Homeಮುಖಪುಟಆರ್ಥಿಕತೆ ಮೇಲೆತ್ತಲು ಹರಸಾಹಸ: ಸರ್ಕಾರಿ ನೌಕರರಿಗೆ ಹಬ್ಬದ ಮುಂಗಡ ನೀಡಲು ಮುಂದಾದ ಕೇಂದ್ರ ಸರ್ಕಾರ

ಆರ್ಥಿಕತೆ ಮೇಲೆತ್ತಲು ಹರಸಾಹಸ: ಸರ್ಕಾರಿ ನೌಕರರಿಗೆ ಹಬ್ಬದ ಮುಂಗಡ ನೀಡಲು ಮುಂದಾದ ಕೇಂದ್ರ ಸರ್ಕಾರ

ಮೊದಲೇ ಲೋಡ್ ಮಾಡಲಾದ ರುಪೇ ಡೆಬಿಟ್ ಕಾರ್ಡ್ ಮೂಲಕ ಸರ್ಕಾರಿ ನೌಕರರಿಗೆ 10,000 ರೂ. ಗಳನ್ನು ಬಡ್ಡಿರಹಿತ ಮುಂಗಡವನ್ನು ನೀಡಲಾಗುವುದು. ಮಾರ್ಚ್ 31 ರವರೆಗೆ ಈ ಹಣವನ್ನು 10 ಕಂತುಗಳಲ್ಲಿ ವಸೂಲಿ ಮಾಡಲಾಗುವುದು.

- Advertisement -
- Advertisement -

ಕುಸಿದು ಬಿದ್ದಿರುವ ಆರ್ಥಿಕತೆಗೆ ಪುಷ್ಠಿ ನೀಡಲು, ವಹಿವಾಟು ಹೆಚ್ಚಿಸಲು ಸರ್ಕಾರಿ ಸಿಬ್ಬಂದಿಗಳಿಗೆ ರಜೆಯ ಪ್ರಯಾಣದ ರಿಯಾಯಿತಿ ವೋಚರ್‌ಗಳು ಮತ್ತು ಹಬ್ಬದ ಮುಂಗಡವನ್ನು ನೀಡುವ ಹೊಸ ಯೋಜನೆಗಳನ್ನು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಘೋಷಿಸಿದ್ದಾರೆ.

ಗ್ರಾಹಕರ ಬೇಡಿಕೆಯನ್ನು ಹೆಚ್ಚಿಸಲು ಈ ಯೋಜನೆಗಳನ್ನು ತಂದಿದ್ದು, ಮಾರ್ಚ್ 31, 2021 ರ ವೇಳೆಗೆ 36 ಸಾವಿರ ಕೋಟಿ ರೂಗಳ ಹೆಚ್ಚುವರಿ ಬೇಡಿಕೆಯನ್ನು ಹೆಚ್ಚಿಸುವ ಗುರಿಯನ್ನು ಕೇಂದ್ರ ಹೊಂದಿದೆ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ನೌಕರರು ಹಾಗೂ ಸಾರ್ವಜನಿಕ ವಲಯದ ಕಂಪೆನಿಗಳ ನೌಕರರು ಮಾರ್ಚ್ 31, 2021 ರವರೆಗೆ ತಮ್ಮ ಆಯ್ಕೆಯ ಹಬ್ಬಗಳಿಗೆ ಈ ಯೋಜನೆ ಹಣವನ್ನು ಬಳಸಬಹುದಾಗಿದೆ.

ಇದನ್ನೂ ಓದಿ: ನಾನು ವೆಜ್‌, ನನಗೇಕೆ ಈರುಳ್ಳಿ ಬೆಲೆ ಏರಿಕೆ ಗೊತ್ತಾಗಬೇಕು? ಸೀತಾರಾಮನ್‌ ನಂತರ ಮತ್ತೊಬ್ಬ ಸಚಿವನ ಉವಾಚ

“ಸರ್ಕಾರಿ ಮತ್ತು ಸಂಘಟಿತ ವಲಯದ ಉದ್ಯೋಗಿಗಳ ಉಳಿತಾಯ ಹೆಚ್ಚಾಗಿದೆ ಎಂಬ ಸೂಚನೆಗಳು ಇರುವುದರಿಂದ, ಅವರ ಬೇಡಿಕೆ ಹೆಚ್ಚಾಗಲು ಇಂತಹ ಜನರಿಗೆ ಉತ್ತೇಜನ ನೀಡುತ್ತಿದ್ದೇವೆ ಎಂದು ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.

