Homeಮುಖಪುಟಹಲ್ವಾ ಸಮಾರಂಭ ಉಲ್ಲೇಖಿಸಿ ಸರ್ಕಾರದ ವಿರುದ್ದ ರಾಹುಲ್ ವಾಗ್ದಾಳಿ : ಮುಖ ಮುಚ್ಚಿಕೊಂಡ ವಿತ್ತ ಸಚಿವೆ

ಹಲ್ವಾ ಸಮಾರಂಭ ಉಲ್ಲೇಖಿಸಿ ಸರ್ಕಾರದ ವಿರುದ್ದ ರಾಹುಲ್ ವಾಗ್ದಾಳಿ : ಮುಖ ಮುಚ್ಚಿಕೊಂಡ ವಿತ್ತ ಸಚಿವೆ

- Advertisement -
- Advertisement -

ಇಂದು (ಜು.29) ಲೋಕಸಭೆಯಲ್ಲಿ ಮಾತನಾಡಿದ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಬಜೆಟ್ ಅಂಶಗಳನ್ನು ಉಲ್ಲೇಖಿಸಿ ಕೇಂದ್ರ ಸರ್ಕಾರದ ವಿರುದ್ದ ವಾಗ್ದಾಳಿ ನಡೆಸಿದರು.

ಕಳೆದ ಬಾರಿ ಸಂಸತ್‌ನಲ್ಲಿ ಮಾತನಾಡುವಾಗ ರಾಹುಲ್ ಗಾಂಧಿ ಶಿವ, ಗುರುನಾನಕ್, ಏಸುಕ್ರಿಸ್ತ ಸೇರಿದಂತೆ ಧಾರ್ಮಿಕ ನಾಯಕರ ಫೋಟೋ ಪ್ರದರ್ಶಿಸಿದ್ದು, ಆಡಳಿತ ಪಕ್ಷದ ಸದಸ್ಯರ ವಿರೋಧಕ್ಕೆ ಕಾರಣವಾಗಿತ್ತು. ಆದರೆ, ರಾಹುಲ್ ಗಾಂಧಿ ಈ ಬಾರಿಯೂ ವಿಶಿಷ್ಟ ಫೋಟೋವೊಂದನ್ನು ಪ್ರದರ್ಶಿಸಿ ಸರ್ಕಾರದ ವಿರುದ್ದ ಕಿಡಿಕಾರಿದರು.

ಈ ಬಾರಿಯ ಬಜೆಟ್ ಮಂಡನೆಗೂ ಮುನ್ನ ಸಂಪ್ರದಾಯದಂತೆ ನಡೆದ ಹಲ್ವಾ ಸಮಾರಂಭದ ಫೋಟೋ ಪ್ರದರ್ಶಿಸಿದ ರಾಹುಲ್ ಗಾಂಧಿ, “ಸರ್ ಇದು ಬಜೆಟ್‌ ಮಂಡನೆಗೂ ಮುನ್ನ ನಡೆದ ಹಲ್ವಾ ಸಮಾರಂಭದ ಫೋಟೋ. ಇದರಲ್ಲಿ ನನಗೆ ಒಬ್ಬನೇ ಒಬ್ಬ ಒಬಿಸಿ, ಆದಿವಾಸಿ ಮತ್ತು ದಲಿತ ಅಧಿಕಾರಿ ಕಾಣುತ್ತಿಲ್ಲ. ಕೇವಲ 20 ಅಧಿಕಾರಿಗಳು ಸೇರಿಕೊಂಡು ಬಜೆಟ್ ಸಿದ್ದಪಡಿಸಿದ್ದಾರೆ. ಇದರರ್ಥ ಭಾರತ ಹಲ್ವಾವನ್ನು 20 ಅಧಿಕಾರಿಗಳು ಹಂಚಿಕೊಂಡಿದ್ದಾರೆ. ಅದರಲ್ಲಿ ಶೇ.73 ರಷ್ಟು ಪ್ರಾತಿನಿಧ್ಯ ಇಲ್ಲವೇ ಇಲ್ಲ. 20 ಅಧಿಕಾರಿಗಳಲ್ಲಿ ದೇಶದ 90 ಶೇ. ಜನರ ಪ್ರತಿನಿಧಿಯಾಗಿ ಇಬ್ಬರಿದ್ದರು. ಒಬ್ಬರು ಅಲ್ಪಸಂಖ್ಯಾತರು ಮತ್ತೊಬ್ಬರು ಒಬಿಸಿ ಅಧಿಕಾರಿ. ಆದರೆ, ಈ ಫೋಟೋದಲ್ಲಿ ಅವರೂ ಇಲ್ಲ. ಅಂದರೆ, ಫೋಟೋ ತೆಗೆಯುವ ವೇಳೆ ಅವರನ್ನು ಹಿಂಬಂದಿ ನಿಲ್ಲಿಸಲಾಗಿದೆ” ಎಂದರು. ಜಾತಿ ಜನಗಣತಿಗೆ ಆಗ್ರಹಿಸಿದರು.

