Homeಕರ್ನಾಟಕಮಹಿಳಾ ದಿನಾಚರಣೆಯಂದು ನಿರ್ಮಲಾ ಎಲಿಗಾರ್ ಕಸಾಪ ಸದಸ್ಯತ್ವ ರದ್ದು: ಮಹೇಶ ಜೋಶಿಯಿಂದ ಸರ್ವಾಧಿಕಾರತ್ವ ಪ್ರದರ್ಶನ

ಮಹಿಳಾ ದಿನಾಚರಣೆಯಂದು ನಿರ್ಮಲಾ ಎಲಿಗಾರ್ ಕಸಾಪ ಸದಸ್ಯತ್ವ ರದ್ದು: ಮಹೇಶ ಜೋಶಿಯಿಂದ ಸರ್ವಾಧಿಕಾರತ್ವ ಪ್ರದರ್ಶನ

- Advertisement -
- Advertisement -

ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಮಹೇಶ್ ಜೋಶಿ ಅವರು ವಿಶ್ವ ಮಹಿಳಾ ದಿನಾಚರಣೆಯ ದಿನದಂದು ದೂರದರ್ಶನದ ಸಹಾಯಕ ನಿರ್ದೇಶಕಿ ನಿರ್ಮಲಾ ಎಲಿಗಾರ್ ಅವರನ್ನು ಕಸಾಪ ಸದಸ್ಯತ್ವದಿಂದ ಅಮಾನತು ಮಾಡುವ ಮೂಲಕ ಸರ್ವಾಧಿಕಾರತ್ವ ಪ್ರದರ್ಶಿಸಿದ್ದಾರೆ.

ರಾಜ್ಯದಲ್ಲಿ ವಿಶ್ವ ಮಹಿಳಾ ದಿನಾಚರಣೆಯ ದಿನದಂದು ಕೋಲಾರದ ಸಂಸದ ಎಸ್‌.ಮುನಿಸ್ವಾಮಿ ಕುಂಕುಮ ಇಟ್ಟುಕೊಳ್ಳದ ಮಹಿಳೆಯನ್ನು ಸಾರ್ವಜನಿಕವಾಗಿ ನಿಂದಿಸುವ ಮೂಲಕ ತನ್ನ ಅಜ್ಞಾನ ಮತ್ತು ಸ್ತ್ರೀ ದ್ವೇಷದ ನಡೆಯನ್ನು ತೋರಿದ್ದಾರೆ. ಮತ್ತೊಂದೆಡೆ, ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾಗಿರುವ ಮಹೇಶ ಜೋಶಿ ಅವರು, ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಸಂದರ್ಭದಲ್ಲಿ ಲೇಖಕಿಯರಿಗೆ ಉಳಿದುಕೊಳ್ಳಲು ಸರಿಯಾದ ವ್ಯವಸ್ಥೆ ಇಲ್ಲದಿರುವುದನ್ನು ಪ್ರಶ್ನಿಸಿದ್ದಕ್ಕೆ ನಿರ್ಮಲಾ ಎಲಿಗಾರ್ ಅವರ ಸದಸ್ಯತ್ವವನ್ನು ಮಹಿಳಾ ದಿನಾಚರಣೆಯಂದು ರದ್ದುಗೊಳಿಸುವ ಮೂಲಕ ಪ್ರಶ್ನಿಸುವ ಹಕ್ಕನ್ನು ಕಿತ್ತುಕೊಳ್ಳುವ ಪ್ರಯತ್ನ ಮಾಡಿದ್ದಾರೆ.

ಹಾವೇರಿಯಲ್ಲಿ ನಡೆದ 8ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ನಿರ್ಮಲಾ ಸಿ. ಎಲಿಗಾರ್ ಅವರು, ವಸತಿ ಸೌಲಭ್ಯಕ್ಕೆ ಸಂಬಂಧಿಸಿದಂತೆ ಪರಿಷತ್ತಿನ ಅಧ್ಯಕ್ಷರೊಂದಿಗೆ ಬಹಿರಂಗವಾಗಿಯೇ ಮಾತಿನ ಚಕಮಕಿ ನಡೆಸಿದ್ದರು. ಅಷ್ಟೇ ಅಲ್ಲದೇ ದೂರದರ್ಶನದಲ್ಲಿ ಕಸಾಪ ವಿರುದ್ಧ ಒಂದು ನಿಮಿಷದ ಮೌನಾಚರಣೆ ಮಾಡಿದ್ದರು. ಇದು ಮಹೇಶ್ ಜೋಶಿಯವರ ಕಣ್ಣು ಕೆಂಪಾಗಲು ಕಾರಣವಾಗಿದೆ.

