Homeಮುಖಪುಟಹಲ್ವಾ ಸಮಾರಂಭ ಉಲ್ಲೇಖಿಸಿ ಸರ್ಕಾರದ ವಿರುದ್ದ ರಾಹುಲ್ ವಾಗ್ದಾಳಿ : ಮುಖ ಮುಚ್ಚಿಕೊಂಡ ವಿತ್ತ ಸಚಿವೆ

ಹಲ್ವಾ ಸಮಾರಂಭ ಉಲ್ಲೇಖಿಸಿ ಸರ್ಕಾರದ ವಿರುದ್ದ ರಾಹುಲ್ ವಾಗ್ದಾಳಿ : ಮುಖ ಮುಚ್ಚಿಕೊಂಡ ವಿತ್ತ ಸಚಿವೆ

- Advertisement -
- Advertisement -

ಇಂದು (ಜು.29) ಲೋಕಸಭೆಯಲ್ಲಿ ಮಾತನಾಡಿದ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಬಜೆಟ್ ಅಂಶಗಳನ್ನು ಉಲ್ಲೇಖಿಸಿ ಕೇಂದ್ರ ಸರ್ಕಾರದ ವಿರುದ್ದ ವಾಗ್ದಾಳಿ ನಡೆಸಿದರು.

ಕಳೆದ ಬಾರಿ ಸಂಸತ್‌ನಲ್ಲಿ ಮಾತನಾಡುವಾಗ ರಾಹುಲ್ ಗಾಂಧಿ ಶಿವ, ಗುರುನಾನಕ್, ಏಸುಕ್ರಿಸ್ತ ಸೇರಿದಂತೆ ಧಾರ್ಮಿಕ ನಾಯಕರ ಫೋಟೋ ಪ್ರದರ್ಶಿಸಿದ್ದು, ಆಡಳಿತ ಪಕ್ಷದ ಸದಸ್ಯರ ವಿರೋಧಕ್ಕೆ ಕಾರಣವಾಗಿತ್ತು. ಆದರೆ, ರಾಹುಲ್ ಗಾಂಧಿ ಈ ಬಾರಿಯೂ ವಿಶಿಷ್ಟ ಫೋಟೋವೊಂದನ್ನು ಪ್ರದರ್ಶಿಸಿ ಸರ್ಕಾರದ ವಿರುದ್ದ ಕಿಡಿಕಾರಿದರು.

ಈ ಬಾರಿಯ ಬಜೆಟ್ ಮಂಡನೆಗೂ ಮುನ್ನ ಸಂಪ್ರದಾಯದಂತೆ ನಡೆದ ಹಲ್ವಾ ಸಮಾರಂಭದ ಫೋಟೋ ಪ್ರದರ್ಶಿಸಿದ ರಾಹುಲ್ ಗಾಂಧಿ, “ಸರ್ ಇದು ಬಜೆಟ್‌ ಮಂಡನೆಗೂ ಮುನ್ನ ನಡೆದ ಹಲ್ವಾ ಸಮಾರಂಭದ ಫೋಟೋ. ಇದರಲ್ಲಿ ನನಗೆ ಒಬ್ಬನೇ ಒಬ್ಬ ಒಬಿಸಿ, ಆದಿವಾಸಿ ಮತ್ತು ದಲಿತ ಅಧಿಕಾರಿ ಕಾಣುತ್ತಿಲ್ಲ. ಕೇವಲ 20 ಅಧಿಕಾರಿಗಳು ಸೇರಿಕೊಂಡು ಬಜೆಟ್ ಸಿದ್ದಪಡಿಸಿದ್ದಾರೆ. ಇದರರ್ಥ ಭಾರತ ಹಲ್ವಾವನ್ನು 20 ಅಧಿಕಾರಿಗಳು ಹಂಚಿಕೊಂಡಿದ್ದಾರೆ. ಅದರಲ್ಲಿ ಶೇ.73 ರಷ್ಟು ಪ್ರಾತಿನಿಧ್ಯ ಇಲ್ಲವೇ ಇಲ್ಲ. 20 ಅಧಿಕಾರಿಗಳಲ್ಲಿ ದೇಶದ 90 ಶೇ. ಜನರ ಪ್ರತಿನಿಧಿಯಾಗಿ ಇಬ್ಬರಿದ್ದರು. ಒಬ್ಬರು ಅಲ್ಪಸಂಖ್ಯಾತರು ಮತ್ತೊಬ್ಬರು ಒಬಿಸಿ ಅಧಿಕಾರಿ. ಆದರೆ, ಈ ಫೋಟೋದಲ್ಲಿ ಅವರೂ ಇಲ್ಲ. ಅಂದರೆ, ಫೋಟೋ ತೆಗೆಯುವ ವೇಳೆ ಅವರನ್ನು ಹಿಂಬಂದಿ ನಿಲ್ಲಿಸಲಾಗಿದೆ” ಎಂದರು. ಜಾತಿ ಜನಗಣತಿಗೆ ಆಗ್ರಹಿಸಿದರು.

