Homeಕರ್ನಾಟಕಮಹಿಳಾ ದಿನಾಚರಣೆಯಂದು ನಿರ್ಮಲಾ ಎಲಿಗಾರ್ ಕಸಾಪ ಸದಸ್ಯತ್ವ ರದ್ದು: ಮಹೇಶ ಜೋಶಿಯಿಂದ ಸರ್ವಾಧಿಕಾರತ್ವ ಪ್ರದರ್ಶನ

ಮಹಿಳಾ ದಿನಾಚರಣೆಯಂದು ನಿರ್ಮಲಾ ಎಲಿಗಾರ್ ಕಸಾಪ ಸದಸ್ಯತ್ವ ರದ್ದು: ಮಹೇಶ ಜೋಶಿಯಿಂದ ಸರ್ವಾಧಿಕಾರತ್ವ ಪ್ರದರ್ಶನ

- Advertisement -
- Advertisement -

ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಮಹೇಶ್ ಜೋಶಿ ಅವರು ವಿಶ್ವ ಮಹಿಳಾ ದಿನಾಚರಣೆಯ ದಿನದಂದು ದೂರದರ್ಶನದ ಸಹಾಯಕ ನಿರ್ದೇಶಕಿ ನಿರ್ಮಲಾ ಎಲಿಗಾರ್ ಅವರನ್ನು ಕಸಾಪ ಸದಸ್ಯತ್ವದಿಂದ ಅಮಾನತು ಮಾಡುವ ಮೂಲಕ ಸರ್ವಾಧಿಕಾರತ್ವ ಪ್ರದರ್ಶಿಸಿದ್ದಾರೆ.

ರಾಜ್ಯದಲ್ಲಿ ವಿಶ್ವ ಮಹಿಳಾ ದಿನಾಚರಣೆಯ ದಿನದಂದು ಕೋಲಾರದ ಸಂಸದ ಎಸ್‌.ಮುನಿಸ್ವಾಮಿ ಕುಂಕುಮ ಇಟ್ಟುಕೊಳ್ಳದ ಮಹಿಳೆಯನ್ನು ಸಾರ್ವಜನಿಕವಾಗಿ ನಿಂದಿಸುವ ಮೂಲಕ ತನ್ನ ಅಜ್ಞಾನ ಮತ್ತು ಸ್ತ್ರೀ ದ್ವೇಷದ ನಡೆಯನ್ನು ತೋರಿದ್ದಾರೆ. ಮತ್ತೊಂದೆಡೆ, ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾಗಿರುವ ಮಹೇಶ ಜೋಶಿ ಅವರು, ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಸಂದರ್ಭದಲ್ಲಿ ಲೇಖಕಿಯರಿಗೆ ಉಳಿದುಕೊಳ್ಳಲು ಸರಿಯಾದ ವ್ಯವಸ್ಥೆ ಇಲ್ಲದಿರುವುದನ್ನು ಪ್ರಶ್ನಿಸಿದ್ದಕ್ಕೆ ನಿರ್ಮಲಾ ಎಲಿಗಾರ್ ಅವರ ಸದಸ್ಯತ್ವವನ್ನು ಮಹಿಳಾ ದಿನಾಚರಣೆಯಂದು ರದ್ದುಗೊಳಿಸುವ ಮೂಲಕ ಪ್ರಶ್ನಿಸುವ ಹಕ್ಕನ್ನು ಕಿತ್ತುಕೊಳ್ಳುವ ಪ್ರಯತ್ನ ಮಾಡಿದ್ದಾರೆ.

ಹಾವೇರಿಯಲ್ಲಿ ನಡೆದ 8ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ನಿರ್ಮಲಾ ಸಿ. ಎಲಿಗಾರ್ ಅವರು, ವಸತಿ ಸೌಲಭ್ಯಕ್ಕೆ ಸಂಬಂಧಿಸಿದಂತೆ ಪರಿಷತ್ತಿನ ಅಧ್ಯಕ್ಷರೊಂದಿಗೆ ಬಹಿರಂಗವಾಗಿಯೇ ಮಾತಿನ ಚಕಮಕಿ ನಡೆಸಿದ್ದರು. ಅಷ್ಟೇ ಅಲ್ಲದೇ ದೂರದರ್ಶನದಲ್ಲಿ ಕಸಾಪ ವಿರುದ್ಧ ಒಂದು ನಿಮಿಷದ ಮೌನಾಚರಣೆ ಮಾಡಿದ್ದರು. ಇದು ಮಹೇಶ್ ಜೋಶಿಯವರ ಕಣ್ಣು ಕೆಂಪಾಗಲು ಕಾರಣವಾಗಿದೆ.

