Homeಮುಖಪುಟಪಡಿತರ ಅಂಗಡಿಯಲ್ಲಿ ಮೋದಿ ಚಿತ್ರ ಇಲ್ಲದಿರುವುದನ್ನು ಕಂಡುಹಿಡಿದ ನಿರ್ಮಲಾ ಸೀತಾರಾಮನ್; ಸಾಮಾಜಿಕ ಮಾಧ್ಯಮದಲ್ಲಿ ಟ್ರೋಲ್

ಪಡಿತರ ಅಂಗಡಿಯಲ್ಲಿ ಮೋದಿ ಚಿತ್ರ ಇಲ್ಲದಿರುವುದನ್ನು ಕಂಡುಹಿಡಿದ ನಿರ್ಮಲಾ ಸೀತಾರಾಮನ್; ಸಾಮಾಜಿಕ ಮಾಧ್ಯಮದಲ್ಲಿ ಟ್ರೋಲ್

ಎಲ್‌ಪಿಜಿ ಸಿಲಿಂಡರ್‌ ಮೇಲೆ ಅದರ ಬೆಲೆ ಹಾಗೂ ಪ್ರಧಾನಿಯ ಚಿತ್ರವನ್ನು ಅಂಟಿಸಿ ‘ತಗೊಳಿ, ಪೋಸ್ಟರ್‌ ಬಂದಿದೆ’ ಎಂದು ವ್ಯಂಗ್ಯವಾಡಲಾಗಿದೆ

- Advertisement -
- Advertisement -

ಬಡತನ ರೇಖೆಗಿಂತ ಕೆಳಗಿರುವ ಜನರಿಗೆ ಉಚಿತವಾಗಿ ಅಕ್ಕಿ ವಿತರಿಸುವ ನ್ಯಾಯಬೆಲೆ ಅಂಗಡಿಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಭಾವಚಿತ್ರವನ್ನು ಪ್ರದರ್ಶಿಸದ ಕಾರಣಕ್ಕೆ ತೆಲಂಗಾಣ ಸರ್ಕಾರದ ವಿರುದ್ಧ ಶುಕ್ರವಾರ ಒಕ್ಕೂಟ ಸರ್ಕಾರದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಆಕ್ರೋಶ ವ್ಯಕ್ತಪಡಿಸಿದ್ದು, ಜಿಲ್ಲಾಧಿಕಾರಿಯನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ವಿಡಿಯೊವನ್ನು ಅವರು ಟ್ವಿಟರ್‌ನಲ್ಲಿ ಪೋಸ್ಟ್‌ ಮಾಡಿದ್ದು, ಹಲವಾರು ಜನರು ಸಚಿವರನ್ನು ಟ್ರೋಲ್ ಮಾಡುತ್ತಿದ್ದಾರೆ.

