Homeಮುಖಪುಟಪಡಿತರ ಅಂಗಡಿಯಲ್ಲಿ ಮೋದಿ ಚಿತ್ರ ಇಲ್ಲದಿರುವುದನ್ನು ಕಂಡುಹಿಡಿದ ನಿರ್ಮಲಾ ಸೀತಾರಾಮನ್; ಸಾಮಾಜಿಕ ಮಾಧ್ಯಮದಲ್ಲಿ ಟ್ರೋಲ್

ಪಡಿತರ ಅಂಗಡಿಯಲ್ಲಿ ಮೋದಿ ಚಿತ್ರ ಇಲ್ಲದಿರುವುದನ್ನು ಕಂಡುಹಿಡಿದ ನಿರ್ಮಲಾ ಸೀತಾರಾಮನ್; ಸಾಮಾಜಿಕ ಮಾಧ್ಯಮದಲ್ಲಿ ಟ್ರೋಲ್

ಎಲ್‌ಪಿಜಿ ಸಿಲಿಂಡರ್‌ ಮೇಲೆ ಅದರ ಬೆಲೆ ಹಾಗೂ ಪ್ರಧಾನಿಯ ಚಿತ್ರವನ್ನು ಅಂಟಿಸಿ ‘ತಗೊಳಿ, ಪೋಸ್ಟರ್‌ ಬಂದಿದೆ’ ಎಂದು ವ್ಯಂಗ್ಯವಾಡಲಾಗಿದೆ

- Advertisement -
- Advertisement -

ಬಡತನ ರೇಖೆಗಿಂತ ಕೆಳಗಿರುವ ಜನರಿಗೆ ಉಚಿತವಾಗಿ ಅಕ್ಕಿ ವಿತರಿಸುವ ನ್ಯಾಯಬೆಲೆ ಅಂಗಡಿಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಭಾವಚಿತ್ರವನ್ನು ಪ್ರದರ್ಶಿಸದ ಕಾರಣಕ್ಕೆ ತೆಲಂಗಾಣ ಸರ್ಕಾರದ ವಿರುದ್ಧ ಶುಕ್ರವಾರ ಒಕ್ಕೂಟ ಸರ್ಕಾರದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಆಕ್ರೋಶ ವ್ಯಕ್ತಪಡಿಸಿದ್ದು, ಜಿಲ್ಲಾಧಿಕಾರಿಯನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ವಿಡಿಯೊವನ್ನು ಅವರು ಟ್ವಿಟರ್‌ನಲ್ಲಿ ಪೋಸ್ಟ್‌ ಮಾಡಿದ್ದು, ಹಲವಾರು ಜನರು ಸಚಿವರನ್ನು ಟ್ರೋಲ್ ಮಾಡುತ್ತಿದ್ದಾರೆ.

