Homeಮುಖಪುಟಸಂಜೆ 4 ಗಂಟೆಗೆ ನಿರ್ಮಲಾ ಸೀತಾರಾಮನ್ ರಿಂದ 20 ಲಕ್ಷ ಕೋಟಿ ಪ್ಯಾಕೇಜಿನ ವಿವರಣೆ

ಸಂಜೆ 4 ಗಂಟೆಗೆ ನಿರ್ಮಲಾ ಸೀತಾರಾಮನ್ ರಿಂದ 20 ಲಕ್ಷ ಕೋಟಿ ಪ್ಯಾಕೇಜಿನ ವಿವರಣೆ

ಪ್ರಧಾನಿ ಶೀರ್ಷಿಕೆಯೊಂದಿಗೆ ಖಾಲಿ ಪುಟವನ್ನು ನಮಗೆ ಕೊಟ್ಟಿದ್ದಾರೆ, ಖಾಲಿ ಬಿಟ್ಟ ಪುಟವನ್ನು ಇಂದು ಹಣಕಾಸು ಸಚಿವರು ಭರ್ತಿ ಮಾಡುವುದನ್ನು ನಾವು ಎದುರುನೋಡುತ್ತಿದ್ದೇವೆ ಎಂದು ಪಿ. ಚಿದಂಬರಂ ಹೇಳಿದ್ದಾರೆ.

- Advertisement -
- Advertisement -

ಕೊರೊನಾ ವೈರಸ್ ಮತ್ತು ಲಾಕ್ ಡೌನ್‌ನಿಂದಾಗಿ ಆರ್ಥಿಕತೆಯೆಯ ಮೇಲಾದ ಪರಿಣಾಮವನ್ನು ನಿಭಾಯಿಸಲು ಪ್ರಧಾನಿ ನರೇಂದ್ರ ಮೋದಿ ನಿನ್ನೆ ಘೋಷಿಸಿದ 20 ಲಕ್ಷ ಕೋಟಿ ರೂ. ಪ್ಯಾಕೇಜಿನ ಮಾಹಿತಿಯನ್ನು ಇಂದು ಸಂಜೆ 4 ಗಂಟೆಗೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ನೀಡಲಿದ್ದಾರೆ.

ನಿನ್ನೆ ರಾತ್ರಿ 8 ಗಂಟೆಗೆ  ರಾಷ್ಟ್ರವನ್ನು ಉದ್ದೇಶಿಸಿ ಮಾತನಾಡಿದ ಭಾಷಣದಲ್ಲಿ ಪ್ರಧಾನಿ ಮೋದಿ ಅವರು ಭಾರತದ ಜಿಡಿಪಿಯ ಶೇಕಡಾ 10 ರಷ್ಟು ಅಂದರೆ 20 ಲಕ್ಷ ಕೋಟಿ ರೂ.ಗಳನ್ನು ಆರ್ಥಿಕ ಮತ್ತು ವಿತ್ತೀಯ ಕ್ರಮಗಳಲ್ಲಿ 50 ದಿನಗಳ ಕೊರೊನಾ ಲಾಕ್‌ಡೌನ್‌ನಿಂದ ತೀವ್ರವಾಗಿ ಹಾನಿಗೊಳಗಾದ ಆರ್ಥಿಕತೆಯನ್ನು ಬೆಂಬಲಿಸಲು ಘೋಷಿಸಿದರು.

ಈ ಪ್ಯಾಕೇಜ್‌ನಲ್ಲಿ ಕೊರೊನಾ ವೈರಸ್ ಹರಡುವುದನ್ನು ತಡೆಯಲು ದೇಶವು ಲಾಕ್‌ಡೌನ್‌ಗೆ ಮೊರೆಹೋದ ಕೆಲವು ದಿನಗಳ ನಂತರ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ (ಆರ್‌ಬಿಐ) ಘೋಷಿಸಿದ್ದ 1.74 ಲಕ್ಷ ಕೋಟಿ ರೂ.ಗಳ ನಿಧಿಯನ್ನು ಒಳಗೊಂಡಿದೆ.

