Homeಮುಖಪುಟಹಲ್ವಾ ಸಮಾರಂಭ ಉಲ್ಲೇಖಿಸಿ ಸರ್ಕಾರದ ವಿರುದ್ದ ರಾಹುಲ್ ವಾಗ್ದಾಳಿ : ಮುಖ ಮುಚ್ಚಿಕೊಂಡ ವಿತ್ತ ಸಚಿವೆ

ಹಲ್ವಾ ಸಮಾರಂಭ ಉಲ್ಲೇಖಿಸಿ ಸರ್ಕಾರದ ವಿರುದ್ದ ರಾಹುಲ್ ವಾಗ್ದಾಳಿ : ಮುಖ ಮುಚ್ಚಿಕೊಂಡ ವಿತ್ತ ಸಚಿವೆ

- Advertisement -
- Advertisement -

ಇಂದು (ಜು.29) ಲೋಕಸಭೆಯಲ್ಲಿ ಮಾತನಾಡಿದ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಬಜೆಟ್ ಅಂಶಗಳನ್ನು ಉಲ್ಲೇಖಿಸಿ ಕೇಂದ್ರ ಸರ್ಕಾರದ ವಿರುದ್ದ ವಾಗ್ದಾಳಿ ನಡೆಸಿದರು.

ಕಳೆದ ಬಾರಿ ಸಂಸತ್‌ನಲ್ಲಿ ಮಾತನಾಡುವಾಗ ರಾಹುಲ್ ಗಾಂಧಿ ಶಿವ, ಗುರುನಾನಕ್, ಏಸುಕ್ರಿಸ್ತ ಸೇರಿದಂತೆ ಧಾರ್ಮಿಕ ನಾಯಕರ ಫೋಟೋ ಪ್ರದರ್ಶಿಸಿದ್ದು, ಆಡಳಿತ ಪಕ್ಷದ ಸದಸ್ಯರ ವಿರೋಧಕ್ಕೆ ಕಾರಣವಾಗಿತ್ತು. ಆದರೆ, ರಾಹುಲ್ ಗಾಂಧಿ ಈ ಬಾರಿಯೂ ವಿಶಿಷ್ಟ ಫೋಟೋವೊಂದನ್ನು ಪ್ರದರ್ಶಿಸಿ ಸರ್ಕಾರದ ವಿರುದ್ದ ಕಿಡಿಕಾರಿದರು.

ಈ ಬಾರಿಯ ಬಜೆಟ್ ಮಂಡನೆಗೂ ಮುನ್ನ ಸಂಪ್ರದಾಯದಂತೆ ನಡೆದ ಹಲ್ವಾ ಸಮಾರಂಭದ ಫೋಟೋ ಪ್ರದರ್ಶಿಸಿದ ರಾಹುಲ್ ಗಾಂಧಿ, “ಸರ್ ಇದು ಬಜೆಟ್‌ ಮಂಡನೆಗೂ ಮುನ್ನ ನಡೆದ ಹಲ್ವಾ ಸಮಾರಂಭದ ಫೋಟೋ. ಇದರಲ್ಲಿ ನನಗೆ ಒಬ್ಬನೇ ಒಬ್ಬ ಒಬಿಸಿ, ಆದಿವಾಸಿ ಮತ್ತು ದಲಿತ ಅಧಿಕಾರಿ ಕಾಣುತ್ತಿಲ್ಲ. ಕೇವಲ 20 ಅಧಿಕಾರಿಗಳು ಸೇರಿಕೊಂಡು ಬಜೆಟ್ ಸಿದ್ದಪಡಿಸಿದ್ದಾರೆ. ಇದರರ್ಥ ಭಾರತ ಹಲ್ವಾವನ್ನು 20 ಅಧಿಕಾರಿಗಳು ಹಂಚಿಕೊಂಡಿದ್ದಾರೆ. ಅದರಲ್ಲಿ ಶೇ.73 ರಷ್ಟು ಪ್ರಾತಿನಿಧ್ಯ ಇಲ್ಲವೇ ಇಲ್ಲ. 20 ಅಧಿಕಾರಿಗಳಲ್ಲಿ ದೇಶದ 90 ಶೇ. ಜನರ ಪ್ರತಿನಿಧಿಯಾಗಿ ಇಬ್ಬರಿದ್ದರು. ಒಬ್ಬರು ಅಲ್ಪಸಂಖ್ಯಾತರು ಮತ್ತೊಬ್ಬರು ಒಬಿಸಿ ಅಧಿಕಾರಿ. ಆದರೆ, ಈ ಫೋಟೋದಲ್ಲಿ ಅವರೂ ಇಲ್ಲ. ಅಂದರೆ, ಫೋಟೋ ತೆಗೆಯುವ ವೇಳೆ ಅವರನ್ನು ಹಿಂಬಂದಿ ನಿಲ್ಲಿಸಲಾಗಿದೆ” ಎಂದರು. ಜಾತಿ ಜನಗಣತಿಗೆ ಆಗ್ರಹಿಸಿದರು.

