Homeಕರ್ನಾಟಕಮಹಿಳಾ ದಿನಾಚರಣೆಯಂದು ನಿರ್ಮಲಾ ಎಲಿಗಾರ್ ಕಸಾಪ ಸದಸ್ಯತ್ವ ರದ್ದು: ಮಹೇಶ ಜೋಶಿಯಿಂದ ಸರ್ವಾಧಿಕಾರತ್ವ ಪ್ರದರ್ಶನ

ಮಹಿಳಾ ದಿನಾಚರಣೆಯಂದು ನಿರ್ಮಲಾ ಎಲಿಗಾರ್ ಕಸಾಪ ಸದಸ್ಯತ್ವ ರದ್ದು: ಮಹೇಶ ಜೋಶಿಯಿಂದ ಸರ್ವಾಧಿಕಾರತ್ವ ಪ್ರದರ್ಶನ

- Advertisement -
- Advertisement -

ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಮಹೇಶ್ ಜೋಶಿ ಅವರು ವಿಶ್ವ ಮಹಿಳಾ ದಿನಾಚರಣೆಯ ದಿನದಂದು ದೂರದರ್ಶನದ ಸಹಾಯಕ ನಿರ್ದೇಶಕಿ ನಿರ್ಮಲಾ ಎಲಿಗಾರ್ ಅವರನ್ನು ಕಸಾಪ ಸದಸ್ಯತ್ವದಿಂದ ಅಮಾನತು ಮಾಡುವ ಮೂಲಕ ಸರ್ವಾಧಿಕಾರತ್ವ ಪ್ರದರ್ಶಿಸಿದ್ದಾರೆ.

ರಾಜ್ಯದಲ್ಲಿ ವಿಶ್ವ ಮಹಿಳಾ ದಿನಾಚರಣೆಯ ದಿನದಂದು ಕೋಲಾರದ ಸಂಸದ ಎಸ್‌.ಮುನಿಸ್ವಾಮಿ ಕುಂಕುಮ ಇಟ್ಟುಕೊಳ್ಳದ ಮಹಿಳೆಯನ್ನು ಸಾರ್ವಜನಿಕವಾಗಿ ನಿಂದಿಸುವ ಮೂಲಕ ತನ್ನ ಅಜ್ಞಾನ ಮತ್ತು ಸ್ತ್ರೀ ದ್ವೇಷದ ನಡೆಯನ್ನು ತೋರಿದ್ದಾರೆ. ಮತ್ತೊಂದೆಡೆ, ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾಗಿರುವ ಮಹೇಶ ಜೋಶಿ ಅವರು, ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಸಂದರ್ಭದಲ್ಲಿ ಲೇಖಕಿಯರಿಗೆ ಉಳಿದುಕೊಳ್ಳಲು ಸರಿಯಾದ ವ್ಯವಸ್ಥೆ ಇಲ್ಲದಿರುವುದನ್ನು ಪ್ರಶ್ನಿಸಿದ್ದಕ್ಕೆ ನಿರ್ಮಲಾ ಎಲಿಗಾರ್ ಅವರ ಸದಸ್ಯತ್ವವನ್ನು ಮಹಿಳಾ ದಿನಾಚರಣೆಯಂದು ರದ್ದುಗೊಳಿಸುವ ಮೂಲಕ ಪ್ರಶ್ನಿಸುವ ಹಕ್ಕನ್ನು ಕಿತ್ತುಕೊಳ್ಳುವ ಪ್ರಯತ್ನ ಮಾಡಿದ್ದಾರೆ.

ಹಾವೇರಿಯಲ್ಲಿ ನಡೆದ 8ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ನಿರ್ಮಲಾ ಸಿ. ಎಲಿಗಾರ್ ಅವರು, ವಸತಿ ಸೌಲಭ್ಯಕ್ಕೆ ಸಂಬಂಧಿಸಿದಂತೆ ಪರಿಷತ್ತಿನ ಅಧ್ಯಕ್ಷರೊಂದಿಗೆ ಬಹಿರಂಗವಾಗಿಯೇ ಮಾತಿನ ಚಕಮಕಿ ನಡೆಸಿದ್ದರು. ಅಷ್ಟೇ ಅಲ್ಲದೇ ದೂರದರ್ಶನದಲ್ಲಿ ಕಸಾಪ ವಿರುದ್ಧ ಒಂದು ನಿಮಿಷದ ಮೌನಾಚರಣೆ ಮಾಡಿದ್ದರು. ಇದು ಮಹೇಶ್ ಜೋಶಿಯವರ ಕಣ್ಣು ಕೆಂಪಾಗಲು ಕಾರಣವಾಗಿದೆ.