ಜೋಶಿ ನೇತೃತ್ವದ ಕಸಾಪ ಕಾರ್ಯಕಾರಿ ಸಮಿತಿಯು, ‘ಪರಿಷತ್ತಿನ ಘನತೆ ಗೌರವ ಮತ್ತು ಧ್ಯೇಯೋದೇಶಗಳಿಗೆ ವಿರುದ್ಧವಾಗಿ ಅವರು ನಡೆದುಕೊಂಡಿದ್ದಾರೆ’ ಎಂದು ಪರಿಷತ್ತಿನ ನಿಯಮ 8) 7) ಅಡಿಯಲ್ಲಿನ ಅಧಿಕಾರ ಬಳಸಿ ನಿರ್ಮಲಾ ಸಿ. ಎಲಿಗಾರ್ ಅವರ ಕಸಾಪ ಸದಸ್ಯತ್ವವನ್ನು ಅಮಾನತುಗೊಳಿಸಿದೆ. ಇದೇ ವೇಳೆ 2022ನೇ ಸಾಲಿನಲ್ಲಿ ನಿರ್ಮಲಾ ಎಲಿಗಾ‌ರ್‌ ಅವರಿಗೆ ನೀಡಲಾಗಿದ್ದ ‘ಪಂಕಜಶ್ರೀ ಸಾಹಿತ್ಯ ಪ್ರಶಸ್ತಿ’ಯನ್ನೂ ಹಿಂಪಡೆದಿದ್ದಾರೆ.

ಏಕಾಏಕಿ ಸದ್ಯಸತ್ವದ ಅಮಾನತು ಮತ್ತು ಪ್ರಶಸ್ತಿ ಹಿಂಪಡೆಯುವಿಕೆಯು ಕಸಾಪ ಇತಿಹಾಸದಲ್ಲಿ ಎಂದೂ ನಡೆದಿರಲಿಲ್ಲ. ಕಳೆದ ಒಂದು ವರ್ಷದಿಂದ ಹಲವು ನಡೆಗಳಲ್ಲಿ ವಿವಾದಕ್ಕೀಡಾಗಿರುವ ಕಸಾಪ, ಹೊಸ ವಿವಾದವನ್ನು ಹುಟ್ಟುಹಾಕಿದೆ. ಇದು ಸಾಹಿತ್ಯಕ ಮತ್ತು ಸಾಂಸ್ಕೃತಿಕ ಲೋಕದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿದೆ.

ಇದನ್ನೂ ಓದಿ: ಕಸಾಪ ನೂತನ ಅಧ್ಯಕ್ಷರಾದ ಮಹೇಶ್‌ ಜೋಶಿ ಬಿಜೆಪಿ ಬೆಂಬಲಿತರು ಎಂಬುದಕ್ಕೆ ಇಲ್ಲಿದೆ ಪುರಾವೆ!

ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಮಹೇಶ ಜೋಶಿ ಅವರ ಸರ್ವಧಿಕಾರದ ಈ ನಡೆಯನ್ನು ಪ್ರಶ್ನಿಸಿ ಕವಿ, ಹೋರಾಟಗಾರ ಬಸವರಾಜ ಸೂಳಿಬಾವಿ ಅವರು ಸಾಮಾಜಿಕ ಜಾಲತಾಣ ಫೇಸ್‌ಬುಕ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.

