Homeಮುಖಪುಟಹಲ್ವಾ ಸಮಾರಂಭ ಉಲ್ಲೇಖಿಸಿ ಸರ್ಕಾರದ ವಿರುದ್ದ ರಾಹುಲ್ ವಾಗ್ದಾಳಿ : ಮುಖ ಮುಚ್ಚಿಕೊಂಡ ವಿತ್ತ ಸಚಿವೆ

ಹಲ್ವಾ ಸಮಾರಂಭ ಉಲ್ಲೇಖಿಸಿ ಸರ್ಕಾರದ ವಿರುದ್ದ ರಾಹುಲ್ ವಾಗ್ದಾಳಿ : ಮುಖ ಮುಚ್ಚಿಕೊಂಡ ವಿತ್ತ ಸಚಿವೆ

- Advertisement -
- Advertisement -

ಇಂದು (ಜು.29) ಲೋಕಸಭೆಯಲ್ಲಿ ಮಾತನಾಡಿದ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಬಜೆಟ್ ಅಂಶಗಳನ್ನು ಉಲ್ಲೇಖಿಸಿ ಕೇಂದ್ರ ಸರ್ಕಾರದ ವಿರುದ್ದ ವಾಗ್ದಾಳಿ ನಡೆಸಿದರು.

ಕಳೆದ ಬಾರಿ ಸಂಸತ್‌ನಲ್ಲಿ ಮಾತನಾಡುವಾಗ ರಾಹುಲ್ ಗಾಂಧಿ ಶಿವ, ಗುರುನಾನಕ್, ಏಸುಕ್ರಿಸ್ತ ಸೇರಿದಂತೆ ಧಾರ್ಮಿಕ ನಾಯಕರ ಫೋಟೋ ಪ್ರದರ್ಶಿಸಿದ್ದು, ಆಡಳಿತ ಪಕ್ಷದ ಸದಸ್ಯರ ವಿರೋಧಕ್ಕೆ ಕಾರಣವಾಗಿತ್ತು. ಆದರೆ, ರಾಹುಲ್ ಗಾಂಧಿ ಈ ಬಾರಿಯೂ ವಿಶಿಷ್ಟ ಫೋಟೋವೊಂದನ್ನು ಪ್ರದರ್ಶಿಸಿ ಸರ್ಕಾರದ ವಿರುದ್ದ ಕಿಡಿಕಾರಿದರು.

ಈ ಬಾರಿಯ ಬಜೆಟ್ ಮಂಡನೆಗೂ ಮುನ್ನ ಸಂಪ್ರದಾಯದಂತೆ ನಡೆದ ಹಲ್ವಾ ಸಮಾರಂಭದ ಫೋಟೋ ಪ್ರದರ್ಶಿಸಿದ ರಾಹುಲ್ ಗಾಂಧಿ, “ಸರ್ ಇದು ಬಜೆಟ್‌ ಮಂಡನೆಗೂ ಮುನ್ನ ನಡೆದ ಹಲ್ವಾ ಸಮಾರಂಭದ ಫೋಟೋ. ಇದರಲ್ಲಿ ನನಗೆ ಒಬ್ಬನೇ ಒಬ್ಬ ಒಬಿಸಿ, ಆದಿವಾಸಿ ಮತ್ತು ದಲಿತ ಅಧಿಕಾರಿ ಕಾಣುತ್ತಿಲ್ಲ. ಕೇವಲ 20 ಅಧಿಕಾರಿಗಳು ಸೇರಿಕೊಂಡು ಬಜೆಟ್ ಸಿದ್ದಪಡಿಸಿದ್ದಾರೆ. ಇದರರ್ಥ ಭಾರತ ಹಲ್ವಾವನ್ನು 20 ಅಧಿಕಾರಿಗಳು ಹಂಚಿಕೊಂಡಿದ್ದಾರೆ. ಅದರಲ್ಲಿ ಶೇ.73 ರಷ್ಟು ಪ್ರಾತಿನಿಧ್ಯ ಇಲ್ಲವೇ ಇಲ್ಲ. 20 ಅಧಿಕಾರಿಗಳಲ್ಲಿ ದೇಶದ 90 ಶೇ. ಜನರ ಪ್ರತಿನಿಧಿಯಾಗಿ ಇಬ್ಬರಿದ್ದರು. ಒಬ್ಬರು ಅಲ್ಪಸಂಖ್ಯಾತರು ಮತ್ತೊಬ್ಬರು ಒಬಿಸಿ ಅಧಿಕಾರಿ. ಆದರೆ, ಈ ಫೋಟೋದಲ್ಲಿ ಅವರೂ ಇಲ್ಲ. ಅಂದರೆ, ಫೋಟೋ ತೆಗೆಯುವ ವೇಳೆ ಅವರನ್ನು ಹಿಂಬಂದಿ ನಿಲ್ಲಿಸಲಾಗಿದೆ” ಎಂದರು. ಜಾತಿ ಜನಗಣತಿಗೆ ಆಗ್ರಹಿಸಿದರು.

