Homeಕರ್ನಾಟಕಮಹಿಳಾ ದಿನಾಚರಣೆಯಂದು ನಿರ್ಮಲಾ ಎಲಿಗಾರ್ ಕಸಾಪ ಸದಸ್ಯತ್ವ ರದ್ದು: ಮಹೇಶ ಜೋಶಿಯಿಂದ ಸರ್ವಾಧಿಕಾರತ್ವ ಪ್ರದರ್ಶನ

ಮಹಿಳಾ ದಿನಾಚರಣೆಯಂದು ನಿರ್ಮಲಾ ಎಲಿಗಾರ್ ಕಸಾಪ ಸದಸ್ಯತ್ವ ರದ್ದು: ಮಹೇಶ ಜೋಶಿಯಿಂದ ಸರ್ವಾಧಿಕಾರತ್ವ ಪ್ರದರ್ಶನ

- Advertisement -
- Advertisement -

ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಮಹೇಶ್ ಜೋಶಿ ಅವರು ವಿಶ್ವ ಮಹಿಳಾ ದಿನಾಚರಣೆಯ ದಿನದಂದು ದೂರದರ್ಶನದ ಸಹಾಯಕ ನಿರ್ದೇಶಕಿ ನಿರ್ಮಲಾ ಎಲಿಗಾರ್ ಅವರನ್ನು ಕಸಾಪ ಸದಸ್ಯತ್ವದಿಂದ ಅಮಾನತು ಮಾಡುವ ಮೂಲಕ ಸರ್ವಾಧಿಕಾರತ್ವ ಪ್ರದರ್ಶಿಸಿದ್ದಾರೆ.

ರಾಜ್ಯದಲ್ಲಿ ವಿಶ್ವ ಮಹಿಳಾ ದಿನಾಚರಣೆಯ ದಿನದಂದು ಕೋಲಾರದ ಸಂಸದ ಎಸ್‌.ಮುನಿಸ್ವಾಮಿ ಕುಂಕುಮ ಇಟ್ಟುಕೊಳ್ಳದ ಮಹಿಳೆಯನ್ನು ಸಾರ್ವಜನಿಕವಾಗಿ ನಿಂದಿಸುವ ಮೂಲಕ ತನ್ನ ಅಜ್ಞಾನ ಮತ್ತು ಸ್ತ್ರೀ ದ್ವೇಷದ ನಡೆಯನ್ನು ತೋರಿದ್ದಾರೆ. ಮತ್ತೊಂದೆಡೆ, ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾಗಿರುವ ಮಹೇಶ ಜೋಶಿ ಅವರು, ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಸಂದರ್ಭದಲ್ಲಿ ಲೇಖಕಿಯರಿಗೆ ಉಳಿದುಕೊಳ್ಳಲು ಸರಿಯಾದ ವ್ಯವಸ್ಥೆ ಇಲ್ಲದಿರುವುದನ್ನು ಪ್ರಶ್ನಿಸಿದ್ದಕ್ಕೆ ನಿರ್ಮಲಾ ಎಲಿಗಾರ್ ಅವರ ಸದಸ್ಯತ್ವವನ್ನು ಮಹಿಳಾ ದಿನಾಚರಣೆಯಂದು ರದ್ದುಗೊಳಿಸುವ ಮೂಲಕ ಪ್ರಶ್ನಿಸುವ ಹಕ್ಕನ್ನು ಕಿತ್ತುಕೊಳ್ಳುವ ಪ್ರಯತ್ನ ಮಾಡಿದ್ದಾರೆ.

ಹಾವೇರಿಯಲ್ಲಿ ನಡೆದ 8ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ನಿರ್ಮಲಾ ಸಿ. ಎಲಿಗಾರ್ ಅವರು, ವಸತಿ ಸೌಲಭ್ಯಕ್ಕೆ ಸಂಬಂಧಿಸಿದಂತೆ ಪರಿಷತ್ತಿನ ಅಧ್ಯಕ್ಷರೊಂದಿಗೆ ಬಹಿರಂಗವಾಗಿಯೇ ಮಾತಿನ ಚಕಮಕಿ ನಡೆಸಿದ್ದರು. ಅಷ್ಟೇ ಅಲ್ಲದೇ ದೂರದರ್ಶನದಲ್ಲಿ ಕಸಾಪ ವಿರುದ್ಧ ಒಂದು ನಿಮಿಷದ ಮೌನಾಚರಣೆ ಮಾಡಿದ್ದರು. ಇದು ಮಹೇಶ್ ಜೋಶಿಯವರ ಕಣ್ಣು ಕೆಂಪಾಗಲು ಕಾರಣವಾಗಿದೆ.

