರವು 2021 ರ ಮಾರ್ಚ್ 31 ರೊಳಗೆ ಖರ್ಚು ಮಾಡಬೇಕಾದ ಹಣವನ್ನು ನಗದು ವೋಚರ್‌ಗಳಾಗಿ ಪಾವತಿಸುತ್ತದೆ ಎಂದು ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.

ಈ ಸೌಲಭ್ಯ ನೀಡಲು ಸರ್ಕಾರಕ್ಕೆ ಸುಮಾರು, 5,675 ಕೋಟಿ ರೂ. ವೆಚ್ಚವಾಗಲಿದೆ. ಈ ಸೌಲಭ್ಯವನ್ನು ಪಡೆಯಲು ಸರ್ಕಾರಿ ಬ್ಯಾಂಕುಗಳಂತಹ ಸಾರ್ವಜನಿಕ ವಲಯದ ಕಂಪನಿಗಳಿಗೆ ಕೂಡಾ ಅವಕಾಶ ನೀಡಿದೆ.

ಇದನ್ನೂ ಓದಿ: ಮುಂದಿನ ಮಾರ್ಚ್‌ ವೇಳೆಗೆ ಏರ್ ಇಂಡಿಯಾ, ಭಾರತ್ ಪೆಟ್ರೋಲಿಯಂ ಮಾರಾಟ: ನಿರ್ಮಲಾ ಸೀತಾರಾಮನ್

ವಿಶೇಷ ಉತ್ಸವ ಮುಂಗಡ ಯೋಜನೆಯ ಮೂಲಕ ಮಾರ್ಚ್ 31 ರವರೆಗೆ ಕೇಂದ್ರ ಸರ್ಕಾರಿ ನೌಕರರಿಗೆ ಹಬ್ಬದ ಮುಂಗಡವನ್ನು ಪುನಃ ಪರಿಚಯಿಸುವುದಾಗಿ ಹಣಕಾಸು ಸಚಿವರು ಘೋಷಿಸಿದರು. 7 ನೇ ವೇತನ ಆಯೋಗದ ಶಿಫಾರಸುಗಳ ಪ್ರಕಾರ ಈ ಮುಂಗಡವನ್ನು ರದ್ದುಪಡಿಸಲಾಗಿದೆ.

ಒಂದು ಬಾರಿಗೆ ಕೇಂದ್ರ ಸರ್ಕಾರದ ಎಲ್ಲ ಅಧಿಕಾರಿಗಳು ಮತ್ತು ಉದ್ಯೋಗಿಗಳಿಗೆ ಬಡ್ಡಿರಹಿತ ಮುಂಗಡ ನೀಡಲಾಗುವುದು ಎಂದು ಹಣಕಾಸು ಸಚಿವರು ತಿಳಿಸಿದ್ದಾರೆ.

ಈ ಯೋಜನೆಯಡಿ, ಮೊದಲೇ ಲೋಡ್ ಮಾಡಲಾದ ರುಪೇ ಡೆಬಿಟ್ ಕಾರ್ಡ್ ಮೂಲಕ ಸರ್ಕಾರಿ ನೌಕರರಿಗೆ 10,000 ರೂ. ಗಳನ್ನು ಬಡ್ಡಿರಹಿತ ಮುಂಗಡವನ್ನು ನೀಡಲಾಗುವುದು. ಮಾರ್ಚ್ 31 ರವರೆಗೆ ಈ ಹಣವನ್ನು 10 ಕಂತುಗಳಲ್ಲಿ ವಸೂಲಿ ಮಾಡಲಾಗುವುದು.

ಇದನ್ನೂ ಓದಿ: ಕಾರ್ಪೊರೇಟ್ ತೆರಿಗೆ ಕಡಿತ ಘೋಷಿಸಿದ ನಿರ್ಮಲಾ ಸೀತಾರಾಮನ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...