ಪ್ರಧಾನಿ ಮೋದಿ ನಿನ್ನೆ ರಾತ್ರಿಯೇ ಪ್ಯಾಕೇಜಿನ ವಿವರಗಳನ್ನು ಸಚಿವೆ ನಿರ್ಮಲಾ ಸೀತಾರಾಮನ್ ನೀಡಲಿದ್ದಾರೆ ಎಂದು ಹೇಳಿದ್ದರು. ಪ್ರಧಾನಿಯ ಭಾಷಣದ ನಂತರದ ಸರಣಿ ಟ್ವೀಟ್‌ಗಳಲ್ಲಿ, ಹಣಕಾಸು ಸಚಿವರು ಇದನ್ನು ಕೇವಲ ಹಣಕಾಸಿನ ಪ್ಯಾಕೇಜ್ ಮಾತ್ರವಲ್ಲದೆ “ಸುಧಾರಣಾ ಪ್ರಚೋದನೆ ಮತ್ತು ಮನಸ್ಥಿತಿಯ ಕೂಲಂಕುಷ ಪರೀಕ್ಷೆ” ಎಂದು ಕರೆದಿದ್ದಾರೆ.

“#ಆತ್ಮನಿರ್ಭರಭಾರತ್ ಅಭಿಯಾನ ಕೇವಲ ಹಣಕಾಸಿನ ಪ್ಯಾಕೇಜ್ ಆಗಿರಬಾರದು, ಅದು ಸುಧಾರಣಾ ಪ್ರಚೋದನೆ, ಮನಸ್ಥಿತಿ ಕೂಲಂಕುಷ ಪರೀಕ್ಷೆ ಮತ್ತು ಆಡಳಿತದಲ್ಲಿ ಹೆಚ್ಚಿನ ಒತ್ತು ನೀಡಲಿದೆ”ಎಂದು ಸೀತಾರಾಮನ್ ಪೋಸ್ಟ್ ಮಾಡಿದ್ದಾರೆ.

ಶಿರ್ಷಿಕೆಯೊಂದಿಗೆ ಖಾಲಿ ಪುಟ ಕೊಟ್ಟ ಪ್ರಧಾನಿ: ಪಿ. ಚಿದಂಬರಂ 

ಪ್ರಧಾನಿ ಶೀರ್ಷಿಕೆಯೊಂದಿಗೆ ಖಾಲಿ ಪುಟವನ್ನು ನಮಗೆ ಕೊಟ್ಟಿದ್ದಾರೆ, ಖಾಲಿ ಬಿಟ್ಟ ಪುಟವನ್ನು ಇಂದು ಹಣಕಾಸು ಸಚಿವರು ಭರ್ತಿ ಮಾಡುವುದನ್ನು ನಾವು ಎದುರುನೋಡುತ್ತಿದ್ದೇವೆ. ಸರ್ಕಾರವು ಆರ್ಥಿಕತೆಗೆ ಹೆಚ್ಚುವರಿಯಾಗಿ ನೀಡುವ ಪ್ರತಿಯೊಂದು ರೂಪಾಯಿಯನ್ನೂ ನಾವು ಎಚ್ಚರಿಕೆಯಿಂದ ಎಣಿಸುತ್ತೇವೆ ಎಂದು ಕಾಂಗ್ರೆಸ್ ನಾಯಕ ಪಿ.ಚಿದಂಬರಂ ಟ್ವೀಟ್ ಮಾಡಿದ್ದಾರೆ.

