Homeಮುಖಪುಟಆರ್ಥಿಕತೆ ಮೇಲೆತ್ತಲು ಹರಸಾಹಸ: ಸರ್ಕಾರಿ ನೌಕರರಿಗೆ ಹಬ್ಬದ ಮುಂಗಡ ನೀಡಲು ಮುಂದಾದ ಕೇಂದ್ರ ಸರ್ಕಾರ

ಆರ್ಥಿಕತೆ ಮೇಲೆತ್ತಲು ಹರಸಾಹಸ: ಸರ್ಕಾರಿ ನೌಕರರಿಗೆ ಹಬ್ಬದ ಮುಂಗಡ ನೀಡಲು ಮುಂದಾದ ಕೇಂದ್ರ ಸರ್ಕಾರ

ಮೊದಲೇ ಲೋಡ್ ಮಾಡಲಾದ ರುಪೇ ಡೆಬಿಟ್ ಕಾರ್ಡ್ ಮೂಲಕ ಸರ್ಕಾರಿ ನೌಕರರಿಗೆ 10,000 ರೂ. ಗಳನ್ನು ಬಡ್ಡಿರಹಿತ ಮುಂಗಡವನ್ನು ನೀಡಲಾಗುವುದು. ಮಾರ್ಚ್ 31 ರವರೆಗೆ ಈ ಹಣವನ್ನು 10 ಕಂತುಗಳಲ್ಲಿ ವಸೂಲಿ ಮಾಡಲಾಗುವುದು.

- Advertisement -
- Advertisement -

ಕುಸಿದು ಬಿದ್ದಿರುವ ಆರ್ಥಿಕತೆಗೆ ಪುಷ್ಠಿ ನೀಡಲು, ವಹಿವಾಟು ಹೆಚ್ಚಿಸಲು ಸರ್ಕಾರಿ ಸಿಬ್ಬಂದಿಗಳಿಗೆ ರಜೆಯ ಪ್ರಯಾಣದ ರಿಯಾಯಿತಿ ವೋಚರ್‌ಗಳು ಮತ್ತು ಹಬ್ಬದ ಮುಂಗಡವನ್ನು ನೀಡುವ ಹೊಸ ಯೋಜನೆಗಳನ್ನು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಘೋಷಿಸಿದ್ದಾರೆ.

ಗ್ರಾಹಕರ ಬೇಡಿಕೆಯನ್ನು ಹೆಚ್ಚಿಸಲು ಈ ಯೋಜನೆಗಳನ್ನು ತಂದಿದ್ದು, ಮಾರ್ಚ್ 31, 2021 ರ ವೇಳೆಗೆ 36 ಸಾವಿರ ಕೋಟಿ ರೂಗಳ ಹೆಚ್ಚುವರಿ ಬೇಡಿಕೆಯನ್ನು ಹೆಚ್ಚಿಸುವ ಗುರಿಯನ್ನು ಕೇಂದ್ರ ಹೊಂದಿದೆ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ನೌಕರರು ಹಾಗೂ ಸಾರ್ವಜನಿಕ ವಲಯದ ಕಂಪೆನಿಗಳ ನೌಕರರು ಮಾರ್ಚ್ 31, 2021 ರವರೆಗೆ ತಮ್ಮ ಆಯ್ಕೆಯ ಹಬ್ಬಗಳಿಗೆ ಈ ಯೋಜನೆ ಹಣವನ್ನು ಬಳಸಬಹುದಾಗಿದೆ.

ಇದನ್ನೂ ಓದಿ: ನಾನು ವೆಜ್‌, ನನಗೇಕೆ ಈರುಳ್ಳಿ ಬೆಲೆ ಏರಿಕೆ ಗೊತ್ತಾಗಬೇಕು? ಸೀತಾರಾಮನ್‌ ನಂತರ ಮತ್ತೊಬ್ಬ ಸಚಿವನ ಉವಾಚ

“ಸರ್ಕಾರಿ ಮತ್ತು ಸಂಘಟಿತ ವಲಯದ ಉದ್ಯೋಗಿಗಳ ಉಳಿತಾಯ ಹೆಚ್ಚಾಗಿದೆ ಎಂಬ ಸೂಚನೆಗಳು ಇರುವುದರಿಂದ, ಅವರ ಬೇಡಿಕೆ ಹೆಚ್ಚಾಗಲು ಇಂತಹ ಜನರಿಗೆ ಉತ್ತೇಜನ ನೀಡುತ್ತಿದ್ದೇವೆ ಎಂದು ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.