ರಾಹುಲ್ ಗಾಂಧಿ ಫೋಟೋ ಪ್ರದರ್ಶಿಸುವ ವೇಳೆ ಸ್ವೀಕರ್ ಓಂ ಬಿರ್ಲಾ ಮಧ್ಯ ಪ್ರವೇಶಿಸಿ ಫೋಟೋ ಪ್ರದರ್ಶಿಸಿದಂತೆ ಸೂಚಿಸಿದರು. “ನೀವು ಈಗ ಪ್ರತಿಪಕ್ಷದ ನಾಯಕರಾಗಿದ್ದೀರಿ. ಸದನದ ಗೌರವನ್ನು ಕಾಪಾಡಿಕೊಳ್ಳುತ್ತೀರಿ ಎಂದು ನಾನು ನಿರೀಕ್ಷಿಸುತ್ತೇನೆ” ಎಂದು ಸ್ಪೀಕರ್ ಹೇಳಿದರು.

ಈ ವೇಳೆ ರಾಹುಲ್ ಗಾಂಧಿ, “ಸರ್ ನೀವು ಟಿವಿ ಆಫ್ ಮಾಡಿದ್ದೀರಿ. ನಾನು ಫೋಟೋ ತೋರಿಸುವಾಗ ಅವರೇಕೆ ಹೆದರುತ್ತಾರೆ?” ಎಂದು ಆಡಳಿತ ಪಕ್ಷಕ್ಕೆ ಕುಟುಕಿದರು.

ಪೋಸ್ಟರ್ ತೋರಿಸಲು ಬಿಡುವುದಿಲ್ಲ, ಅದು ಸರಿಯಲ್ಲ ಎಂದು ಸ್ಪೀಕರ್ ಬಿರ್ಲಾ ಹೇಳಿದರು. ಆಗ ರಾಹುಲ್ ಗಾಂಧಿ “ನಾನು ಕ್ಷಮೆಯಾಚಿಸುತ್ತೇನೆ. ಆದರೆ, ನಾನು ಫೋಸ್ಟರ್ ತೋರಿಸಿಲ್ಲ, ಫೋಟೋ ತೋರಿಸಿದ್ದೇನೆ” ಎಂದರು.

ಮುಖ ಮುಚ್ಚಿಕೊಂಡ ವಿತ್ತಸಚಿವೆ :