ಜೋಶಿ ನೇತೃತ್ವದ ಕಸಾಪ ಕಾರ್ಯಕಾರಿ ಸಮಿತಿಯು, ‘ಪರಿಷತ್ತಿನ ಘನತೆ ಗೌರವ ಮತ್ತು ಧ್ಯೇಯೋದೇಶಗಳಿಗೆ ವಿರುದ್ಧವಾಗಿ ಅವರು ನಡೆದುಕೊಂಡಿದ್ದಾರೆ’ ಎಂದು ಪರಿಷತ್ತಿನ ನಿಯಮ 8) 7) ಅಡಿಯಲ್ಲಿನ ಅಧಿಕಾರ ಬಳಸಿ ನಿರ್ಮಲಾ ಸಿ. ಎಲಿಗಾರ್ ಅವರ ಕಸಾಪ ಸದಸ್ಯತ್ವವನ್ನು ಅಮಾನತುಗೊಳಿಸಿದೆ. ಇದೇ ವೇಳೆ 2022ನೇ ಸಾಲಿನಲ್ಲಿ ನಿರ್ಮಲಾ ಎಲಿಗಾ‌ರ್‌ ಅವರಿಗೆ ನೀಡಲಾಗಿದ್ದ ‘ಪಂಕಜಶ್ರೀ ಸಾಹಿತ್ಯ ಪ್ರಶಸ್ತಿ’ಯನ್ನೂ ಹಿಂಪಡೆದಿದ್ದಾರೆ.

ಏಕಾಏಕಿ ಸದ್ಯಸತ್ವದ ಅಮಾನತು ಮತ್ತು ಪ್ರಶಸ್ತಿ ಹಿಂಪಡೆಯುವಿಕೆಯು ಕಸಾಪ ಇತಿಹಾಸದಲ್ಲಿ ಎಂದೂ ನಡೆದಿರಲಿಲ್ಲ. ಕಳೆದ ಒಂದು ವರ್ಷದಿಂದ ಹಲವು ನಡೆಗಳಲ್ಲಿ ವಿವಾದಕ್ಕೀಡಾಗಿರುವ ಕಸಾಪ, ಹೊಸ ವಿವಾದವನ್ನು ಹುಟ್ಟುಹಾಕಿದೆ. ಇದು ಸಾಹಿತ್ಯಕ ಮತ್ತು ಸಾಂಸ್ಕೃತಿಕ ಲೋಕದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿದೆ.

ಇದನ್ನೂ ಓದಿ: ಕಸಾಪ ನೂತನ ಅಧ್ಯಕ್ಷರಾದ ಮಹೇಶ್‌ ಜೋಶಿ ಬಿಜೆಪಿ ಬೆಂಬಲಿತರು ಎಂಬುದಕ್ಕೆ ಇಲ್ಲಿದೆ ಪುರಾವೆ!

ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಮಹೇಶ ಜೋಶಿ ಅವರ ಸರ್ವಧಿಕಾರದ ಈ ನಡೆಯನ್ನು ಪ್ರಶ್ನಿಸಿ ಕವಿ, ಹೋರಾಟಗಾರ ಬಸವರಾಜ ಸೂಳಿಬಾವಿ ಅವರು ಸಾಮಾಜಿಕ ಜಾಲತಾಣ ಫೇಸ್‌ಬುಕ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.