”ಸರ್ವಾಧಿಕಾರಿಯೇ ಕಸಾಪಕ್ಕೆ ಅಧ್ಯಕ್ಷ.. ವಿಶ್ವ ಮಹಿಳಾ ದಿನಾಚರಣೆಯ ದಿನವೇ ರಾಜ್ಯದ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾಗಿರುವ ಮಹೇಶ ಜೋಶಿ ಅವರು, ನಿರ್ಮಲಾ ಎಲಿಗಾರ ಅವರ ಸದಸ್ಯತ್ವ ರದ್ದುಗೊಳಿಸಿ ಅವರು ಪುರಸ್ಕೃತರಾದ ಪ್ರಶಸ್ತಿಯೊಂದನ್ನು ಹಿಂಪಡೆವ ಆದೇಶ ಹೊರಡಿಸಿ ತಮ್ಮ ಸರ್ವಾಧಿಕಾರವನ್ನು ಡಾಳಾಗಿ ಪ್ರದರ್ಶನ ಮಾಡಿದ್ದಾರೆ. ಪ್ರಾಯಶಃ ಇಷ್ಟು ದಿನದವರೆಗೆ ಎಂಥೆಂಥವರನ್ನೋ ಅಧ್ಯಕ್ಷರಾಗಿ ಕಂಡ ಕಸಾಪ ಇಂಥ ಪ್ರಜಾಪ್ರಭುತ್ವ ವಿರೋಧಿಯಾದ ಸರ್ವಾಧಿಕಾರಿಯನ್ನು ಕಂಡಿರಲಿಲ್ಲ. ಇದರಿಂದ ಸಮಸ್ತ ಸಾಹಿತ್ಯ ವಲಯವನ್ನು ಅವಮಾನಿಸುವ ಕೆಲಸ ನಡೆಯುತ್ತಿವೆ. ನಾವಿದನ್ನು ತೀವ್ರವಾಗಿ ವಿರೋಧಿಸದಿದ್ದರೆ ಕಸಾಪ ಶಾಶ್ವತವಾಗಿ ಮುಳುಗಿಯೇ ಹೋಗುತ್ತದೆ.”

”ದೂರದರ್ಶನದ ನಿರ್ದೇಶಕರಾದ ಒಂದಷ್ಟು ಬರವಣಿಗೆ ಮಾಡಿರುವ ನಿರ್ಮಲಾ ಎಲಿಗಾರ ಅವರು ಹಾವೇರಿ ಸಮ್ಮೇಳನದಲ್ಲಿ ಆಹ್ವಾನಿತರಾಗಿದ್ದರು. ಉತ್ತರ ಕರ್ನಾಟಕದ ಈ ಜವಾರಿ ಹೆಣ್ಣುಮಗಳು ತಮಗೆ ಸರಿಯಾದ ವಸತಿ ವ್ಯವಸ್ಥೆ ಮಾಡದಿರುವುದು ಮಹಿಳೆಯೊಬ್ಬಳಿಗಾದ ಅವಮಾನ ಎಂದೇ ಪ್ರತಿಭಟಿಸಿದ್ದರು. ತಮಗಾದ ಈ ಅನ್ಯಾಯವನ್ನು ಮುಕ್ತವಾಗಿಯೇ ಸಮ್ಮೇಳನದ ಸಂದರ್ಭದಲ್ಲಿ ಹೊರಹಾಕಿದ್ದರು. ಅವರ ಈ ಪ್ರತಿಭಟನೆ ಪ್ರಜಾಸತ್ತಾತ್ಮಕವಾಗಿಯೇ ಇತ್ತು. ಅದನ್ನೇ ನೆಪ ಮಾಡಿಕೊಂಡು, ಅವರ ಆಜೀವ ಸದಸ್ಯತ್ವವನ್ನು ಅಧ್ಯಕ್ಷ ಮಹೇಶ ಜೋಶಿ ರದ್ದು ಮಾಡಿದ್ದಾರಲ್ಲದೆ ಅವರಿಗೆ ದೊರತ ಪ್ರಶಸ್ತಿಯೊಂದನ್ನು ಹಿಂಪಡೆದಿದ್ದಾರೆ. ಆ ಮೂಲಕ ಕಸಾಪದ ಸಂವಿಧಾನವನ್ನೇ ಅವಮಾನಿಸಿ ಪ್ರಜಾಪ್ರಭುತ್ವದ ವಿರೋಧಿತನ ತೋರಿಸಿದ್ದಾರೆ. ಇದು ಖಂಡನೀಯ. ಅಮಾನತ್ತು ಆದೇಶವನ್ನು ಹಿಂಪಡೆದು ಕ್ಷಮೆ ಯಾಚಿಸುವಂಥ ವಾತಾವರಣವನ್ನು ನಾಡಿನ ಸಾಹಿತಿಗಳು ವಿಚಾರವಂತರು ಮಾಡಬೇಕಿದೆ” ಎಂದು ಹೇಳಿದ್ದಾರೆ.