ರಾಹುಲ್ ಗಾಂಧಿ ಫೋಟೋ ಪ್ರದರ್ಶಿಸುವ ವೇಳೆ ಸ್ವೀಕರ್ ಓಂ ಬಿರ್ಲಾ ಮಧ್ಯ ಪ್ರವೇಶಿಸಿ ಫೋಟೋ ಪ್ರದರ್ಶಿಸಿದಂತೆ ಸೂಚಿಸಿದರು. “ನೀವು ಈಗ ಪ್ರತಿಪಕ್ಷದ ನಾಯಕರಾಗಿದ್ದೀರಿ. ಸದನದ ಗೌರವನ್ನು ಕಾಪಾಡಿಕೊಳ್ಳುತ್ತೀರಿ ಎಂದು ನಾನು ನಿರೀಕ್ಷಿಸುತ್ತೇನೆ” ಎಂದು ಸ್ಪೀಕರ್ ಹೇಳಿದರು.

ಈ ವೇಳೆ ರಾಹುಲ್ ಗಾಂಧಿ, “ಸರ್ ನೀವು ಟಿವಿ ಆಫ್ ಮಾಡಿದ್ದೀರಿ. ನಾನು ಫೋಟೋ ತೋರಿಸುವಾಗ ಅವರೇಕೆ ಹೆದರುತ್ತಾರೆ?” ಎಂದು ಆಡಳಿತ ಪಕ್ಷಕ್ಕೆ ಕುಟುಕಿದರು.

ಪೋಸ್ಟರ್ ತೋರಿಸಲು ಬಿಡುವುದಿಲ್ಲ, ಅದು ಸರಿಯಲ್ಲ ಎಂದು ಸ್ಪೀಕರ್ ಬಿರ್ಲಾ ಹೇಳಿದರು. ಆಗ ರಾಹುಲ್ ಗಾಂಧಿ “ನಾನು ಕ್ಷಮೆಯಾಚಿಸುತ್ತೇನೆ. ಆದರೆ, ನಾನು ಫೋಸ್ಟರ್ ತೋರಿಸಿಲ್ಲ, ಫೋಟೋ ತೋರಿಸಿದ್ದೇನೆ” ಎಂದರು.

ಮುಖ ಮುಚ್ಚಿಕೊಂಡ ವಿತ್ತಸಚಿವೆ :

ರಾಹುಲ್ ಗಾಂಧಿ ಹಲ್ವಾ ಸಮಾರಂಭ ಉಲ್ಲೇಖಿಸಿ ಜಾತಿ ತಾರತಮ್ಯದ ಗಂಭೀರತೆಯನ್ನು ಪ್ರಸ್ತಾಪಿಸುವಾಗ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಮುಖವನ್ನು ಕೈಯಿಂದ ಮುಚ್ಚಿಕೊಂಡು, ನಗುವ ಮೂಲಕ ಪ್ರತಿಪಕ್ಷ ನಾಯಕನ ಹೇಳಿಕೆಯನ್ನು ತಮಾಷೆಯಾಗಿ ಸ್ವೀಕರಿಸಿದ್ದು ಕಂಡು ಬಂತು. ವಿತ್ತ ಸಚಿವೆಯ ಈ ನಡೆಗೆ ಸಾಮಾಜಿಕ ಜಾಲತಾಣಗಳಲ್ಲಿ ಸಾರ್ವಜನಿಕರಿಂದ ಟೀಕೆ ವ್ಯಕ್ತವಾಗಿದೆ.

ಇದನ್ನೂ ಓದಿ : ಕಾಲಿಗೆ ಸರಪಳಿ ಬಿಗಿದ ಸ್ಥಿತಿಯಲ್ಲಿ ವಿದೇಶಿ ಮಹಿಳೆ ಕಾಡಿನಲ್ಲಿ ಪತ್ತೆ; ಜೇಬಿನಲ್ಲಿ ಯುಎಸ್ ಪಾಸ್‌ಪೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...