”ಸರ್ವಾಧಿಕಾರಿಯೇ ಕಸಾಪಕ್ಕೆ ಅಧ್ಯಕ್ಷ.. ವಿಶ್ವ ಮಹಿಳಾ ದಿನಾಚರಣೆಯ ದಿನವೇ ರಾಜ್ಯದ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾಗಿರುವ ಮಹೇಶ ಜೋಶಿ ಅವರು, ನಿರ್ಮಲಾ ಎಲಿಗಾರ ಅವರ ಸದಸ್ಯತ್ವ ರದ್ದುಗೊಳಿಸಿ ಅವರು ಪುರಸ್ಕೃತರಾದ ಪ್ರಶಸ್ತಿಯೊಂದನ್ನು ಹಿಂಪಡೆವ ಆದೇಶ ಹೊರಡಿಸಿ ತಮ್ಮ ಸರ್ವಾಧಿಕಾರವನ್ನು ಡಾಳಾಗಿ ಪ್ರದರ್ಶನ ಮಾಡಿದ್ದಾರೆ. ಪ್ರಾಯಶಃ ಇಷ್ಟು ದಿನದವರೆಗೆ ಎಂಥೆಂಥವರನ್ನೋ ಅಧ್ಯಕ್ಷರಾಗಿ ಕಂಡ ಕಸಾಪ ಇಂಥ ಪ್ರಜಾಪ್ರಭುತ್ವ ವಿರೋಧಿಯಾದ ಸರ್ವಾಧಿಕಾರಿಯನ್ನು ಕಂಡಿರಲಿಲ್ಲ. ಇದರಿಂದ ಸಮಸ್ತ ಸಾಹಿತ್ಯ ವಲಯವನ್ನು ಅವಮಾನಿಸುವ ಕೆಲಸ ನಡೆಯುತ್ತಿವೆ. ನಾವಿದನ್ನು ತೀವ್ರವಾಗಿ ವಿರೋಧಿಸದಿದ್ದರೆ ಕಸಾಪ ಶಾಶ್ವತವಾಗಿ ಮುಳುಗಿಯೇ ಹೋಗುತ್ತದೆ.”

”ದೂರದರ್ಶನದ ನಿರ್ದೇಶಕರಾದ ಒಂದಷ್ಟು ಬರವಣಿಗೆ ಮಾಡಿರುವ ನಿರ್ಮಲಾ ಎಲಿಗಾರ ಅವರು ಹಾವೇರಿ ಸಮ್ಮೇಳನದಲ್ಲಿ ಆಹ್ವಾನಿತರಾಗಿದ್ದರು. ಉತ್ತರ ಕರ್ನಾಟಕದ ಈ ಜವಾರಿ ಹೆಣ್ಣುಮಗಳು ತಮಗೆ ಸರಿಯಾದ ವಸತಿ ವ್ಯವಸ್ಥೆ ಮಾಡದಿರುವುದು ಮಹಿಳೆಯೊಬ್ಬಳಿಗಾದ ಅವಮಾನ ಎಂದೇ ಪ್ರತಿಭಟಿಸಿದ್ದರು. ತಮಗಾದ ಈ ಅನ್ಯಾಯವನ್ನು ಮುಕ್ತವಾಗಿಯೇ ಸಮ್ಮೇಳನದ ಸಂದರ್ಭದಲ್ಲಿ ಹೊರಹಾಕಿದ್ದರು. ಅವರ ಈ ಪ್ರತಿಭಟನೆ ಪ್ರಜಾಸತ್ತಾತ್ಮಕವಾಗಿಯೇ ಇತ್ತು. ಅದನ್ನೇ ನೆಪ ಮಾಡಿಕೊಂಡು, ಅವರ ಆಜೀವ ಸದಸ್ಯತ್ವವನ್ನು ಅಧ್ಯಕ್ಷ ಮಹೇಶ ಜೋಶಿ ರದ್ದು ಮಾಡಿದ್ದಾರಲ್ಲದೆ ಅವರಿಗೆ ದೊರತ ಪ್ರಶಸ್ತಿಯೊಂದನ್ನು ಹಿಂಪಡೆದಿದ್ದಾರೆ. ಆ ಮೂಲಕ ಕಸಾಪದ ಸಂವಿಧಾನವನ್ನೇ ಅವಮಾನಿಸಿ ಪ್ರಜಾಪ್ರಭುತ್ವದ ವಿರೋಧಿತನ ತೋರಿಸಿದ್ದಾರೆ. ಇದು ಖಂಡನೀಯ. ಅಮಾನತ್ತು ಆದೇಶವನ್ನು ಹಿಂಪಡೆದು ಕ್ಷಮೆ ಯಾಚಿಸುವಂಥ ವಾತಾವರಣವನ್ನು ನಾಡಿನ ಸಾಹಿತಿಗಳು ವಿಚಾರವಂತರು ಮಾಡಬೇಕಿದೆ” ಎಂದು ಹೇಳಿದ್ದಾರೆ.