ಜೋಶಿ ನೇತೃತ್ವದ ಕಸಾಪ ಕಾರ್ಯಕಾರಿ ಸಮಿತಿಯು, ‘ಪರಿಷತ್ತಿನ ಘನತೆ ಗೌರವ ಮತ್ತು ಧ್ಯೇಯೋದೇಶಗಳಿಗೆ ವಿರುದ್ಧವಾಗಿ ಅವರು ನಡೆದುಕೊಂಡಿದ್ದಾರೆ’ ಎಂದು ಪರಿಷತ್ತಿನ ನಿಯಮ 8) 7) ಅಡಿಯಲ್ಲಿನ ಅಧಿಕಾರ ಬಳಸಿ ನಿರ್ಮಲಾ ಸಿ. ಎಲಿಗಾರ್ ಅವರ ಕಸಾಪ ಸದಸ್ಯತ್ವವನ್ನು ಅಮಾನತುಗೊಳಿಸಿದೆ. ಇದೇ ವೇಳೆ 2022ನೇ ಸಾಲಿನಲ್ಲಿ ನಿರ್ಮಲಾ ಎಲಿಗಾ‌ರ್‌ ಅವರಿಗೆ ನೀಡಲಾಗಿದ್ದ ‘ಪಂಕಜಶ್ರೀ ಸಾಹಿತ್ಯ ಪ್ರಶಸ್ತಿ’ಯನ್ನೂ ಹಿಂಪಡೆದಿದ್ದಾರೆ.

ಏಕಾಏಕಿ ಸದ್ಯಸತ್ವದ ಅಮಾನತು ಮತ್ತು ಪ್ರಶಸ್ತಿ ಹಿಂಪಡೆಯುವಿಕೆಯು ಕಸಾಪ ಇತಿಹಾಸದಲ್ಲಿ ಎಂದೂ ನಡೆದಿರಲಿಲ್ಲ. ಕಳೆದ ಒಂದು ವರ್ಷದಿಂದ ಹಲವು ನಡೆಗಳಲ್ಲಿ ವಿವಾದಕ್ಕೀಡಾಗಿರುವ ಕಸಾಪ, ಹೊಸ ವಿವಾದವನ್ನು ಹುಟ್ಟುಹಾಕಿದೆ. ಇದು ಸಾಹಿತ್ಯಕ ಮತ್ತು ಸಾಂಸ್ಕೃತಿಕ ಲೋಕದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿದೆ.

ಇದನ್ನೂ ಓದಿ: ಕಸಾಪ ನೂತನ ಅಧ್ಯಕ್ಷರಾದ ಮಹೇಶ್‌ ಜೋಶಿ ಬಿಜೆಪಿ ಬೆಂಬಲಿತರು ಎಂಬುದಕ್ಕೆ ಇಲ್ಲಿದೆ ಪುರಾವೆ!

ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಮಹೇಶ ಜೋಶಿ ಅವರ ಸರ್ವಧಿಕಾರದ ಈ ನಡೆಯನ್ನು ಪ್ರಶ್ನಿಸಿ ಕವಿ, ಹೋರಾಟಗಾರ ಬಸವರಾಜ ಸೂಳಿಬಾವಿ ಅವರು ಸಾಮಾಜಿಕ ಜಾಲತಾಣ ಫೇಸ್‌ಬುಕ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.

