Homeಮುಖಪುಟಸಂಜೆ 4 ಗಂಟೆಗೆ ನಿರ್ಮಲಾ ಸೀತಾರಾಮನ್ ರಿಂದ 20 ಲಕ್ಷ ಕೋಟಿ ಪ್ಯಾಕೇಜಿನ ವಿವರಣೆ

ಸಂಜೆ 4 ಗಂಟೆಗೆ ನಿರ್ಮಲಾ ಸೀತಾರಾಮನ್ ರಿಂದ 20 ಲಕ್ಷ ಕೋಟಿ ಪ್ಯಾಕೇಜಿನ ವಿವರಣೆ

ಪ್ರಧಾನಿ ಶೀರ್ಷಿಕೆಯೊಂದಿಗೆ ಖಾಲಿ ಪುಟವನ್ನು ನಮಗೆ ಕೊಟ್ಟಿದ್ದಾರೆ, ಖಾಲಿ ಬಿಟ್ಟ ಪುಟವನ್ನು ಇಂದು ಹಣಕಾಸು ಸಚಿವರು ಭರ್ತಿ ಮಾಡುವುದನ್ನು ನಾವು ಎದುರುನೋಡುತ್ತಿದ್ದೇವೆ ಎಂದು ಪಿ. ಚಿದಂಬರಂ ಹೇಳಿದ್ದಾರೆ.

- Advertisement -
- Advertisement -

ಕೊರೊನಾ ವೈರಸ್ ಮತ್ತು ಲಾಕ್ ಡೌನ್‌ನಿಂದಾಗಿ ಆರ್ಥಿಕತೆಯೆಯ ಮೇಲಾದ ಪರಿಣಾಮವನ್ನು ನಿಭಾಯಿಸಲು ಪ್ರಧಾನಿ ನರೇಂದ್ರ ಮೋದಿ ನಿನ್ನೆ ಘೋಷಿಸಿದ 20 ಲಕ್ಷ ಕೋಟಿ ರೂ. ಪ್ಯಾಕೇಜಿನ ಮಾಹಿತಿಯನ್ನು ಇಂದು ಸಂಜೆ 4 ಗಂಟೆಗೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ನೀಡಲಿದ್ದಾರೆ.

ನಿನ್ನೆ ರಾತ್ರಿ 8 ಗಂಟೆಗೆ  ರಾಷ್ಟ್ರವನ್ನು ಉದ್ದೇಶಿಸಿ ಮಾತನಾಡಿದ ಭಾಷಣದಲ್ಲಿ ಪ್ರಧಾನಿ ಮೋದಿ ಅವರು ಭಾರತದ ಜಿಡಿಪಿಯ ಶೇಕಡಾ 10 ರಷ್ಟು ಅಂದರೆ 20 ಲಕ್ಷ ಕೋಟಿ ರೂ.ಗಳನ್ನು ಆರ್ಥಿಕ ಮತ್ತು ವಿತ್ತೀಯ ಕ್ರಮಗಳಲ್ಲಿ 50 ದಿನಗಳ ಕೊರೊನಾ ಲಾಕ್‌ಡೌನ್‌ನಿಂದ ತೀವ್ರವಾಗಿ ಹಾನಿಗೊಳಗಾದ ಆರ್ಥಿಕತೆಯನ್ನು ಬೆಂಬಲಿಸಲು ಘೋಷಿಸಿದರು.

ಈ ಪ್ಯಾಕೇಜ್‌ನಲ್ಲಿ ಕೊರೊನಾ ವೈರಸ್ ಹರಡುವುದನ್ನು ತಡೆಯಲು ದೇಶವು ಲಾಕ್‌ಡೌನ್‌ಗೆ ಮೊರೆಹೋದ ಕೆಲವು ದಿನಗಳ ನಂತರ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ (ಆರ್‌ಬಿಐ) ಘೋಷಿಸಿದ್ದ 1.74 ಲಕ್ಷ ಕೋಟಿ ರೂ.ಗಳ ನಿಧಿಯನ್ನು ಒಳಗೊಂಡಿದೆ.

ಪ್ರಧಾನಿ ಮೋದಿ ನಿನ್ನೆ ರಾತ್ರಿಯೇ ಪ್ಯಾಕೇಜಿನ ವಿವರಗಳನ್ನು ಸಚಿವೆ ನಿರ್ಮಲಾ ಸೀತಾರಾಮನ್ ನೀಡಲಿದ್ದಾರೆ ಎಂದು ಹೇಳಿದ್ದರು. ಪ್ರಧಾನಿಯ ಭಾಷಣದ ನಂತರದ ಸರಣಿ ಟ್ವೀಟ್‌ಗಳಲ್ಲಿ, ಹಣಕಾಸು ಸಚಿವರು ಇದನ್ನು ಕೇವಲ ಹಣಕಾಸಿನ ಪ್ಯಾಕೇಜ್ ಮಾತ್ರವಲ್ಲದೆ “ಸುಧಾರಣಾ ಪ್ರಚೋದನೆ ಮತ್ತು ಮನಸ್ಥಿತಿಯ ಕೂಲಂಕುಷ ಪರೀಕ್ಷೆ” ಎಂದು ಕರೆದಿದ್ದಾರೆ.