”ಇದೇ ರವಿವಾರ 12 ರಂದು ಬೆಂಗಳೂರಿನಲ್ಲಿ ಕಸಾಪದ ವಿವಿಧ ದತ್ತಿ ಪ್ರಶಸ್ತಿಗಳ ಪ್ರದಾನ ಸಮಾರಂಭ ಇದೆ. ಅನೇಕ ಜನ ವಿವೇಕವುಳ್ಳ ಮಹಿಳಾ ಸಾಹಿತಿಗಳು ಪುರುಷರು ಪ್ರಶಸ್ತಿ ಸ್ವೀಕರಿಸಲು ಹೋಗಲಿದ್ದಾರೆ. ಅವರಲ್ಲಿ ಜಾಗೃತ ಮನಸಿನ ಕೆಲವರಾದರೂ ಈ ಸರ್ವಾಧಿಕಾರವನ್ನು ಪ್ರತಿಭಟಿಸಬಹುದೆ?” ಎಂದು ಕೇಳಿದ್ದಾರೆ.

”ಎಲ್ಲಕ್ಕಿಂತ ಮುಖ್ಯವಾಗಿ ಈ ಸಮಾರಂಭದಲ್ಲಿ ನಾವು ಇಷ್ಟು ವರ್ಷ ಬಂಡಾಯದ ಸಾಕ್ಷಿ ಪ್ರಜ್ಞೆ ಎಂದು ಹೇಳಿಕೊಂಡು ಬರಲಾದ ಕಾಳೇಗೌಡ ನಾಗವಾರ ಅವರ ಹೆಸರು ಪ್ರಶಸ್ತಿ ಪ್ರದಾನ ಮಾಡುವಲ್ಲಿ ಇದೆ. ಸಂವೇದನಾಶೀಲ ಕಾಳೇಗೌಡ ನಾಗವಾರ ಅವರು ಯಾವ ನಿರ್ಧಾರ ತಗೋಬಹುದು? ಎನ್ನುವ ಬಗ್ಗೆ ನನಗೆ ಕುತೂಹಲ ಇದೆ. ಬಹುಶಃ ಅವರ ಬದುಕಿನಲ್ಲಿ ಇಂಥ ಸರ್ವಾಧಿಕಾರಿಯನ್ನು ಸಹಿಸಿದ ಚರಿತ್ರೆ ಇಲ್ಲ. ಈಗ ನೋಡಬೇಕು, ಸರ್ವಾಧಿಕಾರಿ ತೊಲಗಲು ಕೂಗು ಹಾಕಿಯಾರೆ?” ಎಂದು ಅವರು ಪ್ರಶ್ನೆ ಮಾಡಿದ್ದಾರೆ.

ಮಹೇಶ ಜೋಶಿ ಅವರ ಈ ನಡಾವಳಿ ಹಾಗೂ ಪ್ರಜಾಪ್ರಭುತ್ವ ವಿರೋಧಿತನವನ್ನು ವಿರೋಧಿಸಿ ಬಂಡಾಯದ ಮನಸುಗಳು ಜನ ಸಾಹಿತ್ಯ ಸಮಾವೇಶವನ್ನು ಇತ್ತೀಚಿಗಷ್ಟೇ ಮಾಡಿದ ನೆನಪು ಇನ್ನು ಹಸಿರಾಗಿರುವಾಗಲೇ ಇಂತಹ ಸರ್ವಾಧಿಕಾರಿ ನಡೆ ಜೋಶಿ ತೋರಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹಾಜರಾತಿ ಆಧಾರದ ಮೇಲೆ ಪರೀಕ್ಷಾ ನಿಷೇಧ ವಿರೋಧಿಸಿ ಎಎಂಯು ಎಂಜಿನಿಯರಿಂಗ್ ವಿದ್ಯಾರ್ಥಿಗಳಿಂದ ಪ್ರತಿಭಟನೆ; ಬಂಧನ, ಹಲ್ಲೆ ಆರೋಪ 