ಗುರುವಾರದಿಂದ ಬಿಜೆಪಿಯ ಲೋಕಸಭೆ ಪ್ರವಾಸ ಯೋಜನೆ ಕಾರ್ಯಕ್ರಮದ ಅಂಗವಾಗಿ ಎರಡು ದಿನಗಳ ತೆಲಂಗಾಣ ಪ್ರವಾಸದಲ್ಲಿದ್ದ ಸೀತಾರಾಮನ್ ಅವರು ಶುಕ್ರವಾರ ಕಾಮರೆಡ್ಡಿ ಜಿಲ್ಲೆಗೆ ಭೇಟಿ ನೀಡಿ ರಾಜ್ಯದಲ್ಲಿ ಅನುಷ್ಠಾನಗೊಳಿಸುತ್ತಿರುವ ಒಕ್ಕೂಟ ಸರ್ಕಾರದ ವಿವಿಧ ಕಾರ್ಯಕ್ರಮಗಳನ್ನು ಪರಿಶೀಲಿಸಿದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಈ ವೇಳೆ ಅವರು ಬಿರ್ಕೂರ್ ಗ್ರಾಮದ ನ್ಯಾಯಬೆಲೆ ಅಂಗಡಿಯಲ್ಲಿ ನಿಲ್ಲಿಸಿ ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ್ ಅನ್ನ ಯೋಜನೆಯ ಫಲಾನುಭವಿಗಳೊಂದಿಗೆ ಸಂವಾದ ನಡೆಸಿದ್ದರು. ಪರಿಶೀಲನೆ ವೇಳೆ ಅಂಗಡಿಯಲ್ಲಿ ಪ್ರಧಾನಿಯವರ ಭಾವಚಿತ್ರವಾಗಲಿ, ಫ್ಲೆಕ್ಸ್ ಬೋರ್ಡ್ ಆಗಲಿ ಇಲ್ಲದಿರುವುದನ್ನು ಗಮನಿಸಿದ ಅವರು, ಕಾಮರೆಡ್ಡಿ ಜಿಲ್ಲಾಧಿಕಾರಿ ಜಿತೇಶ್ ಪಟೇಲ್ ಅವರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಹುಸಿಯಾದ ತೇಜಸ್ವಿ ಸೂರ್ಯ ಭರವಸೆ: ‘ನನ್ನನ್ನು ಕೇಳಿ ಬ್ಯಾಂಕಲ್ಲಿ ಹಣ ಇಟ್ಟಿದ್ದೀರಾ?’ ಎಂದ ನಿರ್ಮಲಾ ಸೀತಾರಾಮನ್!

ಒಕ್ಕೂಟ ಸರ್ಕಾರದ ಯೋಜನೆಯಡಿ ಅಕ್ಕಿಯನ್ನು ಸರಬರಾಜು ಮಾಡುವ ಪ್ರತಿ ಪಡಿತರ ಅಂಗಡಿಗೆ ಕಡ್ಡಾಯವಾಗಿ ಮೋದಿಯವರ ಫ್ಲೆಕ್ಸ್ ಬೋರ್ಡ್ ಏಕೆ ಇಲ್ಲ ಎಂದು ಈ ವೇಳೆ ಅವರು ಕೇಳಿದ್ದಾರೆ. ನಂತರ ಅವರು ಜಿಲ್ಲೆಯ ಎಲ್ಲ ಅಂಗಡಿಗಳಲ್ಲಿ ಮೋದಿ ಅವರ ಭಾವಚಿತ್ರ ಹಾಕುವಂತೆ ಜಿಲ್ಲಾಧಿಕಾರಿಗೆ ಸೂಚಿಸಿದ್ದಾರೆ. “ಪಡಿತರ ಅಂಗಡಿಗಳಲ್ಲಿ ಪ್ರಧಾನಮಂತ್ರಿಯವರ ಚಿತ್ರಗಳು ತಪ್ಪದೆ ಇರುವಂತೆ ನೋಡಿಕೊಳ್ಳುವುದು ಎಲ್ಲಾ ಜಿಲ್ಲಾಧಿಕಾರಿಗಳ ಜವಾಬ್ದಾರಿಯಾಗಿದೆ” ಎಂದು ಅವರು ಹೇಳಿದ್ದಾರೆ.