ರಾಹುಲ್ ಗಾಂಧಿ ಹಲ್ವಾ ಸಮಾರಂಭ ಉಲ್ಲೇಖಿಸಿ ಜಾತಿ ತಾರತಮ್ಯದ ಗಂಭೀರತೆಯನ್ನು ಪ್ರಸ್ತಾಪಿಸುವಾಗ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಮುಖವನ್ನು ಕೈಯಿಂದ ಮುಚ್ಚಿಕೊಂಡು, ನಗುವ ಮೂಲಕ ಪ್ರತಿಪಕ್ಷ ನಾಯಕನ ಹೇಳಿಕೆಯನ್ನು ತಮಾಷೆಯಾಗಿ ಸ್ವೀಕರಿಸಿದ್ದು ಕಂಡು ಬಂತು. ವಿತ್ತ ಸಚಿವೆಯ ಈ ನಡೆಗೆ ಸಾಮಾಜಿಕ ಜಾಲತಾಣಗಳಲ್ಲಿ ಸಾರ್ವಜನಿಕರಿಂದ ಟೀಕೆ ವ್ಯಕ್ತವಾಗಿದೆ.

ಇದನ್ನೂ ಓದಿ : ಕಾಲಿಗೆ ಸರಪಳಿ ಬಿಗಿದ ಸ್ಥಿತಿಯಲ್ಲಿ ವಿದೇಶಿ ಮಹಿಳೆ ಕಾಡಿನಲ್ಲಿ ಪತ್ತೆ; ಜೇಬಿನಲ್ಲಿ ಯುಎಸ್ ಪಾಸ್‌ಪೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನಾಸಿಕ್‌| ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು ಬಿಟ್ಟ ಪ್ರತಿಭಟನಾಕಾರರು

ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ನಿಫಾದ್ ನಗರ ಪಂಚಾಯತ್ ವ್ಯಾಪ್ತಿಯಲ್ಲಿ ಬೀದಿ ನಾಯಿಗಳ ಹಾವಳಿಯನ್ನು ಖಂಡಿಸಿ ಮತ್ತು ಅಧಿಕಾರಿಗಳ ನಿರ್ಲಕ್ಷ್ಯವನ್ನು ಖಂಡಿಸಿದ ಪ್ರತಿಭಟನಾಕಾರರ ಗುಂಪೊಂದು ನಗರ ಪಂಚಾಯತ್ ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು...

ವಿವಾಹಿತೆ ಮೇಲೆ ಅತ್ಯಾಚಾರ ಆರೋಪ : ಬಿಜೆಪಿ ಮಾಜಿ ಶಾಸಕನ ವಿರುದ್ಧ ಎಫ್‌ಐಆರ್

ಗನ್‌ ಪಾಯಿಂಟ್‌ ಇಟ್ಟು ಬೆದರಿಸಿ 22 ವರ್ಷದ ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಮಹಾರಾಷ್ಟ್ರದ ಬಿಜೆಪಿ ಮಾಜಿ ಶಾಸಕ ಮತ್ತು ವಜಾಗೊಂಡಿರುವ ಪೊಲೀಸ್ ಸಿಬ್ಬಂದಿಯೊಬ್ಬರ ವಿರುದ್ಧ ಗುರುವಾರ (ಸೆ.17)...

ಬ್ರಿಕ್ಸ್ ಶೃಂಗಸಭೆಯಲ್ಲಿ ಸಂಪೂರ್ಣ ಸಸ್ಯಹಾರಿ ಮೆನು; ಶಿವಸೇನೆ ತೀವ್ರ ವಾಗ್ದಾಳಿ

ದೆಹಲಿಯಲ್ಲಿ ನಡೆದ 18ನೇ ಬ್ರಿಕ್ಸ್ ಶೃಂಗಸಭೆಯಲ್ಲಿ ವಿದೇಶಿ ಪ್ರತಿನಿಧಿಗಳಿಗೆ ಕೇವಲ ಸಸ್ಯಹಾರಿ ಆಹಾರವನ್ನು ಬಡಿಸಿರುವುದನ್ನು ಖಂಡಿಸಿರುವ ಶಿವಸೇನೆ (ಯುಬಿಟಿ) ಗುರುವಾರ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದೆ. ಇದು ಅಂತರರಾಷ್ಟ್ರೀಯ ಅತಿಥಿಗಳ ಮೇಲೆ...