ಜೋಶಿ ನೇತೃತ್ವದ ಕಸಾಪ ಕಾರ್ಯಕಾರಿ ಸಮಿತಿಯು, ‘ಪರಿಷತ್ತಿನ ಘನತೆ ಗೌರವ ಮತ್ತು ಧ್ಯೇಯೋದೇಶಗಳಿಗೆ ವಿರುದ್ಧವಾಗಿ ಅವರು ನಡೆದುಕೊಂಡಿದ್ದಾರೆ’ ಎಂದು ಪರಿಷತ್ತಿನ ನಿಯಮ 8) 7) ಅಡಿಯಲ್ಲಿನ ಅಧಿಕಾರ ಬಳಸಿ ನಿರ್ಮಲಾ ಸಿ. ಎಲಿಗಾರ್ ಅವರ ಕಸಾಪ ಸದಸ್ಯತ್ವವನ್ನು ಅಮಾನತುಗೊಳಿಸಿದೆ. ಇದೇ ವೇಳೆ 2022ನೇ ಸಾಲಿನಲ್ಲಿ ನಿರ್ಮಲಾ ಎಲಿಗಾ‌ರ್‌ ಅವರಿಗೆ ನೀಡಲಾಗಿದ್ದ ‘ಪಂಕಜಶ್ರೀ ಸಾಹಿತ್ಯ ಪ್ರಶಸ್ತಿ’ಯನ್ನೂ ಹಿಂಪಡೆದಿದ್ದಾರೆ.

ಏಕಾಏಕಿ ಸದ್ಯಸತ್ವದ ಅಮಾನತು ಮತ್ತು ಪ್ರಶಸ್ತಿ ಹಿಂಪಡೆಯುವಿಕೆಯು ಕಸಾಪ ಇತಿಹಾಸದಲ್ಲಿ ಎಂದೂ ನಡೆದಿರಲಿಲ್ಲ. ಕಳೆದ ಒಂದು ವರ್ಷದಿಂದ ಹಲವು ನಡೆಗಳಲ್ಲಿ ವಿವಾದಕ್ಕೀಡಾಗಿರುವ ಕಸಾಪ, ಹೊಸ ವಿವಾದವನ್ನು ಹುಟ್ಟುಹಾಕಿದೆ. ಇದು ಸಾಹಿತ್ಯಕ ಮತ್ತು ಸಾಂಸ್ಕೃತಿಕ ಲೋಕದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿದೆ.

ಇದನ್ನೂ ಓದಿ: ಕಸಾಪ ನೂತನ ಅಧ್ಯಕ್ಷರಾದ ಮಹೇಶ್‌ ಜೋಶಿ ಬಿಜೆಪಿ ಬೆಂಬಲಿತರು ಎಂಬುದಕ್ಕೆ ಇಲ್ಲಿದೆ ಪುರಾವೆ!

ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಮಹೇಶ ಜೋಶಿ ಅವರ ಸರ್ವಧಿಕಾರದ ಈ ನಡೆಯನ್ನು ಪ್ರಶ್ನಿಸಿ ಕವಿ, ಹೋರಾಟಗಾರ ಬಸವರಾಜ ಸೂಳಿಬಾವಿ ಅವರು ಸಾಮಾಜಿಕ ಜಾಲತಾಣ ಫೇಸ್‌ಬುಕ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.