”ಇದೇ ರವಿವಾರ 12 ರಂದು ಬೆಂಗಳೂರಿನಲ್ಲಿ ಕಸಾಪದ ವಿವಿಧ ದತ್ತಿ ಪ್ರಶಸ್ತಿಗಳ ಪ್ರದಾನ ಸಮಾರಂಭ ಇದೆ. ಅನೇಕ ಜನ ವಿವೇಕವುಳ್ಳ ಮಹಿಳಾ ಸಾಹಿತಿಗಳು ಪುರುಷರು ಪ್ರಶಸ್ತಿ ಸ್ವೀಕರಿಸಲು ಹೋಗಲಿದ್ದಾರೆ. ಅವರಲ್ಲಿ ಜಾಗೃತ ಮನಸಿನ ಕೆಲವರಾದರೂ ಈ ಸರ್ವಾಧಿಕಾರವನ್ನು ಪ್ರತಿಭಟಿಸಬಹುದೆ?” ಎಂದು ಕೇಳಿದ್ದಾರೆ.

”ಎಲ್ಲಕ್ಕಿಂತ ಮುಖ್ಯವಾಗಿ ಈ ಸಮಾರಂಭದಲ್ಲಿ ನಾವು ಇಷ್ಟು ವರ್ಷ ಬಂಡಾಯದ ಸಾಕ್ಷಿ ಪ್ರಜ್ಞೆ ಎಂದು ಹೇಳಿಕೊಂಡು ಬರಲಾದ ಕಾಳೇಗೌಡ ನಾಗವಾರ ಅವರ ಹೆಸರು ಪ್ರಶಸ್ತಿ ಪ್ರದಾನ ಮಾಡುವಲ್ಲಿ ಇದೆ. ಸಂವೇದನಾಶೀಲ ಕಾಳೇಗೌಡ ನಾಗವಾರ ಅವರು ಯಾವ ನಿರ್ಧಾರ ತಗೋಬಹುದು? ಎನ್ನುವ ಬಗ್ಗೆ ನನಗೆ ಕುತೂಹಲ ಇದೆ. ಬಹುಶಃ ಅವರ ಬದುಕಿನಲ್ಲಿ ಇಂಥ ಸರ್ವಾಧಿಕಾರಿಯನ್ನು ಸಹಿಸಿದ ಚರಿತ್ರೆ ಇಲ್ಲ. ಈಗ ನೋಡಬೇಕು, ಸರ್ವಾಧಿಕಾರಿ ತೊಲಗಲು ಕೂಗು ಹಾಕಿಯಾರೆ?” ಎಂದು ಅವರು ಪ್ರಶ್ನೆ ಮಾಡಿದ್ದಾರೆ.

ಮಹೇಶ ಜೋಶಿ ಅವರ ಈ ನಡಾವಳಿ ಹಾಗೂ ಪ್ರಜಾಪ್ರಭುತ್ವ ವಿರೋಧಿತನವನ್ನು ವಿರೋಧಿಸಿ ಬಂಡಾಯದ ಮನಸುಗಳು ಜನ ಸಾಹಿತ್ಯ ಸಮಾವೇಶವನ್ನು ಇತ್ತೀಚಿಗಷ್ಟೇ ಮಾಡಿದ ನೆನಪು ಇನ್ನು ಹಸಿರಾಗಿರುವಾಗಲೇ ಇಂತಹ ಸರ್ವಾಧಿಕಾರಿ ನಡೆ ಜೋಶಿ ತೋರಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...