ಕಡಿಮೆ ಹಾಜರಾತಿ ಕಾರಣ ಸೆಮಿಸ್ಟರ್ ಪರೀಕ್ಷೆಗಳಿಂದ ನಿಷೇಧಿಸಲ್ಪಟ್ಟಿದ್ದನ್ನು ವಿರೋಧಿಸಿ ನಡೆದ ಪ್ರತಿಭಟನೆಗಳ ನಂತರ, ವಿಶ್ವವಿದ್ಯಾಲಯದ ಪ್ರೊಕ್ಟೋರಿಯಲ್ ತಂಡವು ಹಲವಾರು ಅಂತಿಮ ವರ್ಷದ ವಿದ್ಯಾರ್ಥಿಗಳನ್ನು ವಶಕ್ಕೆ ಪಡೆದಿದೆ ಎಂದು ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯದ (AMU)...

ವಿಧಾನಸಭಾ ಚುನಾವಣೆಗೂ ಮುನ್ನ ಎಐಎಡಿಎಂಕೆಯಿಂದ ಉಚ್ಚಾಟನೆಗೊಂಡ ಮಾಜಿ ಸಿಎಂ ಪನ್ನೀರ್‌ಸೆಲ್ವಂ, ಪ್ರತಿಸ್ಪರ್ಧಿ ಡಿಎಂಕೆ ಪಕ್ಷಕ್ಕೆ ಸೇರ್ಪಡೆ

ಮೂರು ಬಾರಿ ತಮಿಳುನಾಡು ಮುಖ್ಯಮಂತ್ರಿ ಮತ್ತು ಜೆ ಜಯಲಲಿತಾ ಅವರ ದೀರ್ಘಕಾಲದ ಸಹಾಯಕರಾಗಿದ್ದ ಪನ್ನೀರ್‌ಸೆಲ್ವಂ ಅವರನ್ನು ಎಡಪ್ಪಾಡಿ ಕೆ ಪಳನಿಸ್ವಾಮಿ (ಇಪಿಎಸ್) ಅವರೊಂದಿಗಿನ ತೀವ್ರ ಅಧಿಕಾರ ಹೋರಾಟದ ನಂತರ 2022 ರಲ್ಲಿ ಎಐಎಡಿಎಂಕೆಯಿಂದ...

‘ನಾನು ಭ್ರಷ್ಟನಲ್ಲ’: ಅಬಕಾರಿ ನೀತಿ ಪ್ರಕರಣದಲ್ಲಿ ದೆಹಲಿ ನ್ಯಾಯಾಲಯದಿಂದ ಕ್ಲೀನ್ ಚಿಟ್; ಮಾಧ್ಯಮಗಳೆದುರು ಭಾವುಕರಾದ ಕೇಜ್ರಿವಾಲ್

ದೆಹಲಿಯ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಮತ್ತು ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರನ್ನು ಅಬಕಾರಿ ನೀತಿ ಪ್ರಕರಣದಲ್ಲಿ ದೆಹಲಿ ನ್ಯಾಯಾಲಯವು ಖುಲಾಸೆಗೊಳಿಸಿದ ಕೆಲವೇ ಕ್ಷಣಗಳಲ್ಲಿ, ಫೆಬ್ರವರಿ 27, ಶುಕ್ರವಾರದಂದು ಮಾಧ್ಯಮಗಳ...