ರಾಹುಲ್ ಗಾಂಧಿ ಫೋಟೋ ಪ್ರದರ್ಶಿಸುವ ವೇಳೆ ಸ್ವೀಕರ್ ಓಂ ಬಿರ್ಲಾ ಮಧ್ಯ ಪ್ರವೇಶಿಸಿ ಫೋಟೋ ಪ್ರದರ್ಶಿಸಿದಂತೆ ಸೂಚಿಸಿದರು. “ನೀವು ಈಗ ಪ್ರತಿಪಕ್ಷದ ನಾಯಕರಾಗಿದ್ದೀರಿ. ಸದನದ ಗೌರವನ್ನು ಕಾಪಾಡಿಕೊಳ್ಳುತ್ತೀರಿ ಎಂದು ನಾನು ನಿರೀಕ್ಷಿಸುತ್ತೇನೆ” ಎಂದು ಸ್ಪೀಕರ್ ಹೇಳಿದರು.

ಈ ವೇಳೆ ರಾಹುಲ್ ಗಾಂಧಿ, “ಸರ್ ನೀವು ಟಿವಿ ಆಫ್ ಮಾಡಿದ್ದೀರಿ. ನಾನು ಫೋಟೋ ತೋರಿಸುವಾಗ ಅವರೇಕೆ ಹೆದರುತ್ತಾರೆ?” ಎಂದು ಆಡಳಿತ ಪಕ್ಷಕ್ಕೆ ಕುಟುಕಿದರು.

ಪೋಸ್ಟರ್ ತೋರಿಸಲು ಬಿಡುವುದಿಲ್ಲ, ಅದು ಸರಿಯಲ್ಲ ಎಂದು ಸ್ಪೀಕರ್ ಬಿರ್ಲಾ ಹೇಳಿದರು. ಆಗ ರಾಹುಲ್ ಗಾಂಧಿ “ನಾನು ಕ್ಷಮೆಯಾಚಿಸುತ್ತೇನೆ. ಆದರೆ, ನಾನು ಫೋಸ್ಟರ್ ತೋರಿಸಿಲ್ಲ, ಫೋಟೋ ತೋರಿಸಿದ್ದೇನೆ” ಎಂದರು.

ಮುಖ ಮುಚ್ಚಿಕೊಂಡ ವಿತ್ತಸಚಿವೆ :

ರಾಹುಲ್ ಗಾಂಧಿ ಹಲ್ವಾ ಸಮಾರಂಭ ಉಲ್ಲೇಖಿಸಿ ಜಾತಿ ತಾರತಮ್ಯದ ಗಂಭೀರತೆಯನ್ನು ಪ್ರಸ್ತಾಪಿಸುವಾಗ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಮುಖವನ್ನು ಕೈಯಿಂದ ಮುಚ್ಚಿಕೊಂಡು, ನಗುವ ಮೂಲಕ ಪ್ರತಿಪಕ್ಷ ನಾಯಕನ ಹೇಳಿಕೆಯನ್ನು ತಮಾಷೆಯಾಗಿ ಸ್ವೀಕರಿಸಿದ್ದು ಕಂಡು ಬಂತು. ವಿತ್ತ ಸಚಿವೆಯ ಈ ನಡೆಗೆ ಸಾಮಾಜಿಕ ಜಾಲತಾಣಗಳಲ್ಲಿ ಸಾರ್ವಜನಿಕರಿಂದ ಟೀಕೆ ವ್ಯಕ್ತವಾಗಿದೆ.