ತೆಲಂಗಾಣದಲ್ಲಿ ಉಚಿತ ಪಡಿತರ ಅಕ್ಕಿ ವಿತರಣೆಯಲ್ಲಿ ರಾಜ್ಯ ಮತ್ತು ಒಕ್ಕೂಟ ಸರ್ಕಾರಗಳ ಪಾಲು ಎಷ್ಟು ಎಂಬುವುದು ಗೊತ್ತಿದೆಯೆ ಎಂದು ನಿರ್ಮಲಾ ಸೀತಾರಾಮನ್ ಅವರು ಜಿಲ್ಲಾಧಿಕಾರಿಯನ್ನು ಪ್ರಶ್ನಿಸಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿದ ಜಿಲ್ಲಾಧಿಕಾರಿ ಜಿತೇಶ್‌ ಪಟೇಲ್ ಅವರು ಯೋಜನೆಯ ಸಂಪೂರ್ಣ ವಿವರಗಳನ್ನು ತಾನು ಹೊಂದಿಲ್ಲ ಎಂದು ಹೇಳಿದ್ದು, ಈ ವೇಳೆ ಸಚಿವರು, ಅವರು 30 ನಿಮಿಷಗಳಲ್ಲಿ ಯೋಜನೆಯ ಸಂಪೂರ್ಣ ವಿವರಗಳು ಬೇಕು ಎಂದು ಕೇಳಿದ್ದಾರೆ. ಒಂದು ವೇಳೆ ವಿವರಗಳು ನೀಡಲು ವಿಫಲವಾದರೆ ಪತ್ರಿಕಾಗೋಷ್ಠಿ ಕರೆದು ಟಿಆರ್‌‌ಎಸ್ ಸರ್ಕಾರದವನ್ನು ಎಕ್ಸ್‌‌ಪೋಸ್‌ ಮಾಡುವುದಾಗಿ ಹೇಳಿದ್ದಾರೆ.

ಇದನ್ನೂ ಓದಿ: ದೇಶದಲ್ಲಿ ಲಖಿಂಪುರ್‌ ಖೇರಿಯಂತಹ ಘಟನೆ ನಡೆಯುತ್ತಲೇ ಇರುತ್ತವೆ: ನಿರ್ಮಲಾ ಸೀತಾರಾಮನ್

ಫಲಾನುಭವಿಯೊಂದಿಗೆ ಬೆದರಿಸುವ ರೀತಿಯಲ್ಲಿ ಮಾತನಾಡಲು ಯತ್ನಿಸಿದ ನ್ಯಾಯಬೆಲೆ ಅಂಗಡಿಯ ವ್ಯಾಪಾರಿಯನ್ನೂ ನಿರ್ಮಲಾ ಸೀತಾರಾಮನ್ ತರಾಟೆಗೆ ತೆಗೆದುಕೊಂಡಿದ್ದಾರೆ. ಡೀಲರ್ ವಿರುದ್ಧ ಅಗತ್ಯ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿಗೆ ಸೂಚಿಸಿದ ಅವರು, “ವ್ಯಾಪಾರಿ ನನ್ನ ಮುಂದೆ ಹೇಗೆ ಮಾತನಾಡುತ್ತಾನೆ?” ಅವಳು ಹೇಳಿದ್ದಾರೆ.

ನಿರ್ಮಲಾ ಅವರು ನ್ಯಾಯಬೆಲೆ ಅಂಗಡಿಗೆ ಭೇಟಿ ನೀಡಿರುವುದು ಟಿವಿ ವಾಹಿನಿಗಳಲ್ಲಿ ಹರಿದಾಡುತ್ತಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ವೈರಲ್ ಆಗುತ್ತಿದ್ದಂತೆ ತೆಲಂಗಾಣ ಹಣಕಾಸು ಸಚಿವ ಟಿ ಹರೀಶ್ ರಾವ್ ಅವರು ಪತ್ರಿಕಾಗೋಷ್ಠಿ ಕರೆದು ಅವರ ವರ್ತನೆಯನ್ನು ಖಂಡಿಸಿದ್ದಾರೆ.

ಪಡಿತರ ಅಂಗಡಿಗಳಲ್ಲಿ ಮೋದಿ ಅವರ ಭಾವಚಿತ್ರ ಇಡುವಂತೆ ಒಕ್ಕೂಟ ಸರ್ಕಾರದ ಹಣಕಾಸು ಸಚಿವರು ಒತ್ತಾಯಿಸಿರುವುದು ಹಾಸ್ಯಾಸ್ಪದವಾಗಿದೆ. ಇದು ಪ್ರಧಾನಿಯವರ ಘನತೆಯನ್ನು ಕುಗ್ಗಿಸುವುದಲ್ಲದೆ ಬೇರೇನೂ ಇಲ್ಲ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಇಂಧನ ಬೆಲೆ ಏರಿಕೆ ಬಗ್ಗೆ ನಿಮ್ಮ ರಾಜ್ಯ ಸರ್ಕಾರಗಳನ್ನು ಕೇಳಿ: ನಿರ್ಮಲಾ ಸೀತಾರಾಮನ್‌