ಯಾರಿಗೆ ಏನು ಸಿಗುತ್ತದೆ ಎಂಬುದನ್ನೂ ನಾವು ಎಚ್ಚರಿಕೆಯಿಂದ ಪರಿಶೀಲಿಸುತ್ತೇವೆ. ಬಡವರು, ಹಸಿವಿನಿಂದ ಕಂಗೆಟ್ಟಿರುವವರು ಮತ್ತು ಕೆಲಸದ ಸ್ಥಳಗಳಿಂದ ಬೇರ್ಪಟ್ಟು ನೂರಾರು ಕಿಲೋ ಮೀಟರ್ ದೂರ ನಡೆದು ತವರು ರಾಜ್ಯಗಳಿಗೆ ತೆರಳಿರುವ ವಲಸೆ ಕಾರ್ಮಿಕರಿಗೆ ಏನು ಸಿಗಬಹುದು ಎಂಬುದನ್ನು ಮೊದಲು ಗಮನಿಸುತ್ತೇವೆ ಎಂದು ಮತ್ತೊಂದು ಟ್ವೀಟ್‌ನಲ್ಲಿ ಅವರು ಉಲ್ಲೇಖಿಸಿದ್ದಾರೆ.


ಓದಿ: ಯಡಿಯೂರಪ್ಪನವರು ಮೋದಿ ಬಳಿ ಕೋವಿಡ್‌ ಪ್ಯಾಕೇಜ್‌ ಕೇಳಬೇಕು – ಕುಮಾರಸ್ವಾಮಿ


ವಿಡಿಯೋ ನೋಡಿ: ಈಡೇರದ ಭರವಸೆಗಳು, ಮುಚ್ಚಿ ಹೋದ ಹಗರಣಗಳು, ಕರ್ನಾಟಕಕ್ಕಾದ ಅನ್ಯಾಯ ಮತ್ತು ಕೊರೊನಾ. ಸದ್ದು…… ಈ ಸುದ್ದಿಗಳೇನಾದವು?-8 ನೇ ಸಂಚಿಕೆ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನಾಸಿಕ್‌| ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು ಬಿಟ್ಟ ಪ್ರತಿಭಟನಾಕಾರರು

ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ನಿಫಾದ್ ನಗರ ಪಂಚಾಯತ್ ವ್ಯಾಪ್ತಿಯಲ್ಲಿ ಬೀದಿ ನಾಯಿಗಳ ಹಾವಳಿಯನ್ನು ಖಂಡಿಸಿ ಮತ್ತು ಅಧಿಕಾರಿಗಳ ನಿರ್ಲಕ್ಷ್ಯವನ್ನು ಖಂಡಿಸಿದ ಪ್ರತಿಭಟನಾಕಾರರ ಗುಂಪೊಂದು ನಗರ ಪಂಚಾಯತ್ ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು...

ವಿವಾಹಿತೆ ಮೇಲೆ ಅತ್ಯಾಚಾರ ಆರೋಪ : ಬಿಜೆಪಿ ಮಾಜಿ ಶಾಸಕನ ವಿರುದ್ಧ ಎಫ್‌ಐಆರ್

ಗನ್‌ ಪಾಯಿಂಟ್‌ ಇಟ್ಟು ಬೆದರಿಸಿ 22 ವರ್ಷದ ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಮಹಾರಾಷ್ಟ್ರದ ಬಿಜೆಪಿ ಮಾಜಿ ಶಾಸಕ ಮತ್ತು ವಜಾಗೊಂಡಿರುವ ಪೊಲೀಸ್ ಸಿಬ್ಬಂದಿಯೊಬ್ಬರ ವಿರುದ್ಧ ಗುರುವಾರ (ಸೆ.17)...

ಬ್ರಿಕ್ಸ್ ಶೃಂಗಸಭೆಯಲ್ಲಿ ಸಂಪೂರ್ಣ ಸಸ್ಯಹಾರಿ ಮೆನು; ಶಿವಸೇನೆ ತೀವ್ರ ವಾಗ್ದಾಳಿ

ದೆಹಲಿಯಲ್ಲಿ ನಡೆದ 18ನೇ ಬ್ರಿಕ್ಸ್ ಶೃಂಗಸಭೆಯಲ್ಲಿ ವಿದೇಶಿ ಪ್ರತಿನಿಧಿಗಳಿಗೆ ಕೇವಲ ಸಸ್ಯಹಾರಿ ಆಹಾರವನ್ನು ಬಡಿಸಿರುವುದನ್ನು ಖಂಡಿಸಿರುವ ಶಿವಸೇನೆ (ಯುಬಿಟಿ) ಗುರುವಾರ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದೆ. ಇದು ಅಂತರರಾಷ್ಟ್ರೀಯ ಅತಿಥಿಗಳ ಮೇಲೆ...