ಸಾಂಕ್ರಾಮಿಕ ಸಮಯದಲ್ಲಿ ಪ್ರಯಾಣ ಕೈಗೊಳ್ಳುವುದು ಕಷ್ಟವಾದ್ದರಿಂದ, ಸರ್ಕಾರವು 2021 ರ ಮಾರ್ಚ್ 31 ರೊಳಗೆ ಖರ್ಚು ಮಾಡಬೇಕಾದ ಹಣವನ್ನು ನಗದು ವೋಚರ್‌ಗಳಾಗಿ ಪಾವತಿಸುತ್ತದೆ ಎಂದು ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.

ಈ ಸೌಲಭ್ಯ ನೀಡಲು ಸರ್ಕಾರಕ್ಕೆ ಸುಮಾರು, 5,675 ಕೋಟಿ ರೂ. ವೆಚ್ಚವಾಗಲಿದೆ. ಈ ಸೌಲಭ್ಯವನ್ನು ಪಡೆಯಲು ಸರ್ಕಾರಿ ಬ್ಯಾಂಕುಗಳಂತಹ ಸಾರ್ವಜನಿಕ ವಲಯದ ಕಂಪನಿಗಳಿಗೆ ಕೂಡಾ ಅವಕಾಶ ನೀಡಿದೆ.

ಇದನ್ನೂ ಓದಿ: ಮುಂದಿನ ಮಾರ್ಚ್‌ ವೇಳೆಗೆ ಏರ್ ಇಂಡಿಯಾ, ಭಾರತ್ ಪೆಟ್ರೋಲಿಯಂ ಮಾರಾಟ: ನಿರ್ಮಲಾ ಸೀತಾರಾಮನ್

ವಿಶೇಷ ಉತ್ಸವ ಮುಂಗಡ ಯೋಜನೆಯ ಮೂಲಕ ಮಾರ್ಚ್ 31 ರವರೆಗೆ ಕೇಂದ್ರ ಸರ್ಕಾರಿ ನೌಕರರಿಗೆ ಹಬ್ಬದ ಮುಂಗಡವನ್ನು ಪುನಃ ಪರಿಚಯಿಸುವುದಾಗಿ ಹಣಕಾಸು ಸಚಿವರು ಘೋಷಿಸಿದರು. 7 ನೇ ವೇತನ ಆಯೋಗದ ಶಿಫಾರಸುಗಳ ಪ್ರಕಾರ ಈ ಮುಂಗಡವನ್ನು ರದ್ದುಪಡಿಸಲಾಗಿದೆ.

ಒಂದು ಬಾರಿಗೆ ಕೇಂದ್ರ ಸರ್ಕಾರದ ಎಲ್ಲ ಅಧಿಕಾರಿಗಳು ಮತ್ತು ಉದ್ಯೋಗಿಗಳಿಗೆ ಬಡ್ಡಿರಹಿತ ಮುಂಗಡ ನೀಡಲಾಗುವುದು ಎಂದು ಹಣಕಾಸು ಸಚಿವರು ತಿಳಿಸಿದ್ದಾರೆ.

ಈ ಯೋಜನೆಯಡಿ, ಮೊದಲೇ ಲೋಡ್ ಮಾಡಲಾದ ರುಪೇ ಡೆಬಿಟ್ ಕಾರ್ಡ್ ಮೂಲಕ ಸರ್ಕಾರಿ ನೌಕರರಿಗೆ 10,000 ರೂ. ಗಳನ್ನು ಬಡ್ಡಿರಹಿತ ಮುಂಗಡವನ್ನು ನೀಡಲಾಗುವುದು. ಮಾರ್ಚ್ 31 ರವರೆಗೆ ಈ ಹಣವನ್ನು 10 ಕಂತುಗಳಲ್ಲಿ ವಸೂಲಿ ಮಾಡಲಾಗುವುದು.

ಇದನ್ನೂ ಓದಿ: ಕಾರ್ಪೊರೇಟ್ ತೆರಿಗೆ ಕಡಿತ ಘೋಷಿಸಿದ ನಿರ್ಮಲಾ ಸೀತಾರಾಮನ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....