ಅನೇಕ ಪ್ರಧಾನಿಗಳು ದೇಶವನ್ನು ಆಳಿದ್ದಾರೆ ಆದರೆ ನ್ಯಾಯಬೆಲೆ ಅಂಗಡಿಗಳಲ್ಲಿ ಅವರ ಭಾವಚಿತ್ರಗಳನ್ನು ಪ್ರದರ್ಶಿಸಬೇಕೆಂದು ಅವರು ಎಂದಿಗೂ ಒತ್ತಾಯಿಸಲಿಲ್ಲ ಎಂದು ಅವರು ಹೇಳಿದ್ದು, ಈಗಿನ ಸರ್ಕಾರ ಕೀಳು ಮಟ್ಟದಲ್ಲಿ ವರ್ತಿಸುತ್ತಿದೆ ಎಂದಿದ್ದಾರೆ.

“ತೆಲಂಗಾಣದಲ್ಲಿ ಉಚಿತ ಅಕ್ಕಿ ಯೋಜನೆಗೆ ಒಕ್ಕೂಟ ಸರ್ಕಾರ ಕೇವಲ 55% ಕೊಡುವು ನೀಡುತ್ತಿದ್ದು, ಉಳಿದ 45% ರಾಜ್ಯ ಸರ್ಕಾರ ನೀಡುತ್ತಿದೆ” ಎಂದು ಅವರು ಹೇಳಿದ್ದಾರೆ. ಉಚಿತ ಅಕ್ಕಿ ಯೋಜನೆಗೆ 3,610 ಕೋಟಿ ರೂ. ವೆಚ್ಚ ಮಾಡುತ್ತಿದ್ದೇವೆ. ಹಾಗಾದರೆ, ಪಡಿತರ ಅಂಗಡಿಗಳಲ್ಲಿ ಮುಖ್ಯಮಂತ್ರಿಗಳ ಚಿತ್ರ ಹಾಕುವಂತೆ ನಾವು ಒತ್ತಾಯಿಸಬೇಕೇ? ಎಂದು ಸಚಿವರು ಪ್ರಶ್ನಿಸಿದ್ದಾರೆ.

ಈ ನಡುವೆ ಹಲವಾರು ಜನರು ಸಚಿವರನ್ನು ಟ್ರೋಲ್ ಮಾಡಿದ್ದಾರೆ. ಚಿತ್ರ ನಟ ಪ್ರಕಾಶ್ ರಾಜ್ ಅವರು, ‘ತಗೊಳಿ, ಪೋಸ್ಟರ್‌ ಬಂದಿದೆ’ ಎಂದು ಎಲ್‌ಪಿಜಿ ಸಿಲಿಂಡರ್‌ ಮೇಲೆ ಅದರ ಬೆಲೆಯೊಂದಿಗೆ ಪ್ರಧಾನಿ ಮೋದಿಯ ಚಿತ್ರವನ್ನು ಅಂಟಿಸಿರುವ ವಿಡಿಯೊವೊಂದನ್ನು ಪೋಸ್ಟ್‌ ಮಾಡಿದ್ದಾರೆ.

ಟಿಆರ್‌ಎಸ್‌ ಪಕ್ಷದ ನಾಯಕ ಕೃಷ್ಣನ್ ಅವರು ಕೂಡಾ ಅದೇ ವಿಡಿಯೊವನ್ನು ಪೋಸ್ಟ್‌ ಮಾಡಿ, ನಿರ್ಮಲಾ ಸೀತಾರಾಮ್‌ ಅವರೆ, ಮೋದಿ ಅವರ ಫೊಟೊ ಬೇಕೇ ತೆಗೆದುಕೊಳ್ಳಿ ಎಂದು ಟ್ವೀಟ್ ಮಾಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...