ಗುರುವಾರದಿಂದ ಬಿಜೆಪಿಯ ಲೋಕಸಭೆ ಪ್ರವಾಸ ಯೋಜನೆ ಕಾರ್ಯಕ್ರಮದ ಅಂಗವಾಗಿ ಎರಡು ದಿನಗಳ ತೆಲಂಗಾಣ ಪ್ರವಾಸದಲ್ಲಿದ್ದ ಸೀತಾರಾಮನ್ ಅವರು ಶುಕ್ರವಾರ ಕಾಮರೆಡ್ಡಿ ಜಿಲ್ಲೆಗೆ ಭೇಟಿ ನೀಡಿ ರಾಜ್ಯದಲ್ಲಿ ಅನುಷ್ಠಾನಗೊಳಿಸುತ್ತಿರುವ ಒಕ್ಕೂಟ ಸರ್ಕಾರದ ವಿವಿಧ ಕಾರ್ಯಕ್ರಮಗಳನ್ನು ಪರಿಶೀಲಿಸಿದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಈ ವೇಳೆ ಅವರು ಬಿರ್ಕೂರ್ ಗ್ರಾಮದ ನ್ಯಾಯಬೆಲೆ ಅಂಗಡಿಯಲ್ಲಿ ನಿಲ್ಲಿಸಿ ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ್ ಅನ್ನ ಯೋಜನೆಯ ಫಲಾನುಭವಿಗಳೊಂದಿಗೆ ಸಂವಾದ ನಡೆಸಿದ್ದರು. ಪರಿಶೀಲನೆ ವೇಳೆ ಅಂಗಡಿಯಲ್ಲಿ ಪ್ರಧಾನಿಯವರ ಭಾವಚಿತ್ರವಾಗಲಿ, ಫ್ಲೆಕ್ಸ್ ಬೋರ್ಡ್ ಆಗಲಿ ಇಲ್ಲದಿರುವುದನ್ನು ಗಮನಿಸಿದ ಅವರು, ಕಾಮರೆಡ್ಡಿ ಜಿಲ್ಲಾಧಿಕಾರಿ ಜಿತೇಶ್ ಪಟೇಲ್ ಅವರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಹುಸಿಯಾದ ತೇಜಸ್ವಿ ಸೂರ್ಯ ಭರವಸೆ: ‘ನನ್ನನ್ನು ಕೇಳಿ ಬ್ಯಾಂಕಲ್ಲಿ ಹಣ ಇಟ್ಟಿದ್ದೀರಾ?’ ಎಂದ ನಿರ್ಮಲಾ ಸೀತಾರಾಮನ್!

ಒಕ್ಕೂಟ ಸರ್ಕಾರದ ಯೋಜನೆಯಡಿ ಅಕ್ಕಿಯನ್ನು ಸರಬರಾಜು ಮಾಡುವ ಪ್ರತಿ ಪಡಿತರ ಅಂಗಡಿಗೆ ಕಡ್ಡಾಯವಾಗಿ ಮೋದಿಯವರ ಫ್ಲೆಕ್ಸ್ ಬೋರ್ಡ್ ಏಕೆ ಇಲ್ಲ ಎಂದು ಈ ವೇಳೆ ಅವರು ಕೇಳಿದ್ದಾರೆ. ನಂತರ ಅವರು ಜಿಲ್ಲೆಯ ಎಲ್ಲ ಅಂಗಡಿಗಳಲ್ಲಿ ಮೋದಿ ಅವರ ಭಾವಚಿತ್ರ ಹಾಕುವಂತೆ ಜಿಲ್ಲಾಧಿಕಾರಿಗೆ ಸೂಚಿಸಿದ್ದಾರೆ. “ಪಡಿತರ ಅಂಗಡಿಗಳಲ್ಲಿ ಪ್ರಧಾನಮಂತ್ರಿಯವರ ಚಿತ್ರಗಳು ತಪ್ಪದೆ ಇರುವಂತೆ ನೋಡಿಕೊಳ್ಳುವುದು ಎಲ್ಲಾ ಜಿಲ್ಲಾಧಿಕಾರಿಗಳ ಜವಾಬ್ದಾರಿಯಾಗಿದೆ” ಎಂದು ಅವರು ಹೇಳಿದ್ದಾರೆ.

