Homeಮುಖಪುಟಸಂಜೆ 4 ಗಂಟೆಗೆ ನಿರ್ಮಲಾ ಸೀತಾರಾಮನ್ ರಿಂದ 20 ಲಕ್ಷ ಕೋಟಿ ಪ್ಯಾಕೇಜಿನ ವಿವರಣೆ

ಸಂಜೆ 4 ಗಂಟೆಗೆ ನಿರ್ಮಲಾ ಸೀತಾರಾಮನ್ ರಿಂದ 20 ಲಕ್ಷ ಕೋಟಿ ಪ್ಯಾಕೇಜಿನ ವಿವರಣೆ

ಪ್ರಧಾನಿ ಶೀರ್ಷಿಕೆಯೊಂದಿಗೆ ಖಾಲಿ ಪುಟವನ್ನು ನಮಗೆ ಕೊಟ್ಟಿದ್ದಾರೆ, ಖಾಲಿ ಬಿಟ್ಟ ಪುಟವನ್ನು ಇಂದು ಹಣಕಾಸು ಸಚಿವರು ಭರ್ತಿ ಮಾಡುವುದನ್ನು ನಾವು ಎದುರುನೋಡುತ್ತಿದ್ದೇವೆ ಎಂದು ಪಿ. ಚಿದಂಬರಂ ಹೇಳಿದ್ದಾರೆ.

- Advertisement -
- Advertisement -

ಕೊರೊನಾ ವೈರಸ್ ಮತ್ತು ಲಾಕ್ ಡೌನ್‌ನಿಂದಾಗಿ ಆರ್ಥಿಕತೆಯೆಯ ಮೇಲಾದ ಪರಿಣಾಮವನ್ನು ನಿಭಾಯಿಸಲು ಪ್ರಧಾನಿ ನರೇಂದ್ರ ಮೋದಿ ನಿನ್ನೆ ಘೋಷಿಸಿದ 20 ಲಕ್ಷ ಕೋಟಿ ರೂ. ಪ್ಯಾಕೇಜಿನ ಮಾಹಿತಿಯನ್ನು ಇಂದು ಸಂಜೆ 4 ಗಂಟೆಗೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ನೀಡಲಿದ್ದಾರೆ.

ನಿನ್ನೆ ರಾತ್ರಿ 8 ಗಂಟೆಗೆ  ರಾಷ್ಟ್ರವನ್ನು ಉದ್ದೇಶಿಸಿ ಮಾತನಾಡಿದ ಭಾಷಣದಲ್ಲಿ ಪ್ರಧಾನಿ ಮೋದಿ ಅವರು ಭಾರತದ ಜಿಡಿಪಿಯ ಶೇಕಡಾ 10 ರಷ್ಟು ಅಂದರೆ 20 ಲಕ್ಷ ಕೋಟಿ ರೂ.ಗಳನ್ನು ಆರ್ಥಿಕ ಮತ್ತು ವಿತ್ತೀಯ ಕ್ರಮಗಳಲ್ಲಿ 50 ದಿನಗಳ ಕೊರೊನಾ ಲಾಕ್‌ಡೌನ್‌ನಿಂದ ತೀವ್ರವಾಗಿ ಹಾನಿಗೊಳಗಾದ ಆರ್ಥಿಕತೆಯನ್ನು ಬೆಂಬಲಿಸಲು ಘೋಷಿಸಿದರು.

ಈ ಪ್ಯಾಕೇಜ್‌ನಲ್ಲಿ ಕೊರೊನಾ ವೈರಸ್ ಹರಡುವುದನ್ನು ತಡೆಯಲು ದೇಶವು ಲಾಕ್‌ಡೌನ್‌ಗೆ ಮೊರೆಹೋದ ಕೆಲವು ದಿನಗಳ ನಂತರ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ (ಆರ್‌ಬಿಐ) ಘೋಷಿಸಿದ್ದ 1.74 ಲಕ್ಷ ಕೋಟಿ ರೂ.ಗಳ ನಿಧಿಯನ್ನು ಒಳಗೊಂಡಿದೆ.

ಪ್ರಧಾನಿ ಮೋದಿ ನಿನ್ನೆ ರಾತ್ರಿಯೇ ಪ್ಯಾಕೇಜಿನ ವಿವರಗಳನ್ನು ಸಚಿವೆ ನಿರ್ಮಲಾ ಸೀತಾರಾಮನ್ ನೀಡಲಿದ್ದಾರೆ ಎಂದು ಹೇಳಿದ್ದರು. ಪ್ರಧಾನಿಯ ಭಾಷಣದ ನಂತರದ ಸರಣಿ ಟ್ವೀಟ್‌ಗಳಲ್ಲಿ, ಹಣಕಾಸು ಸಚಿವರು ಇದನ್ನು ಕೇವಲ ಹಣಕಾಸಿನ ಪ್ಯಾಕೇಜ್ ಮಾತ್ರವಲ್ಲದೆ “ಸುಧಾರಣಾ ಪ್ರಚೋದನೆ ಮತ್ತು ಮನಸ್ಥಿತಿಯ ಕೂಲಂಕುಷ ಪರೀಕ್ಷೆ” ಎಂದು ಕರೆದಿದ್ದಾರೆ.