ರಾಹುಲ್ ಗಾಂಧಿ ಫೋಟೋ ಪ್ರದರ್ಶಿಸುವ ವೇಳೆ ಸ್ವೀಕರ್ ಓಂ ಬಿರ್ಲಾ ಮಧ್ಯ ಪ್ರವೇಶಿಸಿ ಫೋಟೋ ಪ್ರದರ್ಶಿಸಿದಂತೆ ಸೂಚಿಸಿದರು. “ನೀವು ಈಗ ಪ್ರತಿಪಕ್ಷದ ನಾಯಕರಾಗಿದ್ದೀರಿ. ಸದನದ ಗೌರವನ್ನು ಕಾಪಾಡಿಕೊಳ್ಳುತ್ತೀರಿ ಎಂದು ನಾನು ನಿರೀಕ್ಷಿಸುತ್ತೇನೆ” ಎಂದು ಸ್ಪೀಕರ್ ಹೇಳಿದರು.

ಈ ವೇಳೆ ರಾಹುಲ್ ಗಾಂಧಿ, “ಸರ್ ನೀವು ಟಿವಿ ಆಫ್ ಮಾಡಿದ್ದೀರಿ. ನಾನು ಫೋಟೋ ತೋರಿಸುವಾಗ ಅವರೇಕೆ ಹೆದರುತ್ತಾರೆ?” ಎಂದು ಆಡಳಿತ ಪಕ್ಷಕ್ಕೆ ಕುಟುಕಿದರು.

ಪೋಸ್ಟರ್ ತೋರಿಸಲು ಬಿಡುವುದಿಲ್ಲ, ಅದು ಸರಿಯಲ್ಲ ಎಂದು ಸ್ಪೀಕರ್ ಬಿರ್ಲಾ ಹೇಳಿದರು. ಆಗ ರಾಹುಲ್ ಗಾಂಧಿ “ನಾನು ಕ್ಷಮೆಯಾಚಿಸುತ್ತೇನೆ. ಆದರೆ, ನಾನು ಫೋಸ್ಟರ್ ತೋರಿಸಿಲ್ಲ, ಫೋಟೋ ತೋರಿಸಿದ್ದೇನೆ” ಎಂದರು.

ಮುಖ ಮುಚ್ಚಿಕೊಂಡ ವಿತ್ತಸಚಿವೆ :

ರಾಹುಲ್ ಗಾಂಧಿ ಹಲ್ವಾ ಸಮಾರಂಭ ಉಲ್ಲೇಖಿಸಿ ಜಾತಿ ತಾರತಮ್ಯದ ಗಂಭೀರತೆಯನ್ನು ಪ್ರಸ್ತಾಪಿಸುವಾಗ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಮುಖವನ್ನು ಕೈಯಿಂದ ಮುಚ್ಚಿಕೊಂಡು, ನಗುವ ಮೂಲಕ ಪ್ರತಿಪಕ್ಷ ನಾಯಕನ ಹೇಳಿಕೆಯನ್ನು ತಮಾಷೆಯಾಗಿ ಸ್ವೀಕರಿಸಿದ್ದು ಕಂಡು ಬಂತು. ವಿತ್ತ ಸಚಿವೆಯ ಈ ನಡೆಗೆ ಸಾಮಾಜಿಕ ಜಾಲತಾಣಗಳಲ್ಲಿ ಸಾರ್ವಜನಿಕರಿಂದ ಟೀಕೆ ವ್ಯಕ್ತವಾಗಿದೆ.

ಇದನ್ನೂ ಓದಿ : ಕಾಲಿಗೆ ಸರಪಳಿ ಬಿಗಿದ ಸ್ಥಿತಿಯಲ್ಲಿ ವಿದೇಶಿ ಮಹಿಳೆ ಕಾಡಿನಲ್ಲಿ ಪತ್ತೆ; ಜೇಬಿನಲ್ಲಿ ಯುಎಸ್ ಪಾಸ್‌ಪೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...