ತೆಲಂಗಾಣದಲ್ಲಿ ಉಚಿತ ಪಡಿತರ ಅಕ್ಕಿ ವಿತರಣೆಯಲ್ಲಿ ರಾಜ್ಯ ಮತ್ತು ಒಕ್ಕೂಟ ಸರ್ಕಾರಗಳ ಪಾಲು ಎಷ್ಟು ಎಂಬುವುದು ಗೊತ್ತಿದೆಯೆ ಎಂದು ನಿರ್ಮಲಾ ಸೀತಾರಾಮನ್ ಅವರು ಜಿಲ್ಲಾಧಿಕಾರಿಯನ್ನು ಪ್ರಶ್ನಿಸಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿದ ಜಿಲ್ಲಾಧಿಕಾರಿ ಜಿತೇಶ್‌ ಪಟೇಲ್ ಅವರು ಯೋಜನೆಯ ಸಂಪೂರ್ಣ ವಿವರಗಳನ್ನು ತಾನು ಹೊಂದಿಲ್ಲ ಎಂದು ಹೇಳಿದ್ದು, ಈ ವೇಳೆ ಸಚಿವರು, ಅವರು 30 ನಿಮಿಷಗಳಲ್ಲಿ ಯೋಜನೆಯ ಸಂಪೂರ್ಣ ವಿವರಗಳು ಬೇಕು ಎಂದು ಕೇಳಿದ್ದಾರೆ. ಒಂದು ವೇಳೆ ವಿವರಗಳು ನೀಡಲು ವಿಫಲವಾದರೆ ಪತ್ರಿಕಾಗೋಷ್ಠಿ ಕರೆದು ಟಿಆರ್‌‌ಎಸ್ ಸರ್ಕಾರದವನ್ನು ಎಕ್ಸ್‌‌ಪೋಸ್‌ ಮಾಡುವುದಾಗಿ ಹೇಳಿದ್ದಾರೆ.

ಇದನ್ನೂ ಓದಿ: ದೇಶದಲ್ಲಿ ಲಖಿಂಪುರ್‌ ಖೇರಿಯಂತಹ ಘಟನೆ ನಡೆಯುತ್ತಲೇ ಇರುತ್ತವೆ: ನಿರ್ಮಲಾ ಸೀತಾರಾಮನ್

ಫಲಾನುಭವಿಯೊಂದಿಗೆ ಬೆದರಿಸುವ ರೀತಿಯಲ್ಲಿ ಮಾತನಾಡಲು ಯತ್ನಿಸಿದ ನ್ಯಾಯಬೆಲೆ ಅಂಗಡಿಯ ವ್ಯಾಪಾರಿಯನ್ನೂ ನಿರ್ಮಲಾ ಸೀತಾರಾಮನ್ ತರಾಟೆಗೆ ತೆಗೆದುಕೊಂಡಿದ್ದಾರೆ. ಡೀಲರ್ ವಿರುದ್ಧ ಅಗತ್ಯ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿಗೆ ಸೂಚಿಸಿದ ಅವರು, “ವ್ಯಾಪಾರಿ ನನ್ನ ಮುಂದೆ ಹೇಗೆ ಮಾತನಾಡುತ್ತಾನೆ?” ಅವಳು ಹೇಳಿದ್ದಾರೆ.

ನಿರ್ಮಲಾ ಅವರು ನ್ಯಾಯಬೆಲೆ ಅಂಗಡಿಗೆ ಭೇಟಿ ನೀಡಿರುವುದು ಟಿವಿ ವಾಹಿನಿಗಳಲ್ಲಿ ಹರಿದಾಡುತ್ತಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ವೈರಲ್ ಆಗುತ್ತಿದ್ದಂತೆ ತೆಲಂಗಾಣ ಹಣಕಾಸು ಸಚಿವ ಟಿ ಹರೀಶ್ ರಾವ್ ಅವರು ಪತ್ರಿಕಾಗೋಷ್ಠಿ ಕರೆದು ಅವರ ವರ್ತನೆಯನ್ನು ಖಂಡಿಸಿದ್ದಾರೆ.

ಪಡಿತರ ಅಂಗಡಿಗಳಲ್ಲಿ ಮೋದಿ ಅವರ ಭಾವಚಿತ್ರ ಇಡುವಂತೆ ಒಕ್ಕೂಟ ಸರ್ಕಾರದ ಹಣಕಾಸು ಸಚಿವರು ಒತ್ತಾಯಿಸಿರುವುದು ಹಾಸ್ಯಾಸ್ಪದವಾಗಿದೆ. ಇದು ಪ್ರಧಾನಿಯವರ ಘನತೆಯನ್ನು ಕುಗ್ಗಿಸುವುದಲ್ಲದೆ ಬೇರೇನೂ ಇಲ್ಲ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಇಂಧನ ಬೆಲೆ ಏರಿಕೆ ಬಗ್ಗೆ ನಿಮ್ಮ ರಾಜ್ಯ ಸರ್ಕಾರಗಳನ್ನು ಕೇಳಿ: ನಿರ್ಮಲಾ ಸೀತಾರಾಮನ್‌