”ಸರ್ವಾಧಿಕಾರಿಯೇ ಕಸಾಪಕ್ಕೆ ಅಧ್ಯಕ್ಷ.. ವಿಶ್ವ ಮಹಿಳಾ ದಿನಾಚರಣೆಯ ದಿನವೇ ರಾಜ್ಯದ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾಗಿರುವ ಮಹೇಶ ಜೋಶಿ ಅವರು, ನಿರ್ಮಲಾ ಎಲಿಗಾರ ಅವರ ಸದಸ್ಯತ್ವ ರದ್ದುಗೊಳಿಸಿ ಅವರು ಪುರಸ್ಕೃತರಾದ ಪ್ರಶಸ್ತಿಯೊಂದನ್ನು ಹಿಂಪಡೆವ ಆದೇಶ ಹೊರಡಿಸಿ ತಮ್ಮ ಸರ್ವಾಧಿಕಾರವನ್ನು ಡಾಳಾಗಿ ಪ್ರದರ್ಶನ ಮಾಡಿದ್ದಾರೆ. ಪ್ರಾಯಶಃ ಇಷ್ಟು ದಿನದವರೆಗೆ ಎಂಥೆಂಥವರನ್ನೋ ಅಧ್ಯಕ್ಷರಾಗಿ ಕಂಡ ಕಸಾಪ ಇಂಥ ಪ್ರಜಾಪ್ರಭುತ್ವ ವಿರೋಧಿಯಾದ ಸರ್ವಾಧಿಕಾರಿಯನ್ನು ಕಂಡಿರಲಿಲ್ಲ. ಇದರಿಂದ ಸಮಸ್ತ ಸಾಹಿತ್ಯ ವಲಯವನ್ನು ಅವಮಾನಿಸುವ ಕೆಲಸ ನಡೆಯುತ್ತಿವೆ. ನಾವಿದನ್ನು ತೀವ್ರವಾಗಿ ವಿರೋಧಿಸದಿದ್ದರೆ ಕಸಾಪ ಶಾಶ್ವತವಾಗಿ ಮುಳುಗಿಯೇ ಹೋಗುತ್ತದೆ.”

”ದೂರದರ್ಶನದ ನಿರ್ದೇಶಕರಾದ ಒಂದಷ್ಟು ಬರವಣಿಗೆ ಮಾಡಿರುವ ನಿರ್ಮಲಾ ಎಲಿಗಾರ ಅವರು ಹಾವೇರಿ ಸಮ್ಮೇಳನದಲ್ಲಿ ಆಹ್ವಾನಿತರಾಗಿದ್ದರು. ಉತ್ತರ ಕರ್ನಾಟಕದ ಈ ಜವಾರಿ ಹೆಣ್ಣುಮಗಳು ತಮಗೆ ಸರಿಯಾದ ವಸತಿ ವ್ಯವಸ್ಥೆ ಮಾಡದಿರುವುದು ಮಹಿಳೆಯೊಬ್ಬಳಿಗಾದ ಅವಮಾನ ಎಂದೇ ಪ್ರತಿಭಟಿಸಿದ್ದರು. ತಮಗಾದ ಈ ಅನ್ಯಾಯವನ್ನು ಮುಕ್ತವಾಗಿಯೇ ಸಮ್ಮೇಳನದ ಸಂದರ್ಭದಲ್ಲಿ ಹೊರಹಾಕಿದ್ದರು. ಅವರ ಈ ಪ್ರತಿಭಟನೆ ಪ್ರಜಾಸತ್ತಾತ್ಮಕವಾಗಿಯೇ ಇತ್ತು. ಅದನ್ನೇ ನೆಪ ಮಾಡಿಕೊಂಡು, ಅವರ ಆಜೀವ ಸದಸ್ಯತ್ವವನ್ನು ಅಧ್ಯಕ್ಷ ಮಹೇಶ ಜೋಶಿ ರದ್ದು ಮಾಡಿದ್ದಾರಲ್ಲದೆ ಅವರಿಗೆ ದೊರತ ಪ್ರಶಸ್ತಿಯೊಂದನ್ನು ಹಿಂಪಡೆದಿದ್ದಾರೆ. ಆ ಮೂಲಕ ಕಸಾಪದ ಸಂವಿಧಾನವನ್ನೇ ಅವಮಾನಿಸಿ ಪ್ರಜಾಪ್ರಭುತ್ವದ ವಿರೋಧಿತನ ತೋರಿಸಿದ್ದಾರೆ. ಇದು ಖಂಡನೀಯ. ಅಮಾನತ್ತು ಆದೇಶವನ್ನು ಹಿಂಪಡೆದು ಕ್ಷಮೆ ಯಾಚಿಸುವಂಥ ವಾತಾವರಣವನ್ನು ನಾಡಿನ ಸಾಹಿತಿಗಳು ವಿಚಾರವಂತರು ಮಾಡಬೇಕಿದೆ” ಎಂದು ಹೇಳಿದ್ದಾರೆ.