ಇದನ್ನೂ ಓದಿ : ಕಾಲಿಗೆ ಸರಪಳಿ ಬಿಗಿದ ಸ್ಥಿತಿಯಲ್ಲಿ ವಿದೇಶಿ ಮಹಿಳೆ ಕಾಡಿನಲ್ಲಿ ಪತ್ತೆ; ಜೇಬಿನಲ್ಲಿ ಯುಎಸ್ ಪಾಸ್‌ಪೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಮೋದಿ ಕ್ರಿಶ್ಚಿಯನ್ ಸಂಸ್ಥೆಗಳಲ್ಲಿ ಭಯ ಹುಟ್ಟಿಸಲು ಪ್ರಯತ್ನಿಸುತ್ತಿದ್ದಾರೆ’: ಎಫ್‌ಸಿಆರ್‌ಎ ತಿದ್ದುಪಡಿ ಕುರಿತು ಮಲ್ಲಿಕಾರ್ಜುನ ಖರ್ಗೆ

ಇಡುಕ್ಕಿ (ಕೇರಳ): ಸಾರ್ವಜನಿಕ ಮತ್ತು ಸಾಮಾಜಿಕ ಕಲ್ಯಾಣ ಕ್ಷೇತ್ರದಲ್ಲಿ ಕೆಲಸ ಮಾಡುವ ಕ್ರಿಶ್ಚಿಯನ್ ಸಂಸ್ಥೆಗಳು, ಎನ್‌ಜಿಒಗಳು ಮತ್ತು ನಾಗರಿಕ ಸಮಾಜದ ಮೇಲೆ ದಾಳಿ ಮಾಡಲು ಪ್ರಧಾನಿ ನರೇಂದ್ರ ಮೋದಿ ಎಫ್‌ಸಿಆರ್‌ಎ (ವಿದೇಶಿ ದೇಣಿಗೆ...

ವೈದ್ಯಕೀಯ, ತಾಂತ್ರಿಕ ಶಿಕ್ಷಣದಲ್ಲಿ ಎಸ್‌ಸಿ/ಎಸ್‌ಟಿ ಮೀಸಲಾತಿ ಹೆಚ್ಚಿಸಿದ ಒಡಿಶಾ ಸರ್ಕಾರ, ಒಬಿಸಿ ವಿದ್ಯಾರ್ಥಿಗಳಿಗೆ ಹೊಸ ಕೋಟಾ

ಮಹತ್ವದ ನಿರ್ಧಾರ ಕೈಗೊಂಡಿರುವ ಒಡಿಶಾ ಸರ್ಕಾರ, ವೈದ್ಯಕೀಯ, ಇಂಜಿನಿಯರಿಂಗ್ ಮತ್ತು ಇತರ ತಾಂತ್ರಿಕ ಹಾಗೂ ವೃತ್ತಿಪರ ಶಿಕ್ಷಣ ಕೋರ್ಸ್‌ಗಳಲ್ಲಿ ಪರಿಶಿಷ್ಟ ಪಂಗಡ (ಎಸ್‌ಟಿ), ಪರಿಶಿಷ್ಟ ಜಾತಿ (ಎಸ್‌ಸಿ) ಅಭ್ಯರ್ಥಿಗಳಿಗೆ ಮೀಸಲಾತಿಯನ್ನು ಗಣನೀಯವಾಗಿ ಹೆಚ್ಚಿಸಿದೆ....