ಅನೇಕ ಪ್ರಧಾನಿಗಳು ದೇಶವನ್ನು ಆಳಿದ್ದಾರೆ ಆದರೆ ನ್ಯಾಯಬೆಲೆ ಅಂಗಡಿಗಳಲ್ಲಿ ಅವರ ಭಾವಚಿತ್ರಗಳನ್ನು ಪ್ರದರ್ಶಿಸಬೇಕೆಂದು ಅವರು ಎಂದಿಗೂ ಒತ್ತಾಯಿಸಲಿಲ್ಲ ಎಂದು ಅವರು ಹೇಳಿದ್ದು, ಈಗಿನ ಸರ್ಕಾರ ಕೀಳು ಮಟ್ಟದಲ್ಲಿ ವರ್ತಿಸುತ್ತಿದೆ ಎಂದಿದ್ದಾರೆ.

“ತೆಲಂಗಾಣದಲ್ಲಿ ಉಚಿತ ಅಕ್ಕಿ ಯೋಜನೆಗೆ ಒಕ್ಕೂಟ ಸರ್ಕಾರ ಕೇವಲ 55% ಕೊಡುವು ನೀಡುತ್ತಿದ್ದು, ಉಳಿದ 45% ರಾಜ್ಯ ಸರ್ಕಾರ ನೀಡುತ್ತಿದೆ” ಎಂದು ಅವರು ಹೇಳಿದ್ದಾರೆ. ಉಚಿತ ಅಕ್ಕಿ ಯೋಜನೆಗೆ 3,610 ಕೋಟಿ ರೂ. ವೆಚ್ಚ ಮಾಡುತ್ತಿದ್ದೇವೆ. ಹಾಗಾದರೆ, ಪಡಿತರ ಅಂಗಡಿಗಳಲ್ಲಿ ಮುಖ್ಯಮಂತ್ರಿಗಳ ಚಿತ್ರ ಹಾಕುವಂತೆ ನಾವು ಒತ್ತಾಯಿಸಬೇಕೇ? ಎಂದು ಸಚಿವರು ಪ್ರಶ್ನಿಸಿದ್ದಾರೆ.

ಈ ನಡುವೆ ಹಲವಾರು ಜನರು ಸಚಿವರನ್ನು ಟ್ರೋಲ್ ಮಾಡಿದ್ದಾರೆ. ಚಿತ್ರ ನಟ ಪ್ರಕಾಶ್ ರಾಜ್ ಅವರು, ‘ತಗೊಳಿ, ಪೋಸ್ಟರ್‌ ಬಂದಿದೆ’ ಎಂದು ಎಲ್‌ಪಿಜಿ ಸಿಲಿಂಡರ್‌ ಮೇಲೆ ಅದರ ಬೆಲೆಯೊಂದಿಗೆ ಪ್ರಧಾನಿ ಮೋದಿಯ ಚಿತ್ರವನ್ನು ಅಂಟಿಸಿರುವ ವಿಡಿಯೊವೊಂದನ್ನು ಪೋಸ್ಟ್‌ ಮಾಡಿದ್ದಾರೆ.

ಟಿಆರ್‌ಎಸ್‌ ಪಕ್ಷದ ನಾಯಕ ಕೃಷ್ಣನ್ ಅವರು ಕೂಡಾ ಅದೇ ವಿಡಿಯೊವನ್ನು ಪೋಸ್ಟ್‌ ಮಾಡಿ, ನಿರ್ಮಲಾ ಸೀತಾರಾಮ್‌ ಅವರೆ, ಮೋದಿ ಅವರ ಫೊಟೊ ಬೇಕೇ ತೆಗೆದುಕೊಳ್ಳಿ ಎಂದು ಟ್ವೀಟ್ ಮಾಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...