“#ಆತ್ಮನಿರ್ಭರಭಾರತ್ ಅಭಿಯಾನ ಕೇವಲ ಹಣಕಾಸಿನ ಪ್ಯಾಕೇಜ್ ಆಗಿರಬಾರದು, ಅದು ಸುಧಾರಣಾ ಪ್ರಚೋದನೆ, ಮನಸ್ಥಿತಿ ಕೂಲಂಕುಷ ಪರೀಕ್ಷೆ ಮತ್ತು ಆಡಳಿತದಲ್ಲಿ ಹೆಚ್ಚಿನ ಒತ್ತು ನೀಡಲಿದೆ”ಎಂದು ಸೀತಾರಾಮನ್ ಪೋಸ್ಟ್ ಮಾಡಿದ್ದಾರೆ.

ಶಿರ್ಷಿಕೆಯೊಂದಿಗೆ ಖಾಲಿ ಪುಟ ಕೊಟ್ಟ ಪ್ರಧಾನಿ: ಪಿ. ಚಿದಂಬರಂ 

ಪ್ರಧಾನಿ ಶೀರ್ಷಿಕೆಯೊಂದಿಗೆ ಖಾಲಿ ಪುಟವನ್ನು ನಮಗೆ ಕೊಟ್ಟಿದ್ದಾರೆ, ಖಾಲಿ ಬಿಟ್ಟ ಪುಟವನ್ನು ಇಂದು ಹಣಕಾಸು ಸಚಿವರು ಭರ್ತಿ ಮಾಡುವುದನ್ನು ನಾವು ಎದುರುನೋಡುತ್ತಿದ್ದೇವೆ. ಸರ್ಕಾರವು ಆರ್ಥಿಕತೆಗೆ ಹೆಚ್ಚುವರಿಯಾಗಿ ನೀಡುವ ಪ್ರತಿಯೊಂದು ರೂಪಾಯಿಯನ್ನೂ ನಾವು ಎಚ್ಚರಿಕೆಯಿಂದ ಎಣಿಸುತ್ತೇವೆ ಎಂದು ಕಾಂಗ್ರೆಸ್ ನಾಯಕ ಪಿ.ಚಿದಂಬರಂ ಟ್ವೀಟ್ ಮಾಡಿದ್ದಾರೆ.

ಯಾರಿಗೆ ಏನು ಸಿಗುತ್ತದೆ ಎಂಬುದನ್ನೂ ನಾವು ಎಚ್ಚರಿಕೆಯಿಂದ ಪರಿಶೀಲಿಸುತ್ತೇವೆ. ಬಡವರು, ಹಸಿವಿನಿಂದ ಕಂಗೆಟ್ಟಿರುವವರು ಮತ್ತು ಕೆಲಸದ ಸ್ಥಳಗಳಿಂದ ಬೇರ್ಪಟ್ಟು ನೂರಾರು ಕಿಲೋ ಮೀಟರ್ ದೂರ ನಡೆದು ತವರು ರಾಜ್ಯಗಳಿಗೆ ತೆರಳಿರುವ ವಲಸೆ ಕಾರ್ಮಿಕರಿಗೆ ಏನು ಸಿಗಬಹುದು ಎಂಬುದನ್ನು ಮೊದಲು ಗಮನಿಸುತ್ತೇವೆ ಎಂದು ಮತ್ತೊಂದು ಟ್ವೀಟ್‌ನಲ್ಲಿ ಅವರು ಉಲ್ಲೇಖಿಸಿದ್ದಾರೆ.


ಓದಿ: ಯಡಿಯೂರಪ್ಪನವರು ಮೋದಿ ಬಳಿ ಕೋವಿಡ್‌ ಪ್ಯಾಕೇಜ್‌ ಕೇಳಬೇಕು – ಕುಮಾರಸ್ವಾಮಿ


ವಿಡಿಯೋ ನೋಡಿ: ಈಡೇರದ ಭರವಸೆಗಳು, ಮುಚ್ಚಿ ಹೋದ ಹಗರಣಗಳು, ಕರ್ನಾಟಕಕ್ಕಾದ ಅನ್ಯಾಯ ಮತ್ತು ಕೊರೊನಾ. ಸದ್ದು…… ಈ ಸುದ್ದಿಗಳೇನಾದವು?-8 ನೇ ಸಂಚಿಕೆ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...