ದೆಹಲಿ ಎಸ್‌ಐಆರ್: ಮತದಾರರ ಪಟ್ಟಿಯಿಂದ ಹೆಸರುಗಳ ಡಿಲೀಟ್ ಪ್ರಶ್ನಿಸಿ ಅರ್ಜಿ; ವಿಚಾರಣೆಗೆ ಸುಪ್ರೀಂ ಕೋರ್ಟ್ ಒಪ್ಪಿಗೆ

ದೆಹಲಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಅಭಿಯಾನದಡಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಯ ವಿಚಾರಣೆಯನ್ನು ಸೆಪ್ಟೆಂಬರ್ 21ರಂದು ನಡೆಸಲು ಸುಪ್ರೀಂ ಕೋರ್ಟ್ ಗುರುವಾರ ಒಪ್ಪಿಗೆ ಸೂಚಿಸಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್...

ಕೇರಳ | ಮಿತಿಗಿಂತ ಹೆಚ್ಚು ಮದ್ಯ ಸಂಗ್ರಹ ಆರೋಪ : ರಿಪೋರ್ಟರ್ ಟಿವಿ ಎಂಡಿ ಆಂಟೋ ಆಗಸ್ಟಿನ್ ಬಂಧನ

ಕೇರಳ ಅಬಕಾರಿ ಇಲಾಖೆಯು ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ವ್ಯವಸ್ಥಾಪಕ ನಿರ್ದೇಶಕ (ಎಂಡಿ) ಆಂಟೋ ಆಗಸ್ಟಿನ್ ಅವರನ್ನು ಗುರುವಾರ (ಸೆ.17) ಮುಂಜಾನೆ ಬಂಧಿಸಿದೆ. ಎರ್ನಾಕುಲಂನಲ್ಲಿರುವ ಸುದ್ದಿ ವಾಹಿನಿಯ ಕಚೇರಿಯಿಂದ ಮುಂಜಾನೆ ಸುಮಾರು...

ದೆಹಲಿ: ಜಾಮೀನು ಸಿಕ್ಕ ಬೆನ್ನಲ್ಲೇ ಸ್ವತಂತ್ರ ಭಾರದ್ವಾಜ್ ವಿಡಿಯೋ ವೈರಲ್; ಷರತ್ತು ಉಲ್ಲಂಘನೆ ಆರೋಪ!

ಜಂತರ್ ಮಂತರ್‌ನಲ್ಲಿ ದಲಿತ ವಿದ್ಯಾರ್ಥಿ ಹೋರಾಟಗಾರ್ತಿ ನಿಶು ಆಜಾದ್ ಅವರ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪದಲ್ಲಿ ಬಂಧಿತರಾಗಿದ್ದ ಹಿಂದುತ್ವ ಪ್ರಭಾವಿ ಸ್ವತಂತ್ರ ಭಾರದ್ವಾಜ್ ಅವರಿಗೆ ದೆಹಲಿ ನ್ಯಾಯಾಲಯ ಮೂರು ವಾರಗಳ ಮಧ್ಯಂತರ...

ಸರ್ಕಾರದ ಹಸ್ತಕ್ಷೇಪದಿಂದ ಕ್ಯಾಂಪಸ್ ನಿರ್ಬಂಧದವರೆಗೆ: ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯದ ಕುಸಿತ ಬಯಲಿಗೆಳೆದ ಜಾಗತಿಕ ವರದಿ 

ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯವು ತೀವ್ರವಾಗಿ ನಿರ್ಬಂಧಿತವಾಗಿದ್ದು, ಉನ್ನತ ಶಿಕ್ಷಣ ಸಂಸ್ಥೆಗಳ ಮೇಲೆ ಸರ್ಕಾರದ ಹೆಚ್ಚುತ್ತಿರುವ ಹಸ್ತಕ್ಷೇಪ, ಕ್ಯಾಂಪಸ್‌ಗಳಲ್ಲಿ ಶೈಕ್ಷಣಿಕ ಮತ್ತು ರಾಜಕೀಯ ಅಭಿವ್ಯಕ್ತಿಯ ಮೇಲಿನ ನಿರ್ಬಂಧಗಳು, ವಿದ್ವಾಂಸರು ಹಾಗೂ ವಿದ್ಯಾರ್ಥಿಗಳ ವಿರುದ್ಧದ ಕ್ರಮಗಳು...