‘ಮುಸ್ಲಿಮರ ವಿರುದ್ಧ ದ್ವೇಷ ಭಾಷಣ’: ಅಸ್ಸಾಂ ಸಿಎಂ ಹಿಮಂತ ಶರ್ಮಾಗೆ ನೋಟಿಸ್ ಜಾರಿ ಮಾಡಿದ ಗುವಾಹಟಿ ಹೈಕೋರ್ಟ್

ಗುವಾಹಟಿ: ಮುಸ್ಲಿಮರನ್ನು ಗುರಿಯಾಗಿಸಿಕೊಂಡು "ದ್ವೇಷ ಭಾಷಣ" ಮಾಡಿದ್ದಾರೆ ಎಂಬ ಆರೋಪದ ಮೇಲೆ ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರಿಗೆ ಗುವಾಹಟಿ ಹೈಕೋರ್ಟ್ ಗುರುವಾರ ನೋಟಿಸ್ ಜಾರಿ ಮಾಡಿದೆ. ಬಂಗಾಳಿ ಮೂಲದ ಮುಸ್ಲಿಮರನ್ನು ಗುರಿಯಾಗಿಸಿಕೊಂಡು...

ಅಫ್ಘಾನಿಸ್ತಾನದೊಂದಿಗೆ ‘ಮುಕ್ತ ಯುದ್ಧ’ ಘೋಷಿಸಿದ ಪಾಕಿಸ್ತಾನ; ತಾಲಿಬಾನ್‌ ವಿರುದ್ಧ ಆಪರೇಷನ್‌ ಗಜಬ್-ಲಿಲ್‌-ಹಕ್‌ ಆರಂಭಿಸಿದ ಪಾಕ್‌ ಸೇನೆ!

ಅಫ್ಘಾನಿಸ್ತಾನದೊಂದಿಗಿನ ಉದ್ವಿಗ್ನತೆಯನ್ನು ಇಸ್ಲಾಮಾಬಾದ್ ಔಪಚಾರಿಕವಾಗಿ ಹೆಚ್ಚಿಸಿದೆ, ಹಂಚಿಕೆಯ ಗಡಿಯಲ್ಲಿ ಹೊಸ ಮತ್ತು ಮಾರಕ ಘರ್ಷಣೆಗಳ ನಂತರ ತಾಲಿಬಾನ್ ನೇತೃತ್ವದ ಸರ್ಕಾರದ ವಿರುದ್ಧ ಮುಕ್ತ ಯುದ್ಧ ಎಂದು ಘೋಷಿಸಿದೆ.  ಶುಕ್ರವಾರ ಮುಂಜಾನೆ ಕಾಬೂಲ್ ಮತ್ತು ಕಂದಹಾರ್‌ನಲ್ಲಿ...

ಎಬಿವಿಪಿ ದಾಂಧಲೆ : ಚರ್ಚಾ ಕಾರ್ಯಕ್ರಮ ಆಯೋಜಿಸಿದ್ದ ವಿದ್ಯಾರ್ಥಿಗಳ ವಿರುದ್ಧ ದೂರು ದಾಖಲಿಸಿದ ಅಜೀಂ ಪ್ರೇಮ್ ಜಿ ವಿವಿ

ಅಜೀಂ ಪ್ರೇಮ್‌ ಜಿ ವಿಶ್ವವಿದ್ಯಾಲಯಕ್ಕೆ (ಎಪಿಯು) ಎಬಿವಿಪಿ ಸದಸ್ಯರು ನುಗ್ಗಿ ದಾಂಧಲೆ ನಡೆಸಿದ ಬಳಿಕ, ಕ್ಯಾಂಪಸ್‌ನಲ್ಲಿ ಚರ್ಚಾ ಕಾರ್ಯಕ್ರಮ ಆಯೋಜಿಸಿದ್ದ 'ಸ್ಪಾರ್ಕ್ ರೀಡಿಂಗ್ ಸರ್ಕಲ್' ಎಂಬ ಸಾಮಾಜಿಕ ಮಾಧ್ಯಮ ಪುಟದ ವಿರುದ್ಧ ಕುಲಸಚಿವರು...