ಶಾಲಾ ವಾರ್ಷಿಕೋತ್ಸವದಲ್ಲಿ ಲವಲವಿಕೆಯಿಂದ ಭಾಗವಹಿಸಿದ್ದ 6 ಮಕ್ಕಳು, ತಡರಾತ್ರಿ ಹೊತ್ತಿಗೆ ಶವವಾದರು : ಮಹಾರಾಷ್ಟ್ರದಲ್ಲೊಂದು ಹೃದಯ ವಿದ್ರಾವಕ ಘಟನೆ

ಶಾಲಾ ವಾರ್ಷಿಕೋತ್ಸವದಲ್ಲಿ ಬಹಳ ಉತ್ಸಾಹದಿಂದ ಭಾಗವಹಿಸಿದ್ದ ಆರು ಮಂದಿ ಮಕ್ಕಳು, ತಡ ರಾತ್ರಿ ಹೊತ್ತಿಗೆ ಶವವಾದ ಹೃದಯ ವಿದ್ರಾವಕ ಘಟನೆಯೊಂದು ಮಹಾರಾಷ್ಟ್ರದ ದಿಂಡೋರಿಯಲ್ಲಿ ಶುಕ್ರವಾರ (ಏ.3) ನಡೆದಿದೆ. ನಾಸಿಕ್‌ ನಗರದಿಂದ 20 ಕಿಲೋ...

ಕೇರಳ: ಕೊಲ್ಲಂನಲ್ಲಿ ಟಿವಿ ಚಾನೆಲ್ ಕಚೇರಿ ಮೇಲೆ ಸ್ಫೋಟಕ ವಸ್ತು ಎಸೆತ

ಕೊಲ್ಲಂ: ಇಲ್ಲಿನ ಟಿವಿ ಚಾನೆಲ್ ಒಂದರ ಕಚೇರಿಯ ಮೇಲೆ ಭಾನುವಾರ ಬೆಳಿಗ್ಗೆ ಸ್ಫೋಟಕ ವಸ್ತು ಎಸೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಪೊಲೀಸರ ಪ್ರಕಾರ, ಆ ಪ್ರದೇಶ ಮತ್ತು ಚಾನೆಲ್ ಕಚೇರಿಯ ಸಿಸಿಟಿವಿ ದೃಶ್ಯಗಳಲ್ಲಿ ಇಬ್ಬರು...

ಹತ್ಯೆಯಾದ ಇರಾನ್ ಕಮಾಂಡರ್ ಖಾಸಿಮ್ ಸುಲೈಮಾನಿ ಅವರ ಸೊಸೆ, ಮೊಮ್ಮಗಳನ್ನು ಬಂಧಿಸಿದ ಅಮೆರಿಕ

ನವದೆಹಲಿ: ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರೂಬಿಯೊ ಶುಕ್ರವಾರ ತಮ್ಮ ಶಾಶ್ವತ ನಿವಾಸಿ ಸ್ಥಾನಮಾನವನ್ನು ರದ್ದುಗೊಳಿಸಿದ ನಂತರ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (ಐಆರ್‌ಜಿಸಿ) ನ ದಿವಂಗತ ನಾಯಕ ಖಾಸಿಮ್ ಸೊಲೈಮಾನಿ ಅವರ...

ಇರಾನ್ ಮೇಲೆ ಬೃಹತ್ ದಾಳಿ: ಹಲವು ಉನ್ನತ ನಾಯಕರನ್ನು ಕೊಲ್ಲಲಾಗಿದೆ ಎಂದು ವಿಡಿಯೋ ಹಂಚಿಕೊಂಡ ಟ್ರಂಪ್

ಟೆಹ್ರಾನ್ ಮೇಲೆ ನಡೆದ ದಾಳಿಯ ವೀಡಿಯೊವನ್ನು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹಂಚಿಕೊಂಡಿದ್ದು, ಹಲವಾರು ಇರಾನ್ ಮಿಲಿಟರಿ ನಾಯಕರ ಸಾವಿಗೆ ಅದು ಕಾರಣ ಎಂದು ಹೇಳಿಕೊಂಡಿದ್ದಾರೆ. "ಟೆಹ್ರಾನ್‌ನಲ್ಲಿ ನಡೆದ ಈ ಬೃಹತ್ ದಾಳಿಯೊಂದಿಗೆ, ಇರಾನ್‌ನ...