ಬಿಹಾರ| ದಲಿತ ಯುವಕನ ವಿವಾಹವಾದ ಯುವತಿ; ಮಗಳ ಸಾಂಕೇತಿಕ ಅಂತ್ಯಕ್ರಿಯೆ ನಡೆಸಿದ ಪೋಷಕರು

ತಮ್ಮ 18 ವರ್ಷದ ಮಗಳು ಅಂತರ್ಜಾತಿ ವಿವಾಹವಾಗಿದ್ದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಪೋಷಕರು, ಆಕೆಗೆ ಸಾಂಕೇತಿಕವಾಗಿ ಅಂತ್ಯಕ್ರಿಯೆ ನಡೆಸಿದ ಘಟನೆ ಬಿಹಾರದ ಪೂರ್ಣಿಯಾದಲ್ಲಿ ಬೆಳಕಿಗೆ ಬಂದಿದೆ. ಯುವತಿಯ ಫೋಟೋವಿರುವ ಪ್ರತಿಕೃತಿಯನ್ನು ಸಿದ್ಧಪಡಿಸಿ ಊರಿನಲ್ಲಿ ಶವಯಾತ್ರೆ...

ಸ್ವಇಚ್ಛೆಯಿಂದ ಇಸ್ಲಾಂ ಸ್ವೀಕಾರ : ಆಯುಷ್ ಮಲಿಕ್‌ರನ್ನು ಗೃಹಬಂಧನದಿಂದ ಬಿಡುಗಡೆಗೊಳಿಸಿದ ಅಲಹಾಬಾದ್ ಹೈಕೋರ್ಟ್

ತಾನು ಸ್ವಇಚ್ಛೆಯಿಂದ ಇಸ್ಲಾಂ ಧರ್ಮವನ್ನು ಸ್ವೀಕರಿಸಿರುವುದಾಗಿ ಮತ್ತು ಆ ನಂತರ ತನ್ನ ತಂದೆಯೇ ತನಗೆ ಬೆದರಿಕೆ ಹಾಕಿ, ಕಾನೂನುಬಾಹಿರವಾಗಿ ಗೃಹಬಂಧನದಲ್ಲಿ ಇರಿಸಿದ್ದರು ಎಂದು ಆರೋಪಿಸಿದ್ದ ಆಯುಷ್ ಮಲಿಕ್ ಎಂಬ 31 ವರ್ಷದ ಯುವಕನನ್ನು...

ಬಿಜ್ನೋರ್‌ನಲ್ಲಿ ಮುಸ್ಲಿಂ ಶಿಕ್ಷಕನ ಗುಂಡಿಕ್ಕಿ ಹತ್ಯೆ: ‘ಲವ್ ಜಿಹಾದ್’ ಆರೋಪ; ವೈಯಕ್ತಿಕ ದ್ವೇಷದ ಬಗ್ಗೆಯೂ ಪೊಲೀಸರಿಂದ ತನಿಖೆ 

ಬಿಜ್ನೋರ್: ಉತ್ತರ ಪ್ರದೇಶದ ಬಿಜ್ನೋರ್ ಜಿಲ್ಲೆಯಲ್ಲಿ 43 ವರ್ಷದ ಮುಸ್ಲಿಂ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕನೊಬ್ಬರನ್ನು ರೈತನೊಬ್ಬ ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಶಿಕ್ಷಕ ನೌಶಾದ್ ಅಹ್ಮದ್ ಅವರು ‘ಲವ್ ಜಿಹಾದ್’...