ಸಾಂಕ್ರಾಮಿಕ ಸಮಯದಲ್ಲಿ ಪ್ರಯಾಣ ಕೈಗೊಳ್ಳುವುದು ಕಷ್ಟವಾದ್ದರಿಂದ, ಸರ್ಕಾರವು 2021 ರ ಮಾರ್ಚ್ 31 ರೊಳಗೆ ಖರ್ಚು ಮಾಡಬೇಕಾದ ಹಣವನ್ನು ನಗದು ವೋಚರ್‌ಗಳಾಗಿ ಪಾವತಿಸುತ್ತದೆ ಎಂದು ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.

ಈ ಸೌಲಭ್ಯ ನೀಡಲು ಸರ್ಕಾರಕ್ಕೆ ಸುಮಾರು, 5,675 ಕೋಟಿ ರೂ. ವೆಚ್ಚವಾಗಲಿದೆ. ಈ ಸೌಲಭ್ಯವನ್ನು ಪಡೆಯಲು ಸರ್ಕಾರಿ ಬ್ಯಾಂಕುಗಳಂತಹ ಸಾರ್ವಜನಿಕ ವಲಯದ ಕಂಪನಿಗಳಿಗೆ ಕೂಡಾ ಅವಕಾಶ ನೀಡಿದೆ.

ಇದನ್ನೂ ಓದಿ: ಮುಂದಿನ ಮಾರ್ಚ್‌ ವೇಳೆಗೆ ಏರ್ ಇಂಡಿಯಾ, ಭಾರತ್ ಪೆಟ್ರೋಲಿಯಂ ಮಾರಾಟ: ನಿರ್ಮಲಾ ಸೀತಾರಾಮನ್

ವಿಶೇಷ ಉತ್ಸವ ಮುಂಗಡ ಯೋಜನೆಯ ಮೂಲಕ ಮಾರ್ಚ್ 31 ರವರೆಗೆ ಕೇಂದ್ರ ಸರ್ಕಾರಿ ನೌಕರರಿಗೆ ಹಬ್ಬದ ಮುಂಗಡವನ್ನು ಪುನಃ ಪರಿಚಯಿಸುವುದಾಗಿ ಹಣಕಾಸು ಸಚಿವರು ಘೋಷಿಸಿದರು. 7 ನೇ ವೇತನ ಆಯೋಗದ ಶಿಫಾರಸುಗಳ ಪ್ರಕಾರ ಈ ಮುಂಗಡವನ್ನು ರದ್ದುಪಡಿಸಲಾಗಿದೆ.

ಒಂದು ಬಾರಿಗೆ ಕೇಂದ್ರ ಸರ್ಕಾರದ ಎಲ್ಲ ಅಧಿಕಾರಿಗಳು ಮತ್ತು ಉದ್ಯೋಗಿಗಳಿಗೆ ಬಡ್ಡಿರಹಿತ ಮುಂಗಡ ನೀಡಲಾಗುವುದು ಎಂದು ಹಣಕಾಸು ಸಚಿವರು ತಿಳಿಸಿದ್ದಾರೆ.

ಈ ಯೋಜನೆಯಡಿ, ಮೊದಲೇ ಲೋಡ್ ಮಾಡಲಾದ ರುಪೇ ಡೆಬಿಟ್ ಕಾರ್ಡ್ ಮೂಲಕ ಸರ್ಕಾರಿ ನೌಕರರಿಗೆ 10,000 ರೂ. ಗಳನ್ನು ಬಡ್ಡಿರಹಿತ ಮುಂಗಡವನ್ನು ನೀಡಲಾಗುವುದು. ಮಾರ್ಚ್ 31 ರವರೆಗೆ ಈ ಹಣವನ್ನು 10 ಕಂತುಗಳಲ್ಲಿ ವಸೂಲಿ ಮಾಡಲಾಗುವುದು.

ಇದನ್ನೂ ಓದಿ: ಕಾರ್ಪೊರೇಟ್ ತೆರಿಗೆ ಕಡಿತ ಘೋಷಿಸಿದ ನಿರ್ಮಲಾ ಸೀತಾರಾಮನ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....