ಅಸ್ಸಾಂ ಚುನಾವಣೆ : ನುಸುಳುಕೋರರಿಂದ ಯುವ ಕಲ್ಯಾಣಕ್ಕೆ ವರಸೆ ಬದಲಿಸಿದ ಬಿಜೆಪಿ

ಅಸ್ಸಾಂ ವಿಧಾನಸಭಾ ಚುನಾವಣೆಗೆ ನಾಲ್ಕು ದಿನಗಳು ಬಾಕಿ ಇರುವಾಗ ಬಿಜೆಪಿ ತನ್ನ ಪ್ರಚಾರದ ವರಸೆಯನ್ನು ಬದಲಿಸಿಕೊಂಡಿದೆ. ನುಸುಳುಕೋರರನ್ನು ಹೊರಹಾಕುತ್ತೇವೆ, ಅಕ್ರಮ ವಲಸೆಗೆ ಕಡಿವಾಣ ಹಾಕುತ್ತೇವೆಂದು ಅಬ್ಬರಿಸುತ್ತಿದ್ದ ಬಿಜೆಪಿಗರು, ಈಗ ನುಸುಳಕೋರರ ವಿಷಯವನ್ನು ಬದಿಗೊತ್ತಿದ್ದಾರೆ....

ಕುಡಿದ ಮತ್ತಿನಲ್ಲಿ ಕಾರು ಚಾಲನೆ: ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ 19ವರ್ಷದ ಯುವಕ ಸಾವು 

ಬೆಂಗಳೂರು: ಕುಡಿದ ಮತ್ತಿನಲ್ಲಿ ಹದಿಹರೆಯದ ಯುವಕನೊಬ್ಬ ಚಲಾಯಿಸುತ್ತಿದ್ದ ಕಾರು, 19 ವರ್ಷದ ಯುವಕನ ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಆತ ಸಾವನ್ನಪ್ಪಿದ್ದಾನೆ. ಮಲ್ಲೇಶಪಾಳ್ಯದ ಮಾರುತಿನಗರದ 10 ನೇ ಮುಖ್ಯ ರಸ್ತೆಯಲ್ಲಿ ಶುಕ್ರವಾರ ತಡರಾತ್ರಿ...

ಏಳು ವರ್ಷಗಳಲ್ಲಿ ಮೊದಲ ಬಾರಿಗೆ ಇರಾನ್‌ನಿಂದ ತೈಲ ಖರೀದಿಸಿದ ಭಾರತ

ಮಧ್ಯಪ್ರಾಚ್ಯ ಸಂಘರ್ಷದಿಂದಾಗಿ ಹಾರ್ಮುಜ್ ಜಲಸಂಧಿಯ ಮೂಲಕ ಸರಬರಾಜಿನಲ್ಲಿ ಅಡ್ಡಿ ಉಂಟಾಗಿರುವ ಮಧ್ಯೆ, ಭಾರತೀಯ ಸಂಸ್ಕರಣಾಗಾರರು ಇರಾನ್ ತೈಲವನ್ನು ಖರೀದಿಸಿದ್ದಾರೆ ಎಂದು ತೈಲ ಸಚಿವಾಲಯ ಶನಿವಾರ (ಏ.4) ತಿಳಿಸಿರುವುದಾಗಿ ರಾಯಿಟರ್ಸ್ ವರದಿ ಮಾಡಿದೆ. ವಿಶ್ವದ...

ಉತ್ತರ ಪ್ರದೇಶ: ವಿದ್ಯಾರ್ಥಿ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆ ಇಬ್ಬರು ಮದರಸಾ ಶಿಕ್ಷಕರ ಬಂಧನ

ಹತ್ತು ವರ್ಷದ ವಿದ್ಯಾರ್ಥಿಯೊಬ್ಬನನ್ನು ಥಳಿಸಿದ ಆರೋಪದ ಮೇಲೆ ಇಬ್ಬರು ಮದರಸಾ ಶಿಕ್ಷಕರನ್ನು ಬಂಧಿಸಿರುವುದಾಗಿ ಉತ್ತರ ಪ್ರದೇಶ ಪೊಲೀಸರು ಶನಿವಾರ ತಿಳಿಸಿದ್ದಾರೆ.  ಈ ಸಂಬಂಧ ವೀಡಿಯೊ ಅಂತರ್ಜಾಲದಲ್ಲಿ ವೈರಲ್ ಆಗಿದ್ದು, ದಿನಾಂಕವಿಲ್ಲದ ವೀಡಿಯೊದಲ್ಲಿ ಒಬ್ಬ ಮದರಸಾ...