“#ಆತ್ಮನಿರ್ಭರಭಾರತ್ ಅಭಿಯಾನ ಕೇವಲ ಹಣಕಾಸಿನ ಪ್ಯಾಕೇಜ್ ಆಗಿರಬಾರದು, ಅದು ಸುಧಾರಣಾ ಪ್ರಚೋದನೆ, ಮನಸ್ಥಿತಿ ಕೂಲಂಕುಷ ಪರೀಕ್ಷೆ ಮತ್ತು ಆಡಳಿತದಲ್ಲಿ ಹೆಚ್ಚಿನ ಒತ್ತು ನೀಡಲಿದೆ”ಎಂದು ಸೀತಾರಾಮನ್ ಪೋಸ್ಟ್ ಮಾಡಿದ್ದಾರೆ.

ಶಿರ್ಷಿಕೆಯೊಂದಿಗೆ ಖಾಲಿ ಪುಟ ಕೊಟ್ಟ ಪ್ರಧಾನಿ: ಪಿ. ಚಿದಂಬರಂ 

ಪ್ರಧಾನಿ ಶೀರ್ಷಿಕೆಯೊಂದಿಗೆ ಖಾಲಿ ಪುಟವನ್ನು ನಮಗೆ ಕೊಟ್ಟಿದ್ದಾರೆ, ಖಾಲಿ ಬಿಟ್ಟ ಪುಟವನ್ನು ಇಂದು ಹಣಕಾಸು ಸಚಿವರು ಭರ್ತಿ ಮಾಡುವುದನ್ನು ನಾವು ಎದುರುನೋಡುತ್ತಿದ್ದೇವೆ. ಸರ್ಕಾರವು ಆರ್ಥಿಕತೆಗೆ ಹೆಚ್ಚುವರಿಯಾಗಿ ನೀಡುವ ಪ್ರತಿಯೊಂದು ರೂಪಾಯಿಯನ್ನೂ ನಾವು ಎಚ್ಚರಿಕೆಯಿಂದ ಎಣಿಸುತ್ತೇವೆ ಎಂದು ಕಾಂಗ್ರೆಸ್ ನಾಯಕ ಪಿ.ಚಿದಂಬರಂ ಟ್ವೀಟ್ ಮಾಡಿದ್ದಾರೆ.

ಯಾರಿಗೆ ಏನು ಸಿಗುತ್ತದೆ ಎಂಬುದನ್ನೂ ನಾವು ಎಚ್ಚರಿಕೆಯಿಂದ ಪರಿಶೀಲಿಸುತ್ತೇವೆ. ಬಡವರು, ಹಸಿವಿನಿಂದ ಕಂಗೆಟ್ಟಿರುವವರು ಮತ್ತು ಕೆಲಸದ ಸ್ಥಳಗಳಿಂದ ಬೇರ್ಪಟ್ಟು ನೂರಾರು ಕಿಲೋ ಮೀಟರ್ ದೂರ ನಡೆದು ತವರು ರಾಜ್ಯಗಳಿಗೆ ತೆರಳಿರುವ ವಲಸೆ ಕಾರ್ಮಿಕರಿಗೆ ಏನು ಸಿಗಬಹುದು ಎಂಬುದನ್ನು ಮೊದಲು ಗಮನಿಸುತ್ತೇವೆ ಎಂದು ಮತ್ತೊಂದು ಟ್ವೀಟ್‌ನಲ್ಲಿ ಅವರು ಉಲ್ಲೇಖಿಸಿದ್ದಾರೆ.


ಓದಿ: ಯಡಿಯೂರಪ್ಪನವರು ಮೋದಿ ಬಳಿ ಕೋವಿಡ್‌ ಪ್ಯಾಕೇಜ್‌ ಕೇಳಬೇಕು – ಕುಮಾರಸ್ವಾಮಿ


ವಿಡಿಯೋ ನೋಡಿ: ಈಡೇರದ ಭರವಸೆಗಳು, ಮುಚ್ಚಿ ಹೋದ ಹಗರಣಗಳು, ಕರ್ನಾಟಕಕ್ಕಾದ ಅನ್ಯಾಯ ಮತ್ತು ಕೊರೊನಾ. ಸದ್ದು…… ಈ ಸುದ್ದಿಗಳೇನಾದವು?-8 ನೇ ಸಂಚಿಕೆ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...