”ಸರ್ವಾಧಿಕಾರಿಯೇ ಕಸಾಪಕ್ಕೆ ಅಧ್ಯಕ್ಷ.. ವಿಶ್ವ ಮಹಿಳಾ ದಿನಾಚರಣೆಯ ದಿನವೇ ರಾಜ್ಯದ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾಗಿರುವ ಮಹೇಶ ಜೋಶಿ ಅವರು, ನಿರ್ಮಲಾ ಎಲಿಗಾರ ಅವರ ಸದಸ್ಯತ್ವ ರದ್ದುಗೊಳಿಸಿ ಅವರು ಪುರಸ್ಕೃತರಾದ ಪ್ರಶಸ್ತಿಯೊಂದನ್ನು ಹಿಂಪಡೆವ ಆದೇಶ ಹೊರಡಿಸಿ ತಮ್ಮ ಸರ್ವಾಧಿಕಾರವನ್ನು ಡಾಳಾಗಿ ಪ್ರದರ್ಶನ ಮಾಡಿದ್ದಾರೆ. ಪ್ರಾಯಶಃ ಇಷ್ಟು ದಿನದವರೆಗೆ ಎಂಥೆಂಥವರನ್ನೋ ಅಧ್ಯಕ್ಷರಾಗಿ ಕಂಡ ಕಸಾಪ ಇಂಥ ಪ್ರಜಾಪ್ರಭುತ್ವ ವಿರೋಧಿಯಾದ ಸರ್ವಾಧಿಕಾರಿಯನ್ನು ಕಂಡಿರಲಿಲ್ಲ. ಇದರಿಂದ ಸಮಸ್ತ ಸಾಹಿತ್ಯ ವಲಯವನ್ನು ಅವಮಾನಿಸುವ ಕೆಲಸ ನಡೆಯುತ್ತಿವೆ. ನಾವಿದನ್ನು ತೀವ್ರವಾಗಿ ವಿರೋಧಿಸದಿದ್ದರೆ ಕಸಾಪ ಶಾಶ್ವತವಾಗಿ ಮುಳುಗಿಯೇ ಹೋಗುತ್ತದೆ.”

”ದೂರದರ್ಶನದ ನಿರ್ದೇಶಕರಾದ ಒಂದಷ್ಟು ಬರವಣಿಗೆ ಮಾಡಿರುವ ನಿರ್ಮಲಾ ಎಲಿಗಾರ ಅವರು ಹಾವೇರಿ ಸಮ್ಮೇಳನದಲ್ಲಿ ಆಹ್ವಾನಿತರಾಗಿದ್ದರು. ಉತ್ತರ ಕರ್ನಾಟಕದ ಈ ಜವಾರಿ ಹೆಣ್ಣುಮಗಳು ತಮಗೆ ಸರಿಯಾದ ವಸತಿ ವ್ಯವಸ್ಥೆ ಮಾಡದಿರುವುದು ಮಹಿಳೆಯೊಬ್ಬಳಿಗಾದ ಅವಮಾನ ಎಂದೇ ಪ್ರತಿಭಟಿಸಿದ್ದರು. ತಮಗಾದ ಈ ಅನ್ಯಾಯವನ್ನು ಮುಕ್ತವಾಗಿಯೇ ಸಮ್ಮೇಳನದ ಸಂದರ್ಭದಲ್ಲಿ ಹೊರಹಾಕಿದ್ದರು. ಅವರ ಈ ಪ್ರತಿಭಟನೆ ಪ್ರಜಾಸತ್ತಾತ್ಮಕವಾಗಿಯೇ ಇತ್ತು. ಅದನ್ನೇ ನೆಪ ಮಾಡಿಕೊಂಡು, ಅವರ ಆಜೀವ ಸದಸ್ಯತ್ವವನ್ನು ಅಧ್ಯಕ್ಷ ಮಹೇಶ ಜೋಶಿ ರದ್ದು ಮಾಡಿದ್ದಾರಲ್ಲದೆ ಅವರಿಗೆ ದೊರತ ಪ್ರಶಸ್ತಿಯೊಂದನ್ನು ಹಿಂಪಡೆದಿದ್ದಾರೆ. ಆ ಮೂಲಕ ಕಸಾಪದ ಸಂವಿಧಾನವನ್ನೇ ಅವಮಾನಿಸಿ ಪ್ರಜಾಪ್ರಭುತ್ವದ ವಿರೋಧಿತನ ತೋರಿಸಿದ್ದಾರೆ. ಇದು ಖಂಡನೀಯ. ಅಮಾನತ್ತು ಆದೇಶವನ್ನು ಹಿಂಪಡೆದು ಕ್ಷಮೆ ಯಾಚಿಸುವಂಥ ವಾತಾವರಣವನ್ನು ನಾಡಿನ ಸಾಹಿತಿಗಳು ವಿಚಾರವಂತರು ಮಾಡಬೇಕಿದೆ” ಎಂದು ಹೇಳಿದ್ದಾರೆ.