ಆಕಸ್ಮಿಕವಾಗಿ ಗಡಿ ದಾಟಿದ್ದ 7 ಭಾರತೀಯರನ್ನು ಹಸ್ತಾಂತರಿಸಿದ ಪಾಕಿಸ್ತಾನ

2023 ರ ಪ್ರವಾಹದ ಸಮಯದಲ್ಲಿ ಅಜಾಗರೂಕತೆಯಿಂದ ಗಡಿ ದಾಟಿದ ನಂತರ ಬಂಧಿಸಲ್ಪಟ್ಟ ಏಳು ಭಾರತೀಯ ನಾಗರಿಕರನ್ನು ಪಾಕಿಸ್ತಾನ ಶನಿವಾರ ಸ್ವದೇಶಕ್ಕೆ ವಾಪಸ್ ಕಳುಹಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪಂಜಾಬ್‌ನ ಅಟ್ಟಾರಿ ಇಂಟಿಗ್ರೇಟೆಡ್ ಚೆಕ್ ಪೋಸ್ಟ್‌ನಲ್ಲಿ...

ಮೀರತ್| ಅಪಹರಣ ಪ್ರಕರಣ ಹಿಂಪಡೆಯುವಂತೆ ಪೊಲೀಸರ ಒತ್ತಡ; ‘ಗೃಹಬಂಧನ’ದಲ್ಲಿ ದಲಿತ ಕುಟುಂಬ

ಜನವರಿ ತಿಂಗಳ ಆರಂಭದಲ್ಲಿ ಉತ್ತರ ಪ್ರದೇಶದ ಮೀರತ್ ಜಿಲ್ಲೆಯ ಕಪ್ಸಾದ್ ಗ್ರಾಮದಲ್ಲಿ ತಾಯಿಯ ಕೊಲೆಯ ನಂತರ ಅಪಹರಿಸಲ್ಪಟ್ಟ ದಲಿತ ಹುಡುಗಿಯ ಕುಟುಂಬ ಸದಸ್ಯರು ತಾವು ಗೃಹಬಂಧನದಲ್ಲಿದ್ದು, ಆರೋಪಿಗಳ ವಿರುದ್ಧ ಪ್ರಕರಣವನ್ನು ಮುಂದುವರಿಸದಂತೆ ಪೊಲೀಸರು...

ಉದ್ಯಮಿ ಸಿಜೆ ರಾಯ್ ಮರಣೋತ್ತರ ಪರೀಕ್ಷೆ; ಹೃದಯ-ಶ್ವಾಸಕೋಶದಲ್ಲಿ 6.35 ಎಂಎಂ ಗುಂಡಿನ ಗಾಯ

ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಸಿಜೆ ರಾಯ್ ಅವರ ಆತ್ಮಹತ್ಯೆಯ ಮರಣೋತ್ತರ ಪರೀಕ್ಷೆಯ ವರದಿಗಯನ್ನು ಬೆಂಗಳೂರಿನ ಬೌರಿಂಗ್ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ. ಅರವಿಂದ್ ಎಂಎನ್ ವಿವರಿಸಿದ್ದಾರೆ. 6.35 ಎಂಎಂ ಗುಂಡಿನ ದಾಳಿಯು ತಕ್ಷಣದ...

ಮುಂಬೈ| ನಿರ್ದೇಶಕ ರೋಹಿತ್ ಶೆಟ್ಟಿ ಮನೆಯ ಹೊರಗೆ 4 ಸುತ್ತು ಗುಂಡು ಹಾರಿಸಿದ ಅಪರಿಚಿತರು

ಶನಿವಾರ ತಡರಾತ್ರಿ, ಬಾಲಿವುಡ್ ನಿರ್ದೇಶಕ ರೋಹಿತ್ ಶೆಟ್ಟಿ ಅವರ ಮುಂಬೈನ ಜುಹು ನಿವಾಸದ ಹೊರಗೆ ನಾಲ್ಕು ಸುತ್ತು ಗುಂಡು ಹಾರಿಸಲಾಗಿದ್ದು, ಘಟನೆಯಲ್ಲಿ ಯಾವುದೇ ಗಾಯಗಳಾಗಿಲ್ಲ ಎಂದು ವರದಿಯಾಗಿದೆ. ಚಿತ್ರ ನಿರ್ಮಾಪಕ-ನಿರ್ದೇಶಕರ ಕಟ್ಟಡದ ಬಳಿ ಅಪರಿಚಿತ...

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...