ದೆಹಲಿ ಎಸ್‌ಐಆರ್: ಮತದಾರರ ಪಟ್ಟಿಯಿಂದ ಹೆಸರುಗಳ ಡಿಲೀಟ್ ಪ್ರಶ್ನಿಸಿ ಅರ್ಜಿ; ವಿಚಾರಣೆಗೆ ಸುಪ್ರೀಂ ಕೋರ್ಟ್ ಒಪ್ಪಿಗೆ

ದೆಹಲಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಅಭಿಯಾನದಡಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಯ ವಿಚಾರಣೆಯನ್ನು ಸೆಪ್ಟೆಂಬರ್ 21ರಂದು ನಡೆಸಲು ಸುಪ್ರೀಂ ಕೋರ್ಟ್ ಗುರುವಾರ ಒಪ್ಪಿಗೆ ಸೂಚಿಸಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್...

ಕೇರಳ | ಮಿತಿಗಿಂತ ಹೆಚ್ಚು ಮದ್ಯ ಸಂಗ್ರಹ ಆರೋಪ : ರಿಪೋರ್ಟರ್ ಟಿವಿ ಎಂಡಿ ಆಂಟೋ ಆಗಸ್ಟಿನ್ ಬಂಧನ

ಕೇರಳ ಅಬಕಾರಿ ಇಲಾಖೆಯು ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ವ್ಯವಸ್ಥಾಪಕ ನಿರ್ದೇಶಕ (ಎಂಡಿ) ಆಂಟೋ ಆಗಸ್ಟಿನ್ ಅವರನ್ನು ಗುರುವಾರ (ಸೆ.17) ಮುಂಜಾನೆ ಬಂಧಿಸಿದೆ. ಎರ್ನಾಕುಲಂನಲ್ಲಿರುವ ಸುದ್ದಿ ವಾಹಿನಿಯ ಕಚೇರಿಯಿಂದ ಮುಂಜಾನೆ ಸುಮಾರು...

ದೆಹಲಿ: ಜಾಮೀನು ಸಿಕ್ಕ ಬೆನ್ನಲ್ಲೇ ಸ್ವತಂತ್ರ ಭಾರದ್ವಾಜ್ ವಿಡಿಯೋ ವೈರಲ್; ಷರತ್ತು ಉಲ್ಲಂಘನೆ ಆರೋಪ!

ಜಂತರ್ ಮಂತರ್‌ನಲ್ಲಿ ದಲಿತ ವಿದ್ಯಾರ್ಥಿ ಹೋರಾಟಗಾರ್ತಿ ನಿಶು ಆಜಾದ್ ಅವರ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪದಲ್ಲಿ ಬಂಧಿತರಾಗಿದ್ದ ಹಿಂದುತ್ವ ಪ್ರಭಾವಿ ಸ್ವತಂತ್ರ ಭಾರದ್ವಾಜ್ ಅವರಿಗೆ ದೆಹಲಿ ನ್ಯಾಯಾಲಯ ಮೂರು ವಾರಗಳ ಮಧ್ಯಂತರ...

ಸರ್ಕಾರದ ಹಸ್ತಕ್ಷೇಪದಿಂದ ಕ್ಯಾಂಪಸ್ ನಿರ್ಬಂಧದವರೆಗೆ: ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯದ ಕುಸಿತ ಬಯಲಿಗೆಳೆದ ಜಾಗತಿಕ ವರದಿ 

ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯವು ತೀವ್ರವಾಗಿ ನಿರ್ಬಂಧಿತವಾಗಿದ್ದು, ಉನ್ನತ ಶಿಕ್ಷಣ ಸಂಸ್ಥೆಗಳ ಮೇಲೆ ಸರ್ಕಾರದ ಹೆಚ್ಚುತ್ತಿರುವ ಹಸ್ತಕ್ಷೇಪ, ಕ್ಯಾಂಪಸ್‌ಗಳಲ್ಲಿ ಶೈಕ್ಷಣಿಕ ಮತ್ತು ರಾಜಕೀಯ ಅಭಿವ್ಯಕ್ತಿಯ ಮೇಲಿನ ನಿರ್ಬಂಧಗಳು, ವಿದ್ವಾಂಸರು ಹಾಗೂ ವಿದ್ಯಾರ್ಥಿಗಳ ವಿರುದ್ಧದ ಕ್ರಮಗಳು...