”ಇದೇ ರವಿವಾರ 12 ರಂದು ಬೆಂಗಳೂರಿನಲ್ಲಿ ಕಸಾಪದ ವಿವಿಧ ದತ್ತಿ ಪ್ರಶಸ್ತಿಗಳ ಪ್ರದಾನ ಸಮಾರಂಭ ಇದೆ. ಅನೇಕ ಜನ ವಿವೇಕವುಳ್ಳ ಮಹಿಳಾ ಸಾಹಿತಿಗಳು ಪುರುಷರು ಪ್ರಶಸ್ತಿ ಸ್ವೀಕರಿಸಲು ಹೋಗಲಿದ್ದಾರೆ. ಅವರಲ್ಲಿ ಜಾಗೃತ ಮನಸಿನ ಕೆಲವರಾದರೂ ಈ ಸರ್ವಾಧಿಕಾರವನ್ನು ಪ್ರತಿಭಟಿಸಬಹುದೆ?” ಎಂದು ಕೇಳಿದ್ದಾರೆ.

”ಎಲ್ಲಕ್ಕಿಂತ ಮುಖ್ಯವಾಗಿ ಈ ಸಮಾರಂಭದಲ್ಲಿ ನಾವು ಇಷ್ಟು ವರ್ಷ ಬಂಡಾಯದ ಸಾಕ್ಷಿ ಪ್ರಜ್ಞೆ ಎಂದು ಹೇಳಿಕೊಂಡು ಬರಲಾದ ಕಾಳೇಗೌಡ ನಾಗವಾರ ಅವರ ಹೆಸರು ಪ್ರಶಸ್ತಿ ಪ್ರದಾನ ಮಾಡುವಲ್ಲಿ ಇದೆ. ಸಂವೇದನಾಶೀಲ ಕಾಳೇಗೌಡ ನಾಗವಾರ ಅವರು ಯಾವ ನಿರ್ಧಾರ ತಗೋಬಹುದು? ಎನ್ನುವ ಬಗ್ಗೆ ನನಗೆ ಕುತೂಹಲ ಇದೆ. ಬಹುಶಃ ಅವರ ಬದುಕಿನಲ್ಲಿ ಇಂಥ ಸರ್ವಾಧಿಕಾರಿಯನ್ನು ಸಹಿಸಿದ ಚರಿತ್ರೆ ಇಲ್ಲ. ಈಗ ನೋಡಬೇಕು, ಸರ್ವಾಧಿಕಾರಿ ತೊಲಗಲು ಕೂಗು ಹಾಕಿಯಾರೆ?” ಎಂದು ಅವರು ಪ್ರಶ್ನೆ ಮಾಡಿದ್ದಾರೆ.

ಮಹೇಶ ಜೋಶಿ ಅವರ ಈ ನಡಾವಳಿ ಹಾಗೂ ಪ್ರಜಾಪ್ರಭುತ್ವ ವಿರೋಧಿತನವನ್ನು ವಿರೋಧಿಸಿ ಬಂಡಾಯದ ಮನಸುಗಳು ಜನ ಸಾಹಿತ್ಯ ಸಮಾವೇಶವನ್ನು ಇತ್ತೀಚಿಗಷ್ಟೇ ಮಾಡಿದ ನೆನಪು ಇನ್ನು ಹಸಿರಾಗಿರುವಾಗಲೇ ಇಂತಹ ಸರ್ವಾಧಿಕಾರಿ ನಡೆ ಜೋಶಿ ತೋರಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...