2019ರ ಈಸ್ಟರ್ ದಾಳಿಗೆ ಸಂಬಂಧಿಸಿದಂತೆ ಶ್ರೀಲಂಕಾದ ಮಾಜಿ ಗುಪ್ತಚರ ಮುಖ್ಯಸ್ಥರ ಬಂಧನ

2019ರ ಈಸ್ಟರ್ ಭಾನುವಾರದ ಬಾಂಬ್ ಸ್ಫೋಟಗಳಿಗೆ ಸಂಬಂಧಿಸಿದಂತೆ ಶ್ರೀಲಂಕಾದ ಅಪರಾಧ ತನಿಖಾಧಿಕಾರಿಗಳು ಮಾಜಿ ರಾಜ್ಯ ಗುಪ್ತಚರ ಸೇವೆ (SIS) ಮುಖ್ಯಸ್ಥ ನಿವೃತ್ತ ಮೇಜರ್ ಜನರಲ್ ಸುರೇಶ್ ಸಲ್ಲೇ ಅವರನ್ನು ಬಂಧಿಸಿದ್ದಾರೆ ಎಂದು ಪೊಲೀಸ್...

ಹೈದರಾಬಾದ್| ವಿಡಿಯೋ ಗೇಮ್ ಆಡಬೇಡ ಎಂದಿದ್ದಕ್ಕೆ ನೇಣಿಗೆ ಶರಣಾದ 12 ವರ್ಷದ ಬಾಲಕ

ವಿಡಿಯೋ ಗೇಮ್ ಆಡಿದ್ದಕ್ಕಾಗಿ ತಂದೆ ನಿರಂತರವಾಗಿ ಬೈಯುತ್ತಿದ್ದ ಕಾರಣ 12 ವರ್ಷದ ಬಾಲಕ (ಫೆ.26) ಗುರುವಾರ ತನ್ನ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹೈದರಾಬಾದ್‌ನಲ್ಲಿ ನಡೆದಿದೆ ಎಂದು 'ಸಿಯಾಸತ್' ವರದಿ ಮಾಡಿದೆ. ಬಂಜಾರಾ ಹಿಲ್ಸ್‌ನ...

‘ಕೋಮು ಸಾಮರಸ್ಯ ಕದಡುವ ಸಾಧ್ಯತೆ’: ‘ದಿ ಕೇರಳ ಸ್ಟೋರಿ-2’ ಬಿಡುಗಡೆಗೆ ಕೇರಳ ಹೈಕೋರ್ಟ್ ತಡೆ

'ಕೇರಳ ಸ್ಟೋರಿ 2 : ಗೋಸ್ ಬಿಯಾಂಡ್' ಸಿನಿಮಾದ ಸೆನ್ಸಾರ್ ಪ್ರಮಾಣೀಕರಣವನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಗಳ ವಿಚಾರಣೆ ನಡೆಸಿದ ಕೇರಳ ಹೈಕೋರ್ಟ್, ಗುರುವಾರ (ಫೆ.26) ಸಿನಿಮಾದ ಬಿಡುಗಡೆಗೆ ತಡೆ ನೀಡಿದೆ. ಸಿನಿಮಾ ನಾಳೆ...

ಕೈದಿಗಳಿಗೆ ನಿಯತಕಾಲಿಕ ವೈದ್ಯಕೀಯ ತಪಾಸಣೆಯ ಹಕ್ಕಿದೆ: ಮದ್ರಾಸ್ ಹೈಕೋರ್ಟ್ 

ಮದ್ರಾಸ್ ಹೈಕೋರ್ಟ್‌ನ ಮಧುರೈ ಪೀಠವು, ಪ್ರತಿಯೊಬ್ಬ ಕೈದಿಯೂ ನಿಯತಕಾಲಿಕ ವೈದ್ಯಕೀಯ ತಪಾಸಣೆಗೆ ಅರ್ಹನಾಗಿದ್ದು, ಅಂತಹ ಆರೋಗ್ಯ ರಕ್ಷಣೆ ಸಂವಿಧಾನದ 21ನೇ ವಿಧಿಯ ಅಡಿಯಲ್ಲಿ ಖಾತರಿಪಡಿಸಲಾದ ಜೀವಿಸುವ ಹಕ್ಕು ಮತ್ತು ವೈಯಕ್ತಿಕ ಸ್ವಾತಂತ್ರ್ಯದ ವ್ಯಾಪ್ತಿಗೆ...