‘ಬೀಬಿ ನೀನು ಅಡಗಿಕೊಳ್ಳಲು ಸಾಧ್ಯವಿಲ್ಲ’: ವಾಷಿಂಗ್ಟನ್‌ ಗೆ ಭೇಟಿ ನೀಡಿದ ನೆತನ್ಯಾಹು ವಿರುದ್ಧ ಜನಾಕ್ರೋಶ: ಐಸಿಸಿ ವಾರಂಟ್ ನಿರ್ಲಕ್ಷಿಸಿ ಟ್ರಂಪ್ ಆತಿಥ್ಯ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗಿನ ಮಾತುಕತೆಗಾಗಿ ವಾಷಿಂಗ್ಟನ್ ಡಿಸಿಗೆ ಭೇಟಿ ನೀಡುತ್ತಿದ್ದಂತೆಯೇ, ರಾಜಧಾನಿಯಾದ್ಯಂತ ಅವರ ವಿರುದ್ಧ ಕಟು ಆಕ್ರೋಶ ಮತ್ತು ಪ್ರತಿಭಟನೆಗಳ ಕಾವು ತೀವ್ರಗೊಂಡಿದೆ. ಅಂತರರಾಷ್ಟ್ರೀಯ...

SIR: ಕರ್ನಾಟಕದಲ್ಲಿ 43 ಲಕ್ಷಕ್ಕೂ ಹೆಚ್ಚು ಜನರಿಂದ ಸಿಗದ ಸಹಿ ಮಾಡಿದ ನಮೂನೆ; ಕರಡು ಪಟ್ಟಿಯಿಂದ ಹೆಸರು ಕೈಬಿಡುವ ಭೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಪ್ರಮುಖ ಮೈಲಿಗಲ್ಲುಗಳನ್ನು ತಲುಪಿದ್ದು, ರಾಜ್ಯಾದ್ಯಂತ ಶೇಕಡಾ 77ರಷ್ಟು ಗಣತಿ ನಮೂನೆಗಳು ಡಿಜಿಟಲೀಕರಣಗೊಂಡಿವೆ. ಆದಾಗ್ಯೂ, ರಾಜ್ಯದ 43.24 ಲಕ್ಷಕ್ಕೂ ಹೆಚ್ಚು ಮತದಾರರು...

ನೀಟ್‌ ಪ್ರತಿಭಟನೆಯಲ್ಲಿ ಉಮರ್ ಖಾಲಿದ್‌ಗೆ ಬೆಂಬಲ; ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ ಗೋವಾ ಪೊಲೀಸರು

ಗೋವಾದ ಪಣಜಿಯಲ್ಲಿ ನಡೆದ ನೀಟ್-ಯುಜಿ ಪ್ರತಿಭಟನೆಯಲ್ಲಿ ಉಮರ್ ಖಾಲಿದ್ ಪರ ಘೋಷಣೆಗಳನ್ನು ಕೂಗಿದ ಕೆಲವು ವಿದ್ಯಾರ್ಥಿಗಳ ಪ್ರತಿಭಟನೆ ಹಿಂದಿನ ಹಣಕಾಸು ಮತ್ತು ಉದ್ದೇಶದ ಬಗ್ಗೆ ಗೋವಾ ಪೊಲೀಸರು ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ್ದಾರೆ ಎಂದು...

ಅಸ್ಸಾಂ ಪ್ರವಾಹದ ಭೀಕರತೆ: 78 ಬಲಿ, 3 ಲಕ್ಷ ಜನರ ಬದುಕು ಸಂಕಷ್ಟಕ್ಕೆ: ವ್ಯವಸ್ಥೆಯ ವೈಫಲ್ಯಕ್ಕೆ ಬೆಲೆ ತೆತ್ತುತ್ತಿರುವ ನಾಗರಿಕರು

ಈಶಾನ್ಯ ಭಾರತದ ಗೇಟ್‌ವೇ ಎಂದೇ ಕರೆಯಲ್ಪಡುವ ಅಸ್ಸಾಂನಲ್ಲಿ ಪ್ರವಾಹದ ಅಟ್ಟಹಾಸ ಮುಂದುವರಿದಿದ್ದು, ಸಾವಿನ ಸಂಖ್ಯೆ 78ಕ್ಕೆ ಏರಿಕೆಯಾಗಿದೆ. ಇತ್ತೀಚಿನ ಅಧಿಕೃತ ವರದಿಗಳ ಪ್ರಕಾರ, ಶಿವಸಾಗರ್ ಜಿಲ್ಲೆಯಲ್ಲಿ ಇಬ್ಬರು ಹಾಗೂ ಗೋಲಾಘಾಟ್‌ನಲ್ಲಿ ಒಬ್ಬರು ನೀರಿನಲ್ಲಿ...