”ಇದೇ ರವಿವಾರ 12 ರಂದು ಬೆಂಗಳೂರಿನಲ್ಲಿ ಕಸಾಪದ ವಿವಿಧ ದತ್ತಿ ಪ್ರಶಸ್ತಿಗಳ ಪ್ರದಾನ ಸಮಾರಂಭ ಇದೆ. ಅನೇಕ ಜನ ವಿವೇಕವುಳ್ಳ ಮಹಿಳಾ ಸಾಹಿತಿಗಳು ಪುರುಷರು ಪ್ರಶಸ್ತಿ ಸ್ವೀಕರಿಸಲು ಹೋಗಲಿದ್ದಾರೆ. ಅವರಲ್ಲಿ ಜಾಗೃತ ಮನಸಿನ ಕೆಲವರಾದರೂ ಈ ಸರ್ವಾಧಿಕಾರವನ್ನು ಪ್ರತಿಭಟಿಸಬಹುದೆ?” ಎಂದು ಕೇಳಿದ್ದಾರೆ.

”ಎಲ್ಲಕ್ಕಿಂತ ಮುಖ್ಯವಾಗಿ ಈ ಸಮಾರಂಭದಲ್ಲಿ ನಾವು ಇಷ್ಟು ವರ್ಷ ಬಂಡಾಯದ ಸಾಕ್ಷಿ ಪ್ರಜ್ಞೆ ಎಂದು ಹೇಳಿಕೊಂಡು ಬರಲಾದ ಕಾಳೇಗೌಡ ನಾಗವಾರ ಅವರ ಹೆಸರು ಪ್ರಶಸ್ತಿ ಪ್ರದಾನ ಮಾಡುವಲ್ಲಿ ಇದೆ. ಸಂವೇದನಾಶೀಲ ಕಾಳೇಗೌಡ ನಾಗವಾರ ಅವರು ಯಾವ ನಿರ್ಧಾರ ತಗೋಬಹುದು? ಎನ್ನುವ ಬಗ್ಗೆ ನನಗೆ ಕುತೂಹಲ ಇದೆ. ಬಹುಶಃ ಅವರ ಬದುಕಿನಲ್ಲಿ ಇಂಥ ಸರ್ವಾಧಿಕಾರಿಯನ್ನು ಸಹಿಸಿದ ಚರಿತ್ರೆ ಇಲ್ಲ. ಈಗ ನೋಡಬೇಕು, ಸರ್ವಾಧಿಕಾರಿ ತೊಲಗಲು ಕೂಗು ಹಾಕಿಯಾರೆ?” ಎಂದು ಅವರು ಪ್ರಶ್ನೆ ಮಾಡಿದ್ದಾರೆ.

ಮಹೇಶ ಜೋಶಿ ಅವರ ಈ ನಡಾವಳಿ ಹಾಗೂ ಪ್ರಜಾಪ್ರಭುತ್ವ ವಿರೋಧಿತನವನ್ನು ವಿರೋಧಿಸಿ ಬಂಡಾಯದ ಮನಸುಗಳು ಜನ ಸಾಹಿತ್ಯ ಸಮಾವೇಶವನ್ನು ಇತ್ತೀಚಿಗಷ್ಟೇ ಮಾಡಿದ ನೆನಪು ಇನ್ನು ಹಸಿರಾಗಿರುವಾಗಲೇ ಇಂತಹ ಸರ್ವಾಧಿಕಾರಿ ನಡೆ ಜೋಶಿ ತೋರಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...