ಬಿಹಾರ| ದಲಿತ ಯುವಕನ ವಿವಾಹವಾದ ಯುವತಿ; ಮಗಳ ಸಾಂಕೇತಿಕ ಅಂತ್ಯಕ್ರಿಯೆ ನಡೆಸಿದ ಪೋಷಕರು

ತಮ್ಮ 18 ವರ್ಷದ ಮಗಳು ಅಂತರ್ಜಾತಿ ವಿವಾಹವಾಗಿದ್ದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಪೋಷಕರು, ಆಕೆಗೆ ಸಾಂಕೇತಿಕವಾಗಿ ಅಂತ್ಯಕ್ರಿಯೆ ನಡೆಸಿದ ಘಟನೆ ಬಿಹಾರದ ಪೂರ್ಣಿಯಾದಲ್ಲಿ ಬೆಳಕಿಗೆ ಬಂದಿದೆ. ಯುವತಿಯ ಫೋಟೋವಿರುವ ಪ್ರತಿಕೃತಿಯನ್ನು ಸಿದ್ಧಪಡಿಸಿ ಊರಿನಲ್ಲಿ ಶವಯಾತ್ರೆ...

ಸ್ವಇಚ್ಛೆಯಿಂದ ಇಸ್ಲಾಂ ಸ್ವೀಕಾರ : ಆಯುಷ್ ಮಲಿಕ್‌ರನ್ನು ಗೃಹಬಂಧನದಿಂದ ಬಿಡುಗಡೆಗೊಳಿಸಿದ ಅಲಹಾಬಾದ್ ಹೈಕೋರ್ಟ್

ತಾನು ಸ್ವಇಚ್ಛೆಯಿಂದ ಇಸ್ಲಾಂ ಧರ್ಮವನ್ನು ಸ್ವೀಕರಿಸಿರುವುದಾಗಿ ಮತ್ತು ಆ ನಂತರ ತನ್ನ ತಂದೆಯೇ ತನಗೆ ಬೆದರಿಕೆ ಹಾಕಿ, ಕಾನೂನುಬಾಹಿರವಾಗಿ ಗೃಹಬಂಧನದಲ್ಲಿ ಇರಿಸಿದ್ದರು ಎಂದು ಆರೋಪಿಸಿದ್ದ ಆಯುಷ್ ಮಲಿಕ್ ಎಂಬ 31 ವರ್ಷದ ಯುವಕನನ್ನು...

ಬಿಜ್ನೋರ್‌ನಲ್ಲಿ ಮುಸ್ಲಿಂ ಶಿಕ್ಷಕನ ಗುಂಡಿಕ್ಕಿ ಹತ್ಯೆ: ‘ಲವ್ ಜಿಹಾದ್’ ಆರೋಪ; ವೈಯಕ್ತಿಕ ದ್ವೇಷದ ಬಗ್ಗೆಯೂ ಪೊಲೀಸರಿಂದ ತನಿಖೆ 

ಬಿಜ್ನೋರ್: ಉತ್ತರ ಪ್ರದೇಶದ ಬಿಜ್ನೋರ್ ಜಿಲ್ಲೆಯಲ್ಲಿ 43 ವರ್ಷದ ಮುಸ್ಲಿಂ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕನೊಬ್ಬರನ್ನು ರೈತನೊಬ್ಬ ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಶಿಕ್ಷಕ ನೌಶಾದ್ ಅಹ್ಮದ್ ಅವರು ‘ಲವ್